Connect with us

ನೆಲದನಿ

ನೆಲದನಿಗೆ ಮಿಡಿವ ಮನ : ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಅವರ ಸಂಕಥನ

Published

on

ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ

ಕಥಾ ಕಣಜ’ ಎಂಬ ಕೃತಿ ಜಾನಪದ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೀರ್ತಿ ಮಲ್ಲಿಕಾರ್ಜುನ ಕಲಮರಹಳ್ಳಿಯವರದ್ದು

ಭಾರತದ ನೆಲಮೂಲ ಬದುಕಿನೊಳಗೆ ವಿವಿಧ ತೆರನಾದ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕವೊಂದು ತೆರೆದುಕೊಂಡು ಬಂದಿದೆ. ಇಂತಹ ನೆಲಮೂಲ ಬದುಕಿನೊಳಗೆ ಬೆರೆತ ಈ ಸಾಹಿತ್ಯ ಮತ್ತು ಸಾಂಸ್ಕøತಿಕ ಸೊಬಗು ಶ್ರಮಿಕ ಬದುಕಿನ ಭಾಗವಾದ ಕಾರಣದಿಂದಾಗಿ ಹಲವಾರು ಶತಮಾನಗಳ ಕಾಲ ತೆರೆಮರೆಯಲ್ಲಿಯೇ ತನ್ನ ಅಸ್ಮಿತೆಯನ್ನು ಕಾಯ್ದುಕೊಂಡು ಬಂದಿದೆ. ರಾಜಪ್ರಭುತ್ವದ ಕಾಲದಲ್ಲಿ ಅಧಿಕಾರ ಮತ್ತು ಘನತೆಯ ದಾಹ ಹೊತ್ತ ಶಿಷ್ಟ ಸಾಹಿತ್ಯದ ಎದುರು ಈ ನೆಲೆದ ಜೀವದನಿಯಾದ ಜನಪದವು ಬಡತನ ಮತ್ತು ಶ್ರಮಿಲೋಕದ ಆಶ್ರಯ ಪಡೆದು ನಿತ್ಯ ಹೊಸತನವನ್ನು ಕಾಯ್ದುಕೊಂಡು ಬಂದಿದೆ. ಹೀಗೆ ಸಾವಿರಾರು ವರ್ಷಗಳ ಚಾರಿತ್ರಿಕ ಇತಿಹಾಸವನ್ನು ಹೊಂದಿರುವ ಜಾನಪದವನ್ನು ಮುಖ್ಯವಾಹಿನಿಗೆ ತಂದು ಅದರ ಆಳ ಅಗಲ ಹಾಗೂ ಅದರಲ್ಲಿ ಅಂತರ್ಗತವಾಗಿರುವ ಜೀವಪರವಾದ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಹಲವಾರು ವಿದ್ವಾಂಸರು ಅವಿರತ ಶ್ರಮವನ್ನು ವ್ಯಕ್ತಪಡಿಸಿದ್ದಾರೆ. ಇಂತಹ ನೆಲಮೂಲ ಬದುಕಿನ ಪ್ರತೀಕವಾದ ಸಾಹಿತ್ಯ ಹಾಗೂ ಸಾಂಸ್ಕøತಿಕ ಲೋಕವನ್ನು ಜಗತ್ತಿಗೆ ಪರಿಚಯಿಸಿದ ವಿದ್ವಾಂಸರನ್ನು ಹಾಗೂ ಅವರ ಈ ಕಾರ್ಯವನ್ನು ನೆಲದನಿ ಎಂಬ ರೂಪದಲ್ಲಿ ವ್ಯಕ್ತಪಡಿಸಲಾಗಿದೆ. ಇಂತಹ ನೆಲದನಿಗಳ ಸಾಲಿನಲ್ಲಿ ಡಾ.ಮಲ್ಲಿಕಾರ್ಜುನ್ ಕಲಮರಳ್ಳಿಯವರು ಒಬ್ಬರಾಗಿದ್ದಾರೆ.

ಶ್ರೀಯುತ ಮಲ್ಲಿಕಾರ್ಜುನ ಕಲಮರಹಳ್ಳಿಯವರು ಚಳ್ಳಕೆರೆ ತಾಲ್ಲೂಕಿನ ಕಲಮರಹಳ್ಳಿ ಎಂಬ ಗ್ರಾಮದಲ್ಲಿ ಶ್ರೀ ಕೆಂಪಯ್ಯ ಹಾಗೂ ತಿಪ್ಪಮ್ಮ ದಂಪತಿಗಳ ಮಗನಾಗಿ 05 ಮೇ1958 ರಂದು ಜನಿಸಿದರು. ಕನ್ನಡದ ನೆಲಮೂಲ ಸಂಸ್ಕøತಿಯ ಪ್ರತೀಕವಾದ ಕಾಡುಗೊಲ್ಲ ಸಮುದಾಯದಲ್ಲಿ ಜನಿಸಿದ ಶ್ರೀಯುತರು, ಬಾಲ್ಯದ ದಿನಗಳಿಂದಲೂ ಜನಪದದ ಸೊಗಡನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಹೀಗಾಗಿ ಇವರಿಗೆ ಜನಪದ ಸಾಹಿತ್ಯ ಹಾಗೂ ಸಾಂಸ್ಕøತಿಕ ಲೋಕದೊಂದಿಗೆ ಕರುಳು ಬಳ್ಳಿಯ ನಂಟಿದೆ. ಶ್ರೀಯತರಲ್ಲಿ ಜಾನಪದದ ಆಸಕ್ತಿ ಹಾಗೂ ಕಾಳಜಿಯು ಆಳವಾಗಿ ಪ್ರಭಾವ ಬೀರಲು ಮತ್ತು ಪ್ರೇರಣೆಯಾಗಲು ಕಾರಣವೆಂದರೆ, ಅದು ಅವರು ಬೆಳೆದು ಬಂದ ಪರಿಸರದಲ್ಲಿನ ಜಾನಪದದ ಸಿರಿವಂತಿಕೆ. ಬುಡಕಟ್ಟು ಸಮುದಾಯಗಳಲ್ಲಿ ದಟ್ಟವಾಗಿ ಬೆಳೆದು ನಿಂತಿರುವ ಜಾನಪದವನ್ನು ಸಿರಿಯಜ್ಜಿಯಂತಹ ಹಲವಾರು ಮಹಿಳೆಯರು ಕರಗತ ಮಾಡಿಕೊಂಡು ಅದರ ಪಾಲನೆ ಮತ್ತು ಪೋಷಣೆ ಮಾಡಿಕೊಂಡು ಬಂದಿದ್ದರು. ಇಂತಹ ಸಿರಿಗಳು ಪ್ರತಿಯೊಂದು ಬುಡಕಟ್ಟು ಹಟ್ಟಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತವೆ. ಇಂತಹ ಸಿರಿಗಳ ನಡುವೆ ಬೆಳೆದ ಮಲ್ಲಿಕಾರ್ಜುನ ಕಲಮರಹಳ್ಳಿಯವರು ಜಾನಪದದ ಭಾಗವಾಗಿಯೇ ತಮ್ಮನ್ನು ತೊಡಗಿಸಿಕೊಂಡು ಬಾಲ್ಯದ ಬದುಕನ್ನು ಕಳೆದವರಾಗಿದ್ದಾರೆ. ಶ್ರೀಯುತರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪಕ್ಕದ ಕಾಪರಹಳ್ಳಿಯಲ್ಲಿ, ಪ್ರೌಢ ಶಿಕ್ಷಣವನ್ನು ಬೆಳಗೆರೆಯಲ್ಲಿ ಪಡೆದರು. ನಂತರದಲ್ಲಿ ಪದವಿ ಶಿಕ್ಷಣವನ್ನು ಸರ್ಕಾರಿ ಕಲಾ ಕಾಲೇಜು ಹಾಗೂ ಬಿ.ಇಡಿ ಪದವಿಯನ್ನು ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯ, ಚಿತ್ರದುರ್ಗದಲ್ಲಿ ಪೂರೈಸಿದರು. ಈ ಹಂತದವರೆಗೆ ತನ್ನ ಪ್ರಾದೇಶಿಕ ಪರಿಸರದಲ್ಲಿಯೇ ಬೆಳೆದ ಶ್ರೀಯುತರು ಸುತ್ತಮುತ್ತಲಿನ ಗ್ರಾಮಗಳಲ್ಲಿ ನೆಲೆಯೂರಿರುವ ಜಾನಪದ ಕಲೆಗಳಲ್ಲಿ ವಿಶೇಷವಾದ ಆಸಕ್ತಿ ತಾಳಿ ಕಲಾ ನೈಪುಣ್ಯತೆಯನ್ನು ಮೈಗೂಡಿಸಿಕೊಂಡಿದ್ದರು. ಹೀಗಾಗಿ ಕೋಲಾಟ ಮತ್ತು ಬಯಲಾಟದ ಕಲಾವಿದರಾಗಿಯೂ ತಮ್ಮನ್ನು ಗುರುತಿಸಿಕೊಂಡರು. ಹಾಗೆಯೇ ಸಾಮಾಜಿಕ ನಾಟಕ ಮತ್ತು ಆಧುನಿಕ ರಂಗಭೂಮಿ ಕ್ಷೇತ್ರದಲ್ಲಿಯೂ ತಮ್ಮ ಸಹಭಾಗಿತ್ವವನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಶಿಕ್ಷಣವನ್ನು ಮುಂದುವರೆಸಿದರು.

ಶ್ರೀಯುತರು ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಅಧ್ಯಯನ ಮಾಡಲು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಗೆ ಪ್ರವೇಶ ಪಡೆದುಕೊಳ್ಳುವವರೆಗೂ ಜಾನಪದವನ್ನು ಶೈಕ್ಷಣಿಕ ಶಿಸ್ತಿಗೆ ಒಳಪಡಿಸುವ ಮಾದರಿಯನ್ನು ಅರಿತಿರಲಿಲ್ಲ. ತಮ್ಮ ಬದುಕಿನ ಸಹಜ ಭಾಗವಾಗಿ ಜನಪದವನ್ನು ತಮ್ಮೊಳಗೆ ಕರಗತ ಮಾಡಿಕೊಂಡು ಬಂದಿದ್ದರು. ಆದರೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಅಧ್ಯಯನ ಮಾಡುವ ಸಂದರ್ಭದಲ್ಲಿ ಇವರಲ್ಲಿ ಅಂತರ್ಗತವಾಗಿದ್ದ ಜಾನಪದದ ಸೊಗಡು ಹಾಗೂ ಕಸುವನ್ನು ಹೊರಹಾಕುವುದಕ್ಕೆ ವೇದಿಕೆಯೊಂದು ಲಭಿಸಿತು. ಬಾಲ್ಯದ ದಿನಗಳಿಂದಲೂ ಜನಪದ ಲೋಕದಲ್ಲಿಯೇ ಬೆಳೆದ ಇವರಿಗೆ ಈ ಪ್ರಕಾರವನ್ನು ಶೈಕ್ಷಣಿಕ ಶಿಸ್ತಿನಲ್ಲಿ ಅಧ್ಯಯನ ಮಾಡಬೇಕೆಂಬ ಆಸಕ್ತಿಯಿಂದಾಗಿ ಜಾನಪದ ಡಿಪ್ಲೊಮೋ ಪದವಿಯನ್ನು ಆಯ್ದುಕೊಂಡು ಅಧ್ಯಯನ ಮುಂದುವರೆಸಿದರು. ಆಗ ಇವರ ಗುರುಗಳಾದ ಜಿ.ಶಂ.ಪರಮಶಿವಯ್ಯ ಅವರ ಒತ್ತಾಸೆಯಂತೆ ತಮ್ಮ ಗ್ರಾಮೀಣ ಪರಿಸರದಲ್ಲಿ ನೆಲೆಯೂರಿರುವ ಜಾನಪದ ಕಥೆಗಳನ್ನು ಸಂಪ್ರಬಂಧವಾಗಿ ವಿಶ್ವವಿದ್ಯಾಲಕ್ಕೆ ಸಲ್ಲಿಸಿದರು. ಈ ಸಂಪ್ರಬಂಧದಲ್ಲಿ ಹೆಸರಾಂತ ಜಾನಪದ ಕಥೆಗಾರನಾದ ಈರ ಬಡಪ್ಪನಿಂದ ಕಥೆಗಳನ್ನು ಕೇಳಿಸಿಕೊಂಡು, ಆ ಕಥೆಗಳನ್ನು ದೇಶಿ ಸೊಗಡಿನ ಯಥಾ ಭಾಷೆಯಲ್ಲಿ ನೈಜತೆಯೊಂದಿಗೆ ಕಟ್ಟಿಕೊಟ್ಟರು. ಆದ್ದರಿಂದ ಇದೊಂದು ಹೊಸ ಪ್ರಯೋಗವಾಗಿ ಜಾನಪದ ಲೋಕದಲ್ಲಿ ವಿಶಿಷ್ಟತೆಯನ್ನು ಪಡೆದುಕೊಂಡಿತು. ಹೆಸರಾಂತ ಜಾನಪದ ವಿದ್ವಾಂಸರಾದ ಜಿ.ಶಂ.ಪರಮಶಿವಯ್ಯ ಅವರಿಂದ ಸಾಕಷ್ಟು ಮೆಚ್ಚುಗೆಯನ್ನು ಪಡೆದುಕೊಂಡ ಈ ಸಂಪ್ರಬಂಧವು ‘ಕಲಮರಹಳ್ಳಿಯ ಕಥೆಗಳು’ ಎಂಬ ಪುಸ್ತಕ ರೂಪವನ್ನು ಪಡೆದುಕೊಂಡಿತು. ಈ ಕೃತಿಗೆ ಜಿ.ಶಂ.ಪ ಅವರೇ ಸ್ವತಃ ಆಸಕ್ತಿ ತಳೆದು ಮುನ್ನುಡಿಯನ್ನು ಸಹ ಬರೆದುಕೊಟ್ಟರು. 1986 ರಲ್ಲಿ ಈ ಕೃತಿಗೆ ‘ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ’ಯು ಪ್ರಶಸ್ತಿಯನ್ನು ನೀಡಿ ಗೌರವಿಸಿತು. ನಂತರದಲ್ಲಿ ಇದೇ ಜಾನಪದ ಕಲಾವಿದರಾದ ಈರ ಬಡಪ್ಪ ಅವರ ಜೀವನ ಚರಿತ್ರೆಯನ್ನು ಅನಾವರಣಗೊಳಿಸುವ ನೆಲೆಯಲ್ಲಿ ‘ಕಥಾ ಕಣಜ’ ಎಂಬ ಕೃತಿಯನ್ನು ಜಾನಪದ ಸಾಹಿತ್ಯ ವಲಯಕ್ಕೆ ನೀಡಿದ ಕೀರ್ತಿಯು ಮಲ್ಲಿಕಾರ್ಜುನ ಕಲಮರಹಳ್ಳಿಯವರಿಗೆ ಸಲ್ಲುತ್ತದೆ. ಇದರ ಫಲವಾಗಿ ಕಥೆಗಾರ ಈರ ಬಡಪ್ಪನವರು ಕೂಡ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಾನಪದ ಲೋಕದೊಳಗೆ ಬೆಳೆದ ಪ್ರತಿಭೆಯೊಂದು ತನ್ನ ಸುತ್ತಮುತ್ತಲಿನ ಪರಿಸರದಲ್ಲಿ ನೆಲಯೂರಿರುವ ಜಾನಪದ ಸೊಗಡನ್ನು ಅಧ್ಯಯನಕ್ಕೆ ಒಳಪಡಿಸಿ, ಅದರಿಂದ ತನಗೆ ಮಾತ್ರ ಕೀರ್ತಿಯನ್ನು ತಂದುಕೊಳ್ಳದೆ, ಎಲೆ ಮರೆಯ ಕಾಯಿಯಂತಿರುವ ನಿಜವಾದ ಕಲಾವಿದರನ್ನು ಸಮಾಜದ ಮುಖ್ಯವಾಹಿನಿಗೆ ಪರಿಚಯಿಸಿದೆ. ಇದು ಜಾನಪದ ಲೋಕದೊಳಗೆ ಮಿಂದೆದ್ದ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿಯಂತಹ ವಿಶಿಷ್ಟ ವ್ಯಕ್ತಿತ್ವಗಳಿಗೆ ಮಾತ್ರ ಸಾಧ್ಯವಾಗುವ ಕೆಲಸ. ಇದರ ಹಿಂದೆ ಶ್ರೀಯುತರ ಶ್ರಮವು ಅಪಾರವಾಗಿದೆ. ತನ್ನ ಪರಿಸರ, ಸಮುದಾಯ, ಸಂಸ್ಕøತಿ, ಆಚಾರ ವಿಚಾರಗಳ ಮೇಲಿನ ಒಲವು ಇವರನ್ನು ಈ ಹಂತಕ್ಕೆ ಕೊಂಡೊಯ್ದಿದೆ. ಜಾನಪದದ ಆಗರವಾಗಿರುವ ಕಾಡುಗೊಲ್ಲ ಸಮುದಾಯವನ್ನು ಶೈಕ್ಷಣಿಕ ಶಿಸ್ತಿನ ಬಹುತ್ವದ ನೆಲೆಯಲ್ಲಿ ಸಂಶೋಧನೆಗೊಳಪಡಿಸಿದ ಕೀರ್ತಿಯು ಇವರಿಗೆ ಸಲ್ಲುತ್ತದೆ. ಇದರ ಫಲವಾಗಿಯೇ ‘ಕಾಡುಗೊಲ್ಲ ಕಾವ್ಯಗಳಲ್ಲಿ ಸಾಂಸ್ಕøತಿಕ ಸಂಘರ್ಷ’ ಎಂಬ ಮಹಾಪ್ರಬಂಧವನ್ನು ಕುವೆಂಪು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿ ಡಾಕ್ಷರೇಟ್ ಪದವಿಯನ್ನು ಪಡೆದುಕೊಂಡಿರುತ್ತಾರೆ. ಶ್ರೀಯುತರು ಸಾಹಿತ್ಯ ಮತ್ತು ಸಾಂಸ್ಕøತಿಕ ವಲಯದಲ್ಲಿ ವಿಶಿಷ್ಟವಾದ ಸೇವೆಯನ್ನು ಸಲ್ಲಿಸಿದ್ದಾರೆ. ಆ ಮೂಲಕವಾಗಿ ಬುಡಕಟ್ಟು ಸಂಸ್ಕøತಿಗಳ ಅಸ್ಮಿತೆಯನ್ನು ಸಾಹಿತ್ಯ ಲೋಕಕ್ಕೆ ಪರಿಚಯಿಸಿದ್ದಾರೆ. ಇಷ್ಟೇ ಅಲ್ಲದೆ ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾಗಿ, ಮಾರ್ಗದರ್ಶಕರಾಗಿ ತಮ್ಮ ಸೇವೆಯನ್ನು ಸಲ್ಲಿಸಿರುತ್ತಾರೆ. ಶೈಕ್ಷಣಿಕ ವಲಯದಲ್ಲಿ ಹಲವಾರು ಹುದ್ದೆ ಹಾಗೂ ಜವಬ್ದಾರಿಗಳನ್ನು ನಿರ್ವಹಿಸಿಕೊಂಡು ಬಂದಿರುತ್ತಾರೆ. ಶ್ರೀಯುತರು ಉತ್ತಮ ವಾಗ್ಮಿಯು ಮಾತ್ರವಲ್ಲದೆ ಸೃಜನಶೀಲ ಕವಿಯೂ ಹೌದು. ಇವರ ‘ಕಾಡು ಹಕ್ಕಿಯ ಹಾಡು’ ಕವನ ಸಂಕಲನವು ಇವರೊಳಗಿನ ಕವಿ ಗುಣವನ್ನು ಅನಾವರಣಗೊಳಿಸುತ್ತದೆ. ಶ್ರೀಯುತರ ಈ ಬಹುಮುಖಿ ವ್ಯಕ್ತಿತ್ವವನ್ನು ಪರಿಗಣಿಸಿ ಹಲವಾರು ಸನ್ಮಾನ ಮತ್ತು ಪ್ರಶಸ್ತಿಗಳು ಇವರ ಮುಡಿಗೇರಿವೆ. ಅವುಗಳೆಂದರೆ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಪುಸ್ತಕ ಬಹುಮಾನ (1986). ಸಂಕ್ರಮಣ ಕಾವ್ಯ ಬಹುಮಾನ (1988). ಅತ್ತಿಮಬ್ಬೆ ಸಾಹಿತ್ಯ ಪ್ರಶಸ್ತಿ (2008) ಇತ್ಯಾದಿಯಾಗಿ ಹಲವಾರು ಸನ್ಮಾನಗಳು ಇವರಿಗೆ ಲಭಿಸಿವೆ. ಪ್ರಸ್ತುತದಲ್ಲಿ ಶೈಕ್ಷಣಿಕ ಕ್ಷೇತ್ರದ ಪ್ರಾಂಶುಪಾಲರ ಹುದ್ದೆಯಿಂದ ನಿವೃತ್ತಿ ಪಡೆದು ತಮ್ಮ ಶ್ರೀಮತಿ ಕುಸುಮಲತಾ, ಮಕ್ಕಳಾದ ಸೃಜನ್ ಹಾಗೂ ಸಿಂಚನ ಜೊತೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಈ ಸಮಯದಲ್ಲಿ ಅವರಿಂದ ಜಾನಪದ ಸಾಹಿತ್ಯ ಲೋಕ ಮತ್ತಷ್ಟು ಶ್ರೀಮಂತಗೊಳ್ಳಲಿ ಎಂಬುದು ನಮ್ಮ ಕನಸು.

ಸುದ್ದಿದಿನ|ವಾಟ್ಸಾಪ್|9986815401

ದಿನದ ಸುದ್ದಿ

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

Published

on

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.

ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.

ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.

ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.

ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.

ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.

ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.

ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.

ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನೆಲದನಿ

ಮ್ಯಾಸ ನಾಯಕ ಬುಡಕಟ್ಟಿನಲ್ಲಿ ದೂಲಿ ಹಬ್ಬದ ಆಚರಣೆ

Published

on

  • ಡಾ. ಸಿ ಬಿ ಅನ್ನಪೂರ್ಣ ಜೋಗೇಶ್‌, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ.

ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ. ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ.

ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು.

ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ. ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ.

ಪ್ರಕೃತಿಯ ವಿಶಿಷ್ಟ್ಯತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತನ್ನನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಲೇಖಕರು : ಡಾ. ಸಿ ಬಿ ಅನ್ನಪೂರ್ಣ ಜೋಗೇಶ್‌, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ.

ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ. ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.

ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ. ಮ್ಯಾಸ ಭಾಷೆಯಲ್ಲಿ ಇದನ್ನು ‘ದೂಲಿ ಪಂಡುವ’ ಎಂದು ಕರೆಯಲಾಗುತ್ತದೆ.

ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು
ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ. ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ.

ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ. ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ. ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ.

ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಗೆಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ. ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ.

ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ.ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ.

ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿAದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬAಧ ಮುಖ್ಯವಾಗಿರುತ್ತದೆ.ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನೆಲದನಿ

ಜಾನಪದದ ಬೇರು, ಶಿಕ್ಷಣ-ರಂಗಭೂಮಿಯ ತೇರು ‘ಡಾ.ಎಂ.ಜಿ. ಈಶ್ವರಪ್ಪ’

Published

on

ಡಾ.ಎಂ.ಜಿ. ಈಶ್ವರಪ್ಪ
  • ಡಾ.ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಪದವಿ ಪೂರ್ವಕಾಲೇಜು,ದಾವಣಗೆರೆ

ರ್ನಾಟಕ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ, ವೈಚಾರಿಕತೆ ಮತ್ತು ಮಾನವೀಯತೆಯ ನೆಲೆವೀಡು. ಈ ನಾಡು ಪಂಪ, ರನ್ನ, ಪೊನ್ನ, ಜನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸರಂತಹ ಅನೇಕ ಕವಿಗಳು ನೆಲೆಸಿದ್ದ ಪುಣ್ಯಭೂಮಿ. ಕನ್ನಡ ಸಾಹಿತ್ಯ ಪರಂಪರೆಯಲ್ಲಿಜನಪದಕ್ಕೆ ಶ್ರೀಸಾಮಾನ್ಯರ, ವಚನಕ್ಕೆ ಶರಣರ, ಕೀರ್ತನ ಸಾಹಿತ್ಯಕ್ಕೆದಾಸರಕೊಡುಗೆಅಪಾರವಾಗಿದ್ದು ದೇಸಿ ನೆಲೆಗಟ್ಟಿನೊಂದಿಗೆ ಮೌಲ್ಯಪ್ರಜ್ಞೆ ಬಿತ್ತುವಲ್ಲಿ ಸಿದ್ಧಹಸ್ತವಾಗಿವೆ. ಕವಿವಾಣಿ ಹೂವಾದರೆಜನವಾಣಿ ಬೇರಾಗಿ ಕಂಗೊಳಿಸುತ್ತದೆ.

ಇಂತಹಜನಪದ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿಜಾನಪದ ವಿದ್ವಾಂಸರಾಗಿ ಗುರುತಿಸಿಕೊಂಡಿರುವ ಹಲವರಲ್ಲಿ ಮಧ್ಯಕರ್ನಾಟಕದ ಹೃದಯ ಭಾಗವಾದದಾವಣಗೆರೆ ನಗರದಲ್ಲಿ ನೆಲೆಸಿರುವ ಜಾನಪದತಜ್ಞರಾದಡಾ.ಎಂ.ಜಿ.ಈಶ್ವರಪ್ಪ ಪ್ರಮುಖರು.

ಬಾಲ್ಯ ಮತ್ತು ಶಿಕ್ಷಣ

ಜ್ಞಾನದಿಂ ಮೇಲಿಲ್ಲ, ಶ್ವಾನನಿಂ ಕೀಳಿಲ್ಲ
ಭಾನುವಿನಿಂದಧಿಕ ಬೆಳಕಿಲ್ಲ ಜಗದೊಳಗೆ
ಜ್ಞಾನವೇ ಮಿಗಿಲು ಸರ್ವಜ್ಞ

ಎಂಬ ನುಡಿಗೆ ಪೂರಕವಾಗಿಜ್ಞಾನದ ಹಾದಿಯನ್ನು ಹಿಡಿದು ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಚಿಂತಕರಾಗಿ, ವಿದ್ಯಾರ್ಥಿಗಳ ಅಚ್ಚು ಮೆಚ್ಚಿನಅಧ್ಯಾಪಕರಾಗಿ, ಉತ್ತಮ ಮಾತುಗಾರರಾಗಿ, ಸರ್ವರ ಮನಸ್ಸನ್ನುಗೆದ್ದಿರುವಡಾ.ಎಂ.ಜಿ. ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿ ಎಂಬ ಗ್ರಾಮದಲ್ಲಿ ಶ್ರೀಮತಿ ಗಿರಿಜಮ್ಮ ಮತ್ತು ಶ್ರೀ ರುದ್ರಪ್ಪ ದಂಪತಿಗಳ ಪುತ್ರರಾಗಿ 02-12-1950ರಲ್ಲಿ ಜನಿಸಿದರು.ತಂದೆ ಕೃಷಿ ಕಾಯಕವನ್ನು ಅವಲಂಬಿಸಿದ್ದರಿಂದ ಕೃಷಿ ಚಟುವಟಿಕೆಗಳನ್ನು ರೂಢಿಸಿಕೊಂಡು ಗ್ರಾಮೀಣ ಸೊಗಡನ್ನುಆಸ್ವಾದಿಸುತ್ತಿದ್ದರು.

ಪದವಿ ಶಿಕ್ಷಣವನ್ನು ವಿಜ್ಞಾನ ವಿಷಯದಲ್ಲಿ ಪೂರೈಸಿ ನಂತರ ಮೈಸೂರು ವಿಶ್ವವಿದ್ಯಾನಿಲಯದಿಂದಕನ್ನಡ ವಿಷಯದಲ್ಲಿಸ್ನಾತಕೋತ್ತರ ಪದವಿಯನ್ನು ಪಡೆದರು. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಇವರುಖ್ಯಾತಜಾನಪದ ವಿದ್ವಾಂಸರಾದ ಜಿ.ಶಂ.ಪರಮಶಿವಯ್ಯ ಅವರ ಮಾರ್ಗದರ್ಶನದಲ್ಲಿ ‘ವ್ಯವಸಾಯಜಾನಪದ’ ಎಂಬ ವಿಷಯದ ಮೇಲೆ ಪಿಹೆಚ್.ಡಿ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ.

ಅಧ್ಯಾಪಕರಾಗಿ ಎಂ.ಜಿ.ಈಶ್ವರಪ್ಪ

ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃ
ಆಚಾರ್ಯಸ್ಯ ಪ್ರಭಾವೇನ ಶಿಷ್ಯಭವತಿ ಸುಶಿಕ್ಷಿತಃ

ಎಂಬ ನುಡಿಯಂತೆ ವಿದ್ಯಾರ್ಥಿಗಳ ಮೆಚ್ಚಿನಅಧ್ಯಾಪಕರಾಗಿದಾವಣಗೆರೆಯ ಪ್ರತಿಷ್ಟಿತ ವಿದಾಕೇಂದ್ರವಾದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಧ್ಯಾಪಕ ಸಂಘ, ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಇವರುಎನ್,ಎಸ್.ಎಸ್‌ಅಧಿಕಾರಿಯಾಗಿ 11 ವರ್ಷಗಳ ಕಾಲ 6 ಶಿಬಿರಗಳನ್ನು ನಡೆಸಿ ಗ್ರಾಮೀಣಜನಜೀವನದ ಸಮಸ್ಯೆಗಳ ಪರಿಚಯವನ್ನು ಮಾಡಿಕೊಂಡರು. ನಂತರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ರಂಗಭೂಮಿ ಮತ್ತುಈಶ್ವರಪ್ಪ

ಒಳ್ಳೆಯ ನಟ, ನಿರ್ದೇಶಕರಾಗಿಎಲ್ಲಾ ಕ್ಷೇತ್ರಗಳಲ್ಲೂ ಆಸಕ್ತಿ ಹೊಂದಿರುವಈಶ್ವರಪ್ಪನವರು ವಿದ್ಯಾರ್ಥಿದೆಸೆಯಿಂದಲೆ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ನಾಟಕಅಕಾಡೆಮಿಯ ಅಫಿಲಿಯೇಶನ್ ಪಡೆದಿರುವದಾವಣಗೆರೆಯ ಪ್ರತಿಷ್ಟಿತ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ “ಪ್ರತಿಮಾ ಸಭಾ” ದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. 1979ರಲ್ಲಿ ವಿಶ್ವವಿದ್ಯಾನಿಲಯದಧನಸಹಾಯಆಯೋಗದಿಂದ ನಡೆದರಾಷ್ಟ್ರ ಮಟ್ಟದರಂಗಭೂಮಿ, ರಂಗನಟನೆ, ರಂಗ ನಿರ್ದೇಶನಕುರಿತಂತೆ ಕೇರಳದ ತ್ರಿಚೂರಿನ ಸ್ಕೂಲ್‌ಆಫ್‌ಡ್ರಾಮಾದಲ್ಲಿ ಭಾಗಿಯಾಗಿ, ಪ್ರತಿಮಾ ಸಭಾ ನಡೆಸಿದ ರಂಗ ಶಿಬಿರದಲ್ಲಿ ಕ್ರಿಯಾತ್ಮಕವಾಗಿ ಪಾಲ್ಗೊಂಡಿದ್ದಾರೆ.

ಈಡಿಪಸ್, ಸಂಕ್ರಾಂತಿ, ಸಂತೆಯಲ್ಲಿ ನಿಂತಕಬೀರ, ಸೆಜುವಾನಿನ ಸಾಧ್ವಿ, ಕೊಡೆಗಳು ಮುಂತಾದ ನಾಟಕಗಳಲ್ಲಿ ನಟಿಸಿದ್ದಾರೆ.ಜಾತ್ರೆ, ಸಾಯೋಆಟ, ಅಪ್ಪ, ಕಡೇಮನೆಕಡೇಗಲ್ಲಿ, ಹಳ್ಳಿಚಿತ್ರ, ಹಳ್ಳಿಮೇಷ್ಟು, ಮಾರೀಚನ ಬಂಧುಗಳು, ಇಲಿಬೋನು, ನಾಗನ ಕತೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ.ನಾಗನ ಕತೆ ನಾಟಕಕ್ಕೆಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಅಖಿಲ ಕರ್ನಾಟಕ ಮಕ್ಕಳ ಸಮ್ಮೇಳನದಲ್ಲಿ ಪ್ರಥಮ ಬಹುಮಾನ ಲಭಿಸಿದೆ.

1979 ರಲ್ಲಿ ಹೆಗ್ಗೋಡಿನಲ್ಲಿ ನಡೆದ ಚಲನಚಿತ್ರ ಸಹೃದಯ ಶಿಬಿರ, 1983 ರಲ್ಲಿರಂಗ ನಿರ್ದೇಶಕರ ಶಿಬಿರ, 1984ರಲ್ಲಿ ನಾಟಕಅಕಾಡೆಮಿಕೊಂಡಜ್ಜಿಯಲ್ಲಿ ನಡೆಸಿದ ನಾಟಕ ರಚನಾ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. 1983ರಲ್ಲಿಕರ್ನಾಟಕ ನಾಟಕಅಕಾಡೆಮಿ ನೀಡಿದ ಧನಸಹಾಯದಿಂದ ದಿಗ್ಗಜ ಶ್ರೀ. ಬಿ.ವಿ ಕಾರಂತರ ಮಾರ್ಗದರ್ಶನದಲ್ಲಿ ಮಧ್ಯಪ್ರದೇಶದ ಭೋಪಾಲ್ ಮತ್ತುದೆಹಲಿಯಲ್ಲಿರಂಗಭೂಮಿಅಧ್ಯಯನ ನಡೆಸಿದ್ದಾರೆ.

1982 ರಲ್ಲಿ ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಿ.ಶಂ.ಪರಮಶಿವಯ್ಯ ಹಾಗೂ ದೆಹಲಿಯ ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದಚಿತ್ರದುರ್ಗ, ಬಳ್ಳಾರಿ, ಧಾರವಾಡ ಜಿಲ್ಲೆಗಳ ಜಾನಪದಕಲಾವಿದರು ಮತ್ತುತಂತಿ ವಾದ್ಯಗಳ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.ಕರ್ನಾಟಕದ ಇತರೆಡೆಗಳಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳಗಳಿಗೆ ಹಲವು ಬಾರಿಕಲಾವಿದರ ತಂಡಗಳ ನೇತೃತ್ವವನ್ನು ವಹಿಸಿದ್ದಾರೆ.

1986ರಲ್ಲಿಬೆಂಗಳೂರಿನಲ್ಲಿ ನಡೆದ ಸಾರ್ಕ್ ಸಮ್ಮೇಳನದಲ್ಲಿ ಚಿತ್ರದುರ್ಗಜಿಲ್ಲೆಯಕಿನ್ನರಿಜೋಗಿತಂಡದ ನೇತೃತ್ವವನ್ನು ವಹಿಸಿರುತ್ತಾರೆ.1987 ರಲ್ಲಿಕರ್ನಾಟಕ ವಿಶ್ವವಿದ್ಯಾನಿಲಯ ಮತ್ತು ಬಾಪೂಜಿ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳದ ಸಂಘಟನೆಯನ್ನು ಮಾಡಿಜಾನಪದರಂಗ ಪ್ರಕಾರಗಳನ್ನು ಆಧುನಿಕರಂಗಭೂಮಿಗೆ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.

ಅಷ್ಟೇ ಅಲ್ಲದೆಜಾನಪದರಂಗಭೂಮಿಕುರಿತು ಸಾಕಷ್ಟು ತಜ್ಞ ಉಪನ್ಯಾಸಗಳನ್ನು ಆಕಾಶವಾಣಿಯಲ್ಲಿ ನೀಡಿದ್ದಾರೆ.1986 ಮತ್ತು1990 ರಲ್ಲಿಕರ್ನಾಟಕಜಾನಪದ ಮತ್ತುಯಕ್ಷಗಾನಅಕಾಡೆಮಿ ನಡೆಸಿದ ಜಾನಪದತಜ್ಞರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಸಾಹಿತ್ಯ ಸೇವೆ

ಪುಸ್ತಕಗಳು ಜ್ಞಾನದ ಭಂಡಾರವಿದ್ದಂತೆ ಅವು ಮನುಷ್ಯನನ್ನುಉತ್ತಮ ಭವಿಷ್ಯಕ್ಕೆಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮಜ್ಞಾನವನ್ನುತಣಿಸುವ ಆಲಯಗಳಿವು ಎಂಬುದನ್ನರಿತ ಶ್ರೀಯುತರು ಮ್ಯಾಸಬೇಡರು, ಬೇಸಾಯ ಪದ್ಧತಿ, ಬಂಗಾರಕೂದಲ ಜೈರಾಣಿ, ಜಾನಪದ ಇಬ್ಬನಿಗಳು, ಸಾಹಿತ್ಯ ಸಂಚಲನ, ಕೃಷಿ ಜಾನಪದ, ಹುನಗುಂದ ಬಾಬಣ್ಣ…..ಹೀಗೆ ಸುಮಾರು 18 ಪುಸ್ತಕಗಳನ್ನು ಸಾಹಿತ್ಯಕ್ಷೇತ್ರಕ್ಕೆಕೊಡುಗೆಯಾಗಿ ನೀಡಿದ್ದಾರೆ.ಅಲ್ಲದೆ ಹಲವಾರು ಲೇಖನಗಳನ್ನು ಪ್ರಕಟಿಸಿದ್ದಾರೆ.

ಜೊತೆಗೆಜನಪದ, ವಚನ, ಬಂಡಾಯ ಮತ್ತುದಲಿತ ಸಾಹಿತ್ಯ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರೌಢಪ್ರಬಂಧವನ್ನು ರಚಿಸಿ ಪಿಹೆಚ್.ಡಿ ಪದವಿ ಪಡೆಯಲು ಕುವೆಂಪು ವಿಶ್ವವಿದ್ಯಾನಿಲಯದಿಂದ ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ನಾಡಿನಎಲ್ಲ ಭಾಗಗಳಲ್ಲಿಯೂ ಸಂಚರಿಸಿ ಸಾಹಿತ್ಯಿಕ ಮತ್ತುಜಾನಪದ ವಿಷಯಗಳನ್ನು ಕುರಿತು ಉಪನ್ಯಾಸಗಳನ್ನು ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ 2 ಜಿಲ್ಲಾ ಸಮ್ಮೇಳನಗಳನ್ನು 2 ತಾಲೂಕು ಸಮ್ಮೇಳನಗಳನ್ನು ಹಾಗೂ ಗುಣಮಟ್ಟದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಸಂದ ಪ್ರಶಸ್ತಿಗಳು

ಶ್ರೀಯುತರ ಸಾಹಿತ್ಯ, ಜಾನಪದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.

  • 1993ರಲ್ಲಿ ಗುಂಡ್ಮಿಜಾನಪದ ಪ್ರಶಸ್ತಿ
  • 1995 ಕು.ಶಿ. ಹರಿದಾಸ ಭಟ್ಟ ಪ್ರಶಸ್ತಿ
  • 2000 ಕರ್ನಾಟಕ ನಾಟಕಅಕಾಡೆಮಿಗೌರವ ಫೆಲೋಷಿಪ್
  • 2003 ಕರ್ನಾಟಕಜಾನಪದಅಕಾಡೆಮಿಯತಜ್ಞ ಪ್ರಶಸ್ತಿ
  • 2010 ಹ.ಕ. ರಾಜೇಗೌಡಜಾನಪದ ಪ್ರಶಸ್ತಿ

    2011ರಂಗ ಸಂಸ್ಥಾನ ಜಾನಪದ ಪ್ರಶಸ್ತಿ

  • 2014ಮಹಲಿಂಗರಂಗ ಪ್ರಶಸ್ತಿ
  • 2020ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ

ತನ್ನ ನೋಡಲಿ ಎಂದುಕನ್ನಡಿಯುಕರೆವುದೆ
ತನ್ನಲ್ಲಿ ಜ್ಞಾನವುದಿಸಿದ ಮಹಾತ್ಮನು
ಕನ್ನಡಿಯಂತೆ ಸರ್ವಜ್ಞ

ಎಂಬ ನುಡಿಗೆ ಪೂರಕವಾಗಿ ಬದುಕುತ್ತಿರುವ ಡಾ.ಎಂ.ಜಿಈಶ್ವರಪ್ಪ ಒಳ್ಳೆಯ ಅಧ್ಯಾಪಕರಾಗಿ, ಜಾನಪದ ವಿದ್ವಾಂಸರಾಗಿ, ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಸರ್ವರ ಮನಸ್ಸನ್ನುಗೆದ್ದಿರುವಇವರು ಸದಾಕಾಲ ಹಸನ್ಮುಖಿ.ಎಲ್ಲರನ್ನು ಪ್ರೀತಿತುಂಬಿದ ಮನಸ್ಸಿನಿಂದ ಮಾತನಾಡಿಸುವ ಸರಳ ಸಜ್ಜನಿಕೆಯ ವ್ಯಕ್ತಿತ್ವದವರು.

ನಮ್ಮಂತಹ ಅನೇಕ ಕಿರಿಯ ಅಧ್ಯಾಪಕರಿಗೆ ಮಾರ್ಗದರ್ಶಕರಾಗಿರುವ ಈಶ್ವರಪ್ಪನವರುರಾಜ್ಯಮಟ್ಟದ 5 ನೇ ಭಕ್ತಿ ಸಾಹಿತ್ಯ ಸಮ್ಮೇಳನ ಪಂ.ಪುಟ್ಟರಾಜ ಸಾಹಿತ್ಯೋತ್ಸವದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ವಿಷಯ. ಅಲ್ಲದೆ ನವೆಂಬರ್ 8 ರಂದು ಸಾಣೇಹಳ್ಳಿಯಲ್ಲಿ ನಡೆಯಲಿರುವರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಕೊಡಮಾಡುವ ಶ್ರೀ ಶಿವಕುಮಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ ಪರಮಪೂಜ್ಯ ಡಾ.ಶ್ರೀ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆಯುತ್ತಿರುವ ಡಾ.ಎಂ.ಜಿ.ಈಶ್ವರಪ್ಪನವರ ಸಾಧನೆಯ ಬದುಕು ನಮಗೆಲ್ಲ ಸ್ಫೂರ್ತಿಯಾಗಲಿ ಎಂಬ ಆಶಯದೊಂದಿಗೆ.

[ಅಕ್ಟೋಬರ್-30 ರಂದು ದಾವಣಗೆರೆಯಲ್ಲಿ ನಡೆಯಲಿರುವ 05ನೆಯ ರಾಜ್ಯಮಟ್ಟದ ಭಕ್ತಿ ಸಾಹಿತ್ಯ ಸಮ್ಮೇಳನ (ಪಂ.ಪುಟ್ಟರಾಜ ಸಾಹಿತ್ಯೋತ್ಸವ-2022)ದ ಸಮ್ಮೇಳನಾಧ್ಯಕ್ಷರಾಗಿ ಜಾನಪದ ವಿದ್ವಾಂಸ ಡಾ.ಎಂ.ಜಿ.ಈಶ್ವರಪ್ಪ ಆಯ್ಕೆಯಾಗಿದ್ದು ತನ್ನಿಮಿತ್ತ ಈ ಲೇಖನ]

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ8 hours ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ22 hours ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ3 days ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ3 days ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ5 days ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ1 week ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ1 week ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ1 week ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ1 week ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

ದಿನದ ಸುದ್ದಿ1 week ago

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು...

Trending