Connect with us

ಸಿನಿ ಸುದ್ದಿ

‘Article 15’ ಒಂದು ಅಪರೂಪದ ಚಿತ್ರ

Published

on

ನುಭವ ಸಿನ್ಹಾ ನಿರ್ದೇಶನದ ಆರ್ಟಿಕಲ್15 ಹಿಂದಿ ಚಲನಚಿತ್ರ ಇಂದಿನ ಸಮಾಜೋ-ರಾಜಕೀಯ ವ್ಯವಸ್ಥೆಗೆ ಕನ್ನಡಿ ಹಿಡಿದ ಕಹಿವಾಸ್ತವದ ಚಿತ್ರ. ಮೊಬ್ ಲಿಂಚಿಂಗ್ ,ದಲಿತ ಯುವಕರನ್ನು ತುಂಬಿದ ಬಾಜಾರಿನಲ್ಲಿ ವಾಹನದ ಹಿಂಬದಿಗೆ ಕಟ್ಟಿ ಥಳಿಸುವ, ಇಬ್ಬರು ದಲಿತ ಅಲ್ಪವಯಸ್ಸಿನ ಯುವತಿಯರನ್ನು ಎಳೆದೊಯ್ದು ಸಾಮೂಹಿಕ ಬಲಾತ್ಕಾರ ಎಸಗಿ ಜೀವಂತ ಮರಕ್ಕೆ ನೇತು ಹಾಕಿದ ಸತ್ಯ ಘಟನೆಯ ಆಧರಿಸಿದ ಸಮಕಾಲೀನ ವ್ಯಂಗ್ಯಾತ್ಮಕ ಚಿತ್ರ. ಕೆಲವು ಕಡೆ ಈ ಚಿತ್ರವನ್ನು ಕಾನೂನು,ಸುವ್ಯವಸ್ಥೆ ಹೆಸರಡಿ ನಿಷೇಧಿಸಲಾಗಿದೆ ಎಂಬ ವರದಿಯಿದೆ.

ಬಿಗಿಯಾದ ಚಿತ್ರಪಟಕಥೆಯ ನಿರೂಪಣೆ, ಚುರುಕಾದ ಎದೆಗಿಳಿವ ಕತ್ತಿಅಲಗಿನ ಸಂಭಾಷಣೆ, ದೃಶ್ಯ ಕಾವ್ಯದಂತಿರುವ ಛಾಯಾಗ್ರಹಣ-ಇವು ಇಡೀ ಚಿತ್ರವನ್ನು ಕುತೂಹಲದಿಂದ ವೀಕ್ಷಿಸುವಂತೆ ಪ್ರೇರೇಪಿಸುತ್ತವೆ. ದಟ್ಟ ಪರಿಣಾಮವನ್ನೂ ಉಂಟು ಮಾಡುತ್ತದೆ.ಚಿತ್ರ ಆರಂಭವಾಗುವುದು ಒಂದು ಕ್ರಾಂತಿ ಗೀತೆಯ ಹಾಡಿನ ಮೂಲಕ ಮತ್ತು ಅಂತ್ಯವಾಗುವುದು ಒಂದು ರ್ಯಾಪ್ ಹಾಡಿನಿಂದ. ಇದರ ಮಧ್ಯ ನಡೆವ ಪ್ರಸಂಗಗಳು ಮಾತ್ರ ಬೆಚ್ಚಿಬೀಳುಸುತ್ತ ಸಾಗುತ್ತವೆ.

ಉತ್ತರಪ್ರದೇಶದ ಒಂದು ಠಾಣೆಗೆ ಒಬ್ಬ ಯುವ ಅಡಿಷನಲ್ ದಕ್ಷ ಪೋಲಿಸ್ ಆಫೀಸರ್ ಸೇವೆಗೆ ನಿಯುಕ್ತನಾಗುತ್ತಾನೆ. ಆಗತಾನೆ ಸವರ್ಣಿಯವರಿಂದ ದೌರ್ಜನ್ಯಗಳು ನಡೆದಿರುತ್ತದೆ. ಜನವೂ ಸಹ ಇದು ಸರ್ವೇ ಸಾಮಾನ್ಯ ಎಂದು ಕುಂಡಿ ಹೊಸೆಯುತ್ತ ಬದುಕುತ್ತಿರುತ್ತಾರೆ. 25 ರೂಪೈಗೆ ದುಡಿಯುತ್ತಿದ್ದ ಮೂರು ಯುವತಿಯರು ಕೇವಲ3 ರೂಪೈ ಹೆಚ್ಚಿಗೆ ಕೇಳಿದ್ದಕ್ಕೆ ಅವರನ್ನು ಹೊತ್ತೊಯ್ದು ಸತತ ಆರುದಿನ ಗ್ಯಾಂಗ್ ರೇಪಿನ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಸಿ ಅವರ ಸಮುದಾಯದ ಜನರಲ್ಲಿ ಭಯ ಹುಟ್ಟಿಸಲು ಮೂವರಲ್ಲಿ ಇಬ್ಬರನ್ನು ಊರಗಸಿಯ ಮರಕ್ಕೆ ಜೀವಂತ ನೇಣಿಗೆ ಹಾಕುತ್ತಾರೆ ಮತ್ತು ಅವರು ಖುಲ್ಲಮ್ ಖುಲ್ಲಾ ಯಾವ ಕಾನೂನಿನ ಭಯವಿಲ್ಲದೆ ಅಲೆಯುತ್ತಿರುತ್ತಾರೆ. ಒಬ್ಬಳು ಮಾತ್ರ ನಿಗೂಢವಾಗಿ ಕಣ್ಮರೆಯಾಗಿರುತ್ತಾಳೆ.
ಆ ದಲಿತ ತಂದೆಯರನ್ನು ಠಾಣೆಯಲ್ಲಿ ಕೇಳುವವರೇ ಇಲ್ಲ. ಇಡೀ ಕಾನೂನು ವ್ಯವಸ್ಥೆ ಉಚ್ಚಕುಲದವರ ಪರವಾಗಿ ರಕ್ಷಣೆಗೆ ಟೊಂಕಕಟ್ಟಿ ನಿಂತಿದೆ. ದಲಿತ,ಒಬಿಸಿ ಮುಂತಾದವರು ಇಲ್ಲಿ ಪ್ರಾಣಿ ಸಮ. ಅದಕ್ಕೆ ಆ ಊರ ಪಕ್ಕದ ” ಸುವ್ವರ್ ಕೀ ತಾಲಾಬ್” (ಹಂದಿಗಳನ್ನು ತೊಳೆಯುವವರ ಕೆರೆ) ಒಂದು ರೂಪಕವಾಗಿದೆ.

ಇಂಥ ಬೆಚ್ಚಿಸುವ ಸಾಮಾಜಿಕ,ರಾಜಕೀಯ ವರ್ತಮಾನದಲ್ಲಿ ಯುವ ಅಧಿಕಾರಿಗೆ ಇಲ್ಲಿಯ ರೇಪ್ ಘಟನೆ ಸವಾಲಾಗಿ ಕಾಣುತ್ತದೆ.ಆಗ ಒಟ್ಟು ವ್ಯವಸ್ಥೆಯ ಒಂದೊಂದು ಪದರುಗಳು ಬಿಚ್ಚತೊಡಗುತ್ತವೆ. ಸರಕಾರಿ ವ್ಯವಸ್ಥೆಯ ಅಂಗವಾದ ಕಾನೂನು ರಕ್ಷಕರು ಸಹ ತಮ್ಮ ಕಚೇರಿಯೊಳಗೆ ಜಾಠ್,ಯಾದವ,ಠಾಕೂರ್, ಚಮ್ಮಾರ್,ಒಬಿಸಿ,ಎಸ್.ಸಿ; ಎಸ್.ಟಿ ಎಂದು ಶ್ರೇಣೀಕೃತ ಮಾನಸಿಕತೆಯಲ್ಲಿ ಕುಂಡಿ ಹೊಸೆಯುತ್ತ ಒಣಪ್ರತಿಷ್ಠೆಯ ಹುಸಿ ಬದುಕು ಅರಸಿರುತ್ತಾರೆ.ಇಂಥವರ ಮೇಲಧಿಕಾರಿಯಾಗಿ ಬಂದ ಆ ಯುವ ಅಧಿಕಾರಿ ಬ್ರಾಹ್ಮಣ ಸಮುದಾಯಕ್ಕೆ ಸೇರಿರುತ್ತಾನೆ. ಅವನು ಶಹರಲಿ ಕನಸಿದ ನ್ಯೂಇಂಡಿಯಾ ಒಂದು ಅಣಕು ಆಗಿ ಇಲ್ಲಿ ಭಾಸವಾಗುತ್ತದೆ.ಇನ್ನೂ ಫ್ಯುಡಲ್ ಭ್ರಷ್ಟ ತೆಯ ಸಾಂಪ್ರದಾಯಿಕ ಒಲ್ಡ್ ಇಂಡಿಯಾದ ಭಯಾನಕ ಪಳೆಯುಳಿಕೆಗಳು ದಿಗಿಲುಗೊಳುಸುತ್ತಿರುತ್ತವೆ.

ದಲಿತರ ಪರ ಹೋರಾಡುವ,ನ್ಯಾಯ ಕೊಡಿಸಲು ಧಡಪಡಿಸುವ ದಲಿತ ಮಹಿಳೆ ಗೌರವ ಮತ್ತು ಆಕೆಯ ಪ್ರಿಯಕರರ ಹೋರಾಟಗಳು, ದಲಿತ ಮತ್ತು ಬ್ರಾಹ್ಮಣ ರಾಜಕೀಯ ನಾಯಕರು ಒಂದಾಗಿ “ಹಿಂದು ಏಕ” ಘೋಷಣೆಯ ಪರಿಕಲ್ಪನೆಯ ರಾಜಕೀಯ ತಂತ್ರ, ಪ್ರತಿತಂತ್ರಗಳ ಸಂಘರ್ಷ, ನ್ಯಾಯ ದೊರೆಕಿಸುವಲ್ಲಿ ನಿರ್ಣಾಯಕ ಹಂತ ತಲುಪಿದಾಗ ರಾಜಕೀಯ ಒತ್ತಡದಿಂದ ಸಿಬಿಐ ತನಿಖೆ ಎದುರಿಸುವ ದಕ್ಷ ಯುವ ಅಧಿಕಾರಿಯ ತಳಮಳ, ತಲ್ಲಣಗಳು.ಹೀಗೆ ಚಿತ್ರವು ಒಂದು ಆಳವಾದ ವಿಷಾದ ಗೀತೆಯಾಗಿ ಹೊರಹೊಮ್ಮಿದೆ. ಕೊನೆಗೂ ಅಪರಾಧಿಗಳ ಪತ್ತೆಹಚ್ಚುವಲ್ಲಿ ಯಶಸ್ಸು ಕಂಡು ತಲೆಮರೆಸಿಕೊಂಡಿದ್ದ ಮೂರನೆಯವಳನ್ನು ಶೋಧಿಸಿ ಜೀವ ಸುಧಾರಕನಾಗಿ ಕಾಣುವ ನಾಯಕನಿಗೆ ಅಚ್ಚರಿ ಕಾದಿತ್ತು. ಅಪರಾಧ ಎಸಗಿದವರಲ್ಲಿ ಪೋಲಿಸ್ ಇಲಾಖೆಯ ಹೆಸರುಗಳು ಇವೆ ಎಂಬುದು.ಇದು ಬೆಳಕಿಗೆ ಬಂದಾಗ ಇಡೀ ಚಿತ್ರವು ವ್ಯವಸ್ಥೆಯ ದರುಶನವಾಗಿ ಸ್ಫೋಟಗೊಳ್ಳುತ್ತದೆ.ಬಹುಜನ ಸಮುದಾಯದವರ ಕಣ್ತೆರೆಸಲು ಒಬ್ಬ ಬ್ರಾಹ್ಮಣ ಅಧಿಕಾರಿಯೇ ರಿಫಾರ್ಮರ್ ಆಗಿ ಬರಬೇಕಾಯಿತೆ! ಎನ್ನುವ ಒಂದು ಪ್ರಶ್ನೆ ಎದ್ದೇಳುತ್ತದೆ. ಆದರೆ ಇದು ವಾಸ್ತವವೂ ಹೌದು ಎಂದು ಒಪ್ಪಲೂಬೇಕಾಗುತ್ತದೆ.

ಡಿ.ಎಸ್.ಚೌಗಲೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44...

ದಿನದ ಸುದ್ದಿ2 days ago

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಫೆಬ್ರವರಿ 14 ಮತ್ತು 15 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್...

ದಿನದ ಸುದ್ದಿ2 days ago

ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025

ಸುದ್ದಿದಿನ,ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ...

ದಿನದ ಸುದ್ದಿ3 days ago

ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ

ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ:ಕಾರಿನ ಗ್ಲಾಸ್ ಮುಂದೆ ಎಂ.ಎಲ್.ಎ ಕಾರು ಪಾಸು ಇಟ್ಟುಕೊಂಡು ತನ್ನ ಬೆಂಬಲಿಗರು, ಗನ್ ಮ್ಯಾನ್ ನೊಂದಿಗೆ ತಹಶಿಲ್ದಾರರ ಹಾಗೂ...

ದಿನದ ಸುದ್ದಿ5 days ago

ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್‍ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ

ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು...

ದಿನದ ಸುದ್ದಿ1 week ago

ಹಿಂದುಳಿದ ಸಮಾಜಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಸಂಘಟಿತರಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು. ಬುಧವಾರ(ಫೆ.5) ರಂದು...

ದಿನದ ಸುದ್ದಿ2 weeks ago

ನ್ಯಾಕ್ ಗ್ರೇಡ್ ನೀಡಲು ಲಂಚ ಸ್ವೀಕಾರ ; ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ

ಸುದ್ದಿದಿನ,ದಾವಣಗೆರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್‌ ವಿವಿಗೆ ನ್ಯಾಕ್ ಕಮಿಟಿಯಿಂದ ಎ++ ಗ್ರೇಡ್ ನೀಡುವಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ...

ದಿನದ ಸುದ್ದಿ2 weeks ago

ಅಂತಾರಾಷ್ಟ್ರೀಯ, ನವೋದಯ ಮಟ್ಟದ ಉತ್ಕೃಷ್ಟ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗಬೇಕು: ಜಿ. ಬಿ. ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ:ಅಂತಾರಾಷ್ಟ್ರೀಯ, ನವೋದಯ ಶಾಲೆಗಳಲ್ಲಿ ಸಿಗುವಂಥ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗುವಂತಾಗಬೇಕು ಎಂಬ ದೊಡ್ಡ ಕನಸು ಹೊಂದಿದ್ದೇನೆ. ಇದಕ್ಕಾಗಿ ಸಾಕಷ್ಟು ಪ್ರಯತ್ನಪಡುತ್ತಿದ್ದೇನೆ. ನಿಮ್ಮೆಲ್ಲರ ಸಹಕಾರ ಬೇಕು ಎಂದು...

ದಿನದ ಸುದ್ದಿ2 weeks ago

ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಬೈಕ್ ರ್ಯಾಲಿ

ವರದಿ : ಸಿ ಜಗದೀಶ್ ಕೂಲಂಬಿ ಸುದ್ದಿದಿನ,ದಾವಣಗೆರೆ:ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಇದೆ ಫೆಬ್ರವರಿ 04 ರಿಂದ 12 ರವರೆಗೆ ನಡೆಯಲಿರುವ 76 ನೇ ತರಳಬಾಳು ಹುಣ್ಣಿಮೆ ಮಹೋತ್ಸವದ...

ದಿನದ ಸುದ್ದಿ2 weeks ago

ಮಾಯಕೊಂಡ ಕ್ಷೇತ್ರಕ್ಕೆ 750 ಮನೆ ಮಂಜೂರು ; ಪಾರದರ್ಶಕವಾಗಿ ಮನೆ ಹಂಚಿಕೆ ಮಾಡಲು ಗ್ರಾಪಂ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

ಸುದ್ದಿದಿನ,ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದಾವಣಗೆರೆ ತಾಲೂಕಿಗೆ 506, ಚನ್ನಗಿರಿ ತಾಲೂಕಿಗೆ 244 ಸೇರಿ ಕ್ಷೇತ್ರಕ್ಕೆ ಒಟ್ಟು 750 ಮನೆಗಳು ಮಂಜೂರಾಗಿವೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ...

Trending