Connect with us

ನೆಲದನಿ

ಕನ್ನಡ ಸಾಹಿತ್ಯದ ಬಂಡಾಯದ ಕಿಡಿ: ಅಲ್ಲಮಪ್ರಭು ಬೆಟ್ಟದೂರು ಬದುಕಿನ ಕಥನ

Published

on

ನ್ನಡ ಸಾಹಿತ್ಯ ಪರಂಪರೆಯು ಸುದೀರ್ಘವಾದ ಐತಿಹಾಸಿ ಹಿನ್ನಲೆಯನ್ನು ಒಳಗೊಂಡಿದೆ. ಇಂತಹ ಕನ್ನಡ ಸಾಹಿತ್ಯ ಪರಂಪರೆಯು ಕಾಲದಿಂದ ಕಾಲಕ್ಕೆ ವರ್ತಮಾನದ ತುರ್ತಿಗೆ ಪೂರಕವಾದ ನೆಲೆಯಲ್ಲಿ ತನ್ನ ಆಶಯಗಳನ್ನು ಅಭಿವ್ಯಕ್ತಿಸುವ ನೆಲೆಯಲ್ಲಿ ಬೆಳೆದುಬಂದಿದೆ. ಕನ್ನಡ ಸಾಹಿತ್ಯವು ತನ್ನಲ್ಲಿ ಮಡಿವಂತಿಕೆಯನ್ನು ಕಾಪಾಡಕೊಳ್ಳದೆ ಸಮಾಜಮುಖಿಯಾಗಿ ಸ್ಪಂದಿಸುತ್ತ ಬಂದಿದೆ. ಇದರ ಫಲವಾಗಿ ಈ ಸಾಹಿತ್ಯ ಪ್ರಕಾರವು ಕ್ರಿಸ್ತಪೂರ್ವದಿಂದ ಸಮಕಾಲೀನ ಸಂದರ್ಭದವರೆಗೆ ಹಲವಾರು ಅವಸ್ಥಾಂತಗಳ ಮೂಲಕ ತನ್ನ ಅಸ್ತಿತ್ವವನ್ನು ಕಾಯ್ದುಕೊಂಡು ಮುನ್ನಡೆದಿದೆ. ಹೀಗಾಗಿಯೇ ಪೂರ್ವದ ಹಳಹನ್ನಡ, ಹಳಗನ್ನಡ, ನಡುಗನ್ನಡ ಹಾಗೂ ಹೊಸಗನ್ನಡ ಎಂಬ ವಿವಿಧ ಕಾಲಘಟ್ಟಗಳನ್ನು ದಾಟುವ ಮೂಲಕ ತನ್ನ ಗಟ್ಟಿತನವನ್ನು ವಿಸ್ತರಿಸುತ್ತ ಶ್ರೀಮಂತ ಭಾಷೆಯಾಗಿ ಕಂಗೊಳಿಸುತ್ತಿದೆ. ಹೀಗೆ ಬೆಳೆದುಬಂದ ವಿವಿಧ ಅವಸ್ಥಾಂತರಗಳಲ್ಲಿ ನಮ್ಮ ಮುಂದಿರುವ ಹೊಸಗನ್ನಡವು ವಿಸ್ತ್ರøತ ಸ್ವರೂಪವನ್ನು ಪಡೆದುಕೊಂಡು ಮುನ್ನಡೆದಿದೆ. ಹೊಸಗನ್ನಡದಲ್ಲಿ ನವೋದಯ, ಪ್ರಗತಿಶೀಲ, ನವ್ಯ, ಬಂಡಾಯ ಹಾಗೂ ದಲಿತ ಸಾಹಿತ್ಯ ಎಂಬ ವಿಶಿಷ್ಟ ಪ್ರಕಾರಗಳ ಮೂಲಕವಾಗಿ ಕನ್ನಡ ಸಾಹಿತ್ಯವು ತನ್ನ ಅನನ್ಯತೆಯನ್ನು ಕಾಯ್ದುಕೊಂಡು ಬಂದಿದೆ. ಹೊಸಗನ್ನಡದ ಬಂಡಾಯ ಮತ್ತು ದಲಿತ ಸಾಹಿತ್ಯವು ವಿಶಿಷ್ಟವಾಗಿ ದನಿಯಿಲ್ಲದವರ ದನಿಯಾಗಿ, ನೆಲದ ನೋವುಗಳಿಗೆ ಸ್ಪಂದಿಸುವ ನೆಲೆಯಲ್ಲಿ ತನ್ನ ಗುಣ ಮತ್ತು ಸ್ವರೂಪಗಳಲ್ಲಿ ಬದಲಾವಣೆಯನ್ನು ಕಂಡುಕೊಂಡಿದೆ. ‘ಖಡ್ಗವಾಗಲಿ ಕಾವ್ಯ’ ಎಂಬ ಘೋಷವಾಕ್ಯದ ಮೂಲಕವಾಗಿ ಬಂಡಾಯ ಸಾಹಿತ್ಯವು ಸಾಮಾಜಿಕ ಅಸಮಾನತೆಯನ್ನು ವಿರೋಧಿಸಿ ಸಮಸಮಾಜದ ಕನಸ್ಸೊತ್ತು ಮುನ್ನಡೆಯಿತು. ಇಂತಹ ಬಂಡಾಯ ಸಾಹಿತ್ಯ ಪರಂಪರೆಗೆ ಕನ್ನಡದ ಹಲವಾರು ವಿಚಾರವಾದಿಗಳು ಹೆಗಲುಕೊಟ್ಟು ದುಡಿದಿದ್ದಾರೆ. ಅಂತಹ ವಿಚಾರವಾದಿಗಳಲ್ಲಿ ಅಲ್ಲಮಪ್ರಭು ಬೆಟ್ಟದೂರು ಅವರು ಒಬ್ಬರು.

ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಬೆಟ್ಟದೂರು ಎಂಬ ಗ್ರಾಮದಲ್ಲಿ ಶ್ರೀ ಚನ್ನಬಸವಪ್ಪ ಶ್ರೀಮತಿ ಅಮರಮ್ಮ ಇವರ ಮಗನಾಗಿ ದಿನಾಂಕ: 30 ಜುಲೈ 1951 ರಂದು ಜನಿಸಿದರು. ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರ ಕೌಟುಂಬಿಕ ಹಿನ್ನೆಲೆಯನ್ನು ಗಮನಿಸಿದರೆ, ಇವರದು ಸಾಮಾಜಿಕ ಹೋರಾಟದಿಂದ ಬಂದ ಕುಟುಂಬವಾಗಿದೆ. ಶ್ರೀಯುತರ ತಂದೆಯವರಾದ ಶ್ರೀ ಚನ್ನಬಸವಪ್ಪನವರು ರೈತ ಹೋರಾಟಗಾರರು ಹಾಗೂ ಚಿಂತಕರಾಗಿದ್ದು, ವಚನ ಸಾಹಿತ್ಯ ಹಾಗೂ ಶರಣ ಚಳವಳಿಯ ಬಗೆಗೆ ವಿಶೇಷವಾದ ಆಸಕ್ತಿಯನ್ನು ಮೈಗೂಡಿಸಿಕೊಂಡಿದ್ದರು. ಶರಣರ ವಿಚಾರಗಳನ್ನು ಕುರಿತಂತೆ ‘ಸಕಲ ಜೀವ ಪ್ರೇಮ’, ‘ಸಲ್ಲಲಿತ ಸನ್ಮಾರ್ಗ’ ಎಂಬ ವೈಚಾರಿಕ ಕೃತಿಗಳನ್ನು ರಚಿಸಿದ್ದರು. ಈ ಸಲ್ಲಲಿತ ಸನ್ಮಾರ್ಗ ಎಂಬ ಕೃತಿಯೊಳಗೆ ಶರಣರ ಚಳವಳಿಯನ್ನು ‘ವಚನ ಧರ್ಮ’ ಎಂದು ಕರೆಯುವ ವಾಡಿಕೆಯನ್ನು ವಿರೋಧಿಸಿ, ವಚನ ಮಾರ್ಗ ಅಥವಾ ಶರಣ ಮಾರ್ಗ ಎಂದು ಪ್ರತಿಪಾದಿಸಿದ್ದಾರೆ. ಇವರು ರಚಿಸಿರುವ ಈ ಕೃತಿಗಳಿಗೆ ಹಲವಾರು ಪ್ರಶಸ್ತಿ ಹಾಗೂ ಗೌರವ ಪುರಸ್ಕಾರಗಳು ಕೂಡ ಲಭಿಸಿವೆ. ಹಾಗೆಯೇ ಶ್ರೀಯುತರ ಚಿಕ್ಕಪ್ಪನವರಾದ ಶ್ರೀ ಶಂಕರೆಗೌಡರು ನಂದಾಲಾಲ್ ಬಸು ಎಂಬ ಹೆಸರಾಂತ ಚಿತ್ರಕಲಾವಿದರ ಶಿಷ್ಯರಾಗಿ ಚಿತ್ರಕಲೆಯನ್ನು ಕರಗತಮಾಡಿಕೊಂಡಿದ್ದರು. ನಂತರದಲ್ಲಿ ಗಾಂಧೀಜಿಯವರು ತಮ್ಮ ಕೊನೆಯ ದಿನಗಳನ್ನು ಕಳೆಯುವ ಸಂದರ್ಭದಲ್ಲಿ ಅವರ ಜೊತೆಗಿದ್ದು, ಅವರ ಜೀವನ ಕುರಿತ ಭಿತ್ತಿಚಿತ್ರಗಳನ್ನು ರಚಿಸಿದ್ದವರು. ಹಾಗೆಯೇ ಇವರು ಲಾಲ್ ಬಹಾದ್ದೂರ್ ಶಾಸ್ತ್ರಿಗಳಿಗೆ ಅತ್ಯಂತ ಪ್ರಿಯವಾದವರು. ಇಷ್ಟೊಂದು ಹೆಸರು ಮಾಡಿದ್ದರು ಸಹ ಕಲಾಲೋಕದಿಂದ ವಿಮುಖರಾಗಿ ಕೃಷಿ ಕಾಯಕದಲ್ಲಿ ತಲ್ಲಿನರಾಗಿ ಬಸವ ಮಾರ್ಗದಲ್ಲಿ ‘ಕಾಯಕವೇ ಕೈಲಾಸ’ವೆಂದು ನಡೆದರು. ಇವರೆಲ್ಲರ ಪ್ರೇರಣೆ ಮತ್ತು ಪ್ರಭಾವಗಳು ಶ್ರೀಯುತ ಅಲ್ಲಮಪ್ರಭು ಅವರ ಮೇಲಾಗಿದ್ದವು. ಹೀಗಾಗಿ ಕಾಯಕ ಮಾರ್ಗ, ಹೋರಾಟ ಮಾರ್ಗಗಳು ಬಾಲ್ಯದ ದಿನಗಳಿಂದಲೂ ಇವರ ರಕ್ತದೊಳಗೆ ಕರಗತವಾಗಿದ್ದವು. ಬಾಲ್ಯದ ಸಂದರ್ಭದಲ್ಲಿ ತಮ್ಮ ಕುಟುಂಬದ ಹಿರಿಯರು ನಡುಗನ್ನಡದ ಪ್ರಭುಲಿಂಗಲೀಲೆ ಮತ್ತು ಕುಮಾರವ್ಯಾಸ ಭಾರತವನ್ನು ಹಾಡುತ್ತಿದ್ದರೆ, ಅವುಗಳನ್ನು ಓದುವ ಹವ್ಯಾಸವನ್ನು ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ಮೈಗೂಡಿಸಿಕೊಂಡಿದ್ದರು.

ಅಲ್ಲಮಪ್ರಭು ಬೆಟ್ಟದೂರು ಅವರು ವಿದ್ಯಾರ್ಥಿ ದೆಸೆಯಿಂದಲೂ ಹೋರಾಟದ ಪ್ರವೃತ್ತಿಯನ್ನು ಮೈಗೂಡಿಸಿಕೊಂಡಿದ್ದರು. ಹೀಗಾಗಿ ಬಂಡಾಯ ಸಾಹಿತ್ಯ ಪ್ರಕಾರದ ಅಡಿಯಲ್ಲಿ ತಮ್ಮ ದನಿಯನ್ನು ಎತ್ತಿಹಿಡಿದರು. ಧಾರವಾಡದಲ್ಲಿ ಪದವಿ ಶಿಕ್ಷಣವನ್ನು ಅಧ್ಯಯನ ಮಾಡುವ ಸಂದರ್ಭದಲ್ಲಿ ಶ್ರೀಯುತ ಚಂಪಾ ಅವರ ಪ್ರೇರಣೆಗೊಳಗಾಗಿ ಜೆ.ಪಿ ಚಳವಳಿಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಆಗ ಚಂಪಾ ಅವರು ಜೆ.ಪಿ ಚಳುವಳಿಯ ರಾಜ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಿದರೆ, ಅಲ್ಲಮಪ್ರಭು ಅವರು ರಾಯಚೂರು ಭಾಗದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಸಂಚಾಲಕರಾಗಿ ಚಳವಳಿಯನ್ನು ಮುನ್ನಡೆಸಿದರು. ಹಾಗೆಯೇ 1979 ರ ಅವಧಿಯಿಂದಲೂ ಬಂಡಾಯ ಸಾಹಿತ್ಯಕ್ಕೆ ಬೆನ್ನೆಲುಬಾಗಿ ನಿಂತ ಶ್ರೀಯುತರು ಹಲವಾರು ಜನಪರ ಮತ್ತು ಪ್ರಗತಿಪರ ಹೋರಾಟಗಳಲ್ಲಿ ತಮ್ಮ ಸಹಭಾಗಿತ್ವವನ್ನು ವ್ಯಕ್ತಪಡಿಸುತ್ತ ಬಂದಿದ್ದಾರೆ. ಇವರ ಪ್ರಮುಖ ಹೋರಾಟಗಳೆಂದರೆ, ‘ಕುದುರೆ ಮೋತಿ ಹೋರಾಟ’, ‘ಗೋಕಾಕ ಚಳವಳಿ’, ‘ಹೈದ್ರಾಬಾದ್ ಕರ್ನಾಟಕದ 371 ಜೆ’ ವಿಧಿಯ ಜಾರಿಗಾಗಿ ಹೋರಾಟ, ‘ಪ್ರತ್ಯೇಕ ಕೊಪ್ಪಳ ಜಿಲ್ಲಾ ಹೋರಾಟ’ ಹೀಗೆ ಹಲವಾರು ಜನಪರವಾದ ಚಳವಳಿಗಳ ಮೂಲಕವಾಗಿ ಸಮಸಮಾಜದ ಕನಸ್ಸೊತ್ತು ಮುನ್ನಡೆಯುತ್ತಿದ್ದಾರೆ. ಇವರ ಹೋರಾಟಗಳಲ್ಲಿ ‘ಕುದುರಿ ಮೋತಿ ಪ್ರಕರಣ’ವು ಅತ್ಯಂತ ಮಹತ್ವದ ಹೋರಾಟವಾಗಿದೆ. 11 ಜೂನ್ 1985 ರಲ್ಲಿ ಮಠಾಧೀಶನೊಬ್ಬ ತಳಸಮುದಾಯದ ಪಾರ್ವತಮ್ಮ ಮತ್ತು ಮುಸ್ಲಿಂ ಸಮುದಾಯದ ಹುಸೇನ್‍ಬಿ ಎಂಬುವವರನ್ನು ಅಪಮಾನಿಸಿ, ಬೆತ್ತಲಗೊಳಿಸಿ ಊರಿನ ತುಂಬ ಮೆರವಣಿಗೆ ಮಾಡಿಸಿದ್ದ. ಈ ಪ್ರಕರಣದ ಕುರಿತು ಸಮಗ್ರವಾದ ಮಾಹಿತಿಯನ್ನು ಕಲೆಹಾಕಿ, ಇದರ ವಿರುದ್ಧ ಹೋರಾಟವನ್ನು ಮಾಡಿದ ಕೀರ್ತಿಯು ಶ್ರೀಯುತರಿಗೆ ಸಲ್ಲುತ್ತದೆ. ಇವರು ಈ ಪ್ರಕರಣವನ್ನು ಗಂಭೀರವಾಗಿ ಕೈಗೆತ್ತಿಕೊಳ್ಳದಿದ್ದರೆ ಈ ಪ್ರಕರಣವನ್ನು ಮುಚ್ಚಿಹಾಕುವ ತಂತ್ರಗಳು ನಡೆದಿದ್ದವು. ಆದರೆ ಇಲ್ಲಿ ಅನ್ಯಾಯಕ್ಕೊಳಗಾದ ದಮನಿತ ಮತ್ತು ಅಸಹಾಯಕ ಸಮುದಾಯಗಳ ದನಿಯಾಗಿ ನಿಂತು ಹೋರಾಟ ಮಾಡಿದರು. ಇದರಿಂದ ಮೂಲಭೂತವಾದಿಗಳು ಹಾಗೂ ಉನ್ನತ ವರ್ಗದವರ ವಿರೋಧಕ್ಕೂ ಗುರಿಯಾಗಿ, ಮಠಾಧೀಶನ ಅನುಯಾಯಿಗಳಿಂದ ಹಲ್ಲೆಗಳು ಕೂಡ ಇವರ ಮೇಲೆ ನಡೆದವು. ಸಾಕಷ್ಟು ಪ್ರಾಣ ಬೆದರಿಕೆಗಳು ಕೇಳಿಬಂದವು. ಆದರೆ ಇದಾವುದನ್ನು ಲೆಕ್ಕಿಸದೆ ಜನಪರವಾದ ನೆಲೆಯಲ್ಲಿ ತಮ್ಮ ಹೋರಾಟವನ್ನು ಇಂದಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಇಂದಿಗೂ ತಮ್ಮ ಗುರುಗಳಾದ ಎಂ.ಎಂ ಕಲುಬುರ್ಗಿ, ಚಂಪಾ ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಮುನ್ನಡೆಯುತ್ತಿದ್ದಾರೆ.

ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ಕೇವಲ ಹೋರಾಟಗಾರರು ಮಾತ್ರವಲ್ಲದೆ ಹೆಸರಾಂತ ಬಂಡಾಯ ಸಾಹಿತಿಗಳು ಹೌದು. ಸಾಮಾಜಿಕ ಅಸಮಾನತೆ, ಅಸ್ಪøಶ್ಯತೆ, ಕೋಮುವಾದ, ಜಾತಿವಾದದ ವಿರುದ್ಧವಾಗಿ ತಮ್ಮ ದನಿಯನ್ನು ಎತ್ತುವ ಮೂಲಕ ಸಮಸಮಾಜ ಮತ್ತು ಶಾಂತಿಯುತ ಸಮಾಜದ ಕನಸು ಕಂಡವರು. ಸುಮಾರು 80 ರ ದಶಕದಲ್ಲಿ ಭಾರತದ ರಾಜಕೀಯದಲ್ಲಿ ಉಂಟಾದ ಅರಾಜಕತೆಯ ವಿರುದ್ಧ ಬಂಡಾಯದ ನೆಲೆಯಲ್ಲಿ ಜೆ.ಪಿ ಚಳವಳಿಗೆ ಹೆಗಲು ಕೊಟ್ಟು ನಿಂತವರು. ಇವರ ಸಾಹಿತ್ಯಿಕ ಬರಹಗಳಲ್ಲೂ ಇದೇ ಬಂಡಾಯದ ದನಿ ಪ್ರಮುಖವಾಗಿ ಎದ್ದು ಕಾಣುತ್ತದೆ. ಹಾಗೆಯೇ ಕೋಮುವಾದವನ್ನು ಸೃಷ್ಟಿಸುತ್ತಿರುವ ಬಿಜೆಪಿ ಹಾಗೂ ಆರ್.ಎಸ್.ಎಸ್ ಸಿದ್ಧಾಂತಗಳನ್ನು ವಿರೋಧಿಸುವ ನೆಲೆಯಲ್ಲಿ 1980ರ ಸುಮಾರಿನಲ್ಲಿಯೇ ಬಂಡಾಯದ ಕಳಹಳೆಯನ್ನು ಮೊಳಗಿಸಿದ ಕೀರ್ತಿಯು ಶ್ರೀಯುತರಿಗೆ ಸಲ್ಲುತ್ತದೆ. ಅಂದು ವಾಜಪೇಯಿಯವರ ಅಧ್ಯಕ್ಷತೆಯಲ್ಲಿ ಸಿದ್ಧಗೊಂಡ ಬಿಜೆಪಿಯ ಸಂಘಪರಿವಾರ ನೀತಿಯನ್ನು ಅನಾವರಣಗೊಳಿಸುವ ಇವರ ಕವಿತೆಯೊಂದು ಹೀಗಿದೆ;

ವಾಜಪೇಯ ಭಾಜಪೇಯ
ಹೊಚ್ಚ ಹೊಸ ಪೇಯ
ಕುಡಿಯಿರಯ್ಯ, ಕುಡಿಯದಿದ್ದರೆ
ಮೂಗ ಹಿಡಿದು ಕುಡಿಸಲಾಗುವುದು
ಕೇಳಿರಯ್ಯ, ಕೇಳ್ ಈರಯ್ಯ…

ಎಂದು ಗುಡುಗುವ ಅಲ್ಲಮಪ್ರಭು ಅವರು, ಅಂದಿನ ಬಿಜೆಪಿ ಮತ್ತು ಆರ್.ಎಸ್.ಎಸ್ ಮೂಲಭೂತವಾದಿ ಧೋರಣೆಗಳನ್ನು ವಿಡಂಬಿಸುವ ಇವರ ಮತ್ತೊಂದು ಕವಿತೆ ಹೀಗಿದೆ;

ಕುಂಕುಮದ ಕಲಿಗಳು ದೇಶವಾಳುವರು ಕೇಳಿರಣ್ಣ
ತುಪ್ಪದ ತಲೆಗಳು ರಾಜ್ಯವಾಳುವರು ಕೇಳಿರಣ್ಣ
ಹತ್ತು ವರ್ಷದಾಗ ಮೀನು ಬೀಳುತಾವ ತಿಳಿಯಿರಣ್ಣ

ಎಂಬ ಕವಿತೆಯನ್ನು ಹಿಂದೆ ಶರಣರ ವಚನಗಳ ಆಶಯಗಳನ್ನು ಸಾರುವ ಜಂಗಮರ ಧಾಟಿಯಲ್ಲಿ ವ್ಯಕ್ತಪಡಿಸಿದ್ದರು. ಅಂದರೆ ಸುಮಾರು 80 ರ ದಶಕದಲ್ಲಿ ಸಾರಿದ ಇವರ ಕವಿತೆಯ ಆಶಯವು ಇಂದಿಗೆ ಸತ್ಯವಾಗಿದೆ. ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬಂದರೆ ಏನೆಲ್ಲ ಅನಾಹುತಗಳಾಗಬಹುದು ಎಂಬುದನ್ನು ಅಂದೇ ಗ್ರಹಿಸಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ತರುವಾಯದಲ್ಲಿ ಕೋಮುವಾದ, ಭಯೋತ್ಪಾದನೆ, ವಿಚಾರವಾದಿಗಳ ಹತ್ಯೇ, ಅತ್ಯಾಚಾರದಂತಹ ಹೇಯ್ಯ ಕೃತ್ಯಗಳು ಸಹಜ ಕೃತ್ಯಗಳಂತೆ ನಡೆಯುತ್ತಿವೆ. ಸರ್ವಮಾನವರನ್ನು ಸಮಾನವಾಗಿ ಕಾಣುವ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂಬ ಘಂಟಾಘೋಷ ವಾಕ್ಯಗಳು ಎದೆಗಾರಿಕೆಯಿಂದ ಹೊರಬರುತ್ತಿವೆ. ಅಷ್ಟೇ ಅಲ್ಲದೆ ಸಂವಿಧಾನವನ್ನು ಸುಡುವುದರ ಮೂಲಕ ನಾವು ಸಂವಿಧಾನ ವಿರೋಧಿಗಳು ಎಂಬುದನ್ನು ಸಮರ್ಥಿಸಿಕೊಳ್ಳುವ ಪುಂಡಾಟಿಕೆಯನ್ನು ಬಿಜೆಪಿ ಮತ್ತದರ ಸಂಘಪರಿವಾರವು ಪ್ರದರ್ಶಿಸುತ್ತಿದೆ. ಆದ್ದರಿಂದ ಶ್ರೀಯುತ ಅಲ್ಲಮಪ್ರಭು ಅವರು ಅಂದು ನುಡಿದ ಕವಿವಾಣಿಯನ್ನು ಇದೊಂದು ಭವಿಷ್ಯವಾಣಿ ಎಂದರೆ ತಪ್ಪಾಗಲಾರದು. ಹೀಗೆ ಮೂಲಭೂತವಾದಿಗಳು ಮತ್ತು ಸನಾತನವಾದಿಗಳ ವಿರೋಧವನ್ನು ಕಟ್ಟಿಕೊಂಡೆ ಬಂಡಾಯ ಸಾಹಿತ್ಯ ಮತ್ತು ಜನಪರವಾದ ಚಳವಳಿಗಳನ್ನು ಮುಂದುವರೆಸಿಕೊಂಡು ಬಂದವರು. ಇವರ ಪ್ರಮುಖ ಕವನ ಸಂಕಲನಗಳೆಂದರೆ, ‘ಇದು ನನ್ನ ಭಾರತ’, ಕುದುರಿ ಮೋತಿ ಮತ್ತು ನೀಲಗಿರಿ’, ‘ಕೆಡಹಬಲ್ಲರು ಅವರು ಕಟ್ಟಬಲ್ಲೆವು ನಾವು’ ಇವು ಅವರ ಕವನ ಸಂಕಲನಗಳು. ‘ಗುಲಗಂಜಿ’ ಎಂಬ ಚುಟುಕು ಕವನ ಸಂಕಲನವನ್ನು ಪ್ರಕಟಿಸಿದ್ದಾರೆ. ಇದರ ಜೊತೆಯಲ್ಲಿ ‘ತಳಮಳ’ ಎಂಬ ಪತ್ರಿಕೆಯಲ್ಲಿ ‘ಪ್ರಚಲಿತ’ ಎಂಬ ಅಂಕಣವನ್ನು ಬರೆದು, ಈ ಅಂಕಣಗಳನ್ನು ‘ವರ್ತಮಾನ’ ಎಂಬ ಕೃತಿಯ ಮೂಲಕ ಸಂಕಲಿಸಿದ್ದಾರೆ. ಇಷ್ಟೇ ಅಲ್ಲದೆ ಹಲವಾರು ಸಂಪಾದನ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೀರ್ತಿಗೆ ಶ್ರೀಯುತರು ಪಾತ್ರರಾಗಿರುತ್ತಾರೆ. ಇವರ ಈ ಸಾಹಿತ್ಯ ಮತ್ತು ಹೋರಾಟದ ಹಾದಿಯನ್ನು ಗಮನಿಸಿ ಹಲವಾರು ಗೌರವ, ಪುರಸ್ಕಾರ ಮತ್ತು ಪ್ರಶಸ್ತಿಗಳು ಇವರ ಮುಡಿಗೇರಿವೆ. ಇವುಗಳಲ್ಲಿ ಕೆಲವು ಹೀಗಿವೆ; ಶಕ್ತಿನಗರದ ಕನ್ನಡ ಸಂಘದಿಂದ ‘ರಾಜ್ಯೋತ್ಸವ ಪ್ರಶಸ್ತಿ’, ಕರಾವಳಿಯ ಸಾಂಸ್ಕøತಿಕ ಸಂಘಟನೆಯಿಂದ ‘ಕರಾವಳಿ ಪ್ರಶಸ್ತಿ’, ಕೊಪ್ಪಳದ ಸ್ಥಳೀಯ ಸಂಘಟನೆಗಳಿಂದ ‘ಕನಕ ಪ್ರಶಸ್ತಿ’ಗಳು ಇವರ ಮುಡಿಗೇರಿವೆ. ಸಾಹಿತ್ಯದ ಮೇಲಿನ ವಿಶೇಷವಾದ ಕಾಳಜೀಯಿಂದಾಗಿ ಮತ್ತು ಸಾಹಿತಿಗಳಿಗೆ ಪ್ರೋತ್ಸಾಹಿಸುವ ಮೂಲಕ ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸಬೇಕೆಂಬ ಕನಸ್ಸೊತ್ತು ಸಮಾನ ಮನಸ್ಕರೊಂದಿಗೆ ಸೇರಿ ‘ತಿರುಳ್ಗನ್ನಡ ಸಾಹಿತಿಗಳ ಸಹಕಾರ ಸಂಘ’ ಎಂಬ ಸಂಸ್ಥೆಯೊಂದನ್ನು ಕೊಪ್ಪಳ ಜಿಲ್ಲೆಯಲ್ಲಿ ಮೊದಲ ಭಾರಿಗೆ ಸ್ಥಾಪಿಸುವ ಮೂಲಕ ಸಾಹಿತ್ಯ ವಲಯಕ್ಕೆ ಮಾದರಿಯಾಗಿದ್ದಾರೆ. ಈ ಸಂಸ್ಥೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಈ ಸಹಕಾರಿ ಸಂಘದ ಮೂಲಕ ಕೃತಿ ಪ್ರಕಟಣೆ ಮಾಡುವ ಲೇಖಕರಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಕೈಗೊಳ್ಳಲಾಗಿದೆ.

ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿ ಕೊಪ್ಪಳದಲ್ಲಿ ಸೇವೆಸಲ್ಲಿಸಿ, ಪ್ರಾಂಶುಪಾಲರಾಗಿ ನಿವೃತ್ತಿಯನ್ನು ಪಡೆದುಕೊಂಡಿದ್ದಾರೆ. ಇದರ ಜೊತೆಯಲ್ಲಿ ಚಂಪಾ ಅವರು ‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ದ ಅಧ್ಯಕ್ಷರಾದ ಸಂದರ್ಭದಲ್ಲಿ ಅಲ್ಲಮಪ್ರಭು ಅವರು ಸದಸ್ಯರಾಗಿ, ನಂತರ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಸೇವೆಸಲ್ಲಿಸಿರುತ್ತಾರೆ. ಇಂದು ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರು ಮೂಲತಃ ಕೃಷಿಮೂಲ ಪರಂಪರೆಯಿಂದ ಬಂದವರಾಗಿದ್ದು, ‘ಕಾಯಕವೇ ಕೈಲಾಸ’ ಎಂಬ ಶರಣ ಮಾರ್ಗದಲ್ಲಿ ಮುನ್ನಡೆದವರು. ಹೀಗಾಗಿ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಆಸಕ್ತಿಯಿಂದಾಗಿ ಕೊಪ್ಪಳದ ಸಮೀಪದಲ್ಲಿ ಜಮೀನು ಖರೀದಿಸಿ ವ್ಯವಸಾಯಯಲ್ಲಿ ತಲ್ಲಿನರಾಗಿದ್ದಾರೆ. ಇವರ ಏಕೈಕ ಪುತ್ರರಾದ ಪುಟ್ಟರಾಜ್ ಪಾಟೀಲ್ ಅವರು ಕೂಡ ಸಾವಯವ ಕೃಷಿಯಲ್ಲಿ ತಲ್ಲಿನರಾಗಿದ್ದಾರೆ. ಪುಟ್ಟರಾಜ್ ಅವರು ಗೋಕಾಕ್ ಚಳವಳಿಯ ಸಂದರ್ಭದಲ್ಲಿ ಜನಿಸಿದ ಕಾರಣದಿಂದಾಗಿ, ಅದೇ ಚಳವಳಿಯಲ್ಲಿ ತಲ್ಲಿನರಾಗಿದ್ದ ಅಲ್ಲಮಪ್ರಭು ಅವರು ತಮ್ಮ ಮಗನಿಗೆ ಗೋಕಾಕ್ ಚಳವಳಿಯ ಪ್ರಮುಖ ರುವಾರಿಗಳಾದ ಪಾಟೀಲ್ ಪುಟ್ಟಪ್ಪ, ರಾಜ್‍ಕುಮಾರ್ ಹಾಗೂ ಚಂದ್ರಶೇಖರ್ ಪಾಟೀಲ್ ಅವರ ಹೆಸರುಗಳನ್ನು ಸಂಯೋಜಿಸಿ ‘ಪುಟ್ಟರಾಜ್ ಪಾಟೀಲ್’ ಎಂದು ನಾಮಕರಣ ಮಾಡಿದ್ದಾರೆ. ಇದು ಶ್ರೀಯುತರು ತಮ್ಮ ಗುರುಪರಂಪರೆ ಮತ್ತು ಹೋರಾಟ ಮಾರ್ಗದೊಂದಿಗೆ ಇವರಿಗಿರುವ ನಂಟನ್ನು ಎತ್ತಿಹಿಡಿಯುತ್ತದೆ. ಇಂದು ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ತಮ್ಮ ಶ್ರೀಮತಿ ಮಂಜುಳಾ, ಮಗ ಪುಟ್ಟರಾಜ್ ಪಾಟೀಲ್ ಹಾಗೂ ಮೊಮ್ಮಕ್ಕಳೊಂದಿಗೆ ಸರಳವಾದ ಜೀವನ ನಡೆಸುತ್ತಿದ್ದಾರೆ. ಇದರ ಜೊತೆಗೆ ಸಮಾಜಿಕ ಕಾಳಜಿಯೊತ್ತು ಹೋರಾಟ ಹಾಗೂ ವೈಚಾರಿಕ ಚಿಂತನೆಯ ಬೀಜಗಳನ್ನು ನಾಡಿಗೆ ಬಿತ್ತರಿಸುತ್ತಿದ್ದಾರೆ. ಇವರ ಈ ಬದುಕು ಮತ್ತು ಹೋರಾಟ ಯಶಸ್ವಿನೆಡೆಗೆ ಸಾಗಲಿ ಎಂಬುದು ನಮ್ಮೆಲ್ಲರ ಹಾರೈಕೆ.

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading
Advertisement

Title

ದಿನದ ಸುದ್ದಿ1 day ago

ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್‌ ಖರೀದಿಗೂ ಎದುರಾಗುತ್ತಿದೆ ಒತ್ತಡ

ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ...

ದಿನದ ಸುದ್ದಿ1 day ago

ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!

ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ...

ಸಿನಿ ಸುದ್ದಿ1 day ago

ಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್‌ಡೇ; 53ನೇ ವಸಂತದಲ್ಲಿ ಸುದೀಪ್‌ ಸಿನಿಮಾ ಸರ್ಪ್ರೈಸ್‌ಗೆ ಕೌಂಟ್‌ಡೌನ್!

ಸುದ್ದಿದಿನ,ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೆ ಇಂದು, ಸೆಪ್ಟೆಂಬರ್‌ 2, ವಿಶೇಷ ದಿನ. 53ನೇ ವಸಂತಕ್ಕೆ ಕಾಲಿಡುತ್ತಿರುವ ಸುದೀಪ್‌, ಈ ಬಾರಿ ತಮ್ಮ...

ದಿನದ ಸುದ್ದಿ1 day ago

ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ

ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ...

ನಿತ್ಯ ಭವಿಷ್ಯ1 day ago

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ...

ದಿನದ ಸುದ್ದಿ2 days ago

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ: 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ

ಸುದ್ದಿದಿನ,ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಅವಕಾಶ ಕಲ್ಪಿಸಲು ಸಜ್ಜಾಗಿದೆ. ವಿವಿಧ ಇಲಾಖೆಗಳಲ್ಲಿನ...

ದಿನದ ಸುದ್ದಿ2 days ago

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ....

ದಿನದ ಸುದ್ದಿ2 days ago

ಅಪೌಷ್ಟಿಕತೆ ನಿವಾರಣೆಗೆ ಹೊಸ ಹೆಜ್ಜೆ; ಶಾಲೆ ಮುಗಿಯುವ ಮುನ್ನ ಮಕ್ಕಳಿಗೆ ಪೌಷ್ಟಿಕ ತಿನಿಸು

ಸುದ್ದಿದಿನ,ಹೂವಿನಹಡಗಲಿ: ಗಣಿ ಚಟುವಟಿಕೆಗಳಿಂದ ಬಾಧಿತ ಪ್ರದೇಶಗಳ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆ ಸುಧಾರಣೆಗೆ ಕರ್ನಾಟಕ ಗಣಿ ಮತ್ತು ಪರಿಸರ ಪುನಸ್ಥಾಪನೆ ನಿಗಮ (ಕೆಎಂಆರ್‌ಸಿಇ) ಹೊಸ ಹೆಜ್ಜೆ ಇಟ್ಟಿದೆ....

ಕ್ರೀಡೆ2 days ago

ಕಲ್ಲು-ಮುಳ್ಳಿನ ದಾರಿಯಲ್ಲೂ ನಿಲ್ಲದ ಹೆಜ್ಜೆ; ತಾಯಿಯ ಛಲಕ್ಕೆ ಮ್ಯಾರಥಾನ್‌ನಲ್ಲಿ ಪ್ರಥಮ ಸ್ಥಾನ

ಸುದ್ದಿದಿನ,ಮುಂಬಯಿ: ಬದುಕಿನಲ್ಲಿ ಎದುರಾಗುವ ಸಂಕಷ್ಟಗಳು ಕೆಲವೊಮ್ಮೆ ಮನುಷ್ಯನನ್ನು ಕುಗ್ಗಿಸುತ್ತವೆ. ಆದರೆ ತಾಯಿಯೊಬ್ಬಳಿಗೆ ಮಕ್ಕಳ ಭವಿಷ್ಯದ ಕನಸು ದೊಡ್ಡದಾಗಿದ್ದರೆ, ಆಕೆಯ ಮುಂದೆ ನೋವು, ಬಡತನ, ಅಡೆತಡೆ ಯಾವುದೂ ನಿಲ್ಲುವುದಿಲ್ಲ....

ದಿನದ ಸುದ್ದಿ2 days ago

ಮೈಸೂರು ದಸರಾದಲ್ಲಿ ಕಂಬಳದ ಕಳೆ: ಕೋಣಗಳ ಓಟಕ್ಕೆ ಭರದ ಸಿದ್ಧತೆ, ಪರಿಸರ ವಿವಾದವೂ ತೀವ್ರ

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಾಂಸ್ಕೃತಿಕ ವೈವಿಧ್ಯಕ್ಕೆ ಈ ಬಾರಿ ಕರಾವಳಿಯ ಕಂಬಳ ಮತ್ತೊಂದು ಆಯಾಮ ನೀಡಲಿದೆ. ಸಾತಗಳ್ಳಿಯ 25 ಎಕರೆ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಸಿದ್ಧತೆಗಳು...

Trending