Connect with us

ಅಂತರಂಗ

ನುಡಿಯೊಳಗಿನ ಜೀವಸತ್ವ ಸಾರುತಿರುವ ಕನ್ನಡದ ಅನರ್ಘ್ಯ ರತ್ನ ಪ್ರೊ.ಬಾತಿ ಬಸವರಾಜ್

Published

on

ಮಾತಿಗೂ ಮುನ್ನ….

ದಾವಣಗೆರೆ ಸಮೀಪದ ಐತಿಹಾಸಿಕ ಪ್ರಸಿದ್ಧ ಪುಣ್ಯಕ್ಷೇತ್ರ ದೊಡ್ಡಬಾತಿಯ ಶ್ರೀಯುತ ಸಿದ್ದಲಿಂಗಪ್ಪ ಶ್ರೀಮತಿ ಸಾವಮ್ಮ ದಂಪತಿಗಳ ಸುಪುತ್ರರಾದ ಪ್ರೊ. ಬಾತಿ ಬಸವರಾಜ್ ಅವರು ಮಾತಾಡಲು ನಿಂತರೆ ಶುದ್ಧ, ಸ್ವಚ್ಛ, ಸುಂದರ, ಸುಲಲಿತವಾದ ಕನ್ನಡ ಪದಗಳು ಅವರ ನಾಲಿಗೆ ಮೇಲೆ ನರ್ತನ ಮಾಡುತ್ತವೆ.

ಅವರು ಬಳಸುವ ಕನ್ನಡ ಪದಗಳನ್ನು ಕೆಲವರಿಗೆ ಉಚ್ಛರಿಸುವುದೇ ಕಷ್ಟ. ಕನ್ನಡ ಭಾಷೆಯಲ್ಲಿ ಅವರಿಗಿರುವ ಪಾಂಡಿತ್ಯ ನಿಜಕ್ಕೂ ಯಾರಿಗಾದರೂ ಅಚ್ಚರಿ ಉಂಟು ಮಾಡುತ್ತದೆ. ಅಷ್ಟೇ ನಿರರ್ಗಳವಾಗಿ ಆಂಗ್ಲ ಭಾಷೆಯಲ್ಲೂ ಮಾತನಾಡಬಲ್ಲ ಪ್ರಾವಿಣ್ಯತೆ ಅವರಿಗೆ ಸಿದ್ಧಿಯಾಗಿದೆ.

ಗಾದೆ, ಒಗಟು, ಕಥೆ, ನುಡಿಗಟ್ಟು, ಒಡಪು ಇತ್ಯಾದಿ ಕನ್ನಡದ ಎಲ್ಲಾ ಪ್ರಕಾರಗಳನ್ನು ಅವರ ಬಾಯಿಯಿಂದಲೇ ಕೇಳಬೇಕು. ಕನ್ನಡ ನಾಡು ನುಡಿ, ಸಾಹಿತ್ಯದ ಬಗ್ಗೆ ಕೇವಲ ಡಾಂಭೀಕವಾಗಿ ಬಡಬಡಾಯಿಸುವ ಕನ್ನಡದ ವಿದ್ವನ್ಮಣಿಗಳನ್ನು ಹಿಡಿದು ಕರೆ ತಂದು ಒಮ್ಮೆ ಶ್ರೀಯುತರೊಂದಿಗೆ ಭೇಟಿ ಮಾಡಿಸಿ ಕೆಲವು ನಿಮಿಷ ಕಾಲವಾದರೂ ಕನ್ನಡದಲ್ಲಿ ಮಾತನಾಡಿಸಬೇಕೆನಿಸುತ್ತದೆ.

ಮನೆಯಲ್ಲಿ ಸದ್ಗøಹಸ್ಥರಾಗಿ, ಹೊಲ-ಗದ್ದೆಗಳಲ್ಲಿ ಅಪ್ಪಟ ಕೃಷಿಕರಾಗಿ, ಪಾಠದಲ್ಲಿ ಅಚ್ಛ ಕನ್ನಡದ ಮೇಷ್ಟ್ರಾಗಿ, ಹಿರಿ ಕಿರಿಯರೆನ್ನುವ ಭೇದವಿಲ್ಲದೆ ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆವ ಸರಳ ಜೀವಿಯಾಗಿ ಅವರ ಬದುಕಿನ ವಿವಿಧ ಮಗ್ಗಲುಗಳೆಲ್ಲವೂ ಮಾದರಿ ವ್ಯಕ್ತಿತ್ವ ಕಟ್ಟಿಕೊಡುತ್ತವೆ.

ದೊಡ್ಡಬಾತಿ ಮತ್ತು ಹರಿಹರದಲ್ಲಿ ಪ್ರಥಮಿಕ ಶಿಕ್ಷಣ, ಕೊಪ್ಪದಲ್ಲಿ ಮಾಧ್ಯಮಿಕ, ಚಿಕ್ಕಮಗಳೂರಿನಲ್ಲಿ ಫ್ರೌಢ ಮತ್ತು ಪದವಿ ಪೂರ್ವ ಹಾಗೂ ದಾವಣಗೆರೆ ಡಿ.ಆರ್.ಎಂ.ಕಾಲೇಜ್‍ನಲ್ಲಿ ಪದವಿ, ಮೈಸೂರು ಮತ್ತು ಧಾರವಾಡದಲ್ಲಿ ಸ್ನಾತಕೊತ್ತರ ಪದವಿ ಪಡೆದ ಶ್ರೀಯುತರು ಸದಾ ಅಧ್ಯಯನಶೀಲರು. ಇವರ ಪಾಠ ಕೇಳುವ ಸೌಭಾಗ್ಯ ಪಡೆದ ದಾವಣಗೆರೆ ಮಾ.ಸ.ಬ.ಸಂಜೆ ಕಾಲೇಜು, ಎ.ವಿ.ಕೆ. ಮಹಿಳಾ ಕಾಲೇಜು, ಮಾ.ಸ.ಬ.ಕಾಲೇಜು, ಎ.ಆರ್.ಜಿ.ಕಾಲೇಜಿನ ವಿದ್ಯಾರ್ಥಿಗಳು ಧನ್ಯರು. ತಮ್ಮ ಸುದೀರ್ಘ ಉಪನ್ಯಾಸಕ ವೃತ್ತಿಯಿಂದ ವಿದ್ಯಾರ್ಥಿಗಳಿಗೆ ಕನ್ನಡದ ನೈಜ ಸೊಬಗು ಮತ್ತು ಸೊಗಡನ್ನು ಉಣಬಡಿಸಿದ ಶ್ರೀಯುತರ ಶಿಕ್ಷಕ ವೃತ್ತಿಯ ಪ್ರೇಮ ನಿವೃತ್ತಿಯ ನಂತರವೂ ನಿಂತಿಲ್ಲ. ಪ್ರಸ್ತುತ ದಾವಣಗೆರೆ ದವನ್ ಕಾಲೇಜು ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಡಾ. ಚಿದಾನಂದ ಮೂರ್ತಿಯವರ ನೇತೃತ್ವದಲ್ಲಿ ಹಂಪಿಯ ಉತ್ಖನನಕಾರ್ಯ, ವ್ಯಾಸರಾಯ ಬಲ್ಲಾಳರ ‘ಬಂಡಾಯ’ ಕಾದಂಬರಿಯ ‘ಒಂದು ನೋಟ’ ಶೀರ್ಷಿಕೆಯಡಿ ಲೇಖನ ಮಂಡನೆ, ಬೆಂಗಳೂರು ಅಖಿಲ ಕರ್ನಾಟಕ ದೇವಾಂಗ ಪರಿಷತ್ತಿನ ದೇವಲ ದಾಸಿಮಯ್ಯ, ಕುವೆಂಪು ವಿಶ್ವವಿದ್ಯಾನಿಲಯದ 3ನೇ ಚತುರ್ಮಾಸದ ವಾಣಿಜ್ಯ ಕನ್ನಡ ಕೃತಿಯ ಸಂಪಾದನೆ ಇವರ ವಿದ್ವತ್ತಿಗೆ ಸಾಕ್ಷಿಯಾಗಿ ನಿಂತಿವೆ.

09.05.20011ರಲ್ಲಿ ಮಲೇಶಿಯಾದ ರಾಜಧಾನಿ ಕೌಲಾಲಂಪುರದ “ತೆಂಗ ವಿಶ್ವವಿದ್ಯಾನಿಲಯ” ಮತ್ತು ಇತರೆ ಪ್ರದೇಶಗಳ ಭೇಟಿ ನೀಡಿ ಕನ್ನಡದ ಕಂಪು ಹರಡಿ ಬಂದಿದ್ದಾರೆ. 26.08.2011ರಲ್ಲಿ ಉತ್ತರ ಅಮೆರಿಕದ ನ್ಯೂ ಹೆವನ್ ನಲ್ಲಿರುವ ‘ಯಲೆವಿಶ್ವವಿದ್ಯಾನಿಲಯ’ದಲ್ಲಿ ಒಂದು ಉಪನ್ಯಾಸ ನೀಡುವ ಮೂಲಕ ತಮ್ಮ ಪಾಂಡಿತ್ಯ ಮೆರೆದಿದ್ದಾರೆ.

ದೊಡ್ಡಬಾತಿಯಲ್ಲಿ 25.12.2013ರಂದು ನಡೆದ 5ನೇ ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಾಲ್ನಡಿಗೆಯಲ್ಲಿ ಕನ್ನಡಾಂಬೆಯ ತೇರು ಎಳೆದು, ತಮ್ಮ ವಿದ್ವತ್‍ಪೂರ್ಣ ಅಧ್ಯಕ್ಷೀಯ ಭಾಷಣದಲ್ಲಿ ಕನ್ನಡ ನಾಡು ನುಡಿ ಭಾಷೆ ಹಾಗೂ ಗ್ರಾಮೀಣ ಸೊಗಡನ್ನು ಮೆರೆದದ್ದು ಈಗ ಇತಿಹಾಸ.

ಮಾತಿಗಿಳಿದಾಗ

ಓದುಗರಿಗೆ ಅವರ  ವ್ಯಕ್ತಿತ್ವ ಪರಿಚಯಿಸುವ ಜೊತೆ ಅವರ ಮಾತುಗಳನ್ನು ಸಹ ಕೇಳಿಸಬೇಕೆಂಬ ಸಲುವಾಗಿ ಅವರನ್ನು ಭೇಟಿಯಾಗಿ ಸಂದರ್ಶಿಸಿದಾಗ ಅವರಿಂದ  ಹೊರಹೊಮ್ಮಿದ ಚಿಂತನಾತ್ಮಕ ನುಡಿ ಮುತ್ತುಗಳಿವು…………

ಕನ್ನಡ ಸಾಹಿತ್ಯದ ಆಸಕ್ತಿ 

ಮೂಲತಃ ನಮ್ಮದು ಕೃಷಿಕ ಮನೆತನ. ಕೂಡು ಕುಟುಂಬ. ನಮ್ಮ ಅಜ್ಜ ಸ್ವಾತಂತ್ರ್ಯ ಹೋರಾಟಗಾರರು. ಹಾಗಾಗ್ಗೆ ಕಥೆ ಹೇಳುತ್ತಿದ್ದರು. ಈಸೋಪನ ಕಥೆ, ಪಂಚತಂತ್ರ ಸೇರಿದಂತೆ ಇತರೆ ನೀತಿ ಕಥೆಗಳನ್ನು ಸ್ವಾರಸ್ಯಕರವಾಗಿ, ರೋಚಕವಾಗಿ ಅವರು ಹೇಳುತ್ತಿದ್ದ ರೀತಿ, ಕನ್ನಡ ವರ್ಣಗಳನ್ನು ಶುದ್ಧವಾಗಿ ಉಚ್ಛರಿಸುತ್ತಾ, ಕನ್ನಡದಲಿ ್ಲಅದ್ಭುತವಾಗಿ ಮಾತನಾಡುತ್ತಿದ್ದ ನಮ್ಮ ಕನ್ನಡ ಮೇಷ್ಟ್ರು ಎ.ಕೆ.ಹಾಲಪ್ಪನವರು ಹಾಗೂ ರಾಷ್ಟ್ರಕವಿ ಕುವೆಂಪು ಅವರಿಂದ ಕೇಳಿದ ಪಾಠ ಕನ್ನಡದ ಸೌಂದರ್ಯದೆಡೆ ನನ್ನನ್ನು ಆಕರ್ಷಿಸುವಂತೆ ಮಾಡಿದವು.

ಕೃಷಿಯ ಮೌಢ್ಯ ತೊಲಗಬೇಕು 

ಆಧುನಿಕತೆಯ ಭರಾಟೆಗೆ ಬಿದ್ದಿರುವ ನಮ್ಮ ಸಮಾಜದಲ್ಲಿ ಕೃಷಿಯ ಬಗ್ಗೆ ಹಲವಾರು ಮೌಢ್ಯಗಳಿವೆ. ಹೊಟ್ಟೆಗೆ ಹಿಟ್ಟು ಕೊಡುವ ಕೃಷಿಯನ್ನು ನೋಡುವ ದೃಷ್ಟಿಕೋನ ಬದಲಾಗುತ್ತಿರುವುದರಿಂದಾಗಿ ಮಾನವ ಪ್ರಕೃತಿಯಿಂದಲೂ ದೂರವಾಗುತ್ತಿದ್ದಾನೆ. ಸಹಜವಾಗಿ ಪ್ರಕೃತಿಯಿಂದ ಸಿಗಬಹುದಾದ ಸುಖ ಶಾಂತಿಗಳಿಂದಲೂ ವಂಚಿತನಾಗುತ್ತಿದ್ದಾನೆ. ವಿದ್ಯಾವಂತರು ಕೃಷಿಗಿಳಿಯುವುದು ತಮ್ಮ ಸ್ಥಾನಮಾನಕ್ಕೆ ಧಕ್ಕೆ ಎಂಬ ಭಾವ ಬೇರೂರಿರುವುದರಿಂದಾಗಿ ನಮ್ಮ ದೇಶದ ಆರ್ಥಿಕ ಸಂಪತ್ತಿನ ಮೇಲೂ ಏರುಪೇರು ಉಂಟಾಗುತ್ತಿದೆ.

ಬುದ್ಧಿವಂತರು ಕೃಷಿಗಿಳಿಯಬೇಕು 

ಬುದ್ಧಿವಂತರು ಎಲ್ಲ ಕೀಳರಿಮೆಯನ್ನು ಕಿತ್ತೊಗೆದು ಕೃಷಿ ಕ್ಷೇತ್ರದಲ್ಲಿ ತೊಡಗಿಕೊಂಡು, ತಮ್ಮ ಬುದ್ಧಿ, ಜ್ಞಾನವನ್ನು ಕೃಷಿ ಅಭಿವೃದ್ಧಿಗೆ ಬಳಕೆ ಮಾಡಿದಲ್ಲಿ ವೈಯಕ್ತಿಕ ಮತ್ತು ದೇಶದ ಆರ್ಥಿಕ ಸ್ಥಿತಿ ಎರಡರಲ್ಲೂ ಉನ್ನತಿ – ಪ್ರಗತಿ ಕಾಣಬಹುದು.

ಅಮೆರಿಕಾದಲ್ಲಿ ಬುದ್ಧಿವಂತರೆಲ್ಲಾ ಕೃಷಿಗೆ ಮೊದಲ ಆದ್ಯತೆ ನೀಡುತ್ತಾರೆ. ಹಾಗಾಗಿಯೇ ಆ ದೇಶ ಶ್ರೀಮಂತವಾಗುತ್ತಲೇ ಹೋಗುತ್ತಿದೆ. ಆದರೆ ನಮ್ಮ ದೇಶದಲ್ಲಿ ತದ್ವಿರುದ್ಧದ ವಾತಾವರಣ ಇದೆ. ಹಾಗಾಗಿ ನಾವಿನ್ನೂ ಅಭಿವೃದ್ಧಿ ಪಥದಲ್ಲಿಯೇ ಸಾಗುತ್ತಿದ್ದೇವೆ.

ಹಳ್ಳಿಯ ಮಣ್ಣಿಗೆ ಜೀವ ಸತ್ವವಿದೆ 

ನಗರಗಳು ಕಟ್ಟಲ್ಪಟ್ಟಿರುವಂತವು. ಆದರೆ ಹಳ್ಳಿಗಳು ಬೆಳೆದು ಬಂದತಹವು. ಹಳ್ಳಿಯ ಮಣ್ಣಿನ ವಾಸನೆ, ಪರಿಸರ, ವಾತಾವರಣ ಎಲ್ಲದಕ್ಕೂ ವಿಶೇಷ ಸತ್ವವಿದೆ, ಅದಮ್ಯ ಚೈತನ್ಯವಿದೆ. ಹಳ್ಳಿಗರ ಬದುಕಿನ “ಕೂಡಿಉಣ್ಣುವ” ಸಂಸ್ಕøತಿಯ ಹಿಂದೆ ಒಗ್ಗಟ್ಟಿನ ಬಲವಿದೆ, ಹೊಂದಾಣಿಕೆ ಬಾಂಧವ್ಯಗಳ ಬೆಸುಗೆ ಇದೆ. ಸಂಬಂಧಗಳ ಗಟ್ಟಿತನವನ್ನು ನಾವು ಹಳ್ಳಿಗಳಲ್ಲಿ ಮಾತ್ರ ಕಾಣಬಹುದು. ನಿಜವಾದ ಮಾನವೀಯ ಮೌಲ್ಯ ಭಾಷಣಗಳ ಸರಕಿನಲ್ಲಿ ಇಲ್ಲ, ಹಳ್ಳಿಗರ ಬದುಕಿನಲ್ಲಿ ಹಾಸು ಹೊಕ್ಕಾಗಿದೆ. ಸರಳತೆ ಇದ್ದಷ್ಟು ಸಾತ್ವಿಕತೆ ಹೆಚ್ಚು. ಸರಳ ಜೀವನ ಉದಾತ್ತ ಚಿಂತನೆಗೆ ನಮ್ಮ ಮನಸ್ಸು ತೆರೆದಾಗ ಬದುಕಿನ ಸಾರ್ಥಕತೆ ಆರಂಭವಾಗುತ್ತದೆ.

ಬೆಳಗ್ಗೆ ಎದ್ದು ಅಂಗಳ ಕಸ ಹೊಡೆದು ಸಗಣಿ ಎತ್ತಿ ಹಾಕಿ, ದನ-ಕರು, ಕುರಿ-ಮರಿಗಳ ಮೈದಡವುವ ಹಳ್ಳಿಗರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ. ಗೋವುಗಳ ಮೂತ್ರ, ಆ ಸಗಣಿಯ ಗಂಜಲಲ್ಲಿ, ಹೊಲ ಗದ್ದೆಗಳ ಆ ಬಯಲಲ್ಲಿ ಸಿಗುವ ಸಾತ್ವಿಕತೆ, ಶಕ್ತಿ, ಆನಂದ ಮತ್ತ್ಯಾವುದರಿಂದಲೂ ಸಿಗಲು ಸಾಧ್ಯವಿಲ್ಲ. ಅಲ್ಲಿನ ಅಜ್ಜ, ಅಜ್ಜಿ, ದೊಡ್ಡಪ್ಪ, ದೊಡ್ಡಮ್ಮ, ಚಿಕ್ಕಪ್ಪ, ಚಿಕ್ಕಮ್ಮ, ಅಕ್ಕ, ಅಣ್ಣ, ತಂಗಿಯರೆಂಬ ಆ ಗಟ್ಟಿ ಸಂಬಂಧಗಳ ಸೆಲೆಯು ನೀಡುವ ಸಾಂತ್ವನ, ಬಿದ್ದಾಗ ನಮ್ಮನ್ನೆತ್ತಿ ಹಿಡಿವ ಆ ಕೈಗಳ ಕೋಮಲತೆ, ಹೃದಯದ ಆಪ್ತತೆ ಆಧುನಿಕ ಯಂತ್ರಗಳಿಂದ ಸಿಗಲು ಸಾಧ್ಯವೇ ? ವಲಸೆ ಹೋಗಲು ಹವಣಿಸುವ ನಮ್ಮ ವಿದ್ಯಾವಂತರು ಮತ್ತು ಯುವ ಪೀಳಿಗೆಗೆ ಈ ಮಣ್ಣಿನ ಗುಣದ ಪರಿಚಯ ಮಾಡಿಕೊಡಬೇಕಿದೆ.

ಆಳಾಗಿ ದುಡಿದು ಅರಸನಾಗಿ ಉಣ್ಣಬೇಕು 

ಹಳ್ಳಿಗರ ಮೂಲ ಕಸುಬಾದ ಕೃಷಿ ಇಂದು ಕೆಲವೆಡೆ ಹಳ್ಳಿಗರಿಂದಲೇ ತಾತ್ಸರಕ್ಕೆ ಒಳಗಾಗುತ್ತಿರುವುದು ನೋವಿನ ಸಂಗತಿ. ಹಳ್ಳಿಯ ಆ ಸತ್ವಯುತ ಸ್ವಾವಲಂಬಿ ಬದುಕಿನಿಂದ ವಿಮುಖನಾಗುವುದು ಖಂಡಿತ ಖೇದಕರ. ಹಾಳಾಗಿ ದುಡಿದು ಅರಸನಾಗಿ ಉಣ್ಣು ಎಂಬ ನಮ್ಮ ಜನಪದೀಯರ ಅನುಭವ ವಾಣಿಯ ಹಿಂದೆ ವಿಜ್ಞಾನದ ಜೊತೆ ಶ್ರಮದ ಸಂದೇಶ ಮತ್ತು ಕಾಯಕತತ್ವವೂ ಅಡಗಿದೆ. ಅತ್ಯಂತ ಶ್ರೇಷ್ಠ ವ್ಯಕ್ತಿಗಳು ಉದಯಿಸಿದ್ದು ಹಳ್ಳಿಯ ಸತ್ವಭರಿತ ಮಣ್ಣಿನಲ್ಲೇ.

ನಮ್ಮ ಯುವ ಪೀಳಿಗೆ ಗ್ರಾಮೀಣ ಜನತೆಯ ಆ ಶ್ರಮಿಕ ಬದುಕಿನ ತುಡಿತವನ್ನು, ಅದರ ಹಿಂದಿನ ಸಾರವನ್ನು ಖುದ್ದಾಗಿ ಕಂಡು ಅರಿಯುವ ಮನಸ್ಸು ಮಾಡಬೇಕಿದೆ. ಚಿಕ್ಕ ಮಾತಿಗೇ ದೊಡ್ಡ ಮುನಿಸಿಗೊಳಗಾಗಿ ಡೈವರ್ಸ್ ಹಂತ ತಲುಪುವ ಚಿಕ್ಕ-ಚಿಕ್ಕ ಕುಟುಂಬಗಳು ಗ್ರಾಮೀಣ ಜನತೆಯ ದೊಡ್ಡ-ದೊಡ್ಡ ಕುಟುಂಬಗಳಲ್ಲಿನ ಹೊಂದಾಣಿಕೆಯ ಬದುಕಿನ ಒಳ ಹೊರವುಗಳನ್ನು ತಿಳಿಯಬೇಕಿದೆ.

ಹಾರ್ಡ್ ಆಗುತ್ತಿರುವ ಸಾಫ್ಟ್‍ವೇರ್ ಮನಸ್ಸುಗಳು 

ಒಂದೆಡೆ ಕಂಪ್ಯೂಟರ್, ಹಾರ್ಡ್‍ವೇರ್, ಸಾಫ್ಟ್‍ವೇರ್‍ಗಳ ಅತಿಜಾಣತನದ ನಾಗಲೋಟವು ಮನಸ್ಸುಗಳನ್ನು ಹಾರ್ಡ್ ಮಾಡಿ ಜೀವನವನ್ನು ಕಂದಕಕ್ಕೆ ನೂಕುತ್ತಿದೆ. ಹೀಗಾದರೆ ಕಲಿತ ವಿದ್ಯೆಯ ಫಲಿತವಾದರೂ ಏನು ? ವಿದ್ಯೆ, ಬುದ್ಧಿ, ಕಲಿಕೆಗಳು ನಮ್ಮ ಬದುಕನ್ನು ಕಟ್ಟಿಕೊಡದಿದ್ದರೆ ಅಂತಹ ವಿದ್ಯೆಗೆ  ಸಾರ್ಥಕತೆ ದೊರೆಯುವುದೇ ? ವಿಪರೀತ ಬುದ್ಧಿ ವಿನಾಶಕ್ಕೆ ದಾರಿ ಎಂಬಂತಾಗುತ್ತದೆ ಅಷ್ಟೆ.

ವಾಸ್ತವತೆಯನ್ನು ಮರೆತರೆ ಬದುಕು ಬಲಹೀನವಾಗುತ್ತದೆ. ಮಾನವೀಯ ಸಂಬಂಧಗಳು ದಡ ಸೇರದ ದೋಣಿಗಳಾಗುತ್ತವೆ. ಆಧುನಿಕತೆಯ ಜ್ಞಾನ, ತೀವ್ರ ಬೆಳವಣಿಗೆಗಳು, ಹೊಸ ಹೊಸ ಆವಿಷ್ಕಾರಗಳು ನಮ್ಮ ಹಳೆಯ ಪರಂಪರೆಯನ್ನು ಮರೆಸಿ ನಮ್ಮನ್ನು ಜೀವಂತ ಶವವನ್ನಾಗಿಸಬಾರದು. ಆ ವಿಶೇಷ ಕೌಶಲ್ಯಗಳ ಬಳಕೆ ನಮ್ಮ ಬದುಕಿನ ಮೇಲ್ಪಂಕ್ತಿಗೆ ಸೇತುವೆಗಳಾಗಬೇಕು.

ಕನ್ನಡ ಎಂದಿಗೂ ನಾಶವಾಗದು 

ಕನ್ನಡ ನಶಿಸುತ್ತಿದೆ ಎಂಬುದು ಶುದ್ಧ ಸುಳ್ಳು. ಎಲ್ಲಿಯವರೆಗೂ ಶುದ್ಧ ಕನ್ನಡ ಉಚ್ಛರಿಸುವ ಗ್ರಾಮೀಣ ಭಾಗದ ಜನತೆ ಇರುತ್ತಾರೋ ಅಲ್ಲಿವರೆಗೂ ಕನ್ನಡದ ಅವನತಿ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಭಾಷೆಯ ಶುದ್ಧತೆ, ಸರಳತೆ ಮತ್ತು ನೈಜಸೌಂದರ್ಯ ಕಾಣಬರುವುದು ಹಳ್ಳಗಳಲ್ಲೇ. ಜಾನಪದೀಯರ ಬದುಕಿನ ಸೊಗಡು ಜೀವಂತ ಇರುವವರೆಗೂ ಕನ್ನಡ ನಶಿಸಲು ಸಾಧ್ಯವಿಲ್ಲ. ಕನ್ನಡಕ್ಕೆ ಅಂತಹ ಗಟ್ಟಿತನ, ಪುರಾತನತೆ ಮತ್ತು ಸನಾತನತೆ ಇದೆ.

ಕನ್ನಡ ಮಣ್ಣಿನ ವೈಭವವನ್ನು ಸಾರುವ ಕೆಲಸವಾಗಬೇಕಿದೆ. ಅದರ ಅಂತರ್ಸತ್ವವನ್ನು ಅರಿಯದಿದ್ದರೆ ಕನ್ನಡ ಉಳಿಸಬೇಕೆನ್ನುವ ಡಾಂಭಿಕ ಹೋರಾಟಗಳ ಅಗತ್ಯ ಬೀಳುತ್ತದೆ. ಯಾರೂ ಕನ್ನಡವನ್ನು ಉಳಿಸಿ ಬೆಳಸಬೇಕಿಲ್ಲ. ಅದು ಈಗಾಗಲೇ ಬೆಳೆದು ಹೆಮ್ಮರವಾಗಿದೆ. ಅದರ ನೆರಳಲ್ಲಿ ನಾವು ಬದುಕುವುದನ್ನು ಕಲಿಯಬೇಕಿದೆ ಅಷ್ಟೆ. ಹೇಳುವವರು ಸರಿಯಾಗಿ ಹೇಳಬೇಕಾದನ್ನು ಹೇಳಿದರೆ ಕೇಳುವವರು ಕೇಳುವುದನ್ನು ಸರಿಯಾಗಿ ಕೇಳಿಯೇ ಕೇಳುತ್ತಾರೆ.

ನಮ್ಮ ಜನಪದೀಯರ ಬದುಕಿನ ಮೌಲ್ಯಗಳು, ದೇವರನ್ನೂ ಕೂಡ ಜೊತೆಗೆ ಕರೆದುಕೊಂಡು ಊಟ ಮಾಡುವ ಅವರ ಸರಳತನ ಮತ್ತು ಮುಗ್ಧತೆ,  ವಚನ ಸಾಹಿತ್ಯದ ವೈಭವ ಇಂತಹ ಹತ್ತಾರು ದೃಷ್ಟಿಕೋನಗಳಲ್ಲಿ ಕನ್ನಡದ ಹಿರಿಮೆಯನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಸಾಗಬೇಕಿದೆ.

ಯುವಕರೇ ಸಾತ್ವಿಕರಾಗಿ 

ನಾನು ನಮ್ಮ ಯುವ ಪೀಳಿಗೆಗೆ ಮಾಡುವ ಮನವಿ ಇಷ್ಟೆ _ ದಯಮಾಡಿ ಯುವಕರೇ, ಸಾತ್ವಿಕರಾಗಿ, ಸಾತ್ವಿಕ ಚಿಂತನೆ ಮಾಡಿ, ಸಾತ್ವಿಕವಾದ ಊಟ ಮಾಡಿ, ಸಾತ್ವಿಕವಾದ ನಿದ್ದೆ ಮಾಡಿ. ನಿಮ್ಮಿಂದಲೇ ದೇಶ, ನೀವೇ ದೇಶ. ದೇಶ ಉಳಿದರೆ ನಾವು ಉಳಿದೇವು. ಈ ಮಣ್ಣಿನ ಸಾತ್ವಿಕತೆ ಅರಿಯುವ ಮನಸ್ಸು ಮಾಡಿ. ಮನಸ್ಸಿನ ಒಳಗೆ ಕುಣಿಯುವ ರಿಂಗಣವನ್ನು ಹದಗೊಳಿಸಿ ಮುದಗೊಳಿಸಿ ಭವ್ಯ ಭವಿಷ್ಯದ ನಿರ್ಮಾತೃಗಳಾಗಿ ಭವ್ಯ ಭಾರತದ ಶಿಲ್ಪಿಗಳಾಗಿರಿ. ಹಸಿ ಹಸಿಯಾದ ಹೇಸಿಗೆಯ ಆಸೆಗಳ ಹಿಂದೆ ಬೆನ್ನತ್ತಿದರೆ ಬದುಕು ಬರಡಾಗುತ್ತದೆ ಎಂಬ ಅರಿವೊಂದು ಮನದಲ್ಲಿರಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಗಂಗಾಧರ ಬಿ.ಎಲ್ ನಿಟ್ಟೂರ್ ಅವರು, ಮೂಲತಃ ದಾವಣಗೆರೆ ಜಿಲ್ಲೆಯ,ಹರಿಹರ ತಾಲ್ಲೂಕಿನ, ನಿಟ್ಟೂರು ಗ್ರಾಮದವರು. ಹಲವು ಶಾಲಾ-ಕಾಲೇಜುಗಳಲ್ಲಿ ಸುಮಾರು 20 ವರ್ಷದಿಂದ ಶಿಕ್ಷಕ ವೃತ್ತಿ ನಿರ್ವಹಿಸುತ್ತಿದ್ದಾರೆ. ದಾವಣಗೆರೆ ಕೇಬಲ್ ಫಸ್ಟ್ ನೆಟ್ ನ 'ಕಾವ್ಯಧಾರೆ' ಪ್ರೋಗ್ರಾಂ ಆರ್ಗನೈಸರ್ ಮತ್ತು ನಿರೂಪಕರಾಗಿ 5 ವರ್ಷ ಹಾಗೂ ಜನಮಿಡಿತ, ಜನತಾ ಬಳಗ, ಕನ್ನಡ ಭಾರತಿ ಪತ್ರಿಕೆಗಳಲ್ಲಿ ಸಹ ಸಂಪಾದಕರಾಗಿ ಸೇವೆ ಮತ್ತು ವಿವಿಧ ವಿಷಯಗಳ ಉಪನ್ಯಾಸಕರಾಗಿ, ನಿರೂಪಕರಾಗಿ, ನಾಟಕ-ನೃತ್ಯ ನಿರ್ದೇಶಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. E- Mail : blgnittur123@gmail.com Mobile : 8867702396

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ2 days ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ4 days ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ4 days ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ4 days ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ1 week ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ2 weeks ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ2 weeks ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ3 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ3 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

Trending