Connect with us

ಲೈಫ್ ಸ್ಟೈಲ್

‘ಕೋವಿಡ್’ ನಾ ಕಂಡ ಹಾಗೆ : ಡಾ. ರಾಘವೇಂದ್ರ. ಎಫ್. ಎನ್

Published

on

  • ಡಾ. ರಾಘವೇಂದ್ರ. ಎಫ್. ಎನ್

ಬ್ಬ ಯೋದ ಯುದ್ಧದಲ್ಲಿ ಪಾಲ್ಗೊಂಡಾಗ ತನ್ನ ಪ್ರಾಣವನ್ನು ಒತ್ತೆಯಿಟ್ಟು ಹೊರಾಡುತ್ತಾನೆ. ಕೆಲವರು ಚತುರವಾಗಿ ತಮ್ಮ ಪ್ರಾಣ ರಕ್ಷಣೆ ಮಾಡಿಕೊಂಡು ಅಲ್ಪಸ್ವಲ್ಪ ಗಾಯ ಮಾಡಿಕೊಂಡರೂ ಸರಿ, ಆದರೂ ಹೋರಾಡಿ ಕೊನೆಗೆ ಗೆಲುವು ಸಾಧಿಸುತ್ತಾರೆ ಆದರೇ ಇನ್ನೂ ಕೆಲವರು ವೀರಾವೇಶದಿಂದ ಉದ್ವೇಗವಾಗಿ ಹೋರಾಡಿ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ ಯಾಕೆ ಇದನ್ನು ಹೇಳಿದೆ ಎಂದರೆ ಇದರಿಂದ ಸೋಂಕಿತರಾದ ಕೆಲವರ ಪರಿಸ್ಥಿತಿ ಹಾಗೆಯೆ.

ಕೋವಿಡ್ ಈಗ ಜಾಗತಿಕಮಾರಿ.ಜಗತ್ತನ್ನೇ ಭಯಭೀತಗೊಳಿಸಿ ಊನ ಮಾಡಿರುವ ಈ ವೈರಾಣು ಕೆಲವರನ್ನು ಸ್ವಲ್ಪ ದಿನ ಮಾತ್ರ ಕಾಡಿ ಸುಮ್ಮನೆ ಬಿಟ್ಟುಬಿಟ್ಟರೆ ಇನ್ನೂ ಕೆಲವರನ್ನು ಹಿಂಡಿ ಹಿಪ್ಪೆಕಾಯಿಮಾಡಿ ಪ್ರಾಣವನ್ನೇ ತೆಗೆದುಬಿಡುತ್ತದೆ.ಯಾಕೆ ಹೀಗೆ?

ಕೊರೊನ ಮತ್ತು ದೇಹದ ಯುದ್ಧ..!

ಇಲ್ಲಿ ಬರೀ ಕೊರೊನ ವೈರಾಣುವನ್ನು ಒಂದನ್ನೇ ದೂಷಿಸುವುದು ತರವಲ್ಲ. ನಾನು ಈಗಾಗಲೇ ಹೇಳಿದ ಹಾಗೆ ನಮ್ಮ ದೇಹದ ರೋಗನಿರೋಧಕ ಶಕ್ತಿ, ಸೈನಿಕರ ದಂಡು ಇದ್ದ ಹಾಗೆ ಈ ವೈರಾಣುವನ್ನು ಈ ಸೈನಿಕರು ಎಷ್ಟು ಚಾಣಾಕ್ಷವಾಗಿ ಹದ್ದು ಬಸ್ತಿಗೆ ತರುತ್ತಾರೆಯೋ ಅಥವಾ ಅತಿರೇಕವಾಗಿ ಹೋರಾಡಿ ತಮ್ಮ ದೇಹವನ್ನ ತಾವೇ ಹಾನಿ ಮಾಡಿಕೊಳ್ಳುತ್ತಾರೆಯೋ ಅದರ ಮೇಲೆ ನಿರ್ಭರ.

ಈ ವೈರಾಣು ಹೇಗೆ ದೇಹ ಪ್ರವೇಶಿಸುತ್ತದೆ, ಹೇಗೆ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ಯಾಕೆ ಕೆಲವರು ಬರೀ ಶೀತ, ಕೆಮ್ಮು, ಜ್ವರ, ಮೈ ಕೈ ನೋವಿನಿಂದ ಬಳಲಿ ಗುಣಮುಖರಾಗುತ್ತಾರೆ ಮತ್ತು ಇನ್ನೂ ಕೆಲವರು ಉಸಿರಾಟದ ತೊಂದರೆ, ಆಯಾಸ, ಅಂಗವೈಫಲ್ಯ, ಆಮ್ಲಜನಕ ಕೊರತೆಯಿಂದ ಬಳಲಿ ಆಸ್ಪತ್ರಗೆ ಸೇರಿ ಆಮ್ಲಜನಕ, ವೆಂಟಿಲೇಟರ್ ಇತ್ಯಾದಿ ಉತ್ತಮ ಮಟ್ಟದ ವೈದ್ಯಕೀಯ ಚಿಕಿತ್ಸೆ, ಔಷಧ ಪಡೆದರೂ ಕೂಡ ಅಸುನೀಗುತ್ತಾರೆ ಎಂಬುದು ಒಂದು ವೈದ್ಯಕೀಯ ವೈಚಿತ್ರವೇ ಸರಿ.

ಇದಕ್ಕೆ ಕಾರಣ ನಮ್ಮ ದೇಹದ ರೋಗನಿರೋಧಕ ಶಕ್ತಿ ಮತ್ತು ಅದು ಹೋರಾಡುವ ಪರಿ ಅತಿಯಾಗಿ ಹೋರಾಡಿದರೆ ದೇಹದಲ್ಲಿನ ರೋಗನಿರೋಧಕ ಕಣಗಳು ಅಗತ್ಯಕ್ಕಿಂತ ಹೆಚ್ಚಾಗಿ ಹೊರಬಂದು, ರಕ್ತ ಸಂಚಲನೆ ತಡೆಯೊಡ್ಡಿ,, ಪುಪ್ಪಸದಲ್ಲಿ ರಕ್ತಹೆಪ್ಪುಗಟ್ಟಿ, ನೀರು ತುಂಬಿ ತೀವ್ರ ಉಸಿರಾಟದ ತೊಂದರೆಯಾಗಿ ಕೊರತೆಯಾಗಿ(ಹೈಪೈಕ್ಸಿಯಾ), ವೆಂಟಿಲೇಟರ್ ಇನ್ನಿತರ ಸಲಕರಣೆ ಮೂಲಕ ಆಮ್ಲಜನಕ ಪೂರೈಕೆ ಮಾಡಿ ಮತ್ತು ಅತೀ ಉನ್ನತ ಔಷಧಗಳನ್ನು ಕೊಟ್ಟರೂ ಸಾವನ್ನಪ್ಪುತ್ತಾರೆ.

ನಮ್ಮ ರೋಗನಿರೋಧಕ ಹೋರಾಟ ಅತೀ ಮಂದವಾಗಿದ್ದರೂ ಹಾನಿ, ಅತೀ ವೇಗವಾಗಿದ್ದರೂ ಹಾನಿ. ಮಧ್ಯಮದಲ್ಲಿದ್ದರೆ ಉತ್ತಮ.ಹಿಡಿತದಲ್ಲಿದ್ದರೆ ದೇಹಕ್ಕೆ ಇನ್ನೂ ಉತ್ತಮ, ಹೀಗಿದ್ದರೆ ಶೀಘ್ರ ಗುಣಮುಖರಾಗಲು ಅಥವಾ ರೋಗ ಸೋಂಕಿದ ನಂತರ, ಗುಣಮುಖರಾದ ಮೇಲೆ ದೇಹದ ಮೇಲೆ ಆಗುವ ಪರಿಣಾಮಗಳನ್ನು ತಡೆಗಟ್ಟಬಹುದು.

ಆದರೇ ಇದು ನಮ್ಮ ಕೈಯಲ್ಲಿಲ್ಲ ಆದರೂ ವಿಜ್ಞಾನಿಗಳು ಇಂತಹ ಪರಿಸ್ಥಿತಿ ಎದುರಿಸಲು ಕೆಲವು ಔಷಧಗಳನ್ನು ಕಂಡುಹಿಡಿದಿದ್ದಾರೆ. ವೈರಾಣುವನ್ನು ದೇಹದ ಒಳಗೆ ಬರುವುದನ್ನು ತಡೆಗಟ್ಟುವ ಕೆಲವು ಔಷಧಗಳಾದ ಹೈಡ್ರಾಕ್ಸಿಕ್ಲೋರೊಕ್ಕಿನ್, ವೈರಾಣು ದೇಹದೊಳಗಡೆ ದ್ವಿಗುಣಗೊಳ್ಳುವುದನ್ನು ತಡೆಗಟ್ಟಲು ಐವರ್ಮೆಕ್ಟಿನ್, ಲೋಪಿನವೀರ್, ಫೆವಿಪಿರವೀರ್, ರೆಮಿಡೀಸ್ವೀರ್ ಇತ್ಯಾದಿಗಳು ಹಾಗು ದೇಹದ ರೋಗನಿರೋಧಕ ಶಕ್ತಿ ಅತೀ ಹೆಚ್ಚು ಪ್ರಮಾಣದಲ್ಲಿದ್ದು ದೇಹಕ್ಕೆ ಹಾನಿ ಮಾಡುವಂಥ ಸೈಟೋಕೈನ್ ಎಂಬ ನಮ್ಮ ರೋಗ ನಿರೋಧಕ ಕಣಗಳೇ ನಮಗೆ ವೈರಿಯಾಗಿ ಬಿಡುತ್ತವೆ ಮತ್ತು ಸೈಟೊಕೈನ್ರಭಸದ ಖಾಯಿಲೆ ಅಥವಾ ಸೈಟೊಕೈನ್ಸ್ಟಾಮ್ ಸಿಂಡ್ರೋಮ್ ಅನ್ನುವ ಪರಿಸ್ಥಿತಿ ನಿರ್ಮಾಣವಾಗಿ ಅತೀಶೀಘ್ರವಾಗಿ ಸಾವನ್ನಪ್ಪುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಇದು ಎರಡನೇ ವಾರದಲ್ಲಿ ಕೆಲವರಲ್ಲಿ ಆಗುವ ಸಂಭವ ಹೆಚ್ಚು. ಹೀಗೆ ಹೆಚ್ಚಾದ ಸಂದರ್ಭದಲ್ಲಿ, ಅದನ್ನು ತಡೆಗಟ್ಟುವ ಔಷಧಗಳಾದ ಸ್ಟಿರಾಯ್ಡ್ಸ್, ಟೋಕ್ಲಿಜುಮ್ಯಾಬ್, ಉಲಿನ ಸ್ಟಾಟಿನ್ಹೀಗೆ ಇನ್ನೂ ಇತ್ಯಾದಿ ಔಷಧಗಳನ್ನ ಬಳಸಬಹುದು. ಆದರೇ ಇದು ಸಂಪೂರ್ಣವಾಗಿ ವೈದ್ಯರ ಮಾರ್ಗದರ್ಶನದಲ್ಲಿ, ತೀವ್ರ ನಿಗಾ ಘಟಕದಲ್ಲಿ ಕೊಡಬೇಕು. ಇದರಲ್ಲಿ ಕೆಲವರು ತೀವ್ರತೆ ಇಂದ ಹೊರಬರುತ್ತಾರೆ ಇನ್ನೂ ಕೆಲವರು ಇದಕ್ಕೆ ಸ್ಪಂದಿಸದೆ ಅಸುನೀಗುತ್ತಾರೆ.

ಮೊದಲೇ ರೋಗಲಕ್ಷಣಗಳು ಕಂಡಾಗ ತಪಾಸಣೆ ಮಾಡಿಸಿಕೊಳ್ಳುವುದು ಕ್ಷೇಮ. ಬೆರಳತುದಿಗೆ “ಪಲ್ಸ್‍ಆಕ್ಸಿಮೀಟರ್” ಎಂಬ ದೇಹದೊಳಗಿನ ಆಮ್ಲಜನಕ ಸಾಂದ್ರತೆ ಅಳೆಯುವ ಚಿಕ್ಕ ಮಾಪನವನ್ನು ತೂರಿಸಿ ಪರೀಕ್ಷೆಮಾಡಿಕೊಳ್ಳುವುದು ಬಹಳಮುಖ್ಯ. ಎಷ್ಟೋ ಜನ ಮೇಲ್ನೋಟಕ್ಕೆ ಆರೋಗ್ಯವಾಗಿ ಕಂಡರೂ ಅವರ ಆಮ್ಲಜನಕ ಸಾಂದ್ರತೆ (ಎಸ್ಪಿ 02)ಕಡಿಮೆ ಇರುತ್ತದೆ ಅದು ಹೊರಗಡೆ ತೋರ್ಪಡದೆ ಇದ್ದಕ್ಕಿದ್ದ ಹಾಗೆ ತೀವ್ರ ಉಸಿರಾಟದ ತೊಂದರೆಗೆ ಒಳಗಾಗುವವರು ಬಹಳ. ಇದಕ್ಕೆ ಇಂಗ್ಲಿಷ್‍ನಲ್ಲಿ “ಹ್ಯಾಪಿಹೈಪೆಕ್ಸಿಯಾ” ಅಥವಾ “ಒಳ ಹುದುಗಿರುವ ಕ್ಷೀಣಗೊಂಡ ಆಮ್ಲಜನಕದ ಕೊರತೆ” ಇಂಥ ಸಂದರ್ಭದಲ್ಲಿ ಬೇಗನೆ ಆಮ್ಲಜನಕ ಪೂರೈಕೆ ಮಾಡಿದರೆ ಬಹಳಷ್ಟು ಜನ ಬದುಕುವರು.

ಸಾಮಾನ್ಯವಾಗಿ ಈ ಆಮ್ಲಜನಕ ಸಾಂದ್ರತೆ ದೇಹದಲ್ಲಿ ಶೇಕಡಾ 95 ಅಥವಾ ಮೇಲ್ಪಟ್ಟು ಇರಬೇಕು. 90 ರಿಂದ 95 ಇದ್ದರೆ ಮಧ್ಯಮ, 90 ಕ್ಕಿಂತಲೂ ಕಡಿಮೆ ಇದ್ದರೆ ತೀವ್ರ ಹಾಗು 85 ಕ್ಕಿಂತಲೂ ಕಡಿಮೆ ಇದ್ದರೆ ಅತೀ ತೀವ್ರ ಆಮ್ಲಜನಕ ಕೊರತೆ ಎನ್ನುವರು. ಇಂಥವರಿಗೆ, ಸಿಲಿಂಡರ್ ಮೂಲಕ, ವಿಧವಾದ ಮಾಸ್ಕ್ ಮೂಲಕ ಅಥವಾ ನಳಿಕೆಗಳ ಮೂಲಕ ತೀವ್ರ ಆಮ್ಲಜನಕ ಪೂರೈಕೆ (ಹೆಚ್.ಎಫ್.ಎನ್.ಸಿ) ಅಥವಾ ಕೊನೆಗೆ ಕೃತಕ ಉಸಿರಾಟವನ್ನು ವೆಂಟಿಲೇಟರ್ ಮೂಲಕ ಪೂರೈಸಬೇಕಾಗಬಹುದು. ಇವೆಲ್ಲದರ ನಿರ್ಧಾರವನ್ನು ತೀವ್ರ ನಿಗಾ ಘಟಕದ ತುರ್ತು ವೈದ್ಯತಂಡದ ವೈದ್ಯರು ನಿರ್ಧರಿಸುತ್ತಾರೆ.

ರಕ್ತಪರೀಕ್ಷೆಗಳಾದ, ರಕ್ತಕಣಗಳು, ಡಿಡೈಮರ್, ಫೆರಿಟೀನ್, ಎಲ್ಡಿಹೆಚ್, ಸಕ್ಕರೆ ಪ್ರಮಾಣ, ಉಪ್ಪಿನಂಶ, ಇಂಟೆರ್ಲುಕಿನ್ 6 ಹೀಗೆ ಅನೇಕ ರಕ್ತಪರೀಕ್ಷೆಗಳನ್ನ ವೈದ್ಯರು ಮಾಡಿಸಿ ಅವರ ಮಾರ್ಗದರ್ಶನದಂತೆ ಚಿಕಿತ್ಸೆಕೊಡುತ್ತಾರೆ. ಎದೆಯ ಭಾಗದ ಕ್ಷ ಕಿರಣ ಚಿತ್ರ ಹಾಗೂ ಎದೆಯ ಸಿಟಿ ಸ್ಕ್ಯಾನ್ ಅನ್ನು ವೈದ್ಯರು ಸಲಹೆ ನೀಡಿ, ಅದರ ಉಪಲಬ್ಧತೆ ಮೇರೆಗೆ ಮಾಡಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವರು. ಇವೆಲ್ಲವನ್ನೂ ನಾಲ್ಕರಿಂದ ಎಂಟನೇ ದಿನಗಳ ಮಧ್ಯದಲ್ಲಿ ಮಾಡಿಸಿ ನಿರ್ಧರಿಸುತ್ತಾರೆ.

ರಕ್ತದಲ್ಲಿ ಕಣಗಳ ಸಾಂದ್ರತೆ ಹೆಚ್ಚಾದರೆ ಉಸಿರಾಟದ ಏರುಪೇರು ಹೆಚ್ಚು. ವಯಸ್ಸಾದವರು, ಸಕ್ಕರೆಖಾಯಿಲೆ, ಹೃದಯ, ಕಿಡ್ನಿ, ಲಿವರ್, ಕ್ಯಾನ್ಸರ್, ರೋಗನಿರೋಧಕ ಶಕ್ತಿ ಕುಂಠಿತಗೊಂಡ ಖಾಯಿಲೆಗಳ ರೋಗಿಗಳು ಹೆಚ್ಚಾಗಿ ತೊಂದರೆ ಅನುಭವಿಸುತ್ತಾರೆ. ಮಕ್ಕಳಲ್ಲಿ, ಯುವಕರಲ್ಲಿ ಮತ್ತು ಗರ್ಭಿಣಿಯರಲ್ಲಿ ಇದರ ತೀವ್ರತೆ ಕಡಿಮೆ.

ಬೋರಲು ಮಲಗುವುದು..!

ಹೌದು, ಬೋರಲು ಮಲಗುವುದು ಅಥವಾ ಪ್ರೈನ್ಪೊಸಿಷನ್ಲ್ಸೀಪಿಂಗ್ ಅಂತ ಏನು ಹೇಳುತ್ತೇವೆಯೋ ಇದರಲ್ಲಿ ಬೋರಲಾಗಿ ಮಲಗಿ ನಂತರ ಎಡಪಕ್ಕ ತಿರುಗಿ, ಹಾಗೆ ಬಲಪಕ್ಕ ತಿರುಗಿ ಮತ್ತೇ ಬೋರಲು ಮಲಗುವ ಈ ಚಕ್ರವನ್ನು ಪ್ರತಿ ಅರ್ಧ ಗಂಟೆಯಿಂದ ಒಂದು ಘಂಟೆ ಮಾಡುತ್ತಾ ಹೋದರೆ ಪುಪ್ಪಸಕ್ಕೆ ಮತ್ತು ಅದರ ಕೆಳಭಾಗಕ್ಕೆ ಹೆಚ್ಚು ಆಮ್ಲಜನಕ ಪೂರೈಕೆ ಆಗುತ್ತದೆ. ಈ ಕೊರೊನದಿಂದ ಉಂಟಾಗುವ ಊತ ಅಥವಾ ನ್ಯುಮೋನಿಯಾ ಪುಪ್ಪಸದ ಕೆಳಭಾಗಕ್ಕೆ ಹೆಚ್ಚು ಅಂಟಿಕೊಳ್ಳುತ್ತ್ತದೆ, ಇಲ್ಲಿ ಆಮ್ಲಜನಕದ ಕೊರತೆಯನ್ನು ನೀಗಿಸಲು ಈ ಬೋರಲು ಮಲಗುವ ಅಭ್ಯಾಸ ಬಹಳ ಉಪಾಯಕಾರಿ.

ಹೀಗೆ ಸತತವಾಗಿ ಆಮ್ಲಜನಕ ತೆಗೆದುಕೊಂಡವರು ಅಥವಾ ವೆಂಟಿಲೇಟನಿರ್ಂದ ಹೊರ ಬಂದವರು ತಮ್ಮ ಪುಪ್ಪಸದ ಮೊದಲಿನ ಶಕ್ತಿ ಮತ್ತು ಅಯಸ್ಸನ್ನು ಕಳೆದುಕೊಳ್ಳುವ ಸಂಭವ ಹೆಚ್ಚು. ಅದನ್ನು ತಡೆಗಟ್ಟಲು ಉಸಿರಾಟದ ಪುನಸ್ರ್ಥಾಪನೆ, ಪ್ರಾಣಾಯಾಮ, ಪರಿಶುದ್ಧ ಗಾಳಿ ಸೇವನೆ, ಮಾನಸಿಕ ಸ್ಥೈರ್ಯ, ಧನಾತ್ಮಕ ಮನೋಭಾವ ಬೆಳೆಸಿಕೊಳ್ಳುವುದರಿಂದ ದೇಹವು ಮತ್ತೆ ಮೊದಲಿನಂತೆ ಸಾಮಾನ್ಯ ಸ್ಥಿತಿಗೆ ತರಲು ಪ್ರಯತ್ನ ಮಾಡುತ್ತದೆ. ಇದನ್ನು ಉಳಿಸಿಕೊಳ್ಳಲು ವೈದ್ಯರ ಸಲಹೆ ಮೇರೆಗೆ ಸ್ಟಿರೋಯ್ಡ್, ಹೊಸ ಔಷಧಗಳು, ಆಸ್ಪಿರಿನ್ಹೀಗೆ ಇತ್ಯಾದಿಗಳನ್ನು ಕೆಲವು ದಿನ ಅಥವಾ ತಿಂಗಳುಗಟ್ಟಲೆ ಮುಂದುವರಿಸ ಬೇಕಾಗಬಹುದು

ಆಂಟಿಬಯೋಟಿಕ್ಸ್ ಮೊದಲ ದಿನ ದಿಂದಲೇ ಕೊಟ್ಟರೆ ಅಷ್ಟೇನೂ ಲಾಭವಿಲ್ಲ ಆದರೇ ವಾರದ ಕೊನೆ ಅಥವಾ ಎರಡನೇ ವಾರದ ಹಂತದಲ್ಲಿ ಬ್ಯಾಕ್ಟೀರಿಯಾ ಎಂಬ ರೋಗಾಣುಗಳು ಈ ವೈರಸ್‍ನಿಂದ ಕ್ಷೀಣಗೊಂಡ ರೋಗನಿರೋಧಕ ಶಕ್ತಿಯ ಅವಕಾಶ ಉಪಯೋಗಿಸಿಕೊಂಡು ದೇಹದ ಮೇಲೆ ದಾಳಿ ಮಾಡುತ್ತವೆ, ಅದನ್ನು ತಡೆಗಟ್ಟಲು ಈ ಅಂಟಿಬಯೋಟಿಕ್ ಉಪಯೋಗಿಸಬಹುದು.

ವಿಟಮಿನ್ಸಿ, ಜಿಂಕ್, ಡಿ ಹಾಗು ಇತರೆ ಮಾತ್ರೆಗಳು, ಮನೆ ಮದ್ದುಗಳು, ಆರೋಗ್ಯಕರವಾದ ಹಣ್ಣು ಮತ್ತು ತರಕಾರಿಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆಯೇ ಹೊರತು ಕೊರೊನ ಬರದೇ ಇರುವ ಹಾಗೆ ತಡೆಗಟ್ಟುವುದಿಲ್ಲ. ಇವೆಲ್ಲವನ್ನು ವೈದ್ಯರ ಸಲಹೆ ಮೇರೆಗೆ ಬಳಸಿದರೆ ತಪ್ಪೇನಿಲ್ಲ.

ಜಗತ್ತಿನಾದ್ಯಂತ ಎಷ್ಟೊಂದು ಚರ್ಚೆಗಳು, ಸಂಶೋಧನೆಗಳು, ಔಷದ ಮತ್ತು ರೋಗನಿರೋಧಕ ಲಸಿಕೆ ಕಂಡುಹಿಡಿಯುವತ್ತ ಹಗಲುರಾತ್ರಿ ಬಿಡುವಿಲ್ಲದೆ ಕೆಲಸಗಳು ನಡೆಯುತ್ತಲಿವೆ, ಈ ಕೆಲಸಗಳ ಮಧ್ಯೆ, ಊಟ ಉಪಚಾರ ನಿದ್ದೆ ಮರೆತು ವೈದ್ಯರು ಹಗಲಿರುಳೆನ್ನದೆ ಸೇವೆ ಮಾಡುತ್ತಿದ್ದಾರೆ. ವೈದ್ಯರ ಈ ನಿಸ್ವಾರ್ಥ ಮನೋಭಾವವನ್ನು ಜೀವನಮಾನವಿಡಿ ನೆನೆದರೆ ಸಾಲದು.

ಕರೋನ ಒಂದು ಹೊಸಯುಗವನ್ನೇ ಹುಟ್ಟುಹಾಕಿದೆ, ಹಲವು ಪಾಠಗಳನ್ನು ಕಲಿಸುತ್ತಲಿದೆ ಇನ್ನೂ ಕಲಿಯಬೇಕಾದದ್ದು ಬಹಳಷ್ಟು ಇದೆ ಇಲ್ಲಿ ಯಾರೂ ಪಂಡಿತರಲ್ಲ ಎಲ್ಲರೂ ವಿದ್ಯಾರ್ಥಿಗಳೇ..!

ಇದನ್ನು ತಡೆಗಟ್ಟಲು ಮುಖಕ್ಕೆ ಮತ್ತು ಮೂಗಿಗೆ ಮುಖಗವಸು ಅಥವಾ ಮಾಸ್ಕ್, ಸ್ವಚ್ಛತೆ, ಭೌತಿಕ ಮತ್ತು ಸಾಮಾಜಿಕ ಅಂತರಕಾಯ್ದುಕೊಳ್ಳುವಿಕೆ ಒಂದೇ ರಾಜಮಾರ್ಗ.

ಇದರಿಂದ ಪೀಡಿತರಾದ ರೋಗಿಗಳನ್ನು ವೈದ್ಯರು, ವಿಜ್ಞಾನಿಗಳು ತಮ್ಮ ಶಕ್ತಿಮೀರಿ ವೈಜ್ಞಾನಿಕ ಚೌಕಟ್ಟಿನಲ್ಲಿ ಈ ಕರೋನವನ್ನು ತಡೆಗಟ್ಟಲು ಪ್ರಯತ್ನ ಮಾಡಬಹುದೇ ಹೊರತು ಇದನ್ನು ಸಂಪೂರ್ಣವಾಗಿ ಗುಣಮಾಡುವ ಶಕ್ತಿ ಯಾವ ವೈದ್ಯರ ಕೈಲಿಲ್ಲ.

ಸಮಯಕ್ಕೆ ಸರಿಯಾಗಿ ತಪಾಸಣೆ ಮತ್ತು ಚಿಕಿತ್ಸೆ, ನಮ್ಮ ದೇಹದ ರೋಗನಿರೋಧಕ ಶಕ್ತಿ ಮತ್ತು ವೈರಾಣುವಿನ ಜೊತೆ ಇದರ ಪ್ರತಿಸ್ಪಂದನೆ, ಧನಾತ್ಮಕ ಚಿಂತನೆ ಮತ್ತು ಗಟ್ಟಿಯಾದ ಮನೋಬಲ ನಮ್ಮನ್ನು ಇದರಿಂದ ಕಾಪಾಡಿ ಹೊರತರುವುದರಲ್ಲಿ ಎರಡು ಮಾತಿಲ್ಲ.

ಡಾ. ರಾಘವೇಂದ್ರ. ಎಫ್. ಎನ್
ಎಂಬಿಬಿಎಸ್. ಎಂಡಿ.
ಸಹಪ್ರಾಧ್ಯಾಪಕರು ಮತ್ತು ಕನ್ಸಲ್ಟೆಂಟ್ಫಿಜಿಷಿಯನ್ ವೈದ್ಯಕೀಯ ವಿಭಾಗ
ಕೋವಿಡ್ ನೊಡಲ್ ಆಫೀಸರ್
ವಿಮ್ಸ್, ಬಳ್ಳಾರಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

Published

on

3 ವರ್ಷದ ನಂತರ ಬಡ್ಡಿ ನಿಲ್ಲುತ್ತದೆ ಎಂಬುದು ಹಳೆಯ ನಿಯಮ; 58 ವರ್ಷದವರೆಗೆ ಬಡ್ಡಿ ಗ್ಯಾರಂಟಿ, ಆದರೆ ಈ ತೆರಿಗೆ ನಿಯಮ ಗೊತ್ತಿರಲಿ

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.

http://Visit : www.suddidina.com

3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?

ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.

ಉದಾಹರಣೆ:

ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.

ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!

ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.

ಖಾತೆದಾರರು ಏನು ಮಾಡಬೇಕು?

1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.

2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.

3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

Continue Reading

ದಿನದ ಸುದ್ದಿ

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

Published

on

ಸೆಪ್ಟೆಂಬರ್ ಅಂತ್ಯಕ್ಕೆ ಹೊಸ ಸೇವೆ ಜಾರಿ; ಮುಂದಿನ ವಾರವೇ `ನಮ್ಮ ಬಿಎಂಟಿಸಿ 2.0' ಆ್ಯಪ್ ಲೋಕಾರ್ಪಣೆ, 200 ಹೊಸ ಮಿನಿ ಡೀಸೆಲ್ ಬಸ್ ಖರೀದಿಗೆ ಸಿದ್ಧತೆ

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್‌ಗಳಾದ ಓಲಾ, ಉಬರ್, ರ‍್ಯಾಪಿಡೋ ನಂತಹ ಆ್ಯಪ್‌ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್‌ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

http://Visit : www.suddidina.com

ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.

ನಮ್ಮ ಬಿಎಂಟಿಸಿ 2.0′ ಆ್ಯಪ್‌ನಲ್ಲಿ ಏನಿದೆ ಹೊಸತು?

ಖಾಸಗಿ ಆ್ಯಪ್‌ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್‌ನಲ್ಲಿ ಬಿಎಂಟಿಸಿ ನೆಟ್‌ವರ್ಕ್‌ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್‌ಗಳು ಸೇರಿದಂತೆ ಒಟ್ಟು 6,938 ಬಸ್‌ಗಳಿವೆ. ಪ್ರತಿದಿನ ಸರಾಸರಿ 6,200 ಬಸ್‌ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.

ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ: 

ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

200 ಹೊಸ ಮಿನಿ ಬಸ್‌ಗಳ ಖರೀದಿ:

ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್‌ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್‌ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್‌ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್‌ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್‌ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.

ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:

ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ 200 ಮಿನಿ ಎಸಿ ಇ-ಬಸ್‌ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್‌ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

Continue Reading

ದಿನದ ಸುದ್ದಿ

EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ

Published

on

ಕರ್ನಾಟಕ – ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ

ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.

http://Visit : www.suddidina.com

ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.

ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.

ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.

ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.

ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

Continue Reading

Trending