Connect with us

ಸಿನಿ ಸುದ್ದಿ

HapPy BiRtHdAy | ‘ಹಾಸ್ಯ ಬ್ರಹ್ಮ ನರಸಿಂಹ ರಾಜು’ ಅವರ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

ಡಾ.ರಾಜ್ ಕುಮಾರ್ ಅವರ ಕಾಲ್ ಶೀಟ್ ಗಿಂತಲೂ ಮೊದಲು ನರಸಿಂಹರಾಜು ಅವರ ಕಾಲ್ ಶೀಟ್ ಬುಕ್ ಮಾಡಲು ಪ್ರಯತ್ನಿಸುತ್ತಿದ್ದ ಕಾಲವೊಂದಿತ್ತು. ಅವರೇ ನಮ್ಮ ತಿಳಿ ಹಾಸ್ಯದ ಬ್ರಹ್ಮ, ಕರ್ನಾಟಕದ ಚಾಪ್ಲಿನ್ ನರಸಿಂಹರಾಜು ಅವರಿಗೆ ಜನ್ಮದಿನದ ಶುಭಾಶಯಗಳು.

ನಮ್ಮ ನಾಡು ಕಂಡ ಶ್ರೇಷ್ಠರಲ್ಲಿ ಶ್ರೇಷ್ಠ ಕಲಾವಿದರಲ್ಲೊಬ್ಬರಾದ ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಜನ್ಮದಿನ ಜುಲೈ 24ರಂದು. ಅವರು ಜನಿಸಿದ ವರ್ಷ 1926. ನಾವು ಮೆಚ್ಚಿರುವ ಯಾವುದೇ ಶ್ರೇಷ್ಠ ನಟ ನಟಿಯರಿರಲಿ, ಅವರು ನಟಿಸಿರುವ ನೂರಿನ್ನೂರು ಚಿತ್ರಗಳು ಇರುತ್ತವೆಂದರೆ ಅವರ ಬೆರಳೆಣಿಕೆಯಷ್ಟು ಪಾತ್ರಗಳು ನಮ್ಮನ್ನು ಸೆಳೆದಿರುತ್ತವೆ. ಇಲ್ಲವೇ ನಾವು ಅವರ ಅಪಾರ ಅಭಿಮಾನಿಗಳಾಗಿರುತ್ತೇವೆ ಎಂದುಕೊಂಡರೂ ಆ ಸಂಖ್ಯೆ ಇನ್ನೊಂದಷ್ಟು ಎಂಬಂತಿರಬಹುದು ಅಷ್ಟೇ. ಆದರೆ ನರಸಿಂಹರಾಜು ಅವರ ಬಗ್ಗೆ ಆ ಮಾತು ಅನ್ವಯಿಸುವುದಿಲ್ಲ. ಅವರ ಪ್ರತೀ ಪಾತ್ರವೂ ಜನತೆಗೆ ಪ್ರಿಯವೇ.

ನರಸಿಂಹರಾಜು ಅವರ ಬಗ್ಗೆ ಅವರ ಪುತ್ರಿ ಸುಧಾನರಸಿಂಹರಾಜು ಅವರು ದೂರದರ್ಶನದಲ್ಲಿ ಕಾರ್ಯಕ್ರಮ ಮಾಡಿದಾಗ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಹೇಳಿದ್ದ ಮಾತು ನೆನಪಾಗುತ್ತಿದೆ, “ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ಚಲನಚಿತ್ರಗಳಿಗೆ ಮೊದಲು ನರಸಿಂಹರಾಜು ಅವರ ದಿನಗಳನ್ನು ಗುರುತುಪಡಿಸಿಕೊಂಡು ಉಳಿದ ನಮ್ಮಂತಹ ಕಲಾವಿದರನ್ನು ಸಂಪರ್ಕಿಸುತ್ತಿದ್ದರು“. ರಾಜ್ ಅವರು ಹೇಳಿದ ಮಾತು ನರಸಿಂಹರಾಜು ಅವರು ಗಳಿಸಿದ ಶ್ರೇಷ್ಠತೆಗೆ ಮತ್ತು ಅಂತಹ ಮಾತನ್ನು ಹೇಳುವ ರಾಜ್ ಅವರ ಸಜ್ಜನತೆಯ ಶ್ರೇಷ್ಠತೆಗೆ ಕನ್ನಡಿ ಹಿಡಿದಂತಿದೆ. ರಾಜ್ ಕುಮಾರ್ ಮತ್ತು ನರಸಿಂಹರಾಜು ಅವರ ಜೋಡಿ ಕನ್ನಡ ಚಿತ್ರರಂಗದಲ್ಲಿ ಸಂಭವಿಸಿದ ಅದ್ಭುತಗಳಲ್ಲೊಂದು. ಈ ಜೋಡಿಗೆ ಬಾಲಣ್ಣ ಅವರನ್ನು ಕೂಡಾ ಸೇರಿಸಬಹುದು.

ಅಂದಿನ ದಿನದಲ್ಲಿ ಬಾಲಕೃಷ್ಣ ಮತ್ತು ನರಸಿಂಹರಾಜು ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಪೂರಕವಾಗಿ ಅಭಿನಯಿಸುತ್ತಿದ್ದುದು ನೆನಪಾಗುತ್ತದೆ. ಬಾಲಣ್ಣ ಅವರದು ರೇಗುವ ಅಸಹನತೆಯ ಪಾತ್ರವೋ, ಕೆಲವೊಂದು ಭಾರೀ ಕೃತ್ರಿಮ ಪಾತ್ರವೋ ಆಗಿರಬಹುದಾದರೂ ನರಸಿಂಹರಾಜು ಅವರ ಪಾತ್ರ ಮಾತ್ರ ಸರಳ ಸಜ್ಜನಿಕೆಯ ನೆರಳಲ್ಲೇ ಮೂಡುವ ಪೆದ್ದನದೋ, ಪೆಚ್ಚನದೋ, ತುಂಟನದೋ, ಮೂರ್ಖನದೋ ಆದ, ಹಾಗೆ ನಾವಾಗಲು ಇಷ್ಟಪಡದಿದ್ದರೂ ಇಂಥಹ ಪಾತ್ರ ಯಾವಾಗಲೂ ನಮ್ಮ ಮುಂದೆ ಇರಬೇಕು ಎನಿಸುವಂತೆ ಆಪ್ತವಾಗಿರುತ್ತಿದ್ದ ಸುಂದರತೆಯ ಹೃದ್ಭಾವದ ಸೃಜನಸೃಷ್ಠಿಗಳು. ನರಸಿಂಹರಾಜು ಅವರ ಹಿಂದೆ ಹಾಗೂ ಅವರ ನಂತರ ಅನೇಕ ಕಲಾವಿದರು ಚಿತ್ರರಂಗದಲ್ಲಿ ಮೂಡಿದ್ದಾರೆ. ಹೀಗೆ ಮೂಡಿದ ಹಲವಾರು ಕಲಾವಿದರು ನಮಗೆ ಇಷ್ಟವೂ ಆಗಿದ್ದಾರೆ ನಿಜ. ಆದರೆ ನರಸಿಂಹರಾಜು ಅಂತಹ ಆಳವಾದ ಆಪ್ತತೆ ಮೂಡಿಸಿದ ನಟ ಮಾತ್ರ ಚಾರ್ಲಿ ಚಾಪ್ಲಿನ್ ಹೊರತಾಗಿ ಅವರೊಬ್ಬರೇ.

ಕನ್ನಡದಲ್ಲಿ ಹೊಸಬಗೆಯ ಪ್ರಯೋಗ, ವೈವಿಧ್ಯಪೂರ್ಣ ಕಥೆಗಳು, ಯಶಸ್ವೀ ಚಿತ್ರಗಳು ಹೊರಬಂದದ್ದು ಕಳೆದ ಶತಮಾನದ ಐದು, ಆರು ಮತ್ತು ಏಳನೆಯ ದಶಕಗಳಲ್ಲಿ. ಈ ಅವಧಿ ಕನ್ನಡ ಚಿತ್ರರಂಗದ ಸುವರ್ಣ ಯುಗ. ಈ ಯುಗದಲ್ಲಿ ರಾರಾಜಿಸಿದ ನರಸಿಂಹರಾಜು, 1954ರಲ್ಲಿ ಬಿಡುಗಡೆಯಾದ ‘ಬೇಡರ ಕಣ್ಣಪ್ಪ`ದಿಂದ ಆರಂಭವಾಗಿ 1979ರವರೆಗಿನ 25 ವರ್ಷಗಳಲ್ಲಿ 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಹಾಸ್ಯನಟರಾಗಿ ಬೆಳಗಿದವರು.

ತಮ್ಮ ನಾಲ್ಕನೆಯ ವಯಸ್ಸಿನಲ್ಲಿ ಸಿ.ಬಿ.ಮಲ್ಲಪ್ಪನವರ ಶ್ರೀಚಂದ್ರಮೌಳೀಶ್ವರ ನಾಟಕ ಸಭಾದಲ್ಲಿ ಬಾಲಕಲಾವಿದನಾಗಿ ಸೇರಿಕೊಂಡ ನರಸಿಂಹರಾಜು ಅವರಿಗೆ ಅಲ್ಲಿಯೇ ಬದುಕಿನ ಶಿಕ್ಷಣವೂ ಆರಂಭವಾಯಿತು. ಹಾಸ್ಯಪಾತ್ರಕ್ಕೆ ಹೇಳಿ ಮಾಡಿಸಿದಂತಹ ಮುಖ, ಶರೀರವನ್ನು ಸಹಜವಾಗಿ ಪಡೆದಿದ್ದ ನರಸಿಂಹರಾಜು ಅವರಿಗೆ ಹಾಸ್ಯಪಾತ್ರಗಳ ನಿರ್ವಹಣೆ ಸಹಜವಾಗಿತ್ತು. ರಂಗಮಂಚದ ಮೇಲೆ ಬಂದು ನಿಂತರೆ ಸಾಕು, ಪ್ರೇಕ್ಷಕರ ನಗೆಹೊನಲು ಹರಿಯುತ್ತಿತ್ತು.

ನರಸಿಂಹರಾಜು ಅವರು ಪೌರಾಣಿಕ ಪಾತ್ರಗಳನ್ನು – ವಿಶ್ವಾಮಿತ್ರ, ರಾಮ, ಕೆಲವೊಮ್ಮೆ ರಾವಣ. ಭರತ, ಇನ್ನು ಕೆಲವು ಸಲ ಲಕ್ಷ್ಮಿಯ ಪಾತ್ರವನ್ನೂ ನಿರ್ವಹಿಸುತ್ತಿದ್ದರು. ಆಗಲೇ ಜನಪ್ರಿಯತೆ ಪಡೆದಿದ್ದ ‘ಬೇಡರ ಕಣ್ಣಪ್ಪ` ನಾಟಕದಲ್ಲಿ ಅರ್ಚಕನ ಪುತ್ರ ಕಾಶಿಯ ಪಾತ್ರದಲ್ಲಿ ನರಸಿಂಹರಾಜು ತುಂಬಾ ಜನಪ್ರಿಯತೆ ಪಡೆದರು.

`ಶ್ರೀ ಚಂದ್ರಮೌಳೀಶ್ವರ ನಾಟಕ ಸಭಾ`, `ಎಡತೊರೆಯ ಕಂಪೆನಿ`, `ಹಿರಣ್ಣಯ್ಯನವರ ಮಿತ್ರಮಂಡಲಿ`, `ಭಾರತ ಲಲಿತ ಕಲಾ ಸಂಘ`, ಬೇಲೂರಿನ `ಗುಂಡಾ ಜೋಯಿಸರ ಕಂಪೆನಿ`, ಗುಬ್ಬಿಯ `ಚೆನ್ನಬಸವೇಶ್ವರ ನಾಟಕ ಕಂಪೆನಿ`ಯ ನಾಟಕಗಳಲ್ಲಿ ತಮ್ಮ ಬಣ್ಣದ ಬದುಕಿನ ಆರಂಭದ 27 ವರ್ಷಗಳನ್ನು ನರಸಿಂಹರಾಜು ಕಳೆದಿದ್ದರು.

ರಾಜ್‌ಕುಮಾರ್ ಅವರೊಂದಿಗೆ `ಬೇಡರ ಕಣ್ಣಪ್ಪ` ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಪಡೆದ ನಂತರವೂ ಅವರು ರಂಗಭೂಮಿಯನ್ನು ಕಡೆಗಣಿಸಲಿಲ್ಲ. ಬಾಲನಟನಾಗಿ ರಂಗ ಪ್ರವೇಶಿಸಿದ ನರಸಿಂಹರಾಜು ಬೆಳೆಯುತ್ತಿದ್ದಂತೆ ದೊಡ್ಡವರ ಪಾತ್ರಗಳಿಗೆ ಭಡ್ತಿ ಪಡೆದರು. ತಮ್ಮ ವಿಶಿಷ್ಟ ಅಭಿನಯದಿಂದ ಹಾಸ್ಯನಟರಾಗಿ ರೂಪುಗೊಂಡರು. ರಂಗಭೂಮಿಯಲ್ಲಿ ಪಡೆದ ಎಲ್ಲ ಬಗೆಯ ಅನುಭವ, ಅವರಿಗೆ ಸಿನಿಮಾ ಜಗತ್ತಿನಲ್ಲಿ ಉಪಯೋಗಕ್ಕೆ ಬಂದಿತು. ಚಿತ್ರರಂಗದ ಪ್ರವೇಶಕ್ಕೆ ನಿಮಿತ್ತವಾದ ‘ಬೇಡರ ಕಣ್ಣಪ್ಪ`ದಲ್ಲಿನ ಕಾಶಿಯ ಪಾತ್ರ ಅವರಿಗೆ ಲೀಲಾಜಾಲವಾಗಿತ್ತು. ‘ಬೇಡರ ಕಣ್ಣಪ್ಪ` ನಾಟಕದಲ್ಲಿ ಸಾವಿರಕ್ಕೂ ಹೆಚ್ಚಿನ ಪ್ರದರ್ಶನಗಳಲ್ಲಿ ಅವರು ಕಾಶಿಯ ಪಾತ್ರ ವಹಿಸಿದ್ದರು. ಪ್ರತಿ ಪ್ರದರ್ಶನದಲ್ಲಿಯೂ ಅವರು ತೋರಿಸುತ್ತಿದ್ದ ತನ್ಮಯತೆ, ಬೆರಗು ಮೂಡಿಸುವಂತಿತ್ತು ಎಂದು ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಾಸ್ಟರ್ ಹಿರಣ್ಣಯ್ಯ ಇಂದಿಗೂ ನೆನಪು ಮಾಡಿಕೊಳ್ಳುತ್ತಾರೆ.

ಶ್ರೇಷ್ಠ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಅವರಿಂದ ಸಾಕಷ್ಟು ಪ್ರಭಾವಿತರಾಗಿದ್ದ ನರಸಿಂಹರಾಜು ಅವರ ಪೀಚು ಶರೀರ, ವಿಶಿಷ್ಟ ಬಗೆಯ ಹಾವಭಾವಗಳ ಮ್ಯಾನರಿಸಂಗಳು ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಿತ್ತು. ಅವರ ಚಿತ್ರಗಳನ್ನು ಟೆಂಟ್‌ಗಳಲ್ಲಿ ನೋಡುತ್ತಿದ್ದ ಗ್ರಾಮೀಣರು, ಉಬ್ಬು ಹಲ್ಲಿನ ತಮ್ಮ ಮಿತ್ರರನ್ನು ‘ನರಸಿಂಹರಾಜು` ಎಂದೇ ಕರೆಯುವಷ್ಟು ದಟ್ಟ ಪ್ರಭಾವವನ್ನು ನರಸಿಂಹರಾಜು ಮೂಡಿಸಿದ್ದರು. ಇದು ಜನಪದ ನಾಯಕನೊಬ್ಬ ಬೀರಿದ ಪ್ರಭಾವದಂತೆ ತೋರುತ್ತದೆ.

ನರಸಿಂಹ ರಾಜು ಅವರ ಪ್ರತೀ ಪಾತ್ರವೂ ನಮಗೆ ಪ್ರಿಯವೇ. ಅದರಲ್ಲಿ ಯಾವ ಯಾವ ಪಾತ್ರ ಇಷ್ಟ ಎಂಬುದು ಹೇಳಲಾಗದ ಮಾತು. ನಾವು ಅವರ ಎಷ್ಟು ಪಾತ್ರಗಳನ್ನು ನೋಡಿದ್ದೇವೆ ಎಂಬುದಷ್ಟೇ ನಮಗೆ ಹೇಳಲು ಸಾಧ್ಯವಿರುವಂತದ್ದು. ಏಕೆಂದರೆ, ಅವರ ಪ್ರತೀ ಪಾತ್ರ ನಿರ್ವಹಣೆಯೂ ನಮಗೆ ಇಷ್ಟವಾಗಿರುವಂತದ್ದೆ. ‘ಬೇಡರ ಕಣ್ಣಪ್ಪ’ದಿಂದ ಪ್ರಾರಂಭಗೊಂಡು ಅವರು ನಟಿಸಿರುವ ಪಾತ್ರಗಳ ವೈವಿಧ್ಯ ಅದರಲ್ಲಿ ಅವರು ಹರಿಸಿರುವ ಹಾಸ್ಯವೆಂಬ ಚೈತನ್ಯದ ವೈವಿಧ್ಯ ನಿತ್ಯ ಸ್ಮರಣೀಯವಾದುದು. ಬಹುಷಃ ನರಸಿಂಹರಾಜು ಅವರೊಬ್ಬರಿಲ್ಲದಿದ್ದರೆ ನಾವು ನೋಡಿದ ಚಿತ್ರಗಳು ಹೇಗಿದ್ದಿರಬಹುದಿತ್ತು ಎಂದು ಊಹಿಸುವುದು ಕೂಡಾ ಕಷ್ಟ ಸಾಧ್ಯ.

‘ಸ್ಕೂಲ್ ಮಾಸ್ಟರ್’ ಚಿತ್ರದ ಭಾಮೆಯ ನೋಡಲು ತಾ ಬಂದ ಹಾಡಿನಲ್ಲಿ ‘ಕಣ್ ಸನ್ನೆಯಲೇ ಕನ್ಯೆಯ ಮನ ಸೆಳೆದ’ ಎಂದು ತಾನು ನೋಡಲು ಬಂದ ಹುಡುಗಿ ಹಾಡಿದರೆ ‘ಆ ಚಿನ್ಮಯ ಮೂರುತಿ ಶ್ರೀಗೋವಿಂದ’ನ ಸ್ಥಾನದಲ್ಲಿ ಕುಳಿತ ಈ ಪೆಚ್ಚು ನರಸಿಂಹರಾಜು ಪಿಳಿ ಪಿಳಿ ಕಣ್ಸನ್ನೆ ಮಾಡಿದ್ದು ಕೂಡಾ ಅಷ್ಟೇ ಮನಮೋಹಕವಾದದ್ದು. ಶ್ರೀಕೃಷ್ಣದೇವರಾಯ ಚಿತ್ರದಲ್ಲಿ ನರಸಿಂಹರಾಜು ಅವರಂತೆ ತೆನಾಲಿ ರಾಮಕೃಷ್ಣನಾಗಿ ಮತ್ತ್ಯಾರೂ ಅಭಿನಯಿಸಿರಲಾರರು. ‘ಸತ್ಯ ಹರಿಶ್ಚಂದ್ರ’ ಚಿತ್ರದಲ್ಲಿ ಉದಯ್ ಕುಮಾರ್ ಅವರ ಶ್ರೇಷ್ಠ ಸಿಡುಕು ಮತ್ತು ರಾಜ್ ಕುಮಾರ್ ಅವರ ಸರ್ವೋತ್ಕೃಷ್ಟ ಸೌಮ್ಯತೆಯ ನಡುವೆ ಕಪಿ ಚೇಷ್ಟೆಯ, ಆದರೆ ಕಡೆಯಲ್ಲಿ ಅಷ್ಟೇ ಗೌರವಯುತವಾಗಿ ಪರಿವರ್ತಿತವಾಗುವ ನಕ್ಷತ್ರಿಕನಾದ ನರಸಿಂಹರಾಜು ಅಭಿನಯ ಮತ್ತೊಂದು ಶ್ರೇಷ್ಠ ಮಜಲಿನದು. ಜೊತೆಗೆ ಆ ಪಾತ್ರ ಚಿತ್ರದಲ್ಲಿನ ಸಶಕ್ತ ಕೊಂಡಿಯಾಗಿ ಇಡೀ ಚಿತ್ರವನ್ನೇ ತನ್ನ ಹಿಡಿತದಲ್ಲಿ ನಡೆಸುವಷ್ಟು ಸಮರ್ಥವಾದದ್ದು ಕೂಡಾ. ‘ಅಂಡ ಪಿಂಡ ಬ್ರಹ್ಮಾಂಡ’ ಎಂದು ಮೂರ್ಖನಾಗಿ ಮಾತನಾಡಿ ‘ನಿನ್ನ ಪಿಂಡ’ ಎಂದು ವಿಶ್ವಾಮಿತ್ರರಿಂದ ಬೈಸಿಕೊಳ್ಳುವುದಾಗಲಿ, ‘ಏನಿದೀ ಗ್ರಹಚಾರವೋ’ ಎಂದು ಹರಿಶ್ಚಂದ್ರನ ಪ್ರಾಣ ತಿನ್ನುವುದಾಗಲೀ, ‘ಅಪ್ಪಾ ನನ್ನನ್ನು ಕ್ಷಮಿಸಿ ಬಿಡಪ್ಪ’ ಎಂದು ಹರಿಶ್ಚಂದ್ರನ ಕ್ಷಮಾಪಣೆ ಯಾಚಿಸುವ ಧೈನ್ಯತೆಯಾಗಲೀ, ಕಡೆಗೆ ಗುರು ವಿಶ್ವಾಮಿತ್ರರಿಗೇ “ಗುರುಗಳೇ ಒಂದು ಮಾತು ಮಾತ್ರ ನನ್ನ ಅನುಭಾವಕ್ಕೆ ಬಂತು, ಈ ಅಂಡ ಪಿಂಡ ಬ್ರಹ್ಮಾಂಡದಲ್ಲಿ ಅವರರವರ ಕರ್ಮ ಅವರದು” ಎಂದು ಹೇಳುವ ವೇದಾಂತ’ವಾಗಲಿ ಚಿತ್ರರಂಗದ ನಾನು ಕಂಡ ಪಾತ್ರಗಳಲ್ಲಿ ನನ್ನನ್ನು ಅತೀವವಾಗಿ ಹಿಡಿದಿಟ್ಟ ಒಂದು ಅದಮ್ಯತೆ. ಸಂಧ್ಯಾರಾಗ, ವೀರ ಕೇಸರಿ, ರತ್ನ ಮಂಜರಿ, ಕಣ್ತೆರೆದು ನೋಡು, ರಾಯರ ಸೊಸೆ ಹೀಗೆ ನೀವು ಅವರ ಇನ್ನೂರೈವತ್ತು ಚಿತ್ರಗಳಲ್ಲಿ ನೋಡಿರುವಷ್ಟನ್ನೂ ಒಂದಕ್ಕೊಂದು ಪೋಣಿಸಿಕೊಂಡು ಹೋಗಬಹುದು.

ಬಹುಷಃ ಅಂದಿನ ದಿನದಲ್ಲಿ ನರಸಿಂಹರಾಜು ಅವರನ್ನೇ ಕೇಂದ್ರವಾಗಿಸಿ ಚಾರ್ಲಿ ಚಾಪ್ಲಿನ್ ಸಿನಿಮಾದಂತೆ ಒಂದು ಸಿನಿಮಾ ಯಾಕೆ ಸೃಷ್ಟಿಯಾಗಲಿಲ್ಲ ಎಂದು ನನಗೆ ಆಗಾಗ ಅನ್ನಿಸಿದೆ. ಆದರೆ ಕನ್ನಡದ ಕೆಲವೊಂದು ಹಾಸ್ಯ ಕಲಾವಿದರು ಹೀರೋ ಆಗಲು ಹೋಗಿ ಚಿತ್ರ ನಿರ್ಮಾಣದ ಸೋಲಿನಲ್ಲಿ ತಮ್ಮನ್ನೂ ಧನಹೀನರನ್ನಾಗಿಸಿಕೊಂಡು ತಮ್ಮಲ್ಲಿನ ಸಾಮರ್ಥ್ಯವನ್ನೂ ವ್ಯರ್ಥಗೊಳಿಸಿಕೊಂಡು ಪ್ರೇಕ್ಷಕರಿಗೆ ತಲೆ ನೋವು ತಂದಿರುವುದನ್ನು ನೆನೆಸಿಕೊಂಡರೆ ನಮಗೆ ನರಸಿಂಹರಾಜು ಅವರು ಇಷ್ಟವಾಗಿದ್ದು ಅವರು ಹಾಸ್ಯಪಾತ್ರವಾಗಿಯೇ ಉಳಿದದ್ದರಿಂದ ಎಂದು ಕೂಡಾ ಅನಿಸುತ್ತದೆ. ನರಸಿಂಹ ರಾಜು ಅವರು ತಾವೇ ನಿರ್ಮಿಸಿದ ‘ಪ್ರೊಫೆಸರ್ ಹುಚ್ಚೂರಾಯ’ ಚಿತ್ರದಲ್ಲಿ ಕೂಡಾ ತಮ್ಮನ್ನೇ ತಾವು ವಿಜ್ರಂಭಿಸಿಕೊಳ್ಳದೆ ಹಲವಾರು ಸಾಮಾಜಿಕ ನಿಲುವುಗಳ ಒಂದು ಸುಂದರ ಕಥೆ ಹೆಣೆದು ಅದರಲ್ಲಿ ತಾವೊಂದು ಉತ್ತಮ ಹೃದಯವಂತ ವ್ಯಕ್ತಿಯಾಗಿ, ಮತ್ತು ತಮ್ಮ ಸಾಮರ್ಥ್ಯದ ಕುರುಹಾದ ಹಾಸ್ಯ ಲೇಪನದ ಪಾತ್ರವಾಗಿ ಮಾತ್ರ ಮೂಡಿದ್ದು, ನರಸಿಂಹರಾಜು ತಮ್ಮನ್ನು ಎಂದೂ ಅಗತ್ಯಕ್ಕಿಂತ ತೋರಿಕೊಳ್ಳದೆ ತಮ್ಮ ಕಲಾವಿದನನ್ನು ಮಾತ್ರ ಹೊರತಂದ ಶ್ರೇಷ್ಠತೆಯನ್ನು ಸಾರಿ ಹೇಳುತ್ತದೆ.

“ನಗಬೇಕು ನಗಿಸಬೇಕು, ಇದೇ ನನ್ನ ಧರ್ಮ ನಗಲಾರೆ ಅಳುವೇ ಎಂದರೆ ಅದೇ ನಿನ್ನ ಕರ್ಮ” ಎಂಬುದು ನರಸಿಂಹ ರಾಜು ಅವರ ಮೇಲೆ ಚಿತ್ರಿತವಾದ ‘ನಕ್ಕರೆ ಅದೇ ಸ್ವರ್ಗ’ ಚಿತ್ರದ ಗೀತೆ. ಇದನ್ನು ಚಾಚೂ ತಪ್ಪದೆ ತಮ್ಮ ಬಾಳಿನ ತಿರುಳನ್ನಾಗಿ ಮಾಡಿಕೊಂಡವರು ನರಸಿಂಹರಾಜು. ಅವರು ಯಾರ ಬಗ್ಗೆ ಕೆಟ್ಟ ಮಾತನ್ನು ಆಡಿದ್ದಾಗಲೀ, ಅವರ ಬಗ್ಗೆ ಯಾರೂ ಹಗುರವಾಗಿ ಮಾತನಾಡಿದ್ದಾಗಲೀ ನಾವೆಂದು ಮಾಧ್ಯಮದಲ್ಲಿ ಓದಲಿಲ್ಲ.

ಕೆಲವು ವರ್ಷ ಮದ್ರಾಸಿನಲ್ಲಿ ನೆಲೆಸಿದ್ದ ನರಸಿಂಹರಾಜು ಕನ್ನಡ ಚಿತ್ರಗಳ ನಿರ್ಮಾಣ ಚಟುವಟಿಕೆಗಳು ಬೆಂಗಳೂರಿನಲ್ಲಿ ಆರಂಭವಾದಾಗ ಅವರು ವಾಸ್ತವ್ಯವನ್ನು ಬೆಂಗಳೂರಿಗೆ ಬದಲಿಸಿದರು. ಮಕ್ಕಳು ಮೊಮ್ಮಕ್ಕಳೊಂದಿಗೆ ನೆಲೆಸಿದ್ದ ಕುಟುಂಬವತ್ಸಲ ನರಸಿಂಹರಾಜು, ತಮ್ಮ 56ನೇ ವಯಸ್ಸಿನಲ್ಲಿ 1979ರ ಜುಲೈ 20 ರಂದು ಎಂದಿನಂತೆ ರಾತ್ರಿ ಉಪಹಾರ ಸೇವಿಸಿ ಮಲಗಿದ್ದರು. ಮುಂಜಾನೆ 4.30ರ ವೇಳೆಗೆ ತೀವ್ರ ಹೃದಯಾಘಾತದಿಂದ ನಿಧನರಾದರು.

ನರಸಿಂಹರಾಜು ಅವರು ಕನ್ನಡ ಚಿತ್ರರಂಗದ ಸುವರ್ಣ ಕಾಲ ಎನ್ನಬಹುದಾದ ಅರವತ್ತು ಎಪ್ಪತ್ತರ ದಶಕದಲ್ಲಿ ಹಾಸ್ಯಚಕ್ರವರ್ತಿಯಾಗಿ ಕನ್ನಡಿಗರನ್ನು ರಂಜಿಸಿದ್ದರು. ಇಂತಹ ನಟನಾ ಚಕ್ರವರ್ತಿಗೆ ಒಮ್ಮೆಯೂ ರಾಜ್ಯ ಸರ್ಕಾರದ ಪ್ರಶಸ್ತಿ ಕೂಡಾ ಬರಲಿಲ್ಲ. ಅವರ ಹೆಸರಿನಲ್ಲಿ ಯಾವೊಂದು ಸ್ಮಾರಕ, ರಸ್ತೆ, ಕಟ್ಟಡಗಳು ಮೂಡಲಿಲ್ಲ. ಆದರೆ ಅವರು ಚಿತ್ರರಸಿಕರ ಹೃದಯದಲ್ಲಿ ಮೂಡಿರುವಷ್ಟು ಉಳಿದವರು ನಿಲ್ಲಬಲ್ಲರು ಎಂದು ಯಾರೂ ಊಹಿಸಲೂ ಸಾಧ್ಯವಿಲ್ಲ. ಇದನ್ನೇ ಇರಬೇಕು ವಚನಕಾರರು ಹೇಳಿರುವುದು “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ” ಎಂದು. ನರಸಿಂಹ ರಾಜು ಅಂತಹ ತಾನೂ ನಕ್ಕು, ಇತರರನ್ನೂ ನಗೆಗಡಲಿನಲ್ಲಿ ತೇಲಿಸಿದ ಆತ್ಮಉಂಟೆ? ಈ ಮಹಾನ್ ಚೇತನಕ್ಕೆ ನಮ್ಮ ಗೌರವದ ಪ್ರೀತಿಯ ಆತ್ಮೀಯ ನಮನ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

‘ಕಣ್ಣಪ್ಪ’ ಚಿತ್ರದ ವಿಶೇಷ ಪಾತ್ರದಲ್ಲಿ ಪ್ರಭಾಸ್‌ ನಟನೆ

Published

on

ಸುದ್ದಿದಿನ ಡೆಸ್ಕ್ : ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ‘ಕಣ್ಣಪ್ಪ’ ಚಿತ್ರಕ್ಕೆ ಇನ್ನೊಬ್ಬ ಸ್ಟಾರ್‌ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ರಭಾಸ್.

ಈಗಾಗಲೇ ಅಕ್ಷಯ್‌ ಕುಮಾರ್‌, ಮೋಹನ್‌ ಬಾಬು, ಮೋಹನ್‌ ಲಾಲ್‌, ಶರತ್‌ಕುಮಾರ್‌ ಮುಂತಾದವರು ‘ಕಣ್ಣಪ್ಪ’ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್‌ ತಾರಾಬಳಗಕ್ಕೆ ಪ್ರಭಾಸ್‌ ಅವರ ಎಂಟ್ರಿಯೂ ಆಗಿದೆ.

ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಖೇಶ‍್‍ ಕುಮಾರ್‌ ಸಿಂಗ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಕಣ್ಣಪ್ಪ’ ಚಿತ್ರದಲ್ಲಿ ಶಿವನ ಪರಮ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಲಿದ್ದಾರೆ. ಹಾಲಿವುಡ್‌ನ ಶೆಲ್ಡೋನ್‌ ಚಾವ್‌ ಅವರ ಛಾಯಾಗ್ರಹಣ, ಕೇಚ ಖಂಫಕದೀ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ10 hours ago

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕಳೆದ...

ದಿನದ ಸುದ್ದಿ10 hours ago

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು...

ದಿನದ ಸುದ್ದಿ10 hours ago

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ. ಅದೇ ರೀತಿ...

ದಿನದ ಸುದ್ದಿ11 hours ago

ದೀನ ದಯಾಳ್ ಅಂತ್ಯೋದಯ ಯೋಜನೆ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಹೊನ್ನಾಳಿ ಪಟ್ಟಣದ ಸಾರ್ವಜನಿಕರಿಗೆ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ...

ದಿನದ ಸುದ್ದಿ11 hours ago

ಐತಿಹಾಸಿಕ, ಪಾರಂಪರಿಕ ದೇವಾಲಯಗಳು ಶಾಸನಗಳು, ವೀರಗಲ್ಲು, ಸ್ಮಾರಕಗಳ ಸಂರಕ್ಷಣೆ ; ಸಾರ್ವಜನಿಕರ ಸಹಕಾರ ಅಗತ್ಯ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಇತಿಹಾಸದ ಶಾಸನಗಳು, ದೇವಾಲಯಗಳು, ಸ್ಮಾರಕಗಳು ಸೇರಿದಂತೆ ಸ್ಥಳಗಳಿದ್ದಲ್ಲಿ ಸಾರ್ವಜನಿಕರು ತಮ್ಮ ತಾಲ್ಲೂಕು, ಊರು, ಗ್ರಾಮಗಳಲ್ಲಿ ವಿನಾಶದ ಸ್ಥಿತಿಯಲ್ಲಿರುವ ದೇವಾಲಯಗಳು, ಶಾಸನಗಳು, ವೀರಗಲ್ಲುಗಳು, ಕೋಟೆಗಳು,...

ದಿನದ ಸುದ್ದಿ12 hours ago

ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ ; ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮದಲ್ಲಿನ ಮೊರಾರ್ಜಿ...

ದಿನದ ಸುದ್ದಿ15 hours ago

ಮುಂದಿನ ವರ್ಷದಿಂದ 10ನೇ ತರಗತಿಗೆ ಕೃಪಾಂಕ ರದ್ದು ; ಸಚಿವ ಮಧುಬಂಗಾರಪ್ಪ

ಸುದ್ದಿದಿನ, ಚಿಕ್ಕಮಗಳೂರು : ಪರೀಕ್ಷೆಯಲ್ಲಿ ಪಾವಿತ್ರತೆ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಈ ವರ್ಷ ಹತ್ತನೆ ತರಗತಿ ವಿಧ್ಯಾರ್ಥಿಗಳಿಗೆ ಶೇಕಡ 20 ರಷ್ಟು ಕೃಪಾಂಕಗಳನ್ನು ನೀಡಲಾಗಿದೆ. ಇದು...

ದಿನದ ಸುದ್ದಿ1 day ago

ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರಂಭ; ಕೃಷಿ ಚಟುವಟಿಕೆ ಆರಂಭ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ,...

ದಿನದ ಸುದ್ದಿ2 days ago

ಮೇಲ್ಮನೆಯ ಆರು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಪ್ರಗತಿಯಲ್ಲಿ ; ಕಣದಲ್ಲಿ 103 ಅಭ್ಯರ್ಥಿಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಆರಂಭಗೊಂಡಿದೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು...

ದಿನದ ಸುದ್ದಿ2 days ago

ವಸತಿ ಶಾಲೆಯಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿನ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಡೆಸುವ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ...

Trending