Connect with us

ಸಿನಿ ಸುದ್ದಿ

HapPy BiRtHdAy | ‘ಹಾಸ್ಯ ಬ್ರಹ್ಮ ನರಸಿಂಹ ರಾಜು’ ಅವರ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

ಡಾ.ರಾಜ್ ಕುಮಾರ್ ಅವರ ಕಾಲ್ ಶೀಟ್ ಗಿಂತಲೂ ಮೊದಲು ನರಸಿಂಹರಾಜು ಅವರ ಕಾಲ್ ಶೀಟ್ ಬುಕ್ ಮಾಡಲು ಪ್ರಯತ್ನಿಸುತ್ತಿದ್ದ ಕಾಲವೊಂದಿತ್ತು. ಅವರೇ ನಮ್ಮ ತಿಳಿ ಹಾಸ್ಯದ ಬ್ರಹ್ಮ, ಕರ್ನಾಟಕದ ಚಾಪ್ಲಿನ್ ನರಸಿಂಹರಾಜು ಅವರಿಗೆ ಜನ್ಮದಿನದ ಶುಭಾಶಯಗಳು.

ನಮ್ಮ ನಾಡು ಕಂಡ ಶ್ರೇಷ್ಠರಲ್ಲಿ ಶ್ರೇಷ್ಠ ಕಲಾವಿದರಲ್ಲೊಬ್ಬರಾದ ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಜನ್ಮದಿನ ಜುಲೈ 24ರಂದು. ಅವರು ಜನಿಸಿದ ವರ್ಷ 1926. ನಾವು ಮೆಚ್ಚಿರುವ ಯಾವುದೇ ಶ್ರೇಷ್ಠ ನಟ ನಟಿಯರಿರಲಿ, ಅವರು ನಟಿಸಿರುವ ನೂರಿನ್ನೂರು ಚಿತ್ರಗಳು ಇರುತ್ತವೆಂದರೆ ಅವರ ಬೆರಳೆಣಿಕೆಯಷ್ಟು ಪಾತ್ರಗಳು ನಮ್ಮನ್ನು ಸೆಳೆದಿರುತ್ತವೆ. ಇಲ್ಲವೇ ನಾವು ಅವರ ಅಪಾರ ಅಭಿಮಾನಿಗಳಾಗಿರುತ್ತೇವೆ ಎಂದುಕೊಂಡರೂ ಆ ಸಂಖ್ಯೆ ಇನ್ನೊಂದಷ್ಟು ಎಂಬಂತಿರಬಹುದು ಅಷ್ಟೇ. ಆದರೆ ನರಸಿಂಹರಾಜು ಅವರ ಬಗ್ಗೆ ಆ ಮಾತು ಅನ್ವಯಿಸುವುದಿಲ್ಲ. ಅವರ ಪ್ರತೀ ಪಾತ್ರವೂ ಜನತೆಗೆ ಪ್ರಿಯವೇ.

ನರಸಿಂಹರಾಜು ಅವರ ಬಗ್ಗೆ ಅವರ ಪುತ್ರಿ ಸುಧಾನರಸಿಂಹರಾಜು ಅವರು ದೂರದರ್ಶನದಲ್ಲಿ ಕಾರ್ಯಕ್ರಮ ಮಾಡಿದಾಗ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಹೇಳಿದ್ದ ಮಾತು ನೆನಪಾಗುತ್ತಿದೆ, “ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ಚಲನಚಿತ್ರಗಳಿಗೆ ಮೊದಲು ನರಸಿಂಹರಾಜು ಅವರ ದಿನಗಳನ್ನು ಗುರುತುಪಡಿಸಿಕೊಂಡು ಉಳಿದ ನಮ್ಮಂತಹ ಕಲಾವಿದರನ್ನು ಸಂಪರ್ಕಿಸುತ್ತಿದ್ದರು“. ರಾಜ್ ಅವರು ಹೇಳಿದ ಮಾತು ನರಸಿಂಹರಾಜು ಅವರು ಗಳಿಸಿದ ಶ್ರೇಷ್ಠತೆಗೆ ಮತ್ತು ಅಂತಹ ಮಾತನ್ನು ಹೇಳುವ ರಾಜ್ ಅವರ ಸಜ್ಜನತೆಯ ಶ್ರೇಷ್ಠತೆಗೆ ಕನ್ನಡಿ ಹಿಡಿದಂತಿದೆ. ರಾಜ್ ಕುಮಾರ್ ಮತ್ತು ನರಸಿಂಹರಾಜು ಅವರ ಜೋಡಿ ಕನ್ನಡ ಚಿತ್ರರಂಗದಲ್ಲಿ ಸಂಭವಿಸಿದ ಅದ್ಭುತಗಳಲ್ಲೊಂದು. ಈ ಜೋಡಿಗೆ ಬಾಲಣ್ಣ ಅವರನ್ನು ಕೂಡಾ ಸೇರಿಸಬಹುದು.

ಅಂದಿನ ದಿನದಲ್ಲಿ ಬಾಲಕೃಷ್ಣ ಮತ್ತು ನರಸಿಂಹರಾಜು ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಪೂರಕವಾಗಿ ಅಭಿನಯಿಸುತ್ತಿದ್ದುದು ನೆನಪಾಗುತ್ತದೆ. ಬಾಲಣ್ಣ ಅವರದು ರೇಗುವ ಅಸಹನತೆಯ ಪಾತ್ರವೋ, ಕೆಲವೊಂದು ಭಾರೀ ಕೃತ್ರಿಮ ಪಾತ್ರವೋ ಆಗಿರಬಹುದಾದರೂ ನರಸಿಂಹರಾಜು ಅವರ ಪಾತ್ರ ಮಾತ್ರ ಸರಳ ಸಜ್ಜನಿಕೆಯ ನೆರಳಲ್ಲೇ ಮೂಡುವ ಪೆದ್ದನದೋ, ಪೆಚ್ಚನದೋ, ತುಂಟನದೋ, ಮೂರ್ಖನದೋ ಆದ, ಹಾಗೆ ನಾವಾಗಲು ಇಷ್ಟಪಡದಿದ್ದರೂ ಇಂಥಹ ಪಾತ್ರ ಯಾವಾಗಲೂ ನಮ್ಮ ಮುಂದೆ ಇರಬೇಕು ಎನಿಸುವಂತೆ ಆಪ್ತವಾಗಿರುತ್ತಿದ್ದ ಸುಂದರತೆಯ ಹೃದ್ಭಾವದ ಸೃಜನಸೃಷ್ಠಿಗಳು. ನರಸಿಂಹರಾಜು ಅವರ ಹಿಂದೆ ಹಾಗೂ ಅವರ ನಂತರ ಅನೇಕ ಕಲಾವಿದರು ಚಿತ್ರರಂಗದಲ್ಲಿ ಮೂಡಿದ್ದಾರೆ. ಹೀಗೆ ಮೂಡಿದ ಹಲವಾರು ಕಲಾವಿದರು ನಮಗೆ ಇಷ್ಟವೂ ಆಗಿದ್ದಾರೆ ನಿಜ. ಆದರೆ ನರಸಿಂಹರಾಜು ಅಂತಹ ಆಳವಾದ ಆಪ್ತತೆ ಮೂಡಿಸಿದ ನಟ ಮಾತ್ರ ಚಾರ್ಲಿ ಚಾಪ್ಲಿನ್ ಹೊರತಾಗಿ ಅವರೊಬ್ಬರೇ.

ಕನ್ನಡದಲ್ಲಿ ಹೊಸಬಗೆಯ ಪ್ರಯೋಗ, ವೈವಿಧ್ಯಪೂರ್ಣ ಕಥೆಗಳು, ಯಶಸ್ವೀ ಚಿತ್ರಗಳು ಹೊರಬಂದದ್ದು ಕಳೆದ ಶತಮಾನದ ಐದು, ಆರು ಮತ್ತು ಏಳನೆಯ ದಶಕಗಳಲ್ಲಿ. ಈ ಅವಧಿ ಕನ್ನಡ ಚಿತ್ರರಂಗದ ಸುವರ್ಣ ಯುಗ. ಈ ಯುಗದಲ್ಲಿ ರಾರಾಜಿಸಿದ ನರಸಿಂಹರಾಜು, 1954ರಲ್ಲಿ ಬಿಡುಗಡೆಯಾದ ‘ಬೇಡರ ಕಣ್ಣಪ್ಪ`ದಿಂದ ಆರಂಭವಾಗಿ 1979ರವರೆಗಿನ 25 ವರ್ಷಗಳಲ್ಲಿ 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಹಾಸ್ಯನಟರಾಗಿ ಬೆಳಗಿದವರು.

ತಮ್ಮ ನಾಲ್ಕನೆಯ ವಯಸ್ಸಿನಲ್ಲಿ ಸಿ.ಬಿ.ಮಲ್ಲಪ್ಪನವರ ಶ್ರೀಚಂದ್ರಮೌಳೀಶ್ವರ ನಾಟಕ ಸಭಾದಲ್ಲಿ ಬಾಲಕಲಾವಿದನಾಗಿ ಸೇರಿಕೊಂಡ ನರಸಿಂಹರಾಜು ಅವರಿಗೆ ಅಲ್ಲಿಯೇ ಬದುಕಿನ ಶಿಕ್ಷಣವೂ ಆರಂಭವಾಯಿತು. ಹಾಸ್ಯಪಾತ್ರಕ್ಕೆ ಹೇಳಿ ಮಾಡಿಸಿದಂತಹ ಮುಖ, ಶರೀರವನ್ನು ಸಹಜವಾಗಿ ಪಡೆದಿದ್ದ ನರಸಿಂಹರಾಜು ಅವರಿಗೆ ಹಾಸ್ಯಪಾತ್ರಗಳ ನಿರ್ವಹಣೆ ಸಹಜವಾಗಿತ್ತು. ರಂಗಮಂಚದ ಮೇಲೆ ಬಂದು ನಿಂತರೆ ಸಾಕು, ಪ್ರೇಕ್ಷಕರ ನಗೆಹೊನಲು ಹರಿಯುತ್ತಿತ್ತು.

ನರಸಿಂಹರಾಜು ಅವರು ಪೌರಾಣಿಕ ಪಾತ್ರಗಳನ್ನು – ವಿಶ್ವಾಮಿತ್ರ, ರಾಮ, ಕೆಲವೊಮ್ಮೆ ರಾವಣ. ಭರತ, ಇನ್ನು ಕೆಲವು ಸಲ ಲಕ್ಷ್ಮಿಯ ಪಾತ್ರವನ್ನೂ ನಿರ್ವಹಿಸುತ್ತಿದ್ದರು. ಆಗಲೇ ಜನಪ್ರಿಯತೆ ಪಡೆದಿದ್ದ ‘ಬೇಡರ ಕಣ್ಣಪ್ಪ` ನಾಟಕದಲ್ಲಿ ಅರ್ಚಕನ ಪುತ್ರ ಕಾಶಿಯ ಪಾತ್ರದಲ್ಲಿ ನರಸಿಂಹರಾಜು ತುಂಬಾ ಜನಪ್ರಿಯತೆ ಪಡೆದರು.

`ಶ್ರೀ ಚಂದ್ರಮೌಳೀಶ್ವರ ನಾಟಕ ಸಭಾ`, `ಎಡತೊರೆಯ ಕಂಪೆನಿ`, `ಹಿರಣ್ಣಯ್ಯನವರ ಮಿತ್ರಮಂಡಲಿ`, `ಭಾರತ ಲಲಿತ ಕಲಾ ಸಂಘ`, ಬೇಲೂರಿನ `ಗುಂಡಾ ಜೋಯಿಸರ ಕಂಪೆನಿ`, ಗುಬ್ಬಿಯ `ಚೆನ್ನಬಸವೇಶ್ವರ ನಾಟಕ ಕಂಪೆನಿ`ಯ ನಾಟಕಗಳಲ್ಲಿ ತಮ್ಮ ಬಣ್ಣದ ಬದುಕಿನ ಆರಂಭದ 27 ವರ್ಷಗಳನ್ನು ನರಸಿಂಹರಾಜು ಕಳೆದಿದ್ದರು.

ರಾಜ್‌ಕುಮಾರ್ ಅವರೊಂದಿಗೆ `ಬೇಡರ ಕಣ್ಣಪ್ಪ` ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಪಡೆದ ನಂತರವೂ ಅವರು ರಂಗಭೂಮಿಯನ್ನು ಕಡೆಗಣಿಸಲಿಲ್ಲ. ಬಾಲನಟನಾಗಿ ರಂಗ ಪ್ರವೇಶಿಸಿದ ನರಸಿಂಹರಾಜು ಬೆಳೆಯುತ್ತಿದ್ದಂತೆ ದೊಡ್ಡವರ ಪಾತ್ರಗಳಿಗೆ ಭಡ್ತಿ ಪಡೆದರು. ತಮ್ಮ ವಿಶಿಷ್ಟ ಅಭಿನಯದಿಂದ ಹಾಸ್ಯನಟರಾಗಿ ರೂಪುಗೊಂಡರು. ರಂಗಭೂಮಿಯಲ್ಲಿ ಪಡೆದ ಎಲ್ಲ ಬಗೆಯ ಅನುಭವ, ಅವರಿಗೆ ಸಿನಿಮಾ ಜಗತ್ತಿನಲ್ಲಿ ಉಪಯೋಗಕ್ಕೆ ಬಂದಿತು. ಚಿತ್ರರಂಗದ ಪ್ರವೇಶಕ್ಕೆ ನಿಮಿತ್ತವಾದ ‘ಬೇಡರ ಕಣ್ಣಪ್ಪ`ದಲ್ಲಿನ ಕಾಶಿಯ ಪಾತ್ರ ಅವರಿಗೆ ಲೀಲಾಜಾಲವಾಗಿತ್ತು. ‘ಬೇಡರ ಕಣ್ಣಪ್ಪ` ನಾಟಕದಲ್ಲಿ ಸಾವಿರಕ್ಕೂ ಹೆಚ್ಚಿನ ಪ್ರದರ್ಶನಗಳಲ್ಲಿ ಅವರು ಕಾಶಿಯ ಪಾತ್ರ ವಹಿಸಿದ್ದರು. ಪ್ರತಿ ಪ್ರದರ್ಶನದಲ್ಲಿಯೂ ಅವರು ತೋರಿಸುತ್ತಿದ್ದ ತನ್ಮಯತೆ, ಬೆರಗು ಮೂಡಿಸುವಂತಿತ್ತು ಎಂದು ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಾಸ್ಟರ್ ಹಿರಣ್ಣಯ್ಯ ಇಂದಿಗೂ ನೆನಪು ಮಾಡಿಕೊಳ್ಳುತ್ತಾರೆ.

ಶ್ರೇಷ್ಠ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಅವರಿಂದ ಸಾಕಷ್ಟು ಪ್ರಭಾವಿತರಾಗಿದ್ದ ನರಸಿಂಹರಾಜು ಅವರ ಪೀಚು ಶರೀರ, ವಿಶಿಷ್ಟ ಬಗೆಯ ಹಾವಭಾವಗಳ ಮ್ಯಾನರಿಸಂಗಳು ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಿತ್ತು. ಅವರ ಚಿತ್ರಗಳನ್ನು ಟೆಂಟ್‌ಗಳಲ್ಲಿ ನೋಡುತ್ತಿದ್ದ ಗ್ರಾಮೀಣರು, ಉಬ್ಬು ಹಲ್ಲಿನ ತಮ್ಮ ಮಿತ್ರರನ್ನು ‘ನರಸಿಂಹರಾಜು` ಎಂದೇ ಕರೆಯುವಷ್ಟು ದಟ್ಟ ಪ್ರಭಾವವನ್ನು ನರಸಿಂಹರಾಜು ಮೂಡಿಸಿದ್ದರು. ಇದು ಜನಪದ ನಾಯಕನೊಬ್ಬ ಬೀರಿದ ಪ್ರಭಾವದಂತೆ ತೋರುತ್ತದೆ.

ನರಸಿಂಹ ರಾಜು ಅವರ ಪ್ರತೀ ಪಾತ್ರವೂ ನಮಗೆ ಪ್ರಿಯವೇ. ಅದರಲ್ಲಿ ಯಾವ ಯಾವ ಪಾತ್ರ ಇಷ್ಟ ಎಂಬುದು ಹೇಳಲಾಗದ ಮಾತು. ನಾವು ಅವರ ಎಷ್ಟು ಪಾತ್ರಗಳನ್ನು ನೋಡಿದ್ದೇವೆ ಎಂಬುದಷ್ಟೇ ನಮಗೆ ಹೇಳಲು ಸಾಧ್ಯವಿರುವಂತದ್ದು. ಏಕೆಂದರೆ, ಅವರ ಪ್ರತೀ ಪಾತ್ರ ನಿರ್ವಹಣೆಯೂ ನಮಗೆ ಇಷ್ಟವಾಗಿರುವಂತದ್ದೆ. ‘ಬೇಡರ ಕಣ್ಣಪ್ಪ’ದಿಂದ ಪ್ರಾರಂಭಗೊಂಡು ಅವರು ನಟಿಸಿರುವ ಪಾತ್ರಗಳ ವೈವಿಧ್ಯ ಅದರಲ್ಲಿ ಅವರು ಹರಿಸಿರುವ ಹಾಸ್ಯವೆಂಬ ಚೈತನ್ಯದ ವೈವಿಧ್ಯ ನಿತ್ಯ ಸ್ಮರಣೀಯವಾದುದು. ಬಹುಷಃ ನರಸಿಂಹರಾಜು ಅವರೊಬ್ಬರಿಲ್ಲದಿದ್ದರೆ ನಾವು ನೋಡಿದ ಚಿತ್ರಗಳು ಹೇಗಿದ್ದಿರಬಹುದಿತ್ತು ಎಂದು ಊಹಿಸುವುದು ಕೂಡಾ ಕಷ್ಟ ಸಾಧ್ಯ.

‘ಸ್ಕೂಲ್ ಮಾಸ್ಟರ್’ ಚಿತ್ರದ ಭಾಮೆಯ ನೋಡಲು ತಾ ಬಂದ ಹಾಡಿನಲ್ಲಿ ‘ಕಣ್ ಸನ್ನೆಯಲೇ ಕನ್ಯೆಯ ಮನ ಸೆಳೆದ’ ಎಂದು ತಾನು ನೋಡಲು ಬಂದ ಹುಡುಗಿ ಹಾಡಿದರೆ ‘ಆ ಚಿನ್ಮಯ ಮೂರುತಿ ಶ್ರೀಗೋವಿಂದ’ನ ಸ್ಥಾನದಲ್ಲಿ ಕುಳಿತ ಈ ಪೆಚ್ಚು ನರಸಿಂಹರಾಜು ಪಿಳಿ ಪಿಳಿ ಕಣ್ಸನ್ನೆ ಮಾಡಿದ್ದು ಕೂಡಾ ಅಷ್ಟೇ ಮನಮೋಹಕವಾದದ್ದು. ಶ್ರೀಕೃಷ್ಣದೇವರಾಯ ಚಿತ್ರದಲ್ಲಿ ನರಸಿಂಹರಾಜು ಅವರಂತೆ ತೆನಾಲಿ ರಾಮಕೃಷ್ಣನಾಗಿ ಮತ್ತ್ಯಾರೂ ಅಭಿನಯಿಸಿರಲಾರರು. ‘ಸತ್ಯ ಹರಿಶ್ಚಂದ್ರ’ ಚಿತ್ರದಲ್ಲಿ ಉದಯ್ ಕುಮಾರ್ ಅವರ ಶ್ರೇಷ್ಠ ಸಿಡುಕು ಮತ್ತು ರಾಜ್ ಕುಮಾರ್ ಅವರ ಸರ್ವೋತ್ಕೃಷ್ಟ ಸೌಮ್ಯತೆಯ ನಡುವೆ ಕಪಿ ಚೇಷ್ಟೆಯ, ಆದರೆ ಕಡೆಯಲ್ಲಿ ಅಷ್ಟೇ ಗೌರವಯುತವಾಗಿ ಪರಿವರ್ತಿತವಾಗುವ ನಕ್ಷತ್ರಿಕನಾದ ನರಸಿಂಹರಾಜು ಅಭಿನಯ ಮತ್ತೊಂದು ಶ್ರೇಷ್ಠ ಮಜಲಿನದು. ಜೊತೆಗೆ ಆ ಪಾತ್ರ ಚಿತ್ರದಲ್ಲಿನ ಸಶಕ್ತ ಕೊಂಡಿಯಾಗಿ ಇಡೀ ಚಿತ್ರವನ್ನೇ ತನ್ನ ಹಿಡಿತದಲ್ಲಿ ನಡೆಸುವಷ್ಟು ಸಮರ್ಥವಾದದ್ದು ಕೂಡಾ. ‘ಅಂಡ ಪಿಂಡ ಬ್ರಹ್ಮಾಂಡ’ ಎಂದು ಮೂರ್ಖನಾಗಿ ಮಾತನಾಡಿ ‘ನಿನ್ನ ಪಿಂಡ’ ಎಂದು ವಿಶ್ವಾಮಿತ್ರರಿಂದ ಬೈಸಿಕೊಳ್ಳುವುದಾಗಲಿ, ‘ಏನಿದೀ ಗ್ರಹಚಾರವೋ’ ಎಂದು ಹರಿಶ್ಚಂದ್ರನ ಪ್ರಾಣ ತಿನ್ನುವುದಾಗಲೀ, ‘ಅಪ್ಪಾ ನನ್ನನ್ನು ಕ್ಷಮಿಸಿ ಬಿಡಪ್ಪ’ ಎಂದು ಹರಿಶ್ಚಂದ್ರನ ಕ್ಷಮಾಪಣೆ ಯಾಚಿಸುವ ಧೈನ್ಯತೆಯಾಗಲೀ, ಕಡೆಗೆ ಗುರು ವಿಶ್ವಾಮಿತ್ರರಿಗೇ “ಗುರುಗಳೇ ಒಂದು ಮಾತು ಮಾತ್ರ ನನ್ನ ಅನುಭಾವಕ್ಕೆ ಬಂತು, ಈ ಅಂಡ ಪಿಂಡ ಬ್ರಹ್ಮಾಂಡದಲ್ಲಿ ಅವರರವರ ಕರ್ಮ ಅವರದು” ಎಂದು ಹೇಳುವ ವೇದಾಂತ’ವಾಗಲಿ ಚಿತ್ರರಂಗದ ನಾನು ಕಂಡ ಪಾತ್ರಗಳಲ್ಲಿ ನನ್ನನ್ನು ಅತೀವವಾಗಿ ಹಿಡಿದಿಟ್ಟ ಒಂದು ಅದಮ್ಯತೆ. ಸಂಧ್ಯಾರಾಗ, ವೀರ ಕೇಸರಿ, ರತ್ನ ಮಂಜರಿ, ಕಣ್ತೆರೆದು ನೋಡು, ರಾಯರ ಸೊಸೆ ಹೀಗೆ ನೀವು ಅವರ ಇನ್ನೂರೈವತ್ತು ಚಿತ್ರಗಳಲ್ಲಿ ನೋಡಿರುವಷ್ಟನ್ನೂ ಒಂದಕ್ಕೊಂದು ಪೋಣಿಸಿಕೊಂಡು ಹೋಗಬಹುದು.

ಬಹುಷಃ ಅಂದಿನ ದಿನದಲ್ಲಿ ನರಸಿಂಹರಾಜು ಅವರನ್ನೇ ಕೇಂದ್ರವಾಗಿಸಿ ಚಾರ್ಲಿ ಚಾಪ್ಲಿನ್ ಸಿನಿಮಾದಂತೆ ಒಂದು ಸಿನಿಮಾ ಯಾಕೆ ಸೃಷ್ಟಿಯಾಗಲಿಲ್ಲ ಎಂದು ನನಗೆ ಆಗಾಗ ಅನ್ನಿಸಿದೆ. ಆದರೆ ಕನ್ನಡದ ಕೆಲವೊಂದು ಹಾಸ್ಯ ಕಲಾವಿದರು ಹೀರೋ ಆಗಲು ಹೋಗಿ ಚಿತ್ರ ನಿರ್ಮಾಣದ ಸೋಲಿನಲ್ಲಿ ತಮ್ಮನ್ನೂ ಧನಹೀನರನ್ನಾಗಿಸಿಕೊಂಡು ತಮ್ಮಲ್ಲಿನ ಸಾಮರ್ಥ್ಯವನ್ನೂ ವ್ಯರ್ಥಗೊಳಿಸಿಕೊಂಡು ಪ್ರೇಕ್ಷಕರಿಗೆ ತಲೆ ನೋವು ತಂದಿರುವುದನ್ನು ನೆನೆಸಿಕೊಂಡರೆ ನಮಗೆ ನರಸಿಂಹರಾಜು ಅವರು ಇಷ್ಟವಾಗಿದ್ದು ಅವರು ಹಾಸ್ಯಪಾತ್ರವಾಗಿಯೇ ಉಳಿದದ್ದರಿಂದ ಎಂದು ಕೂಡಾ ಅನಿಸುತ್ತದೆ. ನರಸಿಂಹ ರಾಜು ಅವರು ತಾವೇ ನಿರ್ಮಿಸಿದ ‘ಪ್ರೊಫೆಸರ್ ಹುಚ್ಚೂರಾಯ’ ಚಿತ್ರದಲ್ಲಿ ಕೂಡಾ ತಮ್ಮನ್ನೇ ತಾವು ವಿಜ್ರಂಭಿಸಿಕೊಳ್ಳದೆ ಹಲವಾರು ಸಾಮಾಜಿಕ ನಿಲುವುಗಳ ಒಂದು ಸುಂದರ ಕಥೆ ಹೆಣೆದು ಅದರಲ್ಲಿ ತಾವೊಂದು ಉತ್ತಮ ಹೃದಯವಂತ ವ್ಯಕ್ತಿಯಾಗಿ, ಮತ್ತು ತಮ್ಮ ಸಾಮರ್ಥ್ಯದ ಕುರುಹಾದ ಹಾಸ್ಯ ಲೇಪನದ ಪಾತ್ರವಾಗಿ ಮಾತ್ರ ಮೂಡಿದ್ದು, ನರಸಿಂಹರಾಜು ತಮ್ಮನ್ನು ಎಂದೂ ಅಗತ್ಯಕ್ಕಿಂತ ತೋರಿಕೊಳ್ಳದೆ ತಮ್ಮ ಕಲಾವಿದನನ್ನು ಮಾತ್ರ ಹೊರತಂದ ಶ್ರೇಷ್ಠತೆಯನ್ನು ಸಾರಿ ಹೇಳುತ್ತದೆ.

“ನಗಬೇಕು ನಗಿಸಬೇಕು, ಇದೇ ನನ್ನ ಧರ್ಮ ನಗಲಾರೆ ಅಳುವೇ ಎಂದರೆ ಅದೇ ನಿನ್ನ ಕರ್ಮ” ಎಂಬುದು ನರಸಿಂಹ ರಾಜು ಅವರ ಮೇಲೆ ಚಿತ್ರಿತವಾದ ‘ನಕ್ಕರೆ ಅದೇ ಸ್ವರ್ಗ’ ಚಿತ್ರದ ಗೀತೆ. ಇದನ್ನು ಚಾಚೂ ತಪ್ಪದೆ ತಮ್ಮ ಬಾಳಿನ ತಿರುಳನ್ನಾಗಿ ಮಾಡಿಕೊಂಡವರು ನರಸಿಂಹರಾಜು. ಅವರು ಯಾರ ಬಗ್ಗೆ ಕೆಟ್ಟ ಮಾತನ್ನು ಆಡಿದ್ದಾಗಲೀ, ಅವರ ಬಗ್ಗೆ ಯಾರೂ ಹಗುರವಾಗಿ ಮಾತನಾಡಿದ್ದಾಗಲೀ ನಾವೆಂದು ಮಾಧ್ಯಮದಲ್ಲಿ ಓದಲಿಲ್ಲ.

ಕೆಲವು ವರ್ಷ ಮದ್ರಾಸಿನಲ್ಲಿ ನೆಲೆಸಿದ್ದ ನರಸಿಂಹರಾಜು ಕನ್ನಡ ಚಿತ್ರಗಳ ನಿರ್ಮಾಣ ಚಟುವಟಿಕೆಗಳು ಬೆಂಗಳೂರಿನಲ್ಲಿ ಆರಂಭವಾದಾಗ ಅವರು ವಾಸ್ತವ್ಯವನ್ನು ಬೆಂಗಳೂರಿಗೆ ಬದಲಿಸಿದರು. ಮಕ್ಕಳು ಮೊಮ್ಮಕ್ಕಳೊಂದಿಗೆ ನೆಲೆಸಿದ್ದ ಕುಟುಂಬವತ್ಸಲ ನರಸಿಂಹರಾಜು, ತಮ್ಮ 56ನೇ ವಯಸ್ಸಿನಲ್ಲಿ 1979ರ ಜುಲೈ 20 ರಂದು ಎಂದಿನಂತೆ ರಾತ್ರಿ ಉಪಹಾರ ಸೇವಿಸಿ ಮಲಗಿದ್ದರು. ಮುಂಜಾನೆ 4.30ರ ವೇಳೆಗೆ ತೀವ್ರ ಹೃದಯಾಘಾತದಿಂದ ನಿಧನರಾದರು.

ನರಸಿಂಹರಾಜು ಅವರು ಕನ್ನಡ ಚಿತ್ರರಂಗದ ಸುವರ್ಣ ಕಾಲ ಎನ್ನಬಹುದಾದ ಅರವತ್ತು ಎಪ್ಪತ್ತರ ದಶಕದಲ್ಲಿ ಹಾಸ್ಯಚಕ್ರವರ್ತಿಯಾಗಿ ಕನ್ನಡಿಗರನ್ನು ರಂಜಿಸಿದ್ದರು. ಇಂತಹ ನಟನಾ ಚಕ್ರವರ್ತಿಗೆ ಒಮ್ಮೆಯೂ ರಾಜ್ಯ ಸರ್ಕಾರದ ಪ್ರಶಸ್ತಿ ಕೂಡಾ ಬರಲಿಲ್ಲ. ಅವರ ಹೆಸರಿನಲ್ಲಿ ಯಾವೊಂದು ಸ್ಮಾರಕ, ರಸ್ತೆ, ಕಟ್ಟಡಗಳು ಮೂಡಲಿಲ್ಲ. ಆದರೆ ಅವರು ಚಿತ್ರರಸಿಕರ ಹೃದಯದಲ್ಲಿ ಮೂಡಿರುವಷ್ಟು ಉಳಿದವರು ನಿಲ್ಲಬಲ್ಲರು ಎಂದು ಯಾರೂ ಊಹಿಸಲೂ ಸಾಧ್ಯವಿಲ್ಲ. ಇದನ್ನೇ ಇರಬೇಕು ವಚನಕಾರರು ಹೇಳಿರುವುದು “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ” ಎಂದು. ನರಸಿಂಹ ರಾಜು ಅಂತಹ ತಾನೂ ನಕ್ಕು, ಇತರರನ್ನೂ ನಗೆಗಡಲಿನಲ್ಲಿ ತೇಲಿಸಿದ ಆತ್ಮಉಂಟೆ? ಈ ಮಹಾನ್ ಚೇತನಕ್ಕೆ ನಮ್ಮ ಗೌರವದ ಪ್ರೀತಿಯ ಆತ್ಮೀಯ ನಮನ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ8 hours ago

ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್

ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ...

ದಿನದ ಸುದ್ದಿ18 hours ago

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರು ಬಿಡುಗಡೆ: ನದಿ ದಂಡೆಯ ಸಾರ್ವಜನಿಕರು, ರೈತರಿಗೆ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ: ಹಾವೇರಿ, ರಾಣೇಬೆನ್ನೂರ, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿ ಪಾತ್ರದ ಗ್ರಾಮಗಳಿಗೆ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರನ್ನು ಪೂರೈಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ...

ದಿನದ ಸುದ್ದಿ18 hours ago

ಶಿಕ್ಷಕರು, ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ‘ಚೈಲ್ಡ್ ಹೆಲ್ಪ್‌ಲೈನ್’ ಸಂಖ್ಯೆಯನ್ನು ಪ್ರದರ್ಶಿಸಬೇಕು ಹಾಗೂ ಶಿಕ್ಷಕರು ಮತ್ತು ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಆನ್‌ಲೈನ್ ವಂಚನೆಗಳ ಕುರಿತು...

ದಿನದ ಸುದ್ದಿ2 days ago

ಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?

ಡಾ. ಗಿರೀಶ್ ಕುಮಾರ್ ಗೌಡ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ನಾಪತ್ತೆ. ಲಾರಿಗಳ ಮಾಲೀಕರೊಂದಿಗೆ ಶ್ಯಾಮಿಲು. ಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್...

ಅಂಕಣ2 days ago

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ...

ದಿನದ ಸುದ್ದಿ2 days ago

ಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ

ಸುದ್ದಿದಿನ,ದಾವಣಗೆರೆ:ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಸ್‌ಜೆಎಂ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಶಿವರಾಜಕುಮಾರ್ ಮಂಡಿಸಿದ ‘ಪ್ರಧಾನ ಮಂತ್ರಿ ಜನಧನ ಯೋಜನಾ ಆಯ್ಯಂಡ್ ಫೈನಾನ್ಸಿಯಲ್...

ದಿನದ ಸುದ್ದಿ4 days ago

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು. ಚಲನಚಿತ್ರ ರಂಗ – 2005ರಲ್ಲಿ ‘ಬಾಯ್...

ದಿನದ ಸುದ್ದಿ4 days ago

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ...

ದಿನದ ಸುದ್ದಿ4 days ago

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ...

ದಿನದ ಸುದ್ದಿ5 days ago

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು...

Trending