Connect with us

ರಾಜಕೀಯ

ರಾಜಕೀಯ ವಿವಾದೋದ್ಯಮ: ಪ್ರತಿರೋಧದ ಹಾದಿ

Published

on

ರ್ಪಡುವ ಘಟನಾವಳಿಗಳು ಮತ್ತು ಅಭಿವ್ಯಕ್ತ ವಿಚಾರಗಳು ವಿವಾದದ ಸ್ವರೂಪ ಪಡೆದು ಪ್ರಚಲಿತ ವಿದ್ಯಮಾನಗಳ ಆವರಣ ಕಲುಷಿತಗೊಂಡಿರುವ ಸಂದರ್ಭ ಈಗಿನದು. ಒಬ್ಬೊಬ್ಬರು ತಮ್ಮ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳುವುದಕ್ಕೆ ವಿವಾದಗಳನ್ನು ಬಳಸಿಕೊಳ್ಳುವುದರ ಕಡೆಗೇ ಗಮನ ಹರಿಸುತ್ತಿದ್ದಾರೆ. ಈ ಬಗೆಯ ಹಿತಾಸಕ್ತಿ ರಕ್ಷಣೆಯ ಸ್ವಾರ್ಥಪರ ನಡೆಗಳನ್ನು ರಾಷ್ಟ್ರ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ಪೋಷಿಸುತ್ತಿದೆ. ಪ್ರಾದೇಶಿಕ ವೈವಿಧ್ಯತೆ ಮತ್ತು ಸಾಂಸ್ಕøತಿಕ ಪರಂಪರೆಯ ಉದಾತ್ತತೆಯನ್ನು ಒಡೆದು ಆಕ್ರಾಮಕವೆನ್ನಿಸುವ ಸಮೂಹ ವರ್ತನಾ ಧಾಟಿಯನ್ನು ನಿರ್ದೇಶಿಸುತ್ತಿದೆ. ತನ್ನೊಳಗಿನ ಸಂಕುಚಿತತೆಯನ್ನು ಸಾಮಾಜಿಕವಾಗಿಸಿ ಜನಸಮೂಹದೊಳಗೆ ಬೆರೆಸಿಬಿಡುವ ಅದರ ಕಾರ್ಯಸೂಚಿ ಈಗಾಗಲೇ ಅಭೂತಪೂರ್ವ ಯಶಸ್ಸು ಪಡೆದಿದೆ. ಮತ್ತೆ ಮತ್ತೆ ಯಶಸ್ಸು ಪಡೆಯುವುದರ ಗಮ್ಯದ ಕಡೆಗೇ ಚಲಿಸುತ್ತಲೇ ಇದೆ. ಇದನ್ನು ದೃಢೀಕರಿಸುವಂತೆ ಜನವರ್ಗವು ಅಧಿಕಾರದಲ್ಲಿರುವವರನ್ನು ಆರಾಧಿಸುತ್ತಾ ತಮ್ಮ ಪ್ರಜ್ಞೆಯನ್ನು ಆಳ್ವಿಕೆಯ ಪಾದಕ್ಕರ್ಪಿಸಿಬಿಟ್ಟಿದೆ.

ದೇಶವೊಂದರ ರಾಜಕಾರಣವು ಜನಸಮೂಹವನ್ನು ಸರಿದಾರಿಯಲ್ಲಿರುವಂತೆ ನೋಡಿಕೊಳ್ಳುವ ನಾಯಕತ್ವವನ್ನು ಪೋಷಿಸಬೇಕು. ಹಾಗೆ ಪೋಷಿಸುತ್ತಲೇ ರಾಜಕೀಯಕ್ಕೆ ಉದಾತ್ತ ತಾತ್ವಿಕತೆಯ ಗುಣಲಕ್ಷಣದ ಸಂಸ್ಕಾರವನ್ನು ಒದಗಿಸಬೇಕು. ಆಡಳಿತಾರೂಢ ಸರ್ಕಾರವನ್ನು ಪ್ರತಿನಿಧಿಸುವ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ಸಂವಾದಾತ್ಮಕ ನಂಟು ಜನರ ಪ್ರಜ್ಞೆಯನ್ನು ಎತ್ತರಿಸುವ ರೀತಿಯಲ್ಲಿ ರೂಪುಗೊಳ್ಳುತ್ತಿರಬೇಕು. ಈ ನಂಟು ಅಪವಿತ್ರವಾಗಿರದೇ ದೇಶದ ಬೆಳವಣಿಗೆಯ ಹೆಜ್ಜೆಗಳನ್ನು ಸ್ಪಷ್ಟಪಡಿಸಿಕೊಳ್ಳುವುದಕ್ಕೆ ನೆರವಾಗುವಂತಿರಬೇಕು. ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಾರ್ಕಿಕ ಪರಿಹಾರ ಕಂಡುಕೊಳ್ಳುವ ಉತ್ಸಾಹದೊಂದಿಗೆ ಮುಂದಡಿಯಿಡಬೇಕು. ಸಮಸ್ಯೆಗಳನ್ನು ಜೀವಂತವಾಗಿಟ್ಟು ಅವುಗಳ ಆಧಾರದಲ್ಲಿ ಅಧಿಕಾರದ ಬೆಳೆ ತೆಗೆಯುವ ಅಪೇಕ್ಷೆಗಳು ವಿವಾದಗಳನ್ನು ಸೃಷ್ಟಿಸುವುದಕ್ಕಷ್ಟೇ ಬಳಕೆಯಾಗುತ್ತವೆ. ದೇಶಕ್ಕೆ ಪ್ರಯೋಜನವಾಗುವುದಿಲ್ಲ. ಜನರ ಒಳಿತಿನ ದೃಷ್ಟಿಯಿಂದಲೂ ಅವು ಅಪಾಯಕಾರಿ. ಈ ಹಂತದಲ್ಲಿಯೇ ಅವು ವಾಣಿಜ್ಯಿಕ ಹಿತಾಸಕ್ತಿಗಳನ್ನು ಪೋಷಿಸುವಂಥ ಉದ್ಯಮಗಳ ನಿರೀಕ್ಷೆಗಳನ್ನು ಈಡೇರಿಸುವ ಮೂಲಗಳಾಗುತ್ತವೆ. ರಾಜಕಾರಣವನ್ನು ವಿವಾದೋದ್ಯಮವಾಗಿಸುತ್ತವೆ. ಸದ್ಯದ ವಿದ್ಯಮಾನಗಳು ಈ ವಿಲಕ್ಷಣತೆಯನ್ನು ದೃಢೀಕರಿಸುತ್ತಿವೆ.

ಇದನ್ನು ಇನ್ನಷ್ಟು ಸ್ಪಷ್ಟಪಡಿಸಿಕೊಳ್ಳುವುದಕ್ಕೆ ಆಡಳಿತಾರೂಢ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡೆಗಳನ್ನು ನಿದರ್ಶನಗಳನ್ನಾಗಿ ಚರ್ಚಿಸಬಹುದು. ಭಾರತದಲ್ಲಿ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ ಎಂಬ ಎರಡು ರಾಷ್ಟ್ರೀಯ ಪಕ್ಷಗಳಿವೆ. ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅಸ್ತಿತ್ವದಲ್ಲಿವೆ. ಇತ್ತೀಚಿಗಿನ ಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ ವ್ಯಾಪಕವಾಗಿ ಸಮ್ಮಿಶ್ರ ಸರ್ಕಾರದ ಪ್ರಯೋಗಗಳು ಮುಂಚೂಣಿಗೆ ಬಂದಿವೆ. ಮೈತ್ರಿ ಸರ್ಕಾರದ ಹೆಜ್ಜೆಗಳ ನಡಿಗೆಯ ದ್ವಂದ್ವಗಳೂ ಅರಿವಿಗೆ ಬಂದಿವೆ. ರಾಷ್ಟ್ರೀಯ ಪಕ್ಷಗಳೆರಡೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರುವ ತಮ್ಮೊಳಗಿನ ಹಂಬಲಗಳನ್ನು ಹತ್ತಿಕ್ಕಿಕೊಂಡು ಅವುಗಳ ನೆರವಿನ ಹಸ್ತವನ್ನು ಜೊತೆಗಿಟ್ಟುಕೊಂಡೇ ಮುನ್ನಡೆಯಬೇಕಾದ ಅನಿವಾರ್ಯತೆಯನ್ನು ಮನಗಂಡಿವೆ. ಇದರ ಮಧ್ಯೆಯೇ ಭಾರತೀಯ ಜನತಾಪಕ್ಷವು ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಪಡೆದು ಕೇಂದ್ರದಲ್ಲಿ ಅಧಿಕಾರ ಹಿಡಿದ ನಂತರವೂ ಮಿತ್ರಪಕ್ಷಗಳನ್ನು ಜೊತೆಗಿರಿಸಿಕೊಂಡು ಎನ್‍ಡಿಎ (ನ್ಯಾಷನಲ್ ಡೆಮಾಕ್ರೆಟಿಕ್ ಅಲಯನ್ಸ್) ಬಂಧವನ್ನು ಚಾಲ್ತಿಯಲ್ಲಿರಿಸಿಕೊಂಡಿದೆ. ಕಾಂಗ್ರೆಸ್ ಕೂಡಾ ಯುಪಿಎ (ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್) ಎಂಬ ಮೈತ್ರಿಕೂಟವನ್ನು ನೆಚ್ಚಿಕೊಂಡು ಚುನಾವಣಾ ಅಖಾಡಕ್ಕಿಳಿಯುತ್ತಿದೆ. ಇದೀಗ ಎಲ್ಲ ಪಕ್ಷಗಳೂ ಒಗ್ಗೂಡಿ ತೃತೀಯ ಶಕ್ತಿಯನ್ನು ರೂಪಿಸಿ ಎನ್.ಡಿ.ಎಯನ್ನು ಮಣಿಸುವ ಪ್ರಯತ್ನಗಳಲ್ಲಿ ನಿರತವಾಗಿವೆ.

ರಾಷ್ಟ್ರೀಯ ಪಕ್ಷಗಳನ್ನು ಅಲ್ಲಗಳೆದು ಅಸ್ತಿತ್ವಕ್ಕೆ ಬಂದ ಪ್ರಾದೇಶಿಕ ಪಕ್ಷಗಳು ಭಿನ್ನ ಹಾದಿಯನ್ನೇನೂ ತುಳಿಯಲಿಲ್ಲ. ಹಿಂದಿನ ರಾಜಕಾರಣದ ಸಾಂಪ್ರದಾಯಿಕ ಸಂಕುಚಿತತೆಯನ್ನೇ ಮತ್ತಷ್ಟು ವಿಸ್ತರಿಸಿದವು. ಅವುಗಳ ಹೆಸರುಗಳು ಉದಾತ್ತತೆಯ ಅರ್ಥವನ್ನು ಧ್ವನಿಸಿದರೂ ಮಾಡಿದ್ದೆಲ್ಲವೂ ಸಂಕುಚಿತ ರಾಜಕಾರಣ. ರಾಜ್ಯಗಳ ನಡುವಿನ ಸೌಹಾರ್ದದ ಬಂಧವನ್ನು ಒಡೆಯುವ ಹಾಗೆ ಭಾಷಿಕ ಮೂಲಭೂತವಾದಿತ್ವವನ್ನೇ ಬಂಡವಾಳವಾಗಿಸಿಕೊಂಡು ಮತಬೆಳೆ ದಕ್ಕಿಸಿಕೊಳ್ಳುವ ಪ್ರಯತ್ನಗಳಲ್ಲಿಯೇ ತಲ್ಲೀನವಾದವು. ಜಲವಿವಾದಗಳು ಈ ನೆಲೆಯಲ್ಲಿಯೇ ಹುಟ್ಟಿಕೊಂಡವು. ಬೇರೊಂದು ದೇಶದ ವಿರುದ್ಧದ ಯುದ್ಧಸನ್ನದ್ಧ ಮನಸ್ಥಿತಿ ರಾಷ್ಟ್ರರಾಜಕಾರಣದ ವಿಲಕ್ಷಣ ಗುಣವಾಗುವುದಕ್ಕೆ ಧಾರ್ಮಿಕ ಕೇಂದ್ರಿತ ಸಂಕುಚಿತತೆಯೇ ಕಾರಣ.
ತಮಿಳುನಾಡಿನಲ್ಲಿ ಜನಪ್ರಿಯತೆ ಗಳಿಸಿದ ನಟ-ನಟಿಯರು ತಮ್ಮ ಪ್ರಭಾವವನ್ನು ಅಧಿಕಾರಕೇಂದ್ರಿತ ದೃಷ್ಟಿಕೋನಕ್ಕಾಗಿ ಬಳಸಿಕೊಂಡರು. ಜನಪ್ರಿಯತೆಯ ಸರಕು ಕುಸಿಯುವ ಭೀತಿಯಲ್ಲಿ ವಿವಾದದ ವಿಷ ಹರಡುವ ಕೃಷಿಯಲ್ಲಿ ಖುಷಿ ಕಂಡರು. ಮಹಾರಾಷ್ಟ್ರದ ಪ್ರಾದೇಶಿಕ ರಾಜಕಾರಣವಂತೂ ಅಧಾರ್ಮಿಕ ಮದೋನ್ಮತ್ತ ಭಾವನೆಗಳು ಮತ್ತು ಭಾಷಿಕ ಅಂಧಾಭಿಮಾನದ ವರ್ತುಲದಲ್ಲಿ ಸಿಲುಕಿಕೊಂಡು ಅದೇ ಪರಮ ಮಾದರಿ ಎನ್ನುವಂತೆ ವೈಭವೀಕರಿಸಲ್ಪಟ್ಟಿತು. ಬಿಹಾರದಲ್ಲಂತೂ ಪರ್ಯಾಯ ಪ್ರಾದೇಶಿಕ ಪಕ್ಷದ ಅಸ್ತಿತ್ವ ಜನರ ಉದ್ಧಾರಕ್ಕೆ ಬಳಕೆಯಾಗುವ ಬದಲು ಪ್ರಭಾವೀ ನಾಯಕರೆನ್ನಿಸಿಕೊಂಡವರ ಸಮೃದ್ಧಿಗೆ ಪೂರಕ ವೇದಿಕೆಯನ್ನು ರೂಪಿಸಿಕೊಟ್ಟಿತು. ಆಂಧ್ರದ ಅಸ್ಮಿತೆಯ ಹೆಮ್ಮೆಯ ಭಾವಾವೇಶ ಅಲ್ಲಿಯ ಪ್ರಾದೇಶಿಕ ಪಕ್ಷಗಳು ಚಿಗುರೊಡೆದು ಅಧಿಕಾರ ಹಿಡಿಯುವುದಕ್ಕೆ ನೆರವಾಯಿತು. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತಿತರ ರಾಜ್ಯಗಳಲ್ಲೂ ಪ್ರಬಲ ತಾತ್ವಿಕತೆಯೊಂದಿಗಿನ ಪರ್ಯಾಯ ಪ್ರಾದೇಶಿಕ ರಾಜಕಾರಣ ರೂಪುಗೊಳ್ಳಲೇ ಇಲ್ಲ. ಮೇಲ್ನೋಟದಲ್ಲಿ ರೂಪುಗೊಂಡಿವೆ ಎಂಬ ಭಾವವನ್ನು ಮೂಡಿಸಿದ ಪಕ್ಷಗಳು ಮತ್ತೆ ರಾಷ್ಟ್ರೀಯ ಪಕ್ಷಗಳ ಆಲದ ಮರಗಳ ನೆರಳನ್ನೇ ನೆಚ್ಚಿಕೊಂಡುಬಿಟ್ಟವು.

ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅತ್ಯಂತ ಎಚ್ಚರದ ರಕ್ಷಣಾತ್ಮಕ ತಂತ್ರಗಾರಿಕೆಯನ್ನೇ ( Defense Mechanism) ನೆಚ್ಚಿಕೊಂಡು ತಮ್ಮೊಳಗಿನ ಅಧಿಕಾರದಾಹವನ್ನು ಕಾಯ್ದುಕೊಳ್ಳುವಂಥ ರಾಜಿಸ್ವಭಾವಕ್ಕೇ ಪಕ್ಕಾದವು. ಒಂದು ನಿರ್ದಿಷ್ಟ ಉದಾತ್ತ ಸೈದ್ಧಾಂತಿಕ ಆದರ್ಶವಾದಿ ಮಾದರಿಯನ್ನು ಸ್ಥಾಪಿಸಿಕೊಳ್ಳುವ ನಿಟ್ಟಿನಲ್ಲಿ ಅವುಗಳು ಆಲೋಚಿಸಲೇ ಇಲ್ಲ. ಇಬ್ಬರು ಬ್ಯಾಟ್ಸ್‍ಮನ್ ಅತ್ತ ಔಟ್ ಆಗದೆಯೇ, ಇತ್ತ ರನ್‍ಗಳನ್ನೂ ಗಳಿಸದೇ ಉಳಿದು ಇಡೀ ತಂಡಸ್ಫೂರ್ತಿಯನ್ನು ಅಂತ್ಯಗೊಳಿಸುವ ಹಾಗೆ ಪ್ರಾದೇಶಿಕ ಪಕ್ಷಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಅತ್ತ ನಿಜದ ಮೌಲಿಕ ರಾಜಕಾರಣವನ್ನೂ ಮಾಡದೇ, ಇತ್ತ ಪರ್ಯಾಯ ರಾಜಕಾರಣದ ವಿನೂತನ ಮಾದರಿಗಳನ್ನೂ ಹುಟ್ಟುಹಾಕದೇ ಮುಂದಡಿಯಿಟ್ಟವು. ಅವು ಭೌತಿಕವಾಗಿ ಜೀವಂತ. ಅಂತಃಸತ್ವದ ದೃಷ್ಟಿಯಿಂದ ಅವು ದುರ್ಬಲ. ಕಾರ್ಯಾನುಷ್ಠಾನದ ನೆಲೆಯಲ್ಲಿ ಅವುಗಳದ್ದು ಶೂನ್ಯಸಂಪಾದನೆ. ರಾಷ್ಟ್ರೀಯ ಪಕ್ಷಗಳಿಗೂ ಮತ್ತು ಪ್ರಾದೇಶಿಕ ಪಕ್ಷಗಳ ನಡುವೆ ಈ ಆಯಾಮದಲ್ಲಿಯೇ ಸಾಮ್ಯತೆಗಳನ್ನು ಗುರುತಿಸಬಹುದು.

ಭಾರತದಂಥ ವೈವಿಧ್ಯತೆಯ ರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳು ಜನರ ನಾಡಿಮಿಡಿತವನ್ನು ಗ್ರಹಿಸಿಕೊಳ್ಳುವುದು ಅತ್ಯಂತ ಸವಾಲಿನ ಕ್ರಿಯೆ. ನಂಬಿಕೆಯ ಜಗತ್ತು ಒಂದು ಕಡೆ. ಅದೇ ನಂಬಿಕೆಯ ಬಲದಲ್ಲಿ ಮೌಢ್ಯ ಬಿತ್ತುವ ಹುನ್ನಾರಿಗಳೊಂದಿಗಿನ ಪ್ರಬಲ ಸಾಮಾಜಿಕ ವ್ಯವಸ್ಥೆ ಮತ್ತೊಂದು ಕಡೆ. ಇವೆರಡರ ನಡುವೆ ಪಕ್ಷಗಳು ಮತ್ತು ನಾಯಕರು ತಮ್ಮನ್ನು ಪ್ರತಿಷ್ಠಾಪಿಸಿಕೊಳ್ಳುವ ಅನಿವಾರ್ಯತೆಯ ಬಿಕ್ಕಟ್ಟು. ಈ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ವಿಫಲವಾಗಿದ್ದೇ ಸದ್ಯದ ಎಲ್ಲ ವಿಕೃತಿಗಳಿಗೆ ಕಾರಣ. ಶೈಕ್ಷಣಿಕ ಅರ್ಹತೆಗಳ ನೆರವಿನೊಂದಿಗೆ ಪ್ರತಿಯೊಬ್ಬ ಪ್ರಜೆಗಳ ವ್ಯಕ್ತಿಗತ ಸಾಮಥ್ರ್ಯವನ್ನು ವಿವೇಚನಾತ್ಮಕ ಬೌದ್ಧಿಕತೆಗೆ ತಿರುಗಿಸುವ ದಾರ್ಶನಿಕ ಹೊಣೆಗಾರಿಕೆ ನಿಭಾಯಿಸಬೇಕಿದ್ದ ನಾಯಕತ್ವವು ಸಮಾಜದ ಸಾಂಪ್ರದಾಯಿಕ ಜಾಡ್ಯಗಳ ಕೈಗೊಂಬೆಯಾಗಿದ್ದರಿಂದ ಪಕ್ಷಗಳ ಬಹುಮುಖೀ ಶಕ್ತಿ ಸಾಬೀತಾಗಲೇ ಇಲ್ಲ. ಸದ್ಯದ ಸ್ಥಿತಿ ಹೇಗಿದೆ ಎಂದರೆ ಅಧಿಕಾರದಲ್ಲಿರುವವರನ್ನು ಕೆಳಗಿಳಿಸಲು ಸಾಮಾಜಿಕ ಸಂಘರ್ಷಗಳನ್ನೇ ಪ್ರಬಲ ಅಸ್ತ್ರಗಳನ್ನಾಗಿಸಿಕೊಳ್ಳುವ ಪಕ್ಷಗಳ ರಹಸ್ಯ ಕಾರ್ಯಸೂಚಿ ನಡೆಗಳೇ ನಿರ್ಣಾಯಕವಾಗಿವೆ. ಇವುಗಳನ್ನೇ ಪರಿಹಾರೋಪಾಯ ಎಂದುಕೊಳ್ಳಬೇಕೇ, ಅಥವಾ ತಿರಸ್ಕರಿಸಬೇಕೇ ಎಂಬ ದ್ವಂದ್ವಗಳಲ್ಲಿ ಜನರು ಸಿಲುಕಿದ್ದಾರೆ.ಪ್ರತಿರೋಧವನ್ನೊಡ್ಡಿದವರ ತೇಜೋವಧೆಗೈದು ಕಾನೂನು ಬಲಪ್ರಯೋಗದೊಂದಿಗೆ ಧ್ವನಿ ಹತ್ತಿಕ್ಕುವ ಆಡಳಿತಾತ್ಮಕ ವರ್ತನೆಗಳು ಪ್ರಜಾಪ್ರಭುತ್ವದ ಸಾಧ್ಯತೆಗಳನ್ನೇ ಮೊಟಕುಗೊಳಿಸುತ್ತಿವೆ. ಈ ಹಂತದಲ್ಲಿ ಜನರೊಳಗಿಂದಲೇ ಸಕಾರಾತ್ಮಕ ಧ್ವನಿ ಹೊಮ್ಮಬೇಕಾಗುತ್ತದೆ. ಇದಕ್ಕೂ ಮುನ್ನ ಜನರಿಗೆ ಕೆಲವು ಸತ್ಯಗಳು ಗೊತ್ತಾಗಬೇಕು. ಗೊತ್ತಾಗುವಂತೆ ಪ್ರಾಜ್ಞವಲಯ ಹಿಂದೆಂದಿಗಿಂತಲೂ ಹೆಚ್ಚಿನ ಶ್ರದ್ಧೆಯೊಂದಿಗೆ ಶ್ರಮಿಸಬೇಕು. ವಿವಿಧ ಪಕ್ಷಗಳ ನಾಯಕರು ಅಧಿಕಾರದಲ್ಲಿರಲಿ, ಇಲ್ಲದಿರಲಿ, ತಮ್ಮದೇ ಆದ ಪ್ರಭಾವಳಿಯೊಂದಿಗೆ ಅಸ್ತಿತ್ವವನ್ನು ಕಾಯ್ದುಕೊಂಡಿರುತ್ತಾರೆ. ಭ್ರಷ್ಟಾಚಾರ ಮತ್ತಿತರ ಅಕ್ರಮದ ಹಾದಿಯಲ್ಲಿ ಸಮಾನಮಸ್ಕರಾಗಿರುತ್ತಾರೆ. ಸಂಘರ್ಷಗಳಿಗೆ ಜನರನ್ನೇ ದಾಳಗಳನ್ನಾಗಿಸುತ್ತಾರೆ. ಪರಸ್ಪರ ಕೆಸೆರೆರಚಾಟದೊಂದಿಗೆ ಧರ್ಮಾಂಧ ನಡೆಗಳೊಂದಿಗೆ ಗುರುತಿಸಿಕೊಳ್ಳುವ ಜಾಯಮಾನವನ್ನೇ ಶಾಶ್ವತ ಗುಣಲಕ್ಷಣವಾಗಿಸಿಕೊಳ್ಳುವ ಹಾದಿಹಿಡಿದಿರುತ್ತಾರೆ. ಒಂದು ಪಕ್ಷದವರು ಅಧಿಕಾರದಲ್ಲಿದ್ದಾಗ ಮತ್ತೊಬ್ಬರು ತಾರ್ಕಿಕ ಆಂದೋಲನವನ್ನು ಕಟ್ಟುವ ಬದಲು ಸಂಕುಚಿತತೆಯೊಂದಿಗಿನ ವಿತಂಡವಾದಿ ಹೇಳಿಕೆಗಳು ಮತ್ತು ಸಮಾಜವನ್ನು ಯಥಾಸ್ಥಿತಿಯಲ್ಲಿಡುವಂಥ ಹುನ್ನಾರದ ಹೆಜ್ಜೆಗಳೊಂದಿಗೆ ಗುರುತಿಸಿಕೊಂಡು ಯಾಂತ್ರಿಕ ವಿರೋಧದ ನಾಟಕವಾಡುತ್ತಾರೆ.
ಹಾಗೆ ನಾಟಕವಾಡುತ್ತ ಜನರಿಗೆ ಹತ್ತಿರ ಎಂದು ಬಿಂಬಿಸಿಕೊಳ್ಳುತ್ತಾ ಮುಂದೊಂದು ದಿನ ಅಧಿಕಾರಕ್ಕೆ ಬಂದು ಅವರೂ ಹಿಂದಿನವರಂತೆಯೇ ನಿರ್ಲಕ್ಷ್ಯ ಧೋರಣೆಗಳೊಂದಿಗೇ ಮುಂದಡಿಯಿಟ್ಟು ಇಡೀ ಸಮಾಜವನ್ನು ಸ್ಥಗಿತತೆಯ ಅಪಾಯಕ್ಕೆ ಸಿಲುಕಿಸಿಬಿಡುತ್ತಾರೆ. ಜನರು ಅವರ ಈ ನಡೆಗಳನ್ನು ಪ್ರಶ್ನಿಸುವಂತಾಗಬೇಕು. “ನೀವು ವಿತಂಡವಾದಿ ಸಂಕುಚಿತತೆಯೊಂದಿಗೆ ಇರಬೇಡಿ. ಸಂಘರ್ಷದ ಮಾತುಗಳನ್ನಾಡಬೇಡಿ. ಒಂದಾಗಿರುವ ನಮ್ಮ ನಡುವೆ ಗೋಡೆಗಳನ್ನು ಕಟ್ಟಬೇಡಿ. ಆ ಗೋಡೆಗಳ ಮೇಲೆ ರಾಜಕಾರಣದ ಅಟ್ಟಹಾಸ ಮೆರೆಯಬೇಡಿ.

ಧರ್ಮ, ಜಾತಿ ನೆಲೆಗಳಲ್ಲಿ ಅಮಾನವೀಯಗೊಳ್ಳುವ ವ್ಯಕ್ತಿಗತ ಮನಸ್ಥಿತಿಯನ್ನು ತಪ್ಪಿಸಿ ಮನುಷ್ಯತ್ವದ ಗಮ್ಯದ ಕಡೆಗೆ ಸಾಮಾಜಿಕ ಚಲನೆ ಇರುವಂತೆ ನೋಡಿಕೊಳ್ಳಿ. ಈ ದೇಶದಲ್ಲಿ ಮನುಷ್ಯಪರ ಮತ್ತು ಜೀವಪರ ಬೆಳವಣಿಗೆಯ ಹೆಜ್ಜೆಗಳನ್ನು ಪೋಷಿಸುವುದರ ಕಡೆಗೆ ಗಮನಹರಿಸಿ. ಸುಳ್ಳುಗಳನ್ನು ಹೇಳಿ ನಮ್ಮನ್ನು ಯಾಮಾರಿಸುವುದನ್ನು ನಿಲ್ಲಿಸಿ. ಮಾಧ್ಯಮಗಳನ್ನು ಸಾಕಿಕೊಂಡು ಅವುಗಳ ಮೂಲಕ ನಮ್ಮನ್ನು ದಾರಿತಪ್ಪಿಸಬೇಡಿ. ನಿಮ್ಮನ್ನು ಪ್ರಶ್ನಿಸುವವರ ಒಡಲಾಳದ ನೋವುಗಳನ್ನು ಅರ್ಥೈಸಿಕೊಳ್ಳುವ ಅಂತಃಕರಣ ಪ್ರದರ್ಶಿಸಿ. ಎಲ್ಲಕ್ಕಿಂತ ಹೆಚ್ಚಾಗಿ ನೀವೂ ಮನುಷ್ಯರಾಗಿ. ನಮ್ಮನ್ನೂ ಮನುಷ್ಯರಾಗಿಯೇ ಉಳಿಯುವುದಕ್ಕೆ ಅವಕಾಶ ಮಾಡಿಕೊಡಿ. ಇಡೀ ದೇಶದೊಳಗೆ ನಿಜವಾದ ದೇಶಪ್ರೇಮದ ಬೆಳೆ ತೆಗೆಯಿರಿ. ಅದರೊಂದಿಗೆ ಪ್ರತಿಯೊಬ್ಬರ ಬದುಕಿನ ಸಮೃದ್ಧಿಯ ಸಾಧ್ಯತೆಗಳನ್ನು ವಿಸ್ತರಿಸಿರಿ” ಎಂದು ನಾವೆಲ್ಲರೂ ಒಕ್ಕೊರಲ ಧ್ವನಿಯೊಂದಿಗೆ ಸ್ಪಷ್ಟ ಸಂದೇಶ ಸಾರಬೇಕಿದೆ. ಹುನ್ನಾರಗಳೊಂದಿಗಿನ ರಾಜಕಾರಣದ ವಿವಾದೋದ್ಯಮವನ್ನು ಹತ್ತಿಕ್ಕಬೇಕಿದೆ. ನಾಯಕರ ಅಧಿಕಾರದಾಹದೊಂದಿಗಿನ ವ್ಯಾವಹಾರಿಕ ಮನೋಧರ್ಮಗಳನ್ನು ಕೊನಗಾಣಿಸಬೇಕಿದೆ.

(-ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ
ಇ-ಮೇಲ್ :nkpadmanabh@gmail.com)

ದಿನದ ಸುದ್ದಿ

ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

Published

on

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

Published

on

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.

ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

Published

on

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 days ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ6 days ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ1 week ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ1 week ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ1 week ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ2 weeks ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ2 weeks ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ2 weeks ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ2 weeks ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

ದಿನದ ಸುದ್ದಿ2 weeks ago

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು...

Trending