Connect with us

ರಾಜಕೀಯ

ರಾಜಕೀಯ ವಿವಾದೋದ್ಯಮ: ಪ್ರತಿರೋಧದ ಹಾದಿ

Published

on

ರ್ಪಡುವ ಘಟನಾವಳಿಗಳು ಮತ್ತು ಅಭಿವ್ಯಕ್ತ ವಿಚಾರಗಳು ವಿವಾದದ ಸ್ವರೂಪ ಪಡೆದು ಪ್ರಚಲಿತ ವಿದ್ಯಮಾನಗಳ ಆವರಣ ಕಲುಷಿತಗೊಂಡಿರುವ ಸಂದರ್ಭ ಈಗಿನದು. ಒಬ್ಬೊಬ್ಬರು ತಮ್ಮ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳುವುದಕ್ಕೆ ವಿವಾದಗಳನ್ನು ಬಳಸಿಕೊಳ್ಳುವುದರ ಕಡೆಗೇ ಗಮನ ಹರಿಸುತ್ತಿದ್ದಾರೆ. ಈ ಬಗೆಯ ಹಿತಾಸಕ್ತಿ ರಕ್ಷಣೆಯ ಸ್ವಾರ್ಥಪರ ನಡೆಗಳನ್ನು ರಾಷ್ಟ್ರ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ಪೋಷಿಸುತ್ತಿದೆ. ಪ್ರಾದೇಶಿಕ ವೈವಿಧ್ಯತೆ ಮತ್ತು ಸಾಂಸ್ಕøತಿಕ ಪರಂಪರೆಯ ಉದಾತ್ತತೆಯನ್ನು ಒಡೆದು ಆಕ್ರಾಮಕವೆನ್ನಿಸುವ ಸಮೂಹ ವರ್ತನಾ ಧಾಟಿಯನ್ನು ನಿರ್ದೇಶಿಸುತ್ತಿದೆ. ತನ್ನೊಳಗಿನ ಸಂಕುಚಿತತೆಯನ್ನು ಸಾಮಾಜಿಕವಾಗಿಸಿ ಜನಸಮೂಹದೊಳಗೆ ಬೆರೆಸಿಬಿಡುವ ಅದರ ಕಾರ್ಯಸೂಚಿ ಈಗಾಗಲೇ ಅಭೂತಪೂರ್ವ ಯಶಸ್ಸು ಪಡೆದಿದೆ. ಮತ್ತೆ ಮತ್ತೆ ಯಶಸ್ಸು ಪಡೆಯುವುದರ ಗಮ್ಯದ ಕಡೆಗೇ ಚಲಿಸುತ್ತಲೇ ಇದೆ. ಇದನ್ನು ದೃಢೀಕರಿಸುವಂತೆ ಜನವರ್ಗವು ಅಧಿಕಾರದಲ್ಲಿರುವವರನ್ನು ಆರಾಧಿಸುತ್ತಾ ತಮ್ಮ ಪ್ರಜ್ಞೆಯನ್ನು ಆಳ್ವಿಕೆಯ ಪಾದಕ್ಕರ್ಪಿಸಿಬಿಟ್ಟಿದೆ.

ದೇಶವೊಂದರ ರಾಜಕಾರಣವು ಜನಸಮೂಹವನ್ನು ಸರಿದಾರಿಯಲ್ಲಿರುವಂತೆ ನೋಡಿಕೊಳ್ಳುವ ನಾಯಕತ್ವವನ್ನು ಪೋಷಿಸಬೇಕು. ಹಾಗೆ ಪೋಷಿಸುತ್ತಲೇ ರಾಜಕೀಯಕ್ಕೆ ಉದಾತ್ತ ತಾತ್ವಿಕತೆಯ ಗುಣಲಕ್ಷಣದ ಸಂಸ್ಕಾರವನ್ನು ಒದಗಿಸಬೇಕು. ಆಡಳಿತಾರೂಢ ಸರ್ಕಾರವನ್ನು ಪ್ರತಿನಿಧಿಸುವ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ಸಂವಾದಾತ್ಮಕ ನಂಟು ಜನರ ಪ್ರಜ್ಞೆಯನ್ನು ಎತ್ತರಿಸುವ ರೀತಿಯಲ್ಲಿ ರೂಪುಗೊಳ್ಳುತ್ತಿರಬೇಕು. ಈ ನಂಟು ಅಪವಿತ್ರವಾಗಿರದೇ ದೇಶದ ಬೆಳವಣಿಗೆಯ ಹೆಜ್ಜೆಗಳನ್ನು ಸ್ಪಷ್ಟಪಡಿಸಿಕೊಳ್ಳುವುದಕ್ಕೆ ನೆರವಾಗುವಂತಿರಬೇಕು. ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಾರ್ಕಿಕ ಪರಿಹಾರ ಕಂಡುಕೊಳ್ಳುವ ಉತ್ಸಾಹದೊಂದಿಗೆ ಮುಂದಡಿಯಿಡಬೇಕು. ಸಮಸ್ಯೆಗಳನ್ನು ಜೀವಂತವಾಗಿಟ್ಟು ಅವುಗಳ ಆಧಾರದಲ್ಲಿ ಅಧಿಕಾರದ ಬೆಳೆ ತೆಗೆಯುವ ಅಪೇಕ್ಷೆಗಳು ವಿವಾದಗಳನ್ನು ಸೃಷ್ಟಿಸುವುದಕ್ಕಷ್ಟೇ ಬಳಕೆಯಾಗುತ್ತವೆ. ದೇಶಕ್ಕೆ ಪ್ರಯೋಜನವಾಗುವುದಿಲ್ಲ. ಜನರ ಒಳಿತಿನ ದೃಷ್ಟಿಯಿಂದಲೂ ಅವು ಅಪಾಯಕಾರಿ. ಈ ಹಂತದಲ್ಲಿಯೇ ಅವು ವಾಣಿಜ್ಯಿಕ ಹಿತಾಸಕ್ತಿಗಳನ್ನು ಪೋಷಿಸುವಂಥ ಉದ್ಯಮಗಳ ನಿರೀಕ್ಷೆಗಳನ್ನು ಈಡೇರಿಸುವ ಮೂಲಗಳಾಗುತ್ತವೆ. ರಾಜಕಾರಣವನ್ನು ವಿವಾದೋದ್ಯಮವಾಗಿಸುತ್ತವೆ. ಸದ್ಯದ ವಿದ್ಯಮಾನಗಳು ಈ ವಿಲಕ್ಷಣತೆಯನ್ನು ದೃಢೀಕರಿಸುತ್ತಿವೆ.

ಇದನ್ನು ಇನ್ನಷ್ಟು ಸ್ಪಷ್ಟಪಡಿಸಿಕೊಳ್ಳುವುದಕ್ಕೆ ಆಡಳಿತಾರೂಢ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡೆಗಳನ್ನು ನಿದರ್ಶನಗಳನ್ನಾಗಿ ಚರ್ಚಿಸಬಹುದು. ಭಾರತದಲ್ಲಿ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ ಎಂಬ ಎರಡು ರಾಷ್ಟ್ರೀಯ ಪಕ್ಷಗಳಿವೆ. ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅಸ್ತಿತ್ವದಲ್ಲಿವೆ. ಇತ್ತೀಚಿಗಿನ ಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ ವ್ಯಾಪಕವಾಗಿ ಸಮ್ಮಿಶ್ರ ಸರ್ಕಾರದ ಪ್ರಯೋಗಗಳು ಮುಂಚೂಣಿಗೆ ಬಂದಿವೆ. ಮೈತ್ರಿ ಸರ್ಕಾರದ ಹೆಜ್ಜೆಗಳ ನಡಿಗೆಯ ದ್ವಂದ್ವಗಳೂ ಅರಿವಿಗೆ ಬಂದಿವೆ. ರಾಷ್ಟ್ರೀಯ ಪಕ್ಷಗಳೆರಡೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರುವ ತಮ್ಮೊಳಗಿನ ಹಂಬಲಗಳನ್ನು ಹತ್ತಿಕ್ಕಿಕೊಂಡು ಅವುಗಳ ನೆರವಿನ ಹಸ್ತವನ್ನು ಜೊತೆಗಿಟ್ಟುಕೊಂಡೇ ಮುನ್ನಡೆಯಬೇಕಾದ ಅನಿವಾರ್ಯತೆಯನ್ನು ಮನಗಂಡಿವೆ. ಇದರ ಮಧ್ಯೆಯೇ ಭಾರತೀಯ ಜನತಾಪಕ್ಷವು ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಪಡೆದು ಕೇಂದ್ರದಲ್ಲಿ ಅಧಿಕಾರ ಹಿಡಿದ ನಂತರವೂ ಮಿತ್ರಪಕ್ಷಗಳನ್ನು ಜೊತೆಗಿರಿಸಿಕೊಂಡು ಎನ್‍ಡಿಎ (ನ್ಯಾಷನಲ್ ಡೆಮಾಕ್ರೆಟಿಕ್ ಅಲಯನ್ಸ್) ಬಂಧವನ್ನು ಚಾಲ್ತಿಯಲ್ಲಿರಿಸಿಕೊಂಡಿದೆ. ಕಾಂಗ್ರೆಸ್ ಕೂಡಾ ಯುಪಿಎ (ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್) ಎಂಬ ಮೈತ್ರಿಕೂಟವನ್ನು ನೆಚ್ಚಿಕೊಂಡು ಚುನಾವಣಾ ಅಖಾಡಕ್ಕಿಳಿಯುತ್ತಿದೆ. ಇದೀಗ ಎಲ್ಲ ಪಕ್ಷಗಳೂ ಒಗ್ಗೂಡಿ ತೃತೀಯ ಶಕ್ತಿಯನ್ನು ರೂಪಿಸಿ ಎನ್.ಡಿ.ಎಯನ್ನು ಮಣಿಸುವ ಪ್ರಯತ್ನಗಳಲ್ಲಿ ನಿರತವಾಗಿವೆ.

ರಾಷ್ಟ್ರೀಯ ಪಕ್ಷಗಳನ್ನು ಅಲ್ಲಗಳೆದು ಅಸ್ತಿತ್ವಕ್ಕೆ ಬಂದ ಪ್ರಾದೇಶಿಕ ಪಕ್ಷಗಳು ಭಿನ್ನ ಹಾದಿಯನ್ನೇನೂ ತುಳಿಯಲಿಲ್ಲ. ಹಿಂದಿನ ರಾಜಕಾರಣದ ಸಾಂಪ್ರದಾಯಿಕ ಸಂಕುಚಿತತೆಯನ್ನೇ ಮತ್ತಷ್ಟು ವಿಸ್ತರಿಸಿದವು. ಅವುಗಳ ಹೆಸರುಗಳು ಉದಾತ್ತತೆಯ ಅರ್ಥವನ್ನು ಧ್ವನಿಸಿದರೂ ಮಾಡಿದ್ದೆಲ್ಲವೂ ಸಂಕುಚಿತ ರಾಜಕಾರಣ. ರಾಜ್ಯಗಳ ನಡುವಿನ ಸೌಹಾರ್ದದ ಬಂಧವನ್ನು ಒಡೆಯುವ ಹಾಗೆ ಭಾಷಿಕ ಮೂಲಭೂತವಾದಿತ್ವವನ್ನೇ ಬಂಡವಾಳವಾಗಿಸಿಕೊಂಡು ಮತಬೆಳೆ ದಕ್ಕಿಸಿಕೊಳ್ಳುವ ಪ್ರಯತ್ನಗಳಲ್ಲಿಯೇ ತಲ್ಲೀನವಾದವು. ಜಲವಿವಾದಗಳು ಈ ನೆಲೆಯಲ್ಲಿಯೇ ಹುಟ್ಟಿಕೊಂಡವು. ಬೇರೊಂದು ದೇಶದ ವಿರುದ್ಧದ ಯುದ್ಧಸನ್ನದ್ಧ ಮನಸ್ಥಿತಿ ರಾಷ್ಟ್ರರಾಜಕಾರಣದ ವಿಲಕ್ಷಣ ಗುಣವಾಗುವುದಕ್ಕೆ ಧಾರ್ಮಿಕ ಕೇಂದ್ರಿತ ಸಂಕುಚಿತತೆಯೇ ಕಾರಣ.
ತಮಿಳುನಾಡಿನಲ್ಲಿ ಜನಪ್ರಿಯತೆ ಗಳಿಸಿದ ನಟ-ನಟಿಯರು ತಮ್ಮ ಪ್ರಭಾವವನ್ನು ಅಧಿಕಾರಕೇಂದ್ರಿತ ದೃಷ್ಟಿಕೋನಕ್ಕಾಗಿ ಬಳಸಿಕೊಂಡರು. ಜನಪ್ರಿಯತೆಯ ಸರಕು ಕುಸಿಯುವ ಭೀತಿಯಲ್ಲಿ ವಿವಾದದ ವಿಷ ಹರಡುವ ಕೃಷಿಯಲ್ಲಿ ಖುಷಿ ಕಂಡರು. ಮಹಾರಾಷ್ಟ್ರದ ಪ್ರಾದೇಶಿಕ ರಾಜಕಾರಣವಂತೂ ಅಧಾರ್ಮಿಕ ಮದೋನ್ಮತ್ತ ಭಾವನೆಗಳು ಮತ್ತು ಭಾಷಿಕ ಅಂಧಾಭಿಮಾನದ ವರ್ತುಲದಲ್ಲಿ ಸಿಲುಕಿಕೊಂಡು ಅದೇ ಪರಮ ಮಾದರಿ ಎನ್ನುವಂತೆ ವೈಭವೀಕರಿಸಲ್ಪಟ್ಟಿತು. ಬಿಹಾರದಲ್ಲಂತೂ ಪರ್ಯಾಯ ಪ್ರಾದೇಶಿಕ ಪಕ್ಷದ ಅಸ್ತಿತ್ವ ಜನರ ಉದ್ಧಾರಕ್ಕೆ ಬಳಕೆಯಾಗುವ ಬದಲು ಪ್ರಭಾವೀ ನಾಯಕರೆನ್ನಿಸಿಕೊಂಡವರ ಸಮೃದ್ಧಿಗೆ ಪೂರಕ ವೇದಿಕೆಯನ್ನು ರೂಪಿಸಿಕೊಟ್ಟಿತು. ಆಂಧ್ರದ ಅಸ್ಮಿತೆಯ ಹೆಮ್ಮೆಯ ಭಾವಾವೇಶ ಅಲ್ಲಿಯ ಪ್ರಾದೇಶಿಕ ಪಕ್ಷಗಳು ಚಿಗುರೊಡೆದು ಅಧಿಕಾರ ಹಿಡಿಯುವುದಕ್ಕೆ ನೆರವಾಯಿತು. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತಿತರ ರಾಜ್ಯಗಳಲ್ಲೂ ಪ್ರಬಲ ತಾತ್ವಿಕತೆಯೊಂದಿಗಿನ ಪರ್ಯಾಯ ಪ್ರಾದೇಶಿಕ ರಾಜಕಾರಣ ರೂಪುಗೊಳ್ಳಲೇ ಇಲ್ಲ. ಮೇಲ್ನೋಟದಲ್ಲಿ ರೂಪುಗೊಂಡಿವೆ ಎಂಬ ಭಾವವನ್ನು ಮೂಡಿಸಿದ ಪಕ್ಷಗಳು ಮತ್ತೆ ರಾಷ್ಟ್ರೀಯ ಪಕ್ಷಗಳ ಆಲದ ಮರಗಳ ನೆರಳನ್ನೇ ನೆಚ್ಚಿಕೊಂಡುಬಿಟ್ಟವು.

ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅತ್ಯಂತ ಎಚ್ಚರದ ರಕ್ಷಣಾತ್ಮಕ ತಂತ್ರಗಾರಿಕೆಯನ್ನೇ ( Defense Mechanism) ನೆಚ್ಚಿಕೊಂಡು ತಮ್ಮೊಳಗಿನ ಅಧಿಕಾರದಾಹವನ್ನು ಕಾಯ್ದುಕೊಳ್ಳುವಂಥ ರಾಜಿಸ್ವಭಾವಕ್ಕೇ ಪಕ್ಕಾದವು. ಒಂದು ನಿರ್ದಿಷ್ಟ ಉದಾತ್ತ ಸೈದ್ಧಾಂತಿಕ ಆದರ್ಶವಾದಿ ಮಾದರಿಯನ್ನು ಸ್ಥಾಪಿಸಿಕೊಳ್ಳುವ ನಿಟ್ಟಿನಲ್ಲಿ ಅವುಗಳು ಆಲೋಚಿಸಲೇ ಇಲ್ಲ. ಇಬ್ಬರು ಬ್ಯಾಟ್ಸ್‍ಮನ್ ಅತ್ತ ಔಟ್ ಆಗದೆಯೇ, ಇತ್ತ ರನ್‍ಗಳನ್ನೂ ಗಳಿಸದೇ ಉಳಿದು ಇಡೀ ತಂಡಸ್ಫೂರ್ತಿಯನ್ನು ಅಂತ್ಯಗೊಳಿಸುವ ಹಾಗೆ ಪ್ರಾದೇಶಿಕ ಪಕ್ಷಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಅತ್ತ ನಿಜದ ಮೌಲಿಕ ರಾಜಕಾರಣವನ್ನೂ ಮಾಡದೇ, ಇತ್ತ ಪರ್ಯಾಯ ರಾಜಕಾರಣದ ವಿನೂತನ ಮಾದರಿಗಳನ್ನೂ ಹುಟ್ಟುಹಾಕದೇ ಮುಂದಡಿಯಿಟ್ಟವು. ಅವು ಭೌತಿಕವಾಗಿ ಜೀವಂತ. ಅಂತಃಸತ್ವದ ದೃಷ್ಟಿಯಿಂದ ಅವು ದುರ್ಬಲ. ಕಾರ್ಯಾನುಷ್ಠಾನದ ನೆಲೆಯಲ್ಲಿ ಅವುಗಳದ್ದು ಶೂನ್ಯಸಂಪಾದನೆ. ರಾಷ್ಟ್ರೀಯ ಪಕ್ಷಗಳಿಗೂ ಮತ್ತು ಪ್ರಾದೇಶಿಕ ಪಕ್ಷಗಳ ನಡುವೆ ಈ ಆಯಾಮದಲ್ಲಿಯೇ ಸಾಮ್ಯತೆಗಳನ್ನು ಗುರುತಿಸಬಹುದು.

ಭಾರತದಂಥ ವೈವಿಧ್ಯತೆಯ ರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳು ಜನರ ನಾಡಿಮಿಡಿತವನ್ನು ಗ್ರಹಿಸಿಕೊಳ್ಳುವುದು ಅತ್ಯಂತ ಸವಾಲಿನ ಕ್ರಿಯೆ. ನಂಬಿಕೆಯ ಜಗತ್ತು ಒಂದು ಕಡೆ. ಅದೇ ನಂಬಿಕೆಯ ಬಲದಲ್ಲಿ ಮೌಢ್ಯ ಬಿತ್ತುವ ಹುನ್ನಾರಿಗಳೊಂದಿಗಿನ ಪ್ರಬಲ ಸಾಮಾಜಿಕ ವ್ಯವಸ್ಥೆ ಮತ್ತೊಂದು ಕಡೆ. ಇವೆರಡರ ನಡುವೆ ಪಕ್ಷಗಳು ಮತ್ತು ನಾಯಕರು ತಮ್ಮನ್ನು ಪ್ರತಿಷ್ಠಾಪಿಸಿಕೊಳ್ಳುವ ಅನಿವಾರ್ಯತೆಯ ಬಿಕ್ಕಟ್ಟು. ಈ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ವಿಫಲವಾಗಿದ್ದೇ ಸದ್ಯದ ಎಲ್ಲ ವಿಕೃತಿಗಳಿಗೆ ಕಾರಣ. ಶೈಕ್ಷಣಿಕ ಅರ್ಹತೆಗಳ ನೆರವಿನೊಂದಿಗೆ ಪ್ರತಿಯೊಬ್ಬ ಪ್ರಜೆಗಳ ವ್ಯಕ್ತಿಗತ ಸಾಮಥ್ರ್ಯವನ್ನು ವಿವೇಚನಾತ್ಮಕ ಬೌದ್ಧಿಕತೆಗೆ ತಿರುಗಿಸುವ ದಾರ್ಶನಿಕ ಹೊಣೆಗಾರಿಕೆ ನಿಭಾಯಿಸಬೇಕಿದ್ದ ನಾಯಕತ್ವವು ಸಮಾಜದ ಸಾಂಪ್ರದಾಯಿಕ ಜಾಡ್ಯಗಳ ಕೈಗೊಂಬೆಯಾಗಿದ್ದರಿಂದ ಪಕ್ಷಗಳ ಬಹುಮುಖೀ ಶಕ್ತಿ ಸಾಬೀತಾಗಲೇ ಇಲ್ಲ. ಸದ್ಯದ ಸ್ಥಿತಿ ಹೇಗಿದೆ ಎಂದರೆ ಅಧಿಕಾರದಲ್ಲಿರುವವರನ್ನು ಕೆಳಗಿಳಿಸಲು ಸಾಮಾಜಿಕ ಸಂಘರ್ಷಗಳನ್ನೇ ಪ್ರಬಲ ಅಸ್ತ್ರಗಳನ್ನಾಗಿಸಿಕೊಳ್ಳುವ ಪಕ್ಷಗಳ ರಹಸ್ಯ ಕಾರ್ಯಸೂಚಿ ನಡೆಗಳೇ ನಿರ್ಣಾಯಕವಾಗಿವೆ. ಇವುಗಳನ್ನೇ ಪರಿಹಾರೋಪಾಯ ಎಂದುಕೊಳ್ಳಬೇಕೇ, ಅಥವಾ ತಿರಸ್ಕರಿಸಬೇಕೇ ಎಂಬ ದ್ವಂದ್ವಗಳಲ್ಲಿ ಜನರು ಸಿಲುಕಿದ್ದಾರೆ.ಪ್ರತಿರೋಧವನ್ನೊಡ್ಡಿದವರ ತೇಜೋವಧೆಗೈದು ಕಾನೂನು ಬಲಪ್ರಯೋಗದೊಂದಿಗೆ ಧ್ವನಿ ಹತ್ತಿಕ್ಕುವ ಆಡಳಿತಾತ್ಮಕ ವರ್ತನೆಗಳು ಪ್ರಜಾಪ್ರಭುತ್ವದ ಸಾಧ್ಯತೆಗಳನ್ನೇ ಮೊಟಕುಗೊಳಿಸುತ್ತಿವೆ. ಈ ಹಂತದಲ್ಲಿ ಜನರೊಳಗಿಂದಲೇ ಸಕಾರಾತ್ಮಕ ಧ್ವನಿ ಹೊಮ್ಮಬೇಕಾಗುತ್ತದೆ. ಇದಕ್ಕೂ ಮುನ್ನ ಜನರಿಗೆ ಕೆಲವು ಸತ್ಯಗಳು ಗೊತ್ತಾಗಬೇಕು. ಗೊತ್ತಾಗುವಂತೆ ಪ್ರಾಜ್ಞವಲಯ ಹಿಂದೆಂದಿಗಿಂತಲೂ ಹೆಚ್ಚಿನ ಶ್ರದ್ಧೆಯೊಂದಿಗೆ ಶ್ರಮಿಸಬೇಕು. ವಿವಿಧ ಪಕ್ಷಗಳ ನಾಯಕರು ಅಧಿಕಾರದಲ್ಲಿರಲಿ, ಇಲ್ಲದಿರಲಿ, ತಮ್ಮದೇ ಆದ ಪ್ರಭಾವಳಿಯೊಂದಿಗೆ ಅಸ್ತಿತ್ವವನ್ನು ಕಾಯ್ದುಕೊಂಡಿರುತ್ತಾರೆ. ಭ್ರಷ್ಟಾಚಾರ ಮತ್ತಿತರ ಅಕ್ರಮದ ಹಾದಿಯಲ್ಲಿ ಸಮಾನಮಸ್ಕರಾಗಿರುತ್ತಾರೆ. ಸಂಘರ್ಷಗಳಿಗೆ ಜನರನ್ನೇ ದಾಳಗಳನ್ನಾಗಿಸುತ್ತಾರೆ. ಪರಸ್ಪರ ಕೆಸೆರೆರಚಾಟದೊಂದಿಗೆ ಧರ್ಮಾಂಧ ನಡೆಗಳೊಂದಿಗೆ ಗುರುತಿಸಿಕೊಳ್ಳುವ ಜಾಯಮಾನವನ್ನೇ ಶಾಶ್ವತ ಗುಣಲಕ್ಷಣವಾಗಿಸಿಕೊಳ್ಳುವ ಹಾದಿಹಿಡಿದಿರುತ್ತಾರೆ. ಒಂದು ಪಕ್ಷದವರು ಅಧಿಕಾರದಲ್ಲಿದ್ದಾಗ ಮತ್ತೊಬ್ಬರು ತಾರ್ಕಿಕ ಆಂದೋಲನವನ್ನು ಕಟ್ಟುವ ಬದಲು ಸಂಕುಚಿತತೆಯೊಂದಿಗಿನ ವಿತಂಡವಾದಿ ಹೇಳಿಕೆಗಳು ಮತ್ತು ಸಮಾಜವನ್ನು ಯಥಾಸ್ಥಿತಿಯಲ್ಲಿಡುವಂಥ ಹುನ್ನಾರದ ಹೆಜ್ಜೆಗಳೊಂದಿಗೆ ಗುರುತಿಸಿಕೊಂಡು ಯಾಂತ್ರಿಕ ವಿರೋಧದ ನಾಟಕವಾಡುತ್ತಾರೆ.
ಹಾಗೆ ನಾಟಕವಾಡುತ್ತ ಜನರಿಗೆ ಹತ್ತಿರ ಎಂದು ಬಿಂಬಿಸಿಕೊಳ್ಳುತ್ತಾ ಮುಂದೊಂದು ದಿನ ಅಧಿಕಾರಕ್ಕೆ ಬಂದು ಅವರೂ ಹಿಂದಿನವರಂತೆಯೇ ನಿರ್ಲಕ್ಷ್ಯ ಧೋರಣೆಗಳೊಂದಿಗೇ ಮುಂದಡಿಯಿಟ್ಟು ಇಡೀ ಸಮಾಜವನ್ನು ಸ್ಥಗಿತತೆಯ ಅಪಾಯಕ್ಕೆ ಸಿಲುಕಿಸಿಬಿಡುತ್ತಾರೆ. ಜನರು ಅವರ ಈ ನಡೆಗಳನ್ನು ಪ್ರಶ್ನಿಸುವಂತಾಗಬೇಕು. “ನೀವು ವಿತಂಡವಾದಿ ಸಂಕುಚಿತತೆಯೊಂದಿಗೆ ಇರಬೇಡಿ. ಸಂಘರ್ಷದ ಮಾತುಗಳನ್ನಾಡಬೇಡಿ. ಒಂದಾಗಿರುವ ನಮ್ಮ ನಡುವೆ ಗೋಡೆಗಳನ್ನು ಕಟ್ಟಬೇಡಿ. ಆ ಗೋಡೆಗಳ ಮೇಲೆ ರಾಜಕಾರಣದ ಅಟ್ಟಹಾಸ ಮೆರೆಯಬೇಡಿ.

ಧರ್ಮ, ಜಾತಿ ನೆಲೆಗಳಲ್ಲಿ ಅಮಾನವೀಯಗೊಳ್ಳುವ ವ್ಯಕ್ತಿಗತ ಮನಸ್ಥಿತಿಯನ್ನು ತಪ್ಪಿಸಿ ಮನುಷ್ಯತ್ವದ ಗಮ್ಯದ ಕಡೆಗೆ ಸಾಮಾಜಿಕ ಚಲನೆ ಇರುವಂತೆ ನೋಡಿಕೊಳ್ಳಿ. ಈ ದೇಶದಲ್ಲಿ ಮನುಷ್ಯಪರ ಮತ್ತು ಜೀವಪರ ಬೆಳವಣಿಗೆಯ ಹೆಜ್ಜೆಗಳನ್ನು ಪೋಷಿಸುವುದರ ಕಡೆಗೆ ಗಮನಹರಿಸಿ. ಸುಳ್ಳುಗಳನ್ನು ಹೇಳಿ ನಮ್ಮನ್ನು ಯಾಮಾರಿಸುವುದನ್ನು ನಿಲ್ಲಿಸಿ. ಮಾಧ್ಯಮಗಳನ್ನು ಸಾಕಿಕೊಂಡು ಅವುಗಳ ಮೂಲಕ ನಮ್ಮನ್ನು ದಾರಿತಪ್ಪಿಸಬೇಡಿ. ನಿಮ್ಮನ್ನು ಪ್ರಶ್ನಿಸುವವರ ಒಡಲಾಳದ ನೋವುಗಳನ್ನು ಅರ್ಥೈಸಿಕೊಳ್ಳುವ ಅಂತಃಕರಣ ಪ್ರದರ್ಶಿಸಿ. ಎಲ್ಲಕ್ಕಿಂತ ಹೆಚ್ಚಾಗಿ ನೀವೂ ಮನುಷ್ಯರಾಗಿ. ನಮ್ಮನ್ನೂ ಮನುಷ್ಯರಾಗಿಯೇ ಉಳಿಯುವುದಕ್ಕೆ ಅವಕಾಶ ಮಾಡಿಕೊಡಿ. ಇಡೀ ದೇಶದೊಳಗೆ ನಿಜವಾದ ದೇಶಪ್ರೇಮದ ಬೆಳೆ ತೆಗೆಯಿರಿ. ಅದರೊಂದಿಗೆ ಪ್ರತಿಯೊಬ್ಬರ ಬದುಕಿನ ಸಮೃದ್ಧಿಯ ಸಾಧ್ಯತೆಗಳನ್ನು ವಿಸ್ತರಿಸಿರಿ” ಎಂದು ನಾವೆಲ್ಲರೂ ಒಕ್ಕೊರಲ ಧ್ವನಿಯೊಂದಿಗೆ ಸ್ಪಷ್ಟ ಸಂದೇಶ ಸಾರಬೇಕಿದೆ. ಹುನ್ನಾರಗಳೊಂದಿಗಿನ ರಾಜಕಾರಣದ ವಿವಾದೋದ್ಯಮವನ್ನು ಹತ್ತಿಕ್ಕಬೇಕಿದೆ. ನಾಯಕರ ಅಧಿಕಾರದಾಹದೊಂದಿಗಿನ ವ್ಯಾವಹಾರಿಕ ಮನೋಧರ್ಮಗಳನ್ನು ಕೊನಗಾಣಿಸಬೇಕಿದೆ.

(-ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ
ಇ-ಮೇಲ್ :nkpadmanabh@gmail.com)

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

Published

on

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ ವೀರ ಯೋಧರಿಗೆ ಪ್ರಧಾನಿ ಗೌರವ ಸಮರ್ಪಣೆ ಮಾಡಲಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಂಕುನ್ ಲಾ ಸುರಂಗ ಮಾರ್ಗ ಯೋಜನೆಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.

ಈ ಯೋಜನೆಯಡಿ ನಿಮು-ಪದುಮ್-ಡಾರ್ಚಾ ರಸ್ತೆಯಿಂದ ಲೇಹ್‌ಗೆ ಎಲ್ಲಾ ಹವಾಮಾನಗಳಲ್ಲೂ ಸಂಪರ್ಕ ಕಲ್ಪಿಸಲು ಸುಮಾರು 15 ಸಾವಿರದ 800 ಅಡಿ ಎತ್ತರದಲ್ಲಿ 4.1 ಕಿಲೋಮೀಟರ್ ಉದ್ದದ ಜೋಡಿ ಸುರಂಗ ಮಾರ್ಗವನ್ನು ನಿರ್ಮಿಸಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ವಿಶ್ವದಲ್ಲೇ ಇದು ಅತಿ ಎತ್ತರದ ಸುರಂಗ ಮಾರ್ಗವಾಗಲಿದೆ. ಸಶಸ್ತ್ರ ಪಡೆಗಳ ಸುಗಮ ಪ್ರಯಾಣಕ್ಕಷ್ಟೇ ಅಲ್ಲದೇ ಲಡಾಕ್‌ನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಈ ಸುರಂಗ ಮಾರ್ಗವು ಸಹಕಾರಿಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೇಂದ್ರ ಬಜೆಟ್ : ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

Published

on

ಸುದ್ದಿದಿನಡೆಸ್ಕ್:ಕೇಂದ್ರದ ಮುಂಗಡ ಪತ್ರ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತೆಲುಗು ದೇಶಂ ನಾಯಕ ಕೇಂದ್ರ ಸಚಿವ ಕಿಂಜರಪು ರಾಮಮೋಹನ ನಾಯ್ಡು ಹೇಳಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಬಜೆಟ್ ಎಲ್ಲರ ಕನಸಾಗಿದೆ ಎಂದು ಹೇಳಿದ್ದಾರೆ. ಈಶಾನ್ಯ ರಾಜ್ಯಗಳ ಬೆಳವಣಿಗೆಗೆ ಆಯ-ವ್ಯಯ ಪೂರಕವಾಗಿದೆ ಎಂದು ಹೇಳಿದರು.

ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಉದ್ಯೋಗ ಹೆಚ್ಚಿಸುವ ಕಾರ್ಯಕ್ರಮವನ್ನು ಹಣಕಾಸು ಸಚಿವರು ಪ್ರಕಟಿಸಿರುವುದಾಗಿ ಹೇಳಿದ್ದಾರೆ. ಜೆಡಿಯು ಮುಖಂಡ ರಾಜೀವ್ ರಂಜನ್ ಸಿಂಗ್, ಆಯ-ವ್ಯಯ ಬಿಹಾರ ಜನತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ನೀಡಿದೆ ಎಂದರು.

ಕಾಂಗ್ರೆಸ್ ಮುಖಂಡ ಶಶಿತರೂರ್ ಪ್ರತಿಕ್ರಿಯೆಸಿ, ಉದ್ಯೋಗ ಖಾತರಿ ಯೋಜನೆಯ ರಾಜ್ಯಗಳ ತಾರತಮ್ಯವನ್ನು ನಿಭಾಯಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶಿವಸೇನಾ ನಾಯಕ ಪ್ರಿಯಾಂಕ ಚತುರ್ವೇದಿ, ಮಹಾರಾಷ್ಟ್ರ ರಾಜ್ಯಕ್ಕೆ ನಿರ್ಧಿಷ್ಟವಾದ ಯೋಜನೆಗಳನ್ನು ಪ್ರಕಟಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಿಎಂಕೆ ನಾಯಕ ಟಿ.ಆರ್.ಬಾಲು, ಟಿಎಂಸಿ ನಾಯಕಿ ಕಲ್ಯಾಣ ಬ್ಯಾನರ್ಜಿ ಅವರು, ಆಯ-ವ್ಯಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಸಂಸದರಾದ ಬಸವರಾಜ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಗದೀಶ್ ಶೆಟ್ಟರ್, ಜನಪರ ಸಾಮಾನ್ಯವರ್ಗದವರ ಆಯ-ವ್ಯಯವಾಗಿದೆ ಎಂದರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರ್‌ಸ್ವಾಮಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರುಗಳು ಆಯ-ವ್ಯಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಅನಿಶ್ ಶಹಾ ಪ್ರತಿಕ್ರಿಯಿಸಿ, ದೇಶದ ಬೆಳವಣಿಗೆಗೆ ಪೂರಕ ಆಯ-ವ್ಯಯ ರೈತರು, ಯುವಕರು, ಮಹಿಳೆಯರಿಗೆ ಸಹಕಾರಿ ಎಂದು ಹೇಳಿದ್ದಾರೆ.

ಶಿಕ್ಷಣ, ಆರೋಗ್ಯ, ರಕ್ಷಣಾ ಕ್ಷೇತ್ರಗಳಿಗೆ ಅನುದಾನವನ್ನು ಗಣನೀಯವಾಗಿ ಖಡಿತ ಮಾಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಹಲವು ಯೋಜನೆಗಳ ಅನುಷ್ಠಾನಕ್ಕೆ ನೆರವು ಕೋರಿದ್ದೆವು. ಮಾಹಿತಿ ತಂತ್ರಜ್ಞಾನಕ್ಕೆ ನೀಡಿದ್ದ ಅನುದಾನವನ್ನು ಕಡಿಮೆ ಮಾಡಿರುವ ಕೇಂದ್ರ ಸರ್ಕಾರ, ಪರಿಶಿಷ್ಟ ಸಮುದಾಯ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಅನುದಾನವನ್ನು ಖಡಿತ ಮಾಡಿ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೂಲ ಸೌಕರ್ಯ ಅನ್ವೇಷಣೆ ಹಾಗೂ ಅಭಿವೃದ್ಧಿಗೆ ಆಯ-ವ್ಯಯ ಪೂರಕವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಯ-ವ್ಯಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ದೇಶದ ಉತ್ಪಾದನೆ ಹಾಗೂ ಬೆಳವಣಿಗೆಯ ಪ್ರಮಾಣದಲ್ಲಿ ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ16 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ17 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ17 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ17 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ17 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ19 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ19 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending