ಸಿನಿ ಸುದ್ದಿ
HaPpY BiRtHdAy | ಕಭೀ ಕಭೀ ಮೇರೆ ದಿಲ್ ಮೇ| ಗಾನ ಕೋಗಿಲೆ ಮುಖೇಶ್ ಬಗ್ಗೆ ನೀವಿಷ್ಟು ಓದಲೇ ಬೇಕು
ಭಾರತೀಯ ಚಿತ್ರರಂಗದ ಅಮರ ಗಾಯಕರಲ್ಲೊಬ್ಬರಾದ ಮುಖೇಶ್ ಅವರು ಜನಿಸಿದ್ದು ಜುಲೈ 22, 1923ರಲ್ಲಿ. 1950ರ ದಶಕದಿಂದ ಎಪ್ಪತರ ದಶಕದಲ್ಲಿ ಅವರ ಕಂಠದಿಂದ ಹರಿದ ಗಾನ ಸುಧೆ ತಣಿಸದ ಕಿವಿಗಳೇ ಇಲ್ಲ. ತಟ್ಟದ ಹೃದಯಗಳಿಲ್ಲ. ಒಂದಷ್ಟು ನಟನಾಗಿ ಸಿನಿಮಾ ಗಾಯಕನಾಗಿ ಮತ್ತು ಭಕ್ತಿಗೀತೆಗಳ ಹಾಡುಗಾರನಾಗಿ ಮುಖೇಶ್ ಮಾಡಿದ ಮೋಡಿ ಮೋಹಕವಾದದ್ದು.
ಸಂಗೀತ ಶಿಕ್ಷಕರೊಬ್ಬರು ತಮ್ಮ ಸೋದರಿಗೆ ಕಲಿಸಲು ಬರುತ್ತಿದ್ದಾಗ ಅದನ್ನು ಪಕ್ಕದ ಕೋಣೆಯಿಂದ ಆಲಿಸಿ ಹಾಡಲು ಪ್ರಾರಂಭಿಸಿದ ಮುಖೇಶ್ ಮುಂದೆ ಬೆಳೆದ ರೀತಿ ಮಹೋನ್ನತವಾದದ್ದು. ‘ನಿರ್ದೋಷ್’ ಎಂಬ ಚಿತ್ರದಲ್ಲಿ ಗಾಯಕ ನಟನಾಗಿ ಚಿತ್ರಜೀವನ ಪ್ರಾರಂಭಿಸಿದ ಮುಖೇಶ್ ಸುಮಾರು ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ತಮ್ಮ ಗಾನಸುಧೆ ಹರಿಸಿದರು.
ಕೆಲವು ವರ್ಷಗಳ ಕಾಲ ಯುಗಳಗೀತೆಗಳನ್ನು ಹಾಡಿದ ಮುಖೇಶ್ 1945ರಲ್ಲಿ ಪಹಲೀ ನಜರ್ ಚಿತ್ರದಲ್ಲಿ ಮೊದಲ ಬಾರಿಗೆ ‘ದಿಲ್ ಜಲ್ತಾ ಹೈ ತೋ ಜಲ್ನೇ ದೇ’ಹಾಡನ್ನು ಹಾಡಿದರು. ಅದು ಯಶಸ್ವಿಯಾಯಿತು. ಮುಂದೆ ನೌಶಾದ್ ಅವರ ಸಂಗೀತ ನಿರ್ದೇಶನದಲ್ಲಿ ಹಾಡಿದ ‘ಅಂದಾಜ್’ ಚಿತ್ರದಲ್ಲಿ ಹಾಡಿದ ‘ತೂ ಕಹೇ ಅಗರ್…’, ‘ಝೂಮ್ ಝೂಮ್ ಕೇ ನಾಚೇ ಆಜ್…’ , ‘ಹಮ್ ಆಜ್ ಕಹೀಂ ದಿಲ್ ಖೋ ಬೈಠೇ…’ ಮತ್ತು ‘ಟೂಟೇ ನ ದಿಲ್ ಟೂಟೇ ನ…’ ಹಾಡುಗಳಲ್ಲಿ ಮುಖೇಶರ ಸ್ವಂತಿಕೆ ಎದ್ದು ತೋರುತ್ತವೆ
‘ರಾಜ್ ಕಪೂರರ ಗಾಯನ ಸ್ವರ ಮುಖೇಶ್’ ಎಂಬ ಪ್ರಸಿದ್ಧವಾದ ಮಾತು 1948ರಲ್ಲಿ ರಾಜ್ ಕಪೂರ್ ನಿರ್ಮಿಸಿ ನಟಿಸಿದ ‘ಆಗ್’ ಚಿತ್ರದಿಂದ ಆರಂಭವಾಯಿತು. ರಾಜ್ ಕಪೂರರ ‘ಆವಾರಾ’ ಮತ್ತು ‘ಶ್ರೀ 420’ ಚಿತ್ರಗಳಲ್ಲಿ ಮುಖೇಶ್ ಹಾಡಿದ ಹಾಡು ಎಲ್ಲೆಲ್ಲೂ ಪ್ರಸಿದ್ಧವಾಗಿಬಿಟ್ಟವು.
ಹಲವು ಚಿತ್ರಗಳಲ್ಲಿ ಅಭಿನಯ ಮತ್ತು ನಿರ್ಮಾಣ ಮಾಡಲು ಹೋಗಿ ಸೋಲು ಕಂಡ ಮುಖೇಶ್, 1953ರಲ್ಲಿ ಬಿಡುಗಡೆಯಾದ ರಾಜ್ ಕಪೂರರ ಆಹ್ ನಲ್ಲಿ ‘ಛೋಟಿಸೀ ಯಹ್ ಜಿಂದ್ಗಾನೀರೇ…’ ಎಂಬ ಹಾಡನ್ನು ಟಾಂಗೇವಾಲನಾಗಿ ಹಾಡಿ ಅಭಿನಯಿಸಿದ ನಂತರ ಅಭಿನಯಕ್ಕೆ ವಿದಾಯ ಹೇಳಿ ಗಾಯನಕ್ಕಷ್ಟೇ ತಮ್ಮನ್ನು ಮುಡಿಪಿಟ್ಟರು.
1958ರಲ್ಲಿ ದಿಲೀಪ್ ಕುಮಾರ್ ಅಭಿನಯದ ಯಹೂದಿ ಚಿತ್ರದ ‘ಯೆಹ್ ಮೇರಾ ದೀವಾನಾಪನ್ ಹೈ…’ ಹಾಡು ಬಿಡುಗಡೆಯಾದಾಗ ಹಲವುಕಾಲ ನಿಧಾನವಾಗಿ ಹರಿದ ಮುಖೇಶ್ ಅವರ ಬದುಕಿಗೆ ಮತ್ತೊಂದು ಮಿನುಗು ನಕ್ಷತ್ರವಾಯಿತು. ದಿಲೀಪ್ ಕುಮಾರರ ಆ ವರ್ಷದ ಇನ್ನೊಂದು ಚಿತ್ರ ಬಿಮಲ್ ರಾಯ್ ನಿರ್ದೇಶನದ ಮಧುಮತಿ ಚಿತ್ರದಲ್ಲಿ ಸಲಿಲ್ ಚೌಧುರಿ ಸಂಗೀತ ನಿರ್ದೇಶನದಲ್ಲಿ ಹಾಡಿದ ಎಲ್ಲವೂ ಜನಪ್ರಿಯವಾದವು. ಅಲ್ಲದೆ ‘ಪರ್ವರಿಶ್’ ಹಾಗೂ ಮರುವರ್ಷದ ‘ಫಿರ್ ಸುಬಹ್ ಹೋಗೀ’ ಚಿತ್ರಗಳ ಹಾಡುಗಳ ಜತೆಗೆ 1960ರಿಂದ 1976ರ ವರೆಗಿನ ಸಮಯದಲ್ಲಿ ಅತ್ಯಂತ ಹೃದಯಂಗಮ ಹಾಡುಗಳಿಂದ ಮುಖೇಶ್ ರಸಿಕರನ್ನು ರಂಜಿಸಿದರು. ನಾಲ್ಕು ಬಾರಿ ಫಿಲ್ಮ್ ಫೇರ್ ಪ್ರಶಸ್ತಿ ಮತ್ತು ಒಮ್ಮೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಶ್ರೇಷ್ಠ ಹಿನ್ನೆಲೆ ಗಾಯನಕ್ಕಾಗಿ ಪಡೆದರು.
ಅಫ್ಸಾನಾ ಚಿತ್ರದ ‘ಕಿಸ್ಮತ್ ಬಿಗ್ಡೀ, ದುನಿಯಾ ಬದ್ಲೀ’, ಯಹೂದೀ ಚಿತ್ರದ ‘ಯೆಹ್ ಮೇರಾ ದೀವಾನಾಪನ್ ಹೈ’, ದೇವರ್ ಚಿತ್ರದ ‘ಬಹಾರೋಂ ನೆ ಮೇರಾ ಚಮನ್ಈ ಚಿತ್ರದ ‘ಕಹಿಂ ದೂರ್ ಜಬ್ ದಿನ್ ಡಲ್ ಜಾಏ…’ ಕಭೀ ಕಭೀ ಚಿತ್ರದ ‘ಕಭೀ ಕಭೀ ಮೇರೆ ದಿಲ್ ಮೇ’, ಮುಂತಾದ ಹಾಡುಗಳಲ್ಲಿ ಹಾಡಿನಲ್ಲಿ ಮಾಧುರ್ಯದ ಜತೆ ದುಃಖದ ಒಳತೋಟಿಯೊಂದು ಹರಿಯುವದನ್ನು ಅನುಭವಿಸಬಹುದು.
ರಾಜ್ ಕಪೂರರ ಸಂಗೀತಸ್ವರವೆಂದು ಗುರುತಿಸಲ್ಪಟ್ಟ ಮುಖೇಶ್ ಮನೋಜ್ ಕುಮಾರನಿಗೇ ಹೆಚ್ಚು ಹಾಡಿದರಲ್ಲದೆ, ಶಂಕರ್-ಜೈಕಿಶನರ ಸಂಗೀತ ನಿರ್ದೇಶನಕ್ಕಿಂತ ಅಧಿಕವಾಗಿ ಕಲ್ಯಾಣ್ಜೀ-ಆನಂದ್ಜೀಯವರ ನಿರ್ದೇಶನದಲ್ಲಿ ಹಾಡಿದರು. ರಾಜ್ ಕಪೂರರ ಸತ್ಯಮ್ ಶಿವಮ್ ಸುಂದರಮ್ ಚಿತ್ರದಲ್ಲಿ ಲಕ್ಷ್ಮೀಕಾಂತ್-ಪ್ಯಾರೇಲಾಲರ ಸಂಗೀತ ನಿರ್ದೇಶನದಲ್ಲಿ ಧ್ವನಿಮುದ್ರಿಸಲ್ಪಟ್ಟ ‘ಚಂಚಲ್, ಶೀತಲ್, ನಿರ್ಮಲ್, ಕೋಮಲ್ ಸಂಗೀತ್ ಕೀ ದೇವೀ ಸ್ವರ್ ಸಜ್ನೀ’ ಹಾಡು ಕೊನೆಯದಾಯಿತು. ನಂತರ ಲತಾ ಜತೆಗೂಡಿ ಅಮೆರಿಕಾ ಸಂಯುಕ್ತ ಸಂಸ್ಥಾನಗಳಲ್ಲಿ ಸಂಗೀತ ಪರ್ಯಟನೆಗೆ ಹೋದ ಅವರು ಆ ಪ್ರವಾಸದ ಸಮಯದಲ್ಲಿ ನಿಧನರಾದರು. ಕೇವಲ 53ವರ್ಷ ಜೀವಿಸಿದ್ದ ಮುಖೇಶ್ ತಮ್ಮ ಧ್ವನಿಯಲ್ಲಿ ಉಳಿಸಿಹೋದ ಮಾಧುರ್ಯದ ಹಾಡುಗಳು ಚಿರಂತನವಾಗುಳಿದಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ ಹಾಲಿವುಡ್ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ
ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್
ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ