Connect with us

ಸಿನಿ ಸುದ್ದಿ

HaPpY BiRtHdAy | ಕಭೀ ಕಭೀ ಮೇರೆ ದಿಲ್ ಮೇ| ಗಾನ ಕೋಗಿಲೆ ಮುಖೇಶ್ ಬಗ್ಗೆ ನೀವಿಷ್ಟು ಓದಲೇ ಬೇಕು

Published

on

ಫೋಟೋ ಮೇಲಿನ ಸಹಿ ಮುಖೇಶ್ ಅವರದ್ದು

ಭಾರತೀಯ ಚಿತ್ರರಂಗದ ಅಮರ ಗಾಯಕರಲ್ಲೊಬ್ಬರಾದ ಮುಖೇಶ್ ಅವರು ಜನಿಸಿದ್ದು ಜುಲೈ 22, 1923ರಲ್ಲಿ. 1950ರ ದಶಕದಿಂದ ಎಪ್ಪತರ ದಶಕದಲ್ಲಿ ಅವರ ಕಂಠದಿಂದ ಹರಿದ ಗಾನ ಸುಧೆ ತಣಿಸದ ಕಿವಿಗಳೇ ಇಲ್ಲ. ತಟ್ಟದ ಹೃದಯಗಳಿಲ್ಲ. ಒಂದಷ್ಟು ನಟನಾಗಿ ಸಿನಿಮಾ ಗಾಯಕನಾಗಿ ಮತ್ತು ಭಕ್ತಿಗೀತೆಗಳ ಹಾಡುಗಾರನಾಗಿ ಮುಖೇಶ್ ಮಾಡಿದ ಮೋಡಿ ಮೋಹಕವಾದದ್ದು.

ಸಂಗೀತ ಶಿಕ್ಷಕರೊಬ್ಬರು ತಮ್ಮ ಸೋದರಿಗೆ ಕಲಿಸಲು ಬರುತ್ತಿದ್ದಾಗ ಅದನ್ನು ಪಕ್ಕದ ಕೋಣೆಯಿಂದ ಆಲಿಸಿ ಹಾಡಲು ಪ್ರಾರಂಭಿಸಿದ ಮುಖೇಶ್ ಮುಂದೆ ಬೆಳೆದ ರೀತಿ ಮಹೋನ್ನತವಾದದ್ದು. ‘ನಿರ್ದೋಷ್’ ಎಂಬ ಚಿತ್ರದಲ್ಲಿ ಗಾಯಕ ನಟನಾಗಿ ಚಿತ್ರಜೀವನ ಪ್ರಾರಂಭಿಸಿದ ಮುಖೇಶ್ ಸುಮಾರು ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ತಮ್ಮ ಗಾನಸುಧೆ ಹರಿಸಿದರು.

ಕೆಲವು ವರ್ಷಗಳ ಕಾಲ ಯುಗಳಗೀತೆಗಳನ್ನು ಹಾಡಿದ ಮುಖೇಶ್ 1945ರಲ್ಲಿ ಪಹಲೀ ನಜರ್ ಚಿತ್ರದಲ್ಲಿ ಮೊದಲ ಬಾರಿಗೆ ‘ದಿಲ್ ಜಲ್‌ತಾ ಹೈ ತೋ ಜಲ್‌ನೇ ದೇ’ಹಾಡನ್ನು ಹಾಡಿದರು. ಅದು ಯಶಸ್ವಿಯಾಯಿತು. ಮುಂದೆ ನೌಶಾದ್ ಅವರ ಸಂಗೀತ ನಿರ್ದೇಶನದಲ್ಲಿ ಹಾಡಿದ ‘ಅಂದಾಜ್’ ಚಿತ್ರದಲ್ಲಿ ಹಾಡಿದ ‘ತೂ ಕಹೇ ಅಗರ್…’, ‘ಝೂಮ್ ಝೂಮ್ ಕೇ ನಾಚೇ ಆಜ್…’ , ‘ಹಮ್ ಆಜ್ ಕಹೀಂ ದಿಲ್ ಖೋ ಬೈಠೇ…’ ಮತ್ತು ‘ಟೂಟೇ ನ ದಿಲ್ ಟೂಟೇ ನ…’ ಹಾಡುಗಳಲ್ಲಿ ಮುಖೇಶರ ಸ್ವಂತಿಕೆ ಎದ್ದು ತೋರುತ್ತವೆ

‘ರಾಜ್ ಕಪೂರರ ಗಾಯನ ಸ್ವರ ಮುಖೇಶ್’ ಎಂಬ ಪ್ರಸಿದ್ಧವಾದ ಮಾತು 1948ರಲ್ಲಿ ರಾಜ್ ಕಪೂರ್ ನಿರ್ಮಿಸಿ ನಟಿಸಿದ ‘ಆಗ್’ ಚಿತ್ರದಿಂದ ಆರಂಭವಾಯಿತು. ರಾಜ್ ಕಪೂರರ ‘ಆವಾರಾ’ ಮತ್ತು ‘ಶ್ರೀ 420’ ಚಿತ್ರಗಳಲ್ಲಿ ಮುಖೇಶ್ ಹಾಡಿದ ಹಾಡು ಎಲ್ಲೆಲ್ಲೂ ಪ್ರಸಿದ್ಧವಾಗಿಬಿಟ್ಟವು.

ಹಲವು ಚಿತ್ರಗಳಲ್ಲಿ ಅಭಿನಯ ಮತ್ತು ನಿರ್ಮಾಣ ಮಾಡಲು ಹೋಗಿ ಸೋಲು ಕಂಡ ಮುಖೇಶ್, 1953ರಲ್ಲಿ ಬಿಡುಗಡೆಯಾದ ರಾಜ್ ಕಪೂರರ ಆಹ್ ನಲ್ಲಿ ‘ಛೋಟಿಸೀ ಯಹ್ ಜಿಂದ್‌ಗಾನೀರೇ…’ ಎಂಬ ಹಾಡನ್ನು ಟಾಂಗೇವಾಲನಾಗಿ ಹಾಡಿ ಅಭಿನಯಿಸಿದ ನಂತರ ಅಭಿನಯಕ್ಕೆ ವಿದಾಯ ಹೇಳಿ ಗಾಯನಕ್ಕಷ್ಟೇ ತಮ್ಮನ್ನು ಮುಡಿಪಿಟ್ಟರು.

1958ರಲ್ಲಿ ದಿಲೀಪ್ ಕುಮಾರ್ ಅಭಿನಯದ ಯಹೂದಿ ಚಿತ್ರದ ‘ಯೆಹ್ ಮೇರಾ ದೀವಾನಾಪನ್ ಹೈ…’ ಹಾಡು ಬಿಡುಗಡೆಯಾದಾಗ ಹಲವುಕಾಲ ನಿಧಾನವಾಗಿ ಹರಿದ ಮುಖೇಶ್ ಅವರ ಬದುಕಿಗೆ ಮತ್ತೊಂದು ಮಿನುಗು ನಕ್ಷತ್ರವಾಯಿತು. ದಿಲೀಪ್ ಕುಮಾರರ ಆ ವರ್ಷದ ಇನ್ನೊಂದು ಚಿತ್ರ ಬಿಮಲ್ ರಾಯ್ ನಿರ್ದೇಶನದ ಮಧುಮತಿ ಚಿತ್ರದಲ್ಲಿ ಸಲಿಲ್ ಚೌಧುರಿ ಸಂಗೀತ ನಿರ್ದೇಶನದಲ್ಲಿ ಹಾಡಿದ ಎಲ್ಲವೂ ಜನಪ್ರಿಯವಾದವು. ಅಲ್ಲದೆ ‘ಪರ್ವರಿಶ್’ ಹಾಗೂ ಮರುವರ್ಷದ ‘ಫಿರ್ ಸುಬಹ್ ಹೋಗೀ’ ಚಿತ್ರಗಳ ಹಾಡುಗಳ ಜತೆಗೆ 1960ರಿಂದ 1976ರ ವರೆಗಿನ ಸಮಯದಲ್ಲಿ ಅತ್ಯಂತ ಹೃದಯಂಗಮ ಹಾಡುಗಳಿಂದ ಮುಖೇಶ್ ರಸಿಕರನ್ನು ರಂಜಿಸಿದರು. ನಾಲ್ಕು ಬಾರಿ ಫಿಲ್ಮ್ ಫೇರ್ ಪ್ರಶಸ್ತಿ ಮತ್ತು ಒಮ್ಮೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಶ್ರೇಷ್ಠ ಹಿನ್ನೆಲೆ ಗಾಯನಕ್ಕಾಗಿ ಪಡೆದರು.

ಅಫ್‌ಸಾನಾ ಚಿತ್ರದ ‘ಕಿಸ್‌ಮತ್ ಬಿಗ್‌ಡೀ, ದುನಿಯಾ ಬದ್‌ಲೀ’, ಯಹೂದೀ ಚಿತ್ರದ ‘ಯೆಹ್ ಮೇರಾ ದೀವಾನಾಪನ್ ಹೈ’, ದೇವರ್ ಚಿತ್ರದ ‘ಬಹಾರೋಂ ನೆ ಮೇರಾ ಚಮನ್ಈ ಚಿತ್ರದ ‘ಕಹಿಂ ದೂರ್ ಜಬ್ ದಿನ್ ಡಲ್ ಜಾಏ…’ ಕಭೀ ಕಭೀ ಚಿತ್ರದ ‘ಕಭೀ ಕಭೀ ಮೇರೆ ದಿಲ್ ಮೇ’, ಮುಂತಾದ ಹಾಡುಗಳಲ್ಲಿ ಹಾಡಿನಲ್ಲಿ ಮಾಧುರ್ಯದ ಜತೆ ದುಃಖದ ಒಳತೋಟಿಯೊಂದು ಹರಿಯುವದನ್ನು ಅನುಭವಿಸಬಹುದು.

ರಾಜ್ ಕಪೂರರ ಸಂಗೀತಸ್ವರವೆಂದು ಗುರುತಿಸಲ್ಪಟ್ಟ ಮುಖೇಶ್ ಮನೋಜ್ ಕುಮಾರನಿಗೇ ಹೆಚ್ಚು ಹಾಡಿದರಲ್ಲದೆ, ಶಂಕರ್-ಜೈಕಿಶನರ ಸಂಗೀತ ನಿರ್ದೇಶನಕ್ಕಿಂತ ಅಧಿಕವಾಗಿ ಕಲ್ಯಾಣ್‌ಜೀ-ಆನಂದ್‌ಜೀಯವರ ನಿರ್ದೇಶನದಲ್ಲಿ ಹಾಡಿದರು. ರಾಜ್ ಕಪೂರರ ಸತ್ಯಮ್ ಶಿವಮ್ ಸುಂದರಮ್ ಚಿತ್ರದಲ್ಲಿ ಲಕ್ಷ್ಮೀಕಾಂತ್-ಪ್ಯಾರೇಲಾಲರ ಸಂಗೀತ ನಿರ್ದೇಶನದಲ್ಲಿ ಧ್ವನಿಮುದ್ರಿಸಲ್ಪಟ್ಟ ‘ಚಂಚಲ್, ಶೀತಲ್, ನಿರ್ಮಲ್, ಕೋಮಲ್ ಸಂಗೀತ್ ಕೀ ದೇವೀ ಸ್ವರ್ ಸಜ್‌ನೀ’ ಹಾಡು ಕೊನೆಯದಾಯಿತು. ನಂತರ ಲತಾ ಜತೆಗೂಡಿ ಅಮೆರಿಕಾ ಸಂಯುಕ್ತ ಸಂಸ್ಥಾನಗಳಲ್ಲಿ ಸಂಗೀತ ಪರ್ಯಟನೆಗೆ ಹೋದ ಅವರು ಆ ಪ್ರವಾಸದ ಸಮಯದಲ್ಲಿ ನಿಧನರಾದರು. ಕೇವಲ 53ವರ್ಷ ಜೀವಿಸಿದ್ದ ಮುಖೇಶ್ ತಮ್ಮ ಧ್ವನಿಯಲ್ಲಿ ಉಳಿಸಿಹೋದ ಮಾಧುರ್ಯದ ಹಾಡುಗಳು ಚಿರಂತನವಾಗುಳಿದಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

Published

on

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ.

ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂ.ಇ.ಎಸ್ ಗ್ರೌಂಡ್ ನಲ್ಲಿ ‘ಘೋಸ್ಟ್’ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ಜೀ ಕನ್ನಡ.

ಸಂದೇಶ್‍ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಘೋಸ್ಟ್’ ಚಿತ್ರವನ್ನು ಆರ್‍.ಜೆ. ಶ್ರೀನಿ ಬರೆದು, ನಿರ್ದೇಶಿಸಿದ್ದು, ಅರ್ಜುನ್‌ ಜನ್ಯಾ ಸಂಗೀತವಿದೆ. ಶಿವರಾಜಕುಮಾರ್ ಜೊತೆ ಮಲಯಾಳಂ ನಟ ಜಯರಾಮ್‌, ಹಿಂದಿ ನಟ ಅನುಪಮ್‌ ಖೇರ್‌, ಅರ್ಚನಾ ಜೋಯಿಸ್‌, ಸತ್ಯಪ್ರಕಾಶ್‌, ನಿರ್ದೇಶಕ ಎಂಜಿ ಶ್ರೀನಿವಾಸ್‌ ಹಾಗೂ ಇನ್ನಿತರರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ4 days ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ6 days ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ6 days ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ1 week ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ2 weeks ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ2 weeks ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ2 weeks ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ2 weeks ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

ದಿನದ ಸುದ್ದಿ2 weeks ago

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು...

Trending