Connect with us

ಲೈಫ್ ಸ್ಟೈಲ್

‘ಹಾವಿನ ದ್ವೇಷ ಹನ್ನೆರಡು ವರ್ಷ’ ಎಂಬ ನುಡಿ‌ ಸುಳ್ಳು | ಹಾವಿನ ಬಗೆಗೆ ನೀವಿಷ್ಟು ತಿಳಿಯಲೇ ಬೇಕು..!

Published

on

ದಿಯೊಂದರ ಪ್ರಕಾರ ನಮ್ಮ ದೇಶದಲ್ಲಿ ಪ್ರತಿ ವರ್ಷಕ್ಕೆ ಸರಿ ಸುಮಾರು 2,50,000 ಜನಗಳು ಹಾವುಗಳಿಂದ ಕಡಿತಕ್ಕೊಳಗಾಗುತ್ತಾರೆ. ಇದರಲ್ಲಿ 50,000 ಜನರು ಪ್ರಾಣ ಕಳೆದುಕೊಳ್ಳುತ್ತಾರೆ. ಇದರಲ್ಲಿ 725 ಜನ ಹಾವು ಕಚ್ಚಿದೆ ಎಂಬ ಭಯಕ್ಕೆ ಸಾಯುತ್ತಾರೆ.ಮೊದಲು ಸ್ವಲ್ಪ ಹಾವಿನ ಬಗ್ಗೆ ತಿಳಿಯೋಣ.

ವೈಜ್ಞಾನಿಕ ವರ್ಗೀಕರಣ

ಸಾಮ್ರಾಜ್ಯ : ಪ್ರಾಣಿಗಳು
ವಿಭಾಗ : ಕಾರ್ಡೇಟ
ಉಪವಿಭಾಗ: ಕಶೇರುಕ
ವರ್ಗ : ಸರೀಸೃಪಗಳು
ಗಣ : ಸ್ಕ್ವಾಮಾಟ

ಹಾವು ಅಥವಾ ಉರಗ. ನೆಲದ ಮೇಲೆ ಹರಿದಾಡುತ್ತ, ಹೊರಳುತ್ತ, ಅಂಕು ಡೊಂಕಾಗಿ ಚಲಿಸುವ ಈ ಉರಗಕ್ಕೆ ಎದೆಮೂಳೆಗಳಿಲ್ಲ. ಬೆನ್ನು ಮೂಳೆ ಹಾಗು ಪಕ್ಕೆಲುಬುಗಳಿವೆ. ಎದೆ ಮೂಳೆ ಇಲ್ಲದ ಕಾರಣ ಪಕ್ಕೆಲುಬು ಸಡಿಲವಾಗಿದೆ. ತಲೆ ಬುರುಡೆ ಮೂಳೆಗಳು ಅಳ್ಳಕವಾಗಿದೆ. ಹಾಗಾಗಿ ಅವು ತಲೆಯನ್ನು ಸುಲಭವಾಗಿ ಆಡಿಸಬಹುದು. ಹಾವಿನ ಮಿದುಳಿನ ರಚನೆ ಸರಳವಾಗಿದ್ದು ಇನ್ನಿತರ ಸರೀಸೃಪಗಳ ಮಿದುಳನ್ನೆ ಹೋಲುತ್ತದೆ. ಹಾವಿಗೆ ವಿವೇಚನೆಯಾಗಲೀ ಸ್ಮರಣಶಕ್ತಿಯಾಗಲೀ ಇಲ್ಲ. ‘ಹಾವಿನ ದ್ವೇಷ ಹನ್ನೆರಡು ವರ್ಷ’ ಎಂಬ ನುಡಿ ಸತ್ಯವಲ್ಲ. ಹಾವು ಘಟನೆಗಳನ್ನು ನೆನಪಿನಲ್ಲಿಟ್ಟು ಕೊಳ್ಳಲಾಗುವುದಿಲ್ಲ. ಹಾವುಗಳ ಆಯಸ್ಸು 20 ರಿಂದ 30 ವರ್ಷಗಳೆಂದು ಅಂದಾಜು.
ಹಾವುಗಳ ಬಣ್ಣ ವರ್ಣರಂಜಿತ ಮತ್ತು ವೈವಿಧ್ಯಮಯ. ಮೇಲ್ಭಾಗದಲ್ಲಿ ಕಪ್ಪು,ಕಂದು,ಹಳದಿ ಅಥವಾ ಗೋಧಿ ಬಣ್ಣ, ಕೆಳಭಾಗದಲ್ಲಿ ಬಿಳಿ ಇಲ್ಲವೆ ತಿಳಿಹಳದಿ ಬಣ್ಣ. ಕೆಲ ಹಾವುಗಳು ಬಣ್ಣ ಅವು ವಾಸಿಸುವ ಪರಿಸರದ ಬಣ್ಣವನ್ನೇ ಹೋಲುತ್ತದೆ.

ಹಾವಿನ ಹುಟ್ಟು

ಹಾವುಗಳ ಪಳೆಯುಳಿಕೆಗಳು ದೊರೆಯುವುದು ಅಪರೂಪ. ದೊರತ ಪಳೆಯುಳಿಕೆಗಳಲ್ಲಿ ಅತ್ಯಂತ ಹಳೆಯದು ಎಂದರೆ ಸುಮಾರು 112 ರಿಂದ 94 ಮಿಲಿಯನ್ ವರ್ಷಗಳಷ್ಟು ಪ್ರಾಚೀನವಾದುದು. ಶರೀರಶಾಸ್ತ್ರದ ಅಧ್ಯಯನದಿಂದ ಹಾವುಗಳು ಹಲ್ಲಿಗಳ ಜಾತಿಯಿಂದ ಉಗಮವಾಗಿರುತ್ತವೆ ಎಂದು ತಿಳಿದು ಬಂದಿದೆ.

King cobra | ಕಾಳಿಂಗ ಸರ್ಪ

ಉದ್ದ ಮತ್ತು ತೂಕ

ಸುಮಾರು 20 ಕುಟುಂಬಕ್ಕೆ ಸೇರಿದ 3600ಕ್ಕೂ ಹೆಚ್ಚು ಜಾತಿಯ ಹಾವುಗಳು ಪ್ರಪಂಚದಾದ್ಯಂತ ಕಾಣಸಿಗುತ್ತವೆ. ಅಂಟಾರ್ಟಿಕವನ್ನು ಹೊರತುಪಡಿಸಿ ಉಳಿದ ಎಲ್ಲಾ ಖಂಡಗಳಲ್ಲಿಯೂ ಸಮುದ್ರ ಹಾಗೂ ಸುಮಾರು 16000ಅಡಿ ಎತ್ತರದಲ್ಲಿ ಹಿಮಾಲಯ ಪರ್ವತ ಶ್ರೇಣಿಯಲ್ಲಿ ಕೂಡಾ ಹಾವುಗಳು ಕಾಣಸಿಗುತ್ತವೆ. ಹಾವಿನ ಶರೀರ ಉರುಳೆ ಆಕಾರದಲ್ಲಿದೆ. ಉದ್ದ 12ಸೆಂಮೀ-10ಮೀ ವರೆಗೂ ಇರುವುದು. ಅದರೆ ಪಳೆಯುಳಿಕೆ ಸಿಕ್ಕಿರುವ ಪ್ರಕಾರ species Titanoboa cerrejonenis ಎಂಬುದು 12.8ಮೀ [42feet] ಉದ್ದ ಇತ್ತು.

ಶರೀರ ರಚನೆ ಮತ್ತು ಪೊರೆ ಕಳುಚುವಿಕೆ

ಹಾವಿನ ಶರೀರದ ಹೊರಭಾಗದಲ್ಲಿ ಕೈ ಕಾಲುಗಳು ಇಲ್ಲದಿರುವ ಕಾರಣ ಅವು ತಮ್ಮ ಕೆಳಭಾಗದಿಂದ ತೆವಳುತ್ತ ಮುಂದೆ ಸಾಗುತ್ತದೆ. ಕೈ ಕಾಲುಗಳಿಲ್ಲದಿದ್ದರೂ ಬೆನ್ನುಮೂಳೆ, ಪಕ್ಕೆಲುಬುಗಳು ವಿಭಿನ್ನವಾಗಿ ಮಾರ್ಪಾಡಾಗಿರುವುದರಿಂದ, ಶರೀರದ ಮುಂದಿನ ಅರ್ಧಭಾಗವನ್ನು ನೆಲದಿಂದ ಮೇಲಕ್ಕೆ ಎತ್ತಬಲ್ಲವು.ಬೆಳೆವಣಿಗೆಯಿಲ್ಲದ ಹೊರಚರ್ಮದ ಭಾಗವನ್ನು ಆಗಾಗ್ಗೆ ಹಾವು ಕಳಚಿ ಹೊಸ ಚರ್ಮವನ್ನು ಪಡೆಯುತ್ತದೆ. ಇದನ್ನು ಪೊರೆ ಕಳಚುವುದು ಎನ್ನುತ್ತಾರೆ. ಹಾವು ಬೆಳೆಯುವ ವರ್ಷಗಳಲ್ಲಿ ಹೆಚ್ಚು ಬಾರಿಯೂ, ವೃದ್ದ್ಯಾಪಕ್ಕೆ ಕಾಲಿರುಸುತ್ತಿದ್ದಂತೆ ಕಡಿಮೆ ಬಾರಿ ಪೊರೆ ಕಳಚುತ್ತದೆ. ಪೊರೆ ಕಳಚಿದ ಬಳಿಕ ಹೊಸ ಚರ್ಮ ಹಳೆ ಚರ್ಮಕ್ಕಿಂತ ಸ್ವಲ್ಪ ವಿಸ್ತಾರವಿರುವುದರಿಂದ ಮತ್ತೆ ಶರೀರದ ಒಳಭಾಗದ ಅಂಗಗಳು ಬೆಳೆಯಲು ಅವಕಾಶವಾಗುತ್ತದೆ.

ದೃಷ್ಟಿ ಮತ್ತು ಶಬ್ಧ ಗ್ರಹಿಸುವಿಕೆ

ಹಾವಿನ ರೆಪ್ಪೆಗಳು ಒಂದಕ್ಕೊಂದು ಕೂಡಿಕೊಂಡಿರುತ್ತವೆ. ಅವು ಅಲುಗಾಡುವುದಿಲ್ಲ. ಕಣ್ಣಿನ ಹೊರಭಾಗದಲ್ಲಿ ಪಾರದರ್ಶಕ ತೊಪ್ಪಿಯಂತಿರುವ ವಸ್ತು ಆವರಿಸಿರುತ್ತದೆ. ಅದರಿಂದ ಅವು ಯಾವಾಗಲೂ ಕಣ್ಣು ತೆರೆದಿರುವಂತೆ ಕಾಣಿಸುತ್ತದೆ. ಹೀಗಾಗಿ ಹಾವು ನಿದ್ರಿಸುತ್ತಿದೆಯೋ ಅಥವಾ ಎಚ್ಚರದಿಂದ ಇದೆಯೋ ಎಂದು ತಿಳಿಯುವುದಿಲ್ಲ. ಹಾವುಗಳ ದೃಷ್ಟಿ ಮಂದ. ಮುಂದೆ ಇರುವ ವಸ್ತುಗಳನ್ನು ಸರಿಯಾಗಿ ಗುರುತಿಸಲಾರವು ಮತ್ತು ಬಣ್ಣಗಳು ಕಾಣುವುದಿಲ್ಲ.ಹಾವುಗಳಿಗೆ ಹೊರ ಕಿವಿಗಳಿಲ್ಲ, ಕಿವಿ ತಮಟೆಯೂ ಇಲ್ಲ. ಅವುಗಳಿಗೆ ಕೇವಲ ಒಳಕಿವಿ ಮಾತ್ರ ಇರುತ್ತದೆ. ಆದ್ದರಿಂದ ಹಾವುಗಳಿಗೆ ಗಾಳಿಯ ಮೂಲಕ ಪ್ರಸಾರವಾಗುವ ಯಾವ ಶಬ್ದವೂ ಕೇಳಿಸಲಾರದು. ಅವಕ್ಕೆ ಭೂಮಿಯ ಮೇಲುಂಟಾಗುವ ಕಂಪನಗಳನ್ನು ಅವು ಗ್ರಹಿಸಬಲ್ಲವು.

ನಾಲಿಗೆ ಮತ್ತು ಆಹಾರನ್ವೇಷಣೆ

ಹಾವಿನ ನಾಲಿಗೆ ಉದ್ದವಿದ್ದು ಮುಂಭಾಗದಲ್ಲಿ ಸೀಳುಗಳಿವೆ. ಮೇಲಿನ ತುಟಿ ಪುಟ್ಟ ಕಮಾನಿನಾಕಾರದಲ್ಲಿದ್ದು ಬಾಯಿ ಮುಚ್ಚಿಕೊಂಡಾಗ ಚಿಕ್ಕ ರಂಧ್ರವೇರ್ಪಡುತ್ತದೆ. ಈ ರಂಧ್ರದ ಮೂಲಕ ಹಾವು ಆಗಾಗ ನಾಲಿಗೆಯನ್ನು ಹೊರಚಾಚುತ್ತಿರುತ್ತದೆ. ಎರಡು ಸೀಳುಗಳು ಪ್ರತ್ಯೇಕವಾಗಿರುವಂತೆ ಕಾಣುವುದರಿಂದ ಹಾವಿಗೆ ಎರಡು ನಾಲಿಗೆಗಳಿವೆ ಎಂದು ತಪ್ಪಾಗಿ ಭಾವಿಸಲಾಗುತ್ತದೆ ಈ ನಾಲಿಗೆ ವಾಸನೆಯನ್ನು ಕಂಡುಹಿಡಿಯಲು ಬಳುಸುತ್ತವೆ. ಮೇಲ್ದವಡೆಯಲ್ಲಿ ಎರಡು ಪುಟ್ಟ ಕುಳಿಗಳಿವೆ. ಜಕೋಬ್ಸನ್ ಅಂಗ ಎಂದು ಅದರ ಹೆಸರು. ನಾಲಗೆಯು ಈ ಅಂಗಕ್ಕೆ ಗಾಳಿಯಲ್ಲಿರುವ ರಾಸಾಯಾನಿಕಗಳನ್ನು ತಲಪಿಸುತ್ತದೆ. ಆಗ ಇದು ವಾಸನೆಯನ್ನು ಗ್ರಹಿಸುತ್ತದೆ. ವಾತಾವರಣದಲ್ಲಿನ ಅನೇಕ ಏರಿಳಿತವನ್ನು ಕೂಡ ನಾಲಿಗೆ ಗ್ರಹಿಸಬಲ್ಲದು. ಕಾಳಿಂಗ ಸರ್ಪ 100ಮೀಟರ್ ದೂರದಲ್ಲಿ ಚಲಿಸುತ್ತಿರುವ ತನ್ನ ಬೇಟೆಯನ್ನು ಪತ್ತೆ ಹಚ್ಚುತ್ತದೆ. ಇಲಿ, ಹೆಗ್ಗಣಗಳಂಥ ಪುಟ್ಟ ಸಸ್ತನಿಗಳು, ಪಕ್ಷಿಗಳು, ಸರೀಸೃಪಗಳು, ಕಪ್ಪೆ, ಮೀನುಗಳು, ಕೀಟಗಳು ಇತ್ಯಾದಿ ಹಾವಿನ ಆಹಾರ. ಕೆಲವು ಹಾವುಗಳು ವಿವಿಧ ಪ್ರಾಣಿ, ಪಕ್ಷಿಗಳ ಮೊಟ್ಟೆಗಳನ್ನು ತಿನ್ನುತ್ತವೆ. ಸಸ್ಯಹಾರೀ ಹಾವು ಇಲ್ಲವೇ ಇಲ್ಲ.

ವಿಷಗ್ರಂಥಿ ಮತ್ತು ಹಲ್ಲುಗಳು

ವಿಷದ ಹಾವುಗಳ ತಲೆ ಎರಡೂ ಪಕ್ಕದಲ್ಲಿ ಒಂದೊಂದರಂತೆ ವಿಷ ಸ್ರವಿಸುವ ಒಂದು ಜೊತೆ ಗ್ರಂಥಿ ಇದೆ. ಹಾವಿನ ವಿಷದ ಗ್ರಂಥಿಗಳಂದರೆ ಮಾರ್ಪಾಡಾಗಿರುವ ಎಂಜಲು ಗ್ರಂಥಿಗಳು. ಕಣ್ಣಿನ ಕೆಳಭಾಗ ಹಾಗೂ ಮೇಲ್ದವಡೆಗಳ ನಡುಭಾಗದಲ್ಲಿ ಇವುಗಳ ನೆಲೆ. ಗ್ರಂಥಿಯ ಮುಂಭಾಗದಲ್ಲಿ ನಾಳವಿದ್ದು ಬಾಯಿಯ ಭಾಗದಲ್ಲಿ ವಿಷದ ಹಲ್ಲಿಗೆ ಜೋಡಿಕೊಂಡಿರುತ್ತದೆ. ವಿಷದ ಹಲ್ಲುಗಳಿಗಿಂತ ದೊಡ್ಡವು ಮತ್ತು ಚೂಪು. ಕೆಲವು ಹಾವುಗಳಲ್ಲಿ ವಿಷದ ಹಲ್ಲುಗಳು ಕೊಳವೆಯಂತಿರಬಹುದು, ಇನ್ನು ಕೆಲವು ಹಾವುಗಳಲ್ಲಿ ಒಂದು ಕಡೆ ತೆರೆದಿದ್ದು ಕಮಾನಿನಂತಿರಬಹುದು. ಆದ್ದರಿಂದ ಕೆಲವು ಪರಿಣಿತರು ಕಡಿತದ ಗಾಯ ನೋಡಿಯೇ ಕಚ್ಚಿದ ಹಾವಿನ ಪ್ರಭೇದ ಊಹಿಸಬಲ್ಲರು. ವಿಷರಹಿತ ಹಾವುಗಳಲ್ಲಿ ವಿಷಗ್ರಂಥಿಗಳ ಬೆಳೆವಣಿಗೆ ಅಪೂರ್ಣ ಅಥವಾ ಬೆಳೆವಣಿಗೆಯೇ ಇರುವುದಿಲ್ಲ. ಇನ್ನು ಕೆಲವು ಹಾವುಗಳಲ್ಲಿ ವಿಷದ ಹಲ್ಲುಗಳು ಮೇಲ್ದವಡೆಯ ಮುಂಭಾಗದಲ್ಲಿಯೇ ಇರುತ್ತದೆ. ವಿಷಗ್ರಂಥಿಯ ನಳ ಈ ಹಲ್ಲಿನ ಕೆಳಭಾಗದಲ್ಲಿ ಜೋಡಿಕೊಂಡಿರುತ್ತದೆ. ಈ ಹಲ್ಲುಗಳನ್ನು ಕಿತ್ತರೆ, ಕೆಲವೇ ದಿನಗಳಲ್ಲಿ ಅವುಗಳ ಪಕ್ಕದ ಹಲ್ಲುಗಳೂ ವಿಷದ ಹಲ್ಲುಗಳಾಗಿ ಮಾರ್ಪಡುತ್ತವೆ.

Cobra | ನಾಗರಹಾವು

ಭಾರತದಲ್ಲಿ ಎಷ್ಟು ವಿಷಪೂರಿತ ಹಾವುಗಳು..?

ನಮ್ಮ ದೇಶದಲ್ಲಿ 4 ಜಾತಿಯ ಹಾವುಗಳು ಮಾತ್ರ ವಿಷಪೂರಿತ. ಈ ಜಾತಿಯ ಹಾವು ಕಚ್ಚಿದರೆ ಮಾತ್ರ ಮನುಷ್ಯ ಸಾಯುತ್ತಾನೆ ಹೊರೆತು[ಅಗತ್ಯ ಚಿಕಿತ್ಸೆ ಕೊಡಿಸದಿದ್ದಾಗ] ಬೇರೆ ಎಲ್ಲಾ ಹಾವುಗಳು ವಿಷರಹಿತ.

ಈ 4 ಜಾತಿಯ ಹಾವುಗಳು ಯಾವುವುವೆಂದರೆ

1. King Cobra ಅಥವಾ ಕಾಳಿಂಗ
2. Cobra ಅಥವಾ ನಾಗರ ಹಾವು
3. Viper ಅಥವಾ ಕನ್ನಡಿ ಹಾವು ಅಥವಾ ಕೊಳಕು ಮಂಡಲ
4. Common krait ಅಥವಾ ಕಡಂಬಳ ಅಥವಾ ಕಟ್ಟು ಹಾವು

ಈ ವಿಷಪೂರಿತ ಹಾವುಗಳು ಕೂಡ ಯಾರಿಗೂ ಸುಮ್ಮನೆ ಸುಮ್ಮನೆ ಕಚ್ಚುವುದಿಲ್ಲ. ನಾವು ಅಚಾನಕ್ಕಾಗಿ ಅವುಗಳನ್ನು ತುಳಿದಾಗ ಅಥವಾ ಬೇಕೆಂದೇ ಹಿಂಸೆ ಮಾಡಿದಾಗ ಮಾತ್ರ ಅವುಗಳ ಪ್ರಾಣ ಉಳಿಸಿಕೊಳ್ಳಲು ಅವು ಕಚ್ಚುತ್ತವೆ.  ಪ್ರಕೃತಿಯಲ್ಲಿ ವಿಷರಹಿತ ಹಾವುಗಳಿಗೂ, ವಿಷಪೂರಿತ ಹಾವುಗಳಿಗೂ ತಮ್ಮ ಪ್ರಾಣ ರಕ್ಷಣೆ ಮಾಡಿಕೊಳ್ಳಲು ಅವುಗಳದ್ದೇ ಆದ ಒಂದು ರಕ್ಷಣಾ ತಂತ್ರವು ಇರುತ್ತದೆ. ಯಾವಾಗ ತಮ್ಮ ಪ್ರಾಣಕ್ಕೆ ಸಂಚಕಾರ ಬಂದಿದೆ ಎಂದು ಅನ್ನಿಸಿದಾಗ ಮಾತ್ರ ಅವು ರಕ್ಷಣ ತಂತ್ರವನ್ನು ಬಳಸಿಕೊಳ್ಳುತ್ತವೆ.

ಹಾವುಗಳಿಂದ ಮನುಷ್ಯನಿಗೆ ಆಗುವ ಉಪಯೋಗಗಳು

ಹಾವುಗಳು ವಿಷಯುಕ್ತ ಪ್ರಾಣಿಗಳೆನೋ ನಿಜ ಜೊತೆಗೆ ಇದು ಮಾನವನಿಗೆ ಮಾತ್ರವಲ್ಲ ಬೇರೆ ಪ್ರಾಣಿಗಳಿಗೂ ಜೀವಹಾನಿಯಾಗುತ್ತದೆ. ಆದರೆ ಇದಿಷ್ಟೇ ಕಾರಣದಿಂದ ಹಾವುಗಳೆಲ್ಲವೂ ಹಾನಿಕಾರಕ ಎಂದು ಪರಿಗಣಿಸಬಾರದು. ವಿಷರಹಿತ ಹಾಗೂ ವಿಷಯುಕ್ತ ಹಾವು ಎಲ್ಲವುಗಳಿಂದಲೂ ನಮಗೆ ಸಾಕಷ್ಟು ಉಪಯೋಗಗಳಿವೆ.

1. ಪರಿಸರದ ಸಮತೋಲನ ಸಾಧಿಸುವಲ್ಲಿ ಹಾವುಗಳ ಪಾತ್ರ ತುಂಬಾನೇ ಮುಖ್ಯ. ಇಲಿ, ಹೆಗ್ಗಣ, ಕೀಟ, ಪಕ್ಷಿ ಮುಂತಾದವನ್ನು ಹಾವುಗಳು ಆಹಾರವಾಗಿ ಸೇವಿಸುವುದರಿಂದ ಇದು ನಮ್ಮ ದವಸ ಧಾನ್ಯಗಳಿಗೆ ಉಂಟಗುವ ಹಾನಿಯನ್ನು ಕಡಿಮೆಗೊಳಿಸುತ್ತವೆ ಅಲ್ಲದೆ, ಈ ಹಾವುಗಳೇ ಇತರೆ ಕೆಲವು ಜೀವಿಗಳಿಗೆ [ಉದಾ: ಕೆಲವು ಪಕ್ಷಿಗಳಿಗೆ] ಆಹಾರವಾಗುವುದರಿಂದ ನಿಸರ್ಗದ ಆಹಾರ ಸರಪಳಿಯಲ್ಲಿ ಒಂದು ಕೊಂಡಿಯೂ ಆಗಿದೆ.

2. ಹಾವಿನ ವಿಷದಲ್ಲಿ ಫಾಸ್ಫೊಡೈಯೆಸ್ಟಿರೇಸ್ ಎಂಬ ಕಿಣ್ವವಿದೆ. ಇದನ್ನು ಕೆಲವು ಸರಳ ರಾಸಾಯನಿಕ ಕ್ರಿಯೆಗಳಿಂದ ಬೇರ್ಪಡಿಸಬಹುದು. ಈ ಕಿಣ್ವ ಜೀವಿಗಳ ಅನುವಂಶೀಯತೆಗೆ ಕಾರಣವಾಗುವ ಜೈವಿಕ ವಸ್ತು ಡಿಎನ್‍ಎಯ ತಂತುಗಳನ್ನು ಬೇರ್ಪಡಿಸುತ್ತದೆ. ಇದನ್ನು ಬಳಸಿ ಡಿಎನ್‍ಎಯ ರಚನೆ ಹಾಗೂ ಕಾರ್ಯವಿಧಾನಗಳನ್ನು ಅರಿಯಲು ಸಾಧ್ಯವಾಗಿದೆ.

Viper | ಕೊಳಕು ಮಂಡಲ ಹಾವು

3. ನರಕೋಶಗಳನ್ನು ನಿಷ್ಕ್ರಿಯಗೊಳಿಸುವ ವಿಷವನ್ನು ಬಳಸಿ ಪಾರ್ಶ್ವವಾಯು ಅಥವಾ ನರಮಂಡಲ ಸಂಬಂಧೀ ರೋಗಗಳಿಗೆ ಔಷಧಿ ತಯಾರಿಸಲಾಗುತ್ತದೆ. ವೈಜ್ಞಾನಿಕವಾಗಿ ಈ ಪ್ರಯತ್ನ ಇನ್ನೂ ಸಫಲವಾಗಿಲ್ಲದಿದ್ದರೂ ಕೆಲವೂ ಸ್ಥಳೀಯ ವೈದ್ಯ ಪದ್ಧತಿಯಲ್ಲಿ ಈ ತಂತ್ರ ಬಳಕೆಯಲ್ಲಿದೆ.

4. ವಿಷದ ಘಟಕವಾದ ಆ್ಯಂಕ್ರೊಡ್ ಎಂಬ ವಸ್ತುವನ್ನು ಬೇರ್ಪಡಿಸಿ ಅದನ್ನು ನರರೋಗ ಚಿಕಿತ್ಸೆಗೆ ಬಳಸುವ ಪ್ರಯತ್ನವೂ ನಡೆಯುತ್ತಿದೆ. ಕ್ರೀಡಾಪಟುಗಳ ಕಾಲಿನ ಅಥವಾ ಶರೀರದ ಕೆಲವು ಮಾಂಸಖಂಡಗಳು ಆಟದ ಒತ್ತಡದಿಂದ ಕ್ರೀಯಾಹೀನವಾಗುತ್ತವೆ. ಆಫ್ರಿಕ ದೇಶದ ಕೆಲ ಹಾವುಗಳ ವಿಷದಿಂದ ಇಂಥ ರೋಗಗಳಿಗೆ ಚಿಕಿತ್ಸೆ ನಡೆಸಲಾಗುತ್ತದೆ.

5. ಹಾವಿನ ಚರ್ಮದಿಂದ ನಾವು ಧರಿಸುವ ಸೊಂಟದ ಪಟ್ಟಿ [ಬೆಲ್ಟ್] ಹಾಗೂ ಸ್ತ್ರಿಯರು ಬಳಸುವ ಚೀಲ [ವ್ಯಾನಿಟಿ ಬ್ಯಾಗ್] ಮುಂತಾದವನ್ನು ತಯಾರಿಸುತ್ತಾರೆ.

6. ಆಫ್ರಿಕ, ಚೀನಾದಂಥ ರಾಷ್ಟ್ರಗಳಲ್ಲಿ ಕೆಲವು ಪ್ರಭೇದದ ಹಾವುಗಳ ಮಾಂಸವನ್ನು ತಿನ್ನುತ್ತಾರೆ.

7. ಕಡಲ ಹಾವಿನ ವಿಷದ ನಂಜು ನರಗಳ ಮೇಲೆ ಪರಿಣಾಮಕಾರಿಯಾಗಿದೆ. ಮುಂಬೈಯ ಹಾಫ್ಕಿನ್ ಇನ್ಸ್ಟಿಟ್ಯೂಟಿನಲ್ಲಿ ಇದರ ನಂಜನ್ನು ಶಮನಗೊಳಿಸುವ ಆಂಟಿವೆನೊಮ್ ಅಥವಾ ಪ್ರತಿವಿಷವನ್ನು ಅಭಿವೃಧ್ಧಿಪಡಿಸಲಾಗುತ್ತಿದೆ.

Common krait | ಕಟ್ಟು ಹಾವು

ಹಾವುಗಳನ್ನು ರಕ್ಷಿಸಿ

ನಾವು ನಮ್ಮ ಜಾಗ್ರತೆಯಲ್ಲಿದ್ದರೆ ಹಾವುಗಳಿಂದ ಕಡಿತಕ್ಕೊಳಗಾಗುವ ಸಂದರ್ಭವೇ ಬರುವುದಿಲ್ಲ. ಅಕಸ್ಮಾತ್ ಹಾವುಗಳು ದಾರಿ ತಪ್ಪಿ ನಿಮ್ಮ ಮನೆಯ ಸುತ್ತ ಮುತ್ತ ಕಾಣಿಸಿಕೊಂಡರೆ ನೀವು ಹೆದರಿ ಹಿಂಸೆ ಮಾಡದೆ ಉರಗ ರಕ್ಷಕರನ್ನು ಸಂಪರ್ಕಿಸಿ ಅವುಗಳನ್ನು ಸುರಕ್ಷಿತ ಪ್ರದೇಶಕ್ಕೆ ಬಿಡಿಸಿ. ಜೊತೆಗೆ ಆಹಾರ ಸರಪಳಿಯ ಒಂದು ಕೊಂಡಿಯಾದ ಕಾರಣಕ್ಕಾಗಿ ಹಾವುಗಳು ಅಳಿವಿನಂಚಿಗೆ ಬಂದು ನಿಂತಿದೆ. ಹಲವಾರು ಪ್ರಭೇದದ ಹಾವುಗಳನ್ನು ಕಳೆದ ನೂರು ವರ್ಷಗಳಿಂದ ಜೀವಂತವಾಗಿ ಯಾರೂ ಕಂಡಿಲ್ಲ. ಇವನ್ನು ಉಳಿಸಲು ಇವುಗಳ ಆವಾಸ ಸ್ಥಾನವಾದ ಕಾಡುಗಳನ್ನು ಉಳಿಸುವುದು ಅತಿ ಮುಖ್ಯ. ಜೊತೆಗೆ ಹಾವುಗಳ ಬಗ್ಗೆ ಜನರಲ್ಲಿ ಇರುವ ಮೂಢನಂಬಿಕೆಗಳನ್ನು ತೊಲಗಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದರ ಮೂಲಕ ಹಾವುಗಳನ್ನು ಉಳಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!

Published

on

ರೋಗ್ಯಕರ ಆಹಾರ ಮತ್ತು ನೈಸರ್ಗಿಕ ಚಿಕಿತ್ಸೆಯಲ್ಲಿ ತೆಂಗಿನ ಎಣ್ಣೆಯು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಆರೋಗ್ಯದ ದೃಷ್ಟಿಯಿಂದ ತೆಂಗಿನ ಎಣ್ಣೆಗಳಲ್ಲಿ ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆ ಅತಿ ಉತ್ತಮ. ಇದನ್ನು ಕೊಬ್ಬರಿ (ಒಣಗಿದ ತೆಂಗಿನಕಾಯಿ) ಯಿಂದ ಮಾಡಲಾಗುತ್ತದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ದೈನಂದಿನ ಜೀವನದಲ್ಲಿ ತೆಂಗಿನ ಎಣ್ಣೆ ಉಪಯೋಗಿಸಿ ಅದರ ಪ್ರಯೋಜನಗಳನ್ನು ಪಡೆಯಿರಿ :

ತೆಂಗಿನೆಣ್ಣೆಯಲ್ಲಿ ಲಾರಿಕ್ ಆಮ್ಲದಂಶವನ್ನು ಹೊಂದಿರುತ್ತದೆ. ತೆಂಗಿನೆಣ್ಣೆಯ ಬಳಕೆಯಿಂದ ಶಕ್ತಿ ದೊರಕುತ್ತದೆ ಮತ್ತು ತೂಕ ನಿರ್ವಹಣೆಯಲೂ ಸಹಾಯಮಾಡುತ್ತದೆ.

ಹೃದಯದ ಆರೋಗ್ಯ: ತೆಂಗಿನ ಎಣ್ಣೆಯನ್ನು ಸೇವಿಸುವುದರಿಂದ HDL (ಉತ್ತಮ) ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವ ಮೂಲಕ ಲಿಪಿಡ್ ಆರೋಗ್ಯವನ್ನು ಸುಧಾರಿಸಬಹುದು ಎಂದು ಕೆಲವು ಅಧ್ಯಯನಗಳು ಸಾಬೀತುಪಡಿಸಿದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

ಜೀರ್ಣಕಾರಿ ಆರೋಗ್ಯ: ತೆಂಗಿನ ಎಣ್ಣೆಯು ಕೊಬ್ಬು-ಕರಗಬಲ್ಲ ಜೀವಸತ್ವಗಳು ಮತ್ತು ಖನಿಜಗಳ ಹೀರಿಕೊಳ್ಳುವಿಕೆಯನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಇರಿಟಬಲ್ ಬೋವೆಲ್ ಸಿಂಡ್ರೋಮ್ (IBS) ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಉರಿಯೂತದ ಗುಣಲಕ್ಷಣಗಳು: ತೆಂಗಿನ ಎಣ್ಣೆಯು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚರ್ಮ ಮತ್ತು ಕೂದಲ ರಕ್ಷಣೆ: ತೆಂಗಿನೆಣ್ಣೆ ತಿನ್ನುವುದರಿಂದ ಆರೋಗ್ಯಕರ ಚರ್ಮ ಮತ್ತು ಕೂದಲನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಅಗತ್ಯವಾದ ಪೋಷಕಾಂಶಗಳು ಮತ್ತು ತೇವಾಂಶವನ್ನು ಒದಗಿಸುತ್ತದೆ. ತೆಂಗಿನ ಎಣ್ಣೆಯು ನಿಮ್ಮ ಕೂದಲಿಗೆ ಆಳವಾಗಿ ತೂರಿಕೊಂಡು, ಒಳಗಿನಿಂದ ಅವುಗಳನ್ನು ಪೋಷಿಸುತ್ತದೆ ಮತ್ತು ಆರೋಗ್ಯವನ್ನು ಹೊರಸೂಸುವ ನೈಸರ್ಗಿಕ ಹೊಳಪನ್ನು ನೀಡುತ್ತದೆ. ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆಯ ಪೋಷಕಾಂಶಗಳು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಅದೇ ಸಮಯದಲ್ಲಿ ಕೂದಲು ಒಡೆಯುವಿಕೆ ಮತ್ತು ವಿಭಜಿತ ತುದಿಗಳನ್ನು ತಡೆಯುತ್ತದೆ.

ರೋಗನಿರೋಧಕ ಬೆಂಬಲ: ತೆಂಗಿನೆಣ್ಣೆಯು ಲಾರಿಕ್ ಆಮ್ಲ ಮತ್ತು ಕ್ಯಾಪ್ರಿಲಿಕ್ ಆಮ್ಲವನ್ನು ಹೊಂದಿರುತ್ತದೆ, ಇದು ರೋಗನಿರೋಧಕ-ಉತ್ತೇಜಿಸುವ ಗುಣಲಕ್ಷಣಗಳನ್ನು ಹೊಂದಿದೆ ಮತ್ತು ದೇಹವು ಸೋಂಕುಗಳಿಂದ ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ.

ತೂಕ ನಿರ್ವಹಣೆ: ತೆಂಗಿನ ಎಣ್ಣೆಯು ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ಸಮತೋಲಿತ ಆಹಾರದಲ್ಲಿ ಬಳಸಿದಾಗ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.

ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು: ತೆಂಗಿನಕಾಯಿಯಲ್ಲಿ ಲಾರಿಕ್ ಆಮ್ಲವಿದೆ ಆದ್ದರಿಂದ ಇದು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು ಅದು ಬ್ಯಾಕ್ಟೀರಿಯಾ, ವೈರಸ್‌ಗಳು ಮತ್ತು ಶಿಲೀಂಧ್ರಗಳಿಂದ ಉಂಟಾಗುವ ಸೋಂಕನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆ ನಿಮ್ಮ ಅಡಿಗೆ ಮನೆಯ ಸಂಗಾತಿಯಾಗಲಿ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು

Published

on

  • ರುದ್ರಪ್ಪ ಹನಗವಾಡಿ

ದೆಲ್ಲ ಹೊರಗಿನದಾದರೆ ನಮ್ಮ ವಿಭಾಗದಲ್ಲಿ ಸ್ವಲ್ಪ ಬದಲಾವಣೆಗಳಾಗಿದ್ದವು. ನಮ್ಮ ಜೊತೆಗಿದ್ದ ಡಾ. ಕೆ.ಎಂ. ನಾಯ್ಡು ಅವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದ ಹೊಸ ಸ್ನಾತಕೋತ್ತರ ಕೇಂದ್ರಕ್ಕೆ ಮುಖ್ಯಸ್ಥರಾಗಿ ಆಯ್ಕೆಯಾಗಿ ಹೋಗಿದ್ದರು.

ನಾನು ಎಂ.ಎ. ಓದುವಾಗ ನನಗೆ ಪ್ರಾಧ್ಯಾಪಕರಾಗಿದ್ದ ಡಾ. ಬಿ.ಎಸ್. ಶ್ರೀಕಂಠಾರಾಧ್ಯರು ಇಲಾಖೆಗೆ ಮುಖ್ಯಸ್ಥರಾಗಿ ಬಂದಿದ್ದರು. ನನ್ನ ಬಗ್ಗೆ ನಮ್ಮ ವಿಭಾಗದಲ್ಲಿ ಮತ್ತು ಮೈಸೂರಿನ ಗಂಗೋತ್ರಿ ವಿಭಾಗದಲ್ಲಿ ನಾನು ಮದುವೆಯಾಗಿರುವ ಬಗ್ಗೆ ಅಸಮಾಧಾನವಿತ್ತು. ಅದನ್ನೆಲ್ಲ ತಲೆಯಲ್ಲಿ ತುಂಬಿಕೊಂಡು ಬಂದಿದ್ದ ಬಿಎಸ್‌ಎಸ್ ಗುರುಗಳು ಕೂಡ ನನ್ನ ಬಗ್ಗೆ ಅಸಮಾಧಾನಗೊಂಡವರಂತೆ ತೋರುತ್ತಿದ್ದರು.

ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶ್ರೀಕಂಠಾರಾಧ್ಯರು ಅಧ್ಯಾಪಕರೆಲ್ಲರಿಗೂ ತೆಗೆದುಕೊಳ್ಳುವ ತರಗತಿಗಳ ವೇಳಾಪಟ್ಟಿ ತಯಾರಿಸಿಕೊಟ್ಟಿದ್ದರು. ನನಗೆ ಆಶ್ಚರ್ಯವಾಗುವಂತೆ ನನಗೆ ಯಾವುದೇ ಸಾಮಾನ್ಯ ತರಗತಿಗೆ ಪಾಠ ಮಾಡುವ ಅವಕಾಶವಿರದಂತೆ ತರಗತಿಗಳನ್ನು ಹಂಚಿಕೆ ಮಾಡಿದ್ದರು. ಐಚ್ಛಿಕವಾಗಿದ್ದ ಎರಡು ವಿಷಯಗಳಾದ ಪ್ರಾದೇಶಿಕ ಅರ್ಥಶಾಸ್ತ್ರ ಮತ್ತು ಕೃಷಿ ಅರ್ಥಶಾಸ್ತ್ರಗಳನ್ನು ಹಂಚಿಕೆ ಮಾಡಿ ಮುಗಿಸಿದ್ದರು. ನನಗೆ ವಿದ್ಯಾ ಗುರುಗಳು ಹೆಚ್ಚು ಸಲಿಗೆ ಇಲ್ಲದೆ ಇದ್ದ ಅವರೊಡನೆ ಇದು ಸರಿ ಇಲ್ಲ. ಇದನ್ನು ಸರಿಯಾಗಿ ಹಂಚಿಕೆಯಾಗಬೇಕೆಂದು ನನ್ನ ಅಸಮಾಧಾನ ತೋರಿ ಅವರ ಟೇಬಲ್ ಮೇಲೆ ತಾತ್ಸಾರದಿಂದಲೇ ಆದೇಶದ ಪ್ರತಿಯನ್ನು ಬಿಟ್ಟು ಬಂದಿದ್ದೆ. ಅತ್ಯಂತ ಮಿತಭಾಷಿ, ಸರಳ ಮತ್ತು ಆಳ ಅಧ್ಯಯನದಿಂದ ಗಳಿಸಿದ ಗಂಭೀರತೆಯಲ್ಲಿದ್ದ ಅವರಿಗೆೆ ನನ್ನ ಬಗ್ಗೆ, ನಾನು ಮದುವೆಯಾದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಕಟ್ಟಿ ಅವರಿಗೆ ಹೇಳಿ ನನಗೆ ಈ ರೀತಿಯ ಅನಾದರಣೆ ತೋರಿಸುವಂತೆ ನಮ್ಮವರೇ ಆಗಿದ್ದ ಕೆಲವು ಅಧ್ಯಾಪಕರು ಹೊಸಬರಾಗಿ ಬಂದಿದ್ದ ಇವರಿಗೆ ಹೇಳಿದ್ದರು.

ಆರಾಧ್ಯರೂ ಕೂಡ ಮೈಸೂರಿನ ಗಂಗೋತ್ರಿಯಲ್ಲಿ ಪಾಠ ಮಾಡುತ್ತಿದ್ದವರು, ಅಲ್ಲಿಯೇ ಪ್ರಾಧ್ಯಾಪಕರಾಗಬೇಕಾಗಿದ್ದವರನ್ನು ಬಿಆರ್‌ಪಿಗೆ ಒಬ್ಬ ಹಿರಿಯ ಪ್ರಾಧ್ಯಾಪಕರು ಬೇಕೆಂಬ ನೆಪವೊಡ್ಡಿ ಅವರನ್ನು ವರ್ಗಾವಣೆ ಮಾಡಿ ಇಲ್ಲಿಗೆ ಕಳಿಸಿದ್ದರು. ಇಲ್ಲಿಗೆ ಬರುವ ಬಗ್ಗೆ ಮನಸ್ಸಿಲ್ಲದ ಕಾರಣ ಅಸಮಾಧಾನವೂ ಅವರಲ್ಲಿ ಮನೆಮಾಡಿತ್ತು. ಬಂದಾಕ್ಷಣ ಇಲ್ಲಿನವರ ಚಾಡಿ ಮಾತು ಕೇಳಿ ನನ್ನ ಬಗ್ಗೆ ಈ ರೀತಿ ನಡೆದುಕೊಂಡಿದ್ದರು. ಆ ನಂತರ ಎಲ್ಲರೂ ಚರ್ಚಿಸಿ ಸಮಾನ ವಿಷಯಗಳ ಮತ್ತು ತರಗತಿಗಳನ್ನು ಹಂಚಿಕೆ ಮಾಡಿಕೊಂಡು ಎಂದಿನಂತೆ ತರಗತಿಗಳು ನಡೆಯಲಾರಂಭಿಸಿದವು. ಪ್ರಾರಂಭದಲ್ಲಿ ಆಗಿದ್ದ ನನ್ನ ಮತ್ತು ನನ್ನ ಗುರುಗಳಾಗಿದ್ದ ಶ್ರೀಕಂಠಾರಾಧ್ಯರ ನಡುವೆ ನಡೆದ ಸಣ್ಣ ಅಸಮಾಧಾನ ಕರಗಿ ಎಂದಿನ ಲವಲವಿಕೆಯಿಂದ ವಿಭಾಗದಲ್ಲಿ ಚಟುವಟಿಕೆಗಳು ಪ್ರಾರಂಭವಾದವು. ( ಸುದ್ದಿದಿನ.ಕಾಂ|ವಾಟ್ಸಾಪ್|9980346243)

Continue Reading

ದಿನದ ಸುದ್ದಿ

ಮಕ್ಕಳಿಗೆ ದೈನಂದಿನ ಆಹಾರದಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಸೇರಿಸಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ .ಪಿ ಗಡಾದ್ ಸಲಹೆ

Published

on

ಸುದ್ದಿದಿನ,ಕುಂದಾಪುರ: ದೈನಂದಿನ ಆಹಾರ ಪದ್ಧತಿಯಲ್ಲಿ ತರಕಾರಿ ಹಣ್ಣುಗಳನ್ನು ಸೇರಿಸುವುದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯ ಇರುವ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ತಾಯಂದಿರಿಗೆ ಡಾ. ಐ .ಪಿ ಗಡಾದ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಉಡುಪಿ ಜಿಲ್ಲೆ ಇವರು ತಮ್ಮ ಉದ್ಘಾಟನಾ ನುಡಿಗಳಿಂದ ಮನವಿ ಮಾಡಿದರು.

ನಮ್ಮ ಪಿ.ಜಿ.ಡಿ.ಎಚ್.ಪಿ.ಇ 7ನೇ ತಂಡದ ಪ್ರಶಿಕ್ಷಣಾರ್ಥಿ ಶ್ರೀಮತಿ ವೃಂದಾ.ಬಿ.ತಾಮಸೆ ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಅಪೌಷ್ಟಿಕತೆಯ ಕುರಿತು ಸಂಶೋಧನಾತ್ಮಕ ಅಧ್ಯಯನವನ್ನು ಮಾಡಿ ಗ್ರಾಮದ ಎಲ್ಲಾ ಮಕ್ಕಳು ಮತ್ತು ತಾಯಂದಿರನ್ನು ಬೃಹತ್ ಮಹಾ ಮೇಳದ ಮೂಲಕ ಈ ಸಭಾಂಗಣದ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ರೋಟರಿ ಕ್ಲಬ್ ಸ್ಥಳೀಯ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಕ್ಷಣ ಇಲಾಖೆ ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದ್ದಾರೆ ಇವರೆಲ್ಲರಿಗೂ ತಮ್ಮ ಧನ್ಯವಾದಗಳನ್ನು ಡಾ. ಮಂಜುನಾಥ್ ಜೆ .ಎ .ಉಪನ್ಯಾಸಕರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಶುಭ ಹಾರೈಸಿದರು.

ಮಳೆಗಾಲದಲ್ಲಿ ಮನೆಯ ಅಕ್ಕಪಕ್ಕದಲ್ಲಿ ನೀರು ನಿಲ್ಲುವುದು ಸಹಜ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಮತ್ತು ಮಲೇರಿಯದಂತಹ ಕಾಯಿಲೆಗಳು ಬರುತ್ತವೆ ಹಾಗಾಗಿ ಮಳೆಯ ನೀರು ನಿಲ್ಲದಂತೆ ಹರಿದು ಹೋಗುವ ಹಾಗೆ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ತಿಳಿಸುತ್ತಾ ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ನ ಉಪಾಧ್ಯಕ್ಷರು ಶುಭ ಕೋರಿದರು.

ಅಂಗನವಾಡಿಗಳ ಮೂಲಕ ಅಪೌಷ್ಟಿಕ ಮಕ್ಕಳ ದತ್ತು ಪಡೆಯುವ ಯೋಜನೆಯನ್ನು ಅಗತ್ಯತೆ ಇರುವ ಕುಟುಂಬಗಳು ಪಡೆದುಕೊಳ್ಳಬೇಕು ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ರಾಷ್ಟ್ರಧ್ವಜದ ತ್ರಿವರಣವುಳ್ಳ ಹಣ್ಣು ಹಂಪಲು ತರಕಾರಿ ಸೊಪ್ಪು ಬೇಳೆ ಕಾಳುಗಳು ಹಾಲು ಮೊಟ್ಟೆ ಮೀನು ಮಾಂಸ ಹೀಗೆ ಸಮತೋಲನ ಆಹಾರವನ್ನು ರೂಡಿಸಿಕೊಳ್ಳುವಂತೆ ಕುಂದಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಉಮೇಶ್ ಟಿ ಎಂ ಕರೆ ನೀಡಿದರು.

ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಡ್ರೈಡೇ ಕಾರ್ಯಕ್ರಮ ಪ್ರಾರಂಭವಾಗಿದ್ದು ಮನೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ತುಂಬಿಟ್ಟುಕೊಳ್ಳುವ ಪರಿಕರಗಳನ್ನು ಸಂಪೂರ್ಣ ಖಾಲಿ ಮಾಡಿ ಹೊಸದಾಗಿ ನೀರನ್ನು ತುಂಬಿಸಿಕೊಳ್ಳಬೇಕೆಂದು ಉಡುಪಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಶಶಿಧರ್ ಅವರು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸ್ಥಳೀಯ ಸರ್ಕಾರೇತರ ಸಂಸ್ಥೆ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀ ಸತೀಶ್ ಎಂ ನಾಯಕ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಆರೋಗ್ಯ ಇಲಾಖೆ ಆಯೋಜಿಸುತ್ತಿರುವ ಹಲವಾರು ಕಾರ್ಯಕ್ರಮಗಳಲ್ಲಿ ರೋಟರಿ ಕ್ಲಬ್ ದೇಶಾದ್ಯಂತ ಸಹಕಾರ ನೀಡುತ್ತಿದೆ ಇದೇ ರೀತಿಯಾಗಿ ನಾವು ಸಹ ಮಕ್ಕಳು ಮತ್ತು ತಾಯಂದಿರಿಗೆ ಲಘುಉಪಹಾರ ವ್ಯವಸ್ಥೆ ಮಾಡಿದ್ದೇವೆ ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮ ಸಹಕಾರ ನೀಡುವುದಾಗಿ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಕ್ಕಳ ದೈಹಿಕ ಬೆಳವಣಿಗೆಗಾಗಿ ಅಪೌಷ್ಟಿಕತೆ ಪ್ರಮಾಣ ತಿಳಿಯಲು ಮೌಲ್ಯಮಾಪನ ಮಾಡಬೇಕಾಗುತ್ತದೆ ತೋಳಿನ ಮಧ್ಯಭಾಗದ ಸುತ್ತಳತೆ 11.5 cm ಗಿಂತ ಕಡಿಮೆ ಇರುವ ಮಕ್ಕಳನ್ನು ಅಪೌಷ್ಟಿಕ ಮಕ್ಕಳೆಂದು ಗುರುತಿಸಿ ಅವರಿಗೆ ಹೆಚ್ಚಿನ ಪೌಷ್ಟಿಕ ಆಹಾರ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನೀಡುವ ಅವಶ್ಯಕತೆ ಇದೆ. ಅಪೌಷ್ಟಿಕತೆಯು ದೇಹದ ಪ್ರಮುಖ ಅಂಗಗಳ ಕಾರ್ಯಕ್ಕೆ ಹಾನಿ ಉಂಟುಮಾಡುತ್ತದೆ ಹಾಗೂ ಪೌಷ್ಟಿಕಾಂಶದ ಕೊರತೆಯಿಂದ ಉಂಟಾಗುವ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಹಾಗಾಗಿ ಪೌಷ್ಟಿಕ ಸಮತೋಲಿತ ಆಹಾರವನ್ನು ಉಪಯೋಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳುತ್ತಾ ನಮ್ಮ ಜಿಲ್ಲೆಯ ತಾಯಂದಿರಿಗೆ ಆರೋಗ್ಯಕ್ಕೆ ಸಂಬAಧಪಟ್ಟ ಹಾಗೆ ಜ್ಞಾನ ಹೆಚ್ಚಿದ್ದು, ಆದರೆ ಕಾರ್ಯರೂಪಕ್ಕೆ ತರುವಲ್ಲಿ ದೊಡ್ಡ ಪ್ರಮಾಣದ ಯಶಸ್ಸು ಇನ್ನೂ ಆಗಿಲ್ಲ ಅದಕ್ಕಾಗಿ ನಾವೆಲ್ಲರೂ ಅಪೌಷ್ಟಿಕತೆ ವಿರುದ್ಧ ಹೋರಾಡಲು ಇಲ್ಲಿ ಪ್ರಾತ್ಯಕ್ಷಿತೆಯ ಮೂಲಕ ತೋರಿಸಲಾಗಿರುವ ಆಹಾರಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳುವುದರೊಂದಿಗೆ ಕಾರ್ಯರೂಪಕ್ಕೆ ತರೋಣ ಎಂದು ತಮ್ಮ ಅಮೂಲ್ಯವಾದ ಮಾಹಿತಿಯಲ್ಲಿ ತಿಳಿಸುತ್ತಾ 0-19 ವರ್ಷದ ಒಳಗಿನ ಮಕ್ಕಳಿಗಾಗಿ ಸರ್ಕಾರದಿಂದ ಜಾರಿ ಇರುವ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಡಾ. ಪ್ರೇಮಾನಂದ.ಕೆ ತಾಲೂಕು ಆರೋಗ್ಯ ಅಧಿಕಾರಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಇತ್ತೀಚಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಒಂದು ಅಥವಾ ಎರಡು ಮಕ್ಕಳ ಪಡೆಯುವವರ ಸಂಖ್ಯೆ ಅಧಿಕವಾಗಿದ್ದು ಈ ಮಕ್ಕಳ ಪಾಲನೆ ಪೋಷಣೆಗೆ ಎಲ್ಲಾ ಇಲಾಖೆಯವರು ಸಮನ್ವಯದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದು ಕೇವಲ ಮಕ್ಕಳಿಗೆ ಮಾತ್ರ ಪೌಷ್ಟಿಕ ಆಹಾರವನ್ನು ನೀಡುವುದಲ್ಲದೆ ತಾಯಂದಿರು ಕೂಡ ಸಮತೋಲಿತ ಪೌಷ್ಟಿಕ ಆಹಾರವನ್ನು ಗರ್ಭಿಣಿ ಅವಧಿಯಲ್ಲಿಯೇ ಸೇವಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ನಾಗರತ್ನ ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಟೇಶ್ವರ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಆರ್ ಶೇಟ್, ಜಿಲ್ಲಾ ಆರ್ ಸಿ.ಎಚ್ ಅಧಿಕಾರಿಗಳು ಡಾ.ಜೋತ್ನಾ ಸ್ಥಳೀಯ ಗ್ರಾಮ ಪಂಚಾಯತ್‌ನ ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯಕ್, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಶೋಭಾ, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ತಾಯಂದಿರು, ಮಕ್ಕಳು ಉಪಸ್ಥಿತರಿದ್ದರು ಹಾಗೂ ಈ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆಭಾಕಾರ್ಡ್ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಮಾಡಲಾಯಿತು.

ಶ್ರೀಮತಿ ವೃಂದಾ.ಬಿ.ತಾಮಸೆ ಪ್ರಶಿಕ್ಷಣಾರ್ಥಿ ಪಿ.ಪಿ.ಜಿ.ಡಿ.ಎಚ್.ಪಿ.ಇ ವಿಭಾಗ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಸ್ವಾಗತಿಸಿದರು. ಶ್ರೀಮತಿ ಭಾಗ್ಯಲಕ್ಷ್ಮಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕುಂದಾಪುರ ಕಾರ್ಯಕ್ರಮದ ನಿರೂಪಣೆ ಮಾಡಿ ಧನ್ಯವಾದ ಅರ್ಪಿಸಿದರು.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ15 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ16 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ16 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ16 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ16 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ18 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ18 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending