Connect with us

ಲೈಫ್ ಸ್ಟೈಲ್

‘ಹಾವಿನ ದ್ವೇಷ ಹನ್ನೆರಡು ವರ್ಷ’ ಎಂಬ ನುಡಿ‌ ಸುಳ್ಳು | ಹಾವಿನ ಬಗೆಗೆ ನೀವಿಷ್ಟು ತಿಳಿಯಲೇ ಬೇಕು..!

Published

on

ದಿಯೊಂದರ ಪ್ರಕಾರ ನಮ್ಮ ದೇಶದಲ್ಲಿ ಪ್ರತಿ ವರ್ಷಕ್ಕೆ ಸರಿ ಸುಮಾರು 2,50,000 ಜನಗಳು ಹಾವುಗಳಿಂದ ಕಡಿತಕ್ಕೊಳಗಾಗುತ್ತಾರೆ. ಇದರಲ್ಲಿ 50,000 ಜನರು ಪ್ರಾಣ ಕಳೆದುಕೊಳ್ಳುತ್ತಾರೆ. ಇದರಲ್ಲಿ 725 ಜನ ಹಾವು ಕಚ್ಚಿದೆ ಎಂಬ ಭಯಕ್ಕೆ ಸಾಯುತ್ತಾರೆ.ಮೊದಲು ಸ್ವಲ್ಪ ಹಾವಿನ ಬಗ್ಗೆ ತಿಳಿಯೋಣ.

ವೈಜ್ಞಾನಿಕ ವರ್ಗೀಕರಣ

ಸಾಮ್ರಾಜ್ಯ : ಪ್ರಾಣಿಗಳು
ವಿಭಾಗ : ಕಾರ್ಡೇಟ
ಉಪವಿಭಾಗ: ಕಶೇರುಕ
ವರ್ಗ : ಸರೀಸೃಪಗಳು
ಗಣ : ಸ್ಕ್ವಾಮಾಟ

ಹಾವು ಅಥವಾ ಉರಗ. ನೆಲದ ಮೇಲೆ ಹರಿದಾಡುತ್ತ, ಹೊರಳುತ್ತ, ಅಂಕು ಡೊಂಕಾಗಿ ಚಲಿಸುವ ಈ ಉರಗಕ್ಕೆ ಎದೆಮೂಳೆಗಳಿಲ್ಲ. ಬೆನ್ನು ಮೂಳೆ ಹಾಗು ಪಕ್ಕೆಲುಬುಗಳಿವೆ. ಎದೆ ಮೂಳೆ ಇಲ್ಲದ ಕಾರಣ ಪಕ್ಕೆಲುಬು ಸಡಿಲವಾಗಿದೆ. ತಲೆ ಬುರುಡೆ ಮೂಳೆಗಳು ಅಳ್ಳಕವಾಗಿದೆ. ಹಾಗಾಗಿ ಅವು ತಲೆಯನ್ನು ಸುಲಭವಾಗಿ ಆಡಿಸಬಹುದು. ಹಾವಿನ ಮಿದುಳಿನ ರಚನೆ ಸರಳವಾಗಿದ್ದು ಇನ್ನಿತರ ಸರೀಸೃಪಗಳ ಮಿದುಳನ್ನೆ ಹೋಲುತ್ತದೆ. ಹಾವಿಗೆ ವಿವೇಚನೆಯಾಗಲೀ ಸ್ಮರಣಶಕ್ತಿಯಾಗಲೀ ಇಲ್ಲ. ‘ಹಾವಿನ ದ್ವೇಷ ಹನ್ನೆರಡು ವರ್ಷ’ ಎಂಬ ನುಡಿ ಸತ್ಯವಲ್ಲ. ಹಾವು ಘಟನೆಗಳನ್ನು ನೆನಪಿನಲ್ಲಿಟ್ಟು ಕೊಳ್ಳಲಾಗುವುದಿಲ್ಲ. ಹಾವುಗಳ ಆಯಸ್ಸು 20 ರಿಂದ 30 ವರ್ಷಗಳೆಂದು ಅಂದಾಜು.
ಹಾವುಗಳ ಬಣ್ಣ ವರ್ಣರಂಜಿತ ಮತ್ತು ವೈವಿಧ್ಯಮಯ. ಮೇಲ್ಭಾಗದಲ್ಲಿ ಕಪ್ಪು,ಕಂದು,ಹಳದಿ ಅಥವಾ ಗೋಧಿ ಬಣ್ಣ, ಕೆಳಭಾಗದಲ್ಲಿ ಬಿಳಿ ಇಲ್ಲವೆ ತಿಳಿಹಳದಿ ಬಣ್ಣ. ಕೆಲ ಹಾವುಗಳು ಬಣ್ಣ ಅವು ವಾಸಿಸುವ ಪರಿಸರದ ಬಣ್ಣವನ್ನೇ ಹೋಲುತ್ತದೆ.

ಹಾವಿನ ಹುಟ್ಟು

ಹಾವುಗಳ ಪಳೆಯುಳಿಕೆಗಳು ದೊರೆಯುವುದು ಅಪರೂಪ. ದೊರತ ಪಳೆಯುಳಿಕೆಗಳಲ್ಲಿ ಅತ್ಯಂತ ಹಳೆಯದು ಎಂದರೆ ಸುಮಾರು 112 ರಿಂದ 94 ಮಿಲಿಯನ್ ವರ್ಷಗಳಷ್ಟು ಪ್ರಾಚೀನವಾದುದು. ಶರೀರಶಾಸ್ತ್ರದ ಅಧ್ಯಯನದಿಂದ ಹಾವುಗಳು ಹಲ್ಲಿಗಳ ಜಾತಿಯಿಂದ ಉಗಮವಾಗಿರುತ್ತವೆ ಎಂದು ತಿಳಿದು ಬಂದಿದೆ.

King cobra | ಕಾಳಿಂಗ ಸರ್ಪ

ಉದ್ದ ಮತ್ತು ತೂಕ

ಸುಮಾರು 20 ಕುಟುಂಬಕ್ಕೆ ಸೇರಿದ 3600ಕ್ಕೂ ಹೆಚ್ಚು ಜಾತಿಯ ಹಾವುಗಳು ಪ್ರಪಂಚದಾದ್ಯಂತ ಕಾಣಸಿಗುತ್ತವೆ. ಅಂಟಾರ್ಟಿಕವನ್ನು ಹೊರತುಪಡಿಸಿ ಉಳಿದ ಎಲ್ಲಾ ಖಂಡಗಳಲ್ಲಿಯೂ ಸಮುದ್ರ ಹಾಗೂ ಸುಮಾರು 16000ಅಡಿ ಎತ್ತರದಲ್ಲಿ ಹಿಮಾಲಯ ಪರ್ವತ ಶ್ರೇಣಿಯಲ್ಲಿ ಕೂಡಾ ಹಾವುಗಳು ಕಾಣಸಿಗುತ್ತವೆ. ಹಾವಿನ ಶರೀರ ಉರುಳೆ ಆಕಾರದಲ್ಲಿದೆ. ಉದ್ದ 12ಸೆಂಮೀ-10ಮೀ ವರೆಗೂ ಇರುವುದು. ಅದರೆ ಪಳೆಯುಳಿಕೆ ಸಿಕ್ಕಿರುವ ಪ್ರಕಾರ species Titanoboa cerrejonenis ಎಂಬುದು 12.8ಮೀ [42feet] ಉದ್ದ ಇತ್ತು.

ಶರೀರ ರಚನೆ ಮತ್ತು ಪೊರೆ ಕಳುಚುವಿಕೆ

ಹಾವಿನ ಶರೀರದ ಹೊರಭಾಗದಲ್ಲಿ ಕೈ ಕಾಲುಗಳು ಇಲ್ಲದಿರುವ ಕಾರಣ ಅವು ತಮ್ಮ ಕೆಳಭಾಗದಿಂದ ತೆವಳುತ್ತ ಮುಂದೆ ಸಾಗುತ್ತದೆ. ಕೈ ಕಾಲುಗಳಿಲ್ಲದಿದ್ದರೂ ಬೆನ್ನುಮೂಳೆ, ಪಕ್ಕೆಲುಬುಗಳು ವಿಭಿನ್ನವಾಗಿ ಮಾರ್ಪಾಡಾಗಿರುವುದರಿಂದ, ಶರೀರದ ಮುಂದಿನ ಅರ್ಧಭಾಗವನ್ನು ನೆಲದಿಂದ ಮೇಲಕ್ಕೆ ಎತ್ತಬಲ್ಲವು.ಬೆಳೆವಣಿಗೆಯಿಲ್ಲದ ಹೊರಚರ್ಮದ ಭಾಗವನ್ನು ಆಗಾಗ್ಗೆ ಹಾವು ಕಳಚಿ ಹೊಸ ಚರ್ಮವನ್ನು ಪಡೆಯುತ್ತದೆ. ಇದನ್ನು ಪೊರೆ ಕಳಚುವುದು ಎನ್ನುತ್ತಾರೆ. ಹಾವು ಬೆಳೆಯುವ ವರ್ಷಗಳಲ್ಲಿ ಹೆಚ್ಚು ಬಾರಿಯೂ, ವೃದ್ದ್ಯಾಪಕ್ಕೆ ಕಾಲಿರುಸುತ್ತಿದ್ದಂತೆ ಕಡಿಮೆ ಬಾರಿ ಪೊರೆ ಕಳಚುತ್ತದೆ. ಪೊರೆ ಕಳಚಿದ ಬಳಿಕ ಹೊಸ ಚರ್ಮ ಹಳೆ ಚರ್ಮಕ್ಕಿಂತ ಸ್ವಲ್ಪ ವಿಸ್ತಾರವಿರುವುದರಿಂದ ಮತ್ತೆ ಶರೀರದ ಒಳಭಾಗದ ಅಂಗಗಳು ಬೆಳೆಯಲು ಅವಕಾಶವಾಗುತ್ತದೆ.

ದೃಷ್ಟಿ ಮತ್ತು ಶಬ್ಧ ಗ್ರಹಿಸುವಿಕೆ

ಹಾವಿನ ರೆಪ್ಪೆಗಳು ಒಂದಕ್ಕೊಂದು ಕೂಡಿಕೊಂಡಿರುತ್ತವೆ. ಅವು ಅಲುಗಾಡುವುದಿಲ್ಲ. ಕಣ್ಣಿನ ಹೊರಭಾಗದಲ್ಲಿ ಪಾರದರ್ಶಕ ತೊಪ್ಪಿಯಂತಿರುವ ವಸ್ತು ಆವರಿಸಿರುತ್ತದೆ. ಅದರಿಂದ ಅವು ಯಾವಾಗಲೂ ಕಣ್ಣು ತೆರೆದಿರುವಂತೆ ಕಾಣಿಸುತ್ತದೆ. ಹೀಗಾಗಿ ಹಾವು ನಿದ್ರಿಸುತ್ತಿದೆಯೋ ಅಥವಾ ಎಚ್ಚರದಿಂದ ಇದೆಯೋ ಎಂದು ತಿಳಿಯುವುದಿಲ್ಲ. ಹಾವುಗಳ ದೃಷ್ಟಿ ಮಂದ. ಮುಂದೆ ಇರುವ ವಸ್ತುಗಳನ್ನು ಸರಿಯಾಗಿ ಗುರುತಿಸಲಾರವು ಮತ್ತು ಬಣ್ಣಗಳು ಕಾಣುವುದಿಲ್ಲ.ಹಾವುಗಳಿಗೆ ಹೊರ ಕಿವಿಗಳಿಲ್ಲ, ಕಿವಿ ತಮಟೆಯೂ ಇಲ್ಲ. ಅವುಗಳಿಗೆ ಕೇವಲ ಒಳಕಿವಿ ಮಾತ್ರ ಇರುತ್ತದೆ. ಆದ್ದರಿಂದ ಹಾವುಗಳಿಗೆ ಗಾಳಿಯ ಮೂಲಕ ಪ್ರಸಾರವಾಗುವ ಯಾವ ಶಬ್ದವೂ ಕೇಳಿಸಲಾರದು. ಅವಕ್ಕೆ ಭೂಮಿಯ ಮೇಲುಂಟಾಗುವ ಕಂಪನಗಳನ್ನು ಅವು ಗ್ರಹಿಸಬಲ್ಲವು.

ನಾಲಿಗೆ ಮತ್ತು ಆಹಾರನ್ವೇಷಣೆ

ಹಾವಿನ ನಾಲಿಗೆ ಉದ್ದವಿದ್ದು ಮುಂಭಾಗದಲ್ಲಿ ಸೀಳುಗಳಿವೆ. ಮೇಲಿನ ತುಟಿ ಪುಟ್ಟ ಕಮಾನಿನಾಕಾರದಲ್ಲಿದ್ದು ಬಾಯಿ ಮುಚ್ಚಿಕೊಂಡಾಗ ಚಿಕ್ಕ ರಂಧ್ರವೇರ್ಪಡುತ್ತದೆ. ಈ ರಂಧ್ರದ ಮೂಲಕ ಹಾವು ಆಗಾಗ ನಾಲಿಗೆಯನ್ನು ಹೊರಚಾಚುತ್ತಿರುತ್ತದೆ. ಎರಡು ಸೀಳುಗಳು ಪ್ರತ್ಯೇಕವಾಗಿರುವಂತೆ ಕಾಣುವುದರಿಂದ ಹಾವಿಗೆ ಎರಡು ನಾಲಿಗೆಗಳಿವೆ ಎಂದು ತಪ್ಪಾಗಿ ಭಾವಿಸಲಾಗುತ್ತದೆ ಈ ನಾಲಿಗೆ ವಾಸನೆಯನ್ನು ಕಂಡುಹಿಡಿಯಲು ಬಳುಸುತ್ತವೆ. ಮೇಲ್ದವಡೆಯಲ್ಲಿ ಎರಡು ಪುಟ್ಟ ಕುಳಿಗಳಿವೆ. ಜಕೋಬ್ಸನ್ ಅಂಗ ಎಂದು ಅದರ ಹೆಸರು. ನಾಲಗೆಯು ಈ ಅಂಗಕ್ಕೆ ಗಾಳಿಯಲ್ಲಿರುವ ರಾಸಾಯಾನಿಕಗಳನ್ನು ತಲಪಿಸುತ್ತದೆ. ಆಗ ಇದು ವಾಸನೆಯನ್ನು ಗ್ರಹಿಸುತ್ತದೆ. ವಾತಾವರಣದಲ್ಲಿನ ಅನೇಕ ಏರಿಳಿತವನ್ನು ಕೂಡ ನಾಲಿಗೆ ಗ್ರಹಿಸಬಲ್ಲದು. ಕಾಳಿಂಗ ಸರ್ಪ 100ಮೀಟರ್ ದೂರದಲ್ಲಿ ಚಲಿಸುತ್ತಿರುವ ತನ್ನ ಬೇಟೆಯನ್ನು ಪತ್ತೆ ಹಚ್ಚುತ್ತದೆ. ಇಲಿ, ಹೆಗ್ಗಣಗಳಂಥ ಪುಟ್ಟ ಸಸ್ತನಿಗಳು, ಪಕ್ಷಿಗಳು, ಸರೀಸೃಪಗಳು, ಕಪ್ಪೆ, ಮೀನುಗಳು, ಕೀಟಗಳು ಇತ್ಯಾದಿ ಹಾವಿನ ಆಹಾರ. ಕೆಲವು ಹಾವುಗಳು ವಿವಿಧ ಪ್ರಾಣಿ, ಪಕ್ಷಿಗಳ ಮೊಟ್ಟೆಗಳನ್ನು ತಿನ್ನುತ್ತವೆ. ಸಸ್ಯಹಾರೀ ಹಾವು ಇಲ್ಲವೇ ಇಲ್ಲ.

ವಿಷಗ್ರಂಥಿ ಮತ್ತು ಹಲ್ಲುಗಳು

ವಿಷದ ಹಾವುಗಳ ತಲೆ ಎರಡೂ ಪಕ್ಕದಲ್ಲಿ ಒಂದೊಂದರಂತೆ ವಿಷ ಸ್ರವಿಸುವ ಒಂದು ಜೊತೆ ಗ್ರಂಥಿ ಇದೆ. ಹಾವಿನ ವಿಷದ ಗ್ರಂಥಿಗಳಂದರೆ ಮಾರ್ಪಾಡಾಗಿರುವ ಎಂಜಲು ಗ್ರಂಥಿಗಳು. ಕಣ್ಣಿನ ಕೆಳಭಾಗ ಹಾಗೂ ಮೇಲ್ದವಡೆಗಳ ನಡುಭಾಗದಲ್ಲಿ ಇವುಗಳ ನೆಲೆ. ಗ್ರಂಥಿಯ ಮುಂಭಾಗದಲ್ಲಿ ನಾಳವಿದ್ದು ಬಾಯಿಯ ಭಾಗದಲ್ಲಿ ವಿಷದ ಹಲ್ಲಿಗೆ ಜೋಡಿಕೊಂಡಿರುತ್ತದೆ. ವಿಷದ ಹಲ್ಲುಗಳಿಗಿಂತ ದೊಡ್ಡವು ಮತ್ತು ಚೂಪು. ಕೆಲವು ಹಾವುಗಳಲ್ಲಿ ವಿಷದ ಹಲ್ಲುಗಳು ಕೊಳವೆಯಂತಿರಬಹುದು, ಇನ್ನು ಕೆಲವು ಹಾವುಗಳಲ್ಲಿ ಒಂದು ಕಡೆ ತೆರೆದಿದ್ದು ಕಮಾನಿನಂತಿರಬಹುದು. ಆದ್ದರಿಂದ ಕೆಲವು ಪರಿಣಿತರು ಕಡಿತದ ಗಾಯ ನೋಡಿಯೇ ಕಚ್ಚಿದ ಹಾವಿನ ಪ್ರಭೇದ ಊಹಿಸಬಲ್ಲರು. ವಿಷರಹಿತ ಹಾವುಗಳಲ್ಲಿ ವಿಷಗ್ರಂಥಿಗಳ ಬೆಳೆವಣಿಗೆ ಅಪೂರ್ಣ ಅಥವಾ ಬೆಳೆವಣಿಗೆಯೇ ಇರುವುದಿಲ್ಲ. ಇನ್ನು ಕೆಲವು ಹಾವುಗಳಲ್ಲಿ ವಿಷದ ಹಲ್ಲುಗಳು ಮೇಲ್ದವಡೆಯ ಮುಂಭಾಗದಲ್ಲಿಯೇ ಇರುತ್ತದೆ. ವಿಷಗ್ರಂಥಿಯ ನಳ ಈ ಹಲ್ಲಿನ ಕೆಳಭಾಗದಲ್ಲಿ ಜೋಡಿಕೊಂಡಿರುತ್ತದೆ. ಈ ಹಲ್ಲುಗಳನ್ನು ಕಿತ್ತರೆ, ಕೆಲವೇ ದಿನಗಳಲ್ಲಿ ಅವುಗಳ ಪಕ್ಕದ ಹಲ್ಲುಗಳೂ ವಿಷದ ಹಲ್ಲುಗಳಾಗಿ ಮಾರ್ಪಡುತ್ತವೆ.

Cobra | ನಾಗರಹಾವು

ಭಾರತದಲ್ಲಿ ಎಷ್ಟು ವಿಷಪೂರಿತ ಹಾವುಗಳು..?

ನಮ್ಮ ದೇಶದಲ್ಲಿ 4 ಜಾತಿಯ ಹಾವುಗಳು ಮಾತ್ರ ವಿಷಪೂರಿತ. ಈ ಜಾತಿಯ ಹಾವು ಕಚ್ಚಿದರೆ ಮಾತ್ರ ಮನುಷ್ಯ ಸಾಯುತ್ತಾನೆ ಹೊರೆತು[ಅಗತ್ಯ ಚಿಕಿತ್ಸೆ ಕೊಡಿಸದಿದ್ದಾಗ] ಬೇರೆ ಎಲ್ಲಾ ಹಾವುಗಳು ವಿಷರಹಿತ.

ಈ 4 ಜಾತಿಯ ಹಾವುಗಳು ಯಾವುವುವೆಂದರೆ

1. King Cobra ಅಥವಾ ಕಾಳಿಂಗ
2. Cobra ಅಥವಾ ನಾಗರ ಹಾವು
3. Viper ಅಥವಾ ಕನ್ನಡಿ ಹಾವು ಅಥವಾ ಕೊಳಕು ಮಂಡಲ
4. Common krait ಅಥವಾ ಕಡಂಬಳ ಅಥವಾ ಕಟ್ಟು ಹಾವು

ಈ ವಿಷಪೂರಿತ ಹಾವುಗಳು ಕೂಡ ಯಾರಿಗೂ ಸುಮ್ಮನೆ ಸುಮ್ಮನೆ ಕಚ್ಚುವುದಿಲ್ಲ. ನಾವು ಅಚಾನಕ್ಕಾಗಿ ಅವುಗಳನ್ನು ತುಳಿದಾಗ ಅಥವಾ ಬೇಕೆಂದೇ ಹಿಂಸೆ ಮಾಡಿದಾಗ ಮಾತ್ರ ಅವುಗಳ ಪ್ರಾಣ ಉಳಿಸಿಕೊಳ್ಳಲು ಅವು ಕಚ್ಚುತ್ತವೆ.  ಪ್ರಕೃತಿಯಲ್ಲಿ ವಿಷರಹಿತ ಹಾವುಗಳಿಗೂ, ವಿಷಪೂರಿತ ಹಾವುಗಳಿಗೂ ತಮ್ಮ ಪ್ರಾಣ ರಕ್ಷಣೆ ಮಾಡಿಕೊಳ್ಳಲು ಅವುಗಳದ್ದೇ ಆದ ಒಂದು ರಕ್ಷಣಾ ತಂತ್ರವು ಇರುತ್ತದೆ. ಯಾವಾಗ ತಮ್ಮ ಪ್ರಾಣಕ್ಕೆ ಸಂಚಕಾರ ಬಂದಿದೆ ಎಂದು ಅನ್ನಿಸಿದಾಗ ಮಾತ್ರ ಅವು ರಕ್ಷಣ ತಂತ್ರವನ್ನು ಬಳಸಿಕೊಳ್ಳುತ್ತವೆ.

ಹಾವುಗಳಿಂದ ಮನುಷ್ಯನಿಗೆ ಆಗುವ ಉಪಯೋಗಗಳು

ಹಾವುಗಳು ವಿಷಯುಕ್ತ ಪ್ರಾಣಿಗಳೆನೋ ನಿಜ ಜೊತೆಗೆ ಇದು ಮಾನವನಿಗೆ ಮಾತ್ರವಲ್ಲ ಬೇರೆ ಪ್ರಾಣಿಗಳಿಗೂ ಜೀವಹಾನಿಯಾಗುತ್ತದೆ. ಆದರೆ ಇದಿಷ್ಟೇ ಕಾರಣದಿಂದ ಹಾವುಗಳೆಲ್ಲವೂ ಹಾನಿಕಾರಕ ಎಂದು ಪರಿಗಣಿಸಬಾರದು. ವಿಷರಹಿತ ಹಾಗೂ ವಿಷಯುಕ್ತ ಹಾವು ಎಲ್ಲವುಗಳಿಂದಲೂ ನಮಗೆ ಸಾಕಷ್ಟು ಉಪಯೋಗಗಳಿವೆ.

1. ಪರಿಸರದ ಸಮತೋಲನ ಸಾಧಿಸುವಲ್ಲಿ ಹಾವುಗಳ ಪಾತ್ರ ತುಂಬಾನೇ ಮುಖ್ಯ. ಇಲಿ, ಹೆಗ್ಗಣ, ಕೀಟ, ಪಕ್ಷಿ ಮುಂತಾದವನ್ನು ಹಾವುಗಳು ಆಹಾರವಾಗಿ ಸೇವಿಸುವುದರಿಂದ ಇದು ನಮ್ಮ ದವಸ ಧಾನ್ಯಗಳಿಗೆ ಉಂಟಗುವ ಹಾನಿಯನ್ನು ಕಡಿಮೆಗೊಳಿಸುತ್ತವೆ ಅಲ್ಲದೆ, ಈ ಹಾವುಗಳೇ ಇತರೆ ಕೆಲವು ಜೀವಿಗಳಿಗೆ [ಉದಾ: ಕೆಲವು ಪಕ್ಷಿಗಳಿಗೆ] ಆಹಾರವಾಗುವುದರಿಂದ ನಿಸರ್ಗದ ಆಹಾರ ಸರಪಳಿಯಲ್ಲಿ ಒಂದು ಕೊಂಡಿಯೂ ಆಗಿದೆ.

2. ಹಾವಿನ ವಿಷದಲ್ಲಿ ಫಾಸ್ಫೊಡೈಯೆಸ್ಟಿರೇಸ್ ಎಂಬ ಕಿಣ್ವವಿದೆ. ಇದನ್ನು ಕೆಲವು ಸರಳ ರಾಸಾಯನಿಕ ಕ್ರಿಯೆಗಳಿಂದ ಬೇರ್ಪಡಿಸಬಹುದು. ಈ ಕಿಣ್ವ ಜೀವಿಗಳ ಅನುವಂಶೀಯತೆಗೆ ಕಾರಣವಾಗುವ ಜೈವಿಕ ವಸ್ತು ಡಿಎನ್‍ಎಯ ತಂತುಗಳನ್ನು ಬೇರ್ಪಡಿಸುತ್ತದೆ. ಇದನ್ನು ಬಳಸಿ ಡಿಎನ್‍ಎಯ ರಚನೆ ಹಾಗೂ ಕಾರ್ಯವಿಧಾನಗಳನ್ನು ಅರಿಯಲು ಸಾಧ್ಯವಾಗಿದೆ.

Viper | ಕೊಳಕು ಮಂಡಲ ಹಾವು

3. ನರಕೋಶಗಳನ್ನು ನಿಷ್ಕ್ರಿಯಗೊಳಿಸುವ ವಿಷವನ್ನು ಬಳಸಿ ಪಾರ್ಶ್ವವಾಯು ಅಥವಾ ನರಮಂಡಲ ಸಂಬಂಧೀ ರೋಗಗಳಿಗೆ ಔಷಧಿ ತಯಾರಿಸಲಾಗುತ್ತದೆ. ವೈಜ್ಞಾನಿಕವಾಗಿ ಈ ಪ್ರಯತ್ನ ಇನ್ನೂ ಸಫಲವಾಗಿಲ್ಲದಿದ್ದರೂ ಕೆಲವೂ ಸ್ಥಳೀಯ ವೈದ್ಯ ಪದ್ಧತಿಯಲ್ಲಿ ಈ ತಂತ್ರ ಬಳಕೆಯಲ್ಲಿದೆ.

4. ವಿಷದ ಘಟಕವಾದ ಆ್ಯಂಕ್ರೊಡ್ ಎಂಬ ವಸ್ತುವನ್ನು ಬೇರ್ಪಡಿಸಿ ಅದನ್ನು ನರರೋಗ ಚಿಕಿತ್ಸೆಗೆ ಬಳಸುವ ಪ್ರಯತ್ನವೂ ನಡೆಯುತ್ತಿದೆ. ಕ್ರೀಡಾಪಟುಗಳ ಕಾಲಿನ ಅಥವಾ ಶರೀರದ ಕೆಲವು ಮಾಂಸಖಂಡಗಳು ಆಟದ ಒತ್ತಡದಿಂದ ಕ್ರೀಯಾಹೀನವಾಗುತ್ತವೆ. ಆಫ್ರಿಕ ದೇಶದ ಕೆಲ ಹಾವುಗಳ ವಿಷದಿಂದ ಇಂಥ ರೋಗಗಳಿಗೆ ಚಿಕಿತ್ಸೆ ನಡೆಸಲಾಗುತ್ತದೆ.

5. ಹಾವಿನ ಚರ್ಮದಿಂದ ನಾವು ಧರಿಸುವ ಸೊಂಟದ ಪಟ್ಟಿ [ಬೆಲ್ಟ್] ಹಾಗೂ ಸ್ತ್ರಿಯರು ಬಳಸುವ ಚೀಲ [ವ್ಯಾನಿಟಿ ಬ್ಯಾಗ್] ಮುಂತಾದವನ್ನು ತಯಾರಿಸುತ್ತಾರೆ.

6. ಆಫ್ರಿಕ, ಚೀನಾದಂಥ ರಾಷ್ಟ್ರಗಳಲ್ಲಿ ಕೆಲವು ಪ್ರಭೇದದ ಹಾವುಗಳ ಮಾಂಸವನ್ನು ತಿನ್ನುತ್ತಾರೆ.

7. ಕಡಲ ಹಾವಿನ ವಿಷದ ನಂಜು ನರಗಳ ಮೇಲೆ ಪರಿಣಾಮಕಾರಿಯಾಗಿದೆ. ಮುಂಬೈಯ ಹಾಫ್ಕಿನ್ ಇನ್ಸ್ಟಿಟ್ಯೂಟಿನಲ್ಲಿ ಇದರ ನಂಜನ್ನು ಶಮನಗೊಳಿಸುವ ಆಂಟಿವೆನೊಮ್ ಅಥವಾ ಪ್ರತಿವಿಷವನ್ನು ಅಭಿವೃಧ್ಧಿಪಡಿಸಲಾಗುತ್ತಿದೆ.

Common krait | ಕಟ್ಟು ಹಾವು

ಹಾವುಗಳನ್ನು ರಕ್ಷಿಸಿ

ನಾವು ನಮ್ಮ ಜಾಗ್ರತೆಯಲ್ಲಿದ್ದರೆ ಹಾವುಗಳಿಂದ ಕಡಿತಕ್ಕೊಳಗಾಗುವ ಸಂದರ್ಭವೇ ಬರುವುದಿಲ್ಲ. ಅಕಸ್ಮಾತ್ ಹಾವುಗಳು ದಾರಿ ತಪ್ಪಿ ನಿಮ್ಮ ಮನೆಯ ಸುತ್ತ ಮುತ್ತ ಕಾಣಿಸಿಕೊಂಡರೆ ನೀವು ಹೆದರಿ ಹಿಂಸೆ ಮಾಡದೆ ಉರಗ ರಕ್ಷಕರನ್ನು ಸಂಪರ್ಕಿಸಿ ಅವುಗಳನ್ನು ಸುರಕ್ಷಿತ ಪ್ರದೇಶಕ್ಕೆ ಬಿಡಿಸಿ. ಜೊತೆಗೆ ಆಹಾರ ಸರಪಳಿಯ ಒಂದು ಕೊಂಡಿಯಾದ ಕಾರಣಕ್ಕಾಗಿ ಹಾವುಗಳು ಅಳಿವಿನಂಚಿಗೆ ಬಂದು ನಿಂತಿದೆ. ಹಲವಾರು ಪ್ರಭೇದದ ಹಾವುಗಳನ್ನು ಕಳೆದ ನೂರು ವರ್ಷಗಳಿಂದ ಜೀವಂತವಾಗಿ ಯಾರೂ ಕಂಡಿಲ್ಲ. ಇವನ್ನು ಉಳಿಸಲು ಇವುಗಳ ಆವಾಸ ಸ್ಥಾನವಾದ ಕಾಡುಗಳನ್ನು ಉಳಿಸುವುದು ಅತಿ ಮುಖ್ಯ. ಜೊತೆಗೆ ಹಾವುಗಳ ಬಗ್ಗೆ ಜನರಲ್ಲಿ ಇರುವ ಮೂಢನಂಬಿಕೆಗಳನ್ನು ತೊಲಗಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದರ ಮೂಲಕ ಹಾವುಗಳನ್ನು ಉಳಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ, ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ.

ತರಬೇತಿ ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ತರಬೇತಿ ವಸತಿಯುತವಾಗಿದ್ದು, ಉಚಿತ ಊಟ, ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಗೆ ಸಂಪರ್ಕಿಸಬಹುದು ಎಂದು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅತ್ಮಕತೆ | ನೀರು ಸಾಬರೂ – ಎಸಿ ಮದನಗೋಪಾಲರೂ..

Published

on

  • ರುದ್ರಪ್ಪ ಹನಗವಾಡಿ

ಮಧ್ಯೆ ನಂಜನಗೂಡು ಪಕ್ಕದ ತಾಲ್ಲೂಕಾದ ಗುಂಡ್ಲುಪೇಟೆಯಿಂದ ರಾಜಕಾರಣಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರು ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬೋರ್‌ವೆಲ್ ತೆಗೆಸಿ ಗ್ರಾಮೀಣ ಜನರಿಗೆ ಸ್ವಚ್ಛ ಕುಡಿಯುವ ನೀರು ಕೊಡುವಲ್ಲಿ ಯಶಸ್ವಿಯಾಗಿದ್ದರು. ಜನಪರ ಮಂತ್ರಿಗಳೂ ಆಗಿದ್ದರು.

ಗುಂಡ್ಲುಪೇಟೆಯಲ್ಲಿ ಭೂಸ್ವಾಧೀನ ಪ್ರಕರಣದಲ್ಲಿ ತಮ್ಮ ಸಂಬಂಧಿಕರೊಬ್ಬರ ಜಮೀನಿಗೆ ತಿರುಗಾಡಲು ದಾರಿಗಾಗಿ ಭೂಸ್ವಾಧೀನಪಡಿಸಲು ಹಿಂದಿನ ಎಸಿ ಅವರ ಅಳಿಯಂದಿರೇ ಆಗಿದ್ದ ಎಸ್.ಎ. ಸಾದಿಕ್ ಅವರು ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಯನ್ನು ರ‍್ಕಾರಕ್ಕೆ ಸಲ್ಲಿಸಿದ್ದರು. ಆದರೆ ಪುನಃ ಅದು ವಿಚಾರಣೆಗೆ ಬಂದಾಗ ಈ ಭೂಸ್ವಾಧೀನವು ಸಾರ‍್ವಜನಿಕರ ಹಿತ ಕಾಯುತ್ತಿಲ್ಲವೆಂದು ಮದನ್ ಗೋಪಾಲ್ ಅವರು ಆ ಪ್ರಸ್ತಾವನೆಯನ್ನು ರದ್ದುಗೊಳಿಸಲು ಸರ‍್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಭೂಸ್ವಾಧೀನ ಪ್ರಕರಣವನ್ನು ಮಂತ್ರಿಗಳ ಸಲಹೆ ಮೇರೆಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದು, ನಂತರ ಅದನ್ನು ಕೈಬಿಟ್ಟ ಬಗ್ಗೆ ನಜೀರ್ ಸಾಬ್ ಅವರು ಎಸಿ ಮದನ್ ಗೋಪಾಲ್ ಮೇಲೆ ಕೆಂಡಾಮಂಡಲವಾಗಿದ್ದರು. ಎಷ್ಟೇ ಅನುಭವೀ, ನಿಸ್ಪೃಹ ರಾಜಕಾರಣಿಯಾಗಿದ್ದರೂ ನಜೀರ್ ಸಾಬ್ ಅವರು ತಾವು ಹೇಳಿದ ಕೆಲಸ ಮಾಡದ ನೌಕರ ಎಸಿ ಮದನ್ ಗೋಪಾಲ್ ಮೇಲೆ ಕಂದಾಯ ಮಂತ್ರಿ ಮತ್ತು ಜಿಲ್ಲಾಧಿಕಾರಿಗಳ ಎದುರು ತಮ್ಮ ಅಸಮಾಧಾನವನ್ನು ಹೊರಹಾಕಿ ಕೂಗಾಡಿದ್ದರು.

ಇದೇ ಕಾರಣಕ್ಕಾಗಿ ಮದನ್ ಗೋಪಾಲ್ ಅವರನ್ನು ಕೆಲವೇ ದಿನಗಳಲ್ಲಿ ನಂಜನಗೂಡು ಉಪ ವಿಭಾಗದಿಂದ ಬೇರೆಡೆಗೆ ರ‍್ಗಾವಣೆ ಕೂಡ ಮಾಡಲಾಗಿತ್ತು. ಅವರ ವರ್ಗಾವಣೆಯನ್ನು ವಿರೋಧಿಸಿ ಸರ‍್ವಜನಿಕರು, ನಂಜಗೂಡು, ಗುಂಡ್ಲುಪೇಟೆಗಳಲ್ಲಿ ಯಶಸ್ವಿ ಬಂದ್ ಮಾಡಿ ಪ್ರತಿಭಟಿಸಿದ್ದರು. ಅವರ ವರ‍್ಗಾವಣೆ ಆಗಿ ನಂತರ ಮೂರು ತಿಂಗಳಲ್ಲಿ ಯೋಗೇಂದ್ರ ತ್ರಿಪಾಠಿ ಬಂದರು. ಈ ನಡುವೆ ನಾನು, ನಂತರ ಮಂಜುನಾಥ್ ನಾಯಕ್ ಹಾಗೂ ಶಿಕ್ಷಣರ‍್ಥಿ ಎಸಿಯಾಗಿದ್ದ ಕೆ. ಶಿವರಾಂ ಅವರು ಸುಮಾರು ಮೂರು ತಿಂಗಳ ಕಾಲ ಚಾರ್ಜ್ನಲ್ಲಿದ್ದೆವು. ಮದನ್ ಗೋಪಾಲ್ ಅವರು ವೈಯಕ್ತಿಕವಾಗಿ ಕಷ್ಟಪಟ್ಟು ದುಡಿಯುವ ವ್ಯಕ್ತಿಯಾಗಿದ್ದರು. ಆದರೆ ಚುನಾಯಿತ ಪ್ರತಿನಿಧಿಗಳ ಜೊತೆ ಅತಿರೇಕದ ನೇರ ನೇರ ಹಣಾಹಣಿ ಮಾಡಿಕೊಂಡು ಅವರು ಮಾಡುತ್ತಿದ್ದ ಒಳ್ಳೆಯ ಕೆಲಸಗಳು ಹಿನ್ನೆಲೆಗೆ ಸರಿಯುತ್ತಿದ್ದವು.

ಯೋಗೇಂದ್ರ ತ್ರಿಪಾಠಿಯವರು ಬರುವ ವೇಳೆಗಾಗಲೇ ನನ್ನ ನಂಜನಗೂಡು ತಾಲ್ಲೂಕ್ ಆಡಳಿತದಲ್ಲಿ ಒಂದು ವರ‍್ಷಕ್ಕೂ ಹೆಚ್ಚು ಸಮಯ ಕಳೆದಿದ್ದೆ. ಹಾಗಾಗಿ ತ್ರಿಪಾಠಿಯವರ ಜೊತೆ ಕೆಲಸ ಕಾರ‍್ಯಗಳು ಸಲೀಸಾಗಿ ಸಾಗುತ್ತಿದ್ದವು. ಈ ಮೊದಲು ಎಸಿ ಶಿಕ್ಷಣರ‍್ಥಿಯಾಗಿದ್ದ ಕೆ. ಶಿವರಾಂ ಅವರು ಅನೇಕ ಮೌಖಿಕ ಆದೇಶಗಳನ್ನು ಹೇಳಿ ಮಾಡುವಂತೆ ನನಗೆ ನಿರ‍್ದೇಶನ ನೀಡುತ್ತಿದ್ದರು. ನಾನು ಖುದ್ದು ಭೇಟಿ ಮಾಡಿ ಅವರು ಹೇಳಿದ ಕೆಲಸಗಳನ್ನು ಮಾಡಲಿಕ್ಕಾಗದ ಕಾರಣದ ವಿವರ ನೀಡಿದರೂ ಸಮಾಧಾನಗೊಳ್ಳದೆ, ಜನರೆದುರಿಗೆ ಎಸಿ ಮಾಡಲು ಹೇಳಿದರೂ ತಹಸೀಲ್ದಾರ್ ಮಾಡದೆ ತಮ್ಮ ವಿರುದ್ಧವಿದ್ದಾರೆಂಬ ಆಭಾವನೆ ಬರುವಂತೆ ನಡೆದುಕೊಳ್ಳುತಿದ್ದರು. ಅವರಿನ್ನೂ ಶಿಕ್ಷಣರ‍್ಥಿಗಳಾಗಿದ್ದರೂ ಆಗಲೇ ತನಗೆಲ್ಲ ಗೊತ್ತು ಎಂಬ ಅಹಂನಿಂದ ವರ‍್ತಿಸುತ್ತಿದ್ದ ಕಾರಣ ಬಹುಬೇಗ ನನ್ನ ಅವರ ನಡುವೆ ವಿಶ್ವಾಸದ ಕೊರತೆಯಾಗಿ, ಏನಾದರೂ ಮಾಡಬೇಕೆಂದರೆ ಲಿಖಿತ ಆದೇಶ ಕಳಿಸಲು ಅವರ ಮ್ಯಾನೇಜರ್ ಅವರಿಗೆ ನಾನು ದೂರವಾಣಿ ಮುಖಾಂತರ ಹೇಳುತ್ತಿದ್ದೆ. ಆ ನಂತರ ಮತ್ತೆ ಕೆಲವು ದಿನಗಳಲ್ಲಿ ಅವರನ್ನು ಬೇರೆ ತಾಲ್ಲೂಕಿಗೆ ತರಬೇತಿಗಾಗಿ ಕಳಿಸಿದ ಕಾರಣ ನನ್ನ ಮನಸ್ತಾಪ ಅಲ್ಲಿಗೆ ಮುಗಿದಿತ್ತು. ಆದರೆ ಮುಂದೆ ಅನೇಕ ಬಾರಿ ಅವರೊಡನೆ ಒಡನಾಡುವ ಸಂರ‍್ಭದಲ್ಲಿ ಇದ್ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಸರಳವಾಗಿ ನಡೆಸಿಕೊಂಡ ಕಾರಣದಿಂದಾಗಿ ಅವರ ಬಗ್ಗೆ ನನ್ನಲ್ಲಿದ್ದ ಕಹಿ ಕರಗಿ ಸಹಜತೆ ಮೂಡಿದೆ.

ನನ್ನ ಕಛೇರಿ ಕೆಲಸಗಳ ಜೊತೆ ಆಚರಿಸುತ್ತಿದ್ದ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ಮೈಸೂರಿನ ಸಮಾಜವಾದಿ ಗೆಳೆಯರ ಜೊತೆ ಚರ್ಚಿಸಿ ಡಾ. ಎಲ್. ಬಸವರಾಜ್, ಸುಜನಾ, ಕೆ.ಎಸ್. ಭಗವಾನ್, ಕೆ. ರಾಮದಾಸ್ ಅವರನ್ನು ಕರೆಸಿ ನಮ್ಮ ತಾಲ್ಲೂಕಿನಲ್ಲಿ ಭಾಷಣ ಮಾಡಿಸುತ್ತಿದ್ದೆ. ಡಿಎಸ್‌ಎಸ್, ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಅನೇಕ ಮಿತ್ರರು ನನ್ನ ಒಡನಾಟದಲ್ಲಿದ್ದರು.

ಈಗ ಹೆಸರಾಂತ ಸಾಹಿತಿ ಮತ್ತು ನನ್ನ ಮಿತ್ರನಾಗಿದ್ದ ಮಾದೇವನ ಊರಾದ ದೇವನೂರಿಗೂ ಹೋದಾಗ ಅವರ ಮನೆಗೂ ಹೋಗಿ ಬಂದಿದ್ದೆ. ಕೃಷ್ಣಪ್ಪ – ಇಂದಿರಾ ಅವರು ಮಕ್ಕಳಾದ ಶಾಲಿನಿ, ಸೀಮಾ ಅವರುಗಳ ಜೊತೆ ನಂಜನಗೂಡಿಗೆ ಬಂದು ಉಳಿದು ನಂಜುಂಡೇಶ್ವರ ದೇವಸ್ಥಾನದ ಹಬ್ಬದಲ್ಲಿ ಭಾಗವಹಿಸಿದ ನೆನಪು ಈಗಲೂ ಹಸಿರಾಗಿದೆ.

ಡಿಎಸ್‌ಎಸ್‌ನ ರಾಜ್ಯ ಮಟ್ಟದ ಕಲಿಕಾ ಸಮಾವೇಶವನ್ನು (study camp ) ನಂಜನಗೂಡು ತಾಲ್ಲೂಕಿನಲ್ಲಿನ ವಿದ್ಯಾಪೀಠದಲ್ಲಿ ಕೃಷ್ಣಪ್ಪನವರು ಸುಮಾರು ಒಂದು ವಾರದ ಕಾಲ ನಡೆಸಿದ್ದರು. ಆಗ ರಾಜ್ಯದ ಮೂಲೆಮೂಲೆಗಳಿಂದ ಬಂದು ಡಿಎಸ್‌ಎಸ್‌ನ ಹೋರಾಟದ ರೂಪುರೇಷೆಗಳನ್ನು ಚರ್ಚಿಸುತ್ತಿದ್ದುದನ್ನು ನಾನು ಭಾಗವಹಿಸದಿದ್ದರೂ ತಿಳಿದುಕೊಳ್ಳುತ್ತಿದ್ದೆ.

ಡಿಎಸ್‌ಎಸ್‌ನ ಅಂದಿನ ಬಹುತೇಕ ರ‍್ಚೆಗಳು ರ‍್ಕಾರದ ನಿಷ್ಕಿçಯತೆ, ದಲಿತ ಶಾಸಕರುಗಳ ಗುಲಾಮಿತನ, ದಲಿತರ ಮೇಲಿನ ದರ‍್ಜನ್ಯ, ದಲಿತರ ಕರ‍್ಯಕ್ರಮಗಳಲ್ಲಿನ ನಿಧಾನಗತಿ ಅನುಷ್ಠಾನ, ಇಂತಹವೇ ರ‍್ಚೆಯಾಗುತ್ತಿದ್ದವು. ಅಂತಹ ಸಂಘಟನೆಗೆ ತಹಸೀಲ್ದಾರನಾಗಿ ಭಾಗಿಯಾಗುವುದು, ಸಹಕಾರ ನೀಡುವುದು ಸರಿಯಲ್ಲವೆಂದು ನನಗೆ ನಮ್ಮ ಹಿರಿಯ ಸಿಬ್ಬಂದಿ ಹೇಳುತ್ತಿದ್ದರೂ ನಾನು ನನ್ನ ಇತರೆ ಸಾಮಾನ್ಯ ಕೆಲಸಗಳಲ್ಲಿ ಹಿಂದೆ ಬೀಳದೆ ಮತ್ತು ಇತರೆ ಸಾರ‍್ವಜನಿಕರಲ್ಲೂ ಯಾವುದೇ ತಗಾದೆ ಬಾರದಂತೆ ಕೆಲಸ ನಿರ‍್ವಹಿಸಿದ್ದರಿಂದ ಬೇರಾರೂ ಆಕ್ಷೇಪಿಸುತ್ತಿರಲಿಲ್ಲ. ಆದರೆ ಆಗ ನಂಜನಗೂಡಿನವರೇ ಆಗಿದ್ದ ಡಿಎಸ್‌ಎಸ್‌ನಲ್ಲಿ ಇದ್ದವನೊಬ್ಬ ಮಾದೇವ, ಕೃಷ್ಣಪ್ಪನವರನ್ನು ವೈಯಕ್ತಿಕವಾಗಿ ದ್ವೇಷಿಸುವ ಮನಸ್ಸಿನ ವ್ಯಕ್ತಿ. ನಮ್ಮ ಕಛೇರಿಯ ಸರ‍್ವೆಯರ್ ನೌಕರನನ್ನು ಸಹಾಯ ಪಡೆದು, ನಮ್ಮ ಕಛೇರಿಯ ಬಗ್ಗೆ ಕರಪತ್ರ ಹಾಕಿ `ಭ್ರಷ್ಟಾಚಾರದ ಕೂಪ ತಾಲ್ಲೂಕು ಕಛೇರಿ’ ಎಂದೆಲ್ಲ ದೂರಿದ್ದರು. ಆದರೆ ಅದಕ್ಕೆಲ್ಲ ಕುಮ್ಮಕ್ಕು ಕೊಟ್ಟವನು ನನ್ನ ಕಛೇರಿಯ ಸರ‍್ವೆಯರ್ ಸಂಬಂಧಿ ಡಿ.ಎಸ್.ಎಸ್.ನಲ್ಲಿಯೇ ಇದ್ದವನೊಬ್ಬ ಎಂದು ನನಗೆ ತಿಳಿದು ಬಂತು.

ಜೊತೆಗೆ ನಮ್ಮ ಕಚೇರಿಯ ರ‍್ವೇಯರ್ ದೈನಂದಿನ ಕೆಲಸದಲ್ಲಿ ನಿರ‍್ಲಕ್ಷ್ಯ ತೋರುತ್ತಿದ್ದ ಕಾರಣದಿಂದ ನಾನು ಮೊದಲೇ ಅವನನ್ನು ಅಮಾನತ್ತುಗೊಳಿಸಿದ್ದೆ. ಆ ಕಾರಣ ಅವನು ನನ್ನ ಬಗ್ಗೆ ಮೊದಲೇ ಅಸಮಾಧಾನಗೊಂಡಿದ್ದ. ನಂತರದ ದಿನಗಳಲ್ಲಿ ನಾನೇನೂ ಹೇಳದಿದ್ದರೂ ಕರಪತ್ರ ಹಾಕಿದ ಬಗ್ಗೆ ಬಂದು ತನ್ನ ನಡವಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ. ಇದಕ್ಕೆಲ್ಲ ತನ್ನ ಭಾವ ಡಿಎಸ್‌ಎಸ್‌ನಲ್ಲಿರುವವನು ಕಾರಣ ಎಂದು ಹೇಳಿ ನನಗೆ ದಂಗುಬಡಿಸಿದ್ದ. ಇಂತಹ ವಿಷಯಗಳನ್ನೆಲ್ಲ ನಿಭಾಯಿಸುವ ಅನುಭವ ನನಗೆ ಇದ್ದುದರಿಂದ ಮತ್ತೇನು ಅದು ಬೆಳೆಯಲಿಲ್ಲ.

ನಂಜನಗೂಡಿನಲ್ಲಿ ನಾನಿರುವಾಗ ಪೋಲೀಸ್ ಇಲಾಖೆಯಲ್ಲಿ ಡಿ.ವೈ.ಎಸ್.ಪಿಯಾಗಿ ಪಿ.ಹೆಚ್. ರಾಣೆ, ಇಬ್ಬರು ಇನ್ಸ್ಪೆಕ್ಟರ್ ಮತ್ತು ನಾಲ್ಕು-ಐದು ಜನ ಸಬ್ ಇನ್ಸ್ಪೆಕ್ಟರ್‌ಗಳು ಇದ್ದರು. ನಾವೆಲ್ಲ ಊರಿನಲ್ಲಿರುವ ಯಾವುದೇ ಪ್ರತಿಷ್ಠಿತ ಮನರಂಜನೆಯ ಕ್ಲಬ್‌ಗಳಿಗೆ ಹೋಗುತ್ತಿರಲಿಲ್ಲ. ಅದರ ಬದಲು, ಪೋಲೀಸ್ ಸ್ಟೇಷನ್ ಬಳಿ ಇದ್ದ ವಿಶಾಲವಾದ ಮೈದಾನದಲ್ಲಿ ಬೆಳಗಿನ ಜಾವದಲ್ಲಿ ಬ್ಯಾಟ್‌ಮಿಂಟನ್, ಷಟಲ್ ಕಾಕ್ ಆಟ ಪ್ರಾರಂಭಿಸಿದ್ದೆವು. ಅಲ್ಲಿಗೆ ಕಂದಾಯ ಇಲಾಖೆಯಲ್ಲಿನ ವಿಎ, RI & ಸಬ್ ಇನ್ಸ್ಸ್ಪೆಕ್ರ‍್ಸ್ ಮತ್ತು ನನ್ನ ಬಿ.ಎ. ತರಗತಿಯ ಕ್ಲಾಸ್ ಮೇಟ್ ಆಗಿದ್ದ ನರಸಿಂಹಸ್ವಾಮಿ ಸೇರಿ ಒಂದೆರಡು ಘಂಟೆಗಳ ಕಾಲ ಆಟದಲ್ಲಿ ಕಳೆಯುತ್ತಿದ್ದೆವು. ಆಗಲೇ ತಾಲ್ಲೂಕಿನಲ್ಲಿನ ಸಮಸ್ಯೆಗಳನ್ನು ಸಾಂಧರ‍್ಭಿಕವಾಗಿ ಚರ‍್ಚಿಸಿ, ಶಾಂತಿ ಕಾಪಾಡಲು ಬೇಕಾದ ಕ್ರಮವಾಗಿ ಕೆಲವರನ್ನು ಒಂದೆರಡು ವಾರಗಳ ಕಾಲ ಸಬ್ ಜೈಲಿಗೆ ಕಳಿಸಲು ಕೋರುತ್ತಿದ್ದರು. ಇಲ್ಲವೇ ಪ್ರತಿ ವಾರವೂ ಹಾಜರಿರಲು ನೋಟಿಸ್ ನೀಡಿ ಬಾರದಿದ್ದಾಗ ದಸ್ತಗಿರಿ ಮಾಡಿ ತರಲು ನನ್ನಿಂದ ಅದೇಶ ಪಡೆದು ಕರೆತರುತ್ತಿದ್ದರು. ನಂತರ ವಿಚಾರಣೆ ಮಾಡಿ, ಒಳ್ಳೆಯ ನಡೆವಳಿಕೆಯ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡುತ್ತಿದ್ದೆವು. ಇನ್ನು ಕೆಲವು ಭಾರಿ ಈ ಎಲ್ಲ ಅಖPಅ 107 ಪ್ರಕರಣದಲ್ಲಿದ್ದ ಆಪಾದಿತರನ್ನು, ಗ್ರಾಮ ಸಹಾಯಕರನ್ನು ಒಟ್ಟುಗೂಡಿಸಿ ನಮ್ಮ ಕಛೇರಿಯ ಆವರಣದಲ್ಲಿದ್ದ ಜಾಗದಲ್ಲಿ ಗಿಡ ನೆಡಲು ಬೇಕಾದ ಗುಂಡಿ ತೆಗೆಯಲು ತೊಡಗಿಸಿ ದಿನದ ಕೊನೆಯಲ್ಲಿ ಕೇಸು ಕರೆದು ಕೇಸನ್ನು ಮುಂದೂಡುತ್ತಿದ್ದೆನು. ಹೀಗಾಗಿ ತಾಲ್ಲೂಕಿನಲ್ಲಿ, ಜಾತಿ ಜಗಳಗಳಾಗಲೀ, ದೊಂಬಿಗಳಾಗಲೀ ಮಾಡಲು ಪುಂಡ ಪೋಕರಿಗಳಿಗೆ ಅವಕಾಶವಿರುತ್ತಿರಲಿಲ್ಲ.

ತಾಲ್ಲೂಕು ಮಟ್ಟದ ನಾಯಕರು

1986ರ ನಂತರ ಶಾಸಕರುಗಳ ಜೊತೆ ಜಿಲ್ಲಾ ಪರಿಷತ್ ಚುನಾವಣೆಗಳು ಮುಕ್ತಾಯಗೊಂಡು ತಾಲ್ಲೂಕುಮಟ್ಟದಲ್ಲಿ ಹೆಜ್ಜಿಗೆ ರಾಮಯ್ಯ, ದೇವನೂರ ಸಿದ್ದಪ್ಪ, ಬಸವರಾಜ್, ಕಳಲೆ ಸಿದ್ದ ನಾಯಕ್, ಶಶಿಕಲಾ ನಾಗರಾಜ್ ಮತ್ತು ಶಶಿಕಲಾ ಬಾಲರಾಜ್ ಜೊತೆಗೆ ನಂಜನಗೂಡು ಟೌನ್‌ನಲ್ಲಿ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷರೂ ಇರುತ್ತಿದ್ದರು. ಇವರೆಲ್ಲ ಸಣ್ಣಪುಟ್ಟ ಕೆಲಸಗಳಿಗೆ ಶಿಫಾರಸ್ಸು ಮಾಡಲು ತಾಲ್ಲೂಕು ಕಛೇರಿಗೆ ಬರುತ್ತಿದ್ದರು. ಆಗುವ ಕೆಲಸ ಮಾಡುವುದರಲ್ಲಿ ವಿಳಂಬವಾಗದಂತೆ, ಆಗದಿರುವ ಕೆಲಸಗಳಿಗೂ ನನ್ನ ಮಟ್ಟದಲ್ಲೇ ಅವರಿಗೆ ವಿವರಿಸಿ ಹೇಳುತ್ತಿದ್ದೆ. ಅವರುಗಳು ಒಮ್ಮೊಮ್ಮೆ ಅದೇ ವಿಷಯಗಳನ್ನು ಶಾಸಕರುಗಳ ಹತ್ತಿರವೂ ಪ್ರಸ್ತಾಪಿಸಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು. ನನ್ನ ವಿವರಣೆ ಶಾಸಕರುಗಳಿಗೂ ಅದೇ ಆಗಿರುತ್ತಿತ್ತು. ಹಾಗಾಗಿ ಆಗುವ ಕೆಲಸಗಳಿಗೆ ಯಾವ ಶಿಫಾರಸ್ಸು ತಂದರೂ ಆಗುವುದಿಲ್ಲ ಎಂಬ ನಂಬಿಕೆ ಅವರಿಗೆಲ್ಲ ತಿಳಿದು ಬಂದಿತ್ತು.

ಗೃಹಮಂತ್ರಿಯಾಗಿದ್ದ ರಾಚಯ್ಯನವರು ಕರ‍್ನಾಟಕ ಕಂಡ ಹಿರಿಯ ಸಜ್ಜನ ರಾಜಕಾರಣಿ. ಅವರು ತಾಲ್ಲೂಕಿನಲ್ಲಿ ಪ್ರವಾಸ ಇರುವಾಗ, `ಇತರೆ ಇಬ್ಬರು ಶಾಸಕರುಗಳು ಯುವಕರಾಗಿದ್ದ ಕಾರಣ ಏನಾದರೂ ನಿನ್ನಿಂದ ತಪ್ಪು ಮಾಡಿಸಿ, ಮುಂದೆ ನೀನಿನ್ನು ಎಸಿ, ಡಿಸಿ ಆಗಬೇಕಾದವನು, ಎಚ್ಚರದಿಂದ ಕೆಲಸ ನರ‍್ವಹಿಸಬೇಕೆಂದು’ ಸಲಹೆ ನೀಡುತ್ತಿದ್ದರು. ನನಗಿಂತ ವಯಸ್ಸಿನಲ್ಲಿ, ಅನುಭವದಲ್ಲಿ ಸುಮಾರು 20 ವರ‍್ಷಗಳ ಅಂತರವಿದ್ದ ಅವರ ಮಾತು ನನಗೆ ನಿಜವಾದ ಕಳಕಳಿಯಿಂದ ಕೂಡಿದ ಮಾತಾಗಿತ್ತು. ಅವರಿಗೆ ಜನರಿಗೆ ಒಳ್ಳೆಯ ಆಡಳಿತ ನೀಡಿದರೆ ಸಾಕಾಗಿತ್ತು. ಮತ್ತಾವ ಒಳ ಒಪ್ಪಂದಗಳ ಮಾತು ಅವರ ಆಡಳಿತದಲ್ಲಿ ಸುಳಿಯುತ್ತಿರಲಿಲ್ಲ.

ಕಂದಾಯ ನೌಕರರ ದಿನಾಚರಣೆ

ವಿಧಾನಸಭೆ ಚುನಾವಣೆ ಆಗಿ ಮೂರು ರ‍್ಷವಾಗಿತ್ತು. ಜಿಲ್ಲಾ ಪರಿಷತ್ ಆಗತಾನೆ ಚುನಾವಣೆಗಳಾಗಿ ಹೊಸ ಸದಸ್ಯರುಗಳು ಆಯ್ಕೆಯಾಗಿದ್ದರು. ಮಾಮೂಲಿ ಕಂದಾಯ ಮತ್ತು ತಾಲ್ಲೂಕು ದಂಡಾಧಿಕಾರಿಯ ಕೆಲಸಗಳನ್ನು ಬಿಟ್ಟರೆ ಮತ್ತಾವ ಒತ್ತಡದ ಕೆಲಸಗಳು ಇರಲಿಲ್ಲ. ಹೀಗಿರುವಾಗ ಕಂದಾಯ ಅಧಿಕಾರಿಗಳು ರ‍್ಷಪರ‍್ತಿ ದುಡಿತದಲ್ಲೇ ಇದ್ದು, ಕಲೆ ಸಂಸ್ಕೃತಿ, ಸಂಗೀತದ ಬಗ್ಗೆ ಮುಖ ಮಾಡುವುದೇ ಇಲ್ಲ. ಈ ಬಗ್ಗೆ ನಾವ್ಯಾಕೆ ಇಡೀ ಜಿಲ್ಲೆಯ ನೌಕರರನ್ನು ಒಳಗೊಂಡಂತೆ 1-2ದಿನ ನಮ್ಮ ಕಂದಾಯ ನೌಕರರ ದಿನಾಚರಣೆ ಆಚರಿಸಬಾರದು ಎಂದು ನಮ್ಮ ಎಸಿ ತ್ರಿಪಾಠಿಯವರ ಜೊತೆ ಚರ‍್ಚಿಸಿ, ನಂತರ ಡಿಸಿಗೂ ಹೇಳಿದೆ.

ಎಲ್ಲ ತಹಸೀಲ್ದಾರ್ ಮಿತ್ರರೊಡನೆ ಕೂಡ ಮೌಖಿಕವಾಗಿ ಚರ‍್ಚಿಸಿ ಅವರ ಸಹಕಾರವನ್ನು ಕೋರಿದೆ. ಅದರಂತೆ, ವಿವಿಧ ಆಟಗಳ ಸ್ಪರ್ಧೆ, ಹಾಡುಗಾರಿಕೆ, ಕೊನೆಯ ದಿನದಲ್ಲಿ ಮಹಾಭಾರತದ ಕುರುಕ್ಷೇತ್ರದ ನಾಟಕ ಎಂದೆಲ್ಲ ತಯಾರಿಗಳು ನಡೆದವು. ಹುಣಸೂರು, ಮೈಸೂರು ಮತ್ತು ನಂಜನಗೂಡು ಉಪ ವಿಭಾಗಗಳ ಉಪ ವಿಭಾಗಾಧಿಕಾರಿಗಳು, ಎಲ್ಲಾ ತಾಲ್ಲೂಕು ತಹಸೀಲ್ದಾರರು, ವಿಎ, ಆರ್‌ಐ ಹಾಗೂ ಕಛೇರಿ ಸಿಬ್ಬಂದಿ ಎಲ್ಲರೂ ಎಲ್ಲ ಆಟ ಪಾಠಗಳಲ್ಲಿ ಭಾಗವಹಿಸಿದ್ದರು. ಆಟಗಳಲ್ಲಿ ಕಬಡ್ಡಿ, ಬ್ಯಾಟ್ ಮಿಂಟನ್, ಷಟಲ್ ಕಾಕ್, ವಾಲಿಬಾಲ್, ಚೆಸ್ ಹೀಗೆಲ್ಲ ಸ್ರ‍್ಧೆಗಳನ್ನು ನರ‍್ವಹಿಸಲು ಎಇಓ ಅವರನ್ನು ಸಂರ‍್ಕಿಸಿ ಒಬ್ಬ ಕ್ರೀಡಾ ಅಧಿಕಾರಿಯನ್ನು ಕೋರಿದ್ದೆ. ಅವರು ಎಲ್ಲಾ ಕ್ರೀಡೆಗಳನ್ನು ವ್ಯವಸ್ಥೆಗೊಳಿಸಿ, ಆಡಿಸಿ ಬಹುಮಾನಿತರ ಪಟ್ಟಿ ನೀಡಿದ್ದರು. ನಿಯಮಿತ ಅಭ್ಯಾಸಗಳು ಇಲ್ಲದ ಆಟಗಾರರೊಬ್ಬರು ಕಬ್ಬಡಿ ಆಟದಲ್ಲಿ ಬಿದ್ದು ಅವರ ಕೈ ಮುರಿದಿತ್ತು. ಸದ್ಯ ಅವರನ್ನು ನಂಜನಗೂಡಿನಲ್ಲಿಯೇ ಉಪಚರಿಸಿ ಸುಧಾರಿಸುವಂತಾಯಿತು.

ಈ ಸಮಾರಂಭಕ್ಕೆ ಮೊದಲ ದಿನ ಎಲ್ಲಾ ಸ್ಪರ್ಧೆಗಳನ್ನು ನಡೆಸಿ ಎರಡನೇ ದಿನ ಸಮಾರೋಪ ಸಮಾರಂಭ ಮತ್ತು ನಾಟಕವಿತ್ತು. ಆಗ ಮೈಸೂರು ವಿಭಾಗಕ್ಕೆ ವಿಭಾಗಾಧಿಕಾರಿಗಳಾಗಿದ್ದ ನೀಲಕಂಠರಾಜು, ಡಿಸಿ ವಿ.ಪಿ. ಬಳಿಗಾರ್, ಹುಣಸೂರು ಎಸಿಯಾಗಿದ್ದ ಶಿವಲಿಂಗಮರ‍್ತಿ, ಮೈಸೂರು ಎಸಿ ಈಶ್ವರ್ ನಮ್ಮ ಎಸಿ ಯೋಗೇಂದ್ರ ತ್ರಿಪಾಠಿ ಎಲ್ಲ ಸಂತೋಷದಿಂದ ಭಾಗವಹಿಸಿದ್ದರು. ನಮ್ಮಲ್ಲಿದ್ದ 80 ಜನ ಗ್ರಾಮ ಸಹಾಯಕರಿಗೆ ವಿಶೇಷವಾದ ಸಮವಸ್ತ್ರ ಹೊಲಿಸಿ ಹೊಸ ಬೂಟುಗಳನ್ನು ಕೊಡಿಸಿ, ಅವರಿಗೆ ಪೋಲೀಸ್ ಪೇದೆಗಳಂತೆ ತರಬೇತಿಯನ್ನು ನೀಡಲು ನಮಲ್ಲಿಯೇ ಇದ್ದ ಕಸಬಾ ವಿಎ – ರಾಧಾಕೃಷ್ಣನಿಗೆ ಜವಾಬ್ದಾರಿ ನೀಡಿದ್ದೆ. ರಾಧಾಕೃಷ್ಣ VA ಆಗಿದ್ದರೂ ಒಬ್ಬ DSPಯಂತೆ ಪೊಲೀಸ್ ನಡವಳಿಕೆಗಳನ್ನು ರೂಢಿಸಿಕೊಂಡಿದ್ದ. ಅವನ ಕೆಳಗೆ ತರಬೇತಿಗೊಂಡ ನಮ್ಮ ಗ್ರಾಮ ಸಹಾಯಕರು ಶಿಸ್ತಿನ ಪೊಲೀಸ್ ಪೇದೆಗಳಂತೆ ನಡೆದುಕೊಳ್ಳುತ್ತಿದ್ದರು.

ಸಮಾರಂಭ ಪ್ರಾರಂಭವಾಗುವ ಮುನ್ನ ನಮ್ಮ ಗ್ರಾಮ ಸಹಾಯಕರೆಲ್ಲ ಒಟ್ಟಿಗೆ ಸಮವಸ್ತ್ರದಲ್ಲಿದ್ದು, ಪೋಲೀಸ್ ಇಲಾಖೆ ನೀಡುವ ‘ಗಾರ್ಡ್ ಆಫ್ ಆನರ್’ನಂತೆ ಎಲ್ಲ ಅತಿಥಿಗಳಿಗೂ ಗೌರವ ವಂದನೆ ನೀಡಿದಾಗ ‘you have summoned police personnel also here’ ಎಂದು ಡಿವಿಸಿ ಉದ್ಘಾರ ತೆಗೆದರು. ‘ನೋ ಸರ್, ಇವರೆಲ್ಲ ನಮ್ಮ ತಾಲ್ಲೂಕಿನ ಗ್ರಾಮ ಸಹಾಯಕರು’ ಎಂದಾಗ ಅವರು ಅಚ್ಚರಿ ವ್ಯಕ್ತಪಡಿಸಿ, ಪ್ರಶಂಸೆ ಕೂಡ ಮಾಡಿದ್ದರು. ಇಂತಹ ಕಂದಾಯ ದಿನಾಚರಣೆಯನ್ನು ನಾನು ಆಯೋಜಿಸಲು ಮುಂದಾಗಿದ್ದಕ್ಕೆ, ನರ‍್ವಹಿಸಿದ್ದಕ್ಕೆ ಡಿವಿಸಿ ಮೊದಲ್ಗೊಂಡು ಎಲ್ಲರೂ ಆಗ ನನ್ನನ್ನು ಪ್ರಶಂಸಿದರು.

ಎಲ್ಲರಿಗಿಂತಲೂ ಹೆಚ್ಚಾಗಿ ನಮ್ಮ ಎಸಿ ಯಾಗಿದ್ದ ತ್ರಿಪಾಠಿ ಅವರು ತುಂಬಾ ಖುಷಿಯಲ್ಲಿದ್ದರು. ಜೊತೆಗೆ ನಮ್ಮ ತಾಲ್ಲೂಕಿನ ಎಲ್ಲಾ ಸಿಬ್ಬಂದಿ ನಾವೆಲ್ಲ ಒಂದು ಕುಟುಂಬ ಎಂಬ ಭಾವನೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಏನು ಬೇಕಾದರೂ ಸಾಧಿಸಬಹುದೆಂಬ ಸದ್ಭಾವನೆ ಮೂಡುವಂತಾಗಿತ್ತು. ಕೊನೆಯಲ್ಲಿ ಕಲಿತು ಪ್ರರ‍್ಶಿಸಿದ ನಾಟಕದ ಪ್ರಥಮ ದೃಶ್ಯದಲ್ಲಿ ನಾನು ಕೃಷ್ಣನ ಪಾತ್ರಧಾರಿಯಾಗಿ ಹಾಡೊಂದನ್ನು ಹಾಡಿ ಪ್ರಾರಂಭವಾಗುವಂತೆ ನಾಟಕದ ನರ‍್ದೇಶನ ಮಾಡಿದ್ದ ಮೇಷ್ಟರು ವ್ಯವಸ್ಥೆ ಮಾಡಿದ್ದರು. ನಾನು ಕೃಷ್ಣನ ಪಾತ್ರದ ಪೋಷಾಕಿನಲ್ಲಿ ಹಾಡಿ ಸಂತೋಷಪಟ್ಟಿದ್ದು ಈಗ 35 ವರ‍್ಷಗಳ ನಂತರವೂ ಹಸಿರಾಗಿದೆ.(ಬರಹ:ರುದ್ರಪ್ಪ ಹನಗವಾಡಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಆರೋಗ್ಯ ಯೋಜನೆಗೆ ಸಿಎಂ ಚಾಲನೆ ; ಯಾವೆಲ್ಲಾ ಚಿಕಿತ್ಸೆಗಳು ಉಚಿತ..? ಇಲ್ಲಿದೆ ಸಂಪೂರ್ಣ ಮಾಹಿತಿ

Published

on

ಸುದ್ದಿದಿನಡೆಸ್ಕ್:ಸಿಎಂ ಸಿದ್ದರಾಮಯ್ಯ ಸರ್ಕಾರ ಗೃಹ ಆರೋಗ್ಯ ಯೋಜನೆಗೆ ಗುರುವಾರ ಚಾಲನೆ ನೀಡಿದೆ. ಆ ಮೂಲಕ ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.

ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಮೂಲಕ ಜನರ ಜೀವ ರಕ್ಷಣೆ ಮಾಡುವ ಕಾರ್ಯಕ್ರಮ ಇದಾಗಿದ್ದು, ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೋಲಾರ ಜಿಲ್ಲೆಯಿಂದ ಆರಂಭವಾಗಲಿರುವ ಗೃಹ ಆರೋಗ್ಯ ಯೋಜನೆ, ಜನವರಿ ತಿಂಗಳಿನಲ್ಲಿ ರಾಜ್ಯಾದ್ಯಂತ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಹಾಗಾದ್ರೆ ಯಾವ ಯಾವ ಗೃಹ ಆರೋಗ್ಯ ಯೋಜನೆ, ಹೇಗೆ ಕಾರ್ಯ ನಿರ್ವಹಿಸಲಿದೆ ಎಂದು ನೋಡೊದಾದ್ರೆ.

ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಸುರಕ್ಷಾಣಾಧಿಕಾರಿಗಳು ಸೇರಿದಂತೆ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಜನರ ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಲಿದ್ದಾರೆ.

2ವಾರದಲ್ಲಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ದಿನಕ್ಕೆ 15 ಮನೆಗಳಂತೆ ಭೇಟಿ ನೀಡಿ ತಪಾಸಣೆ ಕಾರ್ಯ ನಡೆಸಲಿದ್ದಾರೆ.

ಯಾವೆಲ್ಲಾ ಚಿಕಿತ್ಸೆಗಳು

• ಬಾಯಿ ಕ್ಯಾನ್ಸರ್, ಮಹಿಳೆಯರ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಸೇರಿದಂತೆ ಬೇರೆ ರೋಗಗಳ ಬಗ್ಗೆ ಪರೀಕ್ಷಿಸಲಾಗುತ್ತದೆ.

• ಅಸಂಕ್ರಾಮಿಕ ರೋಗಗಳಿಂದ ದೂರವಿರಲು ಜೀವನಶೈಲಿ ಮಾರ್ಪಾಡು ಮಾಡಲು ಆರೋಗ್ಯ ಸಿಬ್ಬಂದಿಯಿಂದ ಸಲಹೆ ನೀಡಲಾಗುತ್ತದೆ.

• ರೋಗಿಗಳಿಗೆ ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷಧಿಗಳನ್ನು ಮಾತ್ರೆಯನ್ನ ಜನರ ಬಳಿಗೆ ಒದಗಿಸಲು ಯೋಜನೆಯಲ್ಲಿ ರೂಪ ರೇಷ ಸಿದ್ಧಪಡಿಸಲಾಗಿದೆ.

ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗುತ್ತಿದ್ದು, ಜನವರಿ ತಿಂಗಳ ಬಳಿಕ ರಾಜ್ಯಾದ್ಯಂತ ಯೋಜನೆ ಜಾರಿಗೆ ಬರಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ11 hours ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ2 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

ದಿನದ ಸುದ್ದಿ2 days ago

ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ...

ದಿನದ ಸುದ್ದಿ2 days ago

ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ...

ದಿನದ ಸುದ್ದಿ3 days ago

ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ :‌ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ...

ದಿನದ ಸುದ್ದಿ3 days ago

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ...

ದಿನದ ಸುದ್ದಿ3 days ago

ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ

ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನೀಡಲು ಹರಾಜು ಕರೆಯಲಾಗಿದ್ದು, ಕಾರಣಾಂತರಗಳಿಂದ ಹರಾಜು ದಿನಾಂಕವನ್ನು ಮಾ.20 ರ ಬೆಳಿಗ್ಗೆ 11.00 ಗಂಟೆಗೆ...

ದಿನದ ಸುದ್ದಿ3 days ago

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಚನ್ನಗಿರಿ ನ್ಯಾಯಾಯದಲ್ಲಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರಾಗಿರುವ ಕು.ಶಮಾ...

ದಿನದ ಸುದ್ದಿ3 days ago

ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ

ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ನಮಗೆಲ್ಲರಿಗೂ ಒಂದು ಉತ್ತಮ ಜೀವನವನ್ನ ನಿರ್ಮಿಸಲು ಉದ್ಯೋಗ ಅತ್ಯಗತ್ಯ. ಆದರೆ, ಇತ್ತೀಚಿನ...

Trending