Connect with us

ದಿನದ ಸುದ್ದಿ

ಯಾರು ಪ್ರಗತಿಪರರು? : ದಿನೇಶ್ ಅಮಿನ್ ಮಟ್ಟು

Published

on

ನಾನು ಮುಸುಕಿನ ಗುದ್ದಾಟ ನಡೆಸಲು ಹೋಗುವುದಿಲ್ಲ, ಯಾರದೋ ಹೆಗಲ ಮೇಲೆ ಬಂದೂಕು ಇಡುವುದೂ ಇಲ್ಲ, ನನ್ನ ಅಭಿಪ್ರಾಯ ಮಂಡಿಸಲು ಥಿಯರಿಗಳ ಮೂಟೆಗಳನ್ನು ಉರುಳಿಸಿ ಯಾರನ್ನೂ ಗೊಂದಲಕ್ಕೀಡುಮಾಡುವುದೂ ಇಲ್ಲ. ನೇರವಾಗಿ ವಿಷಯಕ್ಕೆ ಬರ್ತೇನೆ.

ಪ್ರಗತಿಪರರು ಯಾರು ಎನ್ನುವ ಪ್ರಶ್ನೆಗೆ ಉತ್ತರ ಬೇಕಲ್ಲಾ? ಮುಸುಕು ತೆಗೆದಿದ್ದೇನೆ, ಹೆಸರು ಬರ್ಕೊಳ್ಳಿ: ದೊರೆಸ್ವಾಮಿ, ದೇವನೂರ,ಚಂಪಾ, ಸುಬ್ಬಯ್ಯ ಬರಗೂರು, ಮರುಳಸಿದ್ದಪ್ಪ, ಸಿದ್ದರಾಮಯ್ಯ,ಗೋವಿಂದರಾವ್, , ಬಿಳಿಮಲೆ, ಅಸ್ಸಾದಿ, ಚೆನ್ನಿ, ಸಿದ್ದಯ್ಯ, ಕಾಳೇಗೌಡ, ಇಂಧೂಧರ, ಬಂಜಗೆರೆ, ರಹಮತ್, ಹುಳಿಯಾರ್, ರವಿವರ್ಮಕುಮಾರ್, ಗಣೇಶ್ ದೇವಿ, ವಿಜಯಮ್ಮ, ಮಾಲಗತ್ತಿ…ಪಟ್ಟಿ ಉದ್ದ ಇದೆ.

ಇವರ ಜತೆ ಜನನುಡಿ, ಮೇ ಸಾಹಿತ್ಯಮೇಳ, ನಾವು ನಮ್ಮಲ್ಲಿ, ಉಡುಪಿ-ಗುಬ್ಬಿ-ಗುಡಿಬಂಡೆ ಚಲೋ, ದಿಡ್ಡಳ್ಳಿ ಚಲೋ ಮೊದಲಾದ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಕನಸುಕಂಗಳ ಸಾವಿರಾರು ಯುವಕ-ಯುವತಿಯರಿದ್ದಾರೆ. ಈ ಪಟ್ಟಿಯಲ್ಲಿ ಎಡಪಕ್ಷಗಳ ಸದಸ್ಯರಾಗಿರುವವರನ್ನು ನಾನು ಸೇರಿಸಿಲ್ಲ. ಸದ್ಯ ಇಷ್ಟಕ್ಕೆ ನಿಲ್ಲಿಸ್ತೇನೆ.
ಮೊದಲನೆಯದಾಗಿ, ಇವರು ಜಾತ್ಯತೀತತೆಯ ರಕ್ಷಣೆಯ ಸೈದ್ಧಾಂತಿಕ ಗುತ್ತಿಗೆಯನ್ನು ಪಡೆದಿರುವುದು ಬಸವಣ್ಣ, ಗಾಂಧೀಜಿ, ಅಂಬೇಡ್ಕರ್, ಲೋಹಿಯಾ, ಪೆರಿಯಾರ್ ಅವರಿಂದ ಹೊರತು ಕಾಂಗ್ರೆಸ್ ಪಕ್ಷದಿಂದ ಅಲ್ಲ.

ಇವರಲ್ಲಿ ಬಹುತೇಕ ಮಂದಿ 75-77ರ ಕಾಲದಲ್ಲಿ ಇಂದಿರಾಗಾಂಧಿಯವರ ತುರ್ತುಪರಿಸ್ಥಿತಿಯನ್ನು ವಿರೋಧಿಸಿದವರು, 1989ರಲ್ಲಿ ರಾಜೀವ್ ಗಾಂಧಿಯವರ ವಿರುದ್ಧ ಸಿಡಿದೆದ್ದಿದ್ದ ಮತ್ತು ಮಂಡಲ್ ವರದಿ ಜಾರಿಗೆ ತಂದಿದ್ದ ವಿ.ಪಿ.ಸಿಂಗ್ ಪರವಾಗಿ ನಿಂತವರು. ಈ ಎರಡೂ ಸಂದರ್ಭಗಳಲ್ಲಿ ಜನಸಂಘ-ಬಿಜೆಪಿ ಕಾರ್ಯಕರ್ತರು ಇವರ ಜತೆಗಿದ್ದರು. ಆಗ ಯಾರೂ ಇವರಿಗೆ ಕೇಸರಿ ಬಣ್ಣ ಬಳಿಯಲಿಲ್ಲ, ಚಡ್ಡಿ ಹಾಕಲಿಲ್ಲ, ಗಂಜಿ ಗಿರಾಕಿ ಅನ್ನಲಿಲ್ಲ.

ಎರಡನೆಯದಾಗಿ, ಹಿಂದಿನ ಇತಿಹಾಸ ಬೇಡ, ಕಳೆದ ಐದು ವರ್ಷಗಳ ಅವಧಿಯಲ್ಲಿ ಇವರೆಲ್ಲರೂ ರಾಜ್ಯದಲ್ಲಿ ಕೋಮುವಾದದ ವಿರುದ್ಧದ ಮತ್ತು, ಜಾತ್ಯತೀತತೆಯನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಬಿಜೆಪಿ ವಿರುದ್ಧ ಮಾತ್ರವಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಮಾತನಾಡಿದ್ದಾರೆ. ಹೌದು, ಸಿದ್ದರಾಮಯ್ಯನವರ ವಿಷಯದಲ್ಲಿ ಸಕಾರಣವಾಗಿ ಮೆದುವಾಗಿದ್ದರು.

ಈ ಮೆದು ಧೋರಣೆಯಿಂದ ಇವರು ಪಡೆದ ಲಾಭಗಳೇನು? ಐದು ವರ್ಷಗಳ ಅವಧಿಯಲ್ಲಿ ಇವರಲ್ಲಿ ಎಷ್ಟು ಮಂದಿಯ ಆದಾಯ ದುಪ್ಪಟ್ಟಾಯಿತು? ಎಷ್ಟುಮಂದಿ ಸರ್ಕಾರಿ ಮನೆ-ಸೈಟು ತೆಗೆದುಕೊಂಡರು? ಎಷ್ಟುಮಂದಿ ವಿಧಾನಪರಿಷತ್ ಗೆ ನಾಮಕರಣಗೊಂಡರು? ಎಷ್ಟುಮಂದಿ ತಮ್ಮ ಕುಟುಂಬದ ಸದಸ್ಯರಿಗೆ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಸ್ಪರ್ಧೆಗೆ ಟಿಕೆಟ್ ಕೊಡಿಸಿದರು? ಇವರನ್ನು ಕಾಂಗ್ರೆಸ್ ಪಕ್ಷದ ಜತೆ ಜೋಡಿಸಿ ಗೇಲಿ ಮಾಡುತ್ತಿರುವವರು ದಯವಿಟ್ಟು ಇವರು ಸರ್ಕಾರದಿಂದ ಪಡೆದಿರುವ ಲಾಭಗಳೇನು ಎನ್ನುವುದನ್ನು ತಿಳಿಸಿ.

ತಮ್ಮ ವಯಸ್ಸು-ಆರೋಗ್ಯವನ್ನು ಮರೆತು ಕೋಮುವಾದದ ವಿರುದ್ಧ ಏಕಾಂಗಿಗಳಾಗಿ ಹೋರಾಟಕ್ಕಿಳಿದಿರುವ ಒಬ್ಬ ಶ್ರೀನಿವಾಸ ಕಾರ್ಕಳ, ಒಬ್ಬ ಸುರೇಶ್ ಭಟ್ ಬಾಕ್ರಬೈಲ್, ಒಬ್ಬ ಸನತ್ ಕುಮಾರ ಬೆಳಗಲಿ ಸರ್ಕಾರದಿಂದ ಪಡೆದ ಲಾಭಗಳೇನು? ತನ್ನ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವ ಪುರುಷೋತ್ತಮ ಬಿಳಿಮಲೆಯವರು ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ದುಡ್ಡು ಬೇಡ ಎಂದವರು ಗೊತ್ತಾ?

ಹೌದು, ಇವರಲ್ಲಿ ಹೆಚ್ಚಿನವರು ಅಕಾಡೆಮಿ-ಪ್ರಾಧಿಕಾರದ ಪದಾಧಿಕಾರಿಗಳಾಗಿ ನೇಮಕಗೊಂಡಿದ್ದಾರೆ. ಯಾವುದೇ ರಾಜಕೀಯ ಪಕ್ಷ ಅಧಿಕಾರಕ್ಕೆ ಬಂದಾಗ ವಿಶಾಲ ಅರ್ಥದಲ್ಲಿ ಸೈದ್ಧಾಂತಿಕ ಸಹಮತ ಹೊಂದಿರುವವರನ್ನು ಸಾಹಿತ್ಯ-ಸಾಂಸ್ಕೃತಿಕ ಸಂಘಟನೆಗಳಿಗೆ ನೇಮಕಮಾಡುತ್ತದೆ ಮತ್ತು ಆ ರೀತಿಯೇ ನೇಮಕ ಮಾಡಬೇಕು. ಇವರನ್ನು ಬಿಟ್ಟು ಭೈರಪ್ಪ, ಚಿದಾನಂದ ಮೂರ್ತಿ, ದೊಡ್ಡರಂಗೇಗೌಡರನ್ನು ನೇಮಕಮಾಡೋಕ್ಕಾಗುತ್ತಾ?

ಈ ರೀತಿ ನೇಮಕಗೊಂಡವರಲ್ಲಿ ಯಾರಾದರೂ ತಮ್ಮ ಸೈದ್ಧಾಂತಿಕ ಬದ್ದತೆಯಲ್ಲಿ ರಾಜಿ ಮಾಡಿಕೊಂಡ ಉದಾಹರಣೆಗಳಿದ್ದರೆ ತಿಳಿಸಿ. ಇವರಲ್ಲಿ ಯಾರಾದರೂ ತಮ್ಮ ಅರ್ಹತೆಯನ್ನು ಮೀರಿ ಸ್ಥಾನಮಾನ ಗಳಿಸಿದ್ದರೆ ಅದನ್ನೂ ತಿಳಿಸಿ.

ಪ್ರಗತಿಪರರು ಯಾರು ಎನ್ನುವ ವ್ಯಾಖ್ಯಾನದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಕಾಗಿಲ್ಲ ಸ್ವಾಮಿ. ಬಹಳ ಸರಳವಾಗಿದೆ. ಪ್ರಗತಿವಿರೋಧಿಗಳಲ್ಲದವರೆಲ್ಲರೂ ಪ್ರಗತಿಪರರೇ ಆಗಿರುತ್ತಾರೆ. ಪ್ರಗತಿ ಎಂದರೆ ಏನು ಎನ್ನುವ ಉಡಾಫೆ ಪ್ರಶ್ನೆ ಕೇಳಿದರೆ ಅದಕ್ಕೆ ನನ್ನ ಉತ್ತರ: ಬಸವ,ಗಾಂಧಿ,ಅಂಬೇಡ್ಕರ್, ಲೋಹಿಯಾ ಹೇಳಿರುವ ಪ್ರಗತಿ.

ಪ್ರಗತಿಪರರು ಪರಿಪೂರ್ಣರೇ? ಖಂಡಿತ ಅಲ್ಲ, ಮನುಷ್ಯ ಮಾತ್ರರಾದ ಅವರಲ್ಲಿಯೂ ಸಣ್ಣಪುಟ್ಟ ಆಸೆ, ಲೋಭ, ಸ್ವಾರ್ಥ, ಅಸೂಯೆಗಳಿರಬಹುದು. ಇವರ ನಡುವೆ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳೂ ಇರಬಹುದು. ಹೀಗಿದ್ದರೂ ಫ್ಯಾಸಿಸಮ್, ಸರ್ವಾಧಿಕಾರ ಮತ್ತು ಕೋಮುವಾದದ ಪ್ರಶ್ನೆಗಳು ಎದುರಾದಾಗ ಭಿನ್ನತೆಗಳನ್ನೆಲ್ಲವನ್ನೂ ಮರೆತು ಒಂದಾಗಿ ಇವರು ಕೈಕೈ ಹಿಡಿದು ಬೀದಿಗಿಳಿದಿದ್ದಾರೆ. ದೇಶ-ಕಾಲದ ಕರೆಗೆ ತಕ್ಕ ಹಾಗೆ ತಮ್ಮ ಶತ್ರುಗಳನ್ನು ಅವರು ಬದಲಾಯಿಸಿಕೊಂಡಿದ್ದಾರೆ, ಅಷ್ಟೆ.

ಕಾಲದ ಚಕ್ರ ಒಂದು ಸುತ್ತು ಮುಗಿಸಿದೆ. ಕಾಂಗ್ರೆಸ್ ಜಾಗದಲ್ಲಿ ಬಿಜೆಪಿ ಬಂದು ನಿಂತಿದೆ. ಹಳೆಯ ಸರ್ವಾಧಿಕಾರಿ ಇಂದಿರಾಗಾಂಧಿಯ ಸ್ಥಾನದಲ್ಲಿ ಕೋಮುವಾದದ ವಿಷಯೇರಿಸಿಕೊಂಡ ಹೊಸ ಸರ್ವಾಧಿಕಾರಿ ಅಬ್ಬರಿಸುತ್ತಿದ್ದಾರೆ.ಸರ್ವಾಧಿಕಾರಕ್ಕೆ ಬಲಿಯಾದವರೇ ಸರ್ವಾಧಿಕಾರಿಯ ಭಕ್ತರಾಗಿರುವ ವಿಚಿತ್ರ ಪರಿಸ್ಥಿತಿಯಲ್ಲಿ ‘’ಮೆದುಳು ತೊಳೆಯಲು’’ ನಮಗೆ ಇನ್ನಷ್ಟು ಸಂಖ್ಯೆಯ ಪ್ರಗತಿಪರರು ಬೇಕು. ಸಾಧ್ಯವಾದರೆ ಈ ಪ್ರಯತ್ನಕ್ಕೆ ಇದಕ್ಕೆ ಕೈಜೋಡಿಸಿ. ಅದು ಬಿಟ್ಟು ಅಡ್ಡಗೋಡೆಯ ಮೇಲೆ ಕೂತು ಅವರತ್ತ ಕಲ್ಲೆಸೆದು, ಅವರ ಬಗ್ಗೆ ಇನ್ನಷ್ಟು ಸಂಶಯಗಳನ್ನು ಹುಟ್ಟುಹಾಕಿ ನೈತಿಕವಾಗಿ ಅವರು ಕುಸಿಯುವಂತೆ ಮಾಡುವ ಜನದ್ರೋಹದ ಕೆಲಸ ಮಾಡಬೇಡಿ

ಪ್ರಗತಿಪರರನ್ನು ಹಂಗಿಸಿ, ನಿಂದಿಸಿ ಮೂಲೆಗೆ ತಳ್ಳುವ ಈ ಹುನ್ನಾರ ಪ್ರಾರಂಭಿಸಿದವರು ಬಲಪಂಥೀಯ ಪಡೆ. ಈಗ ನಮ್ಮವರೇ ಕೆಲವರು ಆ ಖೆಡ್ಡಾದಲ್ಲಿ ಬಿದ್ದಿದ್ದಾರೆ. ಅರಿವಿಲ್ಲದೆ ಖೆಡ್ಡಾದಲ್ಲಿ ಬಿದ್ದಿದ್ದರೆ ಅವರನ್ನೂ ಎತ್ತಿ ನಮ್ಮೊಂದಿಗೆ ಕರೆದೊಯ್ಯೋಣ. ಎಲ್ಲವೂ ಅರಿವಿದ್ದು ಆ ಕಡೆಯಿಂದ ಸುಫಾ ರಿ ಪಡೆದಿದ್ದರೆ ಅವರವರ ಕರ್ಮ ನಾವೇನು ಮಾಡಲಾಗದು. ನಾವು ಅಂಪೈರ್ ಗಳಲ್ಲ, ಆಟಗಾರರು. ಗೆಲುವು ನಮ್ಮದೇ.

(ಇಷ್ಟು ಬರೆಯಲು ಸ್ಪೂರ್ತಿ ನೀಡಿದ N A Mahamad Ismail ಪೋಸ್ಟ್ ಗೆ ಋಣಿಯಾಗಿದ್ದೇನೆ)

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ16 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ17 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ17 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ17 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ17 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ19 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ19 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending