Connect with us

ನೆಲದನಿ

ಕಲೆಯೊಳಗೆ ಕಾಯಕ ಕಾಣುವ ಕಲಾವಿದ : ರವೀಂದ್ರ ಅರಳಗುಪ್ಪಿ ಅವರ ಕಲಾತ್ಮಕ ಬದುಕಿನ ಸುತ್ತ

Published

on

ಭಾರತವು ವಿವಿಧತೆಯನ್ನು ಏಕತೆಯನ್ನು ಕಂಡ ನಾಡು. ಇಲ್ಲಿ ವಿಭಿನ್ನವಾದ ಸಂಸ್ಕøತಿ, ಆಚಾರ, ವಿಚಾರಗಳಿದ್ದರು ಕೂಡ ಈ ಎಲ್ಲಾ ಭಿನ್ನತೆಗಳು ಜೀವಪರವಾದ ಆಶಯಗಳನ್ನು ಮೈಗೂಡಿಸಿಕೊಂಡಿವೆ. ಇಂತಹ ಜೀವಪರ ಸಂಸ್ಕøತಿಯ ಭಾಗವಾಗಿ ಬೆಳೆದು ಬಂದಿರುವ ಕಲೆಯೂ ಕೂಡ ಸಮಕಾಲೀನ ಸಮಾಜದ ಹಲವಾರು ನೋವು, ನಲಿವುಗಳಿಗೆ ಸ್ಪಂದಿಸುತ್ತ ಬಂದಿದೆ. ಒಂದು ಕಲೆಯನ್ನು ಜೀವ ಚೈತನ್ಯದ ಪರವಾಗಿ ಸಿದ್ಧಗೊಳಿಸುವ ಜವಬ್ದಾರಿಯು ಒಬ್ಬ ಸೃಜನಶೀಲ ಕಲಾವಿದನ ಮೇಲೆ ನಿಂತಿರುತ್ತದೆ. ಆಯಾ ಕಲಾವಿದರ ಮನಸ್ಥಿತಿಗೆ ಅನುಗುಣವಾಗಿ ಕಲೆಯು ತನ್ನ ಬೆಳವಣಿಗೆಯನ್ನು ಕಂಡುಕೊಳ್ಳುತ್ತದೆ. ಕಲಾವಿದನು ತನ್ನ ಕಲೆಯನ್ನು ವ್ಯವಹಾರಿಕ ನೆಲೆಯಲ್ಲಿ ಮಾತ್ರ ಮುನ್ನಡೆಸಿದರೆ ಅದು ಆರ್ಥಿಕತೆಯನ್ನು ಅಭಿವೃದ್ಧಿಪಡಿಸುವತ್ತ ಸಾಗುತ್ತದೆ. ಅದೇ ಕಲೆಯನ್ನು ಜೀವಪರವಾದ ಕಾಳಜಿಯೊಂದಿಗೆ ಬೆರೆಸಿ, ಸಮಾಜ ಸುಧಾರಣೆಗೆ ಮುಂದಾದರೆ ಒಂದು ಆರೋಗ್ಯಪೂರ್ಣ ಸಮಾಜದ ನಿರ್ಮಾಣದೆಡೆಗೆ ಕಲೆಯು ತನ್ನ ಯಾನವನ್ನು ಮುಂದುವರೆಸುತ್ತದೆ. ಹೀಗೆ ಕಲೆಯನ್ನು ಒಂದು ವ್ಯವಹಾರಿಕ ದೃಷ್ಟಿಕೋನಕ್ಕಷ್ಟೆ ಸೀಮಿತಗೊಳಿಸದೆ ಜೀವಜಗತ್ತಿಗೆ ಮಹತ್ತರವಾದ ಸಂದೇಶ ನೀಡುವಂತೆ ಸಿದ್ಧಗೊಳಿಸಿಕೊಂಡು ಬಂದವರಲ್ಲಿ ಶ್ರೀಯುತ ರವೀಂದ್ರ ಹೆಚ್ ಅರಳಗುಪ್ಪಿ ಅವರು ಒಬ್ಬರಾಗಿದ್ದಾರೆ. ಶ್ರೀಯುತರು ತಮ್ಮ ಕಲಾ ಬದುಕನ್ನು ಜೀವಪರವಾದ ನೆಲೆಯಲ್ಲಿ ಪ್ರತಿಸ್ಪಂದಿಸುತ್ತ ಬಂದಿರುವ ಕ್ರಮವನ್ನು ಅನಾವರಣಗೊಳಿಸುವುದೆ ಇಂದಿನ ನೆಲದನಿಯ ಪ್ರಮುಖ ಆಶಯವಾಗಿದೆ.

ಶ್ರೀಯುತ ರವೀಂದ್ರ ಅರಳಗುಪ್ಪಿ ಅವರು ರಾಣೆಬೆನ್ನೂರು ತಾಲ್ಲೂಕಿನ ತುಮ್ಮಿನಕಟ್ಟೆಯಲ್ಲಿ ಜನ್ಮತಳೆದರು ಸಹ ಬೆಳೆದದ್ದು ಮಾತ್ರ ಹಿರೆಕೇರೂರು ತಾಲ್ಲೂಕಿನ ಅಣಜಿ ಎಂಬ ಗ್ರಾಮೀಣ ಪರಿಸರದಲ್ಲಿ. ಶ್ರೀ ಹೊಳೆಬಸಪ್ಪ ಹಾಗೂ ಶ್ರೀಮತಿ ಜೀವಮ್ಮನವರ ಪುತ್ರನಾದ ರವೀಂದ್ರ ಅರಳಗುಪ್ಪಿಯವರು ತಮ್ಮ ಬಾಲ್ಯದ ದಿನಗಳಲ್ಲಿ ತಂದೆ ತಾಯಿಗಳಿಂದ ಸಾಕಷ್ಟು ನೈತಿಕ ಶಿಕ್ಷಣವನ್ನು ಪಡೆದುಕಂಡು, ಅದೇ ತಳಹದಿಯ ಮೇಲೆ ತಮ್ಮಲ್ಲಿ ಮಾನವೀಯ ಮೌಲ್ಯಗಳನ್ನು ಅಂತರ್ಗತ ಮಾಡಿಕೊಂಡವರು. ಇವರ ತಂದೆಯವರು ವೃತ್ತಿಯಲ್ಲಿ ವ್ಯಾಪಾರಸ್ಥರಾಗಿದ್ದು, ತಂದೆಯವರಿಂದ ಸಾಕಷ್ಟು ಬದುಕಿನ ಪಾಠಗಳನ್ನು ಕಲಿತುಕೊಂಡ ಶ್ರೀಯುತರು, ಗ್ರಾಮೀಣ ಬದುಕಿನ ಸಹಕಾರ, ಸಹಭಾಳ್ವೆಯ ತತ್ವಗಳಿಂದ ಪ್ರಭಾವಿತರಾದವರು. ತಮ್ಮ ಎಸ್.ಎಸ್.ಎಲ್.ಸಿ ಹಂತದವರೆಗಿನ ಶಿಕ್ಷಣವನ್ನು ತಾವು ನೆಲೆಸಿದ್ದ ಅಣಜಿ ಗ್ರಾಮದಲ್ಲಿ ಪಡೆದ ಇವರು, ಈ ಶಾಲಾ ಹಂತದಲ್ಲಿ ಹಲವಾರು ತೆರನಾದ ಬದುಕಿನ ಪಾಠಗಳನ್ನು ಇಲ್ಲಿ ಕರಗತ ಮಾಡಿಕೊಂಡಿದ್ದರು. ನಂತರದಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಮಲ್ಲಾಡಿಹಳ್ಳಿಯಲ್ಲಿ ಪಡೆದಿದ್ದು, ಇಲ್ಲಿಯೂ ಕೂಡ ಆಧ್ಯಾತ್ಮಿಕ ತಳಹದಿಯ ಶಿಕ್ಷಣವನ್ನು ಪಡೆದುಕೊಂಡರು. ಇದಾದ ತರುವಾಯದಲ್ಲಿ ಪದವಿ ಶಿಕ್ಷಣಕ್ಕೆ ದಾವಣಗೆರೆಗೆ ಬಂದು, ಎಂ.ಎಸ್.ಬಿ ಕಾಲೇಜಿನಲ್ಲಿ ಬಿ.ಕಾಂ ಪದವಿಗೆ ದಾಖಲಾದರು. ಈ ವೇಳೆಗಾಗಲೆ ಸಾಕಷ್ಟು ನಾಟಕದ ಹುಚ್ಚು ಮೈಗೂಡಿಸಿಕೊಂಡಿದ್ದ ಇವರಿಗೆ ಹಲವಾರು ಬೀದಿ ನಾಟಕಗಳನ್ನು ನೋಡಿ, ಅವುಗಳ ಪ್ರದರ್ಶನದಲ್ಲಿಯೂ ತಲ್ಲಿನರಾಗಿದ್ದರು. ದ್ವಿತೀಯ ವರ್ಷದ ಪದವಿ ಶಿಕ್ಷಣ ಪಡೆಯುವ ಹಂತದಲ್ಲಿ ದಾವಣಗೆರೆಯ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ‘ಹೆಗ್ಗಡಾಯಣ’ ಎಂಬ ನಾಟಕ ಪ್ರದರ್ಶನಗೊಳ್ಳುತ್ತಿದೆ ಎಂಬುದನ್ನು ತಮ್ಮ ಸ್ನೇಹಿತರಿಂದ ತಿಳಿದು, ಇಲ್ಲಿಗೆ ನಾಟಕ ನೋಡಲು ಆಗಮಿಸಿದ್ದರು. ಆಗ ಇಲ್ಲಿನ ಚಿತ್ರಕಲಾ ವಿದ್ಯಾಲಯವನ್ನು ಗಮನಿಸಿ, ನಾನು ಕೂಡ ಚಿತ್ರ ಕಲಾವಿದನಾಗಬೇಕೆಂಬ ಹಂಬಲದಿಂದ ಬಿ.ಕಾಂ ಪದವಿಗೆ ವಿದಾಯ ಹೇಳಿ, ಚಿತ್ರಕಲಾ ಶಾಲೆಗೆ ಸೇರಿಕೊಂಡು, ಇದೇ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ನಂತರದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿಕೊಂಡು, ಚಿತ್ರಕಲಾ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆಯನ್ನು ಸಲ್ಲಿಸುತ್ತ ಬಂದಿದ್ದಾರೆ.
ಶ್ರೀಯುತ ರವೀಂದ್ರ ಅರಳಗುಪ್ಪಿ ಅವರು ನಾಟಕ ಮತ್ತು ಚಿತ್ರಕಲಾ ಕ್ಷೇತ್ರಗಳಲ್ಲಿ ವಿಶೇಷವಾದ ಆಸಕ್ತಿಯನ್ನು ಹೊಂದಿದವರಾಗಿದ್ದಾರೆ. ಈ ಎರಡು ಕ್ಷೇತ್ರಗಳ ಮೂಲಕವಾಗಿ ಸಮಾಜವನ್ನು ತಿದ್ದುವ ಹಲವಾರು ಕಾರ್ಯಗಳನ್ನು ಅನುಷ್ಠಾನಗೊಳಿಸಿಕೊಂಡು ಬಂದಿದ್ದಾರೆ. ಕಲೆಗಳನ್ನು ಕೇವಲ ವ್ಯವಹಾರಿವಾಗಿ ಮಾತ್ರ ನೋಡುವಂತಹ ಕಾಲಘಟ್ಟದಲ್ಲಿ, ಕಲೆಯ ಮೂಲಕವಾಗಿ ಸಾಮಾಜಿಕ ಸೇವೆಯನ್ನು ಮಾಡಬಹುದು ಎಂಬುದನ್ನು ಶ್ರೀಯುತ ತೋರಿಸಿಕೊಟ್ಟಿದ್ದಾರೆ. ಮೊದಲನೆಯದಾಗಿ ಚಿತ್ರಕಲೆಯ ಮೂಲಕವಾಗಿ ಕೈಗೊಂಡ ಸಾಮಾಜಿಕ ಜಾಗೃತಿಯ ಕೆಲವೊಂದು ಅಂಶಗಳನ್ನು ನಿದರ್ಶನಗಳ ಮೂಲಕ ಗುರುತಿಸಲಾಗುವುದು. ಚಿತ್ರಕಲೆಯನ್ನು ಬಳಸಿಕೊಂಡು ಪರಿಸರ ಜಾಗೃತಿ, ಕಾನೂನಿನ ಅರಿವು ಮುಂತಾದ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದ್ದಾರೆ. ಇಲ್ಲಿ ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದರಿಂದ ಆಗುವು ಅನಾವುತ, ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಹಲವಾರು ಬಿತ್ತಿಚಿತ್ರಗಳ ಮೂಲಕ ಪ್ರದರ್ಶನ ಮಾಡುತ್ತ ಬಂದಿದ್ದಾರೆ. ಹಾಗೆಯೇ ವಾಹನ ಸವಾರರು ಪಾಲಿಸಬೇಕಾದ ಜೀವಪರವಾದ ಅಂಶಗಳ ಕುರಿತು ಬಿತ್ತಿಚಿತ್ರಗಳ ಮೂಲಕ ಅರಿವು ಮೂಡಿಸುತ್ತ ಬಂದಿದ್ದಾರೆ. ನಗರ ಪರಿಸರದಲ್ಲಿ ಕಸವನ್ನು ಎಲ್ಲೆಂದರಲ್ಲಿ ಚೆಲ್ಲುವುದರಿಂದ ಉಂಟಾಗುವ ಪರಿಣಾಮಗಳ ಕುರಿತು ಸಾಮಾಜಿಕ ಅರಿವು ಮೂಡಿಸುತ್ತ ಬಂದಿದ್ದಾರೆ. ಹೀಗೆ ಚಿತ್ರಕಲೆಯನ್ನು ಕೇಂದ್ರವಾಗಿಟ್ಟುಕೊಂಡು ಹಲವಾರು ಸಾಮಾಜಿಕ ಜಾಗೃತಿಯ ಕಾರ್ಯಕ್ರಮಗಳನ್ನು ನಿಭಾಯಿಸಿಕೊಂಡು ಬಂದಿದ್ದಾರೆ. ಚಿತ್ರಕಲೆಯಲ್ಲಿನ ಇವರ ವಿಶೇಷವಾದ ಪ್ರತಿಭೆಯಿಂದಾಗಿ ಆಧ್ಯಾತ್ಮಿಕ ನೆಲೆಗಟ್ಟಿನಲ್ಲಿ ಹಲವಾರು ಚಿತ್ರಪಟಗಳನ್ನು ಸಿದ್ಧಪಡಿಸಿದ್ದಾರೆ. ಇವರ ಕಲಾಕುಂಚದಿಂದ ಮೂಡಿಬಂದ ಪ್ರತಿಯೊಂದು ಕಲಾಚಿತ್ರಗಳು ಸಂಶೋಧನೆಯ ಫಲಗಳಾಗಿದ್ದು, ಮಾನವನ ಬದುಕಿನ ಮೇಲೆ ಅರಿಷಡ್ವರ್ಗಗಳು ಬೀರುವ ಪ್ರಭಾವವನ್ನು ಅನಾವರಣಗೊಳಿಸುತ್ತವೆ.

ಶ್ರೀಯುತರು ನಾಟಕ ಕ್ಷೇತ್ರದಲ್ಲಿಯೂ ತನ್ನದೇ ಆದ ಸಾಧನೆ ಮಾಡಿದ್ದಾರೆ. ಇಲ್ಲಿಯೂ ಕೂಡ ಸಾಮಾಜಿಕ ಕಳಕಳಿ ಪ್ರಮುಖವಾಗಿ ಕಾರ್ಯಪ್ರವೃತ್ತವಾಗಿರುವುದು ಕಂಡುಬರುತ್ತದೆ. ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಲವಾರು ಬೀದಿ ನಾಟಕಗಳನ್ನು ರಚನೆ ಮಾಡಿ, ಪ್ರದರ್ಶನ ಮಾಡುತ್ತ ಬಂದ ಕೀರ್ತಿಯು ಶ್ರೀಯುತರಿಗೆ ಸಲ್ಲುತ್ತದೆ. ಶ್ರೀಯುತರು ವಿಭಿನ್ನವಾದ ಆಲೋಚನಾ ಲಹರಿಯುಳ್ಳವರಾಗಿದ್ದಾರೆ. ಹೀಗಾಗಿಯೇ ಕಾರಗೃಹ ವಾಸಕ್ಕೆ ತುತ್ತಾಗಿರುವ ವಿಚಾರಣಾಧೀನ ಖೈದಿಗಳನ್ನು ಅಧ್ಯಯನ ಮಾಡಬೇಕೆಂಬ ಹಂಬಲವೊತ್ತು, ನಾಟಕ ಕಲಿಸುವ ನೆಪದಿಂದ ದಾವಣಗೆರೆಯ ಕಾರಗೃಹಕ್ಕೆ ಭೇಟಿ ನೀಡಿ, ಇಲ್ಲಿನ ಜೈಲು ಅಧಿಕಾರಿಗಳ ಮನವೊಲಿಸಿ, ಖೈದಿಗಳಿಗೆ ನಾಟಕ ಕಲಿಸುವ ಅವಕಾಶವನ್ನು ಪಡೆದುಕೊಂಡು ತಮ್ಮ ಸಂಶೋಧನೆಯ ಜೊತೆ ಜೊತೆಗೆ ನಾಟಕ ತರಬೇತಿಯನ್ನು ನೀಡಲು ಆರಂಭಿಸುತ್ತಾರೆ. ಇಲ್ಲಿಯೂ ಕೂಡ ಮಾನವನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಹರಿಷಡ್ವರ್ಗಗಳ ಪ್ರಭಾವಕ್ಕೆ ತುತ್ತಾಗಿ ಅಪರಾಧಿ ಕೃತ್ಯಗಳಲ್ಲಿ ತೊಡಗಿರುವ ಅಂಶಗಳನ್ನು ಕೇಂದ್ರವಾಗಿಟ್ಟುಕೊಂಡು ‘ಮೃತ್ಯು’ ಎಂಬ ನಾಟಕವನ್ನು, ಹಾಗೆಯೇ ಈ ಜಗತ್ತಿನ ಪ್ರತಿಯೊಂದು ಜೀವಿಗೂ ತಪ್ಪನ್ನು ತಿದ್ದಿಕೊಂಡು ಬದುಕುವುದಕ್ಕೆ ಮುಕ್ತ ಅವಕಾಶಗಳಿವೆ ಎಂಬ ಅರಿವು ಮೂಡಿಸುವ ನೆಲೆಯಲ್ಲಿ ‘ಪರಿವರ್ತನೆ’ ಎಂಬ ನಾಟಕವನ್ನು ಖೈದಿಗಳಿಂದ ಪ್ರದರ್ಶಿಸಿ ಉತ್ತಮವಾದ ಪ್ರಶಂಸೆಗೆ ಒಳಗಾಗಿದ್ದಾರೆ. ಈ ಪರಿವರ್ತನೆ ಎಂಬ ನಾಟಕದಲ್ಲಿ ಪಾತ್ರ ಮಾಡಿದ ಪ್ರತಿಯೊಬ್ಬ ಖೈದಿಯೂ ಅಪಾಧನೆಯಿಂದ ಮುಕ್ತವಾಗಿ ಬಿಡುಗಡೆಯ ಭಾಗ್ಯವನ್ನು ಪಡೆದುಕೊಂಡಿರುತ್ತಾರೆ.

ಶ್ರೀಯುತ ರವೀಂದ್ರ ಅರಳಗುಪ್ಪಿ ಅವರದು ಬಹುಮುಖಿ ವ್ಯಕ್ತಿತ್ವ. ಅವರು ತಮ್ಮಲ್ಲಿ ಅಂತರ್ಗತವಾದ ಕಲೆಯನ್ನು ಎಂದಿಗೂ ವ್ಯವಹಾರಿಕ ದೃಷ್ಟಿಕೋನದಿಂದ ನೋಡಿದವರಲ್ಲ. ಆ ಕಲೆಯಿಂದ ಸಮಾಜವನ್ನು ಎಷ್ಟು ಸುಧಾರಿಸಬಹುದೆಂಬ ಆಲೋಚನೆ ಮಾಡುತ್ತ ಬಂದವರು. ಇವರ ಶ್ರೀಮತಿಯವರಾದ ಎಂ.ಜಿ ಉಷಾ ಅವರು ಕೂಡ ಚಿತ್ರಕಲಾವಿದರಾಗಿದ್ದು, ಶ್ರೀಯುತರ ಪ್ರತಿಯೊಂದು ಸಮಾಜಮುಖಿ ಕಾರ್ಯಕ್ಕೆ ಜೀವ ತುಂಬುತ್ತ ಬಂದಿದ್ದಾರೆ. ತಮ್ಮ ಶ್ರೀಮತಿಯವರ ಸಹಕಾರದಿಂದಲೇ ನಾನು ಇಷ್ಟೆಲ್ಲ ಸಾಧನೆಗೆ ಪ್ರಮುಖ ಕಾರಣ ಎಂಬುದು ರವೀಂದ್ರ ಅರಳಗುಪ್ಪಿಯವರ ಮನದಾಳದ ಮಾತಾಗಿದೆ. ಈ ಇಬ್ಬರು ದಂಪತಿಗಳ ಚಿತ್ರಗಳು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನಗೊಂಡು ಸಾಕಷ್ಟು ಪ್ರಶಂಸೆಗೆ ಗುರಿಯಾಗಿವೆ. ಇವರ ಸಾಧನೆ ಸುದೀರ್ಘವಾಗಿದ್ದು, ಇಲ್ಲಿ ಅವುಗಳನ್ನೆಲ್ಲ ಹಂಚಿಕೊಳ್ಳುವುದಕ್ಕೆ ಜಾಗದ ಕೊರತೆಯಿದೆ. ಆದ ಕಾರಣ ಈ ಕಿರುಪರಿಚಯದೊಂದಿಗೆ ಒಂದು ಅಲ್ಪ ವಿರಾಮ ಹಾಕುತ್ತೆನೆ. ಇವರ ಒಬ್ಬಳೆ ಮಗಳು ‘ಇಂಪನ’ ಜೊತೆಗೆ ಸಾಗುತ್ತಿರುವ ಈ ದಂಪತಿಗಳಿಂದ ಇನ್ನಷ್ಟು ಸಮಾಜಮುಖಿ ಕಾರ್ಯಗಳು ನೆರವೇರಲಿ ಎಂಬುದು ನಮ್ಮ ಹಾರೈಕೆ…

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ

ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

Published

on

  • ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ

ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು

ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ ಪ್ರತಿರೂಪವಾಗಿರುತ್ತಾರೆ. ವಿಶ್ವ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ, ಇದು ಮಹಿಳೆಯರ ಹಕ್ಕುಗಳು, ಸಾಧನೆಗಳು ಮತ್ತು ಅವರ ಜಗತ್ತಿನ ಮೇಲೆ ಬೀರಿದ ಪ್ರಭಾವವನ್ನು ಗೌರವಿಸುವ ಒಂದು ಅದ್ಭುತ ಅವಕಾಶ.

ಮಹಿಳೆಯರ ಬದುಕು ಕೇವಲ ಕುಟುಂಬದ ಕೇಂದ್ರದಲ್ಲಿಯೇ ಸೀಮಿತವಾಗಿಲ್ಲ; ಅವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲೂ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಅಮ್ಮನಾಗಿ, ಪತ್ನಿಯಾಗಿ, ಮಗುವಾಗಿ, ಸಂಸ್ಥಾಪಕಿಯಾಗಿ, ನಾಯಕಿಯಾಗಿ, ವೈಜ್ಞಾನಿಕರಾಗಿ, ಕ್ರೀಡಾಪಟುವಾಗಿ – ಎಲ್ಲಾ ಪಾತ್ರಗಳಲ್ಲೂ ಮಹಿಳೆಯರು ತಮ್ಮ ಅದ್ಭುತ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ.

ಈಗ ಮಹಿಳೆಯರು ತಮ್ಮ ಇಚ್ಛಾಶಕ್ತಿಯೊಂದಿಗೆ ಮತ್ತು ಶಿಕ್ಷಣದ ಹಾದಿಯ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇಂದು ಕಲ್ಪನಾ ಚಾವ್ಲಾ, ಮೇರೀ ಕೋಮ್, ಸುಧಾ ಮುರ್ತಿ, ಕಿರಣ್ ಮಜುಂದಾರ್ ಶಾ, ಫಾಲ್ಗುಣಿ ನಾಯರ್ ಮುಂತಾದ ಅನೇಕ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡುತ್ತಿದ್ದಾರೆ.

ಮಹಿಳಾ ದಿನಾಚರಣೆ – ಇತಿಹಾಸ ಮತ್ತು ಹಿನ್ನೆಲೆ

ಮಹಿಳಾ ದಿನಾಚರಣೆ (International Women’s Day – IWD) ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದು ಮಹಿಳೆಯರ ಹಕ್ಕುಗಳು, ಸಶಕ್ತೀಕರಣ, ಸಾಧನೆಗಳು ಮತ್ತು ಲಿಂಗ ಸಮಾನತೆಯ ಪ್ರಗತಿ ಕುರಿತು ಜಾಗೃತಿಯನ್ನು ಮೂಡಿಸುವ ಮಹತ್ವದ ದಿನ.

ಮಹಿಳಾ ದಿನಾಚರಣೆಯ ಇತಿಹಾಸ

ಮಹಿಳಾ ದಿನಾಚರಣೆಯ ಮೂಲವು 1900ರ ದಶಕದ ಪ್ರಾರಂಭದಲ್ಲಿ ಕೈಗೆತ್ತಿಕೊಳ್ಳಲಾದ ಮಹಿಳಾ ಹಕ್ಕುಗಳ ಹೋರಾಟಕ್ಕೆ ಸರಿಹೊಂದಿದೆ. ಈ ದಿನವನ್ನು ಆಚರಿಸಲು ಪ್ರೇರಣೆ ನೀಡಿದ ಪ್ರಮುಖ ಘಟನೆಗಳು ಹೀಗಿವೆ:

1. 1908 – ಮಹಿಳಾ ಹಕ್ಕುಗಳ ಹೋರಾಟ:

ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು ಕಡಿಮೆ ಕೆಲಸದ ಘಂಟೆಗಳು, ಉತ್ತಮ ಸಂಬಳ ಮತ್ತು ಮತದಾನದ ಹಕ್ಕುಕ್ಕಾಗಿ ಪ್ರತಿಭಟನೆ ನಡೆಸಿದರು.

2. 1909 – ಮೊದಲ ಮಹಿಳಾ ದಿನಾಚರಣೆ:

ಫೆಬ್ರವರಿ 28, 1909 ರಂದು ಅಮೆರಿಕಾದ ಸೋಶಲಿಸ್ಟ್ ಪಾರ್ಟಿ ದೇಶದಾದ್ಯಂತ ಮಹಿಳಾ ದಿನವನ್ನು ಆಚರಿಸಿತು.

3. 1910 – ಅಂತಾರಾಷ್ಟ್ರೀಯ ಹೋರಾಟ:

ಡೆನ್ಮಾರ್ಕ್‌ನ ಕೊಪನ್‌ಹೇಗನ್ ನಲ್ಲಿ ನಡೆದ ಸೋಶಲಿಸ್ಟ್ ವುಮೆನ್ಸ್ ಕಾನ್ಫರೆನ್ಸ್ ನಲ್ಲಿ ಜರ್ಮನಿಯ ಕ್ಲಾರಾ ಜೆಟ್ಕಿನ್ ಅವರು ಪ್ರಪಂಚದಾದ್ಯಂತ ಮಹಿಳಾ ದಿನ ಆಚರಿಸುವ ಸಲಹೆ ನೀಡಿದರು.

4. 1911 – ಪ್ರಥಮ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ:

ಮೊದಲ ಬಾರಿ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ ದೇಶಗಳಲ್ಲಿ ಮಹಿಳಾ ದಿನವನ್ನು ಮಾರ್ಚ್ 19ರಂದು ಆಚರಿಸಲಾಯಿತು.

5. 1913 – ಮಾರ್ಚ್ 8ಕ್ಕೆ ದಿನಾಂಕ ಬದಲಾವಣೆ:

1913ರಿಂದ ಮಾರ್ಚ್ 8ನೇ ತಾರೀಖನ್ನು ಅಧಿಕೃತವಾಗಿ ಮಹಿಳಾ ದಿನಾಚರಣೆಗೆ ಮೀಸಲಾಗಿಸಲಾಯಿತು.

6. 1975 – ವಿಶ್ವ ಮಹಿಳಾ ವರ್ಷ:

UNO1975ನೇ ವರ್ಷವನ್ನು “ಅಂತರಾಷ್ಟ್ರೀಯ ಮಹಿಳಾ ವರ್ಷ” ಎಂದು ಘೋಷಿಸಿ, ಮಹಿಳಾ ದಿನವನ್ನು ಅಧಿಕೃತವಾಗಿ ಅಂಗೀಕರಿಸಿತು

7. 2011 – 100ನೇ ವಾರ್ಷಿಕೋತ್ಸವ:

2011ರಲ್ಲಿ ಮಹಿಳಾ ದಿನಾಚರಣೆ ಶತಮಾನೋತ್ಸವವನ್ನು ಪೂರೈಸಿತು.

ಮಹಿಳಾ ದಿನಾಚರಣೆಯ ಉದ್ದೇಶ

ಮಹಿಳಾ ದಿನವನ್ನು ಆಚರಿಸುವ ಪ್ರಮುಖ ಉದ್ದೇಶಗಳು:
✔ ಮಹಿಳಾ ಸಮಾನತೆ ಮತ್ತು ಹಕ್ಕುಗಳನ್ನು ಬಲಪಡಿಸುವುದು.
✔ ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವ ನೀಡುವುದು.
✔ ಅವರ ಸಮಸ್ಯೆಗಳನ್ನು ಅರಿತು, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು.
✔ ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಕುರಿತು ಜಾಗೃತಿಯನ್ನು ಹರಡುವುದು.

ಮಹಿಳಾ ದಿನಾಚರಣೆ – ಇಂದಿನ ಪ್ರಸ್ತುತತೆ

ಇಂದಿನ ಹೊತ್ತಿನಲ್ಲಿ, ಮಹಿಳೆಯರು ಶಿಕ್ಷಣ, ಉದ್ಯಮ, ರಾಜಕೀಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಸೇವಾ ಕ್ಷೇತ್ರ ಮತ್ತು ಉದ್ಯಮಶೀಲತೆ ಎಲ್ಲೆಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಮಹಿಳಾ ದಿನವು “Gender Equality – ಲಿಂಗ ಸಮಾನತೆ”, “Break the Bias – ಲಿಂಗತಾತ್ವಿಕ ಭೇದಭಾವವನ್ನು ಕಳಚುವುದು”, “DigitALL: Innovation and technology for gender equality” ಮುಂತಾದ ವಿಶೇಷ ಥೀಮ್‌ಗಳೊಂದಿಗೆ ಪ್ರತಿವರ್ಷ ಜಾಗೃತಿಯನ್ನು ಮೂಡಿಸುತ್ತದೆ.

ಮಹಿಳೆಯರು ಬದುಕಿನ ಉತ್ಸಾಹ

ಮಹಿಳೆಯರು ತಮ್ಮ ಕುಟುಂಬ, ಸಮಾಜ ಮತ್ತು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರಲ್ಲಿರುವ ಹೃದಯಸ್ಪರ್ಶಿ ಭಾವನೆ, ತ್ಯಾಗ, ಶ್ರಮ ಹಾಗೂ ಪ್ರೀತಿ ಅವರ ಬದುಕಿನ ಹಾದಿಯನ್ನು ಮಾದರಿಯಾಗಿ ಮಾಡುತ್ತದೆ. ಶಿಕ್ಷಣ, ಉದ್ಯೋಗ, ರಾಜಕೀಯ, ಕಲೆ, ಕ್ರೀಡೆ, ವಿಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.

ಅನೇಕ ಮಹಿಳೆಯರು ಸಂಕಷ್ಟಗಳನ್ನು ಎದುರಿಸುತ್ತಾ, ಸಾಧನೆಗೆ ಹೊಸ ಪರಿಮಾಣ ನೀಡಿದ ಉದಾಹರಣೆಗಳಿವೆ. ಐದು ದಶಕಗಳ ಹಿಂದೆಯೂ ಮಹಿಳೆಯರು ಮನೆಯಲ್ಲಿ ಸೀಮಿತವಾಗಿದ್ದರೆ, ಇಂದು ಅವರು ಅಂತರಿಕ್ಷ ಯಾತ್ರೆ, ವ್ಯವಹಾರ ನಿರ್ವಹಣೆ, ಕಾನೂನು, ತಂತ್ರಜ್ಞಾನ, ಆಡಳಿತ ಮತ್ತು ರಾಜಕೀಯದಲ್ಲಿ ಮುಂಚೂಣಿಯಲ್ಲಿದ್ದಾರೆ.

ಸಾಧನೆಗಳ ಬೆಳಕು

1. ಶಿಕ್ಷಣ ಮತ್ತು ಸಶಕ್ತೀಕರಣ:

ಜಗತ್ತಿನ ಅನೇಕ ದೇಶಗಳಲ್ಲಿ ಈಗ ಮಹಿಳಿಯರಿಗೆ ಶಿಕ್ಷಣ ಹಕ್ಕುಗಳನ್ನು ಒದಗಿಸಲಾಗುತ್ತಿದೆ, ಇದರಿಂದ ಮಹಿಳೆಯರು ಸಮಾಜದ ಮುಖ್ಯಧಾರೆಯಲ್ಲಿರಲು ಸಾಧ್ಯವಾಗಿದೆ. ಭಾರತದಲ್ಲಿ ಸವಿತ್ರಿಬಾಯಿ ಫುಲೆ, ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ, ಮೇರೀ ಕೋಮ್ ಮುಂತಾದವರು ಮಹಿಳಾ ಶಿಕ್ಷಣ ಮತ್ತು ಸಶಕ್ತೀಕರಣದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.

2. ಉದ್ಯೋಗ ಹಾಗೂ ಉದ್ಯಮಶೀಲತೆ:

ಈಗ ಮಹಿಳೆಯರು ಉದ್ಯೋಗ ಮಾತ್ರವಲ್ಲದೆ, ಸ್ವಂತ ಉದ್ಯಮಗಳನ್ನು ನಿರ್ಮಿಸಿ ಉದ್ಯಮಶೀಲತೆ ತೋರಿಸುತ್ತಿದ್ದಾರೆ. ಫಾಲ್ಗುಣಿ ನಾಯರ್ (ನೈಕಾ), ಕಿರಣ್ ಮಜುಂದಾರ್ ಶಾ (ಬಯೋಕಾನ್), ವಂದನಾ ಲೂತರ (ಪೇಪರ್ ಶೈರಿ) ಮುಂತಾದವರು ಉದ್ಯಮ ವಲಯದಲ್ಲಿ ತಮ್ಮ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.

3. ಕ್ರೀಡೆ ಮತ್ತು ಸಾಹಸ:

ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಸೈನಾ ನೆಹ್ವಾಲ್, ಮೇರೀ ಕೋಮ್, ಪಿ.ವಿ. ಸಿಂಧು, ಮಿಥಾಲಿ ರಾಜ್ ಮುಂತಾದವರು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ್ದಾರೆ.

4. ಸಮಾಜಸೇವೆ ಮತ್ತು ಪ್ರಭಾವ:

ಮಹಿಳೆಯರು ಕೇವಲ ತಮ್ಮ ವ್ಯಕ್ತಿಗತ ಜೀವನದಲ್ಲಷ್ಟೇ ಅಲ್ಲದೆ, ಸಮಾಜಸೇವೆಯಲ್ಲಿ ಕೂಡ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಮದರ್ ತೆರೆಸಾ, ಸುಧಾ ಮುರ್ತಿ ಮುಂತಾದವರು ತಮ್ಮ ಸಮಾಜಮುಖಿ ಕಾರ್ಯಗಳಿಂದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದ್ದಾರೆ.

ಸಮಾಜದ ಹೊಣೆಗಾರಿಕೆ – ಮಹಿಳಾ ಸಮಾನತೆ ಮತ್ತು ಗೌರವ

ಮಹಿಳೆಯರನ್ನು ಗೌರವಿಸುವ, ಅವರ ಆತ್ಮವಿಶ್ವಾಸ ಹೆಚ್ಚಿಸುವ, ಅವರಿಗೆ ಸಮಾನ ಅವಕಾಶ ಒದಗಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಹಿಳಾ ಸುರಕ್ಷತೆ, ಸಂವೇದನಾಶೀಲತೆ ಮತ್ತು ಗೌರವ ಹೊಂದಿದ ಸಮಾಜವನ್ನು ನಿರ್ಮಿಸುವುದು ಅನಿವಾರ್ಯ.

ನಮ್ಮ ಕರ್ತವ್ಯ – ಮಹಿಳಾ ಶಕ್ತಿಗೆ ಸಾಥ್

ಈ ಮಹಿಳಾ ದಿನಾಚರಣೆ ದಿನದಂದು ನಾವು ನಮ್ಮ ಜೀವನದಲ್ಲಿ ಶಕ್ತಿ, ಪ್ರೇರಣೆ, ಪ್ರೀತಿಯ ಬೆಳಕು ತುಂಬುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸೋಣ. ಅವರ ಸಾಧನೆಗಳನ್ನು ಗೌರವಿಸೋಣ ಮತ್ತು ಹೊಸ ತಲೆಮಾರಿನ ಮಹಿಳೆಯರಿಗೆ ಇನ್ನಷ್ಟು ಉತ್ಸಾಹ, ಶಿಕ್ಷಣ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಅವರನ್ನು ಸಶಕ್ತಗೊಳಿಸೋಣ.

“ಮಹಿಳೆಯರ ಪ್ರಗತಿ – ರಾಷ್ಟ್ರದ ಪ್ರಗತಿ!”(ಲೇಖನ-ಡಾ. ವೆಂಕಟೇಶ ಬಾಬು ಎಸ್,ಸಹ ಪ್ರಾಧ್ಯಾಪಕರು, ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅತ್ಮಕತೆ | ನೀರು ಸಾಬರೂ – ಎಸಿ ಮದನಗೋಪಾಲರೂ..

Published

on

  • ರುದ್ರಪ್ಪ ಹನಗವಾಡಿ

ಮಧ್ಯೆ ನಂಜನಗೂಡು ಪಕ್ಕದ ತಾಲ್ಲೂಕಾದ ಗುಂಡ್ಲುಪೇಟೆಯಿಂದ ರಾಜಕಾರಣಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರು ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬೋರ್‌ವೆಲ್ ತೆಗೆಸಿ ಗ್ರಾಮೀಣ ಜನರಿಗೆ ಸ್ವಚ್ಛ ಕುಡಿಯುವ ನೀರು ಕೊಡುವಲ್ಲಿ ಯಶಸ್ವಿಯಾಗಿದ್ದರು. ಜನಪರ ಮಂತ್ರಿಗಳೂ ಆಗಿದ್ದರು.

ಗುಂಡ್ಲುಪೇಟೆಯಲ್ಲಿ ಭೂಸ್ವಾಧೀನ ಪ್ರಕರಣದಲ್ಲಿ ತಮ್ಮ ಸಂಬಂಧಿಕರೊಬ್ಬರ ಜಮೀನಿಗೆ ತಿರುಗಾಡಲು ದಾರಿಗಾಗಿ ಭೂಸ್ವಾಧೀನಪಡಿಸಲು ಹಿಂದಿನ ಎಸಿ ಅವರ ಅಳಿಯಂದಿರೇ ಆಗಿದ್ದ ಎಸ್.ಎ. ಸಾದಿಕ್ ಅವರು ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಯನ್ನು ರ‍್ಕಾರಕ್ಕೆ ಸಲ್ಲಿಸಿದ್ದರು. ಆದರೆ ಪುನಃ ಅದು ವಿಚಾರಣೆಗೆ ಬಂದಾಗ ಈ ಭೂಸ್ವಾಧೀನವು ಸಾರ‍್ವಜನಿಕರ ಹಿತ ಕಾಯುತ್ತಿಲ್ಲವೆಂದು ಮದನ್ ಗೋಪಾಲ್ ಅವರು ಆ ಪ್ರಸ್ತಾವನೆಯನ್ನು ರದ್ದುಗೊಳಿಸಲು ಸರ‍್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಭೂಸ್ವಾಧೀನ ಪ್ರಕರಣವನ್ನು ಮಂತ್ರಿಗಳ ಸಲಹೆ ಮೇರೆಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದು, ನಂತರ ಅದನ್ನು ಕೈಬಿಟ್ಟ ಬಗ್ಗೆ ನಜೀರ್ ಸಾಬ್ ಅವರು ಎಸಿ ಮದನ್ ಗೋಪಾಲ್ ಮೇಲೆ ಕೆಂಡಾಮಂಡಲವಾಗಿದ್ದರು. ಎಷ್ಟೇ ಅನುಭವೀ, ನಿಸ್ಪೃಹ ರಾಜಕಾರಣಿಯಾಗಿದ್ದರೂ ನಜೀರ್ ಸಾಬ್ ಅವರು ತಾವು ಹೇಳಿದ ಕೆಲಸ ಮಾಡದ ನೌಕರ ಎಸಿ ಮದನ್ ಗೋಪಾಲ್ ಮೇಲೆ ಕಂದಾಯ ಮಂತ್ರಿ ಮತ್ತು ಜಿಲ್ಲಾಧಿಕಾರಿಗಳ ಎದುರು ತಮ್ಮ ಅಸಮಾಧಾನವನ್ನು ಹೊರಹಾಕಿ ಕೂಗಾಡಿದ್ದರು.

ಇದೇ ಕಾರಣಕ್ಕಾಗಿ ಮದನ್ ಗೋಪಾಲ್ ಅವರನ್ನು ಕೆಲವೇ ದಿನಗಳಲ್ಲಿ ನಂಜನಗೂಡು ಉಪ ವಿಭಾಗದಿಂದ ಬೇರೆಡೆಗೆ ರ‍್ಗಾವಣೆ ಕೂಡ ಮಾಡಲಾಗಿತ್ತು. ಅವರ ವರ್ಗಾವಣೆಯನ್ನು ವಿರೋಧಿಸಿ ಸರ‍್ವಜನಿಕರು, ನಂಜಗೂಡು, ಗುಂಡ್ಲುಪೇಟೆಗಳಲ್ಲಿ ಯಶಸ್ವಿ ಬಂದ್ ಮಾಡಿ ಪ್ರತಿಭಟಿಸಿದ್ದರು. ಅವರ ವರ‍್ಗಾವಣೆ ಆಗಿ ನಂತರ ಮೂರು ತಿಂಗಳಲ್ಲಿ ಯೋಗೇಂದ್ರ ತ್ರಿಪಾಠಿ ಬಂದರು. ಈ ನಡುವೆ ನಾನು, ನಂತರ ಮಂಜುನಾಥ್ ನಾಯಕ್ ಹಾಗೂ ಶಿಕ್ಷಣರ‍್ಥಿ ಎಸಿಯಾಗಿದ್ದ ಕೆ. ಶಿವರಾಂ ಅವರು ಸುಮಾರು ಮೂರು ತಿಂಗಳ ಕಾಲ ಚಾರ್ಜ್ನಲ್ಲಿದ್ದೆವು. ಮದನ್ ಗೋಪಾಲ್ ಅವರು ವೈಯಕ್ತಿಕವಾಗಿ ಕಷ್ಟಪಟ್ಟು ದುಡಿಯುವ ವ್ಯಕ್ತಿಯಾಗಿದ್ದರು. ಆದರೆ ಚುನಾಯಿತ ಪ್ರತಿನಿಧಿಗಳ ಜೊತೆ ಅತಿರೇಕದ ನೇರ ನೇರ ಹಣಾಹಣಿ ಮಾಡಿಕೊಂಡು ಅವರು ಮಾಡುತ್ತಿದ್ದ ಒಳ್ಳೆಯ ಕೆಲಸಗಳು ಹಿನ್ನೆಲೆಗೆ ಸರಿಯುತ್ತಿದ್ದವು.

ಯೋಗೇಂದ್ರ ತ್ರಿಪಾಠಿಯವರು ಬರುವ ವೇಳೆಗಾಗಲೇ ನನ್ನ ನಂಜನಗೂಡು ತಾಲ್ಲೂಕ್ ಆಡಳಿತದಲ್ಲಿ ಒಂದು ವರ‍್ಷಕ್ಕೂ ಹೆಚ್ಚು ಸಮಯ ಕಳೆದಿದ್ದೆ. ಹಾಗಾಗಿ ತ್ರಿಪಾಠಿಯವರ ಜೊತೆ ಕೆಲಸ ಕಾರ‍್ಯಗಳು ಸಲೀಸಾಗಿ ಸಾಗುತ್ತಿದ್ದವು. ಈ ಮೊದಲು ಎಸಿ ಶಿಕ್ಷಣರ‍್ಥಿಯಾಗಿದ್ದ ಕೆ. ಶಿವರಾಂ ಅವರು ಅನೇಕ ಮೌಖಿಕ ಆದೇಶಗಳನ್ನು ಹೇಳಿ ಮಾಡುವಂತೆ ನನಗೆ ನಿರ‍್ದೇಶನ ನೀಡುತ್ತಿದ್ದರು. ನಾನು ಖುದ್ದು ಭೇಟಿ ಮಾಡಿ ಅವರು ಹೇಳಿದ ಕೆಲಸಗಳನ್ನು ಮಾಡಲಿಕ್ಕಾಗದ ಕಾರಣದ ವಿವರ ನೀಡಿದರೂ ಸಮಾಧಾನಗೊಳ್ಳದೆ, ಜನರೆದುರಿಗೆ ಎಸಿ ಮಾಡಲು ಹೇಳಿದರೂ ತಹಸೀಲ್ದಾರ್ ಮಾಡದೆ ತಮ್ಮ ವಿರುದ್ಧವಿದ್ದಾರೆಂಬ ಆಭಾವನೆ ಬರುವಂತೆ ನಡೆದುಕೊಳ್ಳುತಿದ್ದರು. ಅವರಿನ್ನೂ ಶಿಕ್ಷಣರ‍್ಥಿಗಳಾಗಿದ್ದರೂ ಆಗಲೇ ತನಗೆಲ್ಲ ಗೊತ್ತು ಎಂಬ ಅಹಂನಿಂದ ವರ‍್ತಿಸುತ್ತಿದ್ದ ಕಾರಣ ಬಹುಬೇಗ ನನ್ನ ಅವರ ನಡುವೆ ವಿಶ್ವಾಸದ ಕೊರತೆಯಾಗಿ, ಏನಾದರೂ ಮಾಡಬೇಕೆಂದರೆ ಲಿಖಿತ ಆದೇಶ ಕಳಿಸಲು ಅವರ ಮ್ಯಾನೇಜರ್ ಅವರಿಗೆ ನಾನು ದೂರವಾಣಿ ಮುಖಾಂತರ ಹೇಳುತ್ತಿದ್ದೆ. ಆ ನಂತರ ಮತ್ತೆ ಕೆಲವು ದಿನಗಳಲ್ಲಿ ಅವರನ್ನು ಬೇರೆ ತಾಲ್ಲೂಕಿಗೆ ತರಬೇತಿಗಾಗಿ ಕಳಿಸಿದ ಕಾರಣ ನನ್ನ ಮನಸ್ತಾಪ ಅಲ್ಲಿಗೆ ಮುಗಿದಿತ್ತು. ಆದರೆ ಮುಂದೆ ಅನೇಕ ಬಾರಿ ಅವರೊಡನೆ ಒಡನಾಡುವ ಸಂರ‍್ಭದಲ್ಲಿ ಇದ್ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಸರಳವಾಗಿ ನಡೆಸಿಕೊಂಡ ಕಾರಣದಿಂದಾಗಿ ಅವರ ಬಗ್ಗೆ ನನ್ನಲ್ಲಿದ್ದ ಕಹಿ ಕರಗಿ ಸಹಜತೆ ಮೂಡಿದೆ.

ನನ್ನ ಕಛೇರಿ ಕೆಲಸಗಳ ಜೊತೆ ಆಚರಿಸುತ್ತಿದ್ದ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ಮೈಸೂರಿನ ಸಮಾಜವಾದಿ ಗೆಳೆಯರ ಜೊತೆ ಚರ್ಚಿಸಿ ಡಾ. ಎಲ್. ಬಸವರಾಜ್, ಸುಜನಾ, ಕೆ.ಎಸ್. ಭಗವಾನ್, ಕೆ. ರಾಮದಾಸ್ ಅವರನ್ನು ಕರೆಸಿ ನಮ್ಮ ತಾಲ್ಲೂಕಿನಲ್ಲಿ ಭಾಷಣ ಮಾಡಿಸುತ್ತಿದ್ದೆ. ಡಿಎಸ್‌ಎಸ್, ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಅನೇಕ ಮಿತ್ರರು ನನ್ನ ಒಡನಾಟದಲ್ಲಿದ್ದರು.

ಈಗ ಹೆಸರಾಂತ ಸಾಹಿತಿ ಮತ್ತು ನನ್ನ ಮಿತ್ರನಾಗಿದ್ದ ಮಾದೇವನ ಊರಾದ ದೇವನೂರಿಗೂ ಹೋದಾಗ ಅವರ ಮನೆಗೂ ಹೋಗಿ ಬಂದಿದ್ದೆ. ಕೃಷ್ಣಪ್ಪ – ಇಂದಿರಾ ಅವರು ಮಕ್ಕಳಾದ ಶಾಲಿನಿ, ಸೀಮಾ ಅವರುಗಳ ಜೊತೆ ನಂಜನಗೂಡಿಗೆ ಬಂದು ಉಳಿದು ನಂಜುಂಡೇಶ್ವರ ದೇವಸ್ಥಾನದ ಹಬ್ಬದಲ್ಲಿ ಭಾಗವಹಿಸಿದ ನೆನಪು ಈಗಲೂ ಹಸಿರಾಗಿದೆ.

ಡಿಎಸ್‌ಎಸ್‌ನ ರಾಜ್ಯ ಮಟ್ಟದ ಕಲಿಕಾ ಸಮಾವೇಶವನ್ನು (study camp ) ನಂಜನಗೂಡು ತಾಲ್ಲೂಕಿನಲ್ಲಿನ ವಿದ್ಯಾಪೀಠದಲ್ಲಿ ಕೃಷ್ಣಪ್ಪನವರು ಸುಮಾರು ಒಂದು ವಾರದ ಕಾಲ ನಡೆಸಿದ್ದರು. ಆಗ ರಾಜ್ಯದ ಮೂಲೆಮೂಲೆಗಳಿಂದ ಬಂದು ಡಿಎಸ್‌ಎಸ್‌ನ ಹೋರಾಟದ ರೂಪುರೇಷೆಗಳನ್ನು ಚರ್ಚಿಸುತ್ತಿದ್ದುದನ್ನು ನಾನು ಭಾಗವಹಿಸದಿದ್ದರೂ ತಿಳಿದುಕೊಳ್ಳುತ್ತಿದ್ದೆ.

ಡಿಎಸ್‌ಎಸ್‌ನ ಅಂದಿನ ಬಹುತೇಕ ರ‍್ಚೆಗಳು ರ‍್ಕಾರದ ನಿಷ್ಕಿçಯತೆ, ದಲಿತ ಶಾಸಕರುಗಳ ಗುಲಾಮಿತನ, ದಲಿತರ ಮೇಲಿನ ದರ‍್ಜನ್ಯ, ದಲಿತರ ಕರ‍್ಯಕ್ರಮಗಳಲ್ಲಿನ ನಿಧಾನಗತಿ ಅನುಷ್ಠಾನ, ಇಂತಹವೇ ರ‍್ಚೆಯಾಗುತ್ತಿದ್ದವು. ಅಂತಹ ಸಂಘಟನೆಗೆ ತಹಸೀಲ್ದಾರನಾಗಿ ಭಾಗಿಯಾಗುವುದು, ಸಹಕಾರ ನೀಡುವುದು ಸರಿಯಲ್ಲವೆಂದು ನನಗೆ ನಮ್ಮ ಹಿರಿಯ ಸಿಬ್ಬಂದಿ ಹೇಳುತ್ತಿದ್ದರೂ ನಾನು ನನ್ನ ಇತರೆ ಸಾಮಾನ್ಯ ಕೆಲಸಗಳಲ್ಲಿ ಹಿಂದೆ ಬೀಳದೆ ಮತ್ತು ಇತರೆ ಸಾರ‍್ವಜನಿಕರಲ್ಲೂ ಯಾವುದೇ ತಗಾದೆ ಬಾರದಂತೆ ಕೆಲಸ ನಿರ‍್ವಹಿಸಿದ್ದರಿಂದ ಬೇರಾರೂ ಆಕ್ಷೇಪಿಸುತ್ತಿರಲಿಲ್ಲ. ಆದರೆ ಆಗ ನಂಜನಗೂಡಿನವರೇ ಆಗಿದ್ದ ಡಿಎಸ್‌ಎಸ್‌ನಲ್ಲಿ ಇದ್ದವನೊಬ್ಬ ಮಾದೇವ, ಕೃಷ್ಣಪ್ಪನವರನ್ನು ವೈಯಕ್ತಿಕವಾಗಿ ದ್ವೇಷಿಸುವ ಮನಸ್ಸಿನ ವ್ಯಕ್ತಿ. ನಮ್ಮ ಕಛೇರಿಯ ಸರ‍್ವೆಯರ್ ನೌಕರನನ್ನು ಸಹಾಯ ಪಡೆದು, ನಮ್ಮ ಕಛೇರಿಯ ಬಗ್ಗೆ ಕರಪತ್ರ ಹಾಕಿ `ಭ್ರಷ್ಟಾಚಾರದ ಕೂಪ ತಾಲ್ಲೂಕು ಕಛೇರಿ’ ಎಂದೆಲ್ಲ ದೂರಿದ್ದರು. ಆದರೆ ಅದಕ್ಕೆಲ್ಲ ಕುಮ್ಮಕ್ಕು ಕೊಟ್ಟವನು ನನ್ನ ಕಛೇರಿಯ ಸರ‍್ವೆಯರ್ ಸಂಬಂಧಿ ಡಿ.ಎಸ್.ಎಸ್.ನಲ್ಲಿಯೇ ಇದ್ದವನೊಬ್ಬ ಎಂದು ನನಗೆ ತಿಳಿದು ಬಂತು.

ಜೊತೆಗೆ ನಮ್ಮ ಕಚೇರಿಯ ರ‍್ವೇಯರ್ ದೈನಂದಿನ ಕೆಲಸದಲ್ಲಿ ನಿರ‍್ಲಕ್ಷ್ಯ ತೋರುತ್ತಿದ್ದ ಕಾರಣದಿಂದ ನಾನು ಮೊದಲೇ ಅವನನ್ನು ಅಮಾನತ್ತುಗೊಳಿಸಿದ್ದೆ. ಆ ಕಾರಣ ಅವನು ನನ್ನ ಬಗ್ಗೆ ಮೊದಲೇ ಅಸಮಾಧಾನಗೊಂಡಿದ್ದ. ನಂತರದ ದಿನಗಳಲ್ಲಿ ನಾನೇನೂ ಹೇಳದಿದ್ದರೂ ಕರಪತ್ರ ಹಾಕಿದ ಬಗ್ಗೆ ಬಂದು ತನ್ನ ನಡವಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ. ಇದಕ್ಕೆಲ್ಲ ತನ್ನ ಭಾವ ಡಿಎಸ್‌ಎಸ್‌ನಲ್ಲಿರುವವನು ಕಾರಣ ಎಂದು ಹೇಳಿ ನನಗೆ ದಂಗುಬಡಿಸಿದ್ದ. ಇಂತಹ ವಿಷಯಗಳನ್ನೆಲ್ಲ ನಿಭಾಯಿಸುವ ಅನುಭವ ನನಗೆ ಇದ್ದುದರಿಂದ ಮತ್ತೇನು ಅದು ಬೆಳೆಯಲಿಲ್ಲ.

ನಂಜನಗೂಡಿನಲ್ಲಿ ನಾನಿರುವಾಗ ಪೋಲೀಸ್ ಇಲಾಖೆಯಲ್ಲಿ ಡಿ.ವೈ.ಎಸ್.ಪಿಯಾಗಿ ಪಿ.ಹೆಚ್. ರಾಣೆ, ಇಬ್ಬರು ಇನ್ಸ್ಪೆಕ್ಟರ್ ಮತ್ತು ನಾಲ್ಕು-ಐದು ಜನ ಸಬ್ ಇನ್ಸ್ಪೆಕ್ಟರ್‌ಗಳು ಇದ್ದರು. ನಾವೆಲ್ಲ ಊರಿನಲ್ಲಿರುವ ಯಾವುದೇ ಪ್ರತಿಷ್ಠಿತ ಮನರಂಜನೆಯ ಕ್ಲಬ್‌ಗಳಿಗೆ ಹೋಗುತ್ತಿರಲಿಲ್ಲ. ಅದರ ಬದಲು, ಪೋಲೀಸ್ ಸ್ಟೇಷನ್ ಬಳಿ ಇದ್ದ ವಿಶಾಲವಾದ ಮೈದಾನದಲ್ಲಿ ಬೆಳಗಿನ ಜಾವದಲ್ಲಿ ಬ್ಯಾಟ್‌ಮಿಂಟನ್, ಷಟಲ್ ಕಾಕ್ ಆಟ ಪ್ರಾರಂಭಿಸಿದ್ದೆವು. ಅಲ್ಲಿಗೆ ಕಂದಾಯ ಇಲಾಖೆಯಲ್ಲಿನ ವಿಎ, RI & ಸಬ್ ಇನ್ಸ್ಸ್ಪೆಕ್ರ‍್ಸ್ ಮತ್ತು ನನ್ನ ಬಿ.ಎ. ತರಗತಿಯ ಕ್ಲಾಸ್ ಮೇಟ್ ಆಗಿದ್ದ ನರಸಿಂಹಸ್ವಾಮಿ ಸೇರಿ ಒಂದೆರಡು ಘಂಟೆಗಳ ಕಾಲ ಆಟದಲ್ಲಿ ಕಳೆಯುತ್ತಿದ್ದೆವು. ಆಗಲೇ ತಾಲ್ಲೂಕಿನಲ್ಲಿನ ಸಮಸ್ಯೆಗಳನ್ನು ಸಾಂಧರ‍್ಭಿಕವಾಗಿ ಚರ‍್ಚಿಸಿ, ಶಾಂತಿ ಕಾಪಾಡಲು ಬೇಕಾದ ಕ್ರಮವಾಗಿ ಕೆಲವರನ್ನು ಒಂದೆರಡು ವಾರಗಳ ಕಾಲ ಸಬ್ ಜೈಲಿಗೆ ಕಳಿಸಲು ಕೋರುತ್ತಿದ್ದರು. ಇಲ್ಲವೇ ಪ್ರತಿ ವಾರವೂ ಹಾಜರಿರಲು ನೋಟಿಸ್ ನೀಡಿ ಬಾರದಿದ್ದಾಗ ದಸ್ತಗಿರಿ ಮಾಡಿ ತರಲು ನನ್ನಿಂದ ಅದೇಶ ಪಡೆದು ಕರೆತರುತ್ತಿದ್ದರು. ನಂತರ ವಿಚಾರಣೆ ಮಾಡಿ, ಒಳ್ಳೆಯ ನಡೆವಳಿಕೆಯ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡುತ್ತಿದ್ದೆವು. ಇನ್ನು ಕೆಲವು ಭಾರಿ ಈ ಎಲ್ಲ ಅಖPಅ 107 ಪ್ರಕರಣದಲ್ಲಿದ್ದ ಆಪಾದಿತರನ್ನು, ಗ್ರಾಮ ಸಹಾಯಕರನ್ನು ಒಟ್ಟುಗೂಡಿಸಿ ನಮ್ಮ ಕಛೇರಿಯ ಆವರಣದಲ್ಲಿದ್ದ ಜಾಗದಲ್ಲಿ ಗಿಡ ನೆಡಲು ಬೇಕಾದ ಗುಂಡಿ ತೆಗೆಯಲು ತೊಡಗಿಸಿ ದಿನದ ಕೊನೆಯಲ್ಲಿ ಕೇಸು ಕರೆದು ಕೇಸನ್ನು ಮುಂದೂಡುತ್ತಿದ್ದೆನು. ಹೀಗಾಗಿ ತಾಲ್ಲೂಕಿನಲ್ಲಿ, ಜಾತಿ ಜಗಳಗಳಾಗಲೀ, ದೊಂಬಿಗಳಾಗಲೀ ಮಾಡಲು ಪುಂಡ ಪೋಕರಿಗಳಿಗೆ ಅವಕಾಶವಿರುತ್ತಿರಲಿಲ್ಲ.

ತಾಲ್ಲೂಕು ಮಟ್ಟದ ನಾಯಕರು

1986ರ ನಂತರ ಶಾಸಕರುಗಳ ಜೊತೆ ಜಿಲ್ಲಾ ಪರಿಷತ್ ಚುನಾವಣೆಗಳು ಮುಕ್ತಾಯಗೊಂಡು ತಾಲ್ಲೂಕುಮಟ್ಟದಲ್ಲಿ ಹೆಜ್ಜಿಗೆ ರಾಮಯ್ಯ, ದೇವನೂರ ಸಿದ್ದಪ್ಪ, ಬಸವರಾಜ್, ಕಳಲೆ ಸಿದ್ದ ನಾಯಕ್, ಶಶಿಕಲಾ ನಾಗರಾಜ್ ಮತ್ತು ಶಶಿಕಲಾ ಬಾಲರಾಜ್ ಜೊತೆಗೆ ನಂಜನಗೂಡು ಟೌನ್‌ನಲ್ಲಿ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷರೂ ಇರುತ್ತಿದ್ದರು. ಇವರೆಲ್ಲ ಸಣ್ಣಪುಟ್ಟ ಕೆಲಸಗಳಿಗೆ ಶಿಫಾರಸ್ಸು ಮಾಡಲು ತಾಲ್ಲೂಕು ಕಛೇರಿಗೆ ಬರುತ್ತಿದ್ದರು. ಆಗುವ ಕೆಲಸ ಮಾಡುವುದರಲ್ಲಿ ವಿಳಂಬವಾಗದಂತೆ, ಆಗದಿರುವ ಕೆಲಸಗಳಿಗೂ ನನ್ನ ಮಟ್ಟದಲ್ಲೇ ಅವರಿಗೆ ವಿವರಿಸಿ ಹೇಳುತ್ತಿದ್ದೆ. ಅವರುಗಳು ಒಮ್ಮೊಮ್ಮೆ ಅದೇ ವಿಷಯಗಳನ್ನು ಶಾಸಕರುಗಳ ಹತ್ತಿರವೂ ಪ್ರಸ್ತಾಪಿಸಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು. ನನ್ನ ವಿವರಣೆ ಶಾಸಕರುಗಳಿಗೂ ಅದೇ ಆಗಿರುತ್ತಿತ್ತು. ಹಾಗಾಗಿ ಆಗುವ ಕೆಲಸಗಳಿಗೆ ಯಾವ ಶಿಫಾರಸ್ಸು ತಂದರೂ ಆಗುವುದಿಲ್ಲ ಎಂಬ ನಂಬಿಕೆ ಅವರಿಗೆಲ್ಲ ತಿಳಿದು ಬಂದಿತ್ತು.

ಗೃಹಮಂತ್ರಿಯಾಗಿದ್ದ ರಾಚಯ್ಯನವರು ಕರ‍್ನಾಟಕ ಕಂಡ ಹಿರಿಯ ಸಜ್ಜನ ರಾಜಕಾರಣಿ. ಅವರು ತಾಲ್ಲೂಕಿನಲ್ಲಿ ಪ್ರವಾಸ ಇರುವಾಗ, `ಇತರೆ ಇಬ್ಬರು ಶಾಸಕರುಗಳು ಯುವಕರಾಗಿದ್ದ ಕಾರಣ ಏನಾದರೂ ನಿನ್ನಿಂದ ತಪ್ಪು ಮಾಡಿಸಿ, ಮುಂದೆ ನೀನಿನ್ನು ಎಸಿ, ಡಿಸಿ ಆಗಬೇಕಾದವನು, ಎಚ್ಚರದಿಂದ ಕೆಲಸ ನರ‍್ವಹಿಸಬೇಕೆಂದು’ ಸಲಹೆ ನೀಡುತ್ತಿದ್ದರು. ನನಗಿಂತ ವಯಸ್ಸಿನಲ್ಲಿ, ಅನುಭವದಲ್ಲಿ ಸುಮಾರು 20 ವರ‍್ಷಗಳ ಅಂತರವಿದ್ದ ಅವರ ಮಾತು ನನಗೆ ನಿಜವಾದ ಕಳಕಳಿಯಿಂದ ಕೂಡಿದ ಮಾತಾಗಿತ್ತು. ಅವರಿಗೆ ಜನರಿಗೆ ಒಳ್ಳೆಯ ಆಡಳಿತ ನೀಡಿದರೆ ಸಾಕಾಗಿತ್ತು. ಮತ್ತಾವ ಒಳ ಒಪ್ಪಂದಗಳ ಮಾತು ಅವರ ಆಡಳಿತದಲ್ಲಿ ಸುಳಿಯುತ್ತಿರಲಿಲ್ಲ.

ಕಂದಾಯ ನೌಕರರ ದಿನಾಚರಣೆ

ವಿಧಾನಸಭೆ ಚುನಾವಣೆ ಆಗಿ ಮೂರು ರ‍್ಷವಾಗಿತ್ತು. ಜಿಲ್ಲಾ ಪರಿಷತ್ ಆಗತಾನೆ ಚುನಾವಣೆಗಳಾಗಿ ಹೊಸ ಸದಸ್ಯರುಗಳು ಆಯ್ಕೆಯಾಗಿದ್ದರು. ಮಾಮೂಲಿ ಕಂದಾಯ ಮತ್ತು ತಾಲ್ಲೂಕು ದಂಡಾಧಿಕಾರಿಯ ಕೆಲಸಗಳನ್ನು ಬಿಟ್ಟರೆ ಮತ್ತಾವ ಒತ್ತಡದ ಕೆಲಸಗಳು ಇರಲಿಲ್ಲ. ಹೀಗಿರುವಾಗ ಕಂದಾಯ ಅಧಿಕಾರಿಗಳು ರ‍್ಷಪರ‍್ತಿ ದುಡಿತದಲ್ಲೇ ಇದ್ದು, ಕಲೆ ಸಂಸ್ಕೃತಿ, ಸಂಗೀತದ ಬಗ್ಗೆ ಮುಖ ಮಾಡುವುದೇ ಇಲ್ಲ. ಈ ಬಗ್ಗೆ ನಾವ್ಯಾಕೆ ಇಡೀ ಜಿಲ್ಲೆಯ ನೌಕರರನ್ನು ಒಳಗೊಂಡಂತೆ 1-2ದಿನ ನಮ್ಮ ಕಂದಾಯ ನೌಕರರ ದಿನಾಚರಣೆ ಆಚರಿಸಬಾರದು ಎಂದು ನಮ್ಮ ಎಸಿ ತ್ರಿಪಾಠಿಯವರ ಜೊತೆ ಚರ‍್ಚಿಸಿ, ನಂತರ ಡಿಸಿಗೂ ಹೇಳಿದೆ.

ಎಲ್ಲ ತಹಸೀಲ್ದಾರ್ ಮಿತ್ರರೊಡನೆ ಕೂಡ ಮೌಖಿಕವಾಗಿ ಚರ‍್ಚಿಸಿ ಅವರ ಸಹಕಾರವನ್ನು ಕೋರಿದೆ. ಅದರಂತೆ, ವಿವಿಧ ಆಟಗಳ ಸ್ಪರ್ಧೆ, ಹಾಡುಗಾರಿಕೆ, ಕೊನೆಯ ದಿನದಲ್ಲಿ ಮಹಾಭಾರತದ ಕುರುಕ್ಷೇತ್ರದ ನಾಟಕ ಎಂದೆಲ್ಲ ತಯಾರಿಗಳು ನಡೆದವು. ಹುಣಸೂರು, ಮೈಸೂರು ಮತ್ತು ನಂಜನಗೂಡು ಉಪ ವಿಭಾಗಗಳ ಉಪ ವಿಭಾಗಾಧಿಕಾರಿಗಳು, ಎಲ್ಲಾ ತಾಲ್ಲೂಕು ತಹಸೀಲ್ದಾರರು, ವಿಎ, ಆರ್‌ಐ ಹಾಗೂ ಕಛೇರಿ ಸಿಬ್ಬಂದಿ ಎಲ್ಲರೂ ಎಲ್ಲ ಆಟ ಪಾಠಗಳಲ್ಲಿ ಭಾಗವಹಿಸಿದ್ದರು. ಆಟಗಳಲ್ಲಿ ಕಬಡ್ಡಿ, ಬ್ಯಾಟ್ ಮಿಂಟನ್, ಷಟಲ್ ಕಾಕ್, ವಾಲಿಬಾಲ್, ಚೆಸ್ ಹೀಗೆಲ್ಲ ಸ್ರ‍್ಧೆಗಳನ್ನು ನರ‍್ವಹಿಸಲು ಎಇಓ ಅವರನ್ನು ಸಂರ‍್ಕಿಸಿ ಒಬ್ಬ ಕ್ರೀಡಾ ಅಧಿಕಾರಿಯನ್ನು ಕೋರಿದ್ದೆ. ಅವರು ಎಲ್ಲಾ ಕ್ರೀಡೆಗಳನ್ನು ವ್ಯವಸ್ಥೆಗೊಳಿಸಿ, ಆಡಿಸಿ ಬಹುಮಾನಿತರ ಪಟ್ಟಿ ನೀಡಿದ್ದರು. ನಿಯಮಿತ ಅಭ್ಯಾಸಗಳು ಇಲ್ಲದ ಆಟಗಾರರೊಬ್ಬರು ಕಬ್ಬಡಿ ಆಟದಲ್ಲಿ ಬಿದ್ದು ಅವರ ಕೈ ಮುರಿದಿತ್ತು. ಸದ್ಯ ಅವರನ್ನು ನಂಜನಗೂಡಿನಲ್ಲಿಯೇ ಉಪಚರಿಸಿ ಸುಧಾರಿಸುವಂತಾಯಿತು.

ಈ ಸಮಾರಂಭಕ್ಕೆ ಮೊದಲ ದಿನ ಎಲ್ಲಾ ಸ್ಪರ್ಧೆಗಳನ್ನು ನಡೆಸಿ ಎರಡನೇ ದಿನ ಸಮಾರೋಪ ಸಮಾರಂಭ ಮತ್ತು ನಾಟಕವಿತ್ತು. ಆಗ ಮೈಸೂರು ವಿಭಾಗಕ್ಕೆ ವಿಭಾಗಾಧಿಕಾರಿಗಳಾಗಿದ್ದ ನೀಲಕಂಠರಾಜು, ಡಿಸಿ ವಿ.ಪಿ. ಬಳಿಗಾರ್, ಹುಣಸೂರು ಎಸಿಯಾಗಿದ್ದ ಶಿವಲಿಂಗಮರ‍್ತಿ, ಮೈಸೂರು ಎಸಿ ಈಶ್ವರ್ ನಮ್ಮ ಎಸಿ ಯೋಗೇಂದ್ರ ತ್ರಿಪಾಠಿ ಎಲ್ಲ ಸಂತೋಷದಿಂದ ಭಾಗವಹಿಸಿದ್ದರು. ನಮ್ಮಲ್ಲಿದ್ದ 80 ಜನ ಗ್ರಾಮ ಸಹಾಯಕರಿಗೆ ವಿಶೇಷವಾದ ಸಮವಸ್ತ್ರ ಹೊಲಿಸಿ ಹೊಸ ಬೂಟುಗಳನ್ನು ಕೊಡಿಸಿ, ಅವರಿಗೆ ಪೋಲೀಸ್ ಪೇದೆಗಳಂತೆ ತರಬೇತಿಯನ್ನು ನೀಡಲು ನಮಲ್ಲಿಯೇ ಇದ್ದ ಕಸಬಾ ವಿಎ – ರಾಧಾಕೃಷ್ಣನಿಗೆ ಜವಾಬ್ದಾರಿ ನೀಡಿದ್ದೆ. ರಾಧಾಕೃಷ್ಣ VA ಆಗಿದ್ದರೂ ಒಬ್ಬ DSPಯಂತೆ ಪೊಲೀಸ್ ನಡವಳಿಕೆಗಳನ್ನು ರೂಢಿಸಿಕೊಂಡಿದ್ದ. ಅವನ ಕೆಳಗೆ ತರಬೇತಿಗೊಂಡ ನಮ್ಮ ಗ್ರಾಮ ಸಹಾಯಕರು ಶಿಸ್ತಿನ ಪೊಲೀಸ್ ಪೇದೆಗಳಂತೆ ನಡೆದುಕೊಳ್ಳುತ್ತಿದ್ದರು.

ಸಮಾರಂಭ ಪ್ರಾರಂಭವಾಗುವ ಮುನ್ನ ನಮ್ಮ ಗ್ರಾಮ ಸಹಾಯಕರೆಲ್ಲ ಒಟ್ಟಿಗೆ ಸಮವಸ್ತ್ರದಲ್ಲಿದ್ದು, ಪೋಲೀಸ್ ಇಲಾಖೆ ನೀಡುವ ‘ಗಾರ್ಡ್ ಆಫ್ ಆನರ್’ನಂತೆ ಎಲ್ಲ ಅತಿಥಿಗಳಿಗೂ ಗೌರವ ವಂದನೆ ನೀಡಿದಾಗ ‘you have summoned police personnel also here’ ಎಂದು ಡಿವಿಸಿ ಉದ್ಘಾರ ತೆಗೆದರು. ‘ನೋ ಸರ್, ಇವರೆಲ್ಲ ನಮ್ಮ ತಾಲ್ಲೂಕಿನ ಗ್ರಾಮ ಸಹಾಯಕರು’ ಎಂದಾಗ ಅವರು ಅಚ್ಚರಿ ವ್ಯಕ್ತಪಡಿಸಿ, ಪ್ರಶಂಸೆ ಕೂಡ ಮಾಡಿದ್ದರು. ಇಂತಹ ಕಂದಾಯ ದಿನಾಚರಣೆಯನ್ನು ನಾನು ಆಯೋಜಿಸಲು ಮುಂದಾಗಿದ್ದಕ್ಕೆ, ನರ‍್ವಹಿಸಿದ್ದಕ್ಕೆ ಡಿವಿಸಿ ಮೊದಲ್ಗೊಂಡು ಎಲ್ಲರೂ ಆಗ ನನ್ನನ್ನು ಪ್ರಶಂಸಿದರು.

ಎಲ್ಲರಿಗಿಂತಲೂ ಹೆಚ್ಚಾಗಿ ನಮ್ಮ ಎಸಿ ಯಾಗಿದ್ದ ತ್ರಿಪಾಠಿ ಅವರು ತುಂಬಾ ಖುಷಿಯಲ್ಲಿದ್ದರು. ಜೊತೆಗೆ ನಮ್ಮ ತಾಲ್ಲೂಕಿನ ಎಲ್ಲಾ ಸಿಬ್ಬಂದಿ ನಾವೆಲ್ಲ ಒಂದು ಕುಟುಂಬ ಎಂಬ ಭಾವನೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಏನು ಬೇಕಾದರೂ ಸಾಧಿಸಬಹುದೆಂಬ ಸದ್ಭಾವನೆ ಮೂಡುವಂತಾಗಿತ್ತು. ಕೊನೆಯಲ್ಲಿ ಕಲಿತು ಪ್ರರ‍್ಶಿಸಿದ ನಾಟಕದ ಪ್ರಥಮ ದೃಶ್ಯದಲ್ಲಿ ನಾನು ಕೃಷ್ಣನ ಪಾತ್ರಧಾರಿಯಾಗಿ ಹಾಡೊಂದನ್ನು ಹಾಡಿ ಪ್ರಾರಂಭವಾಗುವಂತೆ ನಾಟಕದ ನರ‍್ದೇಶನ ಮಾಡಿದ್ದ ಮೇಷ್ಟರು ವ್ಯವಸ್ಥೆ ಮಾಡಿದ್ದರು. ನಾನು ಕೃಷ್ಣನ ಪಾತ್ರದ ಪೋಷಾಕಿನಲ್ಲಿ ಹಾಡಿ ಸಂತೋಷಪಟ್ಟಿದ್ದು ಈಗ 35 ವರ‍್ಷಗಳ ನಂತರವೂ ಹಸಿರಾಗಿದೆ.(ಬರಹ:ರುದ್ರಪ್ಪ ಹನಗವಾಡಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ2 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ3 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

ದಿನದ ಸುದ್ದಿ3 days ago

ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ...

ದಿನದ ಸುದ್ದಿ3 days ago

ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ...

ದಿನದ ಸುದ್ದಿ4 days ago

ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ :‌ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ...

ದಿನದ ಸುದ್ದಿ4 days ago

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ...

ದಿನದ ಸುದ್ದಿ4 days ago

ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ

ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನೀಡಲು ಹರಾಜು ಕರೆಯಲಾಗಿದ್ದು, ಕಾರಣಾಂತರಗಳಿಂದ ಹರಾಜು ದಿನಾಂಕವನ್ನು ಮಾ.20 ರ ಬೆಳಿಗ್ಗೆ 11.00 ಗಂಟೆಗೆ...

ದಿನದ ಸುದ್ದಿ4 days ago

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಚನ್ನಗಿರಿ ನ್ಯಾಯಾಯದಲ್ಲಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರಾಗಿರುವ ಕು.ಶಮಾ...

ದಿನದ ಸುದ್ದಿ4 days ago

ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ

ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ನಮಗೆಲ್ಲರಿಗೂ ಒಂದು ಉತ್ತಮ ಜೀವನವನ್ನ ನಿರ್ಮಿಸಲು ಉದ್ಯೋಗ ಅತ್ಯಗತ್ಯ. ಆದರೆ, ಇತ್ತೀಚಿನ...

Trending