ದಿನದ ಸುದ್ದಿ
ಕನಸು ಮಾರಾಟ ಮಾಡಿ ಲಾಭ ಮಾಡಿಕೊಳ್ಳಲು ಡಿಜಿಟಲ್ ಮಾಧ್ಯಮ ಅತ್ಯುತ್ತಮ ವೇದಿಕೆ : ಈಗಲ್ಸ್ ಫೋರ್ಡ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಆರ್ಯನ್ ಕುಂದರ್
ಸುದ್ದಿದಿನ,ದಾವಣಗೆರೆ : ಇದು ಕನಸನ್ನು ಮಾರಾಟ ಮಾಡುವ ಕಾಲ. ನಿಮ್ಮ ಕನಸನ್ನು ಮಾರಾಟ ಮಾಡಿ ಲಾಭ ಮಾಡಿಕೊಳ್ಳಲು ಡಿಜಿಟಲ್ ಮಾಧ್ಯಮ ಅತ್ಯುತ್ತಮ ವೇದಿಕೆಯಾಗಿದೆ. ಪತ್ರಿಕೋದ್ಯಮ ವಿದ್ಯಾರ್ಥಿಗಳು ಮಾಧ್ಯಮಕ್ಷೇತ್ರದ ಲಾಭ ಪಡೆಯಲು ಮುಂದಾಗಬೇಕು ಎಂದು ಈಗಲ್ಸ್ ಫೋರ್ಡ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಆರ್ಯನ್ಕುಂದರ್ ಸಲಹೆ ನೀಡಿದರು.
ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ವತಿಯಿಂದ ಶುಕ್ರವಾರ ಡಿಜಿಟಲ್ ಮಾಧ್ಯಮ ವೇದಿಕೆ ಮತ್ತು ಮಾರುಕಟ್ಟೆ ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತನ್ನಲ್ಲಿರುವಕಲ್ಪನೆ, ಆಲೋಚನೆ, ಕನಸುಗಳನ್ನು ಹಂಚಿಕೊಂಡು ತಂತ್ರಜ್ಞಾನದ ಕೌಶಲದ ಮೂಲಕ ಆರ್ಥಿಕವಾಗಿ ಭದ್ರನಾಗುತ್ತಿದ್ದಾನೆ. ಅದಕ್ಕೆ ಡಿಜಿಟಲ್ ವೇದಿಕೆ ಉತ್ತಮ ಬುನಾದಿಯಾಗಿದೆ ಎಂದರು.
ಮಾಧ್ಯಮಕ್ಷೇತ್ರ ಸಾಕಷ್ಟು ವಿಸ್ತಾರವಾಗಿದೆ. ಪ್ರಸ್ತುತ ಮಾರುಕಟ್ಟೆ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಪತ್ರಕರ್ತನಾಗಿದ್ದಾನೆ. ಹಾಗೆಯೇ ವ್ಯಾಪಾರಿಯೂ ಆಗಿದ್ದಾನೆ. ವೃತ್ತಿ ಕೌಶಲಗಳನ್ನು ರೂಢಿಸಿಕೊಂಡು ಡಿಜಿಟಲ್ ಹಾಗೂ ಸ್ಯಾಟ್ಲೈಟ್ ವೇದಿಕೆಗಳಲ್ಲಿರುವ ಅವಕಾಶ ಸದ್ಬಳಕೆ ಮಾಡಿಕೊಂಡರೆ ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.
ಬದಲಾಗುತ್ತಿರುವ ಮಾಧ್ಯಮಕ್ಷೇತ್ರದ ವ್ಯವಸ್ಥೆಗೆ ತಕ್ಕಂತೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ವೃತ್ತಿಪರತೆಯನ್ನು ರೂಢಿಸಿಕೊಳ್ಳಬೇಕು.ತಂತ್ರಜ್ಞಾನ, ಆವಿಷ್ಕಾರ, ಸಂಶೋಧನೆಗಳ ಜೊತೆಗೆ ತಮ್ಮಲ್ಲಿರುವ ಸಾಮಥ್ರ್ಯ ಹಾಗೂ ಕೌಶಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಬೌದ್ಧಿಕ ವಿಚಾರಗಳನ್ನು ವ್ಯಾಪಾರ ಮಾಡಿ ಆದಾಯ ಗಳಿಸುವ ಮಾರ್ಗಗಳನ್ನು ಕಂಡುಕೊಳ್ಳಬೇಕು.ಆ ನಿಟ್ಟಿನಲ್ಲಿ ಯೋಚನೆ ಮಾಡಿದಾಗ ಮಾತ್ರ ಆರ್ಥಿಕವಾಗಿ ಸಬಲತೆ ಪಡೆಯಲು ಸಾಧ್ಯ ಎಂದು ನುಡಿದರು.
ಇದನ್ನೂ | ದಾವಣಗೆರೆ | ವಯೋಶ್ರೇಷ್ಟ ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಾಧ್ಯಮಕ್ಷೇತ್ರದಲ್ಲಿ ಹಿಂದೆ ಜನಪರ ಸೇವೆಗೆ ಮಾತ್ರ ಬೆಲೆ ಇತ್ತು. ಆದರೆ ಈಗಿನ ಬದಲಾದ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಬದುಕನ್ನೂ ಕಟ್ಟಿಕೊಳ್ಳಬೇಕು.ಅದಕ್ಕಾಗಿ ಯಾವುದೇ ಒಂದು ಸಂಸ್ಥೆ ಮೇಲೆ ಅವಲಂಬಿತರಾಗದೆ ಲಭ್ಯವಿರುವ ಇನ್ನಿತರ ಅವಕಾಶಗಳತ್ತ ಗಮನ ಹರಿಸಬೇಕು. ಬಂಡವಾಳ ಹೂಡದೇ ಲಾಭ ಗಳಿಸುವ ಹಲವಾರು ಅವಕಾಶಗಳು ಡಿಜಿಟಲ್ ಮಾಧ್ಯಮಕ್ಷೇತ್ರದಲ್ಲಿ ತೆರೆದುಕೊಂಡಿದ್ದು, ಅವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
‘ನಿಮ್ಮ ಸುತ್ತ ಮುತ್ತ ನಡೆಯುವ ಘಟನೆ, ವಿಶೇಷಗಳನ್ನೇ ಆಯ್ದುಕೊಂಡು, ಅದಕ್ಕೊಂದು ರೂಪಕೊಟ್ಟು, ಕ್ಯಾಮೆರಾದಲ್ಲಿ ಸೆರೆ ಹಿಡಿದು ತಂತ್ರಜ್ಞಾನದ ಮೂಲಕ ಮಾರುಕಟ್ಟೆಗೆ ಬಿಟ್ಟರೆ ಅದೇ ಉತ್ಪನ್ನವಾಗಿ ಮಾರಾಟವಾಗುತ್ತದೆ. ಇಲ್ಲಿ ನೋಡುಗರಿಂದಲೇ ವ್ಯಾಪಾರ ಕುದುರುತ್ತದೆ. ಅದಕ್ಕೆ ಮಾರಾಟದ ಕಲೆ ಅತ್ಯವಶ್ಯವಾಗಿದೆ ಎಂದು ಹೇಳಿದರು.
ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಡಾ.ಶಿವಕುಮಾರ ಕಣಸೋಗಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ತಂತ್ರಜ್ಞಾನದ ಆವಿಷ್ಕಾರಗಳು ಅವಕಾಶದ, ಆರ್ಥಿಕತೆಯ ಅವಕಾಶಗಳನ್ನು ಬಿಚ್ಚಿಟ್ಟುಕೊಂಡಿದೆ. ಯಾರು ಯಾವರೀತಿ, ಹೇಗೆ ಅದನ್ನು ಉಪಯೋಗಿಸಿಕೊಂಡು ಲಾಭ ಗಳಿಸುತ್ತಾರೆ ಎಂಬುದರ ಮೇಲೆ ಅವರ ಭವಿಷ್ಯ ನಿಂತಿದೆ. ಇದೊಂದು ಮಾಧ್ಯಮ ಬಜಾರ್ ಇಲ್ಲಿ ತಂತ್ರಜ್ಞಾನ, ಕೌಶಲ ಹಾಗೂ ಕನಸುಗಳಿಗೆ ಬೆಲೆ ಹೆಚ್ಚು ಎಂದು ಹೇಳಿದರು.
ಸಹಾಯಕ ಪ್ರಾಧ್ಯಾಪಕಿ ಡಾ.ಚಂದ್ರಲೇಖಾಜೆ.ಎಸ್, ಬೋಧಕ ಸಹಾಯಕರಾದ ಲಾವಣ್ಯ, ವೆಂಕಟೇಶ್, ಗಂಗಾಧರ್ ಉಪಸ್ಥಿತರಿದ್ದರು.ಸಹಾಯಕ ಪ್ರಾಧ್ಯಾಪಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243