Connect with us

ಸಿನಿ ಸುದ್ದಿ

ಅಶ್ವಿನಿ ಪುನೀತ್ ರಾಜ್‍ಕುಮಾರ್ ತಂದೆ ಹೃದಯಾಘಾತದಿಂದ ನಿಧನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು: ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರ ತಂದೆ ರೇವನಾಥ್ (78) ಹೃದಯಾಘಾತದಿಂದ ಭಾನುವಾರ ಮೃತಪಟ್ಟಿದ್ದಾರೆ.

ರೇವನಾಥ್ ಅವರು ಪುನೀತ್ ರಾಜ್‍ಕುಮಾರ್ ಅವರ ನಿಧನ ನಂತರ ತುಂಬಾ ಒತ್ತಡಕ್ಕೆ ಒಳಗಾಗಿದ್ದರು. ಭಾನುವಾರ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಹೃದರ್ಯಾಘಾತದಿಂದ ಸಾವನ್ನಪಿದ್ದಾರೆ.

ಚಿಕ್ಕಮಗಳೂರು ಮೂಲದ ಅಶ್ವಿನಿ ತಂದೆ, ಹಲವು ವರ್ಷಗಳಿಂದ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದರು. ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.

ರೇವನಾಥ್ ಅವರು ಪುನೀತ್ ಸಾವಿನ ಬಳಿಕ ತಮ್ಮ ಪತ್ನಿಯೊಂದಿಗೆ ಮಗಳು ಅಶ್ವಿನಿ ಜತೆ ಸದಾಶಿವನಗರದ ನಿವಾಸದಲ್ಲಿದಲ್ಲೇ ವಾಸವಿದ್ದರು. ಆರೋಗ್ಯವಾಗಿಯೇ ಇದ್ದ ರೇವನಾಥ್ ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉಪೇಂದ್ರ UI ಸಿನೆಮಾ | ಇತಿಹಾಸ ನಿರ್ಮಿಸಲು ಸಜ್ಜು ; ಹಂಗೇರಿಯಲ್ಲಿ ಮ್ಯೂಸಿಕ್..!

Published

on

“UI” ಭಾರತೀಯ ಚಿತ್ರರಂಗದಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಮೊದಲ ಬಾರಿಗೆ, ಹಂಗೇರಿಯ ಬುಡಾಪೆಸ್ಟ್‌ನಲ್ಲಿ 90-ಪೀಸ್ ಆರ್ಕೆಸ್ಟ್ರಾ ಭಾರತೀಯ ಚಲನಚಿತ್ರಕ್ಕಾಗಿ ಸಂಗೀತವನ್ನು ರೆಕಾರ್ಡ್ ಮಾಡುತ್ತಿದೆ. ಈ ಅದ್ಭುತ ಸಾಧನೆಯು ತನ್ನ ಪ್ರೇಕ್ಷಕರಿಗೆ ಸಾಟಿಯಿಲ್ಲದ ಶ್ರವಣೇಂದ್ರಿಯ ಅನುಭವವನ್ನು ನೀಡುವ ಚಿತ್ರದ ಬದ್ಧತೆಯನ್ನು ಎತ್ತಿ ತೋರಿಸುತ್ತದೆ.

“UI” ಗೆ ಹಿನ್ನೆಲೆ ಸಂಗೀತವನ್ನು ಹೆಸರಾಂತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ರಚಿಸುತ್ತಿದ್ದಾರೆ. ಯುರೋಪ್‌ನ ವಿಶ್ವ-ದರ್ಜೆಯ ಬುಡಾಪೆಸ್ಟ್ ಆರ್ಕೆಸ್ಟ್ರಾದೊಂದಿಗಿನ ಅವರ ಸಹಯೋಗವು ಅದರ ಅಸಾಧಾರಣ ಸಂಗೀತ ಪರಾಕ್ರಮ ಮತ್ತು ಅತ್ಯಾಧುನಿಕ ಸೌಲಭ್ಯಗಳಿಗೆ ಹೆಸರುವಾಸಿಯಾಗಿದೆ, ಇದು ಮಹಾಕಾವ್ಯ ಮತ್ತು ತಲ್ಲೀನಗೊಳಿಸುವ ಸೌಂಡ್‌ಸ್ಕೇಪ್ ಅನ್ನು ನೀಡಲು ಹೊಂದಿಸಲಾಗಿದೆ. ಈ ಐತಿಹಾಸಿಕ ಸಹಯೋಗವು ಭಾರತೀಯ ಚಲನಚಿತ್ರೋದ್ಯಮದಲ್ಲಿ ಹೊಸ ಮಾನದಂಡವನ್ನು ಹೊಂದಿಸುತ್ತದೆ, ಸಿನಿಮಾ ಸಂಗೀತದ ಗಡಿಗಳನ್ನು ತಳ್ಳುವ ನಮ್ಮ ಸಮರ್ಪಣೆಯನ್ನು ಪ್ರದರ್ಶಿಸುತ್ತದೆ.

“UI” ಅನ್ನು ಉಪೇಂದ್ರ ಅವರು ನಿರ್ದೇಶಿಸಿದ್ದಾರೆ, ಅವರ ದೂರದೃಷ್ಟಿಯ ವಿಧಾನವು ಕಥೆ ಹೇಳುವಿಕೆ ಮತ್ತು ಚಲನಚಿತ್ರ ತಯಾರಿಕೆಯಲ್ಲಿ ಸತತವಾಗಿ ಹೊದಿಕೆಯನ್ನು ತಳ್ಳಿದೆ. ಲಹರಿ ಫಿಲ್ಮ್ಸ್ ಮತ್ತು ವೀನಸ್ ಎಂಟರ್‌ಟೈನರ್ಸ್ ನಿರ್ಮಾಣದ ಈ ಚಿತ್ರವು ಪ್ರೇಕ್ಷಕರಿಗೆ ಹೊಸ ಮಟ್ಟದ ಸಿನಿಮೀಯ ಶ್ರೇಷ್ಠತೆಯನ್ನು ತರುವ ಭರವಸೆಯನ್ನು ನೀಡುತ್ತದೆ. “ಸರಿಲೇರು ನೀಕೆವ್ವರು,” “ವಿಕ್ರಾಂತ್ ರೋನಾ,” “ಕೆಜಿಎಫ್ – 2,” ಮತ್ತು “ಸಲಾರ್” ನಂತಹ ಅಗ್ರ ಭಾರತೀಯ ಚಲನಚಿತ್ರಗಳು ಈ ಹಿಂದೆ ಬುಡಾಪೆಸ್ಟ್‌ನಲ್ಲಿ ತಮ್ಮ ಸ್ಕೋರ್‌ಗಳನ್ನು ರೆಕಾರ್ಡ್ ಮಾಡಿದ್ದರೆ, “ಯುಐ” ಪೂರ್ಣ 90-ಪೀಸ್ ಅನ್ನು ಬಳಸಿಕೊಳ್ಳುವಲ್ಲಿ ಮೊದಲಿಗರಾಗಿ ನಿಂತಿದೆ. ಅದರ ಹಿನ್ನೆಲೆ ಸ್ಕೋರ್‌ಗಾಗಿ ಆರ್ಕೆಸ್ಟ್ರಾ. ಈ ಸಾಧನೆಯು ಚಲನಚಿತ್ರದ ನವೀನ ವಿಧಾನವನ್ನು ಒತ್ತಿಹೇಳುತ್ತದೆ ಮತ್ತು ಪ್ರೇಕ್ಷಕರಿಗೆ ನಿಜವಾದ ಮಹಾಕಾವ್ಯ ಮತ್ತು ತಲ್ಲೀನಗೊಳಿಸುವ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದೆ.

“UI” ನ ಇಡೀ ಪ್ರಪಂಚದಾದ್ಯಂತದ ಅಭಿಮಾನಿಗಳೊಂದಿಗೆ ಈ ಅಸಾಮಾನ್ಯ ಸಂಗೀತ ಪ್ರಯಾಣವನ್ನು ಹಂಚಿಕೊಳ್ಳಲು ಎದುರು ನೋಡುತ್ತಿದೆ. “UI” ಬಿಡುಗಡೆಯ ಕುರಿತು ಹೆಚ್ಚಿನ ನವೀಕರಣಗಳಿಗಾಗಿ ಟ್ಯೂನ್ ಮಾಡಿ ಮತ್ತು ಭಾರತೀಯ ಚಿತ್ರರಂಗದಲ್ಲಿ ಹೊಸ ಮಾನದಂಡಗಳನ್ನು ಹೊಂದಿಸುವ ಭರವಸೆ ನೀಡುವ ಚಲನಚಿತ್ರವನ್ನು ಅನುಭವಿಸಲು ಸಿದ್ಧರಾಗಿ.

“UI” ಮುಂಬರುವ ಕನ್ನಡ ಚಲನಚಿತ್ರವಾಗಿದ್ದು, ಅದರ ಬಲವಾದ ಕಥೆ, ಬೆರಗುಗೊಳಿಸುವ ದೃಶ್ಯಗಳು ಮತ್ತು ಅದ್ಭುತ ಸಂಗೀತದ ಸ್ಕೋರ್‌ನೊಂದಿಗೆ ಪ್ರೇಕ್ಷಕರನ್ನು ಸೆಳೆಯುವ ಗುರಿಯನ್ನು ಹೊಂದಿದೆ. ಲಹರಿ ಫಿಲ್ಮ್ಸ್ ಮತ್ತು ವೀನಸ್ ಎಂಟರ್‌ಟೈನರ್ಸ್ ನಿರ್ಮಾಣದ ದೂರದೃಷ್ಟಿಯ ಉಪೇಂದ್ರ ನಿರ್ದೇಶಿಸಿದ್ದಾರೆ ಮತ್ತು ಮೆಚ್ಚುಗೆ ಪಡೆದ ಬಿ. ಅಜನೀಶ್ ಲೋಕನಾಥ್ ಅವರ ಸಂಗೀತವನ್ನು ಒಳಗೊಂಡಿರುವ ಈ ಚಿತ್ರವು ಭಾರತೀಯ ಚಿತ್ರರಂಗದಲ್ಲಿ ಹೆಗ್ಗುರುತಾಗಲಿದೆ.

ಮಾಹಿತಿ ಕೃಪೆ : ciniloka.co.in

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜೂನಿಯರ್ ಅಮಿತಾಬ್ ಬಚ್ಚನ್ ನಿಧನ

Published

on

ಸುದ್ದಿದಿನ ಡೆಸ್ಕ್ : ಜೂನಿಯರ್ ಅಮಿತಾಬ್ ಬಚ್ಚನ್, ಜನಪ್ರಿಯ ಕಿರುತೆರೆ ನಟ ಫಿರೋಜ್ ಖಾನ್‌ ಅವರು ಉತ್ತರ ಪ್ರದೇಶದ ಬದೌನ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರು ‘ಭಾಬಿಜಿ ಘರ್ ಪರ್ ಹೈ!’, ‘ಜೀಜಾ ಜಿ ಛತ್ ಪರ್ ಹೈ’, ‘ಸಾಹೇಬ್ ಬೀಬಿ ಔರ್ ಬಾಸ್‌’, ‘ಹಪ್ಪು ಕಿ ಉಲ್ತಾನ್ ಪಲ್ತಾನ್’, ಮತ್ತು ‘ಶಕ್ತಿಮಾನ್’ ಚಿತ್ರಗಳಲ್ಲಿ ಅಭಿನಯಿಸಿದ್ದರು. ಫಿರೋಜ್ ಖಾನ್ ಅವರು ಅಮಿತಾಬ್ ಬಚ್ಚನ್ ಅವರ ಮಿಮಿಕ್ರಿಗೂ ಹೆಸರುವಾಸಿಯಾಗಿದ್ದರು.

ಗಾಯಕ ಅದ್ವಾನ್ ಸಾಮಿ ಅವರ ‘ಥೋಡಿ ಸಿ ತು ಲಿಫ್ಟ್ ಕರ ದೇ’ ಹಾಡಿನಲ್ಲಿ ಭಾಗವಾಗಿದ್ದರು. ಬಾಲಿವುಡ್ ಚಿತ್ರರಂಗ ಇವರಿಗೆ ತೀವ್ರ ಸಂತಾಪಗಳನ್ನು ಸೂಚಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಮಧ್ಯಾಹ್ನದ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಪ್ರಮುಖ ಸುದ್ದಿಗಳು

  1. ದೇಶಾದ್ಯಂತ 5 ಹಂತಗಳ ಚುನಾವಣೆ ಪೂರ್ಣಗೊಂಡಿದ್ದು, ಇನ್ನು ಎರಡು ಹಂತಗಳ ಚುನಾವಣೆ ಬಾಕಿ ಉಳಿದಿದೆ. 6ನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಒಟ್ಟು 58 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ.
  2. ಹರಿಯಾಣದಲ್ಲಿಂದು ವಿವಿಧ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಬಿಜೆಪಿ ಹಿರಿಯ ನಾಯಕ ಮತ್ತು ಪ್ರಧಾನಿ ನರೇಂದ್ರ ಮೋದಿ, ಮಹೇಂದ್ರಗರ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ಹರಿಯಾಣದ ಸಿರ್‍ಸಾದಲ್ಲಿ ರೋಡ್ ಶೋ ನಡೆಸಿದರು.
  3. ಸಂತಾಲಿ ಲೇಖಕ ಪಂಡಿತ್ ರಘುನಾಥ್ ಮುರ್ಮು ಅವರ ಜನ್ಮದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿರುವ ಅವರು, ಓಲ್ ಚಿಕಿ ಲಿಪಿಯನ್ನು ಅಭಿವೃದ್ಧಿಪಡಿಸುವ ಮೂಲಕ ಸಂತಾಲಿ ಭಾಷೆಗೆ ಪಂಡಿತ್ ರಘುನಾಥ್ ಮುರ್ಮು ಹೊಸ ಗುರುತು ನೀಡಿದ್ದಾರೆ ಎಂದು ಹೇಳಿದರು.
  4. ಭಗವಾನ್ ಬುದ್ಧನ ಜನ್ಮದಿನದ ಅಂಗವಾಗಿ ಬುದ್ಧ ಪೂರ್ಣಿಮೆಯನ್ನು ಪ್ರಪಂಚದಾದ್ಯಂತ ವಿವಿಧ ಭಾಗಗಳಲ್ಲಿ ಇಂದು ಆಚರಿಸಲಾಗುತ್ತಿದೆ. ಭಾರತ, ನೇಪಾಳ, ಭೂತಾನ್, ಬರ್ಮಾ, ಥೈಲ್ಯಾಂಡ್, ಟಿಬೆಟ್, ಕೊರಿಯಾ, ಲಾವೋಸ್, ವಿಯೆಟ್ನಾಂ, ಮಂಗೋಲಿಯಾ, ಕಾಂಬೋಡಿಯಾ, ಸಿಂಗಾಪುರ್, ಇಂಡೋನೇಷ್ಯಾ ಮತ್ತು ಶ್ರೀಲಂಕಾದಂತಹ ದೇಶಗಳಲ್ಲಿ ಇದು ಪ್ರಮುಖ ಹಬ್ಬವಾಗಿದೆ.
  5. ಜುಲೈ 4 ರಂದು ಬ್ರಿಟನ್ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಘೋಷಿಸಿದ್ದಾರೆ. ಚುನಾವಣೆ ಘೋಷಣೆಯಾಗುವ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿರುವ ಅವರು, ನಿರೀಕ್ಷೆಗಿಂತ ಹಲವಾರು ತಿಂಗಳುಗಳ ಮುಂಚಿತವಾಗಿಯೇ ರಾಷ್ಟ್ರೀಯ ಚುನಾವಣೆಯನ್ನು ಕರೆದಿದ್ದಾರೆ.
  6. ಬೆಲ್ಜಿಯಂನ ಆಂಟ್‌ವರ್ಪ್‌ನಲ್ಲಿ ನಡೆದ ಎಫ್‌ಐಎಚ್ ಪ್ರೊ ಲೀಗ್ ಪಂದ್ಯದಲ್ಲಿ ಭಾರತೀಯ ಪುರುಷರ ಹಾಕಿ ತಂಡ ಅರ್ಜೆಂಟೀನಾ ತಂಡವನ್ನು ಶೂಟೌಟ್‌ನಲ್ಲಿ 5-4ಗೋಲುಗಳಿಂದ ಸೋಲಿಸಿತು. ಶೂಟೌಟ್‌ನಲ್ಲಿ, ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಸುಖಜೀತ್ ಸಿಂಗ್ ತಲಾ ಎರಡು ಗೋಲು ಗಳಿಸಿದರು.
  7. ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಐಪಿಎಲ್ ಟಿ-20 ಟೂರ್ನಿಯ 2ನೇ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ತಂಡ ಮೊದಲನೇ ಕ್ವಾಲಿಫೈಯರ್ ಪಂದ್ಯ ಸೋತ ಹೈದರಾಬಾದ್ ತಂಡದೊಂದಿಗೆ ಫೈನಲ್ ಪ್ರವೇಶಿಸಲು ಸೆಣಸಾಟ ನಡೆಸಲಿದೆ.
  8. ಇಂದು ಬುದ್ಧ ಪೌರ್ಣಿಮೆಯನ್ನು, ರಾಜ್ಯಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಜಗತ್ತಿಗೆ ಜ್ಞಾನದ ಬೆಳಕನ್ನು ನೀಡಿ, ಕರುಣೆ ಮತ್ತು ಶಾಂತಿಯ ಮಂತ್ರವನ್ನು ಸಾರಿದ ಮಹಾಪುರುಷ ಗೌತಮ ಬುದ್ಧನನ್ನು ನೆನೆಯುತ್ತಾ, ಎಲ್ಲರಿಗೂ ಬುದ್ಧ ಪೂರ್ಣಿಮೆಯ ಶುಭಾಶಯಗಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
  9. ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ. ಮುಂಗಾರು ಹಂಗಾಮಿಗೆ 5 ಲಕ್ಷ 35 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದೆ. ಒಟ್ಟು 8 ಲಕ್ಷದ 98 ಸಾವಿರ ಕ್ವಿಂಟಾಲ್ ಬೀಜಗಳ ಪೂರೈಕೆಗೆ, ವ್ಯವಸ್ಥೆ ಮಾಡಲಾಗಿದೆ ಎಂದು, ಸಾಮಾಜಿಕ ಜಾಲತಾಣದಲ್ಲಿ, ಕೃಷಿ ಖಾತೆ ಸಚಿವ ಎನ್.ಚಲುವರಾಯ ಸ್ವಾಮಿ ತಿಳಿಸಿದ್ದಾರೆ.
  10. ಗದಗ ಹಾಗೂ ಹಾವೇರಿ ಜಿಲ್ಲೆಗಳ ವ್ಯಾಪ್ತಿಯ, ವಿವಿಧ ಗ್ರಾಮಗಳಿಗೆ, ಕುಡಿಯುವ ನೀರು ಪೂರೈಸಲು, ಭದ್ರಾ ಜಲಾಶಯದಿಂದ, ತುಂಗಭದ್ರಾ ನದಿಗೆ, ಇದೇ 28ರ ವರೆಗೆ ಪ್ರತಿ ದಿನ, 2 ಸಾವಿರ ಕ್ಯುಸೆಕ್‌ಗಳಂತೆ ಒಟ್ಟು, 11 ಸಾವಿರದ 574 ಕ್ಯೂಸೆಕ್ ನೀರು ಹರಿಸಲಾಗುವುದು ಎಂದು, ಭದ್ರಾ ಯೋಜನಾ ವೃತ್ತದ, ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
  11. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡ ಬಳ್ಳಾಪುರದ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ, ದ್ರೌಪದಿದೇವಿ ಕರಗ ಮಹೋತ್ಸವ, ಇಂದು ರಾತ್ರಿ ಜರುಗಲಿದೆ.
  12. ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಆರಂಭಿಕ ವಹಿವಾಟಿನಲ್ಲಿ ಷೇರು ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 42 ಅಂಕ ಏರಿಕೆಯೊಂದಿಗೆ 74 ಸಾವಿರದ 263 ರಲ್ಲಿ ವಹಿವಾಟು ನಡೆಸಿದೆ. ಅಂತೆಯೇ ನಿಫ್ಟಿ ಕೂಡ 20 ಅಂಕ ಏರಿಕೆಯ ನಂತರ 22 ಸಾವಿರದ 618 ರಲ್ಲಿ ವಹಿವಾಟು ನಡೆಸಿದೆ.
  13. ಬೆಲ್ಜಿಯಂನ ಆಂಟ್‌ವರ್ಪ್ನಲ್ಲಿ ನಡೆದ ಎಫ್‌ಐಎಚ್ ಪ್ರೊ ಲೀಗ್ ಪಂದ್ಯದಲ್ಲಿ ಭಾರತೀಯ ಪುರುಷರ ಹಾಕಿ ತಂಡ ಅರ್ಜೆಂಟೀನಾ ತಂಡವನ್ನು ಶೂಟೌಟ್‌ನಲ್ಲಿ 5-4 ಗೋಲುಗಳಿಂದ ಸೋಲಿಸಿತು. ಶೂಟೌಟ್‌ನಲ್ಲಿ, ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಸುಖಜೀತ್ ಸಿಂಗ್ ತಲಾ ಎರಡು ಗೋಲು ಗಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending