ಕ್ರೀಡೆ
ಏಷ್ಯನ್ ಗೇಮ್ಸ್ : ಬೋಪಣ್ಣ ಜೋಡಿ ಫೈನಲ್ ಗೆ

ಸುದ್ದಿದಿನ, ಜಕಾರ್ತ: ಭಾರತದ ತಾರಾ ಟೆನಿಸ್ ಆಟಗಾರರಾದ ರೋಹನ್ ಬೋಪಣ್ಣ ಮತ್ತು ದಿವಿಜ್ ಶರಣ್ ಜೋಡಿ, ಏಷ್ಯನ್ ಗೇಮ್ಸ್ ಪುರುಷರ ಡಬಲ್ಸ್ ಟೆನಿಸ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಗುರುವಾರ ನಡೆದ ಪುರುಷರ ಡಬಲ್ಸ್ ವಿಭಾಗದ ಸೆಮಿಫೈನಲ್ ನಲ್ಲಿ ಬೋಪಣ್ಣ ಮತ್ತು ದಿವಿಜ್ ಜೋಡಿ 4-6, 6-3, 10-8 ಸೆಟ್ಗಳಲ್ಲಿ ಜಪಾನ್ನ ಕೈಟೋ ಉಸುಗೀ ಮತ್ತು ಶೊ ಶಿಮಬುಕುರೊ ಜೋಡಿ ವಿರುದ್ಧ ಗೆಲುವು ಸಾಧಿಸಿತು.
ಪಂದ್ಯದ ಆರಂಭದಲ್ಲಿ ಉತ್ತಮ ಆಟವಾಡಿದ ಬೋಪಣ್ಣ ಜೋಡಿಗೆ, ಜಪಾನ್ ಆಟಗಾರರು ಮೊದಲ ಸೆಟ್ ನಲ್ಲಿ ಶಾಕ್ ನೀಡಿದರು. ಆದರೆ 2 ನೇ ಸೆಟ್ ನಲ್ಲಿ ಜಪಾನ್ ಆಟಗಾರರ ತಂತ್ರಕ್ಕೆ ತಿರುಗೇಟು ನೀಡುವಲ್ಲಿ ಭಾರತದ ಆಟಗಾರರು ಯಶ ಕಂಡರು.
ನಿರ್ಣಾಯಕ ಎನಿಸಿದ್ದ 3 ನೇ ಸೆಟ್ ನಲ್ಲಿ ಉಭಯ ತಂಡಗಳ ಆಟಗಾರರು ಜಿದ್ದಾ ಜಿದ್ದಿನ ಪೈಪೋಟಿ ನಡೆಸಿದರು. ಆದರೆ ಅಂತಿಮ ವಾಗಿ ಬೋಪಣ್ಣ ಜೋಡಿ 2 ಪಾಯಿಂಟ್ ಮುನ್ನಡೆ ಸಾಧಿಸಿ ಪಂದ್ಯ ಜಯಿಸಿತು.
ಸುದ್ದಿದಿನ.ಕಾಂ|ವಾಟ್ಸಾಪ್ |9986715401

ಕ್ರೀಡೆ
ಕೊರೋನಾ ಪಾಸಿಟಿವ್ : ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು

ಸುದ್ದಿದಿನ ಡೆಸ್ಕ್ : ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರು “ವೈದ್ಯಕೀಯ ಸಲಹೆಯ ಮೇರೆಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದಕ್ಕಾಗಿ ನಾನು ಆಸ್ಪತ್ರೆಗೆ ದಾಖಲಿಸಲಾಗಿದ್ದೇನೆ ಎಂದು ಶುಕ್ರವಾರ ಹೇಳಿದ್ದಾರೆ. ಅವರಿಗೆ ಕಳೆದ ವಾರ ಕೊರೋನಾ ಪಾಸಿಟಿವ್ ಬಂದಿತ್ತು.
ನಿಮ್ಮ ಶುಭಾಶಯಗಳು ಮತ್ತು ಪ್ರಾರ್ಥನೆಗಳಿಗೆ ನನ್ನ ಧನ್ಯವಾದಗಳು. ವೈದ್ಯಕೀಯ ಸಲಹೆಯಡಿಯಲ್ಲಿ ಮುನ್ನೆಚ್ಚರಿಕೆಯಾಗಿ ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವೇ ದಿನಗಳಲ್ಲಿ ಗುಣಮುಖನಾಗಿ ಮನೆಗೆ ಮರಳುವ ಭರವಸೆ ಇದೆ. ಎಲ್ಲರೂ ಕಾಳಜಿ ವಹಿಸಿ ಮತ್ತು ಸುರಕ್ಷಿತವಾಗಿರಿ. ವಿಶ್ವಕಪ್ ಗೆದ್ದ 10 ನೇ ವಾರ್ಷಿಕೋತ್ಸವದಲ್ಲಿರುವ ಎಲ್ಲಾ ಭಾರತೀಯರಿಗೆ ಮತ್ತು ನನ್ನ ತಂಡದ ಆಟಗಾರರಿಗೆ ಶುಭಾಶಯಗಳು ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ.
Thank you for your wishes and prayers. As a matter of abundant precaution under medical advice, I have been hospitalised. I hope to be back home in a few days. Take care and stay safe everyone.
Wishing all Indians & my teammates on the 10th anniversary of our World Cup 🇮🇳 win.
— Sachin Tendulkar (@sachin_rt) April 2, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ದಾವಣಗೆರೆ | ಕ್ರೀಡೆಯಿಂದ ಮಾನಸಿಕ ನೆಮ್ಮದಿ : ಮೇಯರ್ ಎಸ್.ಟಿ ವೀರೇಶ್

ಸುದ್ದಿದಿನ,ದಾವಣಗೆರೆ: ಯಾವುದಾದರೂ ಕ್ರೀಡೆಯಲ್ಲಿ ನಿಮ್ಮನ್ನು ತೊಡಗಿಸಿಕೊಂಡಾಗ ನಿಮ್ಮ ಆರೋಗ್ಯ ಸುಧಾರಿಸಿ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದು ಮಹಾನಗರಪಾಲಿಕೆಯ ಮಹಾಪೌರರಾದ ಎಸ್.ಟಿ ವೀರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ದಾವಣಗೆರೆ ಹಾಗೂ ದಾವಣಗೆರೆ ವಿಶ್ವವುದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮಾ.16 ರಂದು ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜು ದಾವಣಗೆರೆ ವಲಯ ಮತ್ತು ಅಂತರ ವಲಯದ ಬಾಲ್ ಬ್ಯಾಡ್ಮಿಂಟನ್ ಪುರುಷರ ಮತ್ತು ಮಹಿಳೆಯರ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ | ಜಾರಕಿಹೊಳಿ ಸಿಡಿ ಪ್ರಕರಣ | ನನ್ನ ಮನೆಗೆ ಭೇಟಿ ನೀಡಿ ಸಿಡಿ ಕೊಟ್ಟಿದ್ದರು : ದಿನೇಶ್ ಕಲ್ಲಹಳ್ಳಿ
ಯುವಕರು ಮೊಬೈಲ್ ಸಂಸ್ಕøತಿಗೆ ಒಳಗಾಗಿದ್ದಾರೆ. ತಮ್ಮ ಜವಬ್ದಾರಿಗಳ ಬಗ್ಗೆ ಅರಿವಿರದೆ ಸಮಯ ವ್ಯರ್ಥ ಮಾಡುತಿದ್ದಾರೆ. ಈ ಮೊಬೈಲ್ ವ್ಯಸನವನ್ನು ಮುಂದುವರೆಸದೆ ಯಾವುದಾದರೂ ಕ್ರೀಡೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿರಿ. ಕ್ರೀಡೆಯಿಂದ ನಿಮ್ಮ ಆರೋಗ್ಯ ಸುಧಾರಿಸುವುದಲ್ಲದೆ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಇದರಿಂದ ನಿಮ್ಮ ಗುರಿಯನ್ನು ತಲುಪುವುದು ಸರಳವಾಗುತ್ತದೆ. ನಾನು ಸಾಮಾನ್ಯರಲ್ಲಿ ಸಾಮಾನ್ಯ ಮನುಷ್ಯನಾಗಿದ್ದು, ನನ್ನನ್ನು ಗುರುತಿಸಿ ಈ ದೊಡ್ಡ ಹುದ್ದೆಯನ್ನು ನೀಡಿದ್ದಾರೆ. ಹಾಗಾಗಿ ಏನೇ ಮಾಡಿದರೂ ನಮ್ಮಲ್ಲಿ ಧೃಢ ಸಂಕಲ್ಪ ಇರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಟಿ.ವೀರೇಶ್ ವಹಿಸಿದ್ದರು, ರಂಗಸ್ವಾಮಿ ಸ್ವಾಗತಿಸಿದರು. ಪ್ರೊ.ಭೀಮಣ್ಣ ಸುಣಗಾರ್ ನಿರೂಪಿಸಿದರು. ಡಾ. ಮಹೇಶ್ ಪಾಟೀಲ್ ವಂದಿಸಿದರು. ವೀರೇಂದ್ರ, ಸದಾಶಿವ, ಡಾ.ವೆಂಕಟೇಶ್, ತಿಪ್ಪೇಸ್ವಾಮಿ, ಬಸವರಾಜ್ ದಮ್ಮಳ್ಳಿ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣು

ಸುದ್ದಿದಿನ ಡೆಸ್ಕ್ : ಭಾರತದ ಕುಸ್ತಿಪಟುಗಳಾದ ಗೀತಾ ಮತ್ತು ಬಬಿತಾ ಫೋಗಟ್ ಅವರ ಸೋದರ ಸಂಬಂಧಿ ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಿತಿಕಾ ಅವರು ಕುಸ್ತಿ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಸೋತಿದ್ದು, ಸೋಲಿನ ನೋವನ್ನು ತಾಳಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ | ಸೈನಾ ನೆಹ್ವಾಲ್ ಭಾರತದ ಮೂರನೇ ಉನ್ನತ ಬ್ಯಾಡ್ಮಿಂಟನ್ ಆಟಗಾರ್ತಿ
ಒಂದು ವರದಿ ಪ್ರಕಾರ ಮಾ.12 ಮತ್ತು 14ರಂದು ರಾಜಸ್ಥಾನದಲ್ಲಿ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ರಿತಿಕಾ ಭಾಗವಹಿಸಿದ್ದರು. ಇನ್ನು ಇವರ ಸಹೋದರಿಯರ ಜೀವನಾಧಾರಿತ ಚಿತ್ರ ‘ದಂಗಲ್’ ಚಿತ್ರ ಬಾಲಿವುಡ್ನಲ್ಲಿ ತೆರೆಕಂಡಿತ್ತು. ಅಮೀರ್ ಖಾನ್ ಈ ಸಿನೆಮಾದ ನಾಯಕನಟನಾಗಿ ಅಭಿನಯಿಸಿದ್ದರು.
Rest in Peace choti behen Ritika. I still can't believe what just happened with you Will miss you forever 💔💔 Om Shanti 🥺😢🙏🏼 pic.twitter.com/LiLum1kbYB
— Ritu phogat (@PhogatRitu) March 18, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ಬಹಿರಂಗ7 days ago
ಜ್ಯೋತಿಬಾ ಎಂಬ ದೀವಿಗೆ ತೋರಿದ ದಾರಿ ನಮ್ಮದಾಗಲಿ
-
ದಿನದ ಸುದ್ದಿ7 days ago
ಸಾರಿಗೆ ಮುಷ್ಕರ –ಕಾರ್ಮಿಕರ ಬದುಕು ಘನತೆಯ ಪ್ರಶ್ನೆ
-
ಬಹಿರಂಗ5 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ನಿತ್ಯ ಭವಿಷ್ಯ7 days ago
ಈ ರಾಶಿಯವರಿಗೆ ಇನ್ಮುಂದೆ ಕಹಿ ಗಿಂತ ಸಿಹಿಯೇ ಹೆಚ್ಚಾಗಲಿದೆ..! ಮಂಗಳವಾರ-ಏಪ್ರಿಲ್-13,2021
-
ಅಂತರಂಗ5 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಲೈಫ್ ಸ್ಟೈಲ್4 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ6 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021