ಕ್ರೀಡೆ
ಏಷ್ಯನ್ ಗೇಮ್ಸ್ | ಭಾರತ ಮಹಿಳಾ ಹಾಕಿ ತಂಡಕ್ಕೆ ಭರ್ಜರಿ ಜಯ

ಸುದ್ದಿದಿನ, ಜಕಾರ್ತ: ಇಲ್ಲಿ ನಡೆಯುತ್ತಿರುವ 18 ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡ 21-0 ಗೋಲುಗಳಿಂದ ಕಜಕಸ್ತಾನ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಭಾರತ ವನಿತೆಯರು ಏಷ್ಯನ್ ಗೇಮ್ಸ್ ನಲ್ಲಿ ಸತತ 2 ನೇ ಜಯ ದಾಖಲಿಸಿದ್ದಾರೆ.
ಬಿ ಗುಂಪಿನಲ್ಲಿ ಮಂಗಳವಾರ ಗೆಲೊರಾ ಬಂಗ್ ಕರ್ನೊ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತದ ಗುರ್ಜಿತ್ ಕೌರ್ 4 ಗೋಲುಗಳಿಸಿದರು. ಲಾಲ್ರೆಮ್ಸಿಯಾಮಿ, ವಂದನಾ ಕಟಾರಿಯಾ ಮತ್ತು ನವನೀತ್ ಕೌರ್ ಹ್ಯಾಟ್ರಿಕ್ ಗೋಲು ಗಳಿಸಿ ಭಾರತದ ಜಯದಲ್ಲಿ ಮಹತ್ವದ ಪಾತ್ರ ವಹಿಸಿದರು.
ಪಂದ್ಯದ ಆರಂಭದಿಂದಲೇ ಪ್ರಭಾವಿ ಆಟಕ್ಕಿಳಿದ ಭಾರತ ತಂಡ, ಕಜಕಸ್ತಾನ ವನಿತೆಯರ ಮೇಲೆ ಸವಾರಿ ಮಾಡಿತು. ಮೊದಲ ಕ್ವಾರ್ಟರ್ ನ 7 ನೇ ನಿಮಿಷದಲ್ಲಿ ಗುರ್ಜಿತ್ ಕೌರ್ ಗೋಲಿನ ಖಾತೆ ತೆರೆದರು. ಮೊದಲ ಕ್ವಾರ್ಟರ್ ಮುಕ್ತಾಯಕ್ಕೆ 5-0 ಮುನ್ನಡೆಯಲ್ಲಿ ಭಾರತ ಇತ್ತು.
2 ನೇ ಕ್ವಾರ್ಟರ್ ನಲ್ಲಿ ಆಕ್ರಮಣಕಾರಿ ಆಟಕ್ಕೆ ಮುಂದಾದ ಭಾರತದ ವನಿತೆಯರ ತಂಡ, ಬರೋಬ್ಬರಿ 4 ಗೋಲು ದಾಖಲಿಸಿತು. ಇದರ ಪರಿಣಾಮವಾಗಿ ಮೊದಲಾರ್ಧದ ಮುಕ್ತಾಯಕ್ಕೆ ಭಾರತ 9-0 ಮುನ್ನಡೆ ಪಡೆಯಿತು.
3 ಮತ್ತು 4 ನೇ ಕ್ವಾರ್ಟರ್ ನಲ್ಲಿ ಭಾರತದ ಆಟಗಾರ್ತಿಯರು ಪಾರಮ್ಯ ಮೆರೆದರು. ಪೂರ್ಣಾವಧಿ ಆಟದಲ್ಲಿ ಕಜಕಸ್ತಾನ ತಂಡ, ಭಾರತದ ಗೋಲ್ ಕೀಪರ್ ಭದ್ರಕೋಟೆಯನ್ನು ದಾಟುವ ದುಸ್ಸಾಹಸಕ್ಕೆ ಕೈ ಹಾಕಲಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ಕ್ರೀಡೆ
ಸಹಾಯಧನ ನೀಡಲು ಕ್ರೀಡಾಪಟುಗಳಿಂದ ಪ್ರಸ್ತಾವನೆಗಳ ಆಹ್ವಾನ

ಸುದ್ದಿದಿನ,ದಾವಣಗೆರೆ: 2020-21 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನ ನೀಡಲು ಕ್ರೀಡಾಪಟುಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಿದೆ.
ಪ್ರಸ್ತಾವನೆ ಸಲ್ಲಿಸಬಯಸುವ ಕ್ರೀಡಾಪಟುಗಳು(ವಿಕಲಚೇತನ ಕ್ರೀಡಾಪಟುಗಳೂ ಸೇರಿದಂತೆ) ಭಾರತೀಯ ನಾಗರೀಕರಾಗಿರಬೇಕು ಅಥವಾ ಕರ್ನಾಟಕದಲ್ಲಿ ಕನಿಷ್ಟ ಹತ್ತು ವರ್ಷಗಳ ಕಾಲ ಸಾಮಾನ್ಯ ನಿವಾಸಿಯಾಗಿದ್ದು ಹಿಂದಿನ 3 ಕ್ಯಾಲೆಂಡರ್ ವರ್ಷಗಳಲ್ಲಿ ನಿರಂತರವಾಗಿ ರಾಜ್ಯವನ್ನು ಪ್ರತಿನಿಧಿಸಿರುವ ಯುವ ಕ್ರೀಡಾಪಟುಗಳಾಗಿರಬೇಕು. ಅಂತರರಾಷ್ಟ್ರೀಯ, ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಅಥವಾ ರಾಜ್ಯ ಮಟ್ಟದ/ಅಂತರ ರಾಜ್ಯ/ಅಂತರ ವಿಶ್ವವಿದ್ಯಾನಿಲಯ/ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗಣನೀಯ ಸಾಧನೆ ದಾಖಲಿಸಿರಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಅರ್ಹ ಕ್ರೀಡಾಪಟುಗಳು ಫೆ.3 ರ ಒಳಗಾಗಿ ಪ್ರಸ್ತಾವನೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಈ ಕಚೇರಿಯನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಫೆ. 5 ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ : ಕೋವಿಡ್ ಮಾರ್ಗಸೂಚಿ ಅನುಸರಿಸಿ ಸ್ಪರ್ಧೆಗಳ ಆಯೋಜನೆ : ಮಹಾಂತೇಶ್ ಬೀಳಗಿ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೌಕರರ ಸಂಘದ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಫೆ. 5 ರಿಂದ ಮೂರು ದಿನಗಳ ಕಾಲ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ಬಾರಿ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆ. 5, 6 ಮತ್ತು 7 ರಂದು ಮೂರು ದಿನಗಳ ಕಾಲ ಕೋವಿಡ್ ಮಾರ್ಗಸೂಚಿ ಅನುಸರಿಸಿ, ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಗಿದೆ.
ಕ್ರೀಡಾಕೂಟ ಆಯೋಜನೆ ಸ್ಥಳಗಳಲ್ಲಿ ಕಡ್ಡಾಯವಾಗಿ ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು. ಅಧಿಕಾರಿಗಳು ಹಾಗೂ ನೌಕರರ ಸಂಘದವರು ಸರ್ಕಾರದ ಶಿಷ್ಠಾಚಾರದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳನ್ನು ಸಮಾರಂಭಕ್ಕೆ ಆಹ್ವಾನಿಸಬೇಕು.
ನೌಕರರ ಸಂಘದ ತಾಲ್ಲೂಕು ಘಟಕಗಳು ಆಯಾ ತಾಲ್ಲೂಕಿನಲ್ಲಿ ಸಭೆ ನಡೆಸಿ, ಕ್ರೀಡಾಕೂಟ ಆಯೋಜನೆ ಬಗ್ಗೆ ಮಾಹಿತಿ ದೊರೆಯುವಂತೆ ಮಾಡಿ, ಎಲ್ಲ ನೌಕರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಬೇಕು. ಕ್ರೀಡಾಕೂಟದ ಯಶಸ್ವಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಅಗತ್ಯ ಸಹಕಾರ, ನೆರವು ನೀಡಲಿದೆ. ಒಟ್ಟಾರೆ ಕ್ರೀಡಾಕೂಟದಲ್ಲಿ ನೌಕರರು ಸಂತಸ, ಸಂಭ್ರಮದಿಂದ ಪಾಲ್ಗೊಳ್ಳುವಂತಾಗಬೇಕು.
ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ವ್ಯವಸ್ಥಿತ ರೀತಿಯಲ್ಲಿ ಊಟೋಪಹಾರ, ಟೀಶರ್ಟ್ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ತಾವೂ ಸಹ ಷಟಲ್ ಬ್ಯಾಡ್ಮಿಂಟನ್ ಆಟಗಾರನಾಗಿದ್ದು, ಖುದ್ದು ಸ್ಪರ್ಧೆಯಲ್ಲಿ ಪಾಲ್ಗೊಂಡು ನೌಕರರಿಗೆ ಪ್ರೋತ್ಸಾಹಿಸುತ್ತೇನೆ ಎಂದು ಹೇಳಿದರು.
ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಮಾತನಾಡಿ, ಕ್ರೀಡಾಕೂಟ ಆಯೋಜನೆಗೆ ಸರ್ಕಾರದಿಂದ 1.5 ಲಕ್ಷ ರೂ. ಹಾಗೂ ಜಿಲ್ಲಾ ಪಂಚಾಯತ್ನಿಂದ 3 ಲಕ್ಷ ಸೇರಿದಂತೆ 4.5 ಲಕ್ಷ ರೂ. ಅನುದಾನದ ಲಭ್ಯತೆಯಾಗಲಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಬಯಸುವ ನೌಕರರು ತಮ್ಮ ಹೆಸರು ಹಾಗೂ ವಿವರದೊಂದಿಗೆ ನೊಂದಣಿ ಮಾಡಿಸಲು ಜ. 28 ಕೊನೆಯ ದಿನವಾಗಿದೆ. ನಿಗದಿತ ಅವಧಿಯೊಳಗೆ ನೊಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಕೊನೆಯ ಹಂತದಲ್ಲಿ ಸ್ಪರ್ಧೆಗಳಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶವಿಲ್ಲ ಎಂದರು.
ಈ ಬಾರಿಯ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆ ಅಂಗವಾಗಿ, ನೌಕರರ ಸಮುದಾಯ ಭವನದಲ್ಲಿ ಸ್ಪರ್ಧೆಗಳ ಆಯೋಜನೆ ಬಳಿಕ ಸಂಜೆ ವೇಳೆ ಖ್ಯಾತ ಗಾಯಕರಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಏಪ್ರಿಲ್ 21 ರ ದಿನವನ್ನು ರಾಜ್ಯ ಸರ್ಕಾರಿ ನೌಕರರ ದಿನವನ್ನಾಗಿ ಆಚರಿಸಲು ಸರ್ಕಾರ ಆದೇಶಿಸಿದ್ದು, ಅದರಂತೆ ಅತ್ಯುತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಗಣರಾಜ್ಯೋತ್ಸವ ಸಮಾರಂಭದ ಬದಲಿಗೆ ಏ. 21 ರಂದು ಜರುಗುವ ನೌಕರರ ದಿನಾಚರಣೆಯಂದು ಪ್ರದಾನ ಮಾಡುವಂತೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಮನವಿ ಮಾಡಿದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಅವರು ಮಾತನಾಡಿ, ನೌಕರರ ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆಗಳು ವಯೋಮಿತಿ ಆಧಾರದಲ್ಲಿ ಜರುಗಲಿವೆ. ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್, ಫುಟ್ಬಾಲ್, ಹಾಕಿ, ಕ್ರಿಕೆಟ್, ಬ್ಯಾಸ್ಕೇಟ್ಬಾಲ್ ಮತ್ತಿತರೆ ಕ್ರೀಡೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿ, ಕುಸ್ತಿ- ಆಂಜನೇಯ ಬಡಾವಣೆಯ ಕುಸ್ತಿ ಒಳಾಂಗಣ ಕ್ರೀಡಾಂಗಣ, ಚೆಸ್, ಕೇರಂ, ಷಟಲ್ ಬ್ಯಾಡ್ಮಿಂಟನ್- ಎಸ್ಎಸ್ ಬಡಾವಣೆಯ ನೇತಾಜಿ ಸುಭಾಷ್ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಅಲ್ಲದೆ ಸಾಂಸ್ಕøತಿಕ ಸ್ಪರ್ಧೆಗಳನ್ನು ರಿಂಗ್ ರಸ್ತೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸಿದ್ದಲಿಂಗಸ್ವಾಮಿ, ಖಜಾಂಚಿ ಕಲ್ಲೇಶ್ವರಪ್ಪ, ಸಂಘಟನಾ ಕಾರ್ಯದರ್ಶಿ ಮಂಜಮ್ಮ, ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಜಗಳೂರು- ಎನ್.ಸಿ. ಅಜ್ಜಯ್ಯ, ಹೊನ್ನಾಳಿ-ಚಂದ್ರಶೇಖರ್, ಹರಿಹರ-ರೇವಣಸಿದ್ದಪ್ಪ, ನ್ಯಾಮತಿ-ನಾಗರಾಜ್ ಹಾಗೂ ಚನ್ನಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ ಮುಂತಾದವರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡುವ ಹೊಸ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ 02 ಪರಿಶಿಷ್ಟ ಜಾತಿ ಮತ್ತು 01 ಪರಿಶಿಷ್ಟ ಪಂಗಡದ ಯುವಜನ ಸಂಘವನ್ನು ನೋಂದಾಯಿಸಲು ಸಹಾಯಧನ ಹಾಗೂ ಕ್ರೀಡಾಗಂಟನ್ನು ನೀಡಲಾಗುವುದು. ಜಿಲ್ಲೆಯ 15 ರಿಂದ 35 ವರ್ಷ ವಯೋಮಾನದೊಳಗಿನ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ಯುವಕ/ಯುವತಿಯರು ಯುವಜನ ಸಂಘವನ್ನು ರಚಿಸಿಕೊಳ್ಳಲು ಸದವಕಾಶವಿರುವದರಿಂದ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರ ಅಡಿಯಲ್ಲಿ ಯುವಜನ ಸಂಘಗಳ ನೋಂದಣಿ ಮಾಡಿಸಿ, ಜ.28 ರೊಳಗಾಗಿ ಮಾನ್ಯತೆಗಾಗಿ ಈ ಕಚೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ ವೇಳೆಯಲ್ಲಿ ಮೊ.ಸಂ: 9620796970 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಲಜ್ಜೆಗೆಟ್ಟ ರಾಜಕಾರಣಕ್ಕೆ ಕರ್ನಾಟಕವೇ ತವರು..!
-
ದಿನದ ಸುದ್ದಿ6 days ago
ರಾಷ್ಟ್ರೀಯ ತನಿಖಾ ದಳದಿಂದ ಸಮನ್ಸ್ ಪಡೆದಿದ್ದ ಖಾಲ್ಸಾ ಏಡ್ ನೊಬೆಲ್ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ..!
-
ಕ್ರೀಡೆ7 days ago
ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಕುರುಬ ಎಸ್ ಟಿ ಹೋರಾಟ | ಪಾದಯಾತ್ರೆಯಲ್ಲಿ ಕಾಗಿನೆಲೆ ಶ್ರೀ ಸರ್ಕಾರಕ್ಕೆ ಕೊಟ್ರು ಡೆಡ್ ಲೈನ್..!
-
ದಿನದ ಸುದ್ದಿ3 days ago
ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ
-
ದಿನದ ಸುದ್ದಿ7 days ago
ಡಿಎಸ್ಟಿ/ಪಿಹೆಚ್ಡಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ದಾವಣಗೆರೆ | ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆ
-
ದಿನದ ಸುದ್ದಿ1 day ago
ದಾವಣಗೆರೆ | ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ : ಅಂತಿಮ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ