Connect with us

ಕ್ರೀಡೆ

ಏಶಿಯನ್ ಗೇಮ್ಸ್ ನಲ್ಲಿ ಯಾರು ಹಿಡಿಯಲಿದ್ದಾರೆ ಭಾರತದ ತ್ರಿವರ್ಣ ಧ್ವಜ ?

Published

on

ಸುದ್ದಿದಿನ ಡೆಸ್ಕ್: ಅಂಜು ಬಾಬಿ ಜಾರ್ಜ್ ಅವರ ಬಳಿಕ ವಿಶ್ವ ಚಾಂಪಿಯನ್ ಶಿಪ್ ನ ಅಥ್ಲೆಟಿಕ್ಸ್ ನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ನೀರಜ್ ಚೋಪ್ರಾ ಹಿಡಿಯಲಿದ್ದಾರೆ.

ಈ ವರ್ಷ ನಡೆಯಲಿರುವ ಏಶಿಯನ್ ಗೇಮ್ಸ್ ನಲ್ಲಿ ಭಾರತದ ಕ್ರೀಡಾಳುಗಳ ತಂಡದ ಧ್ವಜವನ್ನು ನೀರಜ್ ಚೋಪ್ರಾ ಹಿಡಿಯಲಿದ್ದಾರೆ.
ಭಾರತದ ಸ್ಟಾರ್ ಜಾವಲಿನ್ ಎಸೆತಗಾರರಾದ ನೀರಜ್ ಈವರೆಗೆ ವಿಶ್ವದಾದ್ಯಂತ ಅನೇಕ ಪದಕಗಳನ್ನು ಗೆದ್ದಿದ್ದಾರೆ. ಅಂಜು ಬಾಬಿ ಜಾರ್ಜ್ ಅವರ ಬಳಿಕ ವಿಶ್ವ ಚಾಂಪಿಯನ್ ಶಿಪ್ ನ ಅಥ್ಲೆಟಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಎರಡನೇ ಕ್ರೀಡಾಪಟು ನೀರಜ್ ಆಗಿದ್ದಾರೆ.

Asian games india

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 hours ago

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ಯೋಜನೆ : ಜೀವಿತ ಪ್ರಮಾಣ ಪತ್ರ ಸಲ್ಲಿಕೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ಯೋಜನೆಯಡಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಪಿಂಚಣಿದಾರರು ಪಿಂಚಣಿ ಪಡೆಯುತ್ತಿದ್ದು ಇದರಲ್ಲಿ 5577 ಪಿಂಚಣಿದಾರರು ಇದುವರೆಗೆ ತಮ್ಮ ಜೀವಿತ ಪ್ರಮಾಣ...

ದಿನದ ಸುದ್ದಿ6 hours ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ ವಿದ್ಯುತ್ ಉತ್ಪಾದನೆಗೆ ಒತ್ತು; ಇಂಧನ ಸಚಿವ ಕೆ.ಜೆ.ಜಾರ್ಜ್

ಸುದ್ದಿದಿನ,ದಾವಣಗೆರೆ:ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ...

ದಿನದ ಸುದ್ದಿ7 hours ago

ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮ ಸ್ಥಾಪನೆ ಹೊರಗುತ್ತಿಗೆ ನೌಕರರಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ವಿವಿಧ ನಿಗಮ, ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು, ಕಾರ್ಮಿಕರಿಗೆ ವೇತನ ಪಾವತಿ ಮತ್ತು ಕಾನೂನಾತ್ಮಕವಾಗಿ ನೀಡಬೇಕಾದ...

ದಿನದ ಸುದ್ದಿ7 hours ago

ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1.99 ಕೋಟಿ

ಸುದ್ದಿದಿನ,ದಾವಣಗೆರೆ:ಬರುವ ಆರ್ಥಿಕ ವರ್ಷಕ್ಕೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1,99,80000 ಗಳ ಬಜೆಟ್ ನೀಡಿ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಚಮನ್‍ಸಾಬ್ ಅನುಮೋದನೆ ನೀಡಿದ್ದಾರೆ...

ದಿನದ ಸುದ್ದಿ22 hours ago

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್...

ದಿನದ ಸುದ್ದಿ2 days ago

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸುದ್ದಿದಿನಡೆಸ್ಕ್: 2024-25ನೇ ಸಾಲಿನ ರಾಜ್ಯ ಮುಂಗಡ ಪತ್ರ ಹಿನ್ನೆಲೆಯಲ್ಲಿ ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ಸಭೆ ನಡೆಸಿದರು.ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,...

ದಿನದ ಸುದ್ದಿ2 days ago

ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ; 7 ರಂದು ಬಜೆಟ್ ಮಂಡನೆಗೆ ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಮಾರ್ಚ್ 7 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ...

ದಿನದ ಸುದ್ದಿ2 days ago

ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ

ಸುದ್ದಿದಿನ,ದಾವಣಗೆರೆ: ನಮಗೆ ಇಂದು ಭಕ್ತಿ ಮತ್ತು ಜ್ಞಾನ ಎರಡೂ ಮುಖ್ಯ. ಭಕ್ತಿ ಹೆಚ್ಚಿಸುವ ದೇವಾಲಯಗಳ ಜತೆಯಲ್ಲೇ ಜ್ಞಾನ ವಿಸ್ತರಿಸುವ ವಿದ್ಯಾಲಯಗಳೂ ಹೆಚ್ಚಬೇಕು ಎಂದು ಹೊಸದುರ್ಗ ಕನಕ ಶಾಖಾ...

ದಿನದ ಸುದ್ದಿ3 days ago

ಕವಿತೆ | ನಾನೊಲಿದೆನಯ್ಯಾ

ರಮ್ಯ ಕೆ ಜಿ, ಮೂರ್ನಾಡು ಅಲೆಯುತ್ತಿದೆ ಈ ರೂಹು ನನ್ನೊಳಗಿಂದ ಚಿಗಿದು ನಿನ್ನ ತುದಿಬೆರಳಲಿ ಕುಣಿದು ಗಾಳಿತುಟಿಯ ಸೋಕಿದಾಕ್ಷಣ ಬೆವೆತು, ಮಳೆ ಹೊಯ್ಯಿಸಿ ಮಣ್ಣ ಘಮದೊಳಗೆ ಲೀನವಾಗುವಂತೆ....

ದಿನದ ಸುದ್ದಿ4 days ago

ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ

ಸುದ್ದಿದಿನ,ಬೆಂಗಳೂರು:ಫೆ 10 ರಂದು ಜನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ 21 ನಿಮಿಷಗಳಲ್ಲಿ ರೈತರ ಕುರಿತು ಕವನ ರಚಿಸುವ ಬೃಹತ್ ಕಾರ್ಯ ಕ್ರಮವನ್ನು ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ...

Trending