ರಾಜಕೀಯ
ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಕುರಿತು ನಿಮಗಿಷ್ಟು ಗೊತ್ತಿರಲೇ ಬೇಕು

ಸುದ್ದಿದಿನ ವಿಶೇಷ: ಭಾರತೀಯ ರಾಜಕೀಯ ಕ್ಷೇತ್ರದಲ್ಲಿ ಅಜಾತ ಶತ್ರು ಎಂದು ಖ್ಯಾತಿ ಪಡೆದಿದ್ದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ನಾಲ್ಕು ದಶಗಳ ಕಾಲ ಭಾರತೀಯ ಸಂಸತ್ ಸದಸ್ಯರಾಗಿದ್ದರು.
ಲೋಕಸಭೆ, ಕೆಳಮನೆ, ಮೇಲ್ಮನೆಗೆ ಹತ್ತು ಬಾರಿ ಹಾಗೂ ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದ ಅವರು ಸ್ವಚ್ಛ ರಾಜಕೀಯದ ಪ್ರತೀಕವಾಗಿದ್ದರು.
2009 ರವರೆಗೆ ಉತ್ತರ ಪ್ರದೇಶದ ಲಖನೌದ ಸಂಸತ್ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆರೋಗ್ಯದ ಕಾರಣದಿಂದಾಗಿ ಅವರು ಹಲವು ವರ್ಷಗಳಿಂದ ಸಕ್ರಿಯ ರಾಜಕೀಯದಿಂದ ನಿವೃತ್ತರಾಗಿದ್ದರು.
1968 ರಿಂದ 1972 ರವರೆಗೂ ಅವರು ನೇತೃತ್ವ ವಹಿಸಿದ್ದ ಹಿಂದಿನ ಭಾರತೀಯ ಜನ ಸಂಘದ ಸಂಸ್ಥಾಪಕ ಸದಸ್ಯರಲ್ಲಿ ವಾಜಪೇಯಿ ಒಬ್ಬರಾಗಿದ್ದರು.
ಪ್ರಧಾನಿ ಮೊರಾರ್ಜಿ ದೇಸಾಯಿಯ ಕ್ಯಾಬಿನೆಟ್ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ವಿದೇಶಾಂಗ ಸಚಿವರಾಗಿದ್ದರು. ಜನತಾ ಸರ್ಕಾರ ಕುಸಿದುಬಿದ್ದಾಗ, ವಾಜಪೇಯಿ ಜನಸಂಘವನ್ನು 1980 ರಲ್ಲಿ ಭಾರತೀಯ ಜನತಾ ಪಕ್ಷವಾಗಿ ಪುನರ್ ರಚಿಸಿದರು.
ಕಾಂಗ್ರೆಸ್ ಪಕ್ಷದ ನಂತರ ಐದು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪಕ್ಷದ ಮೊದಲ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆ ಗಳಿಸಿದರು.
ಅಟಲ್ ಬಿಹಾರಿ ವಾಜಪೇಯಿ ಅವರ 93ನೇ ವಯಸ್ಸಿನಲ್ಲಿ ಭಾರತದ ಅತ್ಯುನ್ನತ ಗೌರವ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. 2014 ರಲ್ಲಿ ರಾಷ್ಟ್ರಪತಿ ಯವಯರು ಭಾರತದ ಅತ್ಯುನ್ನತ ನಾಗರೀಕ ಗೌರವವಾದ ಭಾರತ ರತ್ನವನ್ನು ಪ್ರಧಾನ ಮಾಡಿದರು.
ವಾಜಪೇಯಿ ಅವರ ಹುಟ್ಟುಹಬ್ಬ ಡಿಸೆಂಬರ್ 25 ರಂದು ಗುಡ್ ಗವರ್ನನ್ಸ್ ಡೇ ಎಂದು ಗುರುತಿಸಲಾಗುವುದು ಎಂದು 2014 ರಲ್ಲಿ ಮೋದಿ ಸರ್ಕಾರ ಘೋಷಿಸಿತು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ

ಸುದ್ದಿದಿನ,ದಾವಣಗೆರೆ:ಇದೇ 12 ರಂದು ಮಧ್ಯಾಹ್ನ 3 ಗಂಟೆಗೆ ನಗರದ ದೊಡ್ಡಬೂದಿಹಾಳ್ ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್ನಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಕಾರ್ಮಿಕ ಸಚಿವರಾದ ಸಂತೋಷ್.ಎಸ್.ಲಾಡ್ ಉದ್ಘಾಟಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಘನುಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಧ ಶಾಮನೂರು.ಟಿ.ಬಸವರಾಜ್, ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಶಾಮನೂರು ಶಿವಶಂಕರಪ್ಪ ಚಾಲನೆ

ಸುದ್ದಿದಿನ,ದಾವಣಗೆರೆ:ದಾವಣಗೆರೆಯ ಕೆ.ಆರ್. ರಸ್ತೆಯಲ್ಲಿರುವ ಎಸ್.ಎಸ್. ಜನರಲ್ ಆಸ್ಪತ್ರೆ, ದಾವಣಗೆರೆ ದಕ್ಷಿಣದ ಜನರಿಗೆ, ವಿಶೇಷವಾಗಿ ನಗರದ ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಕೈಗೆಟುಕುವ, ಸುಲಭವಾಗಿ ಸಿಗುವ ಆರೋಗ್ಯ ಸೇವೆಯನ್ನು ಒದಗಿಸಲು ಮುಂದಾಗಿದೆ.
ಇಂದು ಸಂಜೆ ಶಾಸಕರು, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳೂ ಆದ ಡಾ|| ಶಾಮನೂರು ಶಿವಶಂಕರಪ್ಪನವರು ಚಾಲನೆ ನೀಡಿ ಮಾತನಾಡಿ ಈಗಾಗಲೇ ಹೊರರೋಗಿಗಳ ವಿಭಾಗ, ಡಯಾಲಿಸಿಸ್ ಕೇಂದ್ರ ಸೇರಿದಂತೆ ವಿವಿಧ ಆರೋಗ್ಯ ಸೇವೆಯನ್ನು ನೀಡುತ್ತಿರುವ ಈ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದಿನಿಂದ ಮಹಿಳೆಯರು ಮತ್ತು ಮಕ್ಕಳಿಗೆ ಕೈಗೆಟುಕುವ ಒಳರೋಗಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪೂರೈಸುವ ಉದ್ದೇಶದಿಂದ 50 ಹಾಸಿಗೆಗಳ ಒಳರೋಗಿ ವಿಭಾಗವನ್ನು ಆರಂಭಿಸಲಾಗುತ್ತಿದೆ ಎಂದರು.
ಸಮುದಾಯ ವೈದ್ಯಕೀಯ ವಿಭಾಗದಿಂದ ನಡೆಸುವ ಕ್ಯಾನ್ಸರ್ ಪತ್ತೆ ಪರೀಕ್ಷಾ ಕ್ಲಿನಿಕ್, ಉಚಿತ ಡಯಾಲಿಸಿಸ್ ಸೇವೆಗಳು, ರಕ್ತದಲ್ಲಿನ ಸಕ್ಕರೆ, ಹಿಮೋಗ್ಲೋಬಿನ್, ಮೂತ್ರಪಿಂಡದ ಕಾರ್ಯ ಪರೀಕ್ಷೆಗಳು ಮತ್ತು ಮೂತ್ರ ಪರೀಕ್ಷೆಗಳಂತಹ ಮೂಲಭೂತ ಪ್ರಯೋಗಾಲಯ ಪರೀಕ್ಷೆಗಳು ನಡೆಯುತ್ತಿದ್ದು, ಆಸ್ಪತ್ರೆಯಲ್ಲಿ ಇಲ್ಲಿನ ಜನರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಒಳರೋಗಿಗಳ ವಿಭಾಗವನ್ನು ಆರಂಬಿಸಿದ್ದು, ಈ ಭಾಗದ ಜನರು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಒಳರೋಗಿ ವಿಭಾಗದ ಸೇವೆಗಳನ್ನು ಬೆಂಬಲಿಸುವ ಉದ್ದೇಶದಿಂದ, ಅಲ್ಟ್ರಾಸೌಂಡ್ ಮತ್ತು ಎಕ್ಸ್-ರೇ, ಡಯೊಗ್ನೊಸ್ಟಿಕ್ ಸೇರಿದಂತೆ ಇತರೆ ಆರೋಗ್ಯ ಸೇವೆಗಳನ್ನೂ ಪರಿಚಯಿಸಿ ರಿಯಾಯಿತಿ ದರದಲ್ಲಿ ಒದಗಿಸಲಾಗುವುದು, ಯಾವುದೇ ರೋಗಿಯನ್ನು ವೆಚ್ಚದ ಕಾರಣದಿಂದಾಗಿ ವಾಪಾಸ್ ಕಳಿಸುವುದಿಲ್ಲ ಎಂದು ಭರವಸೆ ನೀಡಿದರು.
ಸಾರ್ವಜನಿಕರಿಗೆ ಹೆಚ್ಚಿನ ನೆರವು ನೀಡಲು ಎಸ್.ಎಸ್.ಕೇರ್ ಟ್ರಸ್ಟ್ ಕೂಡ ನಮ್ಮೊಂದಿಗೆ ಕೈಜೋಡಿಸಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ ಲೈಫ್ ಟ್ಟಸ್ರಿಗಳು, ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಮಾತನಾಡಿ 2019ರಿಂದ ಆರಂಭವಾದ ಎಸ್.ಎಸ್.ಕೇರ್ ಟ್ರಸ್ಟ್ ಅನೇಕ ಆರೋಗ್ಯ ಸೇವೆಗಳನ್ನು ಒದಗಿಸಲು ಡಾ|| ಶಾಮನೂರು ಶಿವಶಂಕರಪ್ಪನವರ ಪ್ರೇರಣೆಯೇ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ಬಾಪೂಜಿ ಆಡಳಿತ ಮಂಡಳಿಯ ಸದಸ್ಯರಾದ ಅಥಣಿ ವೀರಣ್ಣನವರು, ಶ್ರೀಮತಿ ಕಿರುವಾಡಿ ಗಿರಿಜಮ್ಮ, ಸಂಪನ್ನ ಮುತಾಲಿಕ್, ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಪ್ರೊ|| ಬಕ್ಕಪ್ಪ, ಎಸ್ಎಸ್ಐಎಂಎಸ್ಆರ್ಸಿ ಪ್ರಾಂಶುಪಾಲರಾದ ಡಾ. ಪ್ರಸಾದ್, ಎಸ್ಎಸ್ಐಎಂಎಸ್ಆರ್ಸಿ ವೈದ್ಯಕೀಯ ನಿರ್ದೇಶಕರಾದ ಡಾ. ಅರುಣಕುಮಾರ್ ಅಜ್ಜಪ್ಪ, ಬಾಪೂಜಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕುಮಾರ್, ಸತ್ಯನಾರಾಯಣ, ಡಾ|| ಪ್ರಶಾಂತಕುಮಾರಿ, ಡಾ|| ಶ್ರೇಷ್ಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ದಾದು ಸೇಠ್, ಚಮನ್ ಸಾಬ್, ಮುನ್ನಾ ಪೈಲ್ವಾನ್, ಮುದೇಗೌಡ್ರು ಗಿರೀಶ್, ಜಿ.ಎಸ್.ಮಂಜುನಾಥ್ (ಗಡಿಗುಡಾಳ್) ಮತ್ತಿತರರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ23 hours ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ23 hours ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ23 hours ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್