ಲೈಫ್ ಸ್ಟೈಲ್
ಕನ್ನಡಕದೊಳ್ಗಿಂದ ಕಾಣ್ತಿದೆ ಈ ಅಂದ..!
ಸೀಸನ್ ಯಾವುದೇ ಇರಲಿ, ಸನ್ ಗ್ಲಾಸ್ ಟ್ರಂಕ್ ಮಾತ್ರ ಎವರ್ಗ್ರೀನ್
ಬಿಸಿಲು, ಮಳೆ; ಚಳಿ ಖತುಮಾನ ಏನೇ ಇರಲಿ, ಸನ್ಗ್ಲಾಸ್ ಒಂದು ಸ್ಟೈಲ್ ಸ್ಟೇಟ್ ಮೆಂಟ್ ಆಗಿ ಹೋಗಿದೆ. ಸೆಲಿಬ್ರಿಟಿಗಳಂತೂ ಮೇಕಪ್ ಇಲ್ಲದೆ ಇರಬಹುದು, ಸನ್ ಗ್ಲಾಸ್ ಇಲ್ಲದೆ ಇರುವುದಿಲ್ಲ ನೋಡಿ. ಹಾಗಾದರೆ ಸೆಲಿಬ್ರಿಟಿ ಗಳ 2018ರ ಹಿಟ್ ಲಿಸ್ಟ್ ನ ಅಲಂಕರಿಸಿರುವ ಮೋಸ್ಟ್ ವಾಂಟೆಡ್ ಸನ್ಗ್ಲಾಸ್ ಗಳ ಪಟ್ಟಿ ನಿಮಗಾಗಿ ಇಲ್ಲಿದೆ..
• ಕಣ್ಣು ಕೋರೈಸುವ ಕ್ಯಾಟ್ ಐ ಕಮಾಲ್..!
2017ರ ಫ್ಯಾಷನಬಲ್ ಟ್ರೆಂಡ್ 2018 ಕ್ಕೂ ಮುಂದುವರಿದಿದೆ ಕ್ಯಾಟ್ ಐ ಕ್ರೇಜ್! ಒಮ್ಮೆ ಯಾದರೂ ಟ್ರೈ ಮಾಡಲೇಬೇಕು ಬೇಕು ಎನಿಸುವ ಈ ಕ್ಯಾಟ್ ಐ ಸನ್ಗ್ಲಾಸ್ ಗಳು ನೋಡಲು ವಿಭಿನ್ನ ,ಅತ್ಯಾಕರ್ಷಕ. ಸದ್ಯ ಸೋಷಿಯಲ್ ಮೀಡಿಯಾ ದಲ್ಲಿ ಈ ಕಲರ್ಫುಲ್ ಕ್ಯಾಟ್ ಐ ಚಷ್ಮಾ ಹೆಂಗುಳೆಯರ ಹಾಟ್ ಫೇವರಿಟ್ ಟ್ರೆಂಡ್ ಆಗಿದೆ. ಹಿಂದಿನ ವರ್ಷಕ್ಕೆ ಸ್ವಲ್ಪ ಭಿನ್ನ ವಾಗಿ ಈ ಬಾರಿಯ ಕ್ಯಾಟ್ ಐ ಚಷ್ಮಾ ತೀವ್ರ ಚೀನಾದ ಎಲೆ ಆಕಾರದಲ್ಲಿ..ವಿಶಿಷ್ಟ ವಿನ್ಯಾಸಗಳಲ್ಲಿ ಲಲಿತಾಮಣಿಯರ ಹೃದಯ ಕದ್ದಿದೆ.
• ಮುತ್ತು, ವಜ್ರ ಗಳ ಹರಳಿನ ಸ್ಟೋನ್ ಸ್ಟಡಡ್ ಸನ್ ಗ್ಲಾಸ್ ಗಳು
ಈಗ ವಿಶ್ವ ದೆಲ್ಲೆಡೆ ಎಂಬಲಿಷ್ಡ್ ಸನ್ಗ್ಲಾಸ್ ಗಳದ್ದೇ ಹವಾ. ಕಲರ್ ಕಲರ್ ಕನ್ನಡಕದ ಸುತ್ತಲ ಮುತ್ತು, ಹರಳು, ಮೆಟಾಲಿಕ್ ಡಿಸೈನರ್ ಪೀಸ್ ಗಳಿರುವ ಫಂಕೀ ಕನ್ನಡಕಗಳ ಪ್ರಾಭಲ್ಯತೆ ಫ್ಯಾಷನ್ ಲೋಕದಲ್ಲಿ ಹೆಚ್ಚಾಗಿದೆ. ಪಾಶ್ಚಾತ್ಯ ದೇಶಗಳಲ್ಲಂತೂ ಈ ರೀತಿಯ ಎಂಬಲಿಷ್ಡ್ ಸನ್ಗ್ಲಾಸ್ ಗಳ ಕ್ರೇಜ್ ಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ. ಈ ಬಾರಿಯ 2018 ರ ಸ್ಪ್ರಿಂಗ್ ಸಮ್ಮರ್ ಫ್ಯಾಷನ್ ಗೆ ಇದು ಯುವ ಪೀಳಿಗೆಯ ಫ್ಯಾಷನ್ ಸ್ಟೇಟ್ ಮೆಂಟ್ ಆಗಿಹೋಗಿದೆ.
• ಮತ್ತೆ ಬಂದಿದೆ ದೊಡ್ಡ ಗಾತ್ರದ ಕಾಲಾ ಚಷ್ಮಾ
80 ರ ದಶಕದ ಸಿನಿಮೀಯಾ ಶೈಲಿಯ ದೊಡ್ಡ ದೊಡ್ಡ ಬಳೆ ಗಾತ್ರದ ಓವರ್ ಸೈಜ್ ಸನ್ಗ್ಲಾಸ್ ಗಳು ಫ್ಯಾಷನ್ ಲೋಕದಲ್ಲಿ ಭಾರೀ ಬೇಡಿಕೆ ಯಲ್ಲಿದೆ. ಪುಟ್ಟ ಪುಟ್ಟ ಸುಂದರ ಸುಕೋಮಲ ಕಣ್ಣುಗಳ ರಕ್ಷಣೆ ಗೆ ಹೇಳಿಮಾಡಿಸಿದಂತಿದೆ ಈ ದೊಡ್ಡ ಗಾತ್ರದ ಕಾಲಾ ಚಷ್ಮಾ. ಹಾಲಿವುಡ್, ಬಾಲಿವುಡ್, ಸ್ಯಾಂಡಲ್ ವುಡ್ ನ ತಾರಾಮಣಿಯ ಹಾಟ್ ಫೇವರಿಟ್ ಇದಾಗಿದೆ.
• ವೈರಲ್ ಆಯ್ತು ಕಲರ್ಫುಲ್ ಸನ್ ಗ್ಲಾಸ್ ನ ಜಾದೂ
ಕಲರ್ ಕಲರ್ ಸನ್ ಗ್ಲಾಸ್ ಈಗಿನ ಹೊಸ ಟ್ರೆಂಡ್ ಆಗಿದೆ. ಕೆಂಪು, ಹಳದಿ, ನೇರಳೇ..ನೀಲಿ ಬಣ್ಣದ ಸನ್ಗ್ಲಾಸ್ ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಹಳೆಯ ಕಪ್ಪು ಬಣ್ಣದ ಟ್ರೆಂಡ್ ಅನ್ನು ಈ ರಂಗಬಿರಂಗೀ ಕಲರ್ಫುಲ್ ಸನ್ ಗ್ಲಾಸ್ ಗಳು ನುಂಗಿಹಾಕಿವೆ. ಕಾಲೇಜು ವಿದ್ಯಾರ್ಥಿಗಳು, ಫ್ಯಾಷನ್ ಪ್ರಿಯರು ಈ ರೀತಿಯ ಬಣ್ಣ ಬಣ್ಣದ ಕನ್ನಡಕಗಳಿಗೆ ಮಾರುಹೋಗಿದ್ದಾರೆ.
• 2018 ರ ರಾಂಪ್ ನಲ್ಲಿ ಸೈ-ಫೈ ಸನ್ಗ್ಲಾಸ್ ಗಳ ದರ್ಬಾರು
2018ರ ಸ್ಪ್ರಿಂಗ್ ಸಮ್ಮರ್ ಫ್ಯಾಷನ್ ಫೆಸ್ಟಿವಲ್ ನಲ್ಲಿ ಗಮನ ಸೆಳೆಯುತ್ತಿಯುವ ಮತ್ತೊಂದು ವಿಶಿಷ್ಟ ವಿನ್ಯಾಸಗಳಲ್ಲಿ ” ಸೈ-ಫೈ” ಕನ್ನಡ ವೂ
ಒಂದು. ಸೈಂಟಿಫಿಕ್ ಲುಕ್ ನೀಡುವ ಈ ಕಟ್ಟಡಗಳು, ಬಾಹ್ಯಕಾಶದಲ್ಲಿ ಧರಿಸುವ ಕನ್ನಡ
ಗಳ ಮಾದರಿಯಲ್ಲಿ ವಿನ್ಯಾಸ ಗೊಳಿಸಲಾಗಿದೆ. ಈ ರೀತಿಯ ವಿಚಿತ್ರ ವಿನ್ಯಾಸಗಳು ಯುವ ಪೀಳಿಗೆಗೆ ಬಹಳ ಟ್ರೆಂಡೀ ಎನಿಸುತ್ತದೆ. ಬಹಳ ದುಬಾರಿ ಆದರೂ ಸೋಷಿಯಲ್ ಮೀಡಿಯಾ ದಲ್ಲಿ ಈ ಸೈ-ಫೈ ಸನ್ಗ್ಲಾಸ್ ಗಳು ಭಾರೀ ಸದ್ದು ಮಾಡುತ್ತಿವೆ.
• ಸದ್ದು ಮಾಡುತ್ತಿವೆ ಚೌಕಾಕಾರದ ಸ್ಕ್ವೇರ್ ಸನ್ಗ್ಲಾಸ್ ಗಳು
ಹಿಂದಿನ ವರ್ಷದ ಟಾಪ್ ಟ್ರೆಂಡ್ ಎನ್ನಿಸಿಕೊಂಡ ಚೌಕಾಕಾರದ ಸನ್ಗ್ಲಾಸ್ ಗಳು ಈ ವರ್ಷ ವುಡ್ ತಮ್ಮ ಬೇಡಿಕೆ ಉಳಿಸಿಕೊಂಡಿದೆ. ಸ್ಕ್ವೇರ್ ಶೇಡ್ಸ್
ಮೋಹ ಮಾಸಿಲ್ಲ, ಈಗಲೂ ಪ್ರತಿಷ್ಠಿತ ಕಂಪನಿಗಳ ಬ್ರ್ಯಾಂಡ್ ನ ಚೌಕಾಕಾರದ ಸನ್ಗ್ಲಾಸ್ ಮಾನಿನಿಯಯ ಮುಖಾರವಿಂದವನ್ನು ಅಲಂಕರಿಸಿದೆ.
• ಜಿಯೋಮೆಟ್ರಿಕ್ ವಿನ್ಯಾಸದ ರಂಗಬಿರಂಗೀ ಕನ್ನಡಕ
ಕೇವಲ, ಗೋಲಾಕಾರ ಮತ್ತು ಚೌಕಾಕಾರದ ಸನ್ಗ್ಲಾಸ್ ಗಳು ಮಾತ್ರ ವಲ್ಲದೇ, ವಿವಿಧ ಆಕಾರದ ಫಂಕೀ ಸನ್ಗ್ಲಾಸ್ ಗಳು ಯುವ ಪೀಳಿಗೆಯ ಮನಸ್ಸು ಗೆದ್ದಿದೆ. ಹಾರ್ಟ್, ಪೆಂಟಗನ್, ರೆಕ್ಕೆ, ಹೂ, ಹೀಗೆ ಹಲವಾರು ವಿಚಿತ್ರ ವಿನ್ಯಾಸಗಳು ಸನ್ಗ್ಲಾಸ್ ರೂಪದರ್ಶಿ ತಾಳಿವೆ. ಸದಾ ಹೊಸ ಫ್ಯಾಷನ್ನ ಅನ್ವೇಷಣೆಯಲ್ಲಿ ಇರುವ ಸ್ಟೈಲ್ ಪ್ರಿಯರು ಈ ಸನ್ಗ್ಲಾಸ್ ಗಳಿಗೆ ಮಾರುಹೋಗಿದ್ದಾರೆ.
• ಮಲ್ಟಿಕಲರ್ ಪ್ರೇಮ್ ಸನ್ಗ್ಲಾಸ್ ಗಳ ಮಜಾ ನೇ ಬೇರೆ
ಬ್ಲೂ ಫ್ರೇಮ್, ವೈಟ್ ಫ್ರೇಮ್ , ಮೆಟಾಲಿಕ್, ಹೀಗೇ ಹಲವಾರು ರೀತಿಯ ಫ್ರೇಮ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಒಂದು ವಿಶಿಷ್ಟ ವಿನ್ಯಾಸದಲ್ಲಿ ಮಲ್ಟಿಕಲರ್ ಫ್ರೇಮ್ ಸನ್ಗ್ಲಾಸ್ ಗಳು ತುಂಬಾ ನೇ ಟ್ರೆಂಡೀ ಹಾಗೂ ಕಲರ್ಫುಲ್ ಆಗಿದ್ದು ಸೆಲಿಬ್ರಿಟಿಗಳ ಹಿಟ್ ಲಿಸ್ಟ್ ನ ಅಲಂಕರಿಸಿವೆ.
ಲಾಸ್ಟ್ ಟಿಪ್
• ನಿಮ್ಮ ಮುಖದ ಆಕಾರಕ್ಕೆ ಹೊಂದುವಂತಹ ಸನ್ಗ್ಲಾಸ್ ನನ್ನ ಆಯ್ಕೆ ಮಾಡಿಕೊಳ್ಳಿ.
• ನೆನಪಿರಲಿ, ನೀವು ಧರಿಸುವ ಸನ್ಗ್ಲಾಸ್ ನಿಮ್ಮ ಸ್ಟೈಲ್ ಸ್ಟೇಟ್ ಮೆಂಟ್ ಆಗಿರುತ್ತದೆ.
• ನಿಮ್ಮ ಆಯ್ಕೆ ಯಾವುದೇ ಬಣ್ಣದ, ಆಕಾರದ ಸನ್ಗ್ಲಾಸ್ ಆಗಿದ್ದರೂ ಅದು ನಿಮ್ಮ ಫ್ಯಾಷನ್ ಹಾಗೂ ಸ್ಟೈಲ್ ಅನ್ನು ಎತ್ತಿ ಹಿಡಿಯುವಂತಿರಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗುವುದು.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.








