Connect with us

Dr. K A Obalesh

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

Stories By Dr. K A Obalesh

More Posts