ದಿನದ ಸುದ್ದಿ
ಇ-ಕಾಮರ್ಸ್ ಡ್ರೋಣ್ ಬಳಕೆಗೆ ಅನುಮತಿ; ಇಂಗ್ಲಿಷ್ ಗೊತ್ತಿದ್ರೆ ಮಾತ್ರ ಪರ್ಮಿಷನ್
ಸುದ್ದಿದಿನ ಡೆಸ್ಕ್: ಆನ್ಲೈನ್ನಲ್ಲಿ ಏನಾದ್ರು ಆರ್ಡರ್ ಮಾಡಿದರೆ ಇದನ್ನು ನಿಮಗೆ ತಲುಪಿಸಲು ಇನ್ಮುಂದೆ ನೀವು ಮನೆ ಬಾಗಿಲಿನಲ್ಲಿ ಡೆಲಿವರಿ ಬಾಯ್ ಬದಲು
ಡ್ರೋಣ್.ಗಾಗಿ ಕಾಯಬೇಕಾಗುತ್ತದೆ. ನಾಗರಿಕ ವಿಮಾನಯಾನ ಇಲಾಖೆಯು ಡ್ರೋಣ್ ನೀತಿ ಜಾರಿಗೆ ತಂದಿದ್ದು, ಕಮರ್ಷಿಯಲ್ ಬಳಕೆಗಾಗಿ ಅವಕಾಶ ನೀಡಲಾಗುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳುವ ಇ- ಕಾಮರ್ಸ್ ಕಂಪನಿಗಳು ಡ್ರೋಣ್ ಬಳಸಿಕೊಂಡು ತಮ್ಮ ಉತ್ಪನ್ನ ಮಾರಾಟ ಮಾಡುವ ಸಾಧಗಯತೆ ಹೆಚ್ಚಾಗಿದೆ. ಇದರೊಂದಿಗೆ ಶೀಘ್ರ ಗ್ರಾಹಕರ ತಲುಪಿ ತಮ್ಮ ವಹಿವಾಟು ಹೆಚ್ಚಿಸಿಕೊಳ್ಳಲಿವೆ.
ಕೇಂದ್ರ ಸರ್ಕಾರ ವಿಮಾನಯಾನ ಇಲಾಖೆ ಇ- ಕಾಮರ್ಸ್ ಕಂಪನಿಗಳು ಡ್ರೋಣ್ ಬಳಕೆಯ ಯೋಜನೆಗೆ ಸಹಿ ಹಾಕಿದ್ದು, ಡಿಸೆಂಬರ್ ನಂತರ ಕಂಪನಿಗಳು ಇದರ ಪಡರದುಕೊಳ್ಳಲಿವೆ.
ಇಂಗ್ಲಿಷ್ ಗೊತ್ತಿದ್ರೆ ಮಾತ್ರ ಪರ್ಮಿಷನ್
ಸರ್ಕಾರ ರಚಿಸಿರುವ ಡ್ರೋಣ್ ನೀತಿಯಲ್ಲಿ ಡ್ರೋಣ್ ಗಳನ್ನು ಐದು ಕ್ಯಾಟಗರಿಗಳಾಗಿ ವಿಂಗಡಿಸಿವೆ. ನ್ಯಾನೋ ಕ್ಯಾಟಗರಿಯಲ್ಲಿ 250ಗ್ರಾಂರಿಂದ 150 ಕೆಜಿ ತೂಕದವರೆಗಿನ ಡ್ರೋಣ್, ಮಕ್ಕಳು ಆಟಿಕೆಯಾಗಿ ಬಳಸುತ್ತಿರುವ 250ರಿಂದ 2 ಕೆಜಿ ತೂಕದ ಮೈಕ್ರೋ ಡ್ರೋಣ್ ಗಳನ್ನು ಬಳಸಿಕೊಳ್ಳಲು ಅವಕಾಶ ನೀಡಿದೆ. ಎಲ್ಲ ಡ್ರೋಣ್ ಬಳಕೆದಾರರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಯುನಿಕ್ ಐಡೆಂಟಿಫಿಕೇಷನ್ ನಂಬರ್ (UIN) ನೀಡಲಿದೆ. ಡ್ರೋಣ್ ಬಳಕೆದಾರರಿಗೆ 18 ವರ್ಷ ವಯಸ್ಸಾಗಿರಬೇಕು. ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದು, ಇಂಗ್ಲಿಷ್ ಜ್ಞಾನ ಹೊಂದಿರಬೇಕು.
ನ್ಯಾನೋ, ಮೈಕ್ರೋ ವಿಧದಲ್ಲಿ ಐದು ಕ್ಯಾಟಗರಿ
ರಿಮೋಟ್ ಪೈಲೆಟೆಡ್ ಏರ್ಕ್ರಾಫ್ಟ್ ಸಿಸ್ಟಮ್ (RPAS) ಚಾಲಿತ ನ್ಯಾನೋ ಡ್ರೋಣ್.ಗಳಿಗೆ ಅನ್ ಮ್ಯಾನ್ಡ್ ಏರ್ಕ್ರಾಫ್ಟ್ ಆಪರೇಟರ್ ಪರ್ಮಿಟ್ (UAOP) ಪರವಾನಿಗೆ ಅಗತ್ಯವಿಲ್ಲ. 50 ಅಡಿ ಎತ್ತರದಲ್ಲಿ ಹಾರಾಟ ಮಾಡುವಂಥವು. 200 ಅಡಿ ಎತ್ತರದಲ್ಲಿ ಕಣ್ಣಿಗೆ ಕಾಣುವ ಅಂತರದಲ್ಲಿ ಹಗಲು ವೇಳೆ ಹಾರಾಟ ಮಾಡುವ ಡ್ರೋಣ್ ಗಳಿಗೆ ಸೆಕ್ಯುರಿಟಿ ಮತ್ತು ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿಯ ಪರವಾನಗಿ ಅಗತ್ಯವಿದೆ. 400ಅಡಿ ಎತ್ತರದವರೆಗೆ ಮಾತ್ರ ಹಾರಾಟ ಮಾಡಬಹುದಾಗಿದೆ.
ನೋ ಫ್ಲೈಯಿಂಗ್ ಜೋನ್ ಹಾರಾಡುವಂತಿಲ್ಲ
ದೇಶದಲ್ಲಿ ಕೆಲವೊಂದು ಪ್ರದೇಶಗಳನ್ನು ‘ನೋ ಫ್ಲೈಯಿಂಗ್ ಜೋನ್’ ಎಂದು ಗುರುತಿಸಿರುವ ಕಡೆ ಹಾರಾಟ ಮಾಡುವಂತಿಲ್ಲ. ಅವುಗಳೆಂದರೆ, ಏರ್ಪೋರ್ಟ್, ಅಂತಾರಾಷ್ಟ್ರೀಯ ಗಡಿಭಾಗ, ದೆಹಲಿಯ ವಿಜಯ್ ಚೌಕ್, ಎಲ್ಲಾ ರಾಜ್ಯಗಳ ರಾಜ್ಯ ಕಾರ್ಯದರ್ಶಿಗಳ ಕಚೇರಿ, ಸ್ಟ್ರಟೆಜಿಕ್ ಲೋಕೇಷನ್, ಮಿಲಿಟರಿ ಸ್ಥಳಗಳಲ್ಲಿ ಹಾರಾಟ ಮಾಡುವಂತಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ21 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ21 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

