Connect with us

ದಿನದ ಸುದ್ದಿ

ರಾಸಾಯನಿಕ ದುರಂತ ತಡೆಗೆ ಅರಿವು ಅಗತ್ಯ : ಉಪವಿಭಾಗಾಧಿಕಾರಿ ದುರ್ಗಶ್ರೀ

Published

on

ಸುದ್ದಿದಿನ,ದಾವಣಗೆರೆ : ರಾಸಾಯನಿಕ ದುರಂತಗಳು ಸಂಭವಿಸಿದಾಗ ಇದರ ತಡೆಯ ಬಗ್ಗೆ ಅರಿವಿದ್ದಲ್ಲಿ ಹೆಚ್ಚಿನ ಅನಾಹುತ ತಪ್ಪಿಸಬಹುದಾಗಿದೆ ಎಂದು ದಾವಣಗೆರೆ        (Davanagere) ಉಪವಿಭಾಗಾಧಿಕಾರಿ ದುರ್ಗಶ್ರೀ (Durgashree) ತಿಳಿಸಿದರು.

ಅವರು ಜುಲೈ 29 ರಂದು ಜಗಳೂರು ತಾಲ್ಲೂಕಿನ (Jagaluru ) ಸಂತೇಮುದ್ದಾಪುರದ ಬಳಿಯ ಗೇಲ್ ಕಂಪನಿಯ ಅವರಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಏರ್ಪಡಿಸಲಾದ ರಾಸಾಯನಿಕ ವಿಪತ್ತು ನಿರ್ವಹಣೆ ಕುರಿತ ಅಣಕು ಪ್ರದರ್ಶನದಲ್ಲಿ ವೀಕ್ಷಕರಾಗಿ ಭಾಗವಹಿಸಿ ಮಾತನಾಡಿದರು.

ರಾಸಾಯನಿಕ ದುರಂತದಿಂದ ಸಾಕಷ್ಟು ನಷ್ಟ ಉಂಟಾಗುತ್ತದೆ. ಇಂತಹ ವಿಪತ್ತು ಸಂಭವಿಸಿದಾಗ ಯಾವ ರೀತಿ ಇದನ್ನು ತಡೆಗಟ್ಟಬಹುದೆಂದು ಎಲ್ಲರೂ ತಿಳಿದಿರಬೇಕಾಗುತ್ತದೆ. ಈ ನಿಟ್ಟಿನಲ್ಲಿ ಗೇಲ್ ಇಂಡಿಯಾ ಕಂಪನಿಯವರು ಅನೇಕ ಅಣುಕು ಪ್ರದರ್ಶನದ ಮೂಲಕ ತಿಳಿಸಿದ್ದಾರೆ. ಅನಿಲ ದುರಂತದ ವೇಳೆ ಬ್ರಾಸ್ ಸಲಕರಣೆಯನ್ನು ಬಳಸಬೇಕು. ಲೋಹದ ಸಲಕರಣೆಗಳನ್ನು ಬಳಸಿದಲ್ಲಿ ಸ್ಪಾರ್ಕ್ ಬರುತ್ತದೆ, ಇಂತಹ ಅನೇಕ ವಿಷಯಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದರು.

ಈ ವೇಳೆ ಗೇಲ್ ಕಂಪನಿಯ ಜನರಲ್ ಮ್ಯಾನೇಜರ್ ಎನ್.ಎನ್.ತೋಪನ್ನವರ್ ಮಾತನಾಡಿ, ಗೇಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಕೇಂದ್ರ ಸರ್ಕಾರದ ಕಂಪನಿಯಾಗಿದ್ದು, ನೈಸರ್ಗಿಕ ಕೊಳವೆ ಮಾರ್ಗವನ್ನು ಅಳವಡಿಸಿದೆ. ಎಲ್ಲರೂ ಮುನ್ನೆಚ್ಚರಿಕೆಯಿಂದ ಅನಿಲ ಕೊಳವೆ ಮಾರ್ಗವನ್ನು ರಕ್ಷಿಸುವುದು ಅತ್ಯಂತ ಮಹತ್ವವಾಗಿದೆ. ಇದು ವಿಷಾನಿಲವಲ್ಲ, ಅತ್ಯಧಿಕ ಉರಿಯುವ ಅನಿಲವಾಗಿದೆ. ಸೋರಿಕೆ ಸಮಯದಲ್ಲಿ ಬೆಂಕಿಯನ್ನು ಆಕರ್ಷಿಸುತ್ತದೆ. ಅದಕ್ಕಾಗಿ ಕೊಳವೆ ಮಾರ್ಗದಲ್ಲಿ ಯಾವುದೇ ತರಹದ ನಿರ್ಮಾಣ ಕಾಮಗಾರಿ, ಗಿಡೆನೆಡುವ ಕೆಲಸ ಮಾಡಬಾರದು. ಈ ಮಾರ್ಗವನ್ನು ತಿಳಿದು, ತಿಳಿಯದೇ ಹಾಳು ಮಾಡುವುದು ಸಹ ಅಪರಾಧವಾಗುತ್ತದೆ. ಈ ಮಾರ್ಗವು 30 ಮೀಟರ್ ವ್ಯಾಪ್ತಿ ಹೊಂದಿದ್ದು, ಕಂಪನಿಗೆ ತಿಳಿಯದೇ ಯಾವುದೇ ಕಾಮಗಾರಿಯನ್ನು ಕೈಗೊಳ್ಳುವಂತಿಲ್ಲ ಎಂದರು.

ಇದನ್ನೂ ಓದಿ | ಭಾರತದ ಯುವಕರತ್ತ ಇಡೀ ವಿಶ್ವದ ಚಿತ್ತ : ಪ್ರಧಾನಮಂತ್ರಿ ನರೇಂದ್ರ ಮೋದಿ

ಅನಿಲ ಸೋರಿಕೆ ಸಮಯದಲ್ಲಿ ಬೀಡಿ, ಸಿಗರೇಟ್, ಸ್ಟವ್ ಒಲೆ ಇತ್ಯಾದಿಗಳನ್ನು ಸೋರುವಿಕೆ ಸ್ಥಳದಿಂದ ದೂರವಿರಬೇಕು. ಗಾಳಿಯ ವಿರುದ್ಧ ದಿಕ್ಕನತ್ತ ಓಡಬೇಕು. ಹತ್ತಿರದ ನಿವಾಸಿಗಳಿಗೆ ತಿಳಿಸುತ್ತಾ ಅನಿಲ ಪ್ರಭಾವಿತ ವ್ಯಕ್ತಿಯನ್ನು ಶುದ್ಧ ಗಾಳಿಯಿರುವ ಕಡೆ ಕರೆದುಕೊಂಡು ಹೋಗಿ ಕಣ್ಣುಗಳನ್ನು ನೀರಿನಿಂದ ತೊಳೆಯಬೇಕು ಹಾಗೂ ವೈದ್ಯರ ಸಲಹೆ ಪಡೆಯಬೇಕು. ತುರ್ತು ಸಂದರ್ಭದಲ್ಲಿ 1800118430, 15101 ಗೆ ಕರೆ ಮಾಡಬೇಕೆಂದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲಿಮನಿ ತಿಮ್ಮಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಾರಾಜ್, ಪರಿಸರ ಅಧಿಕಾರಿ ಎಂ.ಎಸ್.ಮಹೇಶ್ವರಪ್ಪ, ಹೆಚ್ಚುವರಿ ರಕ್ಷಣಾಧಿಕಾರಿ ಬಸರಗಿ, ಜಗಳೂರು ತಹಶೀಲ್ದಾರ್ ಸಂತೋಷ್, ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಾಲೋಚಕ ಜಯಣ್ಣ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending