ಸಿನಿ ಸುದ್ದಿ
ಪಂಚಿಂಗ್ ಕಾಮಿಡಿಯ ಅಯೋಗ್ಯ ಮನರಂಜನೆಗೆ ಯೋಗ್ಯ
ಸುದ್ದಿದಿನ ಡೆಸ್ಕ್| ಮಂಡ್ಯದ ಪುಟ್ಟ ಗ್ರಾಮವೊಂದರ ಪಂಚಾಯಿತಿ ಸದಸ್ಯ ಸಿದ್ದ ಒಳ್ಳೆಯ ಮಾತುಗಾರ, ಬಾಲ್ಯದಲ್ಲಿ ತನ್ನ ಕುಟುಂಬಕ್ಕೆ ಆಗಿರುವ ಅವಮಾನದಿಂದ ಕುದ್ದುಹೋದ ಆತ, ಪಂಚಾಯ್ತಿ ಸದಸ್ಯನಾಗಬೇಕೆಂಬ ಕನಸು ಕಾಣುತ್ತಾನೆ. ಇದನ್ನು ಬೆನ್ನು ಹತ್ತುವ ಹುಡುಗನ ಸೋಲು, ಗೆಲುವಿನ ಕತೆಯೇ ಅಯೋಗ್ಯ ಸಿನಿಮಾದ ಜೀವಾಳ.
ಬಡ ಕುಟುಂಬದ ಹುಡುಗ ಸಿದ್ದೇಗೌಡ ಪಂಚಾಯ್ತಿ ಅಧ್ಯಕ್ಷ ಬಚ್ಚೇಗೌಡ (ರವಿಶಂಕರ್) ವಿರುದ್ಧ ತೊಡೆ ತಟ್ಟಿ ನಿಲ್ಲುತ್ತಾನೆ. ಯಾವುದೇ ಸೌಲಭ್ಯ ಇಲ್ಲದ ಊರಲ್ಲಿ ಪಂಚಾಯ್ತಿ ಸದಸ್ಯನಾಗಿ ಆಯ್ಕೆಯಾಗಿ ಬಡವರಿಗೆ ನೆರವಾಗಬೇಕೆಂಬುದು ಸಿದ್ದನ ಮಹದಾಸೆ.
ರಾಜಕೀಯಕ್ಕಿಳಿಯಬೇಕೆಂಬ ಪ್ರಯತ್ನದ ನಡುವೆಯೇ ಕುಟುಂಬದವರು ಮದುವೆಯಾಗುವಂತೆ ಒತ್ತಾಯ ಮಾಡುತ್ತಾರೆ. ತಾಯಿಯ ಮಾತಿಗೆ ಕಟ್ಟುಬಿದ್ದು ಮದುವೆಗೆ ಒಪ್ಪಿದರೂ ಯಾವುದೇ ದುಡಿಮೆ ಇಲ್ಲದ ಸಿದ್ದನಿಗೆ ಹೆಣ್ಣು ಕೊಡೋರು ಮುಂದೆ ಬರಲ್ಲ.
ಹೀಗಿರುವಾಗ ಸಿದ್ದನ ಕುಟುಂಬ ಬ್ರೋಕರ್ವೊಬ್ಬನ ನೆರವಿನಿಂದ ಹೆಣ್ಣು ಹುಡುಕಲು ಪ್ರಯತ್ನ ಪಡುತ್ತಾರೆ. ಆದರೆ, ಸಿದ್ಧ ಬ್ರೋಕರ್ನ ಮಗಳು ನಂದಿನಿ (ರಚಿತಾ ರಾಂ) ಮೇಲೆ ಪ್ರೇಮಾಂಕುರವಾಗುತ್ತದೆ. ತನ್ನ ಮಗಳನ್ನೇ ಪ್ರೀತಿ ಮಾಡುತ್ತಿರುವ ವಿಷಯ ತಿಳಿದು ನಾಯಕಿಯ ತಂದೆ ತಿರುಗಿಬೀಳುತ್ತಾನೆ. ಇದರ ಮಧ್ಯೆಯೇ ಸಿದ್ದನ ರಾಜಕೀಯ ಜೀವನ ಆರಂಭವಾಗುತ್ತದೆ. ಬಚ್ಚೇಗೌಡನ ವಿರುದ್ಧ ಸ್ಪರ್ಧಿಸುವ ಸಿದ್ದೇಗೌಡ ಚುನಾವಣೆಯಲ್ಲಿ ಗೆಲ್ಲುತ್ತಾನೋ ಸೋಲುತ್ತಾನೋ ಎಂಬುದೇ ಕ್ಲೈಮ್ಯಾಕ್ಸ್.
ಚಿತ್ರದ ಮೊದಲರ್ಧದಲ್ಲಿ ಕಾಮಿಡಿ ಪಂಚ್ಗಳು, ಬಿಗಿಯಾದ ಸ್ಕ್ರಿಪ್ಟ್ ಪ್ರೇಕ್ಷಕನನ್ನು ಹಿಡಿದಿಡುತ್ತದೆ. ನಿರೂಪಣೆ ಇನ್ನಷ್ಟು ಮೋಹಕಗೊಳಿಸಬಹುದಿತ್ತು. ಚಿತ್ರದಲ್ಲಿರುವ ಕಾಮಿಡಿ ದೃಶ್ಯಗಳೇ ಜೀವಾಳ. ಒಂದು ಪಕ್ಕಾ ಕಮರ್ಷಿಯಲ್ ಸಿನಿಮಾ ಸಾದರಪಡಿಸುವಲ್ಲಿ ನಿದೇರ್ಶಕ ಮಹೇಶ್ ಕುಮಾರ್ ಅವರು ಯಶಸ್ವಿಯಾಗಿದ್ದಾರೆ. ಮಾಸ್ತಿ ಅವರ ಬರವಣಿಗೆ ಗಮನ ಸೆಳೆಯುತ್ತದೆ. ಒಂದು ಮಾಸ್ ಎಂಟರ್ಟೇನ್ಮೆಂಟ್ ಸಿನಿಮಾವಾಗಿ ಅಯೋಗ್ಯ ಒಂದು ಯೋಗ್ಯ ಸ್ಥಾನದಲ್ಲಿದೆ. ಈ ವಿಂಕೆಂಡ್ಗೆ ಹೇಳಿಮಾಡಿಸಿದ ಸಿನಿಮಾ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಸಾಗರ | ಇಂದು ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಪುಸ್ತಕಗಳ ಬಿಡುಗಡೆ
ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ.
ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಎಂ.ವಿ ಮಾಡಲಿದ್ದು, ಅಧ್ಯಕ್ಷತೆಯನ್ನುನಿವೃತ್ತ ಪ್ರಾಂಶುಪಾಲರಾದ ಅ.ರಾ.ಲಂಬೋದರ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ‘ಆರು ಲಘು ನಾಟಕಗಳು’ ಕುರಿತು ನಿವೃತ್ತ ಪ್ರಾಂಶುಪಾಲರು ಡಾ. ಜಯಪ್ರಕಾಶ್ ಮಾವಿನಕುಳಿ ಹಾಗೂ ‘ಗುಚ್ಛ’ ಕುರಿತು ಸಹಕಾರ ಸಂಘಗಳ ನಿವೃತ್ತ ಉಪ ನಿಬಂಧಕರು ಜಯಪ್ರಕಾಶ್ ತಲವಾಟ ಅವರು ಮಾತನಾಡಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತಗಾರ ಆಗಿರುವ ಅವರು ಸರೋದ್ ವಾದಕರೂ ಆಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಡಿಸಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.
ಮೈಸೂರಿನ ದರ್ಶನ್ ಒಡೆತನದ ಫಾರ್ಮ್ ಹೌಸ್ನಲ್ಲಿ ೧೦ ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರಿನ ಸುಮನಹಳ್ಳಿ ಬಳಿಯ ವೃಷಭಾವತಿ ನಾಲೆಯಲ್ಲಿ ಅಪಾರ್ಟ್ಮೆಂಟ್ ಕಟ್ಟಡದ ಮುಂಭಾಗದಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ದರ್ಶನ್ ಚಿತ್ರದುರ್ಗ ಅಭಿಮಾನಿಗಳ ಸಂಘದ ಅಧ್ಯಕ್ಷರಿಗೆ ಕರೆ ಮಾಡಿ ರೇಣುಕಾಸ್ವಾಮಿ ಎಲ್ಲಿದ್ದಾರೆ ಎಂಬುದನ್ನು ಪತ್ತೆಮಾಡಿ ಬೆಂಗಳೂರಿಗೆ ಕರೆತರುವಂತೆ ಹೇಳಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
JOB NEWS | ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
-
ಅಂತರಂಗ7 days ago
ನಾಳೆ ಡಾ.ಅಂಬೇಡ್ಕರ್ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿ ಕಾರ್ಯಕ್ರಮ
-
ದಿನದ ಸುದ್ದಿ6 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ7 days ago
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ
-
ದಿನದ ಸುದ್ದಿ6 days ago
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
-
ದಿನದ ಸುದ್ದಿ6 days ago
ಭಾರೀ ಮಳೆ ; ಡ್ಯಾಂಗಳಿಗೆ ಹರಿದು ಬಂದ ನೀರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ
-
ಅಂತರಂಗ5 days ago
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ