Connect with us

ದಿನದ ಸುದ್ದಿ

ಬಹುಜನರು ನಂಬಿರುವ ‘ಕತ್ತೆ ಕಥೆ’..!

Published

on

  • ಪರಶುರಾಮ್. ಎ

ಕತ್ತೆ ಕಥೆ ಇದೇನು ಪಂಚತಂತ್ರ ಕತೆಯೊ ಅಥವಾ ನೀತಿಕತೆಯೋ ಅಲ್ಲ. ನಿಮ್ಮಗಳ ನಿಜ ಜೀವನದಲ್ಲಿ ನೀವುಗಳೇ ನಂಬಿರುವ ಕಥೆಯಿದು. ನಿಮ್ಮ ಇಡೀ ಜೀವನದಲ್ಲಿ ಹಾಸು ಹೊಕ್ಕಾಗಿರುವ ದಿನನಿತ್ಯ ಕೈಮುಗಿದು ಮೂರ್ಖರಾಗಿರುವ ಮೂರ್ಖರನ್ನಾಗಿಸಿರುವ ಕತೆ. ಬಹುಶಃ ಈ ಕಥೆಯಲ್ಲಿ ನೀವುಗಳೇ ನಿಮ್ಮ ನಂಬಕೆಗಳೇ ಪ್ರಧಾನ ಆಗಿವೆ.

ನಂಬಿಕೆ, ಭಕ್ತಿ, ಮೌಲ್ಯಗಳನ್ನು ಬಂಡವಾಳವಾಗಿಸಿಕೊಂಡಿರುವವರೇ ಈ ಕಥೆಯ ಸೃಷ್ಟಿಕರ್ತರು. ಯಾವುದೋ ಒಂದು ಕಾಲದಲ್ಲಿ ಹುಟ್ಟಿರಬಹುದಾದ ಈ ಕಥೆ ಇನ್ನೂ ನಿಮ್ಮನ್ನು ಬಂಧನದಲ್ಲಿ ಇಟ್ಟಿದೆ ಎಂದರೆ ಅದಿನ್ನೆಂತಹ ಕ್ರೂರ ಲಾಭಕೋರ ವ್ಯವಸ್ಥೆ ಇರಬಹುದು ನೀವೇ ಊಹಿಸಿ ಯೋಚಿಸಿ! ಈ ಕಥೆ ಬಗ್ಗೆ ಈಗಾಗಲೇ ಕನ್ನಡದ ಲೇಖಕರು ಭಾಷಣಕಾರರು ಬಹುಜನರಿಗೆ ತಿಳಿಸಿ ಎಚ್ಚರಿಸುತಿದ್ದರು ಬಹುಜನರು ಇನ್ನೂ ಅದೇ ಕುತಂತ್ರ ಷಡ್ಯಂತ್ರಗಳಿಗೆ ಬಲಿಯಾಗಿರುವುದು ಸಮಾಜದ ಅಧೋಗತಿಗೆ ಒಂದು ಕಾರಣವು ಹೌದು. ತಮ್ಮನ್ನು ತಾವು ಶೋಷಿಸಿಕೊಳ್ಳುವುದು ಮತಿಹೀನ ಕೃತ್ಯ ಅಜ್ಞಾನ ಮೌಢ್ಯ ಪ್ರದರ್ಶನವಾಗಿದೆ.

ಡಾ.ಸಿದ್ದಲಿಂಗಯ್ಯ ನವರ “ಕತ್ತೆ ಮತ್ತು ಧರ್ಮ” ಕವನದಲ್ಲಿದೆ ನಾನು ಹೇಳಲು ಹೊರಟ ಸಾರಾಂಶ. (ಬಹುಜನರು ಕತ್ತೆ ಮತ್ತು ಧರ್ಮ ಕವನ ಓದಿ) ನಾನು ಇಲ್ಲಿ ಅದರ ಸಣ್ಣ ಸಾರಾಂಶ ಮಾತ್ರ ಉದಾಹರಿಸುವೆ. ಸಿದ್ದಯ್ಯನೆಂಬ ಅಗಸನಿಗೆ ಕತ್ತೆ ಎಂಬುದು ಜೊತೆಗಾರ, ಅದರೊಂದಿಗೆ ಅಪಾರ ಸ್ನೇಹ ಮಮತೆ ಹೊಂದಿದವನು ಈತ. ಎಷ್ಟರಮಟ್ಟಿಗೆ ಎಂದರೆ ಜನಗಳು ಕತ್ತೆಯನ್ನು ಸಿದ್ದಯ್ಯನ ಸಾಕುಮಗಳು ಅನ್ನುವಷ್ಟು ಪ್ರೀತಿ ಒಬ್ಬರಿಗೊಬ್ಬರಿಗೆ.

ಇಂಥ ತನ್ನ ನೆಚ್ಚಿನ ಕತ್ತೆ ಒಂದು ದಿನ ಇದ್ದಕ್ಕಿದ್ದಂತೆ ಕೊನೆಯುಸಿರೆಳೆದು ಮಲಗಿತು. ದಾರಿಯ ಮೂಲೆಯಲ್ಲಿ ಒಂದು ಕಡೆ ಮಣ್ಣು ಮಾಡಿ ಸಮಾಧಿಗೆ ನಮಿಸಿ ಪೂಜಿಸಿ ನೊಂದ ಸಿದ್ದಯ್ಯ ದೇಶಾಂತರ ಹೊರಟು ಹೋದ. ವ್ಯಾಪಾರಕ್ಕೆ ಅದೇ ದಾರಿಯಲ್ಲಿ ಹೊರಟಿದ್ದ ಜಯಶೆಟ್ಟಿ ಎಂಬುವನು ಅಗಸನ ಪೂಜೆ ನೋಡಿ ಯಾವುದೊ ಮಹಾತ್ಮರ ಸನ್ನಿಧಿಯೆಂದುಕೊಂಡು ಕೈ ಮುಗಿದು ತನ್ನ ವ್ಯಾಪಾರಕ್ಕೆ ಮರಳಿದ.

ಶೆಟ್ಟಿಗೆ ಅವತ್ತು ಲಾಭದ ಮೇಲೆ ಲಾಭ ವ್ಯಾಪಾರ ‘ದಿಲ್ಕುಷ್’ ಆಗಿ ಸಮಾಧಿಗೆ ದೇವರಕಂಬ ಎಣ್ಣೆ ತಂದುಕೊಟ್ಟ. ಈ ಸುದ್ದಿ ಇಡೀ ಊರಿಗೆ ಹರಡಿ ಕೆಲವೇ ದಿನಗಳಲ್ಲಿ ಭಕ್ತರು ಹೆಚ್ಚಾಗಿ ಅಲ್ಲೊಂದು ದೇವಾಲಯ ನಿರ್ಮಾಣವಾಗಿ ಪರಿಷೆ ನಡೆಯೊ ಮಟ್ಟಿಗೆ ಬೆಳೆದಿರುತ್ತೆ. ಆ ದೇವಾಲಯದ ಮುಂದೆ ಭಿಕ್ಷುಕರು ಸಣ್ಣ ಸಣ್ಣ ಅಂಗಡಿಗಳು ಜನಗಳು ವೈದಿಕರು, ದಾನ ನೀಡಲು ಸಾಹುಕಾರರು ಎಲ್ಲರೂ ಸೇರಿರುತ್ತಾರೆ.

ಈ ಸುದ್ದಿ ಅರಮನೆಯ ತಲುಪಿ ರಾಜ ರಾಣಿ ಈ ದೇವಾಲಯ(ಅಲ್ಲಲ್ಲ ಕತ್ತೆ ಸಮಾಧಿ) ನೋಡಲು ಬಯಸಿ ಹೊರಟು ಬರುತ್ತಾರೆ. ವರ್ಷ ಕಳೆದ ನಂತರ ಅಗಸ ಸಿದ್ದಯ್ಯ ತಾನು ಮಾಡಿದ ಕತ್ತೆ ಸಮಾಧಿ ಹುಡುಕಿ ಕಾಣಲು ಬರುತ್ತಾನೆ ಆದರೆ ತಳವಾರರು ಅವನನ್ನು ಕತ್ತು ಹಿಡಿದು ಆಚೆ ತಳ್ಳುತ್ತಾರೆ ಇದಿಷ್ಟು ಕವನದ ಸಾರಾಂಶ.

ಈ ಕವನದಲ್ಲಿ ಬಹುಜನರು ನಂಬಿರಬಹುದಾದ ಅನೇಕ ಮೌಢ್ಯಗಳನ್ನು ಹೊತ್ತಿವೆ. ಜ್ಞಾನದ ಮಾರ್ಗವು ಸಹ ಇದೆ. ನಮಗೆಲ್ಲರಿಗೂ ಗೊತ್ತು ಸಿಂಧೂ ಬಯಲಿನ ನಾಗರೀಕತೆಯಿಂದಲೂ ಇಲ್ಲಿನ ಮೂಲನಿವಾಸಿ ತಳಸಮುದಾಯದ “ಬಹುಜನರು” ಪ್ರಾಣಿ- ಪಕ್ಷಿ. ನಾಯಿ. ಪಶುಸಂಗೋಪನೆ, ಕಾಡು ಪ್ರಾಣಿಗಳ ಬೇಟೆಯಲ್ಲಿ ಬಹು ಪ್ರಸಿದ್ಧರು ನಿಷ್ಣತೆಯುಳ್ಳವರು ಕೂಡಾ.

ಅವು ತಮ್ಮ ಜೀವನದ ಅವಿಭಾಜ್ಯ ಅಂಗವೇನೊ ಎಂಬ ಮಟ್ಟಿಗೆ ಸಹ ಪಳಗಿಸಿ ಸಾಕುತ್ತಿದ್ದರು. ಹೀಗೆಯೇ ಸಿದ್ದಯ್ಯನೆಂಬ ಅಗಸ ತನ್ನ ಕತ್ತೆ ಸಾಕಿದ್ದು ಅದು ಸತ್ತ ನಂತರ ಅದರ ಗುರುತಿಗೆ ಮಣ್ಣು ಮಾಡಿ ಧನ್ಯವಾದಕ್ಕಾಗಿ ಪೂಜೆ ಸಲ್ಲಿಸುವುದು ಸಹ ಈ ನೆಲದ ನೈಜ ಸಂಸ್ಕೃತಿಗಳ ಬಿಂಬವೇ ಅಗಿದೆ.

ಈಗಲೂ ಕೂಡ ನಾವುಗಳು ಸತ್ತವರ ಸಮಾಧಿ ಮೇಲೆ ತುಳಸಿ ಗಿಡ ವಿವಿಧ ಸಸಿ ನೆಟ್ಟು ಪೋಷಿಸುವುದು ಕಾಣಬಹುದು.(ಬೆಂಕಿಯಲ್ಲಿ ದೇಹ ಸುಟ್ಟು ಅದರ ಅಸ್ಥಿಯನ್ನು ನೀರಿನಲ್ಲಿ ಬಿಟ್ಟು ಗುರುತೇ ಇಲ್ಲದಂತೆ ಸಂಬಂಧ ಕಡಿದು ಕೊಳ್ಳುವುದು ಕುತಂತ್ರಿ ಆರ್ಯರ ಸಂಸ್ಕೃತಿಯಾಗಿದೆ ನೆನಪಿರಲಿ).

ಮಹಾನವಮಿ ಅಥವಾ ಮಾರ್ನಾಮಿ ಹಬ್ಬದ ಸಂದರ್ಭದಲ್ಲಿ ತೀರಿ ಹೋದ ಹಿರಿಯರಿಗೆ – ವ್ಯಕ್ತಿಗಳಿಗೆ ಎಡೆ ಇಡುವುದು ಈ ನೆಲ ಮೂಲದ ಸಂಸ್ಕೃತಿ, ಪಿಂಡ ಪ್ರದಾನವಲ್ಲ. ಆದರೆ ಈ ಕುತಂತ್ರಕ್ಕೂ ಬಹುಜನರು ಬಲಿಯಾಗಿದ್ದಾರೆ. ಕತ್ತೆ ಸಮಾಧಿಗೆ ಪೂಜೆ ಸಲ್ಲಿಸುವಾಗ ಜಯಶೆಟ್ಟಿ ಎಂಬುವ ವ್ಯಾಪಾರಸ್ಥ ನೋಡಿ ಕೈಮುಗಿದು ಹೋದ ನಂತರ ಲಾಭವಾಯಿತು ಎಂಬುದು ಇಲ್ಲಿ ಬೇರೆಯವರು ಯಾರು ಏನು ಮಾಡುತ್ತಿದ್ದಾರೆ ತಾನು ಅವರಂತೆ ಅನುಕರಿಸುವುದು ಸಾಬೀತಾಗುತ್ತದೆ.

ಆಗಲೇ ಹೇಳಿದಂತೆ ನಮ್ಮದಲ್ಲದ ಪಿಂಡ ಪ್ರದಾನವೂ ಸಹ. ನಿಮಗೆ ಗೊತ್ತಿರಲಿ ಧ್ಯಾನ ಯೋಗ ಪ್ರಾರ್ಥನೆ ವಿವಿಧ ಚಟುವಟಿಕೆ ಯಿಂದ ಮನಸ್ಸು ಉಲ್ಲಾಸಿತಗೊಂಡು ಪಾಸಿಟಿವ್ ನಿಂದ ಆ ದಿನದ ಚಟುವಟಿಕೆಯ ಎಲ್ಲದರ ಮೇಲೂ ಪ್ರಭಾವ ಬೀರುತ್ತದೆ. ಶೆಟ್ಟಿಗೆ ಇಲ್ಲಾಗಿದ್ದು ಅದೇ. ನಂತರ ತನ್ನ ಸ್ವಪ್ರಯತ್ನ ಸ್ವಂತ ಶಕ್ತಿ ಮರೆತವನೊಬ್ಬ ಸಮಾಧಿಯ ಬಗ್ಗೆ ದೊಡ್ಡ ಪುಕಾರು ಮಾಡಿ ಮೌಢ್ಯ ಪ್ರಸಾರದಲ್ಲಿ ತೊಡಗಿದ.

ಅಲ್ಲೊಂದು ಜಾತ್ರೆ ಪೂಜೆ ನಡೆಯುತ್ತದೆ. ದಾನ ವ್ಯವಹಾರ ಆಗುವಂತೆ ಮಾಡುವಲ್ಲಿ ತಾನು ತೊಡಗಿಸಿಕೊಂಡ. ಇಂತದ್ದೇ ಪರಿಸ್ಥಿತಿ ಈಗಲೂ ಕಾಣಬಹುದು. ವರ್ಷ ಕಳೆದ ನಂತರ ಕತ್ತೆ ಸಮಾಧಿಯ ಜಾಗ ಹುಡುಕಿ ಸತ್ಯ ಅರಿತಿದ್ದ ಸಿದ್ದಯ್ಯ ಅಲ್ಲಿಗೆ ಬಂದ. ತಳವಾರ್ರು ಅವನನ್ನು ಕತ್ತು ಹಿಡಿದು ಆಚೆ ತಳ್ಳಿ ದೇವಾಲಯದ ಹತ್ತಿರವು ಬಿಟ್ಟು ಕೊಳ್ಳಲಿಲ್ಲ.

ಇದು ಈಗಲೂ ಸತ್ಯ ಬೇಕಾದರೆ ನೋಡಿ ದೇವಸ್ಥಾನದಲ್ಲಿ ಇರುವ ಸತ್ಯವನ್ನು ವಿವಿಧ ಸಂಶೋಧಕರು, ಲೇಖಕರು ಮೌಢ್ಯಭಂಜಕರು ಅದನ್ನು ಬಯಲಿಗೆಳೆಯುವರು ಎಂಬ ಭಯ ಆ ವರ್ಗಕ್ಕಿದೆ. ಅದಕ್ಕೆ ಆಳುವ ಜನರ ಸಹಕಾರವು ಸಿಗುತ್ತದೆ. ಕತ್ತೆ ಸಮಾಧಿ ಎಲ್ಲಿಯಾದರೂ ಪವಾಡ ಸೃಷ್ಟಿಸಲು ಸಾಧ್ಯವ? ಇಂತಹ ಅದೆಷ್ಟೋ ನಿರ್ವೀರ್ಯ ಕತ್ತೆಯ ಸಮಾಧಿಗಳು ಓಣಿ ಓಣಿಗಳಲ್ಲಿ ರಸ್ತೆ ರಸ್ತೆಯಲ್ಲಿ ಸಿಗುತ್ತವೆ.

ಅದೆಲ್ಲವೂ ದೇವಾಲಯವೆಂಬ ಮೌಢ್ಯದ ಆಸ್ಥಾನಗಳೆಂದು ತಿಳಿದಿರಲಿ. ಇನ್ನೂ ಕರ್ನಾಟಕದ ವಾಗ್ಮಿಗಳಾದ ಗುರುರಾಜ ಕರ್ಜಗಿಯವರು ಕರುಣಾಳು ಬಾ ಬೆಳಕೆ 2ನೇ ಸಂಪುಟದಲ್ಲಿ ಉಲ್ಲೇಖಿಸಿರುವಂತೆ ‘ಸಮಾಧಿಯ ಮಹಿಮೆ’ ಎಂಬ ಲೇಖನ ಸಹ ಇದೇ ಕತೆಯ ತಿರುಳು ಹೊಂದಿದೆ. ಗುರುಕುಲದಲ್ಲಿ ಲೋಕ ಜ್ಞಾನ ವ್ಯವಹಾರ ಜ್ಞಾನವಿಲ್ಲದ ದಡ್ಡ ವಿದ್ಯಾರ್ಥಿಯೊಬ್ಬನಿಗೆ ಬರಗಾಲ ಬಂದಾಗ ಗುರುಗಳು ಆತನಿಗೆ ಒಂದು ಕತ್ತೆಯನ್ನು ನೀಡಿ ನಿನ್ನ ಜೀವನ ನೀನು ನೋಡಿಕೊ ಎಂದು ಕಳುಹಿಸಿ ಕೊಡುವರು.

ಮುಂದೊಂದು ದಿನ ಆ ಕತ್ತೆ ಸತ್ತಾಗ ಅದನ್ನು ಮಣ್ಣು ಮಾಡಿ ಸಮಾಧಿಗೆ ತನಗೆ ತಿಳಿದಂತೆ ದಿನನಿತ್ಯ ಪೂಜೆ ಸಲ್ಲಿಸುತ್ತಿರುತ್ತಾನೆ. ಈ ದಡ್ಡ ವಿದ್ಯಾರ್ಥಿಯ ಕತ್ತೆ ಸಮಾಧಿ ಮುಂದೆ ಅದೊಂದು ಜಾಗೃತ ಸ್ಥಾನವೆಂಬಂತೆ ಪ್ರಚಲಿತಗೊಂಡು ಹರಕೆ ಹೊತ್ತು ಜನ ಬಂದರು. ಈತನ ಆದಾಯ ಹೆಚ್ಚಿತು. ಸಮಾಧಿಗೊಂದು ದೇವಾಲಯ ಶಿಷ್ಯನಿಗೆ ಒಂದು ಕೊಠಡಿ ಆಯಿತು.

ಶಿಷ್ಯನ ಗುರುಗಳು ಭೇಟಿಯಾಗಿ ಅದು ಯಾವ ಮಹಾತ್ಮನ ಕಂಡು ನಿನ್ನ ಜೀವನ ಉದ್ದರಿಸಿಕೊಂಡೆ ಎಂದು ಪ್ರಶ್ನಿಸಿದಾಗ ಶಿಷ್ಯ ನೀವು ಕೊಟ್ಟ ಕತ್ತೆಯೇ ನನ್ನ ಪಾಲಿನ ಮಹಾತ್ಮ: ಅದರ ಸಮಾಧಿಯೇ ಈ ದೇವಾಲಯ. ಅದ ನಂಬಿದ ಮೂರ್ಖ ಮಂದಿಗಳ ಭಕ್ತಿಯೇ ಇಂದಿನ ನನ್ನ ಆದಾಯ ಎಂದು ಹೇಳಿ ಬೆರಗಾಗಿಸಿದ್ದ. ಒಟ್ಟಾರೆ ಈ ಮೇಲಿನ ಎರಡೂ ಕತೆಗಳು ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡ ವರ್ಗವೊಂದು ಅದರ ಹೆಸರಿನಲ್ಲಿ ವ್ಯವಹಾರಕ್ಕಿಳಿದು ಪೂಜೆ ಪುರಸ್ಕಾರ ಜಾತ್ರೆ ಹೋಮ ಹವನ ಅರ್ಚನೆ ದಕ್ಷಿಣೆ ಅಂಗಡಿ ಇತರೆ ಎಲ್ಲರಿಂದಲೂ ಲಾಭಗಳನ್ನು ಪಡೆಯುತ್ತ ಬಂದರು.

ತಮ್ಮ ಬುದ್ದಿ ಸಾಮರ್ಥ್ಯ ಮರೆತು ಸತ್ಯವನ್ನರಿಯದ ಗೋಜಿಗೆ, ಸತ್ಯ ಮಾರ್ಗಕ್ಕೆ ಹೋಗದೇ ತಮ್ಮನ್ನು ತಾವೇ ಶೋಷಣೆಗೆ ಒಡ್ಡಿ ಬಹುಜನರು ಪ್ರಜ್ಞಾಹೀನ ಸ್ಥಿತಿಯ ತಲುಪಿದರು. ಮೌಢ್ಯಕ್ಕೆ ಬಲಿಯಾದರು. ಇಂತಹ ವರ್ಣ ರಂಜಿತ ಕತೆಗಳನ್ನು ಈಗಲೂ ಹಲವಾರು ದೇವರು ನಂಬಿ ನಿಮಗೆ ಒಳ್ಳೆಯದಾಗುತ್ತೆ, ನಾನು ಹೇಳೊದು ಕೇಳಿ: ಹೇಳಿದಂತೆ ಮಾಡಿ ನಿಮ್ಮ ಭವಿಷ್ಯ ಸರಿ ಹೋಗುತ್ತೆ ಎಂದು ಬೊಬ್ಬೆ ಇಡುವವರೇ ಹೆಚ್ಚು. ಇಂತಹವರ ಮದ್ಯದಲ್ಲಿ ಸತ್ಯ ನುಡಿಯುವ ಬಹುಜನರಿಗೆ ವೈಚಾರಿಕತೆ ಬಿತ್ತುವ ಸತ್ಯ ಮಾರ್ಗಕ್ಕೆ ಮಾರ್ಗದರ್ಶನ ನೀಡುವ ಶ್ರೀನಿಜಗುಣಾನಂದ ಸ್ವಾಮಿಗಳೇ ನಮ್ಮೆಲ್ಲರಿಗೂ ಆದರ್ಶ.

ನಿಜಗುಣ ಸ್ವಾಮಿಗಳು ವಿವಿಧ ವೇದಿಕೆಯಲ್ಲಿ ಈ ಮೇಲಿನ ಕತೆಯನ್ನು ಉದಾಹರಿಸಿ ಜನರನ್ನು ಮೌಢ್ಯದಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ್ದಾರೆ. ಜನರಿಗೆ ತಿಳಿ ಹೇಳಿ ಜ್ಞಾನ ಹಂಚುತ್ತಿದ್ದಾರೆ. ನಮಗೆ ಆದರ್ಶವಾಗಬೇಕಾದವರು ನಿಜಗುಣ ಸ್ವಾಮೀಜಿಗಳೆ ಹೊರತು ಬ್ರಹ್ಮಾಂಡ ಅಂಡ ಪಿಂಡ ದಿನ ವಾರ ವರ್ಷ ಭವಿಷ್ಯ ನುಡಿವ, ಸ್ತ್ರೀವಶ, ಧನಪ್ರಾಪ್ತಿ ಅತ್ತೆ ಸೊಸೆ ಕಿತ್ತಾಟ ಕೋರ್ಟ್ ಕೇಸ್ ಈಡೇರಿಸಿ ಕೊಡುವೆನೆಂಬ ಸಾಧು ಗುರೂಜಿಗಳಲ್ಲ. ನಿಮ್ಮನ್ನು ಮೌಢ್ಯದಿಂದ ಬಿಡುಗಡೆಗೊಳಿಸಿ ಸನ್ಮಾರ್ಗದಲ್ಲಿ ಕೊಂಡೊಯ್ಯುವವರ ಬಳಿ ಸಾಗಿ. ಮೌಢ್ಯದ ಬಾವಿಗೆ ಹಾಕುವವರೆಡೆಯಲ್ಲ. ಈ ಕತ್ತೆ ಕಥೆ ನಿಮಗೆ ಸತ್ಯವನ್ನು ತಿಳಿಯಲು ಸಾಧ್ಯವಾಯಿತು ಎಂದು ಭಾವಿಸಿ ಕುವೆಂಪುರವರ ಈ ಸಾಲು

ಸುಳ್ಳಿನ ಮಾಲೆಯ ಕೊರಳಿಗೆ ಸೂಡಿ
ಕಳ್ಳನೊಬ್ಬನನ್ನು ಗುರುವನು ಮಾಡಿ
ಬಡವರ ಹಣವನು ಕಾಣಿಕೆ ನೀಡಿ
ಧರ್ಮವ ಮೆರೆದರು ನೋಡಯ್ಯ

ಪವಾಡ – ಮೂಢನಂಬಿಕೆಗಳು, ದುರ್ಬಲತೆ ಮತ್ತು ಮೃತ್ಯುವಿನ ಸಂಕೇತಗಳು ಅವುಗಳ ಬಗ್ಗೆ ಎಚ್ಚರಿಕೆಯಿಂದಿರಿ”

ಸ್ವಾಮಿ ವಿವೇಕಾನಂದರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!

Published

on

ಸುದ್ದಿದಿನ ಡೆಸ್ಕ್ : ಲೋಕಸಭೆಯ ಅಂತಿಮ ಚರಣದ ಮತದಾನ ದಿನ ಹಾಗೂ ನಂತರ ಚುನಾವಣಾ ಫಲಿತಾಂಶವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸಂಸದರನ್ನು ಬರ ಮಾಡಿಕೊಳ್ಳಲು ಲೋಕಸಭಾ ಕಾರ್ಯಾಲಯ ವ್ಯಾಪಕ ವ್ಯವಸ್ಥೆಯಿಂದ ಸಜ್ಜುಗೊಳ್ಳುತ್ತಿದೆ. ಇದಕ್ಕಾಗಿ ಅಧಿಕಾರಿಗಳ ವಿಶೇಷ ತಂಡಗಳನ್ನು ರಚಿಸಲಾಗಿದೆ.

ಚುನಾಯಿತ ಅಭ್ಯರ್ಥಿಗಳ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸುತ್ತಿದ್ದಂತೆಯೇ ನೂತನ ಅಭ್ಯರ್ಥಿಗಳ ಆಗಮನ ಪ್ರಕ್ರಿಯೆ ಆರಂಭವಾಗುತ್ತದೆ. ಅವರ ಪ್ರಯಾಣಕ್ಕೆ ಮುನ್ನವೇ ಲೋಕಸಭೆ ಕಾರ್ಯಾಲಯದ ನೋಡಲ್ ಅಧಿಕಾರಿಗಳು ಅವರನ್ನು ಸಂಪರ್ಕಿಸುತ್ತಾರೆ. ಐಜಿಐ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ವಿವಿಧ ಟರ್ಮಿನಲ್‌ಗಳಲ್ಲಿ ವಿಶೇಷ ಸ್ವಾಗತ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಸಂಸದರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ನಿಗದಿತ ಕೇಂದ್ರಗಳಲ್ಲಿ ಬರ ಮಾಡಿಕೊಳ್ಳಲಾಗುತ್ತದೆ.

ಸಂಸತ್ತಿನ ಅನೆಕ್ಸೆ ವಿಸ್ತೃತ ಕಟ್ಟಡದ ಸ್ವಾಗತ ಕೇಂದ್ರಕ್ಕೆ ಆಗಮಿಸಿದ ನಂತರ ಅವರಿಗೆ ದೂರವಾಣಿ ಸಂಪರ್ಕ, ಹೊಸಬ್ಯಾಂಕ್ ಖಾತೆ, ಸಂಸತ್ ಕಟ್ಟಡಕ್ಕೆ ಪ್ರವೇಶ ಪಡೆಯಲು ಸ್ಮಾರ್ಟ್ ಆಕ್ಸೆಸ್ ಕಾರ್ಡ್, ಅವರ ವಾಹನಗಳಿಗಾಗಿ ಫಾಸ್ಟ್ ಟ್ಯಾಗ್ ಸ್ಟಿಕರ್ ಮತ್ತು ರಾಜತಾಂತ್ರಿಕ ಪಾಸ್‌ಪೋರ್ಟ್ ನೀಡಿಕೆಗೆ ವ್ಯವಸ್ಥೆ ಮಾಡಲಾಗುತ್ತದೆ. ರಾಜ್ಯ ಸರ್ಕಾರಿ ಅತಿಥಿ ಭವನ ಹಾಗೂ ಪಶ್ಚಿಮ ನ್ಯಾಯಾಲಯ ಹಾಸ್ಟೇಲ್ ಸಂಕೀರ್ಣದಲ್ಲಿ ಅವರಿಗೆ ತಂಗಲು ಅವಕಾಶ ಕಲ್ಪಿಸಲಾಗುತ್ತದೆ. ಹೊಸ ಸದಸ್ಯರಿಗೆ ಸಂವಿಧಾನದ ಪ್ರತಿ ನೀತಿ ಮತ್ತು ಕಲಾಪ, ಪ್ರಕ್ರಿಯೆ, ನಿಯಮಾವಳಿ ಕೈಪಿಡಿಗಳನ್ನು ಅನುಸರಿಸಲು ನೀಡಲಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ

Published

on

ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ ಕಥಾವಸ್ತು ಹೊಂದಿರುವ ’ಆಲ್ ವಿ ಇಮ್ಯಾಜಿನ್ ಆಜ್ ಲೈಟ್’ ಚಿತ್ರ ಪಾಮೆ ಡೋರ್ ವರ್ಗದಲ್ಲಿ ನಾಮನಿರ್ದೇಶಿತಗೊಂಡಿದ್ದು, ಈ ವರ್ಗದ 2ನೇ ಸ್ಥಾನವಾದ ಗ್ರಾಂಡ್ ಪ್ರಿಕ್ಸ್‌ಗೆ ಪಾತ್ರವಾಯಿತು.

ಇದರೊಂದಿಗೆ ಭಾರತ ಈ ಉತ್ಸವದಲ್ಲಿ ಚಿತ್ರ ನಿರ್ಮಾಣಕ್ಕಾಗಿ 2, ನಟನೆಗಾಗಿ 1, ಹಾಗೂ ಛಾಯಾಗ್ರಹಣಕ್ಕಾಗಿ 1ಹೀಗೆ ಒಟ್ಟು 4 ಗೌರವಗಳನ್ನು ಪಡೆದಂತಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಸಾಧನೆಗಾಗಿ ಪಾಯಲ್ ಕಪಾಡಿಯಾ ಅವರನ್ನು ಅಭಿನಂದಿಸಿದ್ದಾರೆ.

ಎಫ್‌ಟಿಐಐನ ಹಳೆಯ ವಿದ್ಯಾರ್ಥಿ ಪಾಯಲ್ ಕಪಾಡಿಯಾ ಅವರ ವಿಶೇಷವಾದ ಕೌಶಲ್ಯ ಭಾರತೀಯ ಹೊಸ ತಲೆಮಾರಿನ ನಿರ್ಮಾಪಕರಿಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಕವಿತೆ | ಒಂದು ಕಪ್ ಕಾಫಿ

Published

on

  • ಲಕ್ಕೂರು ಆನಂದ್

ಕೊನೆಯ ಸಾರಿ
ನನ್ನ ಜೊತೆ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ನಾನು ತಪ್ಪು ಮಾಡಿದೆನೊ,
ನೀನು ತಪ್ಪು ಮಾಡಿದೆಯೊ,
ಬಿಟ್ಟು ಬಿಡೋಣ:

ಕೊನೆಯ ಸಾರಿ
ನನ್ನ ಜೊತೆ ಒಂದೇ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ಈ ಗಳಿಗೆಯನ್ನು ಚಿರಸ್ಮರಣೀಯ ಮಾಡುತ್ತೇನೆ

ಯಾರಿಗೆ ಗೊತ್ತು?
ಅದು ಇಲ್ಲೇ ತಿರುವು ಪಡೆಯಬಹುದು !
ಇಲ್ಲ ನಾವಿಬ್ಬರು ಬೇರೆಯಾಗಬಹುದು!
ಯಾರು ಊಹಿಸಿರುತ್ತಾರೆ?
ನಾನೊಂದು ಹೇಳುವುದು
ನೀನೊಂದು ಹೇಳುವುದು
ಮಾತುಗಳೆಂಬ ಟಗರುಗಳು ಗುದ್ದಾಡುತ್ತಿವೆ
ನಮಗಿರುವ ಎಲ್ಲಾ ಮಾತಿನ ದಾರಿಗಳಲ್ಲೂ
ದುಃಖ ಹೆಪ್ಪುಗಟ್ಟಿ ಕುಳಿತುಬಿಟ್ಟಿದೆ
ಯಾರಿಗೆ ಗೊತ್ತು
ನಮ್ಮೆದುರಿಗೆ ವಿಶಾಲ ವನಗಳಿರಬಹುದು,
ದ್ರಾಕ್ಷಿ ಹಣ್ಣುಗಳು ಭಾರ ತಡೆಯಲಾರದೆ,
ನೆಲಕ್ಕೆ ಬಾಗಿದ ಮೋಡಗಳಾಗಬಹುದು.
ಅಪರೂಪದ ನದಿಗಳೂ ಕೂಡ ನಮ್ಮ ಸುತ್ತ ಪರಿಭ್ರಮಿಸಬಹುದು,
ಆದರೆ ಏನು ಲಾಭ?
ನಮ್ಮಿಬ್ಬರಿಗೂ ದಾಹವಾಗುತ್ತಿಲ್ಲಾ…

ಇಬ್ಬರ ಗುಂಡಿಗೆಯ ಮೂಲೆಯಲ್ಲೂ
ಸಣ್ಣ ಕೊಂಬೆಯೊಂದು ಮುರಿದು ಬೀಳುವ ಶಬ್ದ
ದುಃಖದ ಹನಿಗಳು ಸುರಿಯುತ್ತಿರುವ ಶಬ್ದ
ಅವರವರದು ಅವರವರಿಗೆ ಹೊರಲಾರದ ಭಾರವಾಗುತ್ತಿದೆ
ದ್ವೇಷವಿಲ್ಲ,
ಅಸೂಯೆಯಿಲ್ಲ, ಕೋಪವಿಲ್ಲ;
ಅಲ್ಲಿರುವುದು ಬರೀ ಪ್ರೀತಿಯೇ
ಆದರೂ ಕರುಣೆಯೆಂಬುದು ಇಷ್ಟೊಂದು ಕ್ರೂರವಾಗಿರುತ್ತಾ?
ಈಗಲೂ ಕೂಡಾ
ನಿನ್ನ ಕಣ್ಣಲ್ಲೊಂದು ದಯೆ ಕದಲಾಡುತ್ತಿದೆ
ಅದು ನಿನಗೂ ನನಗೂ ಕೂಡಾ ಅರ್ಥವಾಗುತ್ತಿಲ್ಲ
ಹತಾಶೆಯ ಪೊರೆ ಕಣ್ಣಿಂದ ಕಳಚುವವರೆಗೆ
ನಾವಿಬ್ಬರೂ ಕಾಯಬೇಕಷ್ಟೆ!

ನನ್ನ ಕಣ್ಣಿಗೀಗ ನೀನು ಎಟುಕುತ್ತಿಲ್ಲ
ನಿನ್ನ ಕಣ್ಣಿಗೀಗ ನಾನೂ ಎಟುಕುತ್ತಿಲ್ಲ.
ಈ ಹಿಂದಿನ ಕನಸುಗಳೆಲ್ಲಾ ಇಬ್ಬರಲ್ಲೂ
ಕರಗಿಹೋಗಿವೆ
ರೆಕ್ಕೆಮುರಿದ ಹಕ್ಕಿಗಳೆರೆಡು
ತಲಾ ಒಬೊಬ್ಬರ ತಲೆಯ ಮೇಲೆ ಬಂದು ಕೂತು ಬಿಟ್ಟಿವೆ.
ಬಹುಶಃ ಇದು ಕೊನೆಯ ಸಾರಿಯ ಭೇಟಿಯಾಗಬಹುದು!
ನಾವಿಬ್ಬರು ಇಷ್ಟು ಹತ್ತಿರದಲ್ಲಿ ಕಾಫಿ ಕುಡಿಯುವುದು?
ನೆನ್ನೆಗಳೆಲ್ಲಾ ಇಂದು ದೀರ್ಘ ನಿಟ್ಟುಸಿರುಗಳಾಗುತ್ತಿವೆ
ನಿನ್ನೊಳಗೆ ಕದಲಾಡುತ್ತಿರುವ ಗೊಂದಲವೊಂದು
ಮೆತ್ತಗೆ ನನ್ನನ್ನು ತಾಕುತ್ತಿದೆ
ನಾವಿಬ್ಬರು ಇಷ್ಟು ನಿಶಬ್ದವಾಗಿ ಕಾಫಿ ಕುಡಿಯಬೇಕಾ?

ಶವಯಾತ್ರೆಯೂ ಕೂಡಾ
ಇಷ್ಟು ನಿಶಬ್ದವಾಗಿರುವುದಿಲ್ಲ!
ಇದು ನಮ್ಮಿಬ್ಬರ ಕೊನೆಯ ಭೇಟಿ
ಕೊನೆಯ ಸಾರಿಯ ನೆನಪಿಗೆ ತಲಾ ಒಂದೊಂದು ಕಾಫಿ ಕಫ್,
ಈ ಹಿಂದೆ ಇವೇ ಒನ್ ಬೈ ಟೂಗಳು,
ಅವೇ ಈಗ ಎರಡು ಅನಾಮಿಕ ಕಾಫೀ ಕಪ್‌ಗಳು
ಈ ಕಾಫಿ ಕಪ್‌ನೊಳಗೆ ಇಣುಕಿ ನೋಡಿದರೆ
ನೆನ್ನೆಯೆಂಬ ಚೂರು,
ನಮ್ಮಿಬ್ಬರ ಪರಿಚಯಗಳು
ಎರಡು ಬೇರೆ ಬೇರೆ ಬೊಂಬೆಗಳಂತೆ ಕಚ್ಚಾಡುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending