ದಿನದ ಸುದ್ದಿ

ಗಣೇಶ ವಿಸರ್ಜನೆ; ಹರಪನಹಳ್ಳಿ ಬಜರಂಗದಳದ ಅಧ್ಯಕ್ಷ ಸಾವು

Published

on

ಸುದ್ದಿದಿನ, ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಸಂಭವಿಸಿದ ಅವಘಡದಲ್ಲಿ ಬಜರಂಗದಳದ ಅಧ್ಯಕ್ಷ ಸಾವನಪ್ಪಿರುವ ಘಟನೆ ಹರಪನಹಳ್ಳಿಯಲ್ಲಿ ಸಂಭವಿಸಿದೆ. ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್​ ತಗುಲಿ ಬಜರಂಗದಳದ ಅಧ್ಯಕ್ಷ ಹನುಮಂತಪ್ಪ ಸಾವನಪ್ಪಿದ್ದಾರೆ. ಟ್ರ್ಯಾಕ್ಟರ್​ಗೆ ವಿದ್ಯುತ್​ ತಂತಿ ತಗುಲಿದ ಕಾರಣ ದುರಂತ ಸಂಭವಿಸಿದೆ.

ಗಣೇಶ ಮೂರ್ತಿ ವಿಸರ್ಜನೆಗೆ ಭಾನುವಾರ ರಾತ್ರಿ ಕೆರೆಯ ಬಳಿ ಹೋಗುತ್ತಿದ್ದಾಗ ಟ್ರ್ಯಾಕ್ಟರ್​ಗೆ ತಂತಿ ತಗುಲಿದ್ದು, 20 ಮಂದಿ ಕೆಳಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಆದರೆ ಹನುಮಂತಪ್ಪ ತೀವ್ರವಾಗಿ ಗಾಯಗೊಂಡಿದ್ದರು.ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಚಿಕಿತ್ಸೆ ಫಲಕಾರಿ ಆಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

Trending

Exit mobile version