Connect with us

ದಿನದ ಸುದ್ದಿ

ಬ್ಯಾಂಕುಗಳಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಿ ; ತ್ರಿಭಾಷಾ ಸೂತ್ರ ಪಾಲನೆ ಕಡ್ಡಾಯ : ಜಿಲ್ಲಾಧಿಕಾರಿ ನಿತೇಶ ಕೆ ಪಾಟೀಲ

Published

on

ಸುದ್ದಿದಿನ,ಧಾರವಾಡ : ಜಿಲ್ಲೆಯಾದ್ಯಂತ ಬಹುತೇಕ ಬ್ಯಾಂಕುಗಳಲ್ಲಿ ನೆರೆಯ ರಾಜ್ಯಗಳ ಅಧಿಕಾರಿ, ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರೂ ಕನ್ನಡವನ್ನು ಕಲಿತುಕೊಂಡು ಸ್ಥಳೀಯ ಜನರೊಂದಿಗೆ ಇಲ್ಲಿನ ಭಾಷೆಯಲ್ಲಿಯೇ ವ್ಯವಹರಿಸಿ, ಗ್ರಾಮೀಣ ಜನರನ್ನೂ ಬ್ಯಾಂಕಿಂಗ್ ಕ್ಷೇತ್ರಕ್ಕೆ ಒಳಪಡಿಸಬೇಕು.

ಇಲ್ಲದಿದ್ದರೆ ಭಾಷಾ ಸಮಸ್ಯೆಯಿಂದ ಗ್ರಾಮೀಣ ಜನರು ಬ್ಯಾಂಕಿಂಗ್ ವಲಯದಿಂದ ಹೊರಗುಳಿಯವ ಸಂಭವಗಳಿರುತ್ತವೆ. ಡಿ.ಡಿ.,ಚಲನ್ ಸೇರಿದಂತೆ ಬ್ಯಾಂಕಿನ ಎಲ್ಲ ಅರ್ಜಿ ನಮೂನೆಗಳನ್ನು ತ್ರಿಭಾಷಾ ಸೂತ್ರದಲ್ಲಿ ಪ್ರಕಟಿಸಬೇಕು. ನಾಮಫಲಕಗಳಲ್ಲಿ ಅಗ್ರಸ್ಥಾನದಲ್ಲಿ ಕನ್ನಡ ಬಳಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಕೆ ಪಾಟೀಲ ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಾಣಿಜ್ಯ ಮತ್ತು ಗ್ರಾಮೀಣ ಬ್ಯಾಂಕುಗಳಲ್ಲಿ ಇತ್ತೀಚೆಗೆ ನೆರೆಯ ರಾಜ್ಯಗಳ ಅಭ್ಯರ್ಥಿಗಳು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಾಗಿ ನೇಮಕಗೊಂಡಿದ್ದಾರೆ.

ಅವರು ನಿತ್ಯದ ಬ್ಯಾಂಕ್ ವ್ಯವಹಾರಗಳಲ್ಲಿ ಕನ್ನಡ ಬಳಸದಿರುವ ಬಗ್ಗೆ ಗ್ರಾಮೀಣ ಪ್ರದೇಶಗಳ ಜನರಿಂದ ದೂರುಗಳು ಬರುತ್ತಿವೆ. ಸಿಬ್ಬಂದಿಯ ಈ ವರ್ತನೆಗಳಿಂದ ಗ್ರಾಮೀಣ ಜನರು ಬ್ಯಾಂಕುಗಳಿಂದ ದೂರ ಸರಿದು ಖಾಸಗಿ ಲೇವಾದೇವಿಗಾರರ ಬಳಿ ಸಾಲ ಪಡೆಯುವ ಸಾಧ್ಯತೆಗಳಿರುತ್ತವೆ. ನಂತರ ಅದರಿಂದ ವ್ಯತಿರಿಕ್ತ ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತದೆ. ಬ್ಯಾಂಕುಗಳು ಎಲ್ಲರನ್ನೂ ಒಳಗೊಳ್ಳುವಂತೆ ತಮ್ಮ ವ್ಯವಹಾರಗಳನ್ನು ನಿರ್ವಹಿಸಬೇಕು.

ತ್ರಿಭಾಷಾ ಸೂತ್ರದ ಪಾಲನೆ, ಕನ್ನಡದ ಬಳಕೆಯನ್ನು ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಈ ನಿಯಮಗಳನ್ನು ಪಾಲಿಸದವರ ವಿರುದ್ಧ ಕ್ರಮ ಕೈಗೊಂಡು ಅದರ ಕುರಿತು ಎಲ್ಲ ಶಾಖೆಗಳಿಗೆ ಮಾಹಿತಿ ನೀಡಬೇಕು. ಹಾಗಾದಾಗ ಮಾತ್ರ ಜಾಗೃತಿ ಮೂಡುತ್ತದೆ.

ಗ್ರಾಮೀಣ ಜನರಿಗೆ ಆರ್ಥಿಕ ಸಾಕ್ಷರತೆ ಮುಖ್ಯವಾಗಿದೆ. ಅನಕ್ಷರಸ್ಥರು ಮತ್ತು ಗ್ರಾಮೀಣ ಜನರನ್ನು ಬ್ಯಾಂಕಿಗ್ ಕ್ಷೇತ್ರ ಒಳಗೊಳ್ಳದೆ ಹೋದರೆ ಒಟ್ಟು ಆರ್ಥಿಕ ರಂಗದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗುತ್ತವೆ ಎಂದು ಜಿಲ್ಲಾಧಿಕಾರಿಗಳು ಕಾಳಜಿ ವ್ಯಕ್ತಪಡಿಸಿದರು.

ಬೆಳೆ ಹಾಗೂ ಮನೆ ಪರಿಹಾರದ ಹಣ ಸಾಲಕ್ಕೆ ಹೊಂದಾಣಿಕೆ ಬೇಡ

ಬರ,ಪ್ರವಾಹದ ಸಂದರ್ಭದಲ್ಲಿ ಬೆಳೆಹಾನಿ, ಮನೆಹಾನಿಗಳಿಂದ ಸಂಕಷ್ಟಕ್ಕೀಡಾದ ಜನರಿಗೆ ಸರ್ಕಾರ ನೀಡುವ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಂಬಂಧಿಸಿದ ರೈತರ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳಬಾರದು.

ಮಹತ್ಮಾಗಾಂಧಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ನೀಡುವ ಗೌರವ ಸಂಭಾವನೆಯ ಹಣವನ್ನು ಕೂಡ ಕೆಲವು ಬ್ಯಾಂಕುಗಳು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳುತ್ತಿವೆ ಎಂಬ ದೂರುಗಳಿವೆ. ಬ್ಯಾಂಕುಗಳ ಇಂತಹ ವರ್ತನೆಗಳಿಂದ ಜನರು ನರೇಗಾ ಉದ್ಯೋಗದಿಂದಲೂ ದೂರ ಸರಿದು ಖಾಸಗಿ ಭೂ ಮಾಲೀಕರ ಬಳಿ ದುಡಿಯಲು ತೆರಳುವ ಸಾಧ್ಯತೆಗಳು ಹೆಚ್ಚಾಗುತ್ತವೆ. ಜಿಲ್ಲಾಡಳಿತದ ಗಮನಕ್ಕೆ ಬಂದ ಕೆಲವೇ ಕೆಲವು ಪ್ರಕರಣಗಳನ್ನು ಮಾತ್ರ ನಾವು ಖುದ್ದಾಗಿ ಪರಿಹರಿಸಬಹುದು .

ಯಾರ ಗಮನಕ್ಕೂ ಬಾರದೇ ಬಹಳಷ್ಟು ಸಂದರ್ಭದಲ್ಲಿ ಗ್ರಾಮೀಣ ಜನರು ಬ್ಯಾಂಕುಗಳಿಂದ ದೂರ ಸರಿದು ಬಿಡುತ್ತಾರೆ. ಪರಿಹಾರದ ಹಣವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿಕೊಂಡವರ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಮುಂದಿನ ಸಭೆಗೆ ಬರುವಾಗ ತರಬೇಕು. ಇದಲ್ಲದೇ ಬಹಳಷ್ಟು ಬ್ಯಾಂಕುಗಳು ಅರ್ಹರಿಗೆ ಶೈಕ್ಷಣಿಕ ಸಾಲ ಕೊಡುತ್ತಿಲ್ಲ ಎಂಬ ಅಹವಾಲುಗಳು ಬರುತ್ತಿವೆ. ಸ್ವಸಹಾಯ ಸಂಘಗಳಿಗೆ ಖಾತೆ ತೆರೆಯಲು ಅನಗತ್ಯ ತೊಂದರೆ ನೀಡಬಾರದು.

ಕನಿಷ್ಟ ದಾಖಲೆಗಳನ್ನು ಪಡೆದು ಬೇಸಿಕ್ ಉಳಿತಾಯ ಖಾತೆ (BSB) ಅಥವಾ ಉಳಿತಾಯ ಖಾತೆ (SB) ತೆರೆದು ಕೊಡಿ ಪರ್ವನೆಂಟ್ ಅಕೌಂಟ ನಂಬರ್ (PAN) ಎಲ್ಲರಿಗೂ ಕಡ್ಡಾಯಗೊಳಿಸಬೇಡಿ ಎಂದು ಸೂಚಿಸಿದರು.

ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆ ಬಳಸದೇ ಇರುವವರು ಮತ್ತು ಸಹಾಯ ಡೆಸ್ಕ್ ಮೂಲಕ ಅನಕ್ಷರಸ್ಥ ಗ್ರಾಹಕರಿಗೆ ನೆರವಾಗದ ಶಾಖೆಗಳು ಹಾಗೂ ಅಧಿಕಾರಿ, ಸಿಬ್ಬಂಧಿ, ವಿವರಗಳನ್ನು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಬಹಿರಂಗ ಪಡಿಸುವ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಮಾತನಾಡಿ, ಸರ್ಕಾರದ ಸೇವೆಯಲ್ಲಿರುವ ನಮ್ಮೆಲ್ಲರ ಮೇಲೆ ಸರ್ಕಾರದ ಯೋಜನೆಗಳನ್ನು ಯಶಸ್ವಿಗೊಳಿಸುವ ಹೊಣೆ ಇರುತ್ತದೆ. ಉದ್ಯೋಗಾವಕಾಶಗಳಿಗೆ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಬರುವುದು ಅನಿವಾರ್ಯ.

ವಿಶೇಷವಾಗಿ ಗ್ರಾಮೀಣ ಜನರ ಸಂಪರ್ಕಕ್ಕೆ ಬರುವಂತಹ ಸೇವೆಗಳಲ್ಲಿರುವ ಬ್ಯಾಂಕಿಂಗ್ ವಲಯದ ಅಧಿಕಾರಿ, ಸಿಬ್ಬಂದಿ, ಕನ್ನಡ ಬಳಸುವುದು ಮತ್ತು ಸ್ಥಳೀಯರೊಂದಿಗೆ ಅವರ ಮಾತೃ ಭಾಷೆಯಲ್ಲಿಯೇ ವ್ಯವಹರಿಸುವುದು ಕಡ್ಡಾಯ. ಬ್ಯಾಂಕಿಂಗ್ ನೇಮಕಾತಿ ನಿಯಮಗಳಲ್ಲಿ ಕನ್ನಡ ವ್ಯಾಸಂಗ ಕಡ್ಡಾಯವಾಗಿರದಿದ್ದರೂ ಸ್ಥಳೀಯ ಭಾಷೆ ಗೊತ್ತಿರಬೇಕು ಎಂಬ ಸರಳ ನಿಯಮವಿದೆ.

ಸೇವೆಯನ್ನು ಸಮರ್ಪಕವಾಗಿ ನೀಡಲು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸುವುದು ಅತ್ಯಗತ್ಯ ಆರ್ಥಿಕ ಸಾಕ್ಷರತಾ ಶಿಬಿರಗಳನ್ನು ಎಲ್ಲ ಬ್ಯಾಂಕುಗಳು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಬೆಳೆ, ಮನೆ ಹಾನಿಗೊಳಗಾದ ವ್ಯಕ್ತಿಗಳಿಗೆ ನೀಡಿದ ಪರಿಹಾರ ಹಣವನ್ನು ಅವರ ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು.

ಬ್ಯಾಂಕುಗಳ ಮೂಲಕ ಅನೇಕ ಸರ್ಕಾರಿ ಸೌಲಭ್ಯಗಳು ಜನರಿಗೆ ದೊರೆಯುತ್ತಿವೆ ಅವುಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಬೇಕು. ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳ ಮೂಲಕ ಸಾಮಾನ್ಯ ಗ್ರಾಹಕರಿಗೆ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಆರ್. ಅಣ್ಣಯ್ಯ ಮಾತನಾಡಿ ಬ್ಯಾಂಕುಗಳು ತಮ್ಮ ದಿನನಿತ್ಯದ ಕಾರ್ಯಗಳಲ್ಲಿ ಕನ್ನಡದ ಬಳಕೆಗೆ ಮೊದಲ ಆದ್ಯತೆ ನೀಡಬೇಕು. ಕನ್ನಡ ಕಲಿಯುವ ಅವಕಾಶ ಕಲ್ಪಿಸಬೇಕು. ಸ್ಥಳೀಯ ಎಲ್ಲಾ ಶಾಖೆಗಳಲ್ಲಿ ಸಹಾಯ ಡೆಸ್ಕ್ ತೆರೆದು ಗ್ರಾಹಕರಿಗೆ ಅಗತ್ಯ ಮಾರ್ಗದರ್ಶನ ನೆರವು ನೀಡಬೇಕು ಎಂದರು. ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೇರವುಬ ನೀಡುವ ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೇಯು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ವ್ಯವಸ್ಥಾಪಕ ಮತಿ ಚಕ್ರವರ್ತಿ, ನಬಾರ್ಡ ಉಪ ಪ್ರಧಾನ ವ್ಯವಸ್ಥಾಪಕ ಮಯೂರ ಕಾಂಬಳೆ ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending