ದಿನದ ಸುದ್ದಿ
ಅಧಿಕ ಸಾಲ ಸೌಲಭ್ಯ ; ಬ್ಯಾಂಕ್ ಗಳಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ
ಸುದ್ದಿದಿನಡೆಸ್ಕ್:ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ- ಎಂ.ಎಸ್.ಎಂ.ಇ ಗಳಿಗೆ ಸಾರ್ವಜನಿಕ ವಲಯದ ಬ್ಯಾಂಕ್ಗಳು 5 ಲಕ್ಷ 75 ಸಾವಿರ ಕೋಟಿ ರೂಪಾಯಿಗೂ ಅಧಿಕ ಸಾಲ ಸೌಲಭ್ಯ ನೀಡಬೇಕೆಂಬ ಗುರಿ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ಗಳು ಎಂ.ಎಸ್.ಎಂ.ಇ ಗಳಿಗೆ ಈ ಪ್ರಮಾಣದಲ್ಲಿ ಸಾಲ ಸೌಲಭ್ಯ ಕಲ್ಪಿಸಬೇಕೆಂದು ಸೂಚಿಸಿಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನಿನ್ನೆ ಎಸ್ಐಡಿಬಿಐ- ಸಿಡ್ಬಿ ಏರ್ಪಡಿಸಿದ್ದ ರಾಷ್ಟ್ರೀಯ ಎಂ.ಎಸ್.ಎಂ.ಇ ಕ್ಲಸ್ಟರ್ ಔಟ್ರೀಚ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ವಲಯದ ಬ್ಯಾಂಕ್ಗಳು ಎಂ.ಎಸ್.ಎಂ.ಇ ಗಳ ಬೆಳವಣಿಗೆಗೆ ಕೇವಲ ಶೇಕಡ 9.2 ರಷ್ಟು ಸಾಲಸೌಲಭ್ಯ ಕಲ್ಪಿಸುತ್ತಿವೆ. ಆದರೆ, ಖಾಸಗಿ ಬ್ಯಾಂಕ್ಗಳು ಶೇಕಡ 25 ರಷ್ಟು ಹಾಗೂ ಎನ್ಬಿಎಫ್ಸಿ ಗಳು ಶೇಕಡ 39 ರಷ್ಟು ಸಾಲ ಸೌಲಭ್ಯ ನೀಡುತ್ತಿವೆ ಎಂದು ವಿವರಿಸಿದರು.
ಮುದ್ರಾ ಯೋಜನೆಯಡಿ ಈ ಹಿಂದೆ ನೀಡಲಾಗುತ್ತಿದ್ದ ಸಾಲದ ಮೊತ್ತ 10 ಲಕ್ಷ ರೂಪಾಯಿಗಳಿಂದ 20 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಹೊಸ ವಿಭಾಗ ’ತರುಣ್ ಪ್ಲಸ್’ ಅಡಿಯಲ್ಲಿ ಸಾಲ ಪಡೆದ ಉದ್ಯಮದಾರರು ಸಾಲ ಮರುಪಾವತಿ ಮಾಡಿದಲ್ಲಿ ಅವರಿಗೆ 20 ಲಕ್ಷ ರೂಪಾಯಿವರೆಗೂ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243