ದಿನದ ಸುದ್ದಿ
ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಸಂವಿಧಾನಕ್ಕೆ ಮಾಡಿದ ದ್ರೋಹ : ಬಿ ಕೆ ಹರಿಪ್ರಸಾದ್ ಕಿಡಿ
ಸುದ್ದಿದಿನ, ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನ ಸಾಂವಿಧಾನಿಕ ಹುದ್ದೆ. ಬಸವರಾಜ್ ಹೊರಟ್ಟಿಯವರು ಸಭಾಪತಿ ಸ್ಥಾನದಲ್ಲಿರುವಾಗಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆಂದು ಘೋಷಿಸಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ವಿಧಾನ ಸೌಧದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತಾಡಿದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಸಿದ್ದಾಂತ-ತತ್ವಕ್ಕೆ ಸರಿ ಹೊಂದುವ ರಾಜಕೀಯ ಪಕ್ಷವನ್ನ ಆಯ್ಕೆ ಮಾಡಿಕೊಳ್ಳುವ ಅಧಿಕಾರವಿದೆ. ಆದರೆ ಸಾಂವಿಧಾನಿಕ ಹುದ್ದೆಯಲ್ಲಿರುವವರು ಪಕ್ಷಾತೀತರಾಗಿರಬೇಕು, ಸಂವಿಧಾನಕ್ಕೆ ಅತೀತರಾಗಿರಬೇಕು. ಬಸವರಾಜ್ ಹೊರಟ್ಟಿಯವರು ಹಿರಿಯರು, ಅನುಭವ ಇರುವವರಿಂದ ಸಂವಿಧಾನ ವಿರೋಧಿ ನಡೆಯನ್ನ ನಾವು ನಿರೀಕ್ಷೆ ಮಾಡಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಇತ್ತೀಚೆಗೆ ಬಿಜೆಪಿ ಕೇಂದ್ರ ನಾಯಕ ಅಮಿತ್ ಶಾ ಅವರನ್ನ ವಯಕ್ತಿಕ ಭೇಟಿಯಾಗಿ ಬಿಜೆಪಿ ಸೇರ್ಪಡೆಯಾಗುವ ಮಾತುಕತೆ ನಡೆಸಿದ್ದಾರೆ. ನಂತರ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ಸೇರುವ ಮಾತುಗಳನ್ನ ಸ್ಪಷ್ಟಪಡಿಸಿದ್ದಾರೆ. ಈ ತಿಂಗಳಲ್ಲಿ ದಿನಾಂಕ, ಪಂಚಾಂಗ ನೋಡಿ ಬಿಜೆಪಿ ಸೇರ್ಪಡೆಯಾಗಲಿ, ನಮಗೆ ತಕರಾರಿಲ್ಲ. ಆದ್ರೆ ಈ ದೇಶ ನಡೆಯುತ್ತಿರುವುದು ಪಂಚಾಂಗದ ಮೇಲಲ್ಲ, ಸಂವಿಧಾನದ ಮೇಲೆ. ಹೊರಟ್ಟಿಯವರು ಪಕ್ಷದ್ರೋಹ ಮಾತ್ರವಲ್ಲ, ಸಂವಿಧಾನಕ್ಕೂ ದ್ರೋಹ ಬಗೆದಿದ್ದಾರೆ. ಸಂವಿಧಾನಕ್ಕೆ ಅಪಚಾರ ಮಾಡಿರುವ ಹೊರಟ್ಟಿಯವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಹೊರಟ್ಟಿಯವರ ನಡೆ ಸಂವಿಧಾನದ ಹತ್ತನೇ ಶೆಡ್ಯೂಲ್ ನ ಸ್ಪಷ್ಟ ಉಲ್ಲಂಘನೆ. ಸಂವಿಧಾನದ ಹತ್ತನೆಯ ಅನುಬಂಧದಲ್ಲಿ ಸೇರಿಸಲಾಗಿರುವಂತೆ ಪಕ್ಷಾಂತರ ನಿಷೇಧ ಕಾಯ್ದೆಯ 2(1)ನೇ ಪ್ಯಾರಾದಲ್ಲಿರುವ ವಿವರದ ಅನ್ವಯ, ಶಾಸನಸಭೆಯ ಸದಸ್ಯನೊಬ್ಬ ತನ್ನ ಪಕ್ಷದ ಸದಸ್ಯತ್ವವನ್ನು ‘ಸ್ವಇಚ್ಛೆಯಿಂದ ತೊರೆದರೆ’ ಅಥವಾ ಆತ ತನ್ನ ಪಕ್ಷ ನೀಡಿದ ಸೂಚನೆಗೆ ವಿರುದ್ಧವಾಗಿ ಮತ ಚಲಾಯಿಸಿದರೆ, ಮತದಾನದಿಂದ ದೂರ ಉಳಿದರೆ ಆತನನ್ನು ಅನರ್ಹಗೊಳಿಸಬಹುದು ಎಂದರು.
ಹೊರಟ್ಟಿಯವರು ಜೆಡಿಎಸ್ ಪಕ್ಷದ ಹಾಲಿ ಸದಸ್ಯರಾಗಿದ್ದು, ಬೇರೆ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬ ಹೇಳಿಕೆ ಕೊಟ್ಟಿರುವುದು ಪಕ್ಷಾಂತರ ಕಾಯ್ದೆಯ ಉಲ್ಲಂಘನೆ. ಇತ್ತೀಚೆಗೆ ರಾಜ್ಯಸಭೆಯಲ್ಲಿಯೂ ಕೂಡ ಸ್ಪೀಕರ್ ಅವರ ವಿವೇಚನಾಧಿಕಾರ ಬಳಸಿಕೊಂಡು ಹಿರಿಯ ಸದಸ್ಯರಾಗಿದ್ದ ಶರದ್ ಯಾದವ್ ಅವರನ್ನು ಸದಸ್ಯತ್ವದಿಂದ ಸ್ಪೀಕರ್ ವೆಂಕಯ್ಯ ನಾಯ್ಡು ಅವರು ತೆಗೆದು ಹಾಕಿದ್ದನ್ನ ನೋಡಿದ್ದೇನೆ. ಆಗ ರಾಜ್ಯಸಭಾ ಸದಸ್ಯನಾಗಿದ್ದ ನಾನೇ ಸಾಕ್ಷಿ ಎಂದು ಹೇಳಿದರು.
ಸಂವಿಧಾನದ ಮೌಲ್ಯವನ್ನೇ ಬುಡಮೇಲು ಮಾಡಲು ಹೊರಟಿರುವ ಬಿಜೆಪಿ ಪಕ್ಷಕ್ಕೆ ಬಸವರಾಜ್ ಹೊರಟ್ಟಿಯವರು ಸೇರ್ಪಡೆಯಾಗುತ್ತಿರುವುದು ದುರಾದೃಷ್ಟಕರ. ಬಿಜೆಪಿಯ ದಂಡಂ ದಶಗುಣಂ ನಿಯಮದನ್ವಯ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಅವರೇ ಹೇಳಿಕೆ ನಿಡಿದಂತೆ ಸೂಕ್ತ ಸ್ಥಾನಮಾನದ ಭರವಸೆ ನೀಡಿರುವುದರಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಹಾಗಾದ್ರೆ ಬಿಜೆಪಿಯವರ ಆಸೆ-ಆಮಿಷಗಳಿಗೆ ಒಳಪಟ್ಟು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸ್ಪಷ್ಟವಾದಂತೆ. ಹೊರಟ್ಟಿಯವರು ಆಪರೇಷನ್ ಕಮಲದ ಇನ್ನೊಂದು ವಿಕೆಟ್. ಸಾಂವಿಧಾನಿಕ ಪೀಠದಲ್ಲಿರುವ ವ್ಯಕ್ತಿಗಳನ್ನೂ ಆಸೆ ಆಮಿಷಗಳನ್ನೊಡ್ಡಿ ಪಕ್ಷಕ್ಕೆ ಬರಮಾಡಿಕೊಳ್ಳುತ್ತಿರುವ ಬಿಜೆಪಿ ಸಂವಿಧಾನಕ್ಕೆ ಮಾಡುತ್ತಿರುವ ಘನಘೋರ ಅಪರಾದ. ಹೊರಟ್ಟಿಯವರು ವಯಕ್ತಿಕವಾಗಿ ಕೂಡಲೇ ರಾಜೀನಾಮೆ ನೀಡಲಿದ್ದಾರೆ ಎಂಬ ವಿಸ್ವಾಸವಿದೆ ಎಂದರು.
ಪಿಎಸೈ ಅಕ್ರಮ ನೇಮಕಾತಿ ಹಗರಣ
ಪಿಎಸೈ ಅಕ್ರಮ ನೇಮಕಾತಿಯಲ್ಲಿ ಇಡೀ ಸರ್ಕಾರದ ಬಹುತೇಕ ಮಂತ್ರಿಗಳು ಭಾಗಿಯಾಗಿದ್ದಾರೆ. ಸಚಿವರು, ಶಾಸಕರುಗಳೇ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರಿಗೆ ಯಾರಿಗೂ ನೋಟೀಸ್ ನೀಡದೆ ನಮ್ಮ ಪಕ್ಷದ ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ನೋಟೀಸ್ ನೀಡಿರುವುದನ್ನ ಖಂಡಿಸುತ್ತೇನೆ ಎಂದರು.
ಸತ್ಯವನ್ನು ಎಲ್ಲಿ ಬೇಕಾದರೂ ಹೇಳಲು ನಾವು ಸಿದ್ದ, ಮೊದಲು ನಮ್ಮಿಂದ ತನಿಖೆ ಸಾಧ್ಯವಿಲ್ಲ ಎಂದ ರಾಜೀನಾಮೆ ಕೊಟ್ಟು ಬನ್ನಿ. ಗೃಹ ಸಚಿವ ಆರಗ ಜ್ಞಾನೇಂದ್ರ ಮೊದಲು ರಾಜೀನಾಮೆ ನೀಡಲಿ. ಸಚಿವ ಅಶ್ವತ್ಥ ನಾರಾಯಣ ಅವರ ಕುಟುಂಬಸ್ಥರು ಅಕ್ರಮ ಪಿಎಸೈ ನೇಮಕಾತಿಯಲ್ಲಿ ಇರುವುದು ಸತ್ಯ, ಇಡೀ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದೇ ಖ್ಯಾತಿ ಆಗಿದ್ದಾರೆ. ನೈತಿಕತೆ ಇದ್ರೆ ಅಶ್ವತ್ಥ ನಾರಾಯಣ ರಾಜೀನಾಮೆ ನೀಡಬೇಕು.
ಅಕ್ರಮ, ಹಗರಣಗಳನ್ನ ಮಾಡಿಯೇ ಬಿಜೆಪಿ ಇಂದು ದೇಶದಲ್ಲಿ ಅತಿದೊಡ್ಡ ಶ್ರೀಮಂತ ಪಕ್ಷವಾಗಿರುವುದು, ಹಾವಿನಪುರದ ಆರ್ ಎಸ್ ಎಸ್ ಅತಿದೊಡ್ಡ ಶ್ರೀಮಂತ ಎನ್ ಜಿ ವೋ ಆಗಿರುವುದು. ಸಾವಿರಾರು ಕೋಟಿ ಖರ್ಚು ಮಾಡಿ ದೆಹಲಿಯಲ್ಲಿ ಭವನಗಳನ್ನ ಕಟ್ಟಿಸಲಾಗ್ತಿದೆ. ಎಲ್ಲಿಂದ ಹಣ ಬರ್ತಿದೆ ಬಿಜೆಪಿಗೆ? ಹಗರಣಗಳನ್ನ, ಕಮಿಷನ್ ಹಣದಿಂದಲೇ ಪಕ್ಷ ನಡೆಸುತ್ತಿದ್ದಾರೆ. ಇಡೀ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಮ್ಮ ಹೋರಾಟ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಗೋಷ್ಠಿಯಲ್ಲಿ ವಿಧಾನ ಪರಿಷತ್ ಮುಖ್ಯಸಚೇತಕರಾದ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

