ದಿನದ ಸುದ್ದಿ
ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಸಂವಿಧಾನಕ್ಕೆ ಮಾಡಿದ ದ್ರೋಹ : ಬಿ ಕೆ ಹರಿಪ್ರಸಾದ್ ಕಿಡಿ

ಸುದ್ದಿದಿನ, ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನ ಸಾಂವಿಧಾನಿಕ ಹುದ್ದೆ. ಬಸವರಾಜ್ ಹೊರಟ್ಟಿಯವರು ಸಭಾಪತಿ ಸ್ಥಾನದಲ್ಲಿರುವಾಗಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆಂದು ಘೋಷಿಸಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ವಿಧಾನ ಸೌಧದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತಾಡಿದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಸಿದ್ದಾಂತ-ತತ್ವಕ್ಕೆ ಸರಿ ಹೊಂದುವ ರಾಜಕೀಯ ಪಕ್ಷವನ್ನ ಆಯ್ಕೆ ಮಾಡಿಕೊಳ್ಳುವ ಅಧಿಕಾರವಿದೆ. ಆದರೆ ಸಾಂವಿಧಾನಿಕ ಹುದ್ದೆಯಲ್ಲಿರುವವರು ಪಕ್ಷಾತೀತರಾಗಿರಬೇಕು, ಸಂವಿಧಾನಕ್ಕೆ ಅತೀತರಾಗಿರಬೇಕು. ಬಸವರಾಜ್ ಹೊರಟ್ಟಿಯವರು ಹಿರಿಯರು, ಅನುಭವ ಇರುವವರಿಂದ ಸಂವಿಧಾನ ವಿರೋಧಿ ನಡೆಯನ್ನ ನಾವು ನಿರೀಕ್ಷೆ ಮಾಡಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಇತ್ತೀಚೆಗೆ ಬಿಜೆಪಿ ಕೇಂದ್ರ ನಾಯಕ ಅಮಿತ್ ಶಾ ಅವರನ್ನ ವಯಕ್ತಿಕ ಭೇಟಿಯಾಗಿ ಬಿಜೆಪಿ ಸೇರ್ಪಡೆಯಾಗುವ ಮಾತುಕತೆ ನಡೆಸಿದ್ದಾರೆ. ನಂತರ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ಸೇರುವ ಮಾತುಗಳನ್ನ ಸ್ಪಷ್ಟಪಡಿಸಿದ್ದಾರೆ. ಈ ತಿಂಗಳಲ್ಲಿ ದಿನಾಂಕ, ಪಂಚಾಂಗ ನೋಡಿ ಬಿಜೆಪಿ ಸೇರ್ಪಡೆಯಾಗಲಿ, ನಮಗೆ ತಕರಾರಿಲ್ಲ. ಆದ್ರೆ ಈ ದೇಶ ನಡೆಯುತ್ತಿರುವುದು ಪಂಚಾಂಗದ ಮೇಲಲ್ಲ, ಸಂವಿಧಾನದ ಮೇಲೆ. ಹೊರಟ್ಟಿಯವರು ಪಕ್ಷದ್ರೋಹ ಮಾತ್ರವಲ್ಲ, ಸಂವಿಧಾನಕ್ಕೂ ದ್ರೋಹ ಬಗೆದಿದ್ದಾರೆ. ಸಂವಿಧಾನಕ್ಕೆ ಅಪಚಾರ ಮಾಡಿರುವ ಹೊರಟ್ಟಿಯವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಹೊರಟ್ಟಿಯವರ ನಡೆ ಸಂವಿಧಾನದ ಹತ್ತನೇ ಶೆಡ್ಯೂಲ್ ನ ಸ್ಪಷ್ಟ ಉಲ್ಲಂಘನೆ. ಸಂವಿಧಾನದ ಹತ್ತನೆಯ ಅನುಬಂಧದಲ್ಲಿ ಸೇರಿಸಲಾಗಿರುವಂತೆ ಪಕ್ಷಾಂತರ ನಿಷೇಧ ಕಾಯ್ದೆಯ 2(1)ನೇ ಪ್ಯಾರಾದಲ್ಲಿರುವ ವಿವರದ ಅನ್ವಯ, ಶಾಸನಸಭೆಯ ಸದಸ್ಯನೊಬ್ಬ ತನ್ನ ಪಕ್ಷದ ಸದಸ್ಯತ್ವವನ್ನು ‘ಸ್ವಇಚ್ಛೆಯಿಂದ ತೊರೆದರೆ’ ಅಥವಾ ಆತ ತನ್ನ ಪಕ್ಷ ನೀಡಿದ ಸೂಚನೆಗೆ ವಿರುದ್ಧವಾಗಿ ಮತ ಚಲಾಯಿಸಿದರೆ, ಮತದಾನದಿಂದ ದೂರ ಉಳಿದರೆ ಆತನನ್ನು ಅನರ್ಹಗೊಳಿಸಬಹುದು ಎಂದರು.
ಹೊರಟ್ಟಿಯವರು ಜೆಡಿಎಸ್ ಪಕ್ಷದ ಹಾಲಿ ಸದಸ್ಯರಾಗಿದ್ದು, ಬೇರೆ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬ ಹೇಳಿಕೆ ಕೊಟ್ಟಿರುವುದು ಪಕ್ಷಾಂತರ ಕಾಯ್ದೆಯ ಉಲ್ಲಂಘನೆ. ಇತ್ತೀಚೆಗೆ ರಾಜ್ಯಸಭೆಯಲ್ಲಿಯೂ ಕೂಡ ಸ್ಪೀಕರ್ ಅವರ ವಿವೇಚನಾಧಿಕಾರ ಬಳಸಿಕೊಂಡು ಹಿರಿಯ ಸದಸ್ಯರಾಗಿದ್ದ ಶರದ್ ಯಾದವ್ ಅವರನ್ನು ಸದಸ್ಯತ್ವದಿಂದ ಸ್ಪೀಕರ್ ವೆಂಕಯ್ಯ ನಾಯ್ಡು ಅವರು ತೆಗೆದು ಹಾಕಿದ್ದನ್ನ ನೋಡಿದ್ದೇನೆ. ಆಗ ರಾಜ್ಯಸಭಾ ಸದಸ್ಯನಾಗಿದ್ದ ನಾನೇ ಸಾಕ್ಷಿ ಎಂದು ಹೇಳಿದರು.
ಸಂವಿಧಾನದ ಮೌಲ್ಯವನ್ನೇ ಬುಡಮೇಲು ಮಾಡಲು ಹೊರಟಿರುವ ಬಿಜೆಪಿ ಪಕ್ಷಕ್ಕೆ ಬಸವರಾಜ್ ಹೊರಟ್ಟಿಯವರು ಸೇರ್ಪಡೆಯಾಗುತ್ತಿರುವುದು ದುರಾದೃಷ್ಟಕರ. ಬಿಜೆಪಿಯ ದಂಡಂ ದಶಗುಣಂ ನಿಯಮದನ್ವಯ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಅವರೇ ಹೇಳಿಕೆ ನಿಡಿದಂತೆ ಸೂಕ್ತ ಸ್ಥಾನಮಾನದ ಭರವಸೆ ನೀಡಿರುವುದರಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಹಾಗಾದ್ರೆ ಬಿಜೆಪಿಯವರ ಆಸೆ-ಆಮಿಷಗಳಿಗೆ ಒಳಪಟ್ಟು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸ್ಪಷ್ಟವಾದಂತೆ. ಹೊರಟ್ಟಿಯವರು ಆಪರೇಷನ್ ಕಮಲದ ಇನ್ನೊಂದು ವಿಕೆಟ್. ಸಾಂವಿಧಾನಿಕ ಪೀಠದಲ್ಲಿರುವ ವ್ಯಕ್ತಿಗಳನ್ನೂ ಆಸೆ ಆಮಿಷಗಳನ್ನೊಡ್ಡಿ ಪಕ್ಷಕ್ಕೆ ಬರಮಾಡಿಕೊಳ್ಳುತ್ತಿರುವ ಬಿಜೆಪಿ ಸಂವಿಧಾನಕ್ಕೆ ಮಾಡುತ್ತಿರುವ ಘನಘೋರ ಅಪರಾದ. ಹೊರಟ್ಟಿಯವರು ವಯಕ್ತಿಕವಾಗಿ ಕೂಡಲೇ ರಾಜೀನಾಮೆ ನೀಡಲಿದ್ದಾರೆ ಎಂಬ ವಿಸ್ವಾಸವಿದೆ ಎಂದರು.
ಪಿಎಸೈ ಅಕ್ರಮ ನೇಮಕಾತಿ ಹಗರಣ
ಪಿಎಸೈ ಅಕ್ರಮ ನೇಮಕಾತಿಯಲ್ಲಿ ಇಡೀ ಸರ್ಕಾರದ ಬಹುತೇಕ ಮಂತ್ರಿಗಳು ಭಾಗಿಯಾಗಿದ್ದಾರೆ. ಸಚಿವರು, ಶಾಸಕರುಗಳೇ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರಿಗೆ ಯಾರಿಗೂ ನೋಟೀಸ್ ನೀಡದೆ ನಮ್ಮ ಪಕ್ಷದ ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ನೋಟೀಸ್ ನೀಡಿರುವುದನ್ನ ಖಂಡಿಸುತ್ತೇನೆ ಎಂದರು.
ಸತ್ಯವನ್ನು ಎಲ್ಲಿ ಬೇಕಾದರೂ ಹೇಳಲು ನಾವು ಸಿದ್ದ, ಮೊದಲು ನಮ್ಮಿಂದ ತನಿಖೆ ಸಾಧ್ಯವಿಲ್ಲ ಎಂದ ರಾಜೀನಾಮೆ ಕೊಟ್ಟು ಬನ್ನಿ. ಗೃಹ ಸಚಿವ ಆರಗ ಜ್ಞಾನೇಂದ್ರ ಮೊದಲು ರಾಜೀನಾಮೆ ನೀಡಲಿ. ಸಚಿವ ಅಶ್ವತ್ಥ ನಾರಾಯಣ ಅವರ ಕುಟುಂಬಸ್ಥರು ಅಕ್ರಮ ಪಿಎಸೈ ನೇಮಕಾತಿಯಲ್ಲಿ ಇರುವುದು ಸತ್ಯ, ಇಡೀ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದೇ ಖ್ಯಾತಿ ಆಗಿದ್ದಾರೆ. ನೈತಿಕತೆ ಇದ್ರೆ ಅಶ್ವತ್ಥ ನಾರಾಯಣ ರಾಜೀನಾಮೆ ನೀಡಬೇಕು.
ಅಕ್ರಮ, ಹಗರಣಗಳನ್ನ ಮಾಡಿಯೇ ಬಿಜೆಪಿ ಇಂದು ದೇಶದಲ್ಲಿ ಅತಿದೊಡ್ಡ ಶ್ರೀಮಂತ ಪಕ್ಷವಾಗಿರುವುದು, ಹಾವಿನಪುರದ ಆರ್ ಎಸ್ ಎಸ್ ಅತಿದೊಡ್ಡ ಶ್ರೀಮಂತ ಎನ್ ಜಿ ವೋ ಆಗಿರುವುದು. ಸಾವಿರಾರು ಕೋಟಿ ಖರ್ಚು ಮಾಡಿ ದೆಹಲಿಯಲ್ಲಿ ಭವನಗಳನ್ನ ಕಟ್ಟಿಸಲಾಗ್ತಿದೆ. ಎಲ್ಲಿಂದ ಹಣ ಬರ್ತಿದೆ ಬಿಜೆಪಿಗೆ? ಹಗರಣಗಳನ್ನ, ಕಮಿಷನ್ ಹಣದಿಂದಲೇ ಪಕ್ಷ ನಡೆಸುತ್ತಿದ್ದಾರೆ. ಇಡೀ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಮ್ಮ ಹೋರಾಟ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಗೋಷ್ಠಿಯಲ್ಲಿ ವಿಧಾನ ಪರಿಷತ್ ಮುಖ್ಯಸಚೇತಕರಾದ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 1 ಸಾವಿರದ 350 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಸುದ್ದಿದಿನ,ದಾವಣಗೆರೆ:ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿಂದು 1 ಸಾವಿರದ 350 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ-ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಹಣ ಇಲ್ಲದಿದ್ದರೆ ಇಷ್ಟೊಂದು ಅಭಿವೃದ್ಧಿ ಮಾಡಲು ಸಾಧ್ಯವೇ ಎಂದು ಪ್ರಶ್ನಸಿದರು.
ರಾಜ್ಯದಲ್ಲಿ ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಲ-ಸಲ್ಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ಸುಮಾರು ₹1350 ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಇಲಾಖಾ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.
ದಾವಣಗೆರೆಯಲ್ಲಿ ನಡೆದ ಇಂದಿನ ಐತಿಹಾಸಿಕ ಕಾರ್ಯಕ್ರಮದಲ್ಲಿ ಉತ್ಸುಕದಿಂದ ಭಾಗಿಯಾಗಿದ್ದೇನೆ. ದಾವಣಗೆರೆ ಜಿಲ್ಲೆಯಲ್ಲಿ 6 ಶಾಸಕರು ಮತ್ತು ಒಬ್ಬ ಸಂಸದರನ್ನು ಆಯ್ಕೆ ಮಾಡಿ, ನಿಮ್ಮ ಸೇವೆಗೆ ಅವಕಾಶವನ್ನು ಮಾಡಿಕೊಟ್ಟಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದರು.
ನಿಮ್ಮೆಲ್ಲರ ಶಕ್ತಿಯಿಂದಾಗಿ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಇಡೀ ದೇಶಕ್ಕೆ ಸಂದೇಶವನ್ನು ಕಳುಹಿಸಿರುವುದು ನಮ್ಮ ಪುಣ್ಯ. ಬೆಲೆಯೇರಿಕೆಯಿಂದ ತತ್ತರಿಸಿದ ಸಾವಿರಾರು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಮೂಲಕ ನೆರವಾಗುತ್ತಿದ್ದೇವೆ. ಹಲವು ವರ್ಷಗಳಿಂದ ದಾಖಲೆ ಇಲ್ಲದೇ ಅಲೆಯುತ್ತಿದ್ದವರಿಗೆ ‘ಭೂ ಗ್ಯಾರಂಟಿ’ ಯೋಜನೆ ಕೊಟ್ಟಿದ್ದೇವೆ. ಕಂದಾಯ ಇಲಾಖೆ ಮೂಲಕ ದರಖಾಸ್ತು ಪೋಡಿ ವಿತರಣೆ ಮಾಡಿದ್ದೇವೆ. ಈ ಹಿಂದೆ ಯಾವುದೇ ಸರ್ಕಾರವು ಇಂತಹ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಗಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಯಾವಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆಯೋ ಆ ಸಂದರ್ಭದಲ್ಲಿ ಬಡವರ ಬದುಕು ಬದಲಾಯಿಸುವ ಕಾರ್ಯಕ್ರಮವನ್ನು ರೂಪಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.
ನಮ್ಮ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರು ಮತ್ತು ಅವರ ಕುಟುಂಬ ಒಂದು ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ನಾನು ಬಂದಾಗ ಯಾರು ಸಹಾಯ ಮಾಡುವವರು ಇರಲಿಲ್ಲ. ಬಿಜೆಪಿ ಸರ್ಕಾರವಿದ್ದರೂ ಸಹಾಯ ಮಾಡಲಿಲ್ಲ. ಆಗ ಅವರು 10 ಕೋಟಿ ರೂ. ಹಣವನ್ನು ಕೊಟ್ಟು ಲಸಿಕೆಯನ್ನು ದಾವಣಗೆರೆ ಜನರಿಗಾಗಿ ಹಂಚಿ ಮಾನವೀಯತೆ ಮೆರೆದಿದ್ದರು. ಅಂತಹ ಹೃದಯ ಶ್ರೀಮಂತಿಕೆ ಇರುವವರು ನಮ್ಮ ಶಾಮನೂರು ಶಿವಶಂಕರಪ್ಪನವರು. ಇಂದು ಅವರ 95ನೇ ಜನ್ಮೋತ್ಸವ ಸಂಭ್ರಮ ಆಚರಿಸಿದ್ದೇವೆ. ಅಂದಿನಿಂದ ಇಂದಿನವರೆಗೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರು ಹಲವು ಕ್ಷೇತ್ರದಲ್ಲಿ ಸಾಧನೆಗೈದು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯನ್ನು ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ4 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ
-
ಅಂಕಣ1 day ago
ಕವಿತೆ | ಅವ ಸುಡುತ್ತಾನೆ
-
ದಿನದ ಸುದ್ದಿ4 days ago
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ
-
ದಿನದ ಸುದ್ದಿ2 hours ago
ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್