ದಿನದ ಸುದ್ದಿ
ಬೆಳಗಿನ ಪ್ರಮುಖ ಸುದ್ದಿಗಳು
![](https://suddidina.com/wp-content/uploads/2022/05/suddidina_news_suddidina.jpg)
ಬೆಳಗಿನ ಪ್ರಮುಖ ಸುದ್ದಿಗಳು
- ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮುರವರ ಹೆಸರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಘೋಷಿಸಿದ್ದಾರೆ. ಒಡಿಸ್ಸಾದ ಮೊದಲ ಮಹಿಳಾ ಆದಿವಾಸಿ ನಾಯಕಿಯಾಗಿದ್ದ ದ್ರೌಪದಿ ಮುರ್ಮು, 2015 ರಿಂದ 2021ರವರೆಗೆ ಜಾರ್ಖಂಡ್ ರಾಜ್ಯದ ರಾಜ್ಯಪಾಲರಾಗಿದ್ದರು.
- ರಾಜ್ಯದ 57 ತಾಲ್ಲೂಕುಗಳಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯಡಿ ಹಾವೇರಿ ಜಿಲ್ಲೆಯ 7 ತಾಲ್ಲೂಕಿಗೆ 69 ಕೋಟಿ 45 ಲಕ್ಷ ರೂಪಾಯಿ ಅನುದಾನ ಬಂದಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
- ರಾಜ್ಯದಲ್ಲಿ ಪಠ್ಯಪುಸ್ತಕ ಲೋಪದೋಷ ಆರೋಪ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
- ಸಮೃದ್ಧ ಭಾರತದೊಂದಿಗೆ ಸ್ವಾಸ್ಥ್ಯ ಭಾರತ ನಿರ್ಮಾಣ ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ 1 ಲಕ್ಷ 50ಸಾವಿರ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸೂಖ್ ಮಾಂಡವೀಯ ಹೇಳಿದ್ದಾರೆ.
- ಮುಂದಿನ ನಾಲ್ಕು ತಿಂಗಳಲ್ಲಿ ದೇಶಾದ್ಯಂತ152 ಭೂಕಂಪ ಸಮೀಕ್ಷಾ ಕೇಂದ್ರ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
- ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಸ್ಟ್ರೇಲಿಯಾ ಉಪಪ್ರಧಾನಿ ಮತ್ತು ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಅವರೊಂದಿಗೆ ದೆಹಲಿಯಲ್ಲಿಂದು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ 2 ರಾಷ್ಟ್ರಗಳ ಬಾಂಧವ್ಯ ಮತ್ತು ಸಹಕಾರ ಬಲಪಡಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಯಲಿದೆ. ಪ್ರಾದೇಶಿಕ ಮತ್ತು ಜಾಗತಿಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.
- ಅಗ್ನಿಪಥ್ ಯೋಜನೆ ಕುರಿತು ತಪ್ಪು ಮಾಹಿತಿಯನ್ನು ಹರಡಲಾಗುತ್ತಿದ್ದು, ಸಮಾಜದಲ್ಲಿ ಹಿಂಸಾಚಾರ ನಡೆಸುವುದು ಸೂಕ್ತವಲ್ಲ. ಅಗ್ನಿಪಥ್ ಯೋಜನೆ ಕುರಿತ ಎಲ್ಲ ಸಂದೇಹಗಳನ್ನು ಬಗೆಹರಿಸಲಾಗುವುದು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋವಲ್ ಹೇಳಿದ್ದಾರೆ.
- ನೂತನವಾಗಿ ಜಾರಿಗೊಳಿಸಿರುವ ಅಗ್ನಿಪಥ್ ಯೋಜನೆಯ ಮೂಲಕ ಸೇನಾಪಡೆಗೆ ಅಗ್ನಿವೀರರ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕ, ಮುಕ್ತ ಮತ್ತು ವಸ್ತುನಿಷ್ಠವಾಗಿ ನಡೆಯಲಿದೆ ಎಂದು ಸರ್ಕಾರ ತಿಳಿಸಿದೆ. ಅಗ್ನಿವೀರ್ ನೇಮಕಾತಿಗೆ ಭೂಸೇನಾಪಡೆ ನಿನ್ನೆ ಅಧಿಸೂಚನೆ ಹೊರಡಿಸಿದ್ದು, ಭಾರತೀಯ ವಾಯುಪಡೆಯಲ್ಲಿ ನೇಮಕಾತಿ ಇದೇ 24 ರಿಂದ ಆರಂಭಗೊಳ್ಳಲಿದೆ. ಭೂಸೇನಾಪಡೆ ಮತ್ತು ನೌಕಾಪಡೆಗಳಲ್ಲಿ ಜುಲೈ 1 ರಿಂದ ನೋಂದಣಿ ಆರಂಭಗೊಳ್ಳಲಿದೆ.
- ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮುರವರ ಹೆಸರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಘೋಷಿಸಿದ್ದಾರೆ.
- ತುಂಗಭದ್ರಾ ಜಲಾಶಯದಿಂದ ವಿವಿಧ ಕಾರ್ಖಾನೆಗಳಿಗೆ ಪೂರೈಸಲಾಗುತ್ತಿರುವ ನೀರಿನ ಪ್ರಮಾಣದಲ್ಲಿ ನಿಖರತೆಯನ್ನು ಕಂಡುಕೊಳ್ಳಲು ಮೀಟರ್ ವ್ಯವಸ್ಥೆ ಅಳವಡಿಸಲಾಗುತ್ತಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
- ಹಿರಿಯ ನಾಗರಿಕರ ನಿಂದನೆ ತಡೆ ಜಾಗೃತಿ ದಿನವನ್ನು ಇಂದು ಬೆಳಿಗ್ಗೆ ಚಾಮರಾಜನಗರದಲ್ಲಿ ಆಯೋಜಿಸಲಾಗಿದ್ದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಉದ್ಘಾಟಿಸಲಿದ್ದಾರೆ.
- ನಾಳೆ ಮತ್ತು ನಾಡಿದ್ದು (23,24ರಂದು) ಆಯೋಜಿಸಲಾಗಿರುವ 14ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ವರ್ಚುವಲ್ ರೂಪದಲ್ಲಿ ಶೃಂಗಸಭೆ ನಡೆಯಲಿದ್ದು, ಈ ಬಾರಿ ಅತಿಥ್ಯ ರಾಷ್ಟ್ರವಾದ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಆಮಂತ್ರಣದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
- ಅಗ್ನಿಪಥ್ ಯೋಜನೆ ಮೂಲಕ ರೆಜಿಮೆಂಟ್ಗಳಿಗೆ ಭರ್ತಿ ಮಾಡುವ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸೇನಾ ವ್ಯವಹಾರಗಳ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ತಿಳಿಸಿದ್ದಾರೆ. ನೇಮಕಾತಿ ಕುರಿತು ವಿವರ ನೀಡಿರುವ ಅವರು, ಅಗ್ನಿಪಥ್ ಯೋಜನೆಯಿಂದ ಕಿರಿಯ ವಯಸ್ಸಿನ ಯುವಜನರು, ತಾಂತ್ರಿಕ ಕೌಶಲ್ಯ ಪಡೆದ ಹಾಗೂ ಎಲ್ಲ ಪರಿಸ್ಥಿತಿಗಳಿಗೆ ಸುಲಭವಾಗಿ ಹೊಂದಿಕೊಳ್ಳುವ ಪ್ರತಿಭೆಗಳು ಸೇನಾಪಡೆಗೆ ಸೇರ್ಪಡೆಯಾಗಲಿದ್ದಾರೆ. ನೇಮಕಾತಿ ಕುರಿತು ಅಭ್ಯರ್ಥಿಗಳಿಗೆ ನೆರವಾಗಲು ಸಹಾಯವಾಣಿ ಸಂಖ್ಯೆ 23013865ಆರಂಭಿಸಲಾಗಿದೆ ಎಂದು ವಿವರಿಸಿದರು.
- ದೇಶದಲ್ಲಿ ಅಸ್ತಿತ್ವದಲ್ಲಿ ಇಲ್ಲದ, ಗುರುತಿಸಲಾಗದ, ಆದರೆ ನೋಂದಾಯಿತ 111 ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ಕೈಬಿಡಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಈ ರಾಜಕೀಯ ಪಕ್ಷಗಳಿಗೆ ಅಧಿಕೃತ ಸಂಪರ್ಕ ವಿಳಾಸ ಅಥವಾ ಬದಲಾದ ವಿಳಾಸ ಮಾಹಿತಿ ನೀಡುವಂತೆ ಕಳೆದ ತಿಂಗಳು ಸೂಚಿಸಲಾಗಿತ್ತು. ಆದರೆ ಯಾವುದೇ ಮಾಹಿತಿ ನೀಡದ ಹಾಗೂ ಗುರುತಿಸಲಾಗದ ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
- ಐರ್ಲೆಂಡ್ನ ಡಬ್ಲಿನ್ನಲ್ಲಿ ನಡೆಯುತ್ತಿರುವ 5 ರಾಷ್ಟ್ರಗಳ 23 ವರ್ಷದೊಳಗಿನವರ ಮಹಿಳಾ ಜೂನಿಯರ್ ಹಾಕಿ ಪಂದ್ಯಾವಳಿಯಲ್ಲಿ ಭಾರತೀಯ ತಂಡ ಇಂದು ಉಕ್ರೇನ್ ವಿರುದ್ಧ ಸೆಣಸಲಿದೆ. ಭಾರತೀಯ ಕಾಲಮಾನ ಸಂಜೆ 5.30ಕ್ಕೆ ಪಂದ್ಯ ಆರಂಭಗೊಳ್ಳಲಿದೆ. ನಾಳೆ (ಗುರುವಾರ) ನಡೆಯಲಿರುವ ಪಂದ್ಯದಲ್ಲಿ ಭಾರತ-ಅಮೆರಿಕ ಸೆಣಸಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!