ದಿನದ ಸುದ್ದಿ
ಬೆಳಗಾವಿ ನಮ್ಮದಾಗಿದೆ, ನಮ್ಮದಾಗಿಯೇ ಇರಲಿದೆ : ಸಿದ್ದರಾಮಯ್ಯ
ಸುದ್ದಿದಿನ, ಬೆಂಗಳೂರು : 1948ರ ಜನವರಿ 30 ರಂದು ಮಹಾತ್ಮ ಗಾಂಧಿಯವರ ಹತ್ಯೆಯಾಯಿತು. ಅಂದಿನಿಂದ ಈ ದಿನವನ್ನು ಹುತಾತ್ಮ ದಿನವಾಗಿ ಆಚರಣೆ ಮಾಡಲಾಗುತ್ತಿದೆ. ಈ ಹುತಾತ್ಮ ದಿನದಂದು ಗಾಂಧೀಜಿಯವರನ್ನಷ್ಟೇ ಅಲ್ಲ, ದೇಶಕ್ಕಾಗಿ ತ್ಯಾಗ ಬಲಿದಾನಗೈದ ಪ್ರತಿಯೊಬ್ಬರನ್ನು ಸ್ಮರಿಸಿ, ಗೌರವಿಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 190ನೇ ಹುತಾತ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧಿಯವರಾಗಲೀ, ಸಂಗೊಳ್ಳಿ ರಾಯಣ್ಣನೇ ಆಗಲಿ ಅಧಿಕಾರದ ಆಸೆಗಾಗಿ, ಸ್ವಾರ್ಥ ಸಾಧನೆಗಾಗಿ ಹೋರಾಟ ಮಾಡಿದವರಲ್ಲ. ದೇಶವನ್ನು ಬ್ರಿಟಿಷರ ಅಧೀನದಿಂದ ಸ್ವತಂತ್ರಗೊಳಿಸಬೇಕು ಎಂಬ ಏಕೈಕ ಉದ್ದೇಶದೊಂದಿಗೆ ಹೋರಾಡಿದರು, ಹೋರಾಟದ ಹಾದಿಯಲ್ಲೇ ಪ್ರಾಣಾರ್ಪಣೆ ಮಾಡಿದರು ಎಂದರು.
ಸ್ವಾತಂತ್ರ್ಯ ಹೋರಾಟದ ರೀತಿಯಲ್ಲೆ ನೆಲ, ಜಲ, ಭಾಷೆಗಾಗಿ ಕನ್ನಡಪರ ಸಂಘಟನೆಗಳು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ. ನಾಡಿನ ಎಲ್ಲ ಕನ್ನಡಪರ ಸಂಘಟನೆಗಳಿಗೆ ನನ್ನ ಕೃತಜ್ಞತೆಗಳು. ರಾಯಣ್ಣನಂತಹ ನಾಡ ಪ್ರೇಮಿಗಳು ಇವರೆಲ್ಲರ ಹೋರಾಟಕ್ಕೆ ಇನ್ನಷ್ಟು ಸ್ಪೂರ್ತಿಯಾಗಲಿ ಎಂದು ಆಶಿಸುತ್ತೇನೆ.
ತಮ್ಮ ರಾಜಕೀಯ ಉಳಿವಿಗಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಪ್ರಸಂಗತನದ ಮಾತುಗಳನ್ನು ಆಡುತ್ತಾರೆ. ಮಹಾಜನ್ ವರದಿಯ ಪ್ರಕಾರ ಬೆಳಗಾವಿ ನಮ್ಮದಾಗಿದೆ, ನಮ್ಮದಾಗಿಯೇ ಇರಲಿದೆ. ಒಮ್ಮೆ ಇತ್ಯರ್ಥವಾದ ವಿಚಾರವನ್ನು ಮತ್ತೆ ವಿವಾದ ಮಾಡಲು ಯತ್ನಿಸಿದರೆ ಅದು ಖಂಡನೀಯ ಎಂದು ಕಿಡಿಕಾರಿದರು.
1983ರಲ್ಲಿ ನಾನು ಪಕ್ಷೇತರ ಶಾಸಕನಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದೆ, ಅಂದಿನ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆಯವರು ಕನ್ನಡ ಕಾವಲು ಸಮಿತಿಯನ್ನು ರಚನೆ ಮಾಡಿ, ಆ ಸಮಿತಿಯ ಪ್ರಥಮ ಅಧ್ಯಕ್ಷನಾಗಿ ನನ್ನನ್ನು ನೇಮಕ ಮಾಡಿದ್ದರು. ಒಂದು ವರ್ಷಕ್ಕೂ ಹೆಚ್ಚು ಕಾಲ ರಾಜ್ಯಾದ್ಯಂತ ಸಂಚರಿಸಿ, ಸಾಕಷ್ಟು ಕೆಲಸ ಮಾಡಿದ್ದೆ.
ಮಾತೃಭಾಷೆಯ ಬಗ್ಗೆ ಅಭಿಮಾನವಿರಬೇಕೇ ಹೊರತು ದುರಾಭಿಮಾನವಿರಬಾರದು. ಕನ್ನಡಿಗರಲ್ಲಿ ಸ್ವಲ್ಪ ಔದಾರ್ಯ ಗುಣ ಹೆಚ್ಚು, ಹೀಗಾಗಿಯೇ ಇಲ್ಲಿರುವ ತಮಿಳರ ಜೊತೆ ತಮಿಳಲ್ಲಿ, ಹಿಂದಿ ಮಾತನಾಡುವವರ ಜೊತೆ ಕನ್ನಡಿಗರಾದ ನಾವೇ ಹಿಂದಿಯಲ್ಲಿ ವ್ಯವಹರಿಸುತ್ತೇವೆ. ಇದರಿಂದ ನಷ್ಟವಾಗುತ್ತಿರುವುದು ಕನ್ನಡ ಭಾಷೆಗೆ ಎಂಬುದನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕು ಎಂದರು.
ಕನ್ನಡ ನಾಡಿನಲ್ಲಿ ವಾಸ ಮಾಡುತ್ತಿರುವ ಪ್ರತಿಯೊಬ್ಬನು ಕನ್ನಡಿಗನೆ. ಯಾರೆಲ್ಲ ಹೊರ ರಾಜ್ಯಗಳಿಂದ ಬಂದು ಇಲ್ಲಿ ನೆಲೆ ನಿಂತಿದ್ದಾರೆ, ಅವರು ಕನ್ನಡ ಕಲಿಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣ ಮಾಡಿದಾಗ ಮಾತ್ರ ಭಾಷೆಯ ಬಳಕೆ ಹೆಚ್ಚಾಗಲಿದೆ. ಭಾಷೆಯೊಂದು ಹೆಚ್ಚೆಚ್ಚು ಬಳಕೆಯಾದಾಗ ಮಾತ್ರ ಬೆಳೆಯಲು ಸಾಧ್ಯ.
ಕಿತ್ತೂರು ಸಂಸ್ಥಾನದ ಸೈನ್ಯದಲ್ಲಿ ಒಬ್ಬ ಸಾಮಾನ್ಯ ಸೈನಿಕನಾಗಿದ್ದ ಸಂಗೊಳ್ಳಿ ರಾಯಣ್ಣ, ಇಂದು ಮಹಾನ್ ವ್ಯಕ್ತಿಯಾಗಿ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯಲು ಆತನಲ್ಲಿದ್ದ ದೇಶಪ್ರೇಮ, ಸ್ವಾಮಿನಿಷ್ಠೆ ಕಾರಣ. ಅವರ ತ್ಯಾಗ, ಬಲಿದಾನವನ್ನು ಈ ದಿನ ನಾವೆಲ್ಲ ಅತ್ಯಂತ ಗೌರವದಿಂದ ಸ್ಮರಿಸೋಣ.
ರಾಯಣ್ಣನಂತೆ ಸಾಕಷ್ಟು ಮಂದಿ ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಅವರೆಲ್ಲರನ್ನು ಸಮಾನವಾಗಿ ಗೌರವಿಸಬೇಕು. ಅದು ಗಾಂಧೀಜಿಯಿರಲೀ, ಭಗತ್ ಸಿಂಗ್ ಇರಲೀ, ಟಿಪ್ಪು ಸುಲ್ತಾನನಿರಲಿ. ಇತಿಹಾಸವನ್ನು ಇತಿಹಾಸವಾಗಿ ನೋಡಬೇಕೇ ವಿನಃ ಧರ್ಮದ ಕನ್ನಡಕದಿಂದಲ್ಲ. ಇತಿಹಾಸ ತಿರುಚುವ ಪ್ರಯತ್ನ ಮಾಡಿದರೆ ಅದು ದೇಶದ್ರೋಹವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧರ್ಮವೆಂದರೆ ವ್ಯಕ್ತಿಯೊಬ್ಬನ ಜೀವನಶೈಲಿ. ಇನ್ನೊಬ್ಬರಿಗೆ ಕೇಡು ಬಯಸದಿರುವುದೇ ನಿಜವಾದ ಧರ್ಮ.
ಹುಟ್ಟುತ್ತಾ ಪ್ರತಿ ಮಗುವು ವಿಶ್ವಮಾನವನಾಗಿಯೇ ಹುಟ್ಟುತ್ತದೆ,
ಬೆಳೆಯುತ್ತಾ ಸಮಾಜ ಆತನನ್ನು ಅಲ್ಪಮಾನವನಾಗಿಸುತ್ತದೆ ಎಂದು ಕುವೆಂಪು ಹೇಳಿದ್ದಾರೆ. ಹಾಗಾಗಿ ನಮ್ಮೆಲ್ಲರ ಪ್ರಯತ್ನ ಸದಾ ವಿಶ್ವಮಾನವತ್ವದ ಕಡೆಗೆ ಇರಬೇಕು.
ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹಾತ್ಮ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ, ಸಂಗೊಳ್ಳಿ ರಾಯಣ್ಣ ಮುಂತಾದವರಿಂದ ಸ್ಪೂರ್ತಿ ಪಡೆದು, ಅವರು ಸಾಗಿದ ಹಾದಿಯಲ್ಲಿ ನಾವು ಸಾಗಬೇಕು. ಅದು ಮಹಾನ್ ವ್ಯಕ್ತಿಗಳಿಗೆ ನಾವು ಸಲ್ಲಿಸುವ ನಿಜವಾದ ಗೌರವವಾಗುತ್ತದೆ ಎಂದರು
ಈ ವೇಳೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕ.ರಾ.ವೇ ಯ ಅಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ3 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

