Connect with us

ದಿನದ ಸುದ್ದಿ

ಬೆಳಗಾವಿ ನಮ್ಮದಾಗಿದೆ, ನಮ್ಮದಾಗಿಯೇ ಇರಲಿದೆ : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : 1948ರ ಜನವರಿ 30 ರಂದು ಮಹಾತ್ಮ ಗಾಂಧಿಯವರ ಹತ್ಯೆಯಾಯಿತು. ಅಂದಿನಿಂದ ಈ ದಿನವನ್ನು ಹುತಾತ್ಮ ದಿನವಾಗಿ ಆಚರಣೆ ಮಾಡಲಾಗುತ್ತಿದೆ. ಈ ಹುತಾತ್ಮ ದಿನದಂದು ಗಾಂಧೀಜಿಯವರನ್ನಷ್ಟೇ ಅಲ್ಲ, ದೇಶಕ್ಕಾಗಿ ತ್ಯಾಗ ಬಲಿದಾನಗೈದ ಪ್ರತಿಯೊಬ್ಬರನ್ನು ಸ್ಮರಿಸಿ, ಗೌರವಿಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 190ನೇ ಹುತಾತ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧಿಯವರಾಗಲೀ, ಸಂಗೊಳ್ಳಿ ರಾಯಣ್ಣನೇ ಆಗಲಿ ಅಧಿಕಾರದ ಆಸೆಗಾಗಿ, ಸ್ವಾರ್ಥ ಸಾಧನೆಗಾಗಿ ಹೋರಾಟ ಮಾಡಿದವರಲ್ಲ. ದೇಶವನ್ನು ಬ್ರಿಟಿಷರ ಅಧೀನದಿಂದ ಸ್ವತಂತ್ರಗೊಳಿಸಬೇಕು ಎಂಬ ಏಕೈಕ ಉದ್ದೇಶದೊಂದಿಗೆ ಹೋರಾಡಿದರು, ಹೋರಾಟದ ಹಾದಿಯಲ್ಲೇ ಪ್ರಾಣಾರ್ಪಣೆ ಮಾಡಿದರು ಎಂದರು.

ಸ್ವಾತಂತ್ರ್ಯ ಹೋರಾಟದ ರೀತಿಯಲ್ಲೆ ನೆಲ, ಜಲ, ಭಾಷೆಗಾಗಿ ಕನ್ನಡಪರ ಸಂಘಟನೆಗಳು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ. ನಾಡಿನ ಎಲ್ಲ ಕನ್ನಡಪರ ಸಂಘಟನೆಗಳಿಗೆ ನನ್ನ ಕೃತಜ್ಞತೆಗಳು. ರಾಯಣ್ಣನಂತಹ ನಾಡ ಪ್ರೇಮಿಗಳು ಇವರೆಲ್ಲರ ಹೋರಾಟಕ್ಕೆ ಇನ್ನಷ್ಟು ಸ್ಪೂರ್ತಿಯಾಗಲಿ ಎಂದು ಆಶಿಸುತ್ತೇನೆ.

ತಮ್ಮ ರಾಜಕೀಯ ಉಳಿವಿಗಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಪ್ರಸಂಗತನದ ಮಾತುಗಳನ್ನು ಆಡುತ್ತಾರೆ. ಮಹಾಜನ್ ವರದಿಯ ಪ್ರಕಾರ ಬೆಳಗಾವಿ ನಮ್ಮದಾಗಿದೆ, ನಮ್ಮದಾಗಿಯೇ ಇರಲಿದೆ. ಒಮ್ಮೆ ಇತ್ಯರ್ಥವಾದ ವಿಚಾರವನ್ನು ಮತ್ತೆ ವಿವಾದ ಮಾಡಲು ಯತ್ನಿಸಿದರೆ ಅದು ಖಂಡನೀಯ ಎಂದು ಕಿಡಿಕಾರಿದರು.

1983ರಲ್ಲಿ ನಾನು ಪಕ್ಷೇತರ ಶಾಸಕನಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದೆ, ಅಂದಿನ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆಯವರು ಕನ್ನಡ ಕಾವಲು ಸಮಿತಿಯನ್ನು ರಚನೆ ಮಾಡಿ, ಆ ಸಮಿತಿಯ ಪ್ರಥಮ ಅಧ್ಯಕ್ಷನಾಗಿ ನನ್ನನ್ನು ನೇಮಕ ಮಾಡಿದ್ದರು. ಒಂದು ವರ್ಷಕ್ಕೂ ಹೆಚ್ಚು ಕಾಲ ರಾಜ್ಯಾದ್ಯಂತ ಸಂಚರಿಸಿ, ಸಾಕಷ್ಟು ಕೆಲಸ ಮಾಡಿದ್ದೆ.

ಮಾತೃಭಾಷೆಯ ಬಗ್ಗೆ ಅಭಿಮಾನವಿರಬೇಕೇ ಹೊರತು ದುರಾಭಿಮಾನವಿರಬಾರದು. ಕನ್ನಡಿಗರಲ್ಲಿ ಸ್ವಲ್ಪ ಔದಾರ್ಯ ಗುಣ ಹೆಚ್ಚು, ಹೀಗಾಗಿಯೇ ಇಲ್ಲಿರುವ ತಮಿಳರ ಜೊತೆ ತಮಿಳಲ್ಲಿ, ಹಿಂದಿ ಮಾತನಾಡುವವರ ಜೊತೆ ಕನ್ನಡಿಗರಾದ ನಾವೇ ಹಿಂದಿಯಲ್ಲಿ ವ್ಯವಹರಿಸುತ್ತೇವೆ. ಇದರಿಂದ ನಷ್ಟವಾಗುತ್ತಿರುವುದು ಕನ್ನಡ ಭಾಷೆಗೆ ಎಂಬುದನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕು‌ ಎಂದರು.

ಕನ್ನಡ ನಾಡಿನಲ್ಲಿ ವಾಸ ಮಾಡುತ್ತಿರುವ ಪ್ರತಿಯೊಬ್ಬನು ಕನ್ನಡಿಗನೆ. ಯಾರೆಲ್ಲ ಹೊರ ರಾಜ್ಯಗಳಿಂದ ಬಂದು ಇಲ್ಲಿ ನೆಲೆ ನಿಂತಿದ್ದಾರೆ, ಅವರು ಕನ್ನಡ ಕಲಿಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣ ಮಾಡಿದಾಗ ಮಾತ್ರ ಭಾಷೆಯ ಬಳಕೆ ಹೆಚ್ಚಾಗಲಿದೆ. ಭಾಷೆಯೊಂದು ಹೆಚ್ಚೆಚ್ಚು ಬಳಕೆಯಾದಾಗ ಮಾತ್ರ ಬೆಳೆಯಲು ಸಾಧ್ಯ.

ಕಿತ್ತೂರು ಸಂಸ್ಥಾನದ ಸೈನ್ಯದಲ್ಲಿ ಒಬ್ಬ ಸಾಮಾನ್ಯ ಸೈನಿಕನಾಗಿದ್ದ ಸಂಗೊಳ್ಳಿ ರಾಯಣ್ಣ, ಇಂದು ಮಹಾನ್ ವ್ಯಕ್ತಿಯಾಗಿ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯಲು ಆತನಲ್ಲಿದ್ದ ದೇಶಪ್ರೇಮ, ಸ್ವಾಮಿನಿಷ್ಠೆ ಕಾರಣ. ಅವರ ತ್ಯಾಗ, ಬಲಿದಾನವನ್ನು ಈ ದಿನ ನಾವೆಲ್ಲ ಅತ್ಯಂತ ಗೌರವದಿಂದ ಸ್ಮರಿಸೋಣ.

ರಾಯಣ್ಣನಂತೆ ಸಾಕಷ್ಟು ಮಂದಿ ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಅವರೆಲ್ಲರನ್ನು ಸಮಾನವಾಗಿ ಗೌರವಿಸಬೇಕು. ಅದು ಗಾಂಧೀಜಿಯಿರಲೀ, ಭಗತ್ ಸಿಂಗ್ ಇರಲೀ, ಟಿಪ್ಪು ಸುಲ್ತಾನನಿರಲಿ. ಇತಿಹಾಸವನ್ನು ಇತಿಹಾಸವಾಗಿ ನೋಡಬೇಕೇ ವಿನಃ ಧರ್ಮದ ಕನ್ನಡಕದಿಂದಲ್ಲ. ಇತಿಹಾಸ ತಿರುಚುವ ಪ್ರಯತ್ನ ಮಾಡಿದರೆ ಅದು ದೇಶದ್ರೋಹವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರ್ಮವೆಂದರೆ ವ್ಯಕ್ತಿಯೊಬ್ಬನ ಜೀವನಶೈಲಿ. ಇನ್ನೊಬ್ಬರಿಗೆ ಕೇಡು ಬಯಸದಿರುವುದೇ ನಿಜವಾದ ಧರ್ಮ.
ಹುಟ್ಟುತ್ತಾ ಪ್ರತಿ ಮಗುವು ವಿಶ್ವಮಾನವನಾಗಿಯೇ ಹುಟ್ಟುತ್ತದೆ,
ಬೆಳೆಯುತ್ತಾ ಸಮಾಜ ಆತನನ್ನು ಅಲ್ಪಮಾನವನಾಗಿಸುತ್ತದೆ ಎಂದು ಕುವೆಂಪು ಹೇಳಿದ್ದಾರೆ. ಹಾಗಾಗಿ ನಮ್ಮೆಲ್ಲರ ಪ್ರಯತ್ನ ಸದಾ ವಿಶ್ವಮಾನವತ್ವದ ಕಡೆಗೆ ಇರಬೇಕು.

ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹಾತ್ಮ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ, ಸಂಗೊಳ್ಳಿ ರಾಯಣ್ಣ ಮುಂತಾದವರಿಂದ ಸ್ಪೂರ್ತಿ ಪಡೆದು, ಅವರು ಸಾಗಿದ ಹಾದಿಯಲ್ಲಿ ನಾವು ಸಾಗಬೇಕು. ಅದು ಮಹಾನ್ ವ್ಯಕ್ತಿಗಳಿಗೆ ನಾವು ಸಲ್ಲಿಸುವ ನಿಜವಾದ ಗೌರವವಾಗುತ್ತದೆ‌ ಎಂದರು

ಈ ವೇಳೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕ.ರಾ.ವೇ ಯ ಅಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending