ದಿನದ ಸುದ್ದಿ
ಬಳ್ಳಾರಿ | ಶಕ್ತಿ ಯೋಜನೆಯಡಿ 4.52 ಕೋಟಿ ಮಹಿಳೆಯರ ಪ್ರಯಾಣ

ಸುದ್ದಿದಿನ,ಬಳ್ಳಾರಿ:ರಾಜ್ಯದ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಯಡಿ ಮಹಿಳಾ ವಯಸ್ಕರು ಮತ್ತು ಹೆಣ್ಣು ಮಕ್ಕಳು ಒಳಗೊಂಡು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ನಗರ ಸಾರಿಗೆ ಮತ್ತು ಸಾಮಾನ್ಯ ಬಸ್ಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುತ್ತಿದ್ದು, ಈ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೆ (ಮಾರ್ಚ್ ವರೆಗೆ) 4,52,37,755 ಮಹಿಳೆಯರು ಉಚಿತ ಪ್ರಯಾಣದ ಪ್ರಯೋಜನ ಪಡೆದಿದ್ದಾರೆ.
ಶಕ್ತಿ ಯೋಜನೆಯ ಜಾರಿಯಾದ ನಂತರ ಜಿಲ್ಲೆಯಲ್ಲಿ ಮಹಿಳಾ ವಯಸ್ಕರು ಮತ್ತು ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣದ ಒಟ್ಟು ರೂ.167,99,61,992 ಮೊತ್ತದ ಉಚಿತ ಟಿಕೆಟ್ಗಳನ್ನು ವಿತರಣೆ ಮಾಡಲಾಗಿದ್ದು, ಈ ಮೊತ್ತವು ಬಳ್ಳಾರಿ ವಿಭಾಗಕ್ಕೆ ಪ್ರಮುಖ ಆದಾಯವಾಗಿದೆ.
ಜಿಲ್ಲೆಯಲ್ಲಿ ಬಳ್ಳಾರಿ-1, ಬಳ್ಳಾರಿ-2, ಬಳ್ಳಾರಿ-3, ಸಿರುಗುಪ್ಪ, ಕುರುಗೋಡು ಮತ್ತು ಸಂಡೂರು ವಿಭಾಗಗಳಿವೆ. ಶಕ್ತಿ ಯೋಜನೆಯಡಿ ಇದುವರೆಗೆ (ಮಾರ್ಚ್ ಅಂತ್ಯದವರೆಗೆ) ಬಳ್ಳಾರಿ-1 ವಿಭಾಗದಲ್ಲಿ 73,55,413 ಮಹಿಳಾ ಪ್ರಯಾಣಿಕರು ಸಂಚಾರ ಮಾಡಿದ್ದು, ಒಟ್ಟು 30,92,36,224 ರೂ. ಮೊತ್ತದ ಟಿಕೇಟ್ ವಿತರಣೆ ಮಾಡಲಾಗಿದೆ. ಬಳ್ಳಾರಿ-2 ವಿಭಾಗದಲ್ಲಿ 71,14,913 ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, 37,89,38,056 ರೂ. ಮೊತ್ತದ ಟಿಕೇಟ್ ವಿತರಣೆ ಮಾಡಲಾಗಿದೆ.
ಅದೇರೀತಿಯಾಗಿ ಬಳ್ಳಾರಿ-3 ವಿಭಾಗದಲ್ಲಿ 1,05,56,205 ಮಹಿಳಾ ಪ್ರಯಾಣಿಕರು ಸಂಚರಿಸಿದರೆ ಒಟ್ಟು 18,39,41,365 ರೂ. ಮೊತ್ತದ ಟಿಕೇಟ್ ನೀಡಲಾಗಿದೆ. ಸಿರುಗುಪ್ಪ ವಿಭಾಗದ ವ್ಯಾಪ್ತಿಯಲ್ಲಿ 74,18,672 ಮಂದಿ ಮಹಿಳೆಯರು ಸಂಚರಿಸಿದರೆ 31,05,36,366 ರೂ. ಮೊತ್ತದ ಟಿಕೇಟ್ ನೀಡಲಾಗಿದೆ. ಉಳಿದಂತೆ ಕುರುಗೋಡು ವಿಭಾಗದಲ್ಲಿ 43,73,244 ಮಹಿಳಾ ಪ್ರಯಾಣಿಕರು ಸಂಚರಿಸಿದರೆ ರೂ.18,56,36,676 ಮೊತ್ತದ ಟಿಕೇಟ್ ಮತ್ತು ಸಂಡೂರು ವಿಭಾಗದಲ್ಲಿ ಸಂಚರಿಸಿದ 84,19,308 ಮಹಿಳಾ ಪ್ರಯಾಣಿಕರಿಗೆ ರೂ.31,16,73,305 ಮೊತ್ತದ ಟಿಕೇಟ್ ವಿತರಿಸಲಾಗಿದೆ ಎಂದು ನಿಗಮದ ಅಧಿಕಾರಿಗಳು ಹೇಳುತ್ತಾರೆ.
ಶಕ್ತಿ ಯೋಜನೆಯ ಮೂಲಕ ಮಹಿಳೆಯರು ದೂರದ ಪಟ್ಟಣಗಳಿಗೆ ತೆರಳಿ ಹೆಚ್ಚಿನ ಆದಾಯದ ಉದ್ಯೋಗ ಹೊಂದಲು ಸಹಕಾರಿಯಾಗಿರುವುದು ಮಾತ್ರವಲ್ಲದೇ ಹೆಚ್ಚಿನ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರಿಗೆ ತಮ್ಮ ಭವಿಷ್ಯದ ಕನಸುಗಳನ್ನು ನನಸು ಮಾಡಿಕೊಳ್ಳುವ ಅವಕಾಶವೂ ಆಗಿದೆ.
ಅಲ್ಲದೇ ಮಹಿಳೆಯರು ಉದ್ಯೋಗ, ಪ್ರವಾಸ ಮತ್ತಿತರ ಚಟುವಟಿಕೆಗಳನ್ನು ಕೈಗೊಳ್ಳುವುದಕ್ಕೆ ಅನುಕೂಲವಾಗಿರುವುದರ ಜೊತೆಗೆ ಈ ಪ್ರಯಾಣ ವೆಚ್ಚದ ಉಳಿತಾಯದ ಮೊತ್ತವು ದೈನಂದಿನ ಬದುಕಿನಲ್ಲಿನ ಹಲವು ಅವಶ್ಯಕತೆಗಳನ್ನು ಪೂರೈಸಲು ನೆರವಾಗಿದೆ.
ಉಚಿತ ಪ್ರಯಾಣದ ಮೊದಲು ಸಾರಿಗೆಗಾಗಿ ಮಾಡುತ್ತಿದ್ದ ವೆಚ್ಚದ ಮೊತ್ತವು ವಿದ್ಯಾರ್ಥಿನಿಯರಿಗೆ ಕಾಲೇಜಿನ ಶುಲ್ಕ ಭರಿಸಲು, ಪಠ್ಯ ಪುಸ್ತಕ ಖರೀದಿಸಲು ನೆರವಾಗಿದ್ದರೆ, ರಾಜ್ಯದ ಬೇರೆ ಜಿಲ್ಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮತ್ತು ಖಾಸಗಿ ಉದ್ಯೋಗದಲ್ಲಿರುವ ಮಹಿಳೆಯರು ತಮ್ಮ ಕುಟುಂಬಗಳನ್ನು ಮತ್ತು ಪೋಷಕರು ತಮ್ಮ ಮಕ್ಕಳನ್ನು ನಿರಂತರವಾಗಿ ಭೇಟಿ ಮಾಡಿ ನೆಮ್ಮದಿಯ ಜೀವನ ಸಾಗಿಸಲು ನೆರವಾಗಿದೆ.
‘ದುಡಿಮೆಗಾಗಿ ನಿತ್ಯ ಬಸ್ಗಳಲ್ಲಿ ಸಂಚರಿಸುವ ಕಾರ್ಮಿಕ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯದಿಂದ ಅನುಕೂಲವಾಗಿದೆ. ಮಹಿಳಾ ಸಬಲೀಕರಣಕ್ಕೆ ಈ ಯೋಜನೆ ‘ಶಕ್ತಿ’ ತುಂಬಿದೆ.
| ಕಾವೇರಿ, ಕರ್ಚೇಡು ಗ್ರಾಮ, ಬಳ್ಳಾರಿ ತಾಲ್ಲೂಕು
“ಶಕ್ತಿ ಯೋಜನೆಯ ಉಚಿತ ಪ್ರಯಾಣದಿಂದಾಗಿ ನನಗೆ ಸಾಕಷ್ಟು ಅನುಕೂಲವಾಗಿದೆ. ನಾನು ಸಂಚರಿಸುವ ನನ್ನ ಪ್ರಯಾಣದ ವೆಚ್ಚ ಉಳಿತಾಯವಾಗಿದೆ. ಅದೇ ಹಣವನ್ನು ಪುಸ್ತಕಗಳನ್ನು ಖರೀದಿಸಲು ಬಳಸಿಕೊಳ್ಳುತ್ತಿದ್ದೇನೆ.”
| ಮಣಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ, ತೆಗ್ಗಿನ ಬೂದಿಹಾಳ್ ಗ್ರಾಮ, ಬಳ್ಳಾರಿ ತಾಲ್ಲೂಕು
ಶಕ್ತಿ ಯೋಜನೆಯಿಂದಾಗಿ ಸಾರಿಗೆ ನಿಗಮದ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಈ ಹಿಂದೆ ಓಡಾಟ ನಡೆಸುತ್ತಿದ್ದ ಮಾರ್ಗದ ಬಸ್ಗಳಲ್ಲಿ ಮೊದಲಿಗಿಂತ ಹೆಚ್ಚಿನ ಆದಾಯ ಬರುತ್ತಿದೆ, ಇದು ನಿಗಮಕ್ಕೆ ಲಾಭದಾಯಕವಾಗಿದೆ. ಶಕ್ತಿ ಯೋಜನೆಯಿಂದಾಗಿ ನಿಗಮದ ಮೂಲಕ ಮಹಿಳಾ ಪ್ರಯಾಣಿಕರಿಗೆ, ಜಿಲ್ಲೆಯ ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ಉತ್ತಮ ಸೇವೆ ನೀಡಲು ಸಾಧ್ಯವಾಗಿದೆ ಎಂದು ವಿಭಾಗೀಯ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ20 hours ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ19 hours ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ19 hours ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ20 hours ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ19 hours ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ