Connect with us

ದಿನದ ಸುದ್ದಿ

ಬಳ್ಳಾರಿ | ಸೊಂಕಿತರ ಸಂಖ್ಯೆ 181ಕ್ಕೇರಿಕೆ : ಟಿಬಿ ಡ್ಯಾಂ ಸಿಪಿಐ ಸೇರಿ 6ಜನ ಡಿಸ್ಚಾರ್ಜ್

Published

on

ಸುದ್ದಿದಿನ,ಬಳ್ಳಾರಿ : ಬಳ್ಳಾರಿಯಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದ‌ ಹಿನ್ನೆಲೆ ತುಂಗಾಭದ್ರಾ ಡ್ಯಾಂ‌ ಸಿಪಿಐ ಸೇರಿದಂತೆ 6ಜನರನ್ನು ಕೋವಿಡ್ ಆಸ್ಪತ್ರೆಯಿಂದ ಶನಿವಾರ ಸಂಜೆ ಬಿಡುಗಡೆ ಮಾಡಲಾಯಿತು.

ಬಳ್ಳಾರಿ ಜಿಲ್ಲೆಯಲ್ಲಿ 11 ಕೊರೊನಾ ಸೊಂಕು ದೃಢಪಟ್ಟಿರುವುದು ಸೇರಿದಂತೆ ಕೋವಿಡ್ ಸೊಂಕಿತರ ಸಂಖ್ಯೆ 181ಕ್ಕೇರಿದೆ. ಅವರಲ್ಲಿ ಈ 6ಜನ ಬಿಡುಗಡೆಯಾದವರು ಸೇರಿ ಇದುವರೆಗೆ 55ಜನರು ಬಿಡುಗಡೆಯಾದಂತಾಗಿದೆ. ಓರ್ವ ಸಾವನ್ನಪ್ಪಿದ್ದು,125ಪ್ರಕರಣಗಳು ಸಕ್ರಿಯವಾಗಿದ್ದು,ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಈ ಒಟ್ಟು ಪ್ರಕರಣಗಳಲ್ಲಿ ಜಿಂದಾಲ್ ಸಿಬ್ಬಂದಿ ಹಾಗೂ ಸಂಪರ್ಕಿತರ ಸಂಖ್ಯೆ 103 ಇದೆ.

ಕೋವಿಡ್ ಆಸ್ಪತ್ರೆಯಿಂದ ‌ಬಿಡುಗಡೆಯಾದವರ‌ ವಿವರ

P-3246 40ವರ್ಷದ ಪುರುಷ ಮೂಲತಃ ಹೋಸಪೇಟೆಯವರು, P-4350 42 ವರ್ಷದ ಪುರುಷ ಮೂಲತಃ ತೋರಣಗಲ್ಲಿನ JSW ಉದ್ಯೋಗಿ ಸೊಂಕಿತ ವ್ಯಕ್ತಿಯ ಸಂಪರ್ಕಿತ, P-5573 45 ಮಹಿಳೆ ಮೂಲತಃ ಬಳ್ಳಾರಿಯವರು JSW ಉದ್ಯೋಗಿ ಸೊಂಕಿತ ವ್ಯಕ್ತಿಯ ಸಂಪರ್ಕಿತ, P-5574 54ವರ್ಷದ ಪುರುಷ ಮೂಲತಃ ಕರ್ನೂಲ್ ಜಿಲ್ಲೆಯವರು ಸೊಂಕಿತ ಪ್ರದೇಶದಿಂದ ಚಿಕಿತ್ಸೆಗಾಗಿ ಬಂದವರು,P- 5377 50ವರ್ಷದ ಪುರುಷ ಮೂಲತಃ ಟಿ.ಬಿ. ಡ್ಯಾಂ ಆರಕ್ಷಕ ವೃತ್ತ ನಿರೀಕ್ಷಕರು ಕರ್ತವ್ಯ ನಿರ್ವಹಿಸುವಾಗ ಸೊಂಕಿತರು, P-5379 39ವರ್ಷದ ಪುರುಷ ಮೂಲತಃ ಬಳ್ಳಾರಿಯವರಾಗಿದ್ದಾರೆ.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ದರಾಗಿ ನಿಂತಿದ್ದವರಿಗೆ ಹೂಗುಚ್ಛ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ಕಂದಾಯ ಇಲಾಖೆ ವತಿಯಿಂದ ನೀಡಲಾಗುವ ಪಡಿತರ ಕಿಟ್ ಕಳುಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ ಅವರು ಮಾತನಾಡಿ, ಇವರು ಬಂದಾಗ ಸಾಕಷ್ಟು ಭಯಭೀತರಾಗಿದ್ದರು, ಇವರಿಗೆ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿದೆವು. ಆತ್ಮಸ್ಥೈರ್ಯವನ್ನು ತುಂಬಿ ಅವರನ್ನು ಗುಣಮುಖರಾಗಲು ಬಹಳ ಶ್ರಮವಹಿಸಿದೆವು; 6 ಜನರು ಒಂದೇ ಬಾರಿಗೆ ಗುಣಮುಖರಾಗಿರುವುದು ನಮಗೆ ತುಂಬಾ ಸಂತೋಷವಾಗಿದ್ದು ಇನ್ನು ಉಳಿದವರನ್ನು ಆದಷ್ಟು ಬೇಗ ಗುಣಮುಖರನ್ನಾಗಿ ಮಾಡಿ ಬಳ್ಳಾರಿಯನ್ನು ಕರೋನಾ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದರು.

ಗುಣಮುಖರಾಗಿ ಹೊರಬಂದವರಲ್ಲಿ ಟಿಬಿ ಡ್ಯಾ ಸಿಪಿಐ ಸೇರಿದಂತೆ ಕೆಲವರು ಮಾತನಾಡಿ, ಆಸ್ಪತ್ರೆಗೆ ದಾಖಲಾಗಿ ಬಂದಾಗಿನಿಂದ ಇಲ್ಲಿಯವರೆಗೆ ಚೆನ್ನಾಗಿ ನೋಡಿಕೊಂಡರು. ಸಮರ್ಪಕ ಚಿಕಿತ್ಸೆ ನೀಡಿದರು ಮತ್ತು ಮನಃ ಸ್ಥೈರ್ಯ ಕಳೆದುಕೊಂಡಿದ್ದ ನಮ್ಮನ್ನು ಮಾನಸಿಕವಾಗಿಯೂ ಸಜ್ಜುಗೊಳಿಸಿ ವೈರಸ್ ವಿರುದ್ಧ ಹೋರಾಡಲು ಬಲತುಂಬಿದರು ಹಾಗೂ ಗುಣಮಟ್ಟ ಆಹಾರ ಒದಗಿಸಿದರು. ವೈದ್ಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಯ ಈ ಕಾರ್ಯಕ್ಕೆ ನಾವು ಎಂದಿಗೂ ಋಣಿಯಾಗಿರುತ್ತೇವೆ ಎಂದರು.

ಈ ಸಂದರ್ಭದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಡಾ.ದೈವೀಕ್, ಡಾ.ನಿಖಿಲ್, ಡಾ.ಶಂಕರ್ ನಾಯಕ್, ಡಾ.ಪ್ರಕಾಶ್, ಡಾ.ಉದಯ್ ಶಂಕರ್, ಡಾ.ಚಿತ್ರಶೇಖರ ಸೇರಿದಂತೆ ಪೊಲೀಸ್ ‌ಇಲಾಖೆಯ ವಿವಿಧ ಹಂತದ ಅಧಿಕಾರಿಗಳು, ಡಾ.ಪ್ರಕಾಶ, ಅಂಜನೇಯ ಹಾಗೂ ಲ್ಯಾಬ್ ಟೆಕ್ನಿಷಿಯನ್ಸ್, ಎಕ್ಸ್-ರೇ, ಡಿ-ಗ್ರೂಪ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ಇತರ ಸಿಬ್ಬಂದಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending