ದಿನದ ಸುದ್ದಿ
ಇಟ್ಟುಕೊಂಡವನ ಜೊತೆ ಸೇರಿ, ಕಟ್ಟಿಕೊಂಡನಿಗೆ ಚಟ್ಟಕಟ್ಟಿದ ನೀಲಮಣಿ ಅಂಡ್ ಗ್ಯಾಂಗ್
- ಗಿರೀಶ್ ಕುಮಾರ್ ಗೌಡ
ಸುದ್ದಿದಿನ,ಬಳ್ಳಾರಿ: ಅಪ್ಪ, ಮಕ್ಕಳು, ತಾಯಿ, ಮಗ, ಗಂಡ, ಹೆಂಡ್ತಿ ಯಾವ ಸಂಬಂಧಕ್ಕೂ ಬೆಲೆಯೇ ಇಲ್ಲ. ಯಾಕೆಂದರೆ ರಕ್ತ ಸಂಬಂಧಿಕರೇ ರಣ ರಾಕ್ಷಸರಾಗುತ್ತಿದ್ದಾರೆ. ತಾಳಿ ಕಟ್ಟಿದ ಗಂಡನನ್ನೆ ಕೊಂದು ಮಲಗಿಸುವ ಹಂತಕ್ಕೆ ಬಂದಿದ್ದಾರೆ. ಇಂತ ದುರ್ಘಟನೆ ಗಣಿನಾಡು ಬಳ್ಳಾರ ನಗರದಲ್ಲಿ ನಡೆದಿದೆ.
ಜೀವಕ್ಕಿಂತ ಹೆಚ್ಚು ಪ್ರೀತಿಸುವ ಗಂಡನಿದ್ದ ಮುದ್ದಾದ ಮೂರು ಜನ ಮಕ್ಕಳಿದ್ದರು. ಈ ಆಂಟಿಗೆ ಸಣ್ಣ ಸಣ್ಣ ಹುಡುಗರ ಮೇಲೆ ಕಣ್ಣು, ಇತ್ತ ಗಂಡನಿದ್ದರು ತನ್ನ ಶ್ಯಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದವನಿಗೆ ಸೆರಗು ಹಾಸುತಿದ್ದಳು, ಇದು ಪಾಪದ ಗಂಡನಿಗೆ ಗೊತ್ತಾಗುತ್ತಿದ್ದಂತೆ ಗಂಡನಿಗೆ ಸರಿಯಾದ ಪಾಠ ಕಲಿಸಬೇಕೆಂದು ನಿರ್ಧರಿಸಿ ಬಿಟ್ಲು ಗಂಡ ಈ ಮಿಟುಕುಲಾಡಿಯ ರಂಗೀನಾಟಗಳನ್ನು ಕಣ್ಣು ತುಂಬಾ ನೋಡಿ ಕುಡಿತಕ್ಕೆ ದಾಸನಾದ.
ಅಂಟಿಗೆ ಹುಡುಗರ ಸಹವಾಸ
ಈ ಕಥೆಯ ಸುಪುನಾಥಿಯೇ ಈ ನೀಲವೇಣಿ, ಈಕೆಯ ತವರು ಮನೆ ಬಳ್ಳಾರಿಯ ರಾಣಿತೋಟ. ಗಂಡ ವೆಂಕಟೇಶನದ್ದು ಸಿರುಗುಪ್ಪ ತಾಲೂಕಿನ ಕೊಂಚಗೇರಿ ಗ್ರಾಮ, ಈ ನೀಲವೇಣಿ ಮದುವೆಯಾದ ಬಳಿಕ ವೆಂಕಟೇಶನನ್ನು ಮನೆ ಅಳಿಯನಾಗಿ ಮಾಡಿಕೊಂಡಿದ್ದರು. ವೆಂಕಟೇಶ ಬಳ್ಳಾರಿಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡು ತನ್ನ ಸಂಸಾರದ ನೊಗ ಹೊತ್ತಿದ್ದ, ಹಾಗೋ ಹೀಗೋ ಎರಡು ಗಂಡು ಒಂದು ಹೆಣ್ಣು ಮಕ್ಕಳಿದ್ದಾರೆ.
ಅಂಟಿಗೆ ಆನಂದ ಮೇಲೆ ಪುಲ್ ಲವ್
ಈ ನೀಲವೇಣಿಯ ರಂಗೀನಾಟ ಕಣ್ಣಾರೆ ನೋಡಿ ವೆಂಕಟೇಶ ಕುಡಿತಕ್ಕೆ ದಾಸನಾಗಿ ಹೆಂಡತಿ ನೀಲವೇಣಿಗೆ ಆಗಾಗ ಬೈಯೋದು ಕಿರುಕುಳ ನೀಡೋದು ಮಾಡ್ತಿದ್ದ, ಕುಡಿತಕ್ಕೆ ದಾಸನಾದ ಗಂಡ ಹೂವಿನ ವ್ಯಾಪಾರ ಸರಿಯಾಗಿ ಮಾಡುತ್ತಿರಲ್ಲಿಲ್ಲ. ನೀಲವೇಣಿ ಗಂಡನನ್ನು ದಿನ ನಿನ್ನ ಕಾಟ ನನಗೆ ಸಾಕಾಗಿ ಹೋಗಿದೆ ನೀನು ನಿನ್ನ ತಾಯಿ ಮನೆಯಲ್ಲೆ ಇರುವಂತೆ ಹೇಳಿ ಗಂಡನನ್ನು ಕೊಂಚಗೇರಿಗೆ ಕಳುಹಿಸಿದ್ದಾಳೆ. ಇತ್ತ ನೀಲವೇಣಿ ಹೂವಿನ ವ್ಯಾಪಾರ ಬಿಟ್ಟು ಶ್ಯಾಮಿಯಾನ ಅಂಗಡಿ ಇಟ್ಟುಕೊಂಡಿದ್ದಾಳೆ. ಶ್ಯಾಮಿಯಾನ ಅಂಗಡಿ ಅಂದ ಮೇಲೆ ಕೆಲಸ ಮಾಡುವವರು ಬೇಕಲ್ಲ? ಕೆಲಸಕ್ಕೆಂದು ಆನಂದ್ ಎಂಬ ಯುವಕನನ್ನು ನೇಮಿಸಿಕೊಂಡು ಶ್ಯಾಮಿಯಾನ ಅಂಗಡಿ ನಡೆಸಿಕೊಂಡು ಬಂದಿದ್ದಾಳೆ. ಶ್ಯಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುವ ಆನಂದನ ಜೊತೆ ಈ ನೀಲವೇಣಿಗೆ ಸಲುಗೆಯಾಗಿ ಪ್ರೇಮಾಂಕುರವಾಗಿದೆ. ಈ ಆನಂದನ ಜೊತೆ ಈ ಆಂಟಿಗೆ ಫುಲ್ ಲವ್ ಆಗಿದೆ ಇವರಿಬ್ಬರ ಸರಸ ಸಲ್ಲಪಗಳನ್ನ ಪತಿರಾಯ ವೆಂಕಟೇಶ್ ನೋಡಿ ಕುಡಿತಕ್ಕೆ ದಾಸನಾಗಿದ್ದಾನೆ.
ಪ್ಲಾನ್ ಮಾಡಿದ ನೀಲಮಣಿ ಅಂಡ್ ಗ್ಯಾಂಗ್
ಈ ಗಂಡನ ಪ್ರತಿ ದಿನದ ಕಿರುಕುಳ ತಾಳಲಾರದೆ, ಪ್ರಕರಣದ ಆರೋಪಿ 2 ಆನಂದನ ಜೊತೆ ಸೇರಿ ಗಂಡನಿಗೆ ಬುದ್ದಿ ಕಲಿಸಲು ಪ್ಲಾನ್ ಮಾಡಿದ್ದಾಳೆ. ಈ ಆನಂದನಿಗೆ ಹೇಳಿ ಗಂಡ ವೆಂಕಟೇಶನಿಗೆ ರಿಪೇರಿ ಮಾಡಿಸಲು ಹಣ ಕೊಟ್ಟು ಕಳುಹಿಸಿದ್ದಾಳೆ. ಕರ್ಚಿಗೆ ಅಂತ ಪಡೆದ ಹಣದಲ್ಲಿ ಆನಂದ್, ಮಹಮ್ಮದ್ ಗೌಸ್, ಶಿವಶಂಕರ್ ಅಲಿಯಾಸ್ ಚಿರು, ಮಹಮ್ಮದ್ ಸಾಹೀದ್ ಅಲಿಯಾಸ್ ಜಂಗ್ಲಿ, ಷಷಾವಲಿ ಅಲಿಯಾಸ್ ದುದ್ದು, ಮಹಮ್ಮದ್ ಶರೀಫ್, ಮಹಮ್ಮದ್ ಆಸೀಫ್, ಮಹಮ್ಮದ್ ಸೋಹೆಲ್ ಸೇರಿ ಮಧ್ಯೆ ಹಾಗೂ ಗಾಂಜಾ ನಶೆಯಲ್ಲಿ ವೆಂಕಟೇಶನಿಗೆ ಕಟ್ಟಿಗೆ, ಮಚ್ಚು, ಕಲ್ಲಿನಿಂದ ತಲೆಗೆ ಹಣೆ ಎದೆ ಬೆನ್ನು ಹಾಗೂ ಸಿಕ್ಕ ಸಿಕ್ಕಲ್ಲಿ ಹೊಡೆದ ತೀವ್ರ ಗಾಯಗೊಸಿದ ಪರಿಣಾಮ ಸ್ಥಳದಲ್ಲೆ ವೆಂಕಟೇಶ ಪ್ರಾಣ ಬಿಟ್ಟಿದ್ದಾನೆ.
ಹೆಡೆಮುರಿ ಕಟ್ಟಿದ ಬಳ್ಳಾರಿ ಖಾಕಿ
ಏಪ್ರಿಲ್ 04 ಶುಕ್ರವಾರ ದಂದು ಬೆಳಂಬೆಳಿಗ್ಗೆ ನಗರದ ಕಣೇಕಲ್ಲು ಬಸ್ ನಿಲ್ದಾಣ ಬೊಮ್ಮನಹಾಳ್ ರಸ್ತೆಯ ಅಲ್ಟ್ರಾಗೇಟ್ ಬಳಿಯ ಕೆ.ಟಿ.ಪ್ರಜ್ವಲ್ ಕಾಟನ್ ಇಂಡಸ್ಟ್ರಿ ಮುಂದೆ ಕೊಲೆ ಮಾಡಲಾಗಿತ್ತು.ಈ ಕುರಿತು ಬ್ರೂಸ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೋಲಿಸರು ಕೊಲೆ ನಡೆದ 24 ಗಂಟೆಯಲ್ಲೆ ಎಲ್ಲಾ 9 ಜನ ಆರೋಪಿಗಳನ್ನು ಹೆಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ.
ಜಿಲ್ಲಾ ಎಸ್ಟಿ ಡಾ.ಶೋಭಾರಾಣಿಯವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ಕೆ.ಪಿ.ರವಿಕುಮಾರ್, ನಗರ ಡಿವೈಎಸ್ಪಿ ನಂದಾರೆಡ್ಡಿ, ಸೈಬರ್ ಠಾಣೆಯ ಡಿವೈಎಸ್ಪಿ ಸಂತೋಷ್ ಚವ್ಹಾಣ್ ನೇತೃತ್ವದಲ್ಲಿ ಬ್ರೂಸ್ ಪೇಟೆ ಪೋಲಿಸ್ ಠಾಣೆಯ ಸಿಪಿಐ ಮಹಾಂತೇಶ್ ರವರ ತಂಡ ಕಾರ್ಯಚರಣೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


