ದಿನದ ಸುದ್ದಿ
ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
ಗಿರೀಶ್ ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.
ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.
ಸಾಧಿಕ್ ಪೊಲೀಸರಿಗೆ ಸಾಥ್
ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.
“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”
ಸುದ್ದಿದಿನ.ಕಾಂ|ವಾಟ್ಸಾಪ್|9980346243