ದಿನದ ಸುದ್ದಿ
ಚೀಟಿ ವ್ಯವಹಾರದಲ್ಲಿ ಮೋಸ ; ಅತಿಆಸೆಗೆ ಬಲಿಯಾದ ಗಣಿನಾಡಿನ ಜನ
- ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ನಗರದ ಗೋಲ್ಡ್ ಸ್ಮಿತ್ ರಸ್ತೆಯ ಕುಂಬಾರ ಓಣಿ ಬಳಿಯ ವಾಸವಿ ಸ್ವಗೃಹ ಹೋಮ್ ನೀಡ್ ಎಂಬ ಅಂಗಡಿ ತೆರೆದು ಅಲ್ಲಿಗೆ ಬಂದ ಗ್ರಾಹಕರಿಂದ ಚೀಟಿ ರೂಪದಲ್ಲಿ ಹಣ ಪಡೆದು ತಿಂಗಳಿಗೆ ಶೇ.25 ರಷ್ಟು ಲಾಭ ನೀಡುವುದಾಗಿ ವಂಚಿಸುತ್ತಿದ್ದ ವಿಶ್ವನಾಥ ಎಂಬ ವ್ಯಕ್ತಿಯನ್ನು ಬ್ರೂಸ್ ಪೇಟೆ ಪೊಲೀಸರು ಬಂಧಿಸಿದ್ದರು.
ಚೀಟಿ ವ್ಯವಹಾರ ಮಾಡಿ ಮೋಸ
ಗ್ರಾಹಕರಿಗೆ ತಾವು ಕೊಡುವ ಹಣಕ್ಕೆ ಲಾಭಾಂಶವನ್ನು ಕೊಡುವುದಾಗಿ ನಂಬಿಸಿ ಗ್ರಾಹಕರಿಂದ ಹಣವನ್ನು ಪಡೆದು ಯಾವುದೇ ಲಾಭಾಂಶವನ್ನು ಕೊಡದೇ ಚೀಟಿ ವ್ಯವಹಾರ ಮಾಡಿ ಮೋಸ ಮಾಡುತ್ತಿದ್ದರು ಎಂದು ವಾಸವಿ ಸ್ವಗೃಹ ಹೋಮ್ ನೀಡ್ ಅಂಗಡಿಯ ಮಾಲಿಕ ಟಿ.ವಿಶ್ವನಾಥ(58)ರ ಮೇಲೆ ದೂರು ಬಂದ ಹಿನ್ನೆಲೆಯಲ್ಲಿ ಈತನನ್ನು ಪೊಲೀಸರು ಬಂಧಿಸಿ 19,38,500 ರೂ. ಮತ್ತು ಗ್ರಾಹಕರು ಆಪಾದಿತನಿಗೆ ಹಣ ಕಟ್ಟುತ್ತಿದ್ದ ಬಗ್ಗೆ ಇದ್ದ ಚೀಟಿಗಳು ಹಾಗು ವ್ಯವಹಾರಕ್ಕೆ ಬಳಸುತ್ತಿದ್ದ ಸಲಕರಣೆ ವಶಪಡಿಸಿಕೊಂಡಿದ್ದರು.
ಗ್ಯಾನಪ್ಪ ನೀಟಿದ ದೂರಿನಿಂದ ಪೊಲೀಸರು ಎಂಟ್ರಿ
ಸಹಕಾರ ಸಂಘಗಳ ಸಹಾಯಕ ನಿಬಂಧಕ ಗ್ಯಾನಪ್ಪ ನೀಡಿದ ದೂರಿನನ್ವಯ ಕಳೆದ ಆರು ತಿಂಗಳಿಂದಲೂ ಸರ್ಕಾರದಿಂದ ಅಥವಾ ಮಂಜೂರು ಮಾಡುವ ಯಾವುದೇ ಪ್ರಾಧಿಕಾರದಿಂದ ಪೂರ್ವ ಮಂಜುರಾತಿ ಪಡೆಯದೇ ಗ್ರಾಹಕರಿಗೆ ಮೋಸ ಮಾಡುವ ದುರುದ್ದೇಶದಿಂದ, ಗ್ರಾಹಕರಿಂದ ಅನಧಿಕೃತವಾಗಿ ಚೀಟಿಯ ರೂಪದಲ್ಲಿ ನಗದು ಹಣವನ್ನು ಕಟ್ಟಿಸಿಕೊಂಡು ಹಣಕ್ಕೆ 25% ಹಣವನ್ನು ಬೋನಸ್ ರೂಪದಲ್ಲಿ ಕೊಡುವುದಾಗಿ ನಂಬಿಸಿ ಗ್ರಾಹಕರಿಗೆ ಯಾವುದೇ ಲಾಭಾಂಶವನ್ನು ಕೊಡದೇ ಚೀಟಿ ವ್ಯವಹಾರ ಮಾಡುತ್ತಿದ್ದ ವಿಶ್ವನಾಥ ವಿರುದ್ಧ ಆರೋಪ ಕೇಳಿಬಂತು.ಆಗ ಪೊಲೀಸರು ಎಂಟ್ರಿ ಆಗಿದ್ದಾರೆ.ಗಣಿನಾಡು ಬಳ್ಖಾರಿ ನಗರದಲ ಇಂತ ವ್ಯವಹಾರಗಳು ಬಹಳ ನಡೆಯುತ್ತೇವೆ ನಿಧಾನಗತಿಯಲ್ಲಿ ಮೋಸ ಹೋದ ಮೇಲೆ ಬೆಳಕಿಗೆ ಬರುತ್ತವೆ.
ಮೋಸಕ್ಕೆ ಬಲಿಯಾಗುವ ಜನರು
ಗಣಿನಾಡು ಬಳ್ಳಾರಿ ನಗರದಲ್ಲಿ ಜನರು ಆಸೆ,ಅತಿಆಸೆಯಿಂದ ಬೇಗ ಹಣವನ್ನು ಸಂಪಾದನೆ ಮಾಡಬಹುದು ಎಂದು ಈ ಮಾರ್ಗಗಳನ್ನು ಅನುಸರಿಸ ಮೋಸ ಹೋಗುತ್ತಾರೆ. ಟಿ.ವಿಶ್ವನಾಥ ಗ್ರಾಹಕರೊಂದಿಗೆ ನಿಶ್ಚಿತ ಅವದಿಗೆ ನಿಯತಕಾಲಿಕ ಕಂತುಗಳ ರೂಪದಲ್ಲಿ ಹಣದ ನಿಶ್ಚಿತ ಹಣವನ್ನು ಕೊಡಲು ಒಪ್ಪಿ ಚೀಟಿ ಒಪ್ಪಂದ ಮಾಡಿಕೊಂಡು ಗ್ರಾಹಕರಿಗೆ ಯಾವುದೇ ಲಾಭಾಂಶವನ್ನು ಕೊಡದೇ ಚೀಟಿ ವ್ಯವಹಾರ ಮಾಡಿ ಮೋಸ ಮಾಡುತ್ತಿರುವುದು ಕಂಡು ಬಂದಿದ್ದರಿಂದ ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿತ್ತು.ಆದರೆ ಸಾರ್ವಜನಿಕರಿಂದ ನೊಂದವರಿಂದ ದೂರ ಬಾರದ ಹಿನ್ನೆಲೆಯಲ್ಲಿ ಆತನಿಗೆ ವಿಚಾರಣೆ ಮಾಡಿ ಠಾಣಾ ಬೇಲ್ ನೀಡಿ ನೋಟಿಸ್ ಕೊಟ್ಟು ಕಳುಹಿಸಲಾಗಿತ್ತು.
ಪೊಲೀಸರ ಪಾತ್ರ ಏನು ?
ಈ ಹಿಂದೆ ಗಣಿನಾಡು ಬಳ್ಳಾರ ನಗರದ ವಿವಿಧ ಠಾಣೆಗೆ ಸಂಬಂಧಿಸಿದಂತೆ ಹಣಕಾಸಿನ ವಿಚಾರವಾಗಿ ಮೋಸ ಮಾಡಿದ ಘಟನೆಗಳು ನಡೆದಿದೆ. ಆದರೆ ಮೋಸ ಮಾಡಿದ ವ್ಯಕ್ತಿಗಳಿಂದ ಮೋಸಕ್ಕೆ ಒಳಗಾದ ಜನರಿಗೆ ಹಣವನ್ನು ಕೊಡಿಸಿಲ್ಲ ಎನ್ನುವ ಆರೋಪ ಸಹ ಇದೆ. ಇಲ್ಲಿ ಪೊಲೀಸ್ ಇಲಾಖೆಯ ಪಾತ್ರ ಏನು ? ಎನ್ನುವ ಅಂಶ ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.
ಬಳಿಕ ವಿಶ್ವನಾಥ ಗ್ರಾಹಕರಿಗೆ ಮೊನ್ನೆ ನಿಮ್ಮ ಹಣ ವಾಪಾಸ್ ಕೊಡುವೆ ಅಂಗಡಿ ಬಳಿ ಬನ್ನಿ ಎಂದಿದ್ದರು. ಆದರೆ ನಿನ್ನೆ ವಿಶ್ವನಾಥ ಅಂಗಡಿ ಬಳಿ ತೆರಳಿದ ನೂರಾರು ಗ್ರಾಹಕರಿಗೆ ಬಿಗ್ ಶಾಕ್ ಕಾದಿತ್ತು. ವಿಶ್ವನಾಥ ಎಸ್ಕೇಪ್ ಆಗಿದ್ದ ಇದನ್ನ ಕಂಡ ಗ್ರಾಹಕರು ಕಣ್ಣೀರಾಕಿ ಬ್ರೂಸ್ ಪೇಟೆ ಪೋಲಿಸ್ ಠಾಣೆ ಬಳಿ ಜಮಾಯಿಸಿದ್ದಾರೆ. ಪೋಲಿಸ ಮುಂದೆ ತಾವು ಕಟ್ಟಿದ ಹಣದ ಬಗ್ಗೆ ವಿವರಿಸಿ ಠಾಣೆಯಲ್ಲಿ ಒಬ್ಬರಾಗಿ ಬರೆಸುತ್ತ ನಿಂತಿದ್ದಾರೆ.
ಶಾಸಕ ಭರತ್ ರೆಡ್ಡಿ ಭರವಸೆ
ಎಲ್ಲರೂ ಕಟ್ಟಿದ ಹಣ ಎರಡು ಕೋಟಿ ದಾಟುವ ಸಂಭವವಿದೆ ಎನ್ನಲಾಗುತ್ತಿದೆ. ನೊಂದ ಜನ ಠಾಣೆಯಿಂದ ನಿನ್ನೆ ಮದ್ಯಾಹ್ನ ಶಾಸಕ ನಾರಾ ಭರತ್ ರೆಡ್ಡಿ ಕಛೇರಿಗೆ ತೆರಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಜನರು ಕಣ್ಣೀರು ನೋಡದ ಶಾಸಕರು ನಾನೇ ಠಾಣೆಗೆ ಬರುವೆ ಎಂದು ಹೇಳಿ ಮಂಗಳವಾರ ಸಂಜೆ ಶಾಸಕ ನಾರಾ ಭರತ್ ರೆಡ್ಡಿ ಬ್ರೂಸ್ ಪೇಟೆ ಠಾಣೆಗೆ ಭೇಟಿ ನೀಡಿ ನ್ಯಾಯ ಕೊಡಿಸಿ ಆರೋಪಿಯನ್ನು ಕೊಡಲೇ ಬಂಧಿಸಿ ಎಂದು ಇನ್ಸ್ ಪೆಕ್ಟರ್ ಮಹಾಂತೇಶ್ ಗೆ ಸೂಚಿಸಿ ಜನರಿಗೆ ಸಾಂತ್ವನ ಹೇಳಿ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ.
ಜನರು ಬುದ್ಧಿವಂತರಾಗಿ
ಮನೆಯಲ್ಲಿ ಹಣ ಇದೆ ಎಂದು ಆಸೆ,ಅತಿಆಸೆಗೆ ಒಳಗಾಗದೇ ಗೊತ್ತಿಲ್ಲದ ಇರುವ ವ್ಯಕ್ತಿಗಳಿಗೆ ಕೊಟ್ಟಿ ಮೋಸ ಹೋಗಬಾರದು ಎನ್ನುವುದು ನಮ್ಮ ಆಸೆಯವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

