ದಿನದ ಸುದ್ದಿ
ಹರಪನಳ್ಳಿ,ಹಡಗಲಿ,ಹಗರಿಬೊಮ್ಮನಳ್ಳಿಯಲ್ಲಿ ನೆರೆಹಾವಳಿ ಭೀತಿ : ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗ್ರತಾ ಕ್ರಮ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/07/Tunga-river-suddidina-43.jpg&description=ಹರಪನಳ್ಳಿ,ಹಡಗಲಿ,ಹಗರಿಬೊಮ್ಮನಳ್ಳಿಯಲ್ಲಿ ನೆರೆಹಾವಳಿ ಭೀತಿ : ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗ್ರತಾ ಕ್ರಮ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/07/Tunga-river-suddidina-43.jpg&description=ಹರಪನಳ್ಳಿ,ಹಡಗಲಿ,ಹಗರಿಬೊಮ್ಮನಳ್ಳಿಯಲ್ಲಿ ನೆರೆಹಾವಳಿ ಭೀತಿ : ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗ್ರತಾ ಕ್ರಮ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಬಳ್ಳಾರಿ : ತುಂಗಾ ಮತ್ತು ಭದ್ರಾದಿಂದ ಹೊರಹರಿಯುವ ನೀರಿನ ಪ್ರಮಾಣದಲ್ಲಿ ತೀವ್ರ ಹೆಚ್ಚಳವಾಗಿದ್ದು ಅಪಾರ ಪ್ರಮಾಣದಲ್ಲಿ ತುಂಗಾಭದ್ರಾ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ತುಂಗಾ ಮತ್ತು ಭದ್ರಾದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಪರಿಣಾಮ ಹರಪನಳ್ಳಿ,ಹಡಗಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿ ನೆರೆಹಾವಳಿ ಭೀತಿ ಉಂಟಾಗಿದೆ. ಇದನ್ನರಿತ ಬಳ್ಳಾರಿ ಜಿಲ್ಲಾಡಳಿತ ತುರ್ತು ಸಭೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ತುರ್ತುಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಪ್ರತಿನಿತ್ಯ 10 ಟಿಎಂಸಿಯಷ್ಟು ನೀರು ತುಂಗಾಭದ್ರಾ ಜಲಾಶಯಕ್ಕೆ ನೀರು ಹರಿದುಬರುತ್ತಿದೆ. ತುಂಗಾ ಮತ್ತು ಭದ್ರಾದಿಂದ ನೀರು ಅಪಾರ ಪ್ರಮಾಣದಲ್ಲಿ ಹರಿದು ಬರುತ್ತಿರುವ ಪರಿಣಾಮ ಹರಪನಳ್ಳಿ,ಹಗರಿಬೊಮ್ಮನಳ್ಳಿ ಮತ್ತು ಹಡಗಲಿ ತಾಲೂಕಿನ ನದಿಪಾತ್ರದ ಗ್ರಾಮಗಳಲ್ಲಿ ನೆರೆಹಾನಿ ಉಂಟಾಗುವ ಸಾಧ್ಯತೆ ಇದ್ದು, ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಭೆ ನಡೆಸಿ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನದಿಪಾತ್ರದಲ್ಲಿರುವ ಮನೆಗಳಿಗೆ ಧಕ್ಕೆಯಾಗಲಿವೆ ಎಂದು ಹೇಳಿದ ಡಿಸಿ ನಕುಲ್ ಅವರು ಸಂಭಾವ್ಯ ನೆರೆಹಾನಿ ಉಂಟಾಗುವ ಪ್ರದೇಶಗಳಿಗೆ ಕೂಡಲೇ ಉಪವಿಭಾಗಾಧಿಕಾರಿಗಳು, ತಹಸೀಲ್ದಾರರು, ತಾಪಂ ಇಒಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ತೆರಳಿ ಅಲ್ಲಿನ ಗ್ರಾಪಂ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳೊಂದಿಗೆ ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ನದಿಪಾತ್ರದಲ್ಲಿ ಮನೆಕಟ್ಟಿಕೊಂಡವರ ಮನೆಗಳಿಗೆ ಹಾಗೂ ಮಣ್ಣಿನ ಗೊಡೆ ಮನೆಗಳಲ್ಲಿರುವ ಮನೆಗಳಿಗೆ ಗ್ರಾಪಂ ಪಿಡಿಒಗಳು ಮತ್ತು ಗ್ರಾಮಲೆಕ್ಕಿಗರು ತೆರಳಿ ಅವರಿಗೆ ಸ್ಥಳಾಂತರಕ್ಕೆ ಸೂಚಿಸಬೇಕು ಮತ್ತು ತಮ್ಮ ಮೊಬೈಲ್ ನಂಬರ್ಗಳನ್ನು ಅವರಿಗೆ ನೀಡಬೇಕು. ತುರ್ತು ಸಂದರ್ಭದಲ್ಲಿ ಅವರು ತಮ್ಮನ್ನು ಸಂಪರ್ಕಿಸಲು ಸಾಧ್ಯವಾಗುತ್ತದೆ ಎಂದರು.
ತುರ್ತುಸಂದರ್ಭದಲ್ಲಿ ಜನ-ಜಾನುವಾರುಗಳನ್ನು ರಕ್ಷಣೆ ಮಾಡಲು ಅನುಕೂಲವಾಗುತ್ತದೆ ಎಂಬ ಕಾರಣಕ್ಕೆ ಹಗರಿಬೊಮ್ಮನಹಳ್ಳಿ ಮತ್ತು ಹರಪನಳ್ಳಿಗಳಲ್ಲಿ ಎರಡು ಬೋಟ್ಗಳು ರಕ್ಷಣಾ ತಂಡಗಳು ಲಭ್ಯವಿರುವಂತೆ ಮಾಡಲಾಗಿದೆ ಮತ್ತು ಇದರ ಜತೆಗೆ ಆರೋಗ್ಯ ತಂಡಗಳು ಇರಲಿವೆ ಎಂದು ಅವರು ವಿವರಿಸಿದರು.
ಪ್ರತಿನಿತ್ಯ ವರದಿ ನೀಡಲು ಸೂಚನೆ
ಜನ-ಜಾನುವಾರು ಹಾಗೂ ಮನೆಗಳ ಹಾನಿ ಕುರಿತಂತೆ ಒಂದು ನಮೂನೆ ಸಿದ್ದಪಡಿಸಲಾಗಿದ್ದು, ಅದರಂತೆ ಪ್ರತಿನಿತ್ಯ ತಮ್ಮ ವ್ಯಾಪ್ತಿಯಲ್ಲಾಗುವ ಹಾನಿಗಳ ವಿವರವನ್ನು ಜಿಲ್ಲಾಡಳಿತಕ್ಕೆ ಉಪವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರು ಕಳುಹಿಸಿಕೊಡಬೇಕು. ಹಾನಿಗಿಡಾದವರ ಕುಟುಂಬಕ್ಕೆ ವಿಪತ್ತು ನಿಧಿ ಅಡಿ 3 ದಿನದೊಳಗೆ ಪರಿಹಾರ ನೀಡುವಂತೆ ನೋಡಿಕೊಳ್ಳಿ; ಈ ವಿಷಯದಲ್ಲಿ ಯಾವುದೇ ಸಬೂಬು ಮತ್ತು ಶಿಷ್ಟಾಚಾರ ಬೇಡ ಎಂದು ಅವರು ಡಿಸಿ ನಕುಲ್ ಸೂಚಿಸಿದರು.
ಕುರವತ್ತಿಯಲ್ಲಿ ಹಾನಿಯಾಗಿದೆ ಎಂಬ ಮಾಹಿತಿಯಿದ್ದು,ಪರಿಹಾರ ಕೂಡಲೇ ಒದಗಿಸಿ ಎಂದು ಸೂಚನೆ ನೀಡಿದ ಅವರು, ಅವಶ್ಯ ಬಿದ್ದರೇ ಗಂಜಿಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದ್ದು, ಅಂತ ಸ್ಥಳಗಳನ್ನು ಗುರುತಿಸಿ ಪಟ್ಟಿ ಮಾಡಿಟ್ಟುಕೊಳ್ಳಿ. ನೆರೆಹಾವಳಿಯಿಂದ ರಸ್ತೆ ಮತ್ತು ಬ್ರಿಡ್ಜ್ಗಳಿಗೆ ಆಗುವ ಹಾನಿ ಪ್ರಮಾಣದ ವಿವರವನ್ನು ಒದಗಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ತುಂಗಾಭದ್ರಾ ಜಲಾಶಯದಿಂದ ನೀರು ಬಿಡುವ ಸಂದರ್ಭದಲ್ಲಿ ನದಿಪಾತ್ರದೂದ್ದಕ್ಕೂ ಹಂಪಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹಾನಿಯುಂಟಾಗದಂತೆ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ವಿವರ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಡಿಸಿ ನಕುಲ್ ಅವರು, ಎಸಿಗಳು ಮತ್ತು ತಹಸೀಲ್ದಾರರು ಕೂಡಲೇ ಸಭೆ ನಡೆಸಿ ಕಾರ್ಯಪ್ರವೃತ್ತರಾಗಿ ಹಾಗೂ ಸ್ಥಳೀಯಮಟ್ಟದ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಸ್ಪಂದಿಸುವ ಕೆಲಸ ಮಾಡಿ ಎಂದರು.
ಸಹಾಯವಾಣಿ ಕೇಂದ್ರಗಳ ಸ್ಥಾಪನೆ
ನೆರೆಹಾನಿಯಾದ ಸಂದರ್ಭದಲ್ಲಿ ಜನರಿಗೆ ತುರ್ತು ನೆರವಿಗೆ ಧಾವಿಸಬೇಕೆಂಬ ದೃಷ್ಟಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಿ ಮತ್ತು ನಿರಂತರ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಬೇಕು. ದೂರು ಬಂದ ತಕ್ಷಣ ಸ್ಪಂದಿಸಬೇಕುಎಂದು ಡಿಸಿ ನಕುಲ್ ಸೂಚಿಸಿದರು.
ಎನ್ಡಿಆರ್ಎಫ್ ಸಹಾಯಬೇಕಿದ್ದಲ್ಲಿ ಕೇಳಿ ಅಗತ್ಯ ನೆರವು ಒದಗಿಸಲಾಗುವುದು ಎಂದು ಹೇಳಿದ ಅವರು, ಗ್ರಾಮಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಫಾಗಿಂಗ್ ಮಶೀನ್ ಮತ್ತು ಬ್ಲೀಚಿಂಗ್ ಪೌಡರ್ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಡಿಎಚ್ಒ ಮತ್ತು ಟಿಎಚ್ಒಗಳು ಸಂಭ್ಯಾವ ನೆರೆಹಾವಳಿ ಪ್ರದೇಶಗಳಿಗೆ ಭೇಟಿ ನೀಡಿ ಆ ವ್ಯಾಪ್ತಿಯ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ಔಷಧಿಗಳಿರುವಂತೆ ನೋಡಿಕೊಳ್ಳಬೇಕು ಎಂದರು.
ಕೃಷಿ ಚಟುವಟಿಕೆಗಳಿಗಾಗಿ ಬಳ್ಳಾರಿ ಜಿಲ್ಲೆಗೆ ನೀರು ಬಿಡುಗಡೆ
ಬಳ್ಳಾರಿ ರೈತಾಪಿ ಸಮುದಾಯ ಕೃಷಿ ಚಟುವಟಿಕೆಗಳಿಗಾಗಿ ಬಹಳ ದಿನಗಳಿಂದ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ತುಂಗಾಭದ್ರಾ ಜಲಾಶಯದ ನೀರು ಕೃಷಿ ಚಟುವಟಿಕೆಗಳಿಗಾಗಿ ಶುಕ್ರವಾರ ಬೆಳಗ್ಗೆ ಬಿಡುಗಡೆ ಮಾಡಲಾಗುತ್ತಿದೆ.
ಈಗಾಗಲೇ 50 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿದ್ದು, ಪ್ರತಿನಿತ್ಯ 10 ಟಿಎಂಸಿ ನೀರು ಜಲಾಶಯಕ್ಕೆ ಹರಿದುಬರುತ್ತಿರುವ ಹಿನ್ನೆಲೆ ನೀರು ಬಿಡಲಾಗುತ್ತಿದೆ ಎಂದು ತುಂಗಾಭದ್ರಾ ಬೋರ್ಡ್ ಅಧೀಕ್ಷಕ ವೆಂಕಟರಮಣ ಸಭೆಗೆ ತಿಳಿಸಿದರು.
ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ ಸಿ.ಕೆ.ಬಾಬಾ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಈಶ್ವರ್ ಕಾಂಡೂ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್, ಉಪವಿಭಾಗಾಧಿಕಾರಿಗಳಾದ ರಮೇಶ ಕೋನರೆಡ್ಡಿ, ಪಿ.ಎನ್.ಲೋಕೇಶ ಸೇರಿದಂತೆ ವಿವಿಧ ತಾಲೂಕುಗಳ ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ3 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ5 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ4 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ2 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ1 day agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

