Connect with us

ದಿನದ ಸುದ್ದಿ

ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!

Published

on

  • ಗಿರೀಶ್ ಕುಮಾರ್ ಗೌಡ,ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ ಸಾಗಾಟ ಮಾಡುತ್ತಿರುವ ಅಂಶಗಳು ಬೆಳಕಿಗೆ ಬಂದಿವೆ.
ಅದರಲ್ಲಿ 10 ಲಕ್ಷ ಮೌಲ್ಯದ ಅನುಮಾನ ಪಡಿತರ ಅಕ್ಕಿ ಲಾರಿ, ಮದ್ಯ ರಾತ್ರಿಯಿಂದ ಬೆಳಿಗ್ಗೆ 9ಗಂಟೆವರೆಗೆ ಇದ್ದ ಲಾರಿ ನಂತರ ಇಲ್ಲದೆ ಇರೋದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಬಳ್ಳಾರಿ ನಗರದಲ್ಲಿ ಕೆಲ ದಿನಗಳ ಹಿಂದೆ ( ರಾತ್ರಿ 2.30 ಗಂಟೆ) ಸಮಯದಲ್ಲಿ 10 ಲಕ್ಷ ರೂಪಾಯಿ ಮೌಲ್ಯದ ಪಡಿತರ ಅಕ್ಕಿ ವಾಹನವನ್ನು ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಯ ಪೊಲೀಸ ಅಧಿಕಾರಿಗಳು ತಪಾಸಣೆ ಮಾಡಿ ಠಾಣೆಗೆ ತಂದು ನಿಲ್ಲಿಸಿಕೊಂಡಿದ್ದರು.

ರಾಯಚೂರುನಿಂದ ಛತ್ತೀಸ್ಗಢದ ವರೆಗೆ ಪಡಿತರ ಅಕ್ಕಿ ಸಾಗಾಟ

ರಾಯಚೂರದಿಂದ ಛತ್ತೀಸ್ಗಢಕ್ಕೆ ಸಾಗಣೆಯ ಮಾಡುತ್ತಿದ್ದ ವಾಹನವಾಗಿತ್ತು ವಾಹನಕ್ಕೆ ಆರ್.ಕೆ ಎಂಟರ್ಪ್ರೈಸಸ್ ರಾಯಚೂರು,ಬಳ್ಳಾರಿ ಎಂದು ಬಿಲ್ ಹಾಕಿ ರಾಯಚೂರುದಿಂದ ಛತ್ತೀಸ್ ಗಡಿಗೆ ಅಕ್ಕಿ ಸರಬರಾಜು ಮಾಡುತ್ತಿದ್ದ ಮತ್ತೊಂದು ಬಿಲ್ ಹಾಕಿ ಕಳಿಸಲಾಗಿತ್ತು. ಈ ವಾಹನಕ್ಕೆ ಬಳ್ಳಾರಿಯ ಹವಂಬಾವಿ ಪ್ರದೇಶದಲ್ಲಿ ಕಳಸಾಗಣಿಕೆ ಪಡಿತರ ಅಕ್ಕಿಯನ್ನು ತುಂಬಿದ್ದಾರೆ. ಇದಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ಮಾತ್ರ ಇದೆ ಎನ್ನುವ ಆರೋಪ ಇದೆ.

ಮಧ್ಯರಾತ್ರಿದಿಂದ ಬೆಳಿಗ್ಗೆ 9 ಗಂಟೆಗೆ ಠಾಣೆಯಲ್ಲಿ ಲಾರಿ ವಾಹನವನ್ನು ಇಟ್ಟುಕೊಂಡು ಎಲ್ಲವೂ ಸರಿ ಇದ್ದಾವೆ ಎಂದು ಗಾಡಿಯನ್ನು ಬಿಟ್ಟು ಕಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎನ್ನುವ ಸಾರ್ವಜನಿಕ‌ ಪ್ರಶ್ನೆ.

ಈ ಠಾಣೆಗೆ ನೂತನವಾಗಿ ಬಂದಿರುವ ಪೊಲೀಸ್ ಅಧಿಕಾರಿ ತೋರಣಗಲ್ಲು, ಸಂಡೂರು, ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿ ಬಳ್ಳಾರಿ ಎಪಿಎಂಸಿ ಠಾಣಿಗೆ ವರ್ಗಾವಣೆ ಆಗಿರುವ ರಫೀಕ್ ಅವರ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಸಾರ್ವಜನಿಕರು.

ಈಗಾಗಲೇ ಪಡಿತರ ಕಳಸಾಗಾಣಿಕೆ ದಂದೆ ನಡೆಯುತ್ತಿದ್ದು ಕಣ್ಣಿಗೆ ಕಂಡು ಕಾಣದಂತೆ ನಡೆಯುತ್ತದೆ ಇಂತಹ ಸಂದರ್ಭದಲ್ಲಿ ರಾಯಚೂರಿನಿಂದ ಛತ್ತೀಸ್ಗಢ ಗೆ ಬಿಲ್, ಬಳ್ಳಾರಿಯಲ್ಲಿ ಅಕ್ಕಿ, ಪೊಲೀಸ್ ಠಾಣೆಯಲ್ಲಿ ಗಾಡಿ,ಯಾವುದೇ ಪ್ರಕರಣ ಇಲ್ಲದೆ ಬಿಟ್ಟು ಕಳಿಸಿರುವುದು ಆಶ್ಚರ್ಯವಾಗಿದೆ. ಇನ್ನು ಈ ವಿಚಾರವಾಗಿ ಅಧಿಕಾರಿಗಳಿಗೆ ಕೇಳಿದರೆ ಇಲ್ಲ ನಮಗೆ ಗೊತ್ತಿಲ್ಲ ಎನ್ನುವ ಬೇಜವಾಬ್ದಾರಿ ಮಾತನಾಡುತ್ತಾರೆ.

ಲಾರಿ ಬಿಲ್ ಚೆಕ್ ಮಾಡಿದ್ದು ಯಾರು ?

ಗಣಿನಾಡು ಬಳ್ಳಾರಿ ನಗರದಲ್ಲಿ ಪೊಲೀಸರು ಲಾರಿ ಬಿಲ್ ಗಳು ಮದ್ಯರಾತ್ರಿ ಚೆಕ್ ಮಾಡಿದ್ದು ಯಾರು, ಸಾಧಾರಣ ಟೈಮ್ ನಲ್ಲಿ ಬಂದು ನೋಡಲು ಬರದೇ ಇರುವ ಅಧಿಕಾರಿಗಳು ಮದ್ಯ ರಾತ್ರಿ ಬಂದು ನೋಡಿರಬಹುದಾ. ಈಗಲೇ ರಫೀಕ್ ಅವರ ಮೇಲೆ ಕೆಲ ಸಿಬ್ಬಂದಿ ಮೇಲೆ ಆರೋಪ ಇವೆ. ಅಕ್ರಮ ಚಟವಟೆಕೆಗಳಿಗೆ ನಿರ್ದೇಶಕ ಕೀರ್ತಿ ಇದೇ ಲೋಕಾಯುಕ್ತ ಸಮಯದಲ್ಲಿ ಬಹುತೇಕ ಬಹಳ ಸಮಸ್ಯೆಗಳನ್ನು ಮಾಡಿದ್ದನ್ನು ನೊಂದವರು ತಿಳಿಸಿದ್ದಾರೆ.

“ಸಚಿವ ಸಂತೋಷ ಲಾಡ್ ಹೆಸರು ಹೇಳುವ ರಫೀಕ್”
ಠಾಣೆಯ ಅಧಿಕಾರಿ ರಫೀಕ್ ಪದೇ ಪದೇ ಸಚಿವ ಸಂತೋಷ್ ಲಾಡ್ ಹೆಸರು ಹೇಳಿಕೊಂಡು ಬಂದಿದ್ದಾನೆ ಎನ್ನುವ ಆರೋಪ ಸಹ ಇದೆ. ಈ ಅಕ್ರಮ ಅಕ್ಕಿ ಪಡಿತರದಲ್ಲಿ ಪೊಲೀಸ್ ಠಾಣೆಗೆ ಮಾಮೂಲು ಸಹ ಇದೆ ಎನ್ನುವ ಮಾಹಿತಿ ಸಹ ಇದೆ.

ಎಸ್ಪಿ ಅವರ ಕ್ರಮ ಯಾವಾಗ ?

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಅವರು ಯಾವ ? ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಜಿಲ್ಲೆಗೆ ಬಳ್ಳಾರಿ ಪೊಲೀಸ್ ವರಿಷ್ಟಾಧಿಕಾರಿ ಅಧಿಕಾರ ಸ್ವೀಕರಿದ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆವೇ ಎನ್ನುವ ಅನುಮಾನ ಸಹ ಇದೆ ಎನ್ನುವ ಮಾತು ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ.

ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ಬಡವರಿಗೆ ನೀಡುವ ಪಡಿತರ ಅಕ್ಕಿ ಕಳ್ಳರ ಪಾಲಾಗುತ್ತಿದೆ, ಇನ್ನು ಪಡಿತರ ಅಕ್ಕಿಯ ವಿತರಕರು 1 ಕಿಲೋಗ್ರಾಂ ಗೆ 10 ರಿಂದ 12 ರೂಪಾಯಿ ಕೊಂಡುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಹ ಇದೆ. ಇವರ ವಿರುದ್ಧ ಹಾಗೂ ಪಡಿತರ ಅಕ್ಕಿ ಮಾರಾಟ ಮಾಡುವ ಸಾರ್ವಜನಿಕರ ಮೇಲೆ ಕ್ರಮ ತೆಗೆದುಕೊಳ್ಳಬೇಕಿದೆ‌.

ಒಟ್ಟಾರೆಯಾಗಿ ಬಳ್ಳಾರಿ ಜಿಲ್ಲೆಯ ವಿವಿಧ ಠಾಣೆ ವ್ಯಾಪ್ತಿ ಅಧಿಕಾರಿಗಳಿಗೆ ಎಸ್ಪಿ ಅವರು ಯಾವ ರೀತಿ ಕ್ರಮ ತೆಗೆದುಕೊಳ್ಳುವರು ಕಾದು ನೋಡೊಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending