ದಿನದ ಸುದ್ದಿ
ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!
- ಗಿರೀಶ್ ಕುಮಾರ್ ಗೌಡ,ಬಳ್ಳಾರಿ
ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ ಸಾಗಾಟ ಮಾಡುತ್ತಿರುವ ಅಂಶಗಳು ಬೆಳಕಿಗೆ ಬಂದಿವೆ.
ಅದರಲ್ಲಿ 10 ಲಕ್ಷ ಮೌಲ್ಯದ ಅನುಮಾನ ಪಡಿತರ ಅಕ್ಕಿ ಲಾರಿ, ಮದ್ಯ ರಾತ್ರಿಯಿಂದ ಬೆಳಿಗ್ಗೆ 9ಗಂಟೆವರೆಗೆ ಇದ್ದ ಲಾರಿ ನಂತರ ಇಲ್ಲದೆ ಇರೋದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಬಳ್ಳಾರಿ ನಗರದಲ್ಲಿ ಕೆಲ ದಿನಗಳ ಹಿಂದೆ ( ರಾತ್ರಿ 2.30 ಗಂಟೆ) ಸಮಯದಲ್ಲಿ 10 ಲಕ್ಷ ರೂಪಾಯಿ ಮೌಲ್ಯದ ಪಡಿತರ ಅಕ್ಕಿ ವಾಹನವನ್ನು ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಯ ಪೊಲೀಸ ಅಧಿಕಾರಿಗಳು ತಪಾಸಣೆ ಮಾಡಿ ಠಾಣೆಗೆ ತಂದು ನಿಲ್ಲಿಸಿಕೊಂಡಿದ್ದರು.
ರಾಯಚೂರುನಿಂದ ಛತ್ತೀಸ್ಗಢದ ವರೆಗೆ ಪಡಿತರ ಅಕ್ಕಿ ಸಾಗಾಟ
ರಾಯಚೂರದಿಂದ ಛತ್ತೀಸ್ಗಢಕ್ಕೆ ಸಾಗಣೆಯ ಮಾಡುತ್ತಿದ್ದ ವಾಹನವಾಗಿತ್ತು ವಾಹನಕ್ಕೆ ಆರ್.ಕೆ ಎಂಟರ್ಪ್ರೈಸಸ್ ರಾಯಚೂರು,ಬಳ್ಳಾರಿ ಎಂದು ಬಿಲ್ ಹಾಕಿ ರಾಯಚೂರುದಿಂದ ಛತ್ತೀಸ್ ಗಡಿಗೆ ಅಕ್ಕಿ ಸರಬರಾಜು ಮಾಡುತ್ತಿದ್ದ ಮತ್ತೊಂದು ಬಿಲ್ ಹಾಕಿ ಕಳಿಸಲಾಗಿತ್ತು. ಈ ವಾಹನಕ್ಕೆ ಬಳ್ಳಾರಿಯ ಹವಂಬಾವಿ ಪ್ರದೇಶದಲ್ಲಿ ಕಳಸಾಗಣಿಕೆ ಪಡಿತರ ಅಕ್ಕಿಯನ್ನು ತುಂಬಿದ್ದಾರೆ. ಇದಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ಮಾತ್ರ ಇದೆ ಎನ್ನುವ ಆರೋಪ ಇದೆ.
ಮಧ್ಯರಾತ್ರಿದಿಂದ ಬೆಳಿಗ್ಗೆ 9 ಗಂಟೆಗೆ ಠಾಣೆಯಲ್ಲಿ ಲಾರಿ ವಾಹನವನ್ನು ಇಟ್ಟುಕೊಂಡು ಎಲ್ಲವೂ ಸರಿ ಇದ್ದಾವೆ ಎಂದು ಗಾಡಿಯನ್ನು ಬಿಟ್ಟು ಕಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎನ್ನುವ ಸಾರ್ವಜನಿಕ ಪ್ರಶ್ನೆ.
ಈ ಠಾಣೆಗೆ ನೂತನವಾಗಿ ಬಂದಿರುವ ಪೊಲೀಸ್ ಅಧಿಕಾರಿ ತೋರಣಗಲ್ಲು, ಸಂಡೂರು, ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿ ಬಳ್ಳಾರಿ ಎಪಿಎಂಸಿ ಠಾಣಿಗೆ ವರ್ಗಾವಣೆ ಆಗಿರುವ ರಫೀಕ್ ಅವರ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಸಾರ್ವಜನಿಕರು.
ಈಗಾಗಲೇ ಪಡಿತರ ಕಳಸಾಗಾಣಿಕೆ ದಂದೆ ನಡೆಯುತ್ತಿದ್ದು ಕಣ್ಣಿಗೆ ಕಂಡು ಕಾಣದಂತೆ ನಡೆಯುತ್ತದೆ ಇಂತಹ ಸಂದರ್ಭದಲ್ಲಿ ರಾಯಚೂರಿನಿಂದ ಛತ್ತೀಸ್ಗಢ ಗೆ ಬಿಲ್, ಬಳ್ಳಾರಿಯಲ್ಲಿ ಅಕ್ಕಿ, ಪೊಲೀಸ್ ಠಾಣೆಯಲ್ಲಿ ಗಾಡಿ,ಯಾವುದೇ ಪ್ರಕರಣ ಇಲ್ಲದೆ ಬಿಟ್ಟು ಕಳಿಸಿರುವುದು ಆಶ್ಚರ್ಯವಾಗಿದೆ. ಇನ್ನು ಈ ವಿಚಾರವಾಗಿ ಅಧಿಕಾರಿಗಳಿಗೆ ಕೇಳಿದರೆ ಇಲ್ಲ ನಮಗೆ ಗೊತ್ತಿಲ್ಲ ಎನ್ನುವ ಬೇಜವಾಬ್ದಾರಿ ಮಾತನಾಡುತ್ತಾರೆ.
ಲಾರಿ ಬಿಲ್ ಚೆಕ್ ಮಾಡಿದ್ದು ಯಾರು ?
ಗಣಿನಾಡು ಬಳ್ಳಾರಿ ನಗರದಲ್ಲಿ ಪೊಲೀಸರು ಲಾರಿ ಬಿಲ್ ಗಳು ಮದ್ಯರಾತ್ರಿ ಚೆಕ್ ಮಾಡಿದ್ದು ಯಾರು, ಸಾಧಾರಣ ಟೈಮ್ ನಲ್ಲಿ ಬಂದು ನೋಡಲು ಬರದೇ ಇರುವ ಅಧಿಕಾರಿಗಳು ಮದ್ಯ ರಾತ್ರಿ ಬಂದು ನೋಡಿರಬಹುದಾ. ಈಗಲೇ ರಫೀಕ್ ಅವರ ಮೇಲೆ ಕೆಲ ಸಿಬ್ಬಂದಿ ಮೇಲೆ ಆರೋಪ ಇವೆ. ಅಕ್ರಮ ಚಟವಟೆಕೆಗಳಿಗೆ ನಿರ್ದೇಶಕ ಕೀರ್ತಿ ಇದೇ ಲೋಕಾಯುಕ್ತ ಸಮಯದಲ್ಲಿ ಬಹುತೇಕ ಬಹಳ ಸಮಸ್ಯೆಗಳನ್ನು ಮಾಡಿದ್ದನ್ನು ನೊಂದವರು ತಿಳಿಸಿದ್ದಾರೆ.
“ಸಚಿವ ಸಂತೋಷ ಲಾಡ್ ಹೆಸರು ಹೇಳುವ ರಫೀಕ್”
ಠಾಣೆಯ ಅಧಿಕಾರಿ ರಫೀಕ್ ಪದೇ ಪದೇ ಸಚಿವ ಸಂತೋಷ್ ಲಾಡ್ ಹೆಸರು ಹೇಳಿಕೊಂಡು ಬಂದಿದ್ದಾನೆ ಎನ್ನುವ ಆರೋಪ ಸಹ ಇದೆ. ಈ ಅಕ್ರಮ ಅಕ್ಕಿ ಪಡಿತರದಲ್ಲಿ ಪೊಲೀಸ್ ಠಾಣೆಗೆ ಮಾಮೂಲು ಸಹ ಇದೆ ಎನ್ನುವ ಮಾಹಿತಿ ಸಹ ಇದೆ.
ಎಸ್ಪಿ ಅವರ ಕ್ರಮ ಯಾವಾಗ ?
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಅವರು ಯಾವ ? ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಜಿಲ್ಲೆಗೆ ಬಳ್ಳಾರಿ ಪೊಲೀಸ್ ವರಿಷ್ಟಾಧಿಕಾರಿ ಅಧಿಕಾರ ಸ್ವೀಕರಿದ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆವೇ ಎನ್ನುವ ಅನುಮಾನ ಸಹ ಇದೆ ಎನ್ನುವ ಮಾತು ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ.
ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ಬಡವರಿಗೆ ನೀಡುವ ಪಡಿತರ ಅಕ್ಕಿ ಕಳ್ಳರ ಪಾಲಾಗುತ್ತಿದೆ, ಇನ್ನು ಪಡಿತರ ಅಕ್ಕಿಯ ವಿತರಕರು 1 ಕಿಲೋಗ್ರಾಂ ಗೆ 10 ರಿಂದ 12 ರೂಪಾಯಿ ಕೊಂಡುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಹ ಇದೆ. ಇವರ ವಿರುದ್ಧ ಹಾಗೂ ಪಡಿತರ ಅಕ್ಕಿ ಮಾರಾಟ ಮಾಡುವ ಸಾರ್ವಜನಿಕರ ಮೇಲೆ ಕ್ರಮ ತೆಗೆದುಕೊಳ್ಳಬೇಕಿದೆ.
ಒಟ್ಟಾರೆಯಾಗಿ ಬಳ್ಳಾರಿ ಜಿಲ್ಲೆಯ ವಿವಿಧ ಠಾಣೆ ವ್ಯಾಪ್ತಿ ಅಧಿಕಾರಿಗಳಿಗೆ ಎಸ್ಪಿ ಅವರು ಯಾವ ರೀತಿ ಕ್ರಮ ತೆಗೆದುಕೊಳ್ಳುವರು ಕಾದು ನೋಡೊಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243