Connect with us

ಲೈಫ್ ಸ್ಟೈಲ್

ಕೊಬ್ಬು ಕರಗಿಸೋ ‘ಬೆಟ್ಟದ ನೆಲ್ಲಿಕಾಯಿ’ ಬಗ್ಗೆ ನಿಮಗೆಷ್ಟು ಗೊತ್ತು..?

Published

on

ಸುದ್ದಿದಿನ ಡೆಸ್ಕ್ : ಬೆಟ್ಟದ ನೆಲ್ಲಿಕಾಯಿ ಎಂದರೆ ಎಲ್ಲರಿಗೂ ಬಾಯಲ್ಲಿ ನೀರು ಬರುತ್ತದೆ. ಆಯುರ್ವೇದದಲ್ಲಿ ಅದು ಇರಲೇ ಬೇಕು. ಅದರಲ್ಲಿ ಇರೋ ವಿಟಮಿನ್-ಸಿ, ಕಬ್ಬಿಣ, ಹೆಚ್ಚಿನ ನಾರಿನಾಂಶ ಮತ್ತು ಕ್ಯಾಲ್ಸಿಯಂ ಅದನ್ನು ಎಲ್ಲಾ ಔಷಧಗಳಲ್ಲಿ ಬಳಸುವಂತೆ ಮಾಡಿದೆ. ಇದನ್ನು ಹೇಗೆಲ್ಲ ಉಪಯೋಗ ಮಾಡಬಹುದು ತಿಳಿಯೋಣ ಮುಂದೆ.

ಉಪಯೋಗಗಳು

  1. ಮೂರು ಚಮಚ ನೆಲ್ಲಿಕಾಯಿ ರಸರೊಂದಿಗೆ ಮೂರು ಚಮಚ ಜೇನುತುಪ್ಪವನ್ನು ಬೆರೆಸಿ ಸೇವಿಸಿದರೆ ಮೆದುಳಿನ ಖಾಯಿಲೆಯು ನಿವಾರಣೆಯಾಗುತ್ತದೆ.
  2. ಬೆಲ್ಲದೊಂದಿಗೆ ನೆಲ್ಲಿಕಾಯಿ ರಸವನ್ನು ಕುಡಿಯುವುದರಿಂದ ಹೊಟ್ಟೆ ನೋವು ನಿವಾರಣೆಯಾಗುತ್ತದೆ.
  3. ನೆಲ್ಲಿಕಾಯಿಯ ಎಲೆಗಳಿಂದ ಕಷಾಯ ತಯಾರಿಸಿ ಬಾಯಿ ಮುಕ್ಕಳಿಸಿದರೆ ಬಾಯಿ ಹುಣ್ಣು ಮಾಯವಾಗುತ್ತದೆ.
  4. ಕಿರುನಲ್ಲಿಕಾಯಿಯನ್ನು ಉಪ್ಪಸಹಿತ ತಿಂದರೆ ತಲೆಸುತ್ತುವಿಕೆ, ಅಜೀರ್ಣ ನಿವಾರಣೆಯಾಗುತ್ತದೆ.
  5. ಬೆಟ್ಟದ ನೆಲ್ಲಿಕಾಯಿಯ ರಸವನ್ನು ಅಂಗೈಗೆ ಹಚ್ಚಿಕೊಂಡರೆ ಅತಿ ಬೆವರು ವಸರುವುದು ಸ್ಥಗಿತಗೊಳ್ಳುವುದು.
  6. ಬೆಟ್ಟದ ನೆಲ್ಲಿಕಾಯಿಯ ಚೂರ್ಣವನ್ನು ಮಜ್ಜಿಗೆಯಲ್ಲಿ ಕದಡಿ ಕುಡಿದರೆ ಆಸನಾಗ್ರದಲ್ಲಿ ಆಗುವ ಉರಿ ನಿಂತುಹೋಗುವುದು.
  7. ಬಲಿತ ನೆಲ್ಲಿಕಾಯಿಯ ಚೂರ್ಣವನ್ನು ಬಿಸಿನೀರಿನಲ್ಲಿ ಚೆನ್ನಾಗಿ ಕಿವುಚಿ ಅದಕ್ಕೆ ಸಕ್ಕರೆಯನ್ನು ಸೇರಿಸಿ ಶೋಧಿಸಿದ ನಂತರ ಸೇವಿಸಿದರೆ ಬಾಯಿ, ಮೂಗು ಮತ್ತು ಗುದದ್ವಾರದಿಂದ ಹೊರ ಬೀಳುವ ರಕ್ತ ಗಟ್ಟಿ ನಿಂತುಹೋಗುವುದು.
  8. ಒಂದು ಊಟದ ಚಮಚ ನೆಲ್ಲಿಕಾಯಿ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪವನ್ನು ಪ್ರತಿದಿನ ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ರೋಗವೂ ಸಹ ಸಂಪೂರ್ಣವಾಗಿ ಗುಣವಾಗುತ್ತದೆ
  9. ನಿರಂತರವಾಗಿ ನೆಲ್ಲಿಕಾಯಿಯ ರಸವನ್ನು ಸೇವಿಸಿದರೆ ಕಣ್ಣಿನ ದೋಷಗಳು ದೂರವಾಗುವುದು.
  10. ಅಧಿಕ ರಕ್ತ ಸ್ರಾವವಗಿರುವವರು ನೆಲ್ಲಿಕಾಯಿಯ ರಸವನ್ನು ಜೇನುತುಪ್ಪವನ್ನು ಬೆರೆಸಿ ಕುಡಿದರೆ ಹೆಚ್ಚು ಚೈತನ್ಯ ಉಂಟಾಗುತ್ತದೆ.
  11. ನುಣ್ಣಗೆ ಅರೆದ ನೆಲ್ಲಿಕಾಯಿಯೊಡನೆ ಬೆಲ್ಲ ಸೇರಿಸಿ ತಿಂದರೆ ಸಿಹಿಮೂತ್ರ ರೋಗಿಗಳ ರೋಗ ಸ್ವಲ್ಪ ಮಟ್ಟಿಗೆ ಹತೋಟಿಗೆ ಬರುತ್ತದೆ.
  12. ಮಧುಮೇಹ ರೋಗಿಗಳು, ಕೂದಲು ಉದುರುವವರು ನೆಲ್ಲಿಕಾಯಿಯನ್ನು ಹೆಚ್ಚು ಉಪಯೋಗಿಸಿದರೆ ದೋಷಗಳು ನಿವಾರಣೆಯಾಗುತ್ತದೆ.
  13. ನೆಲ್ಲಿಕಾಯಿಯನ್ನು ತೈಲದೊಡನೆ ಬೆರೆಸಿ ತಲೆಗೆ ಹಚ್ಚಿಕೊಂಡರೆ ಕೂದಲು ನೆರೆಯುವುದಿಲ್ಲ. ಕೇಶದ ಬೆಳವಣಿಗೆಗೆ ಹೆಚ್ಚು ಸಹಾಯಕವಾಗುತ್ತದೆ.
  14. ನೆಲ್ಲಿಕಾಯಿಯ ಮೊರಬ್ಬ, ಚಟ್ನಿ ಮಾಡಿಕೊಂಡು ಕ್ರಮವಾಗಿ ತಿನ್ನುವುದರಿಂದ ನೆಗಡಿ, ಉಬ್ಬಸ , ಕ್ಷಯ, ಅಕಾಲ ಮುಪ್ಪು ಮುಂತಾದ ರೋಗಗಳಿಂದ ಗುಣವಾಗುತ್ತದೆ.
  15. ನೆಲ್ಲಿಕಾಯಿಯನ್ನು ಹೆಚ್ಚು ಬಳಸುವುದರಿಂದ ಕೊಲೆಸ್ಟ್ರಾಲ್ ಕಮ್ಮಿ ಮಾಡಿ ಗಾಲ್ ಬ್ಲಾಡರ್ ನಲ್ಲಿ ಕಲ್ಲು ಕರಗಿಸುತ್ತದೆ.
  16. ಊಟದ ನಂತರ ನೆಲ್ಲಿಕಾಯಿ ಚೂರ್ಣ ತಿನ್ನುವುದರಿಂದ ಅಲ್ಸರ್ ಕಡಿಮೆ ಆಗುವುದು.
  17. ನೆಲ್ಲಿಕಾಯಿಯಲ್ಲಿ ಆಂಟಿಆಕ್ಸಿಡೆಂಟ್ ಮತ್ತು ವಿಟಮಿನ್‌ ಗಳು ಇರುವ ಕಾರಣ ಅದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
  18. ನೆಲ್ಲಿಕಾಯಿಯ ರಸ ಅಥವಾ ನೆಲ್ಲಿಕಾಯಿಯ ಪುಡಿಯನ್ನು ಸ್ವಲ್ಪ ಬಿಸಿ ನೀರಿನಲ್ಲಿ ಬೆರೆಸಿ ಸೇವಿಸುವುದರಿಂದ ಬ್ಲಡ್ ಶುಗರ್ ಕಡಿಮೆ ಮಾಡುತ್ತದೆ.
  19. ಮೂತ್ರ ಮತ್ತು ಮೂತ್ರಪಿಂಡ ಸಂಬಂಧಿಸಿದ ರೋಗಗಳನ್ನು ಈ ನೆಲ್ಲಿಕಾಯಿ ಸೇವನೆಯಿಂದ ಮೂತ್ರದ ಮೂಲಕ ದೇಹದಲ್ಲಿನ ಹೆಚ್ಚಿನ ಉಪ್ಪಿನಾಂಶ ಮತ್ತು ಅವಶ್ಯಕವಾದ ಟಾಕ್ಸಿನ್, ಯೂರಿಕ್ ಆಸಿಡ್ ಅನ್ನು ಹೊರಹಾಕುತ್ತದೆ.
  20. ನೆಲ್ಲಿಕಾಯಿಯ ಸೇವನೆಯಿಂದ ಹೃದಯದಲ್ಲಿ ಆಗೋ ಹೋಲ್ ಮತ್ತು ಹೃದಯ ಸಂಬಂಧಿಸಿದ ಕಾಯಿಲೆಯನ್ನು ಕಡಿಮೆ ಮಾಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಲೈಫ್ ಸ್ಟೈಲ್

ಅನ್ನ ಜಿಗುಟಾಯಿತಾ? ಬ್ರೆಡ್‌ನ ಈ ಸರಳ ಟ್ರಿಕ್‌ನಿಂದ ಮೆತ್ತಗಾದ ಅನ್ನಕ್ಕೆ ಪರಿಹಾರ!

Published

on

bread_trick_fix_sticky_overcooked
ಅನ್ನ ಜಿಗುಟಾಯಿತಾ? ಬ್ರೆಡ್‌ನ ಈ ಸರಳ ಟ್ರಿಕ್‌ನಿಂದ ಮೆತ್ತಗಾದ ಅನ್ನಕ್ಕೆ ಪರಿಹಾರ!

ಸುದ್ದಿದಿನ: ಅನ್ನ ಬೇಯಿಸುವಾಗ ನೀರು ಹೆಚ್ಚಾಗಿ ಬಿದ್ದು ಮೆತ್ತಗಾಗುವುದು ಅಥವಾ ಹೆಚ್ಚು ಹೊತ್ತು ಬೇಯಿಸಿ ಜಿಗುಟಾಗುವುದು ಸಾಮಾನ್ಯ. ಆದರೆ ಇಂತಹ ಸಂದರ್ಭಗಳಲ್ಲಿ ಅನ್ನವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ಅಡುಗೆಮನೆಯಲ್ಲಿರುವ ಒಣ ಬ್ರೆಡ್ ತುಂಡೇ ಹೆಚ್ಚುವರಿ ತೇವಾಂಶವನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು. ಈ ಸರಳ ತಂತ್ರವನ್ನು ಹೇಗೆ ಬಳಸಬೇಕು ಎಂಬುದನ್ನು ತಿಳಿಯೋಣ.

ಅಕ್ಕಿಯನ್ನು ಅಗತ್ಯಕ್ಕಿಂತ ಹೆಚ್ಚು ಬೇಯಿಸಿದಾಗ ಕಾಳುಗಳು ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೀರಿಕೊಳ್ಳುತ್ತವೆ. ಪರಿಣಾಮವಾಗಿ ಅವುಗಳ ಸಹಜ ರಚನೆ ಕಳೆದು, ಮೆತ್ತಗೆ ಹಾಗೂ ಒಂದಕ್ಕೊಂದು ಅಂಟಿಕೊಳ್ಳುವಂತಾಗುತ್ತವೆ. ಹೆಚ್ಚು ನೀರು ಸೇರಿಸುವುದು, ಅಗತ್ಯಕ್ಕಿಂತ ಹೆಚ್ಚು ಸಮಯ ಬೇಯಿಸುವುದು ಮತ್ತು ಅಕ್ಕಿಯ ಪ್ರಕಾರಕ್ಕೆ ಸರಿಯಾದ ನೀರಿನ ಪ್ರಮಾಣ ಬಳಸದಿರುವುದು ಇದಕ್ಕೆ ಪ್ರಮುಖ ಕಾರಣಗಳಾಗಿವೆ.

ಅಕ್ಕಿ ಸಂಪೂರ್ಣವಾಗಿ ಗಂಜಿಯಂತಹ ಹದಕ್ಕೆ ಬರುವ ಮೊದಲು ಸಮಸ್ಯೆಯನ್ನು ಗುರುತಿಸಿದರೆ, ಹೆಚ್ಚುವರಿ ತೇವಾಂಶವನ್ನು ಕಡಿಮೆ ಮಾಡುವ ಮೂಲಕ ಅನ್ನದ ಹದವನ್ನು ಸ್ವಲ್ಪಮಟ್ಟಿಗೆ ಸುಧಾರಿಸಬಹುದು.

http://Visit : www.suddidina.com

ಬ್ರೆಡ್ ತುಂಡು ಹೇಗೆ ಸಹಾಯ ಮಾಡುತ್ತದೆ?

Suddidina

ಅನ್ನದಲ್ಲಿ ನೀರು ಹೆಚ್ಚಾಗಿ ಉಳಿದಿದ್ದರೆ ಮೊದಲು ಸಾಧ್ಯವಾದಷ್ಟು ಹೆಚ್ಚುವರಿ ನೀರನ್ನು ಎಚ್ಚರಿಕೆಯಿಂದ ಬಸಿದು ತೆಗೆಯಬೇಕು. ಬಳಿಕ ಅನ್ನದ ಮೇಲೆ ದಪ್ಪವಾದ, ಸ್ವಲ್ಪ ಒಣಗಿದ ಬ್ರೆಡ್ ತುಂಡನ್ನು ಇರಿಸಿ ಪಾತ್ರೆಯನ್ನು ಮುಚ್ಚಬೇಕು.

ಉರಿಯನ್ನು ತೀರಾ ಕಡಿಮೆ ಮಟ್ಟದಲ್ಲಿಟ್ಟು ಕೆಲವು ನಿಮಿಷಗಳ ಕಾಲ ಹಾಗೆಯೇ ಬಿಡಿ. ಬ್ರೆಡ್‌ನ ಒಣ ರಚನೆಯು ಸ್ಪಂಜಿನಂತೆ ವರ್ತಿಸಿ ಅನ್ನದಲ್ಲಿರುವ ಹೆಚ್ಚುವರಿ ತೇವಾಂಶವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.

ಹೆಚ್ಚು ನೀರಾದ ಅನ್ನಕ್ಕೆ ಎರಡು–ಮೂರು ಬ್ರೆಡ್ ತುಂಡು

ಅನ್ನದಲ್ಲಿ ನೀರಿನ ಪ್ರಮಾಣ ಹೆಚ್ಚು ಇದ್ದರೆ ಒಂದು ಬ್ರೆಡ್ ತುಂಡು ಸಾಕಾಗದಿರಬಹುದು. ಅಂತಹ ಸಂದರ್ಭದಲ್ಲಿ ಎರಡು ಅಥವಾ ಮೂರು ಒಣ ಬ್ರೆಡ್ ತುಂಡುಗಳನ್ನು ಅನ್ನದ ಮೇಲೆ ಬೇರೆ ಬೇರೆ ಕಡೆಗಳಲ್ಲಿ ಇರಿಸಬಹುದು. ಕೆಲವು ನಿಮಿಷಗಳ ನಂತರ ಬ್ರೆಡ್ ತುಂಡುಗಳನ್ನು ತೆಗೆದುಹಾಕಬೇಕು.

ಆದರೆ ಬ್ರೆಡ್ ಅನ್ನು ಹೆಚ್ಚು ಹೊತ್ತು ಪಾತ್ರೆಯಲ್ಲೇ ಬಿಡಬಾರದು. ಅದು ಹೆಚ್ಚಿನ ತೇವಾಂಶ ಹೀರಿಕೊಂಡು ಮೆತ್ತಗಾಗಬಹುದು.

ಈ ವಿಧಾನ ಯಾವಾಗ ಪರಿಣಾಮಕಾರಿ?

ಅನ್ನ ಸ್ವಲ್ಪ ಹೆಚ್ಚು ತೇವವಾಗಿದ್ದಾಗ ಅಥವಾ ಕಾಳುಗಳು ತಮ್ಮ ಆಕಾರವನ್ನು ಇನ್ನೂ ಉಳಿಸಿಕೊಂಡಿರುವಾಗ ಈ ತಂತ್ರ ಹೆಚ್ಚು ಉಪಯುಕ್ತ. ಆದರೆ ಅಕ್ಕಿ ಸಂಪೂರ್ಣವಾಗಿ ಬೆಂದು ಒಡೆದು ಗಂಜಿಯಂತಹ ಹದಕ್ಕೆ ಬಂದಿದ್ದರೆ, ಬ್ರೆಡ್ ಅದನ್ನು ಮತ್ತೆ ಉದುರುದುರಾದ ಅನ್ನವನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ. ಬ್ರೆಡ್ ಹೆಚ್ಚುವರಿ ತೇವಾಂಶವನ್ನು ಮಾತ್ರ ಹೀರಿಕೊಳ್ಳುತ್ತದೆ.

ರೈಸ್ ಕುಕ್ಕರ್‌ನಲ್ಲೂ ಬಳಸಬಹುದು

ರೈಸ್ ಕುಕ್ಕರ್‌ನಲ್ಲಿ ಅನ್ನ ಬೇಯಿಸುವಾಗ ಆಕಸ್ಮಿಕವಾಗಿ ನೀರು ಹೆಚ್ಚಾದರೂ ಇದೇ ವಿಧಾನ ಪ್ರಯತ್ನಿಸಬಹುದು. ಮೊದಲು ಅನ್ನ ಸಂಪೂರ್ಣವಾಗಿ ಬೆಂದಿದೆಯೇ ಎಂದು ಪರಿಶೀಲಿಸಿ.

ಕಾಳುಗಳು ಚೆನ್ನಾಗಿದ್ದು ಹೆಚ್ಚುವರಿ ತೇವಾಂಶ ಮಾತ್ರ ಉಳಿದಿದ್ದರೆ, ಒಣ ಬ್ರೆಡ್ ತುಂಡನ್ನು ಮೇಲೆ ಇರಿಸಿ 5 ನಿಮಿಷ ಮುಚ್ಚಿಡಬಹುದು.

ಮುಂದೆ ಅನ್ನ ಜಿಗುಟಾಗದಂತೆ ಏನು ಮಾಡಬೇಕು?

ಪ್ರತಿಯೊಂದು ಬಗೆಯ ಅಕ್ಕಿಗೂ ಬೇಕಾಗುವ ನೀರಿನ ಪ್ರಮಾಣ ಒಂದೇ ಆಗಿರುವುದಿಲ್ಲ. ಆದ್ದರಿಂದ ಅಕ್ಕಿಯ ಪ್ಯಾಕೆಟ್‌ನ ಸೂಚನೆ ಅಥವಾ ನೀವು ಅನುಸರಿಸುವ ಪಾಕವಿಧಾನದ ಪ್ರಕಾರ ನೀರನ್ನು ಅಳೆಯುವುದು ಉತ್ತಮ.

ಅನ್ನ ಬೇಯುವಾಗ ಪದೇಪದೇ ಮುಚ್ಚಳ ತೆರೆಯುವುದನ್ನು ತಪ್ಪಿಸಿ. ಸರಿಯಾದ ಸಮಯದಲ್ಲಿ ಉರಿಯನ್ನು ಆರಿಸಿ, ಅನ್ನವನ್ನು ಅಗತ್ಯಕ್ಕಿಂತ ಹೆಚ್ಚು ಹೊತ್ತು ಒಲೆಯ ಮೇಲಿಡದಿರುವುದು ಕೂಡ ಮುಖ್ಯ.

Continue Reading

ಲೈಫ್ ಸ್ಟೈಲ್

ರಕ್ಷಾಬಂಧನದ ಸಿಹಿಗೆ ಮಾರುಕಟ್ಟೆ ಖೋವಾ ಬೇಡ; ಮನೆಯಲ್ಲೇ ಶುದ್ಧ ಮಾವಾ ತಯಾರಿಸಿ!

Published

on

Khova_Making_Raksha_Bandana_Suddidina
ರಕ್ಷಾಬಂಧನದ ಸಿಹಿಗೆ ಮಾರುಕಟ್ಟೆ ಖೋವಾ ಖರೀದಿಸುವ ಬದಲು, 2 ಲೀಟರ್ ಹಾಲಿನಿಂದ ಮನೆಯಲ್ಲೇ ತಯಾರಿಸಿ ಶುದ್ಧ ಖೋವಾ

ಸುದ್ದಿದಿನ: ರಕ್ಷಾಬಂಧನ ಸೇರಿದಂತೆ ಹಬ್ಬಗಳ ಸಮಯದಲ್ಲಿ ಸಿಹಿತಿಂಡಿಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಗುಲಾಬ್ ಜಾಮೂನ್, ಪೇಡಾ, ಬರ್ಫಿ, ಗುಜಿಯಾ ಸೇರಿದಂತೆ ಹಲವು ಸಿಹಿತಿಂಡಿಗಳ ತಯಾರಿಕೆಯಲ್ಲಿ ಖೋವಾ ಪ್ರಮುಖ ಪದಾರ್ಥವಾಗಿದೆ. ಇದೇ ಕಾರಣಕ್ಕೆ ಹಬ್ಬದ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಖೋವಾಕ್ಕೆ ಬೇಡಿಕೆಯೂ ಹೆಚ್ಚುತ್ತದೆ.

ಆದರೆ ಮಾರುಕಟ್ಟೆಯಲ್ಲಿ ಸಿಗುವ ಖೋವಾದ ಗುಣಮಟ್ಟದ ಬಗ್ಗೆ ಗ್ರಾಹಕರು ಎಚ್ಚರಿಕೆ ವಹಿಸುವುದು ಅಗತ್ಯ. ಕಲಬೆರಕೆಯ ಖೋವಾದಲ್ಲಿ ಪಿಷ್ಟ, ಕೃತಕ ಕೊಬ್ಬು ಅಥವಾ ಇತರ ಅನಗತ್ಯ ಪದಾರ್ಥಗಳನ್ನು ಬಳಸುವ ಸಾಧ್ಯತೆ ಇರುವುದರಿಂದ, ಸಾಧ್ಯವಾದರೆ ಮನೆಯಲ್ಲೇ ಖೋವಾ ತಯಾರಿಸುವುದು ಉತ್ತಮ ಆಯ್ಕೆಯಾಗಬಹುದು.

http://Visit : www.suddidina.com

ನಿರಂತರವಾಗಿ ಕೈಯಾಡಿಸುವುದೇ ಮುಖ್ಯ

ಹಾಲು ಕುದಿಯುತ್ತಿರುವಾಗ ದಪ್ಪ ಸೌಟಿನಿಂದ ನಿರಂತರವಾಗಿ ಕಲಕುತ್ತಿರಬೇಕು. ವಿಶೇಷವಾಗಿ ಹಾಲು ಗಟ್ಟಿಯಾಗಲು ಆರಂಭಿಸಿದಾಗ ಪಾತ್ರೆಯ ತಳಕ್ಕೆ ಅಂಟದಂತೆ ಎಚ್ಚರಿಕೆ ವಹಿಸಬೇಕು. ಪಾತ್ರೆಯ ಅಂಚಿನಲ್ಲಿ ಶೇಖರವಾಗುವ ಕೆನೆಯನ್ನು ಕೆರೆದು ಮತ್ತೆ ಹಾಲಿನಲ್ಲೇ ಸೇರಿಸುತ್ತಿರಿ.

ಸುಮಾರು 20–25 ನಿಮಿಷಗಳ ಬಳಿಕ ಹಾಲು ಅರ್ಧದಷ್ಟು ಕಡಿಮೆಯಾಗಿ ರಾಬ್ರಿಯಂತೆ ದಪ್ಪವಾಗುತ್ತದೆ. ನಂತರ ಉರಿಯನ್ನು ಮಧ್ಯಮ ಅಥವಾ ಕಡಿಮೆ ಮಟ್ಟಕ್ಕೆ ಇಟ್ಟು ಮತ್ತಷ್ಟು ಕೈಯಾಡಿಸುತ್ತಿರಬೇಕು. ಇನ್ನೂ 10–15 ನಿಮಿಷಗಳಲ್ಲಿ ತೇವಾಂಶ ಕಡಿಮೆಯಾಗಿ ಮಿಶ್ರಣ ಗಟ್ಟಿಯಾಗಲು ಆರಂಭಿಸುತ್ತದೆ.

ಖೋವಾ ಸಿದ್ಧವಾಗುವುದು ಹೇಗೆ ಗೊತ್ತಾಗುತ್ತದೆ?

ಮಿಶ್ರಣವು ಹಿಟ್ಟಿನಂತೆ ಗಟ್ಟಿಯಾಗಿ, ಬಾಣಲೆಯ ತಳವನ್ನು ಬಿಡಲು ಆರಂಭಿಸಿದಾಗ ಖೋವಾ ಸಿದ್ಧವಾಗಿದೆ ಎಂದು ತಿಳಿಯಬಹುದು. ಉರಿ ಆರಿಸಿದ ನಂತರವೂ ಬಾಣಲೆ ಬಿಸಿಯಾಗಿರುವುದರಿಂದ ಒಂದು–ಎರಡು ನಿಮಿಷ ಸೌಟಿನಿಂದ ನಿಧಾನವಾಗಿ ಕೈಯಾಡಿಸಿ ಬಳಿಕ ತಟ್ಟೆ ಅಥವಾ ಬಟ್ಟಲಿಗೆ ವರ್ಗಾಯಿಸಿ.

ತಣ್ಣಗಾದಂತೆ ಖೋವಾ ಇನ್ನಷ್ಟು ಗಟ್ಟಿಯಾಗಿ ಉತ್ತಮ ಹರಳಿನ ಹದ ಪಡೆಯುತ್ತದೆ. ಇದನ್ನು ಪೇಡಾ, ಬರ್ಫಿ, ಗುಲಾಬ್ ಜಾಮೂನ್, ಗುಜಿಯಾ ಸೇರಿದಂತೆ ವಿವಿಧ ಸಿಹಿತಿಂಡಿಗಳಿಗೆ ಬಳಸಬಹುದು.

ಶೇಖರಣೆ ಮತ್ತು ಮುನ್ನೆಚ್ಚರಿಕೆ

ಖೋವಾ ತಯಾರಿಸುವಾಗ ದಪ್ಪ ತಳದ ಪಾತ್ರೆ ಬಳಸುವುದು ಅತ್ಯಗತ್ಯ. ಹಾಲು ಗಟ್ಟಿಯಾಗುವ ಹಂತದಲ್ಲಿ ನಿರಂತರವಾಗಿ ಕಲಕಬೇಕು. ಹೆಚ್ಚಿನ ಉರಿಯಲ್ಲಿ ಹೆಚ್ಚು ಹೊತ್ತು ಇಟ್ಟರೆ ಖೋವಾ ಸುಟ್ಟು ಬಣ್ಣ ಮತ್ತು ರುಚಿ ಬದಲಾಗಬಹುದು.

ಖೋವಾದಲ್ಲಿ ತೇವಾಂಶ ಮತ್ತು ಪೋಷಕಾಂಶ ಹೆಚ್ಚಿರುವುದರಿಂದ ಸಾಮಾನ್ಯ ತಾಪಮಾನದಲ್ಲಿ ಹೆಚ್ಚು ಕಾಲ ಇಡುವುದು ಸೂಕ್ತವಲ್ಲ. ತಯಾರಿಸಿದ ಖೋವಾವನ್ನು ಸ್ವಚ್ಛ, ಗಾಳಿಯೇರದ ಪಾತ್ರೆಯಲ್ಲಿ ಶೀತಲೀಕರಿಸಿ ಇಡುವುದು ಉತ್ತಮ. ದೀರ್ಘಕಾಲ ಸಂಗ್ರಹಿಸಬೇಕಾದರೆ ಫ್ರೀಜರ್ ಬಳಸಬಹುದು. ಬಳಸುವ ಮೊದಲು ಅದರ ವಾಸನೆ, ಬಣ್ಣ ಮತ್ತು ಹದದಲ್ಲಿ ಯಾವುದೇ ಬದಲಾವಣೆ ಆಗಿದೆಯೇ ಎಂಬುದನ್ನು ಪರಿಶೀಲಿಸುವುದು ಅಗತ್ಯ.

Continue Reading

ದಿನದ ಸುದ್ದಿ

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

Published

on

ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌!

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ

  • ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌!
  • ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಸುದ್ದಿದಿನ,ಮಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್‌: ಎ ಫೇರಿ ಟೇಲ್‌ ಫಾರ್ ಗ್ರೋನ್-ಅಪ್ಸ್‌’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್‌ 26ರಂದು ಚಿತ್ರ ತೆರೆಗೆ ಬರಲಿದ್ದು, ಬಿಡುಗಡೆಗೂ ಮುನ್ನ ಯಶ್‌ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌!

ನಿನ್ನೆ ಚೆನ್ನೈನಲ್ಲಿ ನಡೆದ ‘ಟಾಕ್ಸಿಕ್‌’ ಪ್ರೀ-ರಿಲೀಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್‌, ಕಾರ್ಯಕ್ರಮ ಮುಗಿದ ಬಳಿಕ ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಧರ್ಮಸ್ಥಳಕ್ಕೆ ಆಗಮಿಸಿದ ಅವರು, ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ ಎನ್ನಲಾಗಿದೆ.

http://Visit : www.suddidina.com

ರಿಲೀಸ್‌ಗೂ ಮುನ್ನ ದೇವರ ದರ್ಶನದ ಸಂಪ್ರದಾಯ

ಸಿನಿಮಾ ಬಿಡುಗಡೆಗೂ ಮುನ್ನ ದೇವಸ್ಥಾನಗಳಿಗೆ ತೆರಳಿ ದೇವರ ಆಶೀರ್ವಾದ ಪಡೆಯುವುದು ಯಶ್‌ ಅವರಲ್ಲಿ ಹಿಂದಿನಿಂದಲೂ ಕಂಡುಬರುವ ಸಂಪ್ರದಾಯ. ‘ಕೆಜಿಎಫ್‌: ಚಾಪ್ಟರ್‌ 2’ ಬಿಡುಗಡೆಯ ಮುನ್ನವೂ ಯಶ್‌ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಇದೀಗ ‘ಟಾಕ್ಸಿಕ್‌’ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡುವ ಮೂಲಕ ತಮ್ಮ ಆ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.

ಯಶ್‌ ಸೂರ್ಯ ದೇವಸ್ಥಾನಕ್ಕೂ ಭೇಟಿ ನೀಡಿ ಹರಕೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯೂ ಇದೆ. ಹೀಗಾಗಿ ಸಿನಿಮಾ ಬಿಡುಗಡೆಗೂ ಮುನ್ನ ಯಶ್‌ ಅವರ ದೇವಸ್ಥಾನ ಭೇಟಿ ಅಭಿಮಾನಿಗಳ ಗಮನ ಸೆಳೆದಿದೆ.

ಟಾಕ್ಸಿಕ್‌ ಮೇಲೆ ಭಾರಿ ನಿರೀಕ್ಷೆ

ಗೀತು ಮೋಹನ್‌ದಾಸ್‌ ನಿರ್ದೇಶನದ ‘ಟಾಕ್ಸಿಕ್‌’ ಪ್ಯಾನ್‌ ಇಂಡಿಯಾ ಆಕ್ಷನ್‌ ಥ್ರಿಲ್ಲರ್‌ ಆಗಿದ್ದು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲದಲ್ಲಿ ನಿರ್ಮಾಣಗೊಂಡಿದೆ. ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಿಗೂ ಚಿತ್ರ ಡಬ್‌ ಆಗಿದೆ.

ಯಶ್‌ ಪ್ರಮುಖ ಪಾತ್ರದಲ್ಲಿರುವ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್‌, ಹುಮಾ ಖುರೇಷಿ ಹಾಗೂ ನಯನತಾರಾ ಸೇರಿದಂತೆ ಬಹುಭಾಷಾ ತಾರೆಯರ ದೊಡ್ಡ ಬಳಗವೇ ಇದೆ. ಹೀಗಾಗಿ ಕನ್ನಡ ಮಾತ್ರವಲ್ಲದೆ ದಕ್ಷಿಣ ಹಾಗೂ ಉತ್ತರ ಭಾರತದ ಮಾರುಕಟ್ಟೆಗಳಲ್ಲೂ ಚಿತ್ರದ ಮೇಲೆ ಭಾರಿ ನಿರೀಕ್ಷೆ ಮೂಡಿದೆ.

ಬೆಂಗಳೂರಿನಲ್ಲಿ ಟಿಕೆಟ್‌ ದರಕ್ಕೆ ಶಾಕ್‌!

‘ಟಾಕ್ಸಿಕ್‌’ ಅಡ್ವಾನ್ಸ್‌ ಬುಕ್ಕಿಂಗ್‌ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಕೆಲವು ಪ್ರೀಮಿಯಂ ಥಿಯೇಟರ್‌ಗಳಲ್ಲಿ ಟಿಕೆಟ್‌ ದರ ₹3,600ರ ಗಡಿ ತಲುಪಿರುವುದು ಗಮನ ಸೆಳೆದಿದೆ. ಕೆಲವು ಮಲ್ಟಿಪ್ಲೆಕ್ಸ್‌ಗಳಲ್ಲಿ ರೆಕ್ಲೈನರ್‌ ಟಿಕೆಟ್‌ಗಳು ₹700ರಿಂದ ₹1,600ರವರೆಗೆ ಲಭ್ಯವಿದ್ದರೆ, ಕೆಲವು ಪ್ರೀಮಿಯಂ ಸ್ಕ್ರೀನ್‌ಗಳಲ್ಲಿ ದರ ಇನ್ನಷ್ಟು ಹೆಚ್ಚಾಗಿದೆ.

ಸಾಕ್ನಿಲ್ಕ್‌ ವರದಿಯ ಪ್ರಕಾರ, ಅಡ್ವಾನ್ಸ್‌ ಬುಕ್ಕಿಂಗ್‌ ಆರಂಭವಾದ ಎರಡು ದಿನಗಳಲ್ಲಿ ‘ಟಾಕ್ಸಿಕ್‌’ ಸುಮಾರು ₹18.73 ಕೋಟಿ ಮುಂಗಡ ಬುಕ್ಕಿಂಗ್‌ ದಾಖಲಿಸಿದೆ ಎನ್ನಲಾಗಿದೆ. ಟಿಕೆಟ್‌ ದರ ಏರಿಕೆಯ ನಡುವೆಯೂ ಬುಕ್ಕಿಂಗ್‌ ವೇಗ ಕುಂದಿಲ್ಲ.

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ನಾಳೆ ತೆರೆಗೆ ‘ಟಾಕ್ಸಿಕ್‌’

ಯಶ್‌ ಮತ್ತು ಗೀತು ಮೋಹನ್‌ದಾಸ್‌ ಕಥೆ ಬರೆದಿರುವ ಈ ಚಿತ್ರವು ಭಿನ್ನ ಕಥಾಹಂದರ ಹಾಗೂ ಭರ್ಜರಿ ಆಕ್ಷನ್‌ ಮೂಲಕ ಪ್ರೇಕ್ಷಕರನ್ನು ಸೆಳೆಯುವ ನಿರೀಕ್ಷೆ ಮೂಡಿಸಿದೆ. ಈಗ ಧರ್ಮಸ್ಥಳದ ಸನ್ನಿಧಿಯಲ್ಲಿ ಯಶ್‌ ಪಡೆದ ಆಶೀರ್ವಾದದ ಬೆನ್ನಲ್ಲೇ, ನಾಳೆ ‘ಟಾಕ್ಸಿಕ್‌’ ಬಾಕ್ಸ್‌ ಆಫೀಸ್‌ನಲ್ಲಿ ಹೇಗೆ ಸದ್ದು ಮಾಡಲಿದೆ ಎಂಬ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

Continue Reading
Advertisement

Title

ದಿನದ ಸುದ್ದಿ56 minutes ago

ಶಿವರಾಮ ಕಾರಂತ ಬಡಾವಣೆಗೆ ಮುಹೂರ್ತ: ಆ.31ಕ್ಕೆ 18 ಸಾವಿರ ನಿವೇಶನ ಹಂಚಿಕೆ?

ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನ ಹಂಚಿಕೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ದೀರ್ಘಕಾಲದ ಕಾನೂನು ವಿವಾದಗಳ ಬಳಿಕ...

ದಿನದ ಸುದ್ದಿ1 hour ago

ಗೃಹಜ್ಯೋತಿ ಮರುಸಮೀಕ್ಷೆಗೆ ಕೌಂಟ್‌ಡೌನ್: 1.17 ಲಕ್ಷ ಫಲಾನುಭವಿಗಳಿಗೆ ಇನ್ನೂ 5 ದಿನ ಮಾತ್ರ!

ಸುದ್ದಿದಿನ, ಮೈಸೂರು: ನೈಜ ಫಲಾನುಭವಿಗಳಿಗೆ ಮಾತ್ರ ಗೃಹಜ್ಯೋತಿ ಯೋಜನೆಯ ಸಬ್ಸಿಡಿ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮರುಸಮೀಕ್ಷೆ ಅಂತಿಮ ಹಂತಕ್ಕೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಶೇ.84ರಷ್ಟು ಪರಿಶೀಲನೆ...

august-27-2026-daily-horoscope-kannada-rashi-bhavishya august-27-2026-daily-horoscope-kannada-rashi-bhavishya
ನಿತ್ಯ ಭವಿಷ್ಯ1 hour ago

ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?

ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ...

bread_trick_fix_sticky_overcooked bread_trick_fix_sticky_overcooked
ಲೈಫ್ ಸ್ಟೈಲ್2 hours ago

ಅನ್ನ ಜಿಗುಟಾಯಿತಾ? ಬ್ರೆಡ್‌ನ ಈ ಸರಳ ಟ್ರಿಕ್‌ನಿಂದ ಮೆತ್ತಗಾದ ಅನ್ನಕ್ಕೆ ಪರಿಹಾರ!

ಸುದ್ದಿದಿನ: ಅನ್ನ ಬೇಯಿಸುವಾಗ ನೀರು ಹೆಚ್ಚಾಗಿ ಬಿದ್ದು ಮೆತ್ತಗಾಗುವುದು ಅಥವಾ ಹೆಚ್ಚು ಹೊತ್ತು ಬೇಯಿಸಿ ಜಿಗುಟಾಗುವುದು ಸಾಮಾನ್ಯ. ಆದರೆ ಇಂತಹ ಸಂದರ್ಭಗಳಲ್ಲಿ ಅನ್ನವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ....

Khova_Making_Raksha_Bandana_Suddidina Khova_Making_Raksha_Bandana_Suddidina
ಲೈಫ್ ಸ್ಟೈಲ್2 hours ago

ರಕ್ಷಾಬಂಧನದ ಸಿಹಿಗೆ ಮಾರುಕಟ್ಟೆ ಖೋವಾ ಬೇಡ; ಮನೆಯಲ್ಲೇ ಶುದ್ಧ ಮಾವಾ ತಯಾರಿಸಿ!

ಸುದ್ದಿದಿನ: ರಕ್ಷಾಬಂಧನ ಸೇರಿದಂತೆ ಹಬ್ಬಗಳ ಸಮಯದಲ್ಲಿ ಸಿಹಿತಿಂಡಿಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಗುಲಾಬ್ ಜಾಮೂನ್, ಪೇಡಾ, ಬರ್ಫಿ, ಗುಜಿಯಾ ಸೇರಿದಂತೆ ಹಲವು ಸಿಹಿತಿಂಡಿಗಳ ತಯಾರಿಕೆಯಲ್ಲಿ ಖೋವಾ ಪ್ರಮುಖ ಪದಾರ್ಥವಾಗಿದೆ....

ದಿನದ ಸುದ್ದಿ23 hours ago

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು...

ದಿನದ ಸುದ್ದಿ23 hours ago

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ...

ದಿನದ ಸುದ್ದಿ23 hours ago

ಡಾಲಿಯ ಕನಸು ಒಂದೇ ಹೀರೋ ಆಗೋದು

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು! ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು...

ದಿನದ ಸುದ್ದಿ2 days ago

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ...

ದಿನದ ಸುದ್ದಿ2 days ago

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ...

Trending