ದಿನದ ಸುದ್ದಿ

777 ಚಾರ್ಲಿ ಚಿತ್ರಕ್ಕೆ ‘ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ’

Published

on

ಸುದ್ದಿದಿನ ಡೆಸ್ಕ್ : 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2021 ಪ್ರಕಟವಾಗಿದ್ದು, ಕನ್ನಡಕ್ಕೆ ನಾಲ್ಕು ಪ್ರಶಸ್ತಿಗಳು ಲಭಿಸಿವೆ.

ನಟ ರಕ್ಷಿತ್ ಶೆಟ್ಟಿ ಅಭಿನಯಿಸಿರುವ ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಜೇಕಬ್ ವರ್ಗೀಸ್ ನಿರ್ದೇಶನದ ಸಾಕ್ಷ್ಯಚಿತ್ರ ಆಯುಷ್ಮಾನ್‌ಗೆ ಅತ್ಯುತ್ತಮ ಅನ್ವೇಷಣಾ ಚಿತ್ರ ಪ್ರಶಸ್ತಿ ಲಭಿಸಿದೆ.

ಅನಿರುಧ್ ಜತ್ಕರ್ ನಿರ್ದೇಶನದ ಬಾಳ ಬಂಗಾರ ಸಾಕ್ಷ್ಯಚಿತ್ರ ತೀರ್ಪುಗಾರರ ವಿಶೇಷ ಉಲ್ಲೇಖ ಪಡೆದಿದೆ. ಸಿನಿಮಾ ವಿಮರ್ಶೆ ವಿಭಾಗದಲ್ಲಿ ಹಿರಿಯ ಪತ್ರಕರ್ತ ಬಿ.ಎನ್.ಸುಬ್ರಹ್ಮಣ್ಯ ತೀರ್ಪುಗಾರರ ವಿಶೇಷ ಉಲ್ಲೇಖಕ್ಕೆ ಭಾಜನರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version