ದಿನದ ಸುದ್ದಿ
ಬಡವರಿಗೆ ಉತ್ತಮ ಶಿಕ್ಷಣ, ಆರೋಗ್ಯ ಸೌಲಭ್ಯ : ಸಚಿವ ಶಿವರಾಮ್ ಹೆಬ್ಬಾರ್
ಸುದ್ದಿದಿನ, ಉತ್ತರಕನ್ನಡ : ಎಲ್ಲ ಬಡವರಿಗೂ ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಅವರು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೃಹತ್ ಆರೋಗ್ಯ ಮೇಳ ಹಾಗೂ ಬ್ಲಡ್ ಬ್ಯಾಂಕ್ ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ 15ಸಾವಿರಕ್ಕೂ ಹೆಚ್ಚು ಜನರ ಉಚಿತ ಆರೋಗ್ಯ ತಪಾಸಣೆ ಮಾಡಲಾಗಿದೆ.
ಜಿಲ್ಲೆಗೆ 28ಅಂಬುಲೆನ್ಸ್ ಒದಗಿಸಲಾಗಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸಿ ಬಡವರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕನಸಿನಂತೆ, ರಾಜ್ಯದಲ್ಲಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಕೃಷಿಕರಿಗೆ ಯಶಸ್ವಿನಿ ಆರೋಗ್ಯ ಕಾರ್ಡ್ ಪುನರಾರಂಭಿಸಲು ಸರ್ಕಾರ ನಿರ್ಧರಿಸಿದೆ.
ಈಗಾಗಲೇ ಬಜೆಟ್ನಲ್ಲಿ ಮುಖ್ಯಮಂತ್ರಿ 300 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಬಡವರಿಗಾಗಿ ಆಯುಷ್ಮಾನ್ ಕಾರ್ಡ್ ಮೂಲಕ 5 ಲಕ್ಷವರೆಗೆ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿಶೇಷವಾಗಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಈ ಕುರಿತು ಹೆಚ್ಚು ಪ್ರಚಾರ ಮಾಡಬೇಕು. ಇದೀಗ ಗ್ರಾಮಒನ್ ಮೂಲಕ ಆನ್ಲೈನ್ನಲ್ಲೇ ಕಾರ್ಡ್ ಪಡೆಯುವ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ ಎಂದು ಸಚಿವರು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243