ದಿನದ ಸುದ್ದಿ
ಭದ್ರಾ ಅಣೆಕಟ್ಟು ಭರ್ತಿಗೆ ಕೆಲವೇ ಅಡಿ ಬಾಕಿ; ನದಿಯ ನೀರಿನ ಏರಿಕೆ ಸಂಭವ, ಜನರು ಎಚ್ಚರಿಕೆಯಿಂದಿರಲು ಸೂಚನೆ
ಸುದ್ದಿದಿನಡೆಸ್ಕ್: ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯೂಸೆಕ್ಸ್ಗಿಂತಲೂ ಅಧಿಕ ನೀರು ಹರಿಯುತ್ತಿದ್ದು ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇರುವುದರಿಂದ ಯಾವುದೇ ಕ್ಷಣದಲ್ಲಿ ನದಿಯಲ್ಲಿನ ನೀರಿನ ಪ್ರಮಾಣ ಏರಿಕೆಯಾಗಲಿದ್ದು ನದಿ ಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
ತುಂಗಾ ಜಲಾಶಯದಿಂದ 74105 ಕ್ಯೂಸೆಕ್ಸ್ ನೀರು ತುಂಗಭದ್ರಾ ನದಿಯಲ್ಲಿ ಹರಿಯುತ್ತಿದೆ. ಭದ್ರಾ ಜಲಾಶಯ ಭರ್ತಿಯಾಗಲು 5 ಅಡಿ ಬಾಕಿ ಇದ್ದು 35557 ಕ್ಯೂಸೆಕ್ಸ್ ಒಳಹರಿವು ಇದೆ. ಮತ್ತು ಮಲೆನಾಡಿನಲ್ಲಿ ಉತ್ತಮ ಮಳೆ ಬರುತ್ತಿರುವುದರಿಂದ ನೀರಿನ ಒಳಹರಿವು ಹೆಚ್ಚಲಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡಬಹುದಾಗಿದ್ದು ನದಿಪಾತ್ರದಲ್ಲಿನ ಜನರು ತಮ್ಮ ಆಸ್ತಿ, ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಎಚ್ಚರ ವಹಿಸಬೇಕು.
ತುಂಗಾದಿಂದ ನೀರು ಬರುತ್ತಿದ್ದು ಭದ್ರಾ ತುಂಬಿದ ನಂತರ ನದಿಯಲ್ಲಿನ ನೀರನ ಪ್ರಮಾಣ ಗಣನೀಯವಾಗಿ ಹೆಚ್ಚಲಿದ್ದು ಇದರಿಂದ ನದಿಯಲ್ಲಿನ ನೀರಿನ ಮಟ್ಟ ಅಪಾಯ ಮಟ್ಟದಲ್ಲಿರುತ್ತದೆ. ಇದರಿಂದ ಹೊನ್ನಾಳಿ, ನ್ಯಾಮತಿ, ಹರಿಹರ ತಾಲ್ಲೂಕುಗಳಲ್ಲಿನ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಹೊನ್ನಾಳಿ ಪಟ್ಟಣದ ನದಿ ತೀರದ ಬಾಲರಾಜ್ಘಾಟ್ ಪ್ರದೇಶದ 11 ಕುಟುಂಬದ 64 ಜನರನ್ನು ಅಂಬೇಡ್ಕರ್ ಭವನದಲ್ಲಿನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.
ಮತ್ತು ನದಿ ಪಾತ್ರದಲ್ಲಿನ ಎಲ್ಲಾ ಗ್ರಾಮಗಳಲ್ಲಿ ಜನ, ಜಾನುವಾರುಗಳನ್ನು ನದಿಗೆ ಇಳಿಯದಂತೆ ಎಚ್ಚರ ವಹಿಸಲು ಜಾಗೃತಿ ಮೂಡಿಸಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಗ್ರಾಮ ಮಟ್ಟದ ಟಾಸ್ಕ್ಪೋರ್ಸ್ ಸಮಿತಿ ರಚಿಸಲಾಗಿದೆ. ಮತ್ತು ಎನ್ಡಿಆರ್ಎಫ್, ಎಸ್ಡಿಆರ್ಎಫ್ ಮತ್ತು ತುರ್ತು ನಿಗಾ ಘಟಕಗಳನ್ನು ಸನ್ನದ್ದವಾಗಿಡಲಾಗಿದೆ. ಮತ್ತು ಅಧಿಕಾರಿಗಳು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.
ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪನೆ; ಜಿಲ್ಲಾಧಿಕಾರಿಗಳ ಕಚೇರಿ 08192-234034, 1077, ಎಸ್ಡಿಆರ್ಎಫ್ ಘಟಕ, ದೇವರಬೆಳೆಕೆರೆ 7411308591, ದಾವಣಗೆರೆ ಅಗ್ನಿಶಾಮಕ ಇಲಾಖೆ 08192-258101, 112, ದಾವಣಗೆರೆ ಮಹಾನಗರ ಪಾಲಿಕೆ 08192-234444, 8277234444, ದಾವಣಗೆರೆ ತಾ; ಕಚೇರಿ 9036396101, ಹರಿಹರ 08192-272959, ಜಗಳೂರು 08196-227242, ಹೊನ್ನಾಳಿ 08188-252108, ನ್ಯಾಮತಿ 8073951245, ಚನ್ನಗಿರಿ 7892481962 ದೂರವಾಣಿ, ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


