Connect with us

ದಿನದ ಸುದ್ದಿ

ಭದ್ರಾ ನಾಲೆಗಳ ಮೂಲಕ ಹರಿಸುತ್ತಿರುವ ನೀರು, ಮೇ.20 ರವರೆಗೆ ಮುಂದೂಡಿಕೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಭದ್ರಾ ಜಲಾಶಯದಿಂದ ನೀರು ಸ್ಥಗಿತಗೊಳಿಸುವ ನಿರ್ಧಾರವನ್ನು ಕಾಡಾ ಮುಂದೂಡಿ, ಮೇ.20 ರವರೆಗೆ ನೀರು ಹರಿಸಲು ನಿರ್ಧರಿಸಿದೆ ಎಂದು ಭದ್ರಾ ಕಾಡಾ ಸಮಿತಿ ಅಧ್ಯಕ್ಷರಾದ ಪವಿತ್ರರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮೂಲಕ ಹರಿಸುತ್ತಿರುವ ನೀರನ್ನು ಜ.12 ರಿಂದ 120 ದಿನಗಳ ಕಾಲ ಅಂದರೆ ಮೇ.12 ಕ್ಕೆ ನಿಲ್ಲಿಸಲು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) 2020 ರ ಡಿ.12 ರಂದು ಹರಿಹರ ತಾಲ್ಲೂಕು ಮಲೆಬೆನ್ನೂರಿನ ಕರ್ನಾಟಕ ನೀರಾವರಿ ನಿಗಮದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಿತ್ತು.

ಕೊರೊನ ಸಂಕಷ್ಟದ ಸಮಯದಲ್ಲಿ ಭದ್ರಾ ಅಚ್ಚುಕಟ್ಟು ಭಾಗದ ರೈತರು ಒತ್ತಾಯಿಸಿದ ಪರಿಣಾಮ ಮೇ.20 ರ ಮಧ್ಯ ರಾತ್ರಿ ನಾಲೆಗಳಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ.

2021ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ತಾಲ್ಲೂಕಿನಲ್ಲಿ 4,295 ಹೆಕ್ಟರ್ ಹಾಗೂ ಭದ್ರಾವತಿ ತಾಲ್ಲೂಕಿನಲ್ಲಿ 5635 ಹೆಕ್ಟರ್ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 9,930 ಹೆಕ್ಟರ್‍ನಲ್ಲಿ ಭತ್ತ ಬೆಳೆಯಲಾಗಿದೆ.

ಇದನ್ನೂ ಓದಿ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲ್ಲೂಕಿನಲ್ಲಿ 18,820 ಹೆಕ್ಟರ್, ಹರಿಹರ ತಾಲ್ಲೂಕಿನಲ್ಲಿ 18,325 ಹೆಕ್ಟರ್, ಚನ್ನಗಿರಿ ತಾಲ್ಲೂಕಿನಲ್ಲಿ 6,955 ಹೆಕ್ಟರ್, ಹೊನ್ನಾಳಿ ತಾಲ್ಲೂಕಿನಲ್ಲಿ 5,100 ಹೆಕ್ಟರ್, ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ 1210 ಹೆಕ್ಟರ್‍ನಲ್ಲಿ ಭತ್ತ ಬೆಳೆಯಲಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 50410 ಹೆಕ್ಟರ್‍ನಲ್ಲಿ ಭತ್ತ ಬೆಳೆಯಲಾಗಿದೆ. ಇತರೆ ತಾಲ್ಲೂಕುಗಳಾದ ಹರಪನಹಳ್ಳಿ ಮತ್ತು ತರೀಕೆರೆ ತಾಲ್ಲೂಕುಗಳಲ್ಲಿ ಕ್ರಮವಾಗಿ 2720, 1850 ಹೆಕ್ಟರ್‍ಗಳಲ್ಲಿ ಬೇಸಿಗೆ ಹಂಗಾಮಿನಲ್ಲಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಭತ್ತ ಬೆಳೆಯಲಾಗಿದೆ.

ಪ್ರತಿ ವರ್ಷವು ಅಚ್ಚುಕಟ್ಟು ವ್ಯಾಪ್ತಿಯ ರೈತರು ಒಂದಾದ ನಾಲೆಗಳ ಮೂಲಕ ಹರಿಸುವ ನೀರನ್ನು ಪಡೆಯಲು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಜೊತೆಗೆ ಕೊನೆಯ ಭಾಗದ ರೈತರು ಕಳೆದ 20 ವರ್ಷಗಳಿಂದ ನೀರನ್ನು ಕಾಣದೆ ಪರಿತಪಿಸುವಂತಾಗಿತ್ತು. ಆದರೆ ಈ ವರ್ಷ ಯಾವುದೇ ರೀತಿಯ ಗದ್ದಲ ಗಲಾಟೆ ಹೋರಾಟ ಇಲ್ಲದೆ ಅಚ್ಚುಕಟ್ಟು ಭಾಗದಲ್ಲಿ ನೀರು ಹರಿದಿರುವುದಲ್ಲದೆ, ಕೊನೆಯ ಭಾಗಕ್ಕೆ ಸರಾಗವಾಗಿ ನೀರು ಕೊಟ್ಟಿರುವುದು ಹೆಮ್ಮೆಯ ಸಂಗತಿಯಾಗಿದೆ.

ಕೇಂದ್ರ ಸರ್ಕಾರದ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪ್ರಪ್ರಥಮವಾಗಿ ಭದ್ರಾ ಕಾಡಾ ಪ್ರಾಧಿಕಾರವು ನಾಲೆಗಳಲ್ಲಿ ತುಂಬಿಕೊಂಡಿದ್ದ ಹೂಳು ಹಾಗೂ ಜಂಗಲ್ ಸ್ವಚ್ಚಗೊಳಿಸಲು ಬಳಸಿಕೊಂಡಿರುವುದು ಒಂದು ವಿಶೇಷ ದಾಖಲೆಯಾಗಿದೆ.

ಈ ಯೋಜನೆಯ ಮೂಲಕ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಸುಮಾರು 150 ಕಿ.ಮೀ ಮುಖ್ಯ ಮತ್ತು ಉಪ ನಾಲೆಗಳನ್ನು ಸ್ವಚ್ಚಗೊಳಿಸಿದೆ. ಸುಮಾರು 1,70,000 ಅಧಿಕ ಮಾನವ ದಿನಗಳನ್ನು ಬಳಸಿಕೊಳ್ಳಲಾಗಿದೆ. ಸುಮಾರು ರೂ 7 ಕೋಟಿಗೂ ಅಧಿಕ ಅನುದಾನ ಉಪಯೋಗಿಸಿಕೊಂಡಿದೆ.

ಪ್ರತಿ ಬಾರಿಯು ನೀರಾವರಿ ಸಲಹಾ ಸಮಿತಿ ಸಭೆಯು ಶಿವಮೊಗ್ಗದ ಕೇಂದ್ರ ಕಚೇರಿಯಲ್ಲಿ ನಡೆಸುವುದು ವಾಡಿಕೆಯಾಗಿತ್ತು. ಆದರೆ ಭದ್ರಾ ಕಾಡಾ ಅಧ್ಯಕ್ಷರಾದ ನಂತರ ಅಚ್ಚುಕಟ್ಟಿನ ಕೊನೆಯ ಭಾಗಕ್ಕೆ ಸೇರುವ ಹರಿಹರ ತಾಲ್ಲೂಕು ಮಲೆಬೆನ್ನೂರಿನಲ್ಲಿ ಪ್ರವಾಸ ಕೈಗೊಂಡಾಗ ರೈತರು ಈ ಬಾರಿಯ ಸಭೆಯನ್ನು ಇಲ್ಲಿಯೇ ನಡೆಸಲು ಒತ್ತಾಯಿಸಿದಾಗ ಅದನ್ನು ಸಮ್ಮತಿಸಿ ಮಲೆಬೆನ್ನೂರಿನಲ್ಲಿ ಸಭೆ ನಡೆಸಿದ್ದು, ವಲಯವಾರು ಡಿಸ್ಟ್ರಿಬ್ಯೂಟರ್‍ಗಳಲ್ಲಿ ಎದುರಾಗುತ್ತಿದ್ದ ನೀರಿನ ಸಮಸ್ಯೆಗನ್ನು ನಮೂದಿಸಲು ರೈತರಿಗಾಗಿ ಸಾಯವಾಣಿ ಪ್ರಾರಂಭ ಮಾಡಿದ್ದೇವೆ.

ದಾವಣಗೆರೆ ಭಾಗದಲ್ಲಿ ನೂರಾರು ರೈತರು ನೀರಿನ ತೊಂದರೆಯ ಪರಿಣಾಮ ಪ್ರತಿ ಬಾರಿ ಜೋಳ ಬೆಳೆಯುತ್ತಿದ್ದರು. ಆದರೆ ಅದೇ ರೈತರು ಈ ಬಾರಿ ನೀರು ಸರಾಗವಾಗಿ ಸಿಕ್ಕ ಹಿನ್ನೆಲೆಯಲ್ಲಿ ಜೋಳ ಅಳಿಸಿ ಭತ್ತ ನಾಟಿ ಮಾಡಿ ಆರ್ಥಿಕ ಸಬಲರಾಗುವತ್ತ ದಾಪುಗಾಲು ಹಾಕಿದ್ದಾರೆ ಜೊತೆಗೆ ತಮ್ಮ ತಮ್ಮ ಜಮೀನುಗಳಿಗೆ ನೀರನ್ನು ಹಾಯಿಸಿಕೊಳ್ಳಲು ರಾತ್ರಿ ನಿದ್ರೆ ಬಿಡುವ ಪ್ರಸಂಗ ತಪ್ಪಿರುವುದು ಒಂದು ಸಂತಸದ ನಡೆಯಾಗಿದೆ. ಹೀಗೆ ಭದ್ರಾ ಕಾಡಾ ಪ್ರಾಧಿಕಾರ ವ್ಯಾಪ್ತಿಯಲ್ಲಿ ಹಲವಾರು ನೂತನ ವಿದ್ಯಾಮಾನಗಳನ್ನು ನಿರ್ಮಾಣ ಮಾಡುವ ಮೂಲಕ ಅಚ್ಚುಕಟ್ಟು ರೈತರು ಸಂತೃಪ್ತ ಜೀವನ ನಡೆಸಲು ಅನುವು ಮಾಡಿಕೊಡಲಾಗಿದೆ.

ಸಂಕಷ್ಟದ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ನಾಲಾ ನೀರು ಅಚ್ಚುಕಟ್ಟು ರೈತರಿಗೆ ತಲುಪಿಸಲು ಶ್ರಮವಹಿಸಿದ ಎಲ್ಲಾ ಅಧಿಕಾರಿ ವೃಂದದವರಿಗೆ, ನೀರು ಗಂಟಿಗಳಿಗೆ ಪ್ರಕಟಣೆಯ ಮೂಲಕ ಭದ್ರಾ ಅಚ್ಚುಕಟ್ಟು ಪ್ರದಾಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ.ಕೆ.ಬಿ ಕೃತಜ್ಞತೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್‍ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಬಜೆಟ್‍ನಲ್ಲಿ ಅನುಮೋದನೆ ನೀಡಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಅವರು ಶುಕ್ರವಾರ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಸರ್ಕಾರದ ಅನುದಾನ ಸೇರಿ ರೂ.3.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿ 76 ಸಾವಿರದಷ್ಟು ಶಾಲೆಗಳಿದ್ದು 1.08 ಕೋಟಿ ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದು ಒಟ್ಟು ನೌಕರರಲ್ಲಿ ಶೇ 37 ರಷ್ಟು ಸಿಬ್ಬಂದಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 57 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕೊರತೆಯೂ ಇದ್ದು ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಜೊತೆಗೆ ದಾನಿಗಳಿಂದ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಮ್ಮ ಶಾಲೆ, ನಮ್ಮ ಜವಾಬ್ದಾರಿ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ ಎಂದರು.

ಪೌಷ್ಟಿಕತೆ ಹೆಚ್ಚಿಸಲು ಪ್ರತಿನಿತ್ಯ ಮೊಟ್ಟೆ

ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರತಿನಿತ್ಯ ಮೊಟ್ಟೆ ನೀಡಲಾಗುತ್ತಿದೆ. ಇದರಲ್ಲಿ ಆಜೀಂ ಪ್ರೇಂಜೀ ಪೌಂಢೇಷನ್‍ನಿಂದ ನಾಲ್ಕು ದಿನ, ಸರ್ಕಾರದಿಂದ 2 ದಿನ ಮೊಟ್ಟೆ ನೀಡಲಾಗುತ್ತಿದ್ದು ಸ್ಥಳೀಯವಾಗಿ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತಿದೆ. ಎಲ್ಲ ದಿನವೂ ಮೊಟ್ಟೆ ನೀಡಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟ ಅವರು ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಮತ್ತು ಪೋಷಕರೊಂದಿಗೆ ಮಕ್ಕಳನ್ನು ಕರೆದುಕೊಂಡು ಹೋಗದೆ ಶಾಲೆಗೆ ಕಳುಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಪ್ರತಿ ದಿನದ ಹಾಜರಾತಿಗೆ ರೂ.1 ರಂತೆ ಮಕ್ಕಳಿಗೆ ನೀಡಲಾಗುತ್ತಿತ್ತು, ನಂತರ ಮಧ್ಯಾಹ್ನ ಊಟ ನೀಡುತ್ತಾ ಬಂದು ಈಗ ಹಾಲು, ಮೊಟ್ಟೆಯನ್ನು ನೀಡಲಾಗುತ್ತಿದೆ. ಭವಿಷ್ಯದ ಪ್ರಜೆಗಳಾಗುವ ಮಕ್ಕಳು ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆದು ದೇಶದ ಆಸ್ತಿಯಾಗಬೇಕು ಮತ್ತು ಸಂವಿಧಾನ ಉಳಿಯಲು ಎಲ್ಲರೂ ಶಿಕ್ಷಣವಂತರಾಗಬೇಕೆಂದರು.

ಗ್ರಂಥಾಲಯಗಳಿಗೆ ಮಹತ್ವ

ಶಾಲೆಗಳಿಗೆ ನೀಡುವ ಮಹತ್ವವನ್ನು ಗ್ರಂಥಾಲಯಗಳಿಗೆ ನೀಡುವ ಅವಶ್ಯಕತೆ ಇದೆ. ಜಗಳೂರು ಪಟ್ಟಣದಲ್ಲಿ ಮುಖ್ಯಗ್ರಂಥಾಲಯವನ್ನು ಬಹಳ ಸುಸಜ್ಜಿತವಾಗಿ ನಿರ್ಮಾಣ ಮಾಡಿ ನಡೆಸಲಾಗುತ್ತಿದೆ. ಗ್ರಂಥಾಲಯಗಳು ಶಿಕ್ಷಕ ರಹಿತವಾದ ವಿಶ್ವವಿದ್ಯಾನಿಲಯಗಳಿದ್ದಂತೆ, ಗ್ರಂಥಾಲಯಗಳಲ್ಲಿ ಅಧ್ಯಯನ ಮಾಡಿದ ಅನೇಕರು ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಓದುಗರನ್ನು ಸಂದರ್ಶಿಸಿದಾಗ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಆಯ್ಕೆಯಾಗಿದ್ದು ಕೆಎಎಸ್ ಅಧಿಕಾರಿಯಾಗುವ ಆಸೆ ಇದ್ದು ಮುಂದಿನ ದಿನಗಳಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಈಗಿನಿಂದಲೇ ತಯಾರಿ ನಡೆಸುತ್ತಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಇದೇ ಮಾದರಿಯಲ್ಲಿ ರಾಜ್ಯಾದ್ಯಂತ ಗ್ರಂಥಾಲಯಗಳನ್ನು ಅಭಿವೃದ್ದಿ ಮಾಡುವ ಗುರು ಹೊಂದಲಾಗಿದೆ ಎಂದರು.

8 ನೇ ತರಗತಿವರೆಗೆ ವಿಸ್ತರಣೆ

ಹುಚ್ಚಂಗಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ ಮಾತ್ರ ಇದ್ದು ಇದನ್ನು 8 ನೇ ತರಗತಿಯವರೆಗೆ 2025-26 ಶೈಕ್ಷಣಿಕ ವರ್ಷದಿಂದಲೇ ವಿಸ್ತರಣೆ ಮಾಡಲು ಆದೇಶಿಸಲಾಗಿದೆ. 9-10 ನೇ ತರಗತಿಯನ್ನು ಇಲ್ಲಿಯೇ ಮುಂದುವರೆಗೆಸಲು ಮಕ್ಕಳ ಸಂಖ್ಯೆಯನ್ನಾಧರಿಸಿ ಮುಂದಿನ ನಿರ್ಧಾರವನ್ನು ಇಲಾಖೆ ಕೈಗೊಳ್ಳಲಿದೆ, ಶಾಲೆಯ ಅಭಿವೃದ್ದಿಗೆ ರೂ.25 ಲಕ್ಷಗಳನ್ನು ಕೇಳಿದ್ದು ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಜಗಳೂರು ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೆಂದ್ರಪ್ಪ ಮಾತನಾಡಿ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವರು ತಮ್ಮ ಅನುದಾನದಲ್ಲಿ ಹುಟ್ಟೂರಿನ ಶಾಲೆ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಇದೇ ಮಾದರಿಯಲ್ಲಿ ಚಿಮ್ಮನಕಟ್ಟೆಯಲ್ಲಿಯು ಹೈಟೆಕ್ ಶಾಲೆ ನಿರ್ಮಾಣ ಮಾಡಲಾಗುತ್ತದೆ.
ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ನದಿ ನೀರನ್ನು ಕುಡಿಯುವ ಉದ್ದೇಶಕ್ಕೆ ಸರಬರಾಜು ಮಾಡಲು ಉದ್ದೇಶಿಸಿದ್ದು ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿದೆ. ಜಗಳೂರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜು ಬಹು ದಿನಗಳ ಬೇಡಿಕೆಯಾಗಿದ್ದು ಆರಂಭಿಸಲು ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.

ವಿಧಾನಪರಿಷತ್ತಿನ ಸದಸ್ಯರಾದ ರವಿಕುಮಾರ್ ಎನ್ ಪ್ರಾಸ್ತಾವಿಕವಾಗಿ ಮಾತನಾಡಿ ಈ ಶಾಲೆಯಲ್ಲಿ ನಾನು ಓದಿದ್ದು ನಮ್ಮ ತಾಯಿಯ ಆಸೆಯಂತೆ ನಮ್ಮೂರಿಗೆ ಶಾಲಾ ಕಟ್ಟಡ ನಿರ್ಮಿಸಲು ಶ್ರಮಿಸಿದ್ದೇನೆ. ಈ ಹಿಂದೆ ನಾಲ್ಕನೇ ತರಗತಿವರೆಗೆ ಮಾತ್ರ ಇದ್ದು ಈಗ 7 ನೇ ತರಗತಿವರಗೆ ಇದೆ. ಇಲ್ಲಿನ ಜನರು ಶ್ರಮ ಜೀವಿಗಳಾಗಿದ್ದು ಕೆಲಸಕ್ಕಾಗಿ ವಲಸ ಹೋಗುತ್ತಾರೆ. ಆದ್ದರಿಂದ ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಸ್ಮಾರ್ಟ್ ಕ್ಲಾಸ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಶಾಲೆಯಲ್ಲಿ ಕಲ್ಪಿಸಿದ್ದು ಇದಕ್ಕೆ ರಾಜ್ಯಸಭಾ ಸದಸ್ಯರ ಅನುದಾನ ಮತ್ತು ವಿಧಾನ ಪರಿಷತ್‍ರ ನಿಧಿಯಲ್ಲಿ 2.5 ಕೋಟಿ ನೀಡಲಾಗಿದೆ, ಒಟ್ಟು ರೂ.3.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಶಾಲೆ ನಿರ್ಮಿಸಿದ್ದು ಕಂಪ್ಯೂಟರ್ ಸೇರಿದಂತೆ ಇತರೆ ಉದ್ದೇಶಗಳಿಗಾಗಿ ಇಲಾಖೆಯಿಂದ ರೂ.25 ಲಕ್ಷ ಅನುದಾನ ಬಿಡುಗಡೆ ಮಾಡಬೇಕೆಂದರು.

ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ ಎಂ ಮಾತನಾಡಿ ಗ್ರಾಮದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಹಾಕಬಾರದು ಎಂದರು.

ವಿಧಾನ ಪರಿಷತ್ ಸದಸ್ಯರಾದ ಪ್ರೊ;ಎಸ್.ವಿ. ಸಂಕನೂರು, ಕೆ.ಎಸ್. ನವೀನ್, ಚಿದಾನಂದಗೌಡ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಮಾಜಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ದಿದ್ದಿಗಿ ಗ್ರಾ.ಪಂ ಅಧ್ಯಕ್ಷರಾದ ಗುತ್ಯಮ್ಮ ಸಿದ್ದಪ್ಪ, ಎಸ್‍ಡಿಎಂಸಿ ಅಧ್ಯಕ್ಷ ಪಿ.ಟಿ.ರಮೇಶ, ದಾನಿಗಳಾದ ಸ್ಪೇಸ್ ಮ್ಯಾನೇಜ್‍ಮೆಂಟ್ ಸಲ್ಯೂಷನ್ ಲಿಮಿಟೆಡ್ ಡಾ.ದಿನೇಶ್, ವೋಲ್ಲೋ ಗ್ರೂಪ್ ಜಿ.ವಿ.ರಾವ್, ಜಿ.ಪಂ.ಉಪಕಾರ್ಯದರ್ಶಿ ಕೃಷ್ಣನಾಯ್ಕ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9989346243

Continue Reading

ದಿನದ ಸುದ್ದಿ

ಹಿಂದುಳಿದ ಸಮಾಜಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಸಂಘಟಿತರಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

Published

on

ಸುದ್ದಿದಿನ,ದಾವಣಗೆರೆ:ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು.

ಬುಧವಾರ(ಫೆ.5) ರಂದು ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಉದ್ಘಾಟಿಸಿ ಮಾತಾನಾಡಿದರು. ಸವಿತಾ ಸಮಾಜದ ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು, ಆಗ ಮಾತ್ರ ಶ್ರೀಮಂತ, ಬಡವ, ಮೇಲು ಕೀಳು ಎಂಬ ಮನೋಭಾವನೆ ಬರಲು ಸಾಧ್ಯವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಇರಬೇಕು ಸಮಾಜದಲ್ಲಿ ಇರುವಂತಹ ತೊಡಕುಗಳನ್ನು ತೊರೆದು ನಡೆದರೆ ಮಾತ್ರ ಅಭಿವೃದ್ದಿ ಸಾಧಿಸುವುದಕ್ಕೆ ಸಾಧ್ಯವಾಗುತ್ತದೆ. ವೃತ್ತಿ ಬದುಕಿಗೆ ಅನುಕೂಲವಾಗಲು ಪರಿಕರಗಳ ಕಿಟ್ ನೀಡಲು ಮತ್ತು ಪಾಲಿಕೆಯಲ್ಲಿರುವ ಮಳಿಗೆಗಳನ್ನು ಇವರಿಗೆ ಕಡಿಮೆ ಬಾಡಿಕೆ ನೀಡಬೇಕು ಎಂದರು. ಹೊಂಡದ ಸರ್ಕಲ್‌ನಲ್ಲಿರುವ ಸಮುದಾಯದ ಭವನದ ಕಟ್ಟಡವನ್ನು ಪೂರ್ಣಗೊಳಿಸಲು ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ಮಾರ್ಗದರ್ಶಿಯಾಗಿದೆ. ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಸವಿತಾ ಮಹರ್ಷಿ ಜಯಂತಿ ಆಚರಣೆಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ. ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಸಂಘಟಿತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ದೂಢಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಪಾಲಿಕೆ ಮಹಾಪೌರರಾದ ಚಮನ್ ಸಾಬ್ ಕೆ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ತಹಶೀಲ್ದಾರ್ ಅಶ್ವಥ್, ಸಂಘದ ಜಿಲ್ಲಾಧ್ಯಕ್ಷರಾದ ಬಾಲರಾಜ್, ವಕೀಲರಾದ ರಂಗಸ್ವಾಮಿ ಹಾಗೂ ಸಮಾಜದ ಎಲ್ಲಾ ಮುಖಂಡರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980336243

Continue Reading

ದಿನದ ಸುದ್ದಿ

ನ್ಯಾಕ್ ಗ್ರೇಡ್ ನೀಡಲು ಲಂಚ ಸ್ವೀಕಾರ ; ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ

Published

on

ಸುದ್ದಿದಿನ,ದಾವಣಗೆರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್‌ ವಿವಿಗೆ ನ್ಯಾಕ್ ಕಮಿಟಿಯಿಂದ ಎ++ ಗ್ರೇಡ್ ನೀಡುವಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಬಂಧಿಸಿದೆ.

ನ್ಯಾಕ್ ತಂಡದ ಅಧ್ಯಕ್ಷರು ಮತ್ತು ಜೆ ಎನ್ ಯು ಪ್ರೊಫೆಸರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 10 ಸದಸ್ಯರನ್ನು ಬಂಧಿಸಲಾಗಿದೆ.

ಗಾಯತ್ರಿ ದೇವರಾಜ್ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮೈಕ್ರೋ ಬಯೋಲಜಿ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಭ್ರಷ್ಟಾಚಾರ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿದಿದೆ.

ಪ್ರಕರಣದ ತನಿಖೆ ನಡೆಸುತ್ತಿರುವಾಗ, ಚೆನ್ನೈ, ಬೆಂಗಳೂರು, ವಿಜಯವಾಡ, ಪಲಮು, ಸಂಬಲ್‌ಪುರ, ಭೋಪಾಲ್, ಬಿಲಾಸ್‌ಪುರ, ಗೌತಮ್ ಬುದ್ಧ ನಗರ ಮತ್ತು ನವದೆಹಲಿ ಸೇರಿದಂತೆ ದೇಶಾದ್ಯಂತ 20 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿತು. ಈ ವೇಳೆ 37 ಲಕ್ಷ ರೂಪಾಯಿ ನಗದು, 6 ಲ್ಯಾಪ್‌ಟಾಪ್‌ಗಳು, ಐಫೋನ್ 16 ಪ್ರೊ, ಚಿನ್ನದ ನಾಣ್ಯ ಸೇರಿದಂತೆ ಹಲವು ದಾಖಲೆಗಳನ್ನು ಸಿಬಿಐ ವಶಪಡಿಸಿಕೊಂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending