ದಿನದ ಸುದ್ದಿ

ಭದ್ರಾ ಜಲಾಶಯದಿಂದ 197ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ : ಕೇಂದ್ರ ಸಚಿವೆ ಶೋಭ ಕರಂದ್ಲಾಜೆ

Published

on

ಸುದ್ದಿದಿನ, ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಚಿಕ್ಕಮಗಳೂರು, ಕಡೂರು ಹಾಗು ಹಾಸನ ಜಿಲ್ಲೆಯ ಅರೆಸೀಕೆರೆ ತಾಲೂಕಿನ ಒಟ್ಟು 197ಕೆರೆಗಳಿಗೆ ಭದ್ರಾ ಜಲಾಶಯದಿಂದ ನೀರು ತುಂಬಿಸಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಹೇಳಿದಾರೆ.

ಜಿಲೆಯ ತರೀಕೆರೆ ತಾಲೂಕಿನ ಭದ್ರಾ ಜಲಾಶಯದಿಂದ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಅವರು ಮಾತನಾಡಿದರು. ಯೋಜನೆಯ ಮೊದಲನೇ ಹಂತದಲ್ಲಿ 406ಕೋಟಿ ರೂಪಾಯಿ ವೆಚ್ಚದಲ್ಲಿ 55ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದರು.

ಇದಕ್ಕೂ ಮುನ್ನತರೀಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು, 500ಲೀಟರ್ ಸಾಮರ್ಥ್ಯದ ಆಮ್ಲಜನಕ ಘಟಕ ವೀಕ್ಷಿಸಿದರು. ತರೀಕೆರೆ ತಾಲೂಕಿಗೆ 30 ಕೋಟಿ ರೂಪಾಯಿ ವೆಚ್ಚದಲ್ಲಿ ತಾಯಿ ಮಗು ಪ್ರತ್ಯೇಕ ಆಸ್ಪತ್ರೆ ಮಂಜೂರಾಗಿದ್ದು ಸುಸಜ್ಜಿತ ಆಸ್ಪತ್ರೆ ಶೀರ್ಘವೇ ತರೀಕೆರೆಯಲ್ಲಿ ನಿರ್ಮಾಣವಾಗಲಿದೆ ಎಂದು ಸಚಿವರು ಹೇಳಿದರು. ಶಾಸಕ ಡಿ.ಎಸ್ ಸುರೇಶ್, ಜಿಲ್ಲಾಧಿಕಾರಿ ಕೆ.ಎನ್ ರಮೇಶ್, ಮೊದಲಾದವರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version