Connect with us

ದಿನದ ಸುದ್ದಿ

ಮೊದಲ ಬಾರಿಗೆ ಗೋನೂರು ಕೆರೆಗೆ ಹರಿದು ಬಂದ ಭದ್ರೆ – ರೈತರ ಸಂಭ್ರಮಾಚರಣೆ

Published

on

ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಭದ್ರಾ ನೀರು ಆಗಮನ; ಸಂಸದ ಗೋವಿಂದ ಕಾರಜೋಳರಿಂದ ಬಾಗಿನ ಸಮರ್ಪಣೆ, ಹೋರಾಟಕ್ಕೆ ಸಿಕ್ಕ ಜಯ

ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಮೊದಲ ಬಾರಿಗೆ ಗೋನೂರು ಕೆರೆಗೆ ಆಗಮಿಸಿದ ಭದ್ರೆಗೆ ಬುಧವಾರ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು.

 

http://Visit : www.suddidina.com

ಗೋನೂರು ಸಮೀಪದ 111 ಕಿಮೀ ಕಾಲುವೆ ಬಳಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ ಭದ್ರೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಿಸಿದರು. ಬಸವಕೇಂದ್ರ ಮುರುಘಾಮಠದ ಡಾ.ಬಸವಕುಮಾರ ಸ್ವಾಮೀಜಿ, ಯಾದವ ಗುರುಪೀಠದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಮುರುಗೇಂದ್ರ ಸ್ವಾಮೀಜಿ ಸೇರಿದಂತೆ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು.

ಕಾಲುವೆಯಲ್ಲಿ ಭದ್ರೆ ಹರಿದಿರುವುದ ಕಂಡು ಸಂತಸ ವ್ಯಕ್ತಪಡಿಸಿದ ಮಹಿಳೆಯರು, ರೈತಾಪು ಸಮಾದಾಯ ಭದ್ರೆ ಮೈಮೇಲೆ ಎರಚಿಕೊಂಡು ಧನ್ಯತಾ ಭಾವ ಪ್ರದರ್ಶಿಸಿದ್ದು ವಿಶೇಷವಾಗಿತ್ತು.,

ಬಾಗಿನ ಸಮರ್ಪಣೆ ನಂತರ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಚಿತ್ರದುರ್ಗ ನೆಲಕ್ಕೆ ಭದ್ರೆ ತರುವಲ್ಲಿ ಮೂರು ದಶಕಗಳಷ್ಟು ಸುದೀರ್ಘ ಹೋರಾಟವಿದೆ. ಇದರಲ್ಲಿ ಪತ್ರಕರ್ತಕರ್ತರು, ಸಂಘ ಸಂಸ್ಥೆಗಳು, ಮಠಾಧಿಪತಿಗಳು, ಜನ ಪ್ರತಿನಿಧಿಗಳ ಸಹಕಾರವಿದೆ. ಸಮೀಕ್ಷೆ ಕಾರ್ಯಕ್ಕೆ ಐವತ್ತು ಕೋಟಿ ರೂಪಾಯಿ ಬಜೆಟ್ ನಲ್ಲಿ ಕಾಯ್ದಿರಿಸುವುದರ ಮೂಲಕ ಆರಂಭಗೊಂಡ ಭದ್ರಾ ಮೇಲ್ದಂಡೆ ಯೋಜನೆ ಕನಸು ಗೋನೂರು ಕೆರೆವರೆಗೆ ನೀರು ಹರಿಯುವ ತನಕ ಸಾಕಾರಗೊಂಡಿದೆ ಎಂದರು.

ಕಾಮಗಾರಿ ಕುಂಟುತ್ತ ಸಾಗಿದ ವೇಳೆ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 6300 ಕೋಟಿಯಷ್ಟು ಅನುದಾನ ಒದಗಿಸುವುದರ ಮೂಲಕ ವೇಗ ನೀಡಲಾಗಿತ್ತು. ಎಲ್ಲ ಸರ್ಕಾರಗಳು ಯೋಜನೆ ಕಾರ್ಯಗತಕ್ಕೆ ಅದರದ್ದೇ ಆದ ಕೊಡುಗೆ ನೀಡಿವೆ. ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 13 ಸಾವಿರ ಕೋಟಿ ರೂಪಾಯಿ ಅಗತ್ಯವಿದ್ದು ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ತನ್ನ ಪಾಲಿನ ಹಣ ನೀಡಲಿದೆ ಎಂದರು.

ಬಸವಕೇಂದ್ರ ಮುರುಘಾಮಠದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಇಂತಹದ್ದೊಂದು ಗಳಿಗೆಗಾಗಿ ಮೂರು ದಶಕಗಳು ಕಾಯಬೇಕಾಯಿತು. ಚಿತ್ರದುರ್ಗ ಜನರ ದಾಹ ಇಂಗಿಸಲು ಭದ್ರೆ 164 ಕಿಮೀ ಸಾಗಿ ಬಂದಿದ್ದಾಳೆ.ಇದೊಂದು ಸಮಗ್ರ ಜನ ಸಮುದಾಯದ ಹೋರಾಟ, ರಾಜಕಾರಣಿಗಳು, ಮಠಾಧೀಶರು, ಭೂಮಿ ಕೊಟ್ಟ ರೈತರು ಎಲ್ಲರ ಪಾತ್ರ ಇದೆ.ಎಲ್ಲರನ್ನೂ ಜಾಗೃತಗೊಳಿಸುವ ಹೋರಾಟವಾಗಿದೆ. ಇದರಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ. ದಶಕಗಳ ಕಾಲ ಈ ವಿಚಾರದ ಬೆನ್ನು ಹತ್ತಿ ಬರೆದಿದ್ದಾರೆ.ಅನೇಕರು ಟೀಕೆ, ಟಿಪ್ಪಣಿ ಮಾಡಿದಾಗಲೂ ಪತ್ರಕರ್ತರು ಎಚ್ಚರಿಸಿದ್ದಾರೆ. ಮುರುಘಾ ಮಠದ ಮಹಾಸ್ವಾಮಿಗಳು ಸೇರಿದಂತೆ ಅನೇಕ ಮಠಾಧೀಶರು ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಹೋರಾಟಗಾರರಲ್ಲಿ ಸಾಮ್ರಾಜ್ಯವನ್ನೇ ಗೆದ್ದಂತಹ ಭಾವನೆ ಬಂದಿದೆ ಎಂದರು.

ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿ, ಭದ್ರೆ ಬಂದಿರುವುದು ರೈತಾಪಿ ಸಮುದಾಯದಲ್ಲಿ ಆಶಾಕಿರಣ ಬಂದಂತಾಗಿದೆ. ಇಂಥದ್ದೊಂದು ಕಾರ್ಯಕ್ರಮ ಕನಸೋ, ನನಸೋ ಎಂದು ಗೊತ್ತಾಗುತ್ತಿಲ್ಲ. ಆರು ಸಾವಿರ ಕೋಟಿ ವೆಚ್ಚದಿಂದ ಆರಂಭಗೊಂಡ ಯೋಜನೆ ಇಂದು 23 ಸಾವಿರ ಕೋಟಿಗೆ ಬಂದು ನಿಂತಿದೆ ಸರ್ಕಾರಗಳು ಇಚ್ಚಾಶಕ್ತಿ ಪ್ರದರ್ಶಿಸಿದ್ದರೆ ಹದಿನೆಂಟು ಸಾವಿರ ಕೋಟಿ ಉಳಿಯುತ್ತಿತ್ತು ಎಂದರು.
97 ರಲ್ಲಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಹೋರಾಟದ ಮೊದಲ ಸಮಾವೇಶ ನಡೆದಿತ್ತು . ‌ ಖಾಸಗಿ ಬಸ್ ಮಾಲೀಕರ ಸಂಘದವರು ಅಂದು ಸಮಾವೇಶಕ್ಕೆ ಬರುವವರಿಗೆ ಬಸ್ ಗಳ ಸೌಲಭ್ಯ ಕಲ್ಪಿಸುವುದರ ಮೂಲಕ ದನಿಗೂಡಿಸಿತ್ತು. ಅಂದಿನಿಂದ ಇಂದಿನವರೆಗೂ ಬೆಂಬಲ ನೀಡಲಾಗುತ್ತಿದೆ. ವಿವಿ ಸಾಗರಕ್ಕೆ ಭದ್ರೆ ನೀರು ಬಂದಿದ್ದು ನೋಡಿ ರೈತರು ಅಡಿಕೆ ಕಟ್ಟಿದರು.‌ ನೀರಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಲಿಂಗಾರೆಡ್ಡಿ ಕಳವಳ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ರವಿಶಂಕರ್ ಮಾತನಾಡಿ, ಪ್ರಾಯೋಗಿಕವಾಗಿ ಮೂರು ಟಿಎಂಸಿ ನೀರು ನಿಗಧಿಯಾಗಿದೆ. ‌ಬರ ಪರಿಸ್ಥಿತಿ ಕಾರಣಕ್ಕೆ ಜಲಾಶಯದಲ್ಲಿನ ನೀರನ್ನು ಕುಡಿಯುವ ನೀರಿಗೆ ಮಾತ್ರ ಬಳಸಬೇಕು ಎಂದು ಸರ್ಕಾರ ಆದೇಶ ಮಾಡಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷಾರ್ಥ ನೀರು ಹಾಯಸಲಾಗಿದೆ ಎಂದರು.
ಭದ್ರಾ ಜಲಾಶಯಕ್ಕೆ ಹೆಚ್ಚು ನೀರು ಬರಲಿಲ್ಲ. ಅಲ್ಲಿ 186 ಅಡಿಗೆ 175 ಸಂಗ್ರಹವಾಗಿದೆ. ಅಚ್ಚುಕಟ್ಟು ಪ್ರದೇಶದ ರೈತರು ಆಕ್ಚೇಪ ಎತ್ತಿದರೂ ಸರ್ಕಾರ ಪ್ರಾಯೋಗಿಕವಾಗಿ ಹರಿಸಲು ತಿಳಿಸಿದೆ.ಹಳೆಯ ಕಾಲುವೆಯಾದ ಕಾರಣಕ್ಕೆ 700 ಕ್ಯೂಸೆಕ್ ಡ್ರಾ ಮಾಡುತ್ತಿದ್ದು ಇದರ ಪ್ರಕಾರ 25 ದಿನ ಹರಿಸಲು ತೊಂದರೆ ಇಲ್ಲ. ಇನ್ನೂ ಹೆಚ್ಚು ಮಾಡುವುದಾದರೆ 2 ನೇ ಮೋಟಾರ್ ಆನ್ ಮಾಡಿದರೆ ದಿನಗಳ ಸಂಖ್ಯೆ ಕಡಿಮೆ ಆಗಬಹುದು ಎಂದರು.

ನೀರಾವರಿ ಅನುಷ್ಠಾನ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ್,ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಸಿಪಿಐ ಕಾರ್ಯದರ್ಶಿ ಸುರೇಶ್ ಬಾಬು,ನಗರಸಭೆ ಮಾಜಿ ಅಧ್ಯಕ್ಷರುಗಳಾದ ಬಿ.ಕಾಂತರಾಜ್, ಸಿ.ಟಿ.ಕೃಷ್ಣಮೂರ್ತಿ, ಕಾರ್ಯನಿರತರ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿನಾಯಕ ತೊಡರನಾಳ್,ಶಿಮುಲ್ ನಿರ್ದೇಶಕ ಜಿ.ಬಿ.ಶೇಖರ್, ಜಿಪಂ ಮಾಜಿ ಅಧ್ಯಕ್ಷ ರವಿಕುಮಾರ್, ಬಿಜೆಪಿ ಮುಖಂಡ ಹನುಮಂತೇ ಗೌಡ ಉಪಸ್ಥಿತರಿದ್ದರು. ಸಮಿತಿ ಪ್ರಧಾನ ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ ಪ್ರಾಸ್ತಾವಿಕ ಮಾತನಾಡಿದರು.

ನೀರಾವರಿ ಹೋರಾಟದ ಹಾದಿಯಲ್ಲಿ ಅಗಲಿದ ನಾಯಕರುಗಳಾದ ಹೆಚ್.ಹನುಮಂತಪ್ಪ, ಎಂ.ಜಯಣ್ಣ, ಮುರುಘರಾಜೇಂದ್ರ ಒಡೆಯರ್, ಟಿ.ನುಲೇನೂರು ಎಂ.ಶಂಕರಪ್ಪ ಅವರಿಗೆ ಇದೇ ಸಂದರ್ಭದಲ್ಲಿ ಮೌನಾಚರಣೆ ಮೂಲಕ ಸ್ಮರಿಸಲಾಯಿತು. ಹೋರಾಟವ ಮುನ್ನಡೆಸಿದ ಪಿ.ಕೋದಂಡರಾಮಯ್ಯ ಹಾಗೂ ಡಾ.ಬಂಜಗೆರೆ ಜಯಪ್ರಕಾಶ್ ಅವರನ್ನು ನೆನಪು ಮಾಡಿಕೊಳ್ಳಲಾಯಿತು. ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣದಲ್ಲಿ ಶ್ರಮಿಸಿದ ತಾಂತ್ರಿಕ ವರ್ಗವ ಅಭಿನಂದಿಸುವ ಸಲುವಾಗಿ ಐದು ಮಂದಿ ಇಂಜಿನಿಯರ್ ಗಳಿಗೆ ಕಾರ್ಯಕ್ರಮದಲ್ಲಿ ಹಸಿರು ಶಾಲು ಹೊದಿಸಿ ಗೌರವಿಸಲಾಯಿತು.

ಪ್ರೀತಿ ಟಿ ಎಸ್ ಇವರು ಸುದ್ದಿದಿನ ಡಿಜಿಟಲ್‌ ವಿಭಾಗದಲ್ಲಿ ಸುದ್ದಿ ವಿಭಾಗದ ವರದಿಗಾರರಾಗಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ಕಳೆದ 10 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ (PRO) ಹಾಗೂ ರಾಜ್ಯದ ಪ್ರಮುಖ ದಿನಪತ್ರಿಕೆಯಲ್ಲಿ ಜಿಲ್ಲಾ ವರದಿಗಾರಿಕೆ, ರಾಜಕೀಯ ವರದಿಗಾರಿಕೆಯನ್ನು ಮಾಡಿದ ಅನುಭವ ಹೊಂದಿರುತ್ತಾರೆ. ಜನಸಾಮಾನ್ಯರು ಅನುಭವಿಸುತ್ತಿರುವ ಸಮಸ್ಯೆಗಳು, ಪ್ರಮುಖ ವಿದ್ಯಮಾನಗಳ ಕುರಿತಾದ ಗ್ರೌಂಡ್ ಝೀರೋ ವರದಿಗಾರಿಕೆ ಹಾಗೂ ಪ್ರಮುಖ ರಾಜಕಾರಣಿಗಳ ಸಂದರ್ಶನ, ಪ್ರಚಲಿತ ವಿದ್ಯಮಾನಗಳ ಕುರಿತಾದ ವಿಶ್ಲೇಷಣಾ ವರದಿಗಳನ್ನು ಮಾಡುವ ಮೂಲಕ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದಾರೆ. ಸಂಕೀರ್ಣ ಸಾಮಾಜಿಕ ವಿಷಯಗಳ ಕುರಿತಾಗಿಯೂ ಹಲವು ಲೇಖನಗಳನ್ನು ಬರೆದಿರುತ್ತಾರೆ. ವೃತ್ತಿಜೀವನದ ಹಾದಿ : ನಗರವಾಣಿ ದಿನಪತ್ರಿಕೆಯಲ್ಲಿ ಜಿಲ್ಲಾ ವರದಿಗಾರರಾಗಿ ಇವರ ವೃತ್ತಿ ಜೀವನ ಆರಂಭಗೊಂಡಿದೆ. ನಂತರದಲ್ಲಿ ವಿಜಯಕರ್ನಾಟಕ ವೆಬ್‌ಸೈಟ್‌‌ನ ಸುದ್ದಿ ವಿಭಾಗದ ವರದಿಗಾರರಾಗಿ ಕೆಲಸ ಮಾಡಿರುತ್ತಾರೆ. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿರುವ ಇವರು ವಾರ್ತಾ ಇಲಾಖೆಯಲ್ಲಿ ಕೋವಿಡ್ ಸಂದರ್ಭದಲ್ಲಿ ನೇರವಾಗಿ ಆಯ್ಕೆಯಾಗುವ ಮೂಲಕ ಎರಡು ವರ್ಷಗಳು ಕಾರ್ಯನಿರ್ವಯಿಸಿದ್ದಾರೆ. ನಂತರ ಆರೋಗ್ಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಇಲಾಖೆ, ನೀರು ಮತ್ತು ನೈರ್ಮಲ್ಯ ಇಲಾಖೆಗಳಲ್ಲಿ ಮಾಧ್ಯಮ ವರದಿಗಾರರಾಗಿ ಕೆಲಸ ಮಾಡಿದ ಇವರು ಕಳೆದ ಐದು ವರ್ಷಗಳಿಂದ ಇಂಧನ ಇಲಾಖೆಯಲ್ಲಿ ಮೀಡಿಯಾ ಕನ್ಸಲ್ಟೆಂಟ್ ಮತ್ತು ಪಿಸಿಕೆಎಲ್ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರೊಂದಿಗೆ, ಕಳೆದ ಹನ್ನೊಂದು ವರ್ಷಗಳಿಂದ ಆ್ಯಂಕರ್, ವಾಯ್ಸ್‌ಓವರ್ ಸೇರಿದಂತೆ ಸಾಕಷ್ಟು ಕವನಗಳು, ಅಂಕಣಗಳನ್ನು ಬರೆಯುವ ಮೂಲಕ ಜನಪ್ರಸಿದ್ಧಿಯಾಗಿದ್ದಾರೆ.

ದಿನದ ಸುದ್ದಿ

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

Published

on

ಭದ್ರಾ ಮೇಲ್ದಂಡೆ ಯೋಜನೆಗೆ ಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಕಾಳಜಿ, ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಿ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಈ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.

http://Visit : www.suddidina.com

ಭದ್ರಾ ಮೇಲ್ದಂಡೆ ಯೋಜನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಶೇಷ ಕಾಳಜಿ ವಹಿಸಿದ್ದು, ಚಿತ್ರದುರ್ಗ ಜಿಲ್ಲೆಗೆ ಭದ್ರಾ ನೀರು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ಹಾಗೂ ಮಾರ್ಗದರ್ಶನ ನೀಡುತ್ತಿದ್ದಾರೆ. ಹಲವು ವರ್ಷಗಳಿಂದ ಭದ್ರಾ ನೀರಿಗಾಗಿ ಕಾಯುತ್ತಿದ್ದ ಜಿಲ್ಲೆಯ ರೈತರಿಗೆ ನೀರು ಹರಿದುಬಂದಿರುವುದು ಸಂತಸದ ಸಂಗತಿಯಾಗಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ಜಿಲ್ಲೆಯ ನೀರಾವರಿ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭವಾಗುವ ನಿರೀಕ್ಷೆ ಇದೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದು ಹಾಗೂ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಪ್ರಮುಖವಾಗಿದೆ. ಚಿತ್ರದುರ್ಗ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ಕೃಷಿ ಚಟುವಟಿಕೆಗಳು ಮಳೆಯನ್ನೇ ಅವಲಂಬಿಸಿವೆ. ಇಂತಹ ಸಂದರ್ಭದಲ್ಲಿ ಭದ್ರಾ ನೀರು ಜಿಲ್ಲೆಯ ಕೆರೆಗಳಿಗೆ ಲಭ್ಯವಾದರೆ ರೈತರಿಗೆ ಸ್ಥಿರವಾದ ನೀರಿನ ಮೂಲ ದೊರೆಯುವಂತಾಗಲಿದೆ ಎಂದರು.

ಕೆರೆಗಳಿಗೆ ನೀರು ಹರಿದುಬಂದಾಗ ಕೇವಲ ಕೆರೆಗಳೇ ತುಂಬುವುದಲ್ಲದೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂತರ್ಜಲ ಮರುಪೂರಣಕ್ಕೂ ಸಹಕಾರಿಯಾಗಲಿದೆ. ಇದರಿಂದ ಕೊಳವೆಬಾವಿ ಹಾಗೂ ತೆರೆದ ಬಾವಿಗಳಲ್ಲಿ ನೀರಿನ ಲಭ್ಯತೆ ಹೆಚ್ಚುವ ಸಾಧ್ಯತೆ ಇದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ನೀರಾವರಿ ವಿಸ್ತರಣೆಯಾದರೆ ರೈತರು ವಿವಿಧ ಬೆಳೆಗಳನ್ನು ಬೆಳೆಯಲು ಅವಕಾಶ ದೊರೆಯುವುದರ ಜೊತೆಗೆ ಕೃಷಿ ಆಧಾರಿತ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ಸಿಗಲಿದೆ ಎಂದು ಅವರು ಹೇಳಿದರು.

ರೈತರ ಬಹುದಿನಗಳ ನಿರೀಕ್ಷೆಗೆ ಸ್ಪಂದನೆ

ಭದ್ರಾ ಮೇಲ್ದಂಡೆ ಯೋಜನೆಗಾಗಿ ಜಿಲ್ಲೆಯ ರೈತರು ಹಾಗೂ ವಿವಿಧ ಸಂಘಟನೆಗಳು ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿವೆ. ನೀರಿನ ಸಮಸ್ಯೆಯಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಈ ಯೋಜನೆ ಆಶಾಕಿರಣವಾಗಿದೆ. ಯೋಜನೆಯ ನೀರು ನಿಗದಿತ ಪ್ರದೇಶಗಳಿಗೆ ಸಮರ್ಪಕವಾಗಿ ತಲುಪುವಂತೆ ಕಾಮಗಾರಿಗಳ ಪ್ರಗತಿ, ಕಾಲುವೆ ವ್ಯವಸ್ಥೆ ಹಾಗೂ ನೀರು ಹಂಚಿಕೆ ವ್ಯವಸ್ಥೆಯ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು, ಚಿತ್ರದುರ್ಗ ಜಿಲ್ಲೆಯ ಕೃಷಿ ಅಭಿವೃದ್ಧಿಗೆ ನೀರಾವರಿ ಅತ್ಯಂತ ಪ್ರಮುಖವಾಗಿದೆ. ಮಳೆಯ ಅನಿಶ್ಚಿತತೆ ಹಾಗೂ ಬರಗಾಲದ ಪರಿಸ್ಥಿತಿಯಿಂದ ರೈತರು ಪದೇಪದೇ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಭದ್ರಾ ನೀರು ಲಭ್ಯವಾದಲ್ಲಿ ಕೃಷಿ ಉತ್ಪಾದಕತೆ ಹೆಚ್ಚುವುದರ ಜೊತೆಗೆ ರೈತರ ಆದಾಯವನ್ನೂ ಸುಧಾರಿಸಲು ಸಹಕಾರಿಯಾಗಲಿದೆ ಇಂದು ಅಭಿಪ್ರಾಯ ತಿಳಿಸಿದ್ದಾರೆ.

ಕುಡಿಯುವ ನೀರಿಗೂ ಅನುಕೂಲ

ಭದ್ರಾ ಮೇಲ್ದಂಡೆ ಯೋಜನೆಯಿಂದ ಕೆರೆಗಳು ಹಾಗೂ ಜಲಮೂಲಗಳಿಗೆ ನೀರು ಲಭ್ಯವಾದರೆ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಲ್ಲಿಯೂ ಪರೋಕ್ಷವಾಗಿ ಸಹಕಾರಿಯಾಗಲಿದೆ. ಬೇಸಿಗೆ ಸಂದರ್ಭದಲ್ಲಿ ನೀರಿನ ಮೂಲಗಳು ಬತ್ತಿಹೋಗುವುದರಿಂದ ಎದುರಾಗುವ ಸಮಸ್ಯೆಯನ್ನು ಕಡಿಮೆ ಮಾಡಲು ಜಲಮೂಲಗಳ ಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟ ಸುಧಾರಣೆ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.

ಯೋಜನೆಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ನೀರು ನಿಗದಿತ ಪ್ರದೇಶಗಳಿಗೆ ಸಮರ್ಪಕವಾಗಿ ತಲುಪುವಂತೆ ಸರ್ಕಾರ ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನೀರಿನ ಬಳಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಕೆರೆಗಳ ಸಂರಕ್ಷಣೆ ಹಾಗೂ ನೀರು ವ್ಯರ್ಥವಾಗದಂತೆ ಕ್ರಮವಹಿಸುವುದು ಕೂಡ ಅಷ್ಟೇ ಮುಖ್ಯವಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡು ಜಿಲ್ಲೆಯ ಕೆರೆಗಳಿಗೆ ಸಮರ್ಪಕವಾಗಿ ನೀರು ಲಭ್ಯವಾದರೆ ಚಿತ್ರದುರ್ಗ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಸಾಧ್ಯವಾಗಲಿದೆ. ರೈತರ ಬಹುದಿನಗಳ ನೀರಿನ ನಿರೀಕ್ಷೆ ಈಡೇರುವುದರ ಜೊತೆಗೆ ಮಧ್ಯ ಕರ್ನಾಟಕದ ಅಭಿವೃದ್ಧಿಗೂ ಯೋಜನೆ ಹೊಸ ವೇಗ ನೀಡಲಿದೆ. ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಜನಪ್ರತಿನಿಧಿಗಳು, ಹೋರಾಟಗಾರರು ಸಂಘ ಸಂಸ್ಥೆಗಳು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದ್ದಾರೆ ಅದರ ಅನ್ವಯವಾಗಿ ಚಿತ್ರದುರ್ಗ ಜಿಲ್ಲೆಗೆ ಹರಿದು ಬಂದಿದ್ದಾಳೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ

Published

on

ಕರ್ನಾಟಕ – ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ

ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.

http://Visit : www.suddidina.com

ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.

ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.

ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.

ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.

ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

Continue Reading

ದಿನದ ಸುದ್ದಿ

ಬೆಂಗಳೂರು ಸೆಪ್ಟೆಂಬರ್‌ನಲ್ಲಿ 31.9 ಡಿ.ಸೆ. ದಾಖಲೆ – ಹವಾಮಾನ ಇಲಾಖೆ ಎಚ್ಚರಿಕೆ

Published

on

75 ವರ್ಷಗಳ ಬಳಿಕ ಸೆಪ್ಟೆಂಬರ್‌ನಲ್ಲಿ ಗರಿಷ್ಠ ಉಷ್ಣಾಂಶ – ಮಳೆ ನಿರೀಕ್ಷೆ ಮುಂದಿನ ದಿನಗಳಲ್ಲಿ

ಸುದ್ದಿದಿನ,ಬೆಂಗಳೂರು: ಪ್ರತಿ ವರ್ಷ ಮಳೆಗಾಲದ ಅಂತ್ಯದಲ್ಲಿ ನೈಋತ್ಯ ಮಾನ್ಸೂನ್ ಶೀತವಾಗಿರುತ್ತದೆ. ಆದರೆ ಈ ಬಾರಿ, 75 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. 2026ರ ಸೆಪ್ಟೆಂಬರ್ 8ರಂದು ನಗರದಲ್ಲಿ 31.9 ಡಿ.ಸೆ. ತಾಪಮಾನ ದಾಖಲಾಗಿದ್ದು, ಇದು ಕಳೆದ ಹಲವು ದಶಕಗಳ ಬಳಿಕ ಕಂಡುಬಂದ ಅತಿ ಹೆಚ್ಚು ಮಟ್ಟವಾಗಿದೆ.

http://Visit : www.suddidina.com

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮಾಹಿತಿಯ ಪ್ರಕಾರ, 1951ರಿಂದ ಇಂದಿನವರೆಗಿನ ದಾಖಲೆಗಳಲ್ಲಿ 33.3 ಡಿ.ಸೆ. ಗರಿಷ್ಠ ತಾಪಮಾನವು ದಾಖಲಾಗಿತ್ತು. ಈ ಬಾರಿ 31.9 ಡಿ.ಸೆ. ತಾಪಮಾನವು ಆ ದಾಖಲೆಗಳಿಗೆ ಸಮೀಪವಾಗಿದೆ. ಇದೇ ದಿನ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 33.4 ಡಿ.ಸೆ. ತಾಪಮಾನ ದಾಖಲಾಗಿದ್ದು, ಇದು ನಗರದ ಉಷ್ಣಾಂಶ ಏರಿಕೆಯನ್ನು ಸ್ಪಷ್ಟಪಡಿಸುತ್ತದೆ.

ಹಿಂದಿನ ವರ್ಷಗಳ ದಾಖಲೆಗಳನ್ನು ನೋಡಿದರೆ, 2025ರಲ್ಲಿ 29.9 ಡಿ.ಸೆ., 2024ರಲ್ಲಿ 31.6 ಡಿ.ಸೆ., 2023ರಲ್ಲಿ 30.8 ಡಿ.ಸೆ., 2022ರಲ್ಲಿ 31 ಡಿ.ಸೆ., 2021ರಲ್ಲಿ 31.3 ಡಿ.ಸೆ., 2020ರಲ್ಲಿ 30.6 ಡಿ.ಸೆ., 2019ರಲ್ಲಿ 30.8 ಡಿ.ಸೆ., 2018ರಲ್ಲಿ 31.7 ಡಿ.ಸೆ., 2017ರಲ್ಲಿ 31.1 ಡಿ.ಸೆ., 2016ರಲ್ಲಿ 30.6 ಡಿ.ಸೆ. ದಾಖಲಾಗಿತ್ತು. ಈ ಹೋಲಿಕೆಯಿಂದ, 2026ರ ಸೆಪ್ಟೆಂಬರ್‌ನಲ್ಲಿ ದಾಖಲಾಗಿರುವ ಉಷ್ಣಾಂಶವು ಅತಿ ಹೆಚ್ಚು ಮಟ್ಟದಲ್ಲಿದೆ ಎಂಬುದು ಸ್ಪಷ್ಟವಾಗುತ್ತದೆ.

ಹವಾಮಾನ ತಜ್ಞರ ಪ್ರಕಾರ, ಎಲ್‌ನಿನೋ ಒತ್ತಡ ಮುಂದುವರಿದಿರುವುದರಿಂದ ಉಷ್ಣಾಂಶ ಏರಿಕೆಗೆ ಕಾರಣವಾಗಿದೆ. ಆದರೆ, ಇದು ತಾತ್ಕಾಲಿಕವಾಗಿರಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ ತಿಂಗಳುಗಳಲ್ಲಿ ಶೀತಮಾನ್ಸೂನ್ ಬಲಿಷ್ಠವಾಗುವ ಸಾಧ್ಯತೆ ಇದೆ. ಅಂದಾಜು 1 ರಿಂದ 3 ಡಿ.ಸೆ. ಅಂತರದಲ್ಲಿ ಶಾಖದ ಮಟ್ಟ ಹೆಚ್ಚಾಗಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಮಳೆ ಆಗದಿರುವುದರಿಂದ ಕಾವೇರಿ ನದಿಯ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಹವಾಮಾನ ಇಲಾಖೆ ಪ್ರಕಾರ, ಸೆಪ್ಟೆಂಬರ್ 16ರ ನಂತರ ಮಳೆಯಾಗುವ ಸಾಧ್ಯತೆಗಳಿವೆ. ಇದರಿಂದ ನೀರಿನ ಮಟ್ಟ ಸುಧಾರಿಸಬಹುದು ಎಂಬ ನಿರೀಕ್ಷೆ ಇದೆ.

ಒಟ್ಟಿನಲ್ಲಿ, ಬೆಂಗಳೂರಿನಲ್ಲಿ ದಾಖಲಾಗಿರುವ ಉಷ್ಣಾಂಶ ಏರಿಕೆ ಹವಾಮಾನ ಬದಲಾವಣೆಯ ಗಂಭೀರತೆಯನ್ನು ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಮಳೆಯ ನಿರೀಕ್ಷೆ ಇದ್ದರೂ, ತಾತ್ಕಾಲಿಕವಾಗಿ ಉಷ್ಣಾಂಶ ಏರಿಕೆ ಸಾರ್ವಜನಿಕ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

Continue Reading
Advertisement

Title

ದಿನದ ಸುದ್ದಿ2 minutes ago

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ...

ದಿನದ ಸುದ್ದಿ13 minutes ago

ಮೊದಲ ಬಾರಿಗೆ ಗೋನೂರು ಕೆರೆಗೆ ಹರಿದು ಬಂದ ಭದ್ರೆ – ರೈತರ ಸಂಭ್ರಮಾಚರಣೆ

ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಮೊದಲ ಬಾರಿಗೆ ಗೋನೂರು ಕೆರೆಗೆ ಆಗಮಿಸಿದ ಭದ್ರೆಗೆ ಬುಧವಾರ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು.  ...

ದಿನದ ಸುದ್ದಿ5 hours ago

EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ

ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ...

ದಿನದ ಸುದ್ದಿ7 hours ago

ಬೆಂಗಳೂರು ಸೆಪ್ಟೆಂಬರ್‌ನಲ್ಲಿ 31.9 ಡಿ.ಸೆ. ದಾಖಲೆ – ಹವಾಮಾನ ಇಲಾಖೆ ಎಚ್ಚರಿಕೆ

ಸುದ್ದಿದಿನ,ಬೆಂಗಳೂರು: ಪ್ರತಿ ವರ್ಷ ಮಳೆಗಾಲದ ಅಂತ್ಯದಲ್ಲಿ ನೈಋತ್ಯ ಮಾನ್ಸೂನ್ ಶೀತವಾಗಿರುತ್ತದೆ. ಆದರೆ ಈ ಬಾರಿ, 75 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. 2026ರ...

ದಿನದ ಸುದ್ದಿ7 hours ago

KPSCExam: ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ವೈದ್ಯರ ಕೊರತೆ – ತಕ್ಷಣ ನೇಮಕಾತಿ ಅಗತ್ಯ

ಸುದ್ದಿದಿನ,ಕಲಬುರ್ಗಿ: ಕರ್ನಾಟಕದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ಖಾಲಿತನವು ದಿನದಿಂದ ದಿನಕ್ಕೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ, ರಾಜ್ಯದ...

ದಿನದ ಸುದ್ದಿ7 hours ago

ಸ್ಕ್ರೀನ್‌ ಬೆಳಕು, ಸಾಮಾಜಿಕ ಜಾಲತಾಣ – ನಿದ್ರೆಗೆ ಅಡ್ಡಿ, ಆರೋಗ್ಯಕ್ಕೆ ಹಾನಿ

ಸುದ್ದಿದಿನ,ಸ್ಮಾರ್ಟ್‌ಫೋನ್: ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ನಮ್ಮ ಜೀವನದ ಅವಿಭಾಜ್ಯ ಭಾಗವಾಗಿದೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುವಂತಾಗಿದೆ. ಊಟವನ್ನೇ ಬಿಟ್ಟುಬಿಡುವವರು ಇದ್ದರೂ, ಮೊಬೈಲ್‌...

ದಿನದ ಸುದ್ದಿ7 hours ago

ಮಧ್ಯಪ್ರಾಚ್ಯದಲ್ಲಿ ಏಳು ತಿಂಗಳಿನಿಂದ ಯುದ್ಧದ ಕಾರ್ಮೋಡ – ಇರಾನ್‌–ಅಮೆರಿಕ ಸಂಘರ್ಷ ತೀವ್ರ

ಸುದ್ದಿದಿನ,ತೆಹ್ರಾನ್: ಕಳೆದ ಏಳು ತಿಂಗಳುಗಳಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದು, ಇರಾನ್‌ ಮತ್ತು ಅಮೆರಿಕ ನಡುವಿನ ಸಂಘರ್ಷ ಕೊನೆಗಾಣುವ ಲಕ್ಷಣ ಕಾಣುತ್ತಿಲ್ಲ. ಇತ್ತೀಚಿನ ಬೆಳವಣಿಗೆಯಲ್ಲಿ, ಇರಾನ್‌ ನೌಕಾಪಡೆ...

ದಿನದ ಸುದ್ದಿ7 hours ago

ದಾವಣಗೆರೆ ನಗರಕ್ಕೆ ರಾಜ್ಯಮಟ್ಟದ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಪ್ರಶಸ್ತಿಯ ಗರಿ: ರೂ‌ 25.00 ಲಕ್ಷ ನಗದು ಬಹುಮಾನ

ಸುದ್ದಿದಿನ,ಬೆಂಗಳೂರು: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ‘ಸ್ವಚ್ಛ ವಾಯು ದಿವಸ 2026’ ಅಂಗವಾಗಿ ಘೋಷಿಸಿರುವ 2025-26 ನೇ ಸಾಲಿನ “ಸ್ವಚ್ಛ ವಾರ್ಡ್ ವಾಯು...

ದಿನದ ಸುದ್ದಿ7 hours ago

Gold Rate Fall: 24 ಕ್ಯಾರೆಟ್ ಚಿನ್ನದ ದರ ₹104 ಇಳಿಕೆ, ಬೆಳ್ಳಿ ಗ್ರಾಂಗೆ ₹250 ಸ್ಥಿರ

ಸುದ್ದಿದಿನ,ಬೆಂಗಳೂರು: ಸೆಪ್ಟೆಂಬರ್ 9, 2026 ಬುಧವಾರದಂದು ಬೆಂಗಳೂರಿನ ಚಿನ್ನ–ಬೆಳ್ಳಿ ಮಾರುಕಟ್ಟೆಯಲ್ಲಿ ಹೆಚ್ಚಿನ ಏರಿಳಿತವಿಲ್ಲದೆ, ಸಾಮಾನ್ಯ ಮಟ್ಟದಲ್ಲೇ ಬೆಲೆ ದಾಖಲಾಗಿದೆ. ಗುಡ್‌ರಿಟರ್ನ್ಸ್ ವರದಿ ಪ್ರಕಾರ, ಚಿನ್ನದ ದರದಲ್ಲಿ ಸ್ವಲ್ಪ...

ದಿನದ ಸುದ್ದಿ8 hours ago

ಬೆಂಗಳೂರು ಇ-ಕಾಮರ್ಸ್‌ ಡಾರ್ಕ್‌ ಸ್ಟೋರ್‌ಗಳಲ್ಲಿ ಅವಧಿ ಮೀರಿದ ಆಹಾರ, ಔಷಧ ಪತ್ತೆ

ಸುದ್ದಿದಿನ,ಬೆಂಗಳೂರು: ಬೆಂಗಳೂರು ಹಾಗೂ ಸುತ್ತಮುತ್ತಲಿನ ಇ-ಕಾಮರ್ಸ್‌ ಹಾಗೂ ಡಾರ್ಕ್‌ ಸ್ಟೋರ್‌ಗಳ ಜಾಲದಲ್ಲಿ ಪರವಾನಗಿ ಇಲ್ಲದೆ ಸಂಗ್ರಹಿಸಲಾಗುತ್ತಿದ್ದ ಔಷಧ ಹಾಗೂ ಅವಧಿ ಮೀರಿದ ಆಹಾರ ಉತ್ಪನ್ನಗಳನ್ನು ಆಹಾರ ಸುರಕ್ಷತೆ...

Trending